ರಾಯಚೂರು:- ಧಾರಾಕಾರ ಮಳೆ ಹಿನ್ನೆಲೆ ಪಟ್ಟಣದ 101 ಬಾಗಿಲುಗಳುಳ್ಳ 160 ವರ್ಷದ ಐತಿಹಾಸಿಕ ಕಟ್ಟಡ ಭಾಗಶಃ ಕುಸಿದಿದೆ. ಬ್ರಿಟಿಷರ ಆಡಳಿತಾವಧಿಯಲ್ಲಿ ನಿರ್ಮಾಣವಾಗಿದ್ದ ಅಪರೂಪದ ವಿಶಿಷ್ಟ ಬಂಗಲೆ `ನೂರೊಂದು ಬಾಗಿಲಿನ ಬಂಗಲೆ’ ಎಂದೇ ಪ್ರಸಿದ್ಧಿ ಪಡೆದಿದೆ. ಈಗಲೂ ಸರ್ಕಾರಿ ವಿವಿಧ ಇಲಾಖೆ ಕಚೇರಿಗಳು ಇದೇ ಕಟ್ಟಡದಲ್ಲಿ ನಡೆಯುತ್ತಿವೆ. ಸಹಾಯಕ ಆಯುಕ್ತರ ಕಚೇರಿ ಬಲಭಾಗದ ಕೊಠಡಿ ಮೇಲ್ಛಾವಣಿ ಶಿಥಿಲಾವಸ್ಥೆಗೆ ತಲುಪಿ ಕುಸಿದು ಬಿದ್ದಿದೆ. https://ainkannada.com/rainfall-leave-for-school-colleges-in-these-districts-today/ ಈ ಹಿಂದೆ ತಹಶೀಲ್ದಾರ್ ಕಚೇರಿಯಾಗಿ ಈ ಕಟ್ಟಡ ಬಳಕೆಯಾಗಿತ್ತು. ತಹಶೀಲ್ದಾರ್ ಕಚೇರಿ ಸ್ಥಳಾಂತರ ಬಳಿಕ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಕಾರಣ ಕುಸಿದು ಬಿದ್ದಿದೆ. ಹೈದ್ರಾಬಾದ್ ನಿಜಾಮರ ಕಾಲದಲ್ಲಿ ಲಿಂಗಸುಗೂರು ಜಿಲ್ಲಾ ಕೆಂದ್ರವಾಗಿತ್ತು. ಆಗ ಇದೇ ಕಟ್ಟಡ ಆಡಳಿತ ಕಚೇರಿಯಾಗಿ ಬಳಕೆಯಲ್ಲಿತ್ತು. ಸತತ ಮಳೆಗೆ ಮೇಲ್ಛಾವಣಿ ಮೇಲೆ ನೀರು ನಿಂತು ಕಟ್ಟಡ ಕುಸಿದಿದೆ.
Author: AIN Author
ಚಿಕ್ಕಮಗಳೂರು/ಉಡುಪಿ:- ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಉಡುಪಿ ಮತ್ತು ಕೊಡಗು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. https://ainkannada.com/heavy-rains-in-hubli-water-that-rushes-to-houses/ ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿನ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಗೆ ಇಂದು ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಗೂ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಇಂದು ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಮುಂದಿನ ನಾಲ್ಕು ದಿನಗಳ ಕಾಲ ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಲಿದ್ದು, ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಂಭವ ಇದೆ. ಕಡಲತೀರ, ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಹುಬ್ಬಳ್ಳಿ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದ ಹಿನ್ನೆಲೆ ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆ ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರ ಗ್ರಾಮದಲ್ಲಿ ಭಾರೀ ಮಳೆ ಹಿನ್ನೆಲೆ ಮನೆಗಳಿಗೆ ನೀರು ನುಗ್ಗಿದೆ. ಪರಿಣಾಮ ಮನೆಯಿಂದ ನೀರು ಹೊರ ಹಾಕಲು ಜನ ಹರಸಾಹಸ ಪಟ್ಟಿದ್ದಾರೆ. https://ainkannada.com/family-strife-for-these-pile-thursdays-future-is-12-june-2025/ ಅಷ್ಟೇ ಅಲ್ಲ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿನ ದವಸಧಾನ್ಯಗಳು ನೀರುಪಾಲಾಗಿದೆ. ಏಕಾಎಕಿ ಮಳೆಯಿಂದ ಜನತೆ ನಲುಗಿದ್ದಾರೆ. ಸುಮಾರು ಒಂದು ಗಂಟೆ ಸುರಿದ ಮಳೆಯಿಂದ ಇಡೀ ಗ್ರಾಮಕ್ಕೆ ನೀರು ನುಗ್ಗಿ ಅವಾಂತರ ಸೃಷ್ಟಿ ಆಗಿದೆ. ಹುಬ್ಬಳ್ಳಿಯಲ್ಲಿನ ರಸ್ತೆಗಳು ಜಲಾವೃತ: ಭಾರಿ ಮಳೆ ಹಿನ್ನೆಲೆ ಹುಬ್ಬಳ್ಳಿ ಹುಬ್ಬಳ್ಳಿಯಲ್ಲಿನ ರಸ್ತೆಗಳು ಜಲಾವೃತಗೊಂಡಿವೆ. ಹುಬ್ಬಳ್ಳಿಯ ಗಬ್ಬೂರ್ ಬೈಪಾಸ್ ಸೇರಿ ಹಲವಡೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ, ಕುಂದಗೋಳ, ಕಲಘಟಗಿಯಲ್ಲಿ ಸಹ ಭಾರೀ ಮಳೆ ಆಗಿದ್ದು ಅಪಾರ ಪ್ರಮಾಣದಲ್ಲಿ ಬಿತ್ತನೆ ಜಮೀನು ಹಾಳಾಗಿದೆ. ಹಳ್ಳದ ನೀರಿನ ನಡುವೆ ಕೂಲಿಕಾರ್ಮಿಕರು: ನವಲಗುಂದ ತಾಲ್ಲೂಕಿನಲ್ಲಿ ಬುಧವಾರ ಸುರಿದ ಮಳೆಯಿಂದಾಗಿ…
ಸೂರ್ಯೋದಯ – 5:45 ಬೆ ಸೂರ್ಯಾಸ್ತ – 6:46 ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ಜೇಷ್ಠ ಮಾಸ, ಗ್ರೀಷ್ಮ ಋತು, ತಿಥಿ – ಪಾಡ್ಯ ನಕ್ಷತ್ರ – ಮೂಲ ಯೋಗ – ಶುಭ ಕರಣ – ಕೌಲವ ಮಳೆ ನಕ್ಷತ್ರ:ಮೃಗಶಿರ ರಾಹು ಕಾಲ – 01:30 ದಿಂದ 03:00 ವರೆಗೆ ಯಮಗಂಡ – 06:00 ದಿಂದ 07:30 ವರೆಗೆ ಗುಳಿಕ ಕಾಲ – 09:00 ದಿಂದ 10:30 ವರೆಗೆ ಬ್ರಹ್ಮ ಮುಹೂರ್ತ – 4:09 ಬೆ. ದಿಂದ 4:57 ಬೆ.ವರೆಗೆ ಅಮೃತ ಕಾಲ – 3:08 ಮ.ದಿಂದ 4:51 ಸಂಜೆ. ವರೆಗೆ ಅಭಿಜಿತ್ ಮುಹುರ್ತ – 11:50ಬೆ. ದಿಂದ 12:42 ಮ.ವರೆಗೆ ಮೇಷ: ದೃಢ ನಿರ್ಧಾರದಿಂದ ಪ್ರೇಮಿಗಳ ಮದುವೆ ಸಾಧ್ಯ, ನಿಮ್ಮ ಶುಭ ಮಂಗಳ ಕಾರ್ಯಕ್ಕೆ ಬಂಧುಗಳಿಂದ ತಡೆ, ಸ್ವಲ್ಪ ಮಾಡುವ ವ್ಯವಹಾರಗಳಲ್ಲಿ ಅಭಿವೃದ್ಧಿ ಇದೆ, ಸಿದ್ಧ ಉಡುಪು…
ಚಿಕ್ಕಮಗಳೂರು:- ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಹೀಗಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿನ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. https://ainkannada.com/heavy-rain-in-hubballi-laborers-amidst-the-water-of-the-ditch/ ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಗೂ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೆಂಕಟರಾಜಾ ಅವರು ನಾಳೆ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಮುಂದಿನ ನಾಲ್ಕು ದಿನಗಳ ಕಾಲ ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಲಿದ್ದು, ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಂಭವ ಇದೆ. ಕಡಲತೀರ, ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಹುಬ್ಬಳ್ಳಿ:- ನವಲಗುಂದ ತಾಲ್ಲೂಕಿನಲ್ಲಿ ಬುಧವಾರ ಸುರಿದ ಮಳೆಯಿಂದಾಗಿ ಹಾಳಕುಸುಗಲ್ ಗ್ರಾಮ ಸಮೀಪದ ಗೌರಿ ಹಳ್ಳ ತುಂಬಿ ಹರಿಯಿತು. https://ainkannada.com/corona-fears-for-karunadhee-siddaramaiah-receives-information-on-the-death-toll-what-was-discussed-in-the-meeting/ ಹಳ್ಳ ತುಂಬಿದ್ದರಿಂದ ಗ್ರಾಮದಿಂದ ಜಮೀನಿಗೆ ಕೂಲಿ ಕೆಲಸಕ್ಕೆ ತೆರಳಿದ್ದ ಗ್ರಾಮಸ್ಥರು ವಾಪಸ್ ಮನೆಗೆ ಹೋಗಲು ಹರಸಾಹಸಪಟ್ಟರು. ಗೌರಿ ಹಳ್ಳ ತುಂಬಿದಾಗ ಪ್ರತಿ ವರ್ಷ ಜಮೀನುಗಳಿಗೆ ನೀರು ನುಗ್ಗುವುದರಿಂದ ಫಸಲು ಹಾಳಾಗುತ್ತದೆ. ಸಮಸ್ಯೆ ಬಗೆಹರಿಸುವಂತೆ ಜನಪ್ರತಿನಿಧಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಕೂಡಲೇ ಸಂಬಂಧಿಸಿದವರು ಸೇತುವೆ ನಿರ್ಮಾಣಕ್ಕೆ ಮುಂದಾಗಬೇಕಿದೆ.
