ವಿಜಯನಗರ:- ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗ್ರಾಪಂ ವ್ಯಾಪ್ತಿಯ ಬಂಡ್ರಿ ಗ್ರಾಮದಲ್ಲಿ ಆರೋಗ್ಯ ಶಿಬಿರ ಹಾಗೂ ದುಡಿಯೋಣ ಬಾ ಅಭಿಯಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. https://ainkannada.com/kirik-for-cigarette-issue-murder-of-a-young-man-punched-by-a-car/ ಆರೋಗ್ಯ ಶಿಬಿರ ಹಾಗೂ ದುಡಿಯೋಣ ಬಾ ಅಭಿಯಾನ ಕಾರ್ಯಕ್ರಮದ ಬಳಿಕ ಮೇ ಮಾಸದಲ್ಲಿ ನೀಡಿದ ಶೇ.30 ಕೆಲಸದ ರಿಯಾಯಿತಿಯಿಂದ ಬೇಗ ಕೆಲಸ ಮುಗಿಸಿ ತಮ್ಮದೇ ಹಾಡುಗಳಿಗೆ ನ್ಯತ್ಯ ಮಾಡಿದ ಲಂಬಾಣಿ ಮಹಿಳೆಯರ ಡ್ಯಾನ್ಸ್ ಎಲ್ಲರ ಗಮನ ಸೆಳೆದಿದೆ.
Author: AIN Author
ಬೆಂಗಳೂರು:- ಸಿಗರೇಟ್ ವಿಚಾರಕ್ಕೆ ಗಲಾಟೆ ನಡೆದು ಕಾರಿನಿಂದ ಗುದ್ದಿ ಯುವಕನನ್ನು ‘ಮರ್ಡರ್’ ಮಾಡಿರುವ ಘಟನೆ ಕೋಣನಕುಂಟೆ ಕ್ರಾಸ್,ಕನಕಪುರ ರಸ್ತೆ ತಿರುವಿನ ಬಳಿ ಜರುಗಿದೆ. ಘಟನೆಯ ಭಯಾನಕ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ದೃಶ್ಯದಲ್ಲಿ ಆರೋಪಿಯ ಅಟ್ಟಹಾಸ ಬೆಚ್ಚಿ ಬೀಳುವಂತಿದೆ. ಮೇ.10 ರಂದು ಬೆಳಗಿನ ಜಾವ ನಾಲ್ಕು ಗಂಟೆಗೆ ನಡೆದ ಘಟನೆ ಇದಾಗಿದೆ. https://ainkannada.com/hubli-sameera-khan-cycle-trip-to-women-empowerment/ ಟೆಕ್ಕಿ ಸಂಜಯ್ ಕೊಲೆಯಾದ ದುರ್ದೈವಿ. ಪ್ರತೀಕ್ ಎಂಬಾತನಿಂದ ಕಾರು ಗುದ್ದಿಸಿ ಕೊಲೆಯಾಗಿದೆ. ಕನಕಪುರ ರಸ್ತೆಯ ವಸಂತಪುರ ಕ್ರಾಸ್ನಲ್ಲಿ ಘಟನೆ ನಡೆದಿದೆ. ಸಾಫ್ಟ್ವೇರ್ ಉದ್ಯೋಗಿಗಳಾಗಿದ್ದ ಸಂಜಯ್, ಕಾರ್ತಿಕ್ ಸಿಗರೇಟ್ ಸೇದಲು ಕಚೇರಿಯಿಂದ ಹೊರಬಂದಿದ್ದರು. ಇಲ್ಲಿನ ರಸ್ತೆ ಬದಿಯ ಸೈಕಲ್ನಲ್ಲಿ ಸಿಗರೇಟ್ ತೆಗೆದುಕೊಂಡಿದ್ದರು. ಅಲ್ಲೇ ನಿಂತು ಇಬ್ಬರು ಟೆಕ್ಕಿಗಳು ಸಿಗರೇಟ್ ಸೇದುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪ್ರತೀಕ್ ಕಾರಿನಿಂದ ಇಳಿಯದೇ, ಸಂಜಯ್ಗೆ ಸಿಗರೇಟ್ ತಂದುಕೊಡುವಂತೆ ಹೇಳಿದ್ದ. ಇದರಿಂದ ಕೋಪಗೊಂಡ ಸಂಜಯ್ ಮತ್ತು ಕಾರ್ತಿಕ್ ಕಾರಿನಲ್ಲಿದ್ದ ಪ್ರತೀಕ್ ನಡುವೆ ಗಲಾಟೆ ನಡೆದಿತ್ತು. ಗಲಾಟೆ ಜೋರಾಗಿ ಅಂಗಡಿಯವರು ಬಿಡಿಸಿ ಕಳುಹಿಸಿದ್ದರು. ಕೋಪಗೊಂಡ…
