ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನಡುವಿನ IPL ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಹೀಗಾಗಿ ಉಭಯ ತಂಡಗಳ ನಡುವಿನ ಪಂದ್ಯ ಪಂದ್ಯ 5 ಓವರ್ಗಳ ಆಟಕ್ಕೆ ಸೀಮಿತವಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. https://ainkannada.com/hubli-outbreak-leopard-direct-locals-are-worried/ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು ಪಂದ್ಯ ಇನ್ನೂ ಆರಂಭವಾಗಿಲ್ಲ. ಒಂದು ವೇಳೆ ಮಳೆ ಮುಂದುವರಿದರೆ ಓವರ್ ಕಡಿತವಾಗುತ್ತದೆ. ರಾತ್ರಿ 8:45ಕ್ಕೆ ಪಂದ್ಯ ಆರಂಭವಾದರೆ ಓವರ್ನಲ್ಲಿ ಕಡಿತವಾಗುವುದಿಲ್ಲ. ನಂತರ ಪಂದ್ಯ ನಡೆದರೆ ಓವರ್ ಕಡಿತವಾಗುತ್ತದೆ. ರಾತ್ರಿ 10:56ರ ವರೆಗೆ ಪಂದ್ಯ ನಡೆಸಲು ಅವಕಾಶವಿದ್ದು ಕನಿಷ್ಠ 5 ಓವರ್ ಆದರೂ ಆಡಿಸಬಹುದು. ರಾತ್ರಿ 10:50 ರ ನಂತರವೂ ಮಳೆ ಸುರಿದರೆ ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ. ಪಂದ್ಯ ರದ್ದುಗೊಂಡರೆ ಎರಡು ತಂಡಗಳಿಗೂ ಸಮಾನವಾಗಿ ಒಂದೊಂದು ಅಂಕ ನೀಡಲಾಗುತ್ತದೆ. ಹೀಗಾಗಿ ಆರ್ಸಿಬಿ 12 ಪಂದ್ಯಗಳಿಂದ 17 ಅಂಕ ಪಡೆದರೆ ಕೆಕೆಆರ್ 13 ಪಂದ್ಯವಾಡಿ 12 ಅಂಕ ಪಡೆಯುತ್ತದೆ. ಈ ಮೂಲಕ ಕೆಕೆಆರ್ ಟೂರ್ನಿಯಿಂದ ನಿರ್ಗಮಿಸುತ್ತದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಷ್ಟೇ…
Author: AIN Author
ಹುಬ್ಬಳ್ಳಿ:- ಏಕಾಏಕಿ ಪ್ರತ್ಯಕ್ಷವಾದ ಚಿರತೆ ಕಂಡು ಸ್ಥಳೀಯರು ಗಾಬರಿಗೊಂಡ ಘಟನೆ ನಗರದ ಗೋಕುಲ ರಸ್ತೆಯಲ್ಲಿ ಭಾರತಿನಗರದಲ್ಲಿ ಜರುಗಿದೆ. https://ainkannada.com/bad-news-for-r-cb-fans-doubt/ ನಗರದ ಜನಜನಿಬಿಡ ಪ್ರದೇಶದಲ್ಲಿ ತಡರಾತ್ರಿ ಚಿರತೆ ಕಾಣಿಸಿಕೊಂಡಿದೆ. ಚಿರತೆ ಅಡ್ಡಾಡುವ ದೃಶ್ಯ ಸಿಸಿಟಿವಿ ಸೆರೆಯಾಗಿದೆ. ಜಿಮ್ಯಾಟೋ ಡೆಲಿವರಿ ಭಾಯ್ ಕಣ್ಣಿಗೆ ಚಿರತೆ ಬಿದ್ದಿದ್ದು, ನಾಯಿವೊಂದನ್ನ ಎತ್ತಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಘಟನೆಯಿಂದ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರು:- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಪಂದ್ಯ ನಡೆಯಬೇಕಾಗಿತ್ತು. ಆದರೆ ಮಳೆ ಅದಕ್ಕೆ ಅಡ್ಡಿ ಮಾಡಿದೆ. https://ainkannada.com/hubli-abbayya-a-brave-legislator-for-the-deceased-chetan-family/ ಟಾಸ್ ಪ್ರಕ್ರಿಯೆ ವಿಳಂಬ ಆಗಲಿದೆ. ಮಳೆ ನಿಂತು 45 ನಿಮಿಷ ಕಳೆದ ನಂತರ ಪಂದ್ಯದ ಭವಿಷ್ಯ ನಿರ್ಧಾರ ಆಗಲಿದೆ. ಆದರೆ ಹವಾಮಾನ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಮುಂದಿನ ಮೂರು ಗಂಟೆಗಳ ಕಾಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿ ಹಲವೆಡೆ ಮಳೆಯಾಗಲಿದೆ. ಆರ್ಸಿಬಿ ಅಭಿಮಾನಿಗಳು ಕೆಕೆಆರ್ ವಿರುದ್ಧ ಗೆಲುವು ನಿರೀಕ್ಷೆ ಮಾಡಿದ್ದರು. ಆ ಮೂಲಕ ಆರ್ಸಿಬಿ ತವರಿನ ಅಂಗಳದಲ್ಲೇ ಪ್ಲೇ-ಆಫ್ಗೆ ಅಧಿಕೃತವಾಗಿ ಎಂಟ್ರಿ ನೀಡುವ ಕನಸು ಕಂಡಿದ್ದರು. ಜೊತೆಗೆ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ವಿರಾಟ್ ಕೊಹ್ಲಿಗೆ ಅಭಿನಂದನೆ ಸಲ್ಲಿಸಲು ಸಾವಿರಾರು ಕ್ರಿಕೆಟ್ ಅಭಿಮಾನಿಗಳು ಮೈದಾನಕ್ಕೆ ಬಂದಿದ್ದರು. ಇದೀಗ ಅವರೆಲ್ಲರಿಗೂ ನಿರಾಸೆ ಆಗಿದೆ. ಮುಂದಿನ ಮೂರು ಗಂಟೆಗಳ ಕಾಲ ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ…
ಹುಬ್ಬಳ್ಳಿ:- ಇತ್ತೀಚೆಗೆ ಕಮರಿಪೇಟೆಯಲ್ಲಿ ನಡೆದ ಘಟನೆಯಲ್ಲಿ ಚಾಕು ಇರಿತದಿಂದ ಸಾವಿಗಿಡಾದ ಗುರುಸಿದ್ದೇಶ್ವರ ನಗರದ ಚೇತನ ಅವರ ಮನೆಗೆ ಪೂರ್ವ ಕ್ಷೇತ್ರದ ಶಾಸಕರು, ಸ್ಲಮ್ ಬೋರ್ಡ್ ಅಧ್ಯಕ್ಷರಾದ ಪ್ರಸಾದ ಅಬ್ಬಯ್ಯ ಅವರು ಭೇಟಿನೀಡಿ ತಂದೆ, ತಾಯಿ ಕುಟುಂಬದವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ವೈಯಕ್ಯಿವಾಗಿ 50ಸಾವಿರ ರೂ. ಆರ್ಥಿಕ ಸಹಾಯ ಮಾಡಿದರು. ಅವರು, ಶನಿವಾರ ಇಲ್ಲಿನ ಮೂರು ಸಾವಿರಮಠದ ಹಿಂಬಾಗದ ಗುರುಸಿದ್ಧೇಶ್ವರ ನಗರದಲ್ಲಿರುವ ಮೃತ ಚೇತನ ರಕ್ಕಸಗಿ ಮನೆಗೆ ಭೇಟಿ ನೀಡಿದ ವೇಳೆ, ಇರುವ ಒಬ್ಬನೇ ಮಗನನ್ನು ಕಳೆದುಕೊಂಡಿದ್ದೇವೆ. ಎರಡನೇ ಮಗಳ ಮದುವೆ ತಯಾರಿಯಲ್ಲಿದ್ದ ನಮಗೆ ಮಗನ ಸಾವು ಬರಸಿಡಿಲು ಬಡದಂತಾಗಿದೆ ಎಂದು ಪೋಷಕರು ದುಃಖ ತೋಡಿಕೊಂಡರು. ಕುಟುಂಬದವರಿಗೆ ಸಂತೈಸಿದ ಶಾಸಕರು, ಮನೆಗೆ ಆಸರೆಯಾಗಿದ್ದ ಮಗನ ಸಾವಾಗಿದ್ದು, ತೀರ ಅನ್ಯಾಯದ ಸಂಗತಿ. ಅದರಲ್ಲು ಕೊಲೆಯಂಥ ದುರ್ಘಟನೆ ಸಹಿಸಲು ಸಾಧ್ಯವೇ ಇಲ್ಲ. ಇನ್ನುಳಿದ ಹೆಣ್ಣುಮಕ್ಕಳ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಧೈರ್ಯ ತಂದುಕೊಳ್ಳಿ. ಸರ್ಕಾರದಿಂದ ಸಹಾಯಸ್ಥ ಕೊಡಿಸಲಾಗುವುದು ಎಂದು ಭರವಸೆ ನೀಡಿದ ಶಾಸಕ…
ನೆಲಮಂಗಲ:- ತಾಲ್ಲೂಕಿನಲ್ಲಿ ಈಚೆಗೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ರೌಡಿಶೀಟರ್ಗಳನ್ನು ಕರೆಸಿ ಪೊಲೀಸರಿಂದ ರೌಡಿ ಪರೇಡ್ ಮಾಡಲಾಯಿತು. ನೆಲಮಂಗಲ ಉಪ ವಿಭಾಗದ ಮಾದನಾಯಕನಹಳ್ಳಿ ಪೊಲೀಸರಿಂದ 60 ಕ್ಕೂ ಹೆಚ್ಚು ರೌಡಿಶೀಟರ್ ಪರೇಡ್ ಮಾಡಲಾಗಿದೆ. https://ainkannada.com/hat-hero-hero-shivannas-one-and-a-half-hour-secret-meeting-who-was-involved/ ಈ ವೇಳೆ ಸಾಕಷ್ಟು ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರಗಳ ಮಾಹಿತಿ ಸಂಗ್ರಹಿಸಲಾಗಿದೆ. ಇನ್ನೂ ನೆಲಮಂಗಲದ ಬೆತ್ತನಗೆರೆ ಶಂಕರ, ಬಂಡೆ ಮಂಜ ಸೇರಿದಂತೆ ಹಲವರು ಗೈರಾಗಿದ್ಜರು. ರೌಡಿಶೀಟರಗಳ ಮಾಹಿತಿ ಜೊತೆಗೆ ಅವರು ಚಲನವಲನಗಳ ಪರಿಶೀಲನೆ ಮಾಡುತ್ತಿದ್ದಾರೆ. ಸನ್ನಡತೆಯ ಆಧಾರದ ಮೇಲೆ ಕೆಲ ರೌಡಿಶೀಟರ್ ಪಟ್ಟಿ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗಿದೆ. ಉನ್ನತ ಅಧಿಕಾರಿಗಳ ಗಮನಕ್ಕೆ ತಂದು ರೌಡಿಶೀಟರಗಳ ಪಟ್ಟಿ ಪರಿಶೀಲನೆ ಮಾಡಲಾಗಿದೆ. 