ಬೆಂಗಳೂರು:- ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರುತ್ತಿರುವ ಕೊರೊನಾ ಸೋಂಕಿತರ ಹಾಗೂ ಮೃತರ ಅಂಕಿ-ಸಂಖ್ಯೆಗಳ ಮಾಹಿತಿ ಪಡೆದರು. https://ainkannada.com/preference-for-government-schools-increase-in-child-enrollment-goodbye-to-private-schools/ “ಕೊರೊನಾ ಹತೋಟಿಯಲ್ಲಿದ್ದು ಜನ ಭಯಪಡುವ ಸ್ಥಿತಿ ಇಲ್ಲ. ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟ 11 ಜನರಲ್ಲಿ 10 ಜನರ ಡೆತ್ ಆಡಿಟ್ ರಿಪೋರ್ಟ್ ಬಂದಿದೆ. ಈ 10 ಜನರು ಇತರ ಮಾರಕ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಅವರ ಸಾವಿಗೆ ಕೊರೊನಾ ಕಾರಣವಲ್ಲ. ಇನ್ನೊಬ್ಬರ ಡೆತ್ ಆಡಿಟ್ ವರದಿ ಬರುವುದು ಬಾಕಿ ಇದೆ” ಎಂದು ಸಚಿವ ದಿನೇಶ್ ಗುಂಡೂರಾವ್ ಸಿಎಂ ಸಿದ್ದರಾಮಯ್ಯರಿಗೆ ಮಾಹಿತಿ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ಸಭೆಯ ಮುಖ್ಯಾಂಶಗಳು: • ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ…
ಬೆಂಗಳೂರು:- ಸರ್ಕಾರಿ ಶಾಲೆ ಅಂದ್ರೆ ದೂರ ಸರಿಯುತ್ತಿದ್ದ ಕಾಲ ಒಂದಿತ್ತು. ಸರ್ಕಾರಿ ಶಾಲೆ ಅಂದ್ರೆ ಮೂಗು ಮುರಿಯುವವರೇ ಹೆಚ್ಚಾಗಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ 20ಕ್ಕೂ ಹೆಚ್ಚು ಶಾಲೆಗಳಿಗೆ ಬೀಗ ಬಿದ್ದಿದೆ. ಆದರೆ ಈ ವರ್ಷ ಹೆಚ್ಚು ಮಕ್ಕಳು ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಪಡೆದಿದ್ದಾರೆ. https://ainkannada.com/i-had-invited-the-governor-myself-to-the-rcb-felicitation-ceremony-held-at-vidhana-soudha/ ಕಳೆದ ಎರಡು ವರ್ಷಗಳಲ್ಲಿ 20ಕ್ಕೂ ಹೆಚ್ಚು ಸರ್ಕಾರಿ ಶಾಲೆ ಮುಚ್ಚಿದ್ದವು. ಕಟ್ಟಡದ ಕೊರತೆ, ಶಿಕ್ಷಕರ ಕೊರತೆ, ಮೂಲಭೂತ ಸೌಕರ್ಯ ಕೊರತೆಯಿದೆ ಎಂದು ಪೋಷಕರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುತ್ತಿದ್ದರು. ಆದರೆ, ಈ ಬಾರಿ ಪರಿಸ್ಥಿತಿ ಸ್ವಲ್ಪ ಬದಲಾಗಿದ್ದು, ಸರ್ಕಾರಿ ಶಾಲೆಗಳತ್ತ ಪೋಷಕರು ಸ್ವಲ್ಪ ಮಟ್ಟಿಗೆ ಒಲವು ತೋರಿದ್ದಾರೆ. ಸರ್ಕಾರಿ ಶಾಲೆಗಳತ್ತ ಮಕ್ಕಳು ಬರಲು, ಪೋಷಕರು ಒಲವು ತೋರಲು ಅನೇಕ ಕಾರಣಗಳಿಗಳಿವೆ. ಇದಕ್ಕೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಿರುವುದು ಪ್ರಮುಖ ಕಾರಣವಾಗಿದೆ. ಅಲ್ಲದೆ, ಸಾಕಷ್ಟು ಶಾಲೆಗಳನ್ನು ಸಿಆರ್ಎಸ್ ಫಂಡ್ ಮೂಲಕ ಅಭಿವೃದ್ಧಿಪಡಿಸಲಾಗಿದೆ. ಶಿಕ್ಷಕರ ಕೊರತೆ ಕೂಡ ನೀಗಿಸುವ ಕೆಲಸವಾಗಿದೆ. ಶಾಲೆಗಳ ಕಟ್ಟಡ ದುರಸ್ತಿ ಪಡಿಸಿಕೊಡಲಾಗಿದೆ.…
ಗೌರಿಬಿದನೂರು, ಜೂನ್ 11: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಅವರು ಇಂದು ಗೌರಿಬಿದನೂರಿನಲಗಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. https://ainkannada.com/there-have-been-no-deaths-due-to-covid-in-the-state-health-minister-dinesh-gundu-rao-clarifies/ ರಾಜ್ಯಪಾಲರು ತಾವಾಗಿಯೇ ಬರಲಿಲ್ಲ: ಆಹ್ವಾನ ನೀಡಲಾಗಿತ್ತು. ಜೂನ್ 4 ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್.ಸಿ. ಬಿ ಯ ವತಿಯಿಂದ ಆರ್.ಸಿ. ಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನನಗೆ ಅಂದು ಬೆಳಿಗ್ಗೆ 11.29 ನಿಮಿಷಕ್ಕೆ ಕೆ.ಎಸ್.ಸಿ.ಎ ವತಿಯಿಂದ ಶಂಕರ್ ಮತ್ತು ಜಯರಾಮ್ ಅವರು ಆಹ್ವಾನ ನೀಡಿ ಮನವಿ ಮಾಡಿಕೊಂಡರು. ಇದಕ್ಕೆ ನಾನು ಒಪ್ಪಿಗೆ ನೀಡಿದೆ. ಬಳಿಕ ಅವರು ರಾಜ್ಯಪಾಲರನ್ನು ಆಹ್ವಾನ ಮಾಡಿರುವುದಾಗಿ ತಿಳಿಸಿದರು. ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಾಚಾರವಾಗಿದ್ದು ಅದು ತಪ್ಪು ಎಂದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿದ್ದ ಗೋವಿಂದರಾಜು ಅವರು ರಾಜ್ಯಪಾಲರಿಗೆ ಕರೆ ಮಾಡಿ ಫೋನ್ ನನಗೆ ಕೊಟ್ಟರು. ಆಗ ನಾನು ಕೂಡ ಕಾರ್ಯಕ್ರಮಕ್ಕೆ ತೆರಳುತ್ತಿದ್ದು…
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. https://ainkannada.com/i-cant-lie-as-an-mla-why-did-h-d-revanna-step-down/ ಕೋವಿಡ್ ಸೋಂಕು ಹತೋಟಿಯಲ್ಲಿದ್ದು ಜನರು ಆತಂಕಕ್ಕೆ ಒಳಗಾಗುವ ಸ್ಥಿತಿ ಇಲ್ಲ. ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಬಂದವರಲ್ಲಿ ಸಾವಿಗೀಡಾಗಿರುವ 11 ಜನರಲ್ಲಿ 10 ಜನರ ಡೆತ್ ಆಡಿಟ್ ರಿಪೋರ್ಟ್ ಬಂದಿದೆ. ಡೆತ್ ಆಡಿಟ್ ರಿಪೋರ್ಟ್ ಪ್ರಕಾರ 10 ಜನರು ಇತರ ಮಾರಕ ಕಾಯಿಲೆಗಳಾದ ಹೃದಯಸಂಬಂಧಿ, ಕಿಡ್ನಿ, ಅಂಗಾಂಗ ವೈಫಲ್ಯದಂತಹ ಕಾರಣಗಳಿಂದ ಸಾವನ್ನಪ್ಪಿದ್ದು, ಕೋವಿಡ್ ಕಾರಣವಲ್ಲ ಎಂಬುದು ಸ್ಪಷ್ಟವಾಗಿದೆ. ಇನ್ನು ಒಬ್ಬರ ಡೆತ್ ಆಡಿಟ್ ರಿಪೋರ್ಟ್ ಬರುವುದು ಬಾಕಿ ಇದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ಡೆತ್ ಆಡಿಟ್ ರಿಪೋರ್ಟ್ ಬಳಿಕವೇ ಕೋವಿಡ್ ಡೆತ್ ರಿಪೋರ್ಟ್ ಘೋಷಿಸುವಂತೆ ಇಂದು ನಡೆದ ಸಿಎಂ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೋವಿಡ್ ಡೆತ್ ಎಂದಾಕ್ಷಣ ಅನಗತ್ಯವಾಗಿ ಜನರು ಆತಂಕಕ್ಕೆ…