ಹುಬ್ಬಳ್ಳಿ: ಮಹಿಳೆಯರ ಮೇಲೆ ವರದಕ್ಷಿಣೆ ಕಿರುಕುಳ, ಲೈಂಗಿಕ ದೌರ್ಜನ್ಯ, ಮಹಿಳೆಯರ ಮೇಲೆ ದಬ್ಬಾಳಿಕೆಯ ತಡೆಯುವ ಹಾಗೂ ಈ ಕುರಿತು ಜಾಗೃತಿಗಾಗಿ ಮಹಿಳಾ ಸಬಲೀಕರಕ್ಕಾಗಿ ಸೈಕಲ್ ಯಾತ್ರೆ ಆರಂಭಿಸಿರುವ ಪರ್ವತಾರೋಹಿಣಿ ಪಿ. ಸಮೀರಾ ಖಾನ್ ಅವರ ಸೈಕಲ್ ಯಾತ್ರೆ ಹುಬ್ಬಳ್ಳಿಗೆ ಆಗಮಿಸಿದ್ದು ಕಳೆದ ಎರಡು ದಿನಗಳಿಂದ ಇಲ್ಲಿ ಜಾಗೃತಿ ಮೂಡಿಸುತಿದ್ದಾರೆ. https://ainkannada.com/crime-news-man-attacked-with-a-sword-in-bantwal/ ಆಂಧ್ರ ಪ್ರದೇಶದಿಂದ ಆರಂಭ ಗೊಂಡಿರುವ ಈ ಸೈಕಲ್ ಯಾತ್ರೆ ವಿವಿಧ ಸಂಘ ಸಂಸ್ಥೆ, ಗಣ್ಯರಿಂದ ಸಹಾಯಕ್ಕಾಗಿ ಮನವಿ ಮಾಡತಾ ಇದ್ದುಮಹಿಳೆಯರ ಆರೋಗ್ಯ, ಶಿಕ್ಷಣ, ಸ್ವಾವಲಂಬಿ ಬದುಕಿಗೆ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಹಿಮಾಲಯ ಪರ್ವತಾರೋಹಣಕ್ಕೆ ಬೆಂಬಲ ಪಡೆಯಲು ಸಹ ಇದೇ ವೇಳೆ ಸೈಕಲ್ ಯಾತ್ರೆ ನಡೆಸತಾ ಇದ್ದಾರೆ. ಆಂದ್ರ ಪ್ರದೇಶದಅನಂತಪುರದ ಪರ್ವತಾರೋಹಿ ಪಿ. ಸಮೀರಾ ಖಾನ್ ಯಾತ್ರೆ ಹುಬ್ಬಳ್ಳಿ ತೊಳನಕೆರೆಯಿಂದ ಚಾಲನೆ ನೀಡಲಾಗಿದೆ. ಒಬ್ಬ ಉತ್ಸಾಹಿ ಪ್ರಯಾಣಿಕ ಮತ್ತು ಸೈಕ್ಲಿಸ್ಟ್ ಆಗಿರುವ ಸಮೀರಾಖಾನ್ಇದು ನನ್ನ ಇಲ್ಲಿಯವರೆಗಿನ ಅತ್ಯುತ್ತಮ ಯಾತ್ರೆ ಆಗಿದೆ ಎಂದು ಅವರು ಹೇಳುತ್ತಾರೆ. “ಪರ್ವತಾರೋಹಣ ಮತ್ತು ಬಂಡೆ ಹತ್ತುವುದರಲ್ಲಿ…
ಮಂಗಳೂರು:- ಬಂಟ್ವಾಳದಲ್ಲಿ ವ್ಯಕ್ತಿ ಮೇಲೆ ತಲ್ವಾರ್ನಿಂದ ಅಟ್ಯಾಕ್ ನಡೆದಿರುವ ಘಟನೆ ಜರುಗಿದೆ. https://ainkannada.com/horrific-road-accident-four-dead-one-seriously-injured/ ಸ್ಥಳೀಯ ನಿವಾಸಿ ಹಮೀದ್ ಹಲ್ಲೆಗೊಳಗಾದ ವ್ಯಕ್ತಿ. ಶುಕ್ರವಾರ ಸಂಜೆ ವೇಳೆಗೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಸದ್ಯ ಹಲ್ಲೆಗೊಳಗಾಗಿರುವ ಹಮೀದ್ನನ್ನ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೇಲ್ನೋಟಕ್ಕೆ ಹ್ಯಾರಿಸ್ ಎಂಬಾತನ ಗ್ಯಾಂಗ್ನಿಂದ ವೈಯಕ್ತಿಕ ದ್ವೇಷಕ್ಕೆ ದಾಳಿ ನಡೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಚಿತ್ರದುರ್ಗ:- ಕಾರೊಂದು ಟ್ರಾಕ್ಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಜನರು ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಹೊಳಲ್ಕೆರೆ ಚಿತ್ರಹಳ್ಳಿ ಬಳಿ ತಡ ರಾತ್ರಿ ನಡೆದಿದೆ. https://ainkannada.com/west-indies-cricket-board-gives-good-news-to-rcb-fans-what-is-it/ ಕಾರು ಶಿವಮೊಗ್ಗಾ ಕಡೆಗೆ ಹೋಗುತ್ತಿದ್ದು, ಮುಂದೆ ಹೋಗುತ್ತಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಕಾವ್ಯ,ಗಂಗಮ್ಮ,ಹಂಸಿಕ,ಮತ್ತು ಮನಸ್ವಿನಿ ಎಂದು ಗುರುತಿಸಿದ್ದು, ಗಾಯಾಳು ಯಶವಂತ್ ಎನ್ನಲಾಗಿದೆ. ಇವರೆಲ್ಲರೂ ಕೂಡ ಅರೇನಹಳ್ಳಿ ಗ್ರಾಮದವರಾಗಿದ್ದಾರೆ. ಘಟನಾ ಸ್ಥಳಕ್ಕೆ ಚಿತ್ರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇಂದಿನಿಂದ IPL ದ್ವಿತೀಯಾರ್ಧ ಆರಂಭವಾಗಲಿದ್ದು, ಈ ಹೊತ್ತಲ್ಲೇ RCB ಅಭಿಮಾನಿಗಳಿಗೆ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಗುಡ್ ನ್ಯೂಸ್ ಕೊಟ್ಟಿದೆ. https://ainkannada.com/attention-motorists-traffic-restrictions-on-hebbal-flyover-for-five-days/ ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್ರೌಂಡರ್ ರೊಮಾರಿಯೊ ಶೆಫರ್ಡ್ ಆರ್ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಮೇ 29 ರಿಂದ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಣ ಸರಣಿ ಶುರುವಾಗಲಿದ್ದು, ಇದಕ್ಕಾಗಿ ಅವರು ಅರ್ಧದಲ್ಲೇ ಐಪಿಎಲ್ ಟೂರ್ನಿ ತೊರೆಯಲಿದ್ದಾರೆ ಎಂದು ವರದಿಯಾಗಿತ್ತು. ಆದರೀಗ ರೊಮಾರಿಯೊ ಶೆಫರ್ಡ್ಗೆ ಸಂಪೂರ್ಣ ಟೂರ್ನಿ ಮುಗಿಸಲು ಕ್ರಿಕೆಟ್ ವೆಸ್ಟ್ ಇಂಡೀಸ್ ಅನುಮತಿ ನೀಡಿದೆ. ಅಲ್ಲದೆ ಅವರ ಬದಲಿಗೆ ಇಂಗ್ಲೆಂಡ್ ಸರಣಿಗೆ ಜೆಡಿಯಾ ಬ್ಲೇಡ್ಸ್ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ಆರ್ಸಿಬಿ ತಂಡದ ಪ್ಲೇಆಫ್ ಪಂದ್ಯಗಳಲ್ಲೂ ರೊಮಾರಿಯೊ ಶೆಫರ್ಡ್ ಕಾಣಿಸಿಕೊಳ್ಳುವುದು ಖಚಿತ. ಇತ್ತ ರೊಮಾರಿಯೊ ಶೆಫರ್ಡ್ ಲಭ್ಯತೆಯು ಆರ್ಸಿಬಿ ತಂಡದ ಬಲವನ್ನು ಮತ್ತಷ್ಟು ಹೆಚ್ಚಿಸಿದೆ ಎನ್ನಬಹುದು. ಏಕೆಂದರೆ ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಅಂತಿಮ ಓವರ್ಗಳಲ್ಲಿ ಅಬ್ಬರಿಸಿದ್ದ ಶೆಫರ್ಡ್ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.…
ಬೆಂಗಳೂರು:- ವಾಹನ ಸವಾರರು ಅಪ್ಪಿತಪ್ಪಿಯೂ ಇಲ್ಲಿ ಸಂಚಾರ ಮಾಡೋ ಮುನ್ನ ಈ ಸ್ಟೋರಿ ಮಿಸ್ ಮಾಡ್ದೆ ನೋಡಿ. ಇಂದಿನಿಂದ ಮೇ 21ರವರೆಗೆ ಪ್ರತಿದಿನ ಮಧ್ಯರಾತ್ರಿ 12 ಗಂಟೆಯಿಂದ 3 ಗಂಟೆವರೆಗೆ ಹೆಬ್ಬಾಳ ಫ್ಲೈಓವರ್ ಬಂದ್ ಇರಲಿದೆ. ಬಿಡಿಎ ಕಾಮಗಾರಿ ಹಿನ್ನೆಲೆ ಬಂದ್ ಇರಲಿದೆ. https://ainkannada.com/fraud-case-fir-against-former-ed-officer-son-seri-nalvar/ ಎಸ್ಟೀಮ್ ಮಾಲ್ನಿಂದ ಬಾಪ್ಟಿಸ್ಟ್ ಆಸ್ಪತ್ರೆವರೆಗಿನ ಮಾರ್ಗ ಬಂದ್ ಇರಲಿದ್ದು ಈ ವೇಳೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ ಬೆಂಗಳೂರು ಸಂಚಾರ ಪೊಲೀಸ್ ಪ್ರಕಟಣೆ ಹೊರಡಿಸಿದ್ದಾರೆ. ಪ್ರತಿದಿನ 3 ಗಂಟೆಗಳ ಕಾಲ ಅಂದರೆ ರಾತ್ರಿ 12 ರಿಂದ ಬೆಳಗಿನ ಜಾವ 03 ಗಂಟೆ ವರೆಗೆ ಕಾಮಗಾರಿನ್ನು ಕೈಗೊಳ್ಳಲಾಗಿದೆ. ಹಾಗಾಗಿ ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಕಾಮಗಾರಿ ನಡೆಯುವ ಸಮಯದಲ್ಲಿ ಈ ಕೆಳಕಂಡ ಸಂಚಾರ ಮಾರ್ಪಾಡು ಮಾಡಲಾಗಿದೆ ಎಂದು ತಿಳಿಸಿದೆ. ಹೆಬ್ಬಾಳ ಮೇಲೇತುವೆಯಲ್ಲಿ ಎಸ್ಟೀಮ್ ಮಾಲ್ನಿಂದ ಮೇಖ್ರಿ ವೃತ್ತದ ಕಡೆಗೆ ರಾತ್ರಿ 12 ರಿಂದ ಬೆಳಿಗ್ಗೆ 3 ಗಂಟೆ ವರೆಗೆ ಎಲ್ಲಾ ರೀತಿಯ ವಾಹನಗಳನ್ನು ನಿಷೇಧಿಸಲಾಗಿದೆ ಅಂತಾರಾಷ್ಟ್ರೀಯ…