10 ವರ್ಷದಿಂದ ಯಾವುದೇ ಪ್ರಕರಣದಲ್ಲಿ ಭಾಗಿಯಾಗದವರನ್ನ ಕೈಬಿಡುವ ಬಗ್ಗೆ ಪರಿಶೀಲನೆ ಮಾಡಮಾಡಲಾಗಿದೆ. ಭಾಗಿಯಾದವರ ಹಿನ್ನೆಲೆ ಮಾಹಿತಿ ಪಡೆದು ಪೊಲೀಸರು ಕಳುಹಿಸಿದ್ದಾರೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಬೆಂಗಳೂರಿನ ನಾಗವಾರ ಮನೆಯಲ್ಲಿ ಒಂದೂವರೆ ಗಂಟೆ ಸಿಕ್ರೇಟ್ ಮೀಟಿಂಗ್ ನಡೆದಿದೆ. ಸಭೆಯಲ್ಲಿ ಕನ್ನಡ ಚಿತ್ರರಂಗ ಸದ್ಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಥೀಯೇಟರ್ಗೆ ಜನ ಬರುತ್ತಿಲ್ಲ. ಕನ್ನಡಸಿ ನಿಮಾಗಳಿಗೆ ಥೀಯೇಟರ್ ಕೊರತೆ, ಟಿಕೆಟ್ ಬೆಲೆ ವಿಚಾರ, ದಿನೇ ದಿನೇ ಕಡಿಮೆ ಆಗುತ್ತಿರೋ ಕನ್ನಡ ಸಿನಿಮಾಗಳು, ಪ್ರೊಡ್ಯೂಸರ್ಗಳ ಸಂಕಷ್ಟ, ವಿತರಕರು-ಪ್ರದರ್ಶಕರ ಸಂಕಷ್ಟ ಹೀಗೇ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆದಿದೆ. https://ainkannada.com/kolar-transportation-employee-death/ ಸಭೆಯಲ್ಲಿ ಗಣೇಶ್, ದುನಿಯಾ ವಿಜಯ್, ಧ್ರುವಾ ಸರ್ಜಾ ಸೇರಿದಂತೆ ಹಲವು ನಟರು ಭಾಗಿಯಾಗಿದ್ದರು. ಸಿನಿಮಾ ಪ್ರದರ್ಶಕರು ಮತ್ತು ವಿತರಕರು ಕೂಡ ಮೀಟಿಂಗ್ನಲ್ಲಿ ಪಾಲ್ಗೊಂಡಿದ್ದರು. ಸಭೆ ಬಳಿಕ ಮಾಹಿತಿ ನೀಡಿರುವ ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು, ಥಿಯೇಟರ್ ಸಮಸ್ಯೆ ದೂರ ಮಾಡಲು, ಶಿವಣ್ಣ ಮನೇಲಿ ಸಭೆ ಇತ್ತು. ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ನಿರ್ಧಾರ ಮಾಡಲಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆದಿದೆ. ಹೀರೋಗಳು ಐದು ವರ್ಷಕ್ಕೆ…
ಕೋಲಾರ:- ವಿದ್ಯುತ್ ತಂತಿ ಸ್ಪರ್ಶಿಸಿ ಸಾರಿಗೆ ನೌಕರ ದುರ್ಮರಣ ಹೊಂದಿರುವ ಘಟನೆ ಕೋಲಾರದಲ್ಲಿ ಜರುಗಿದೆ. https://ainkannada.com/fat-collection-around-the-stomach-drink-this-herbal-tea-regularly/ ಗ್ರಾಮದ ರೆಡ್ಡಪ್ಪ (58) ವಿದ್ಯುತ್ ತಂತಿ ತಗುಲಿ ಮೃತಪಟ್ಟಿ ವ್ಯಕ್ತಿ. ಕಳೆದ ರಾತ್ರಿ ಬಿರುಗಾಳಿ ಮಳೆಯಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿದ್ದವು. ತಂತಿಗಳು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇಂದು ಮುಂಜಾನೆ ಎದ್ದು ಎಂದಿನಂತೆ ತೋಟಕ್ಕೆ ತೆರಳುವ ವೇಳೆ ಬೈಕ್ಗೆ ತಂತಿ ಸ್ಪರ್ಶವಾಗಿ ರೆಡ್ಡಪ್ಪ ಸಾವನ್ನಪ್ಪಿದ್ದಾರೆ. ರೆಡ್ಡಪ್ಪ ಮುಳಬಾಗಿಲು ಕೆಎಸ್ಆರ್ಟಿಸಿ ಘಟಕದಲ್ಲಿ ಸಂಚಾರಿ ನಿಯಂತ್ರಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಬೆಸ್ಕಾಂ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ವಿದ್ಯುತ್ ತಂತಿಗಳ ತೆರವು ಕಾರ್ಯ ಮಾಡಲಾಗಿದೆ. ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ ಎಂದು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಹೊಟ್ಟೆ ಮತ್ತು ಸೊಂಟದ ಭಾಗದಲ್ಲಿ ಬೊಜ್ಜು ಸೇರಿಕೊಂಡರೆ ಅದು ದೇಹದ ಸೌಂದರ್ಯವನ್ನೇ ಹಾಳು ಮಾಡಿ ಬಿಡುತ್ತದೆ. ಯಾವ ಬಟ್ಟೆ ಧರಿಸಿದರೂ ಅಸಹ್ಯವಾಗಿಯೇ ಕಾಣುತ್ತದೆ. ಈ ಬೊಜ್ಜು ಕರಗಿಸಲು ಸುಲಭ ಉಪಾಯ ಇಲ್ಲಿದೆ. https://ainkannada.com/heavy-rainfall-in-the-state-tomorrow-yellow-orange-alert-announces-for-these-districts/ ಮಹಿಳೆಯರು, ಪುರುಷರು ಎಷ್ಟೇ ದಪ್ಪ ಅದ್ರೂ ಅಷ್ಟೊಂದು ತಲೆ ಕೆಡಿಸಿಕೊಳ್ಳಲ್ಲ, ಅದೇ ಹೊಟ್ಟೆಯ ಬೊಜ್ಜು ಬರಲು ಶುರುವಾದರೆ, ಅಯ್ಯೋ ಹೊಟ್ಟೆ ಬಂದ್ಬಿಟ್ಟಿದೆ ಇದನ್ನು ಕರಗಿಸಲೇ ಬೇಕು ಅಂತಾ ಶತಪ್ರಯತ್ನ ಮಾಡುತ್ತಾರೆ. ದೇಹದ ಯಾವುದೇ ಭಾಗದ ಬೊಜ್ಜನ್ನು ಸ್ವಲ್ಪ ಪ್ರಯತ್ನ ಮಾಡುವ ಮೂಲಕ ಕರಗಿಸಬಹುದು, ಆದರೆ ಈ ಹೊಟ್ಟೆ ಬೊಜ್ಜು ಇದೆಯಲ್ಲಾ ಅದು ಸುಲಭವಾಗಿ ನಮ್ಮ ಮಾತು ಕೇಳೋಲ್ಲ. ಅದಕ್ಕೆ ಸರಿಯಾದ ಆಹಾರ, ಕ್ರಮಬದ್ಧ ವ್ಯಾಯಾಮ ಎಲ್ಲವೂ ಬೇಕಾಗುತ್ತದೆ. ಪ್ರತಿದಿನ ವ್ಯಾಯಾಮ ಮಾಡಿದರೂ ನಿಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಸಾಧ್ಯವಾಗದಿದ್ದರೆ, ನಿಮ್ಮ ಆಹಾರ ಕ್ರಮದ ಬಗ್ಗೆ ವಿಶೇಷ ಗಮನ ಹರಿಸಬೇಕು. ನಿಮ್ಮ ತೂಕ ಇಳಿಸುವ ಪ್ರಯಾಣ ಹೆಚ್ಚಿಸಲು, ನಿಮ್ಮ ಆಹಾರ ಯೋಜನೆಯಲ್ಲಿ ಕೆಲವು ಗಿಡಮೂಲಿಕೆ ಚಹಾಗಳನ್ನು ಸೇರಿಸಲು ಪ್ರಯತ್ನಿಸಬಹುದು.…
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/drinking-cane-milk-should-not-be-eaten-by-these-foods-why/ ಮೇ 17ರಿಂದ ಎರಡು ದಿನಗಳವರೆಗೆ ಬೆಳಗಾವಿ, ಧಾರವಾಡ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬಿಸಿಲಿನ ಧಗೆಯಿಂದ ದಣಿವಾರಿಸಿಕೊಳ್ಳಲು ತಂಪಾದ ಕಬ್ಬಿನ ಹಾಲಿಗಿಂತ ರುಚಿಕರ ಮತ್ತು ಆರೋಗ್ಯಕರ ಪಾನೀಯ ಇನ್ನೊಂದಿಲ್ಲ. ಈ ರಸ ಅತಿ ಪೌಷ್ಟಿಕ ಹಾಗೂ ಒಂದಕ್ಕಿಂತ ಹೆಚ್ಚು ವಿಧದಲ್ಲಿ ಆರೋಗ್ಯವನ್ನು ವೃದ್ದಿಸುವ ಪಾನೀಯವೂ ಆಗಿದೆ. ಅಚ್ಚರಿ ಎಂದರೆ, ಬೇಸಿಗೆಯಲ್ಲಿ ಇದರ ಸೇವನೆಯಿಂದ ದೇಹ ತಂಪಾದರೆ ಚಳಿಗಾಲದಲ್ಲಿ ಇದರ ಸೇವನೆಯಿಂದ ದೇಹ ಬೆಚ್ಚಗಾಗುತ್ತದೆ! ಆಲ್ಲದೇ ಕಬ್ಬಿನ ಹಾಲಿನ ಸೇವನೆಯಿಂದ ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಪ್ರಸ್ತುತ ದಿನಗಳಲ್ಲಿ ಈ ಶಕ್ತಿ ಅತಿ ಹೆಚ್ಚಾಗಿ ಅಗತ್ಯವಾಗಿದೆ. ಸಿಹಿಯಾಗಿದ್ದರೂ, ಕಬ್ಬಿನ ಹಾಲಿನಲ್ಲಿ ಕ್ಯಾಲೋರಿಗಳು ಕಡಿಮೆಯೇ ಇವೆ. https://ainkannada.com/new-court-complex-at-a-cost-of-rs-29-crore-mla-k-m-uday/ ಕಬ್ಬಿನ ಹಾಲು ದೇಹಕ್ಕೆ ತಕ್ಷಣ ಪೋಷಕಾಂಶಗಳನ್ನು ಒದಗಿಸುತ್ತದೆ. ಇದು ದೇಹವನ್ನು ತಂಪಾಗಿ ಮತ್ತು ನೀರಿನ ಅಂಶ ಇರುವಂತೆ ಮಾಡುತ್ತದೆ. ಆದರೆ, ಕಬ್ಬಿನ ಹಾಲು ಸೇವಿಸಿದ ಬಳಿಕ ನೀವು ಕೆಲವು ಆಹಾರಗಳನ್ನು ಸೇವಿಸಬಾರದು. ಹಾಗೆ ತಿನ್ನುವುದರಿಂದ ಸಮಸ್ಯೆಗಳು ಉಂಟಾಗಬಹುದು. ಕಬ್ಬಿನ ರಸವು ನೈಸರ್ಗಿಕವಾಗಿ ಸಿಹಿಯಾಗಿರುತ್ತದೆ. ನೀವು ಗುಲಾಬ್ ಜಾಮೂನ್, ಲಡ್ಡು, ಹಲ್ವಾ ಮುಂತಾದ ಹೆಚ್ಚು ಸಿಹಿ ಆಹಾರಗಳನ್ನು ಕಬ್ಬಿನ ಹಾಲು ಕುಡಿದ…