ಬೆಂಗಳೂರು:- ವಂಚನೆ ಆರೋಪದಡಿ ಮಾಜಿ ಇಡಿ ಅಧಿಕಾರಿ ಹಾಗೂ ಅವರ ಪುತ್ರ ಸೇರಿ ನಾಲ್ವರ ವಿರುದ್ಧ FIR ದಾಖಲಾಗಿದೆ. https://ainkannada.com/doha-diamond-league-2025-history-gold-boy-neeraj-chopra/ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿ ಸೋಮಶೇಖರ್ ಮತ್ತು ಅವರ ಪುತ್ರನ ವಿರುದ್ಧ ವಂಚನೆ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ವಾಫೆ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮಾಜಿ ನಿರ್ದೇಶಕರ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದೆ. ಕಂಪನಿಯ ಹಣವನ್ನು ದುರುಪಯೋಗಪಡಿಸಿಕೊಂಡು 80 ಲಕ್ಷಕ್ಕೂ ಹೆಚ್ಚು ನಷ್ಟ ಉಂಟುಮಾಡಿದ ಆರೋಪವಿದೆ. ಸೋಮಶೇಖರ್ ಪುತ್ರ 2021ರ ಡಿಸೆಂಬರ್ನಲ್ಲಿ ಸುಹಾಸ್ರನ್ನು ಭೇಟಿ ಮಾಡಿದ್ದರು. ಭೇಟಿ ವೇಳೆ ವಾಫೆ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿ ಆರಂಭದ ಬಗ್ಗೆ ಮಾತುಕತೆ ನಡೆದಿತ್ತು. ಸುಹಾಸ್ ಕಂಪನಿಯ 3,334 ಶೇರ್ ಖರೀದಿ ಮಾಡಿದ್ದರು. ಅಲ್ಲದೇ ಸುಹಾಸ್ ಕಂಪನಿಯ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ನೇಮಕಗೊಂಡಿದ್ದರು ಎಂದೂ ದೂರಿನ ಪ್ರತಿಯಲ್ಲಿದೆ. ಯಂತ್ರಗಳ ಖರೀದಿ ಮತ್ತು ಏರೋಸ್ಪೇಸ್ ಉತ್ಪಾದನೆಗಾಗಿ ಅಶೋಕ ಎಂಎ ಒಡೆತನದ ಎಸ್ಎಲ್ಎನ್ ಸಿಎನ್ಸಿಟೆಕ್ ಪ್ರೈವೇಟ್ ಲಿಮಿಟೆಡ್…
ಕತಾರ್ನ ಸುಹೀಮ್ ಬಿನ್ ಹಮದ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ದೋಹಾ ಡೈಮಂಡ್ ಲೀಗ್ನಲ್ಲಿ ಚಿನ್ನದ ಹುಡುಗ ನೀರಜ್ ಚೋಪ್ರಾ ಹೊಸ ಇತಿಹಾಸ ಬರೆದಿದ್ದಾರೆ. ನೀರಜ್ ಅವರು 90.23 ಮೀಟರ್ ಜಾವೆಲಿನ್ ಎಸೆದು ಭಾರತದ ಪರ ಇತಿಹಾಸ ಬರೆದಿದ್ದಾರೆ. ಹಾಲಿ ವಿಶ್ವ ಚಾಂಪಿಯನ್ ಮತ್ತೊಮ್ಮೆ 90 ಮೀಟರ್ ಜಾವೆಲಿನ್ ಎಸೆಯುವ ಮೂಲಕ ತನ್ನ ಹಳೆ ದಾಖಲೆಯನ್ನೇ ಮುರಿದಿದ್ದಾರೆ. ನೀರಜ್ ಚೋಪ್ರಾ 88.44 ಮೀಟರ್ ಜಾವೆಲಿನ್ ಎಸೆದು ಆರಂಭಿಕ ಮುನ್ನಡೆ ಸಾಧಿಸಿದರು. ನೀರಜ್ ಚೋಪ್ರಾ ಕೊನೆಯ ಎಸೆತದಲ್ಲಿ 90.23 ಮೀಟರ್ ದೂರಕ್ಕೆ ಎಸೆದು ದೋಹಾ ಡೈಮಂಡ್ ಲೀಗ್ನಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಭಾರತದ ಇನ್ನೋರ್ವ ಕ್ರೀಡಾಪಟು ಕಿಶೋರ್ ಜೆನಾ ಪುರುಷರ ಜಾವೆಲಿನ್ ಥ್ರೋ ಭಾಗಿಯಾಗಿದ್ದರು.
ಬೆಂಗಳೂರು:- ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ ಎಂದು HD ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. https://ainkannada.com/ipl-2025-today-is-a-strong-team-against-kkr-who-is-in-the-rcb-team/ ಈ ಸಂಬಂಧ X ಮಾಡಿರುವ ಅವರು, ಪಹಲ್ಗಾಮ್ನಲ್ಲಿ ಭಾರತೀಯ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕ ದಾಳಿ ಮತ್ತು ಉಗ್ರರಿಗೆ ಪಾಕಿಸ್ತಾನದ ಚಿತಾವಣಿಯಷ್ಟೇ ಅಲ್ಲದೇ ತನ್ನ ತನು-ಮನ-ಧನ ಅರ್ಪಣೆ ಮಾಡುತ್ತಿರುವುದನ್ನು ಖಂಡಿಸುವ ಬದಲಿಗೆ ಕಾಂಗ್ರೆಸ್ ಪಕ್ಷವು ಸೇನಾಪಡೆಗಳನ್ನು, ಪ್ರಧಾನಿ ಶ್ರೀ ಮೋದಿ ಅವರನ್ನೂ ನಿಂದಿಸುತ್ತಿರುವುದು ನಾಚಿಕೆಗೇಡು ಎಂದು ಬರೆದುಕೊಂಡಿದ್ದಾರೆ. ಕಾಂಗ್ರೆಸ್, ಭಾರತದ ರಾಜಕೀಯ ಪಕ್ಷವೋ? ಅಥವಾ ಶತ್ರು ದೇಶದ ವಕ್ತಾರಿಕೆ ಮಾಡುತ್ತಿರುವ ಪಕ್ಷವೋ? ಅದರ ತನ್ನ ಡಿಎನ್ಎ ಭಾರತದ್ದೋ ಅಥವಾ ಪಾಕಿಸ್ತಾನದ್ದೋ ಎಂಬುದನ್ನು ಅದುವೇ ಸ್ಪಷ್ಟಪಡಿಸಬೇಕು. ಪಾಕಿಸ್ತಾನ ಸೃಷ್ಟಿಯಾಗಿದ್ದು ಹೇಗೆ? ಅದರಲ್ಲಿ ಕಾಂಗ್ರೆಸ್ ಪಾತ್ರವೇನು? ಎಂಬ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ. ಆದರೆ, ದೇಶ ವಿಭಜನೆಯಾಗಿ ಏಳೂವರೆ ದಶಕ ಮೀರಿದರೂ ಆ ಪಕ್ಷ ಇನ್ನೂ ಪಾಕಿಸ್ತಾನ ಮನಸ್ಥಿತಿಯಲ್ಲೇ ಇದೆ. ಅಸ್ತಿತ್ವ ಮಾತ್ರ ಭಾರತದಲ್ಲಿ, ಅದರ ಹೃದಯ ಮಾತ್ರ ಪಾಕಿಸ್ತಾನದಲ್ಲಿದೆ. ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ ಆಕ್ರೋಶ…