Author: AIN Author

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಬೇಕಿದ್ದ ಐಪಿಎಲ್‌ನ 58 ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಈ ಪಂದ್ಯದ ಟಾಸ್ ಕೂಡ ನಡೆಯಲು ಸಾಧ್ಯವಾಗಲಿಲ್ಲ. ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಗಿದೆ. ಇದರೊಂದಿಗೆ, ರಜತ್ ಪಾಟಿದಾರ್ ನೇತೃತ್ವದ ತಂಡವು 17 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ 12 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದೆ. ಹೀಗಾಗಿ ಕೆಕೆಆರ್ ತಂಡದ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ. https://ainkannada.com/rainstorm-around-chinnaswamy-stadium-rcb-vs-kkr-match-cancelled-fans-are-upset/ ಕೆಕೆಆರ್‌ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದರೆ ಮಳೆಯಿಂದ ಪಂದ್ಯವೇ ರದ್ದಾಗಿರುವುದರಿಂದ ಟೂರ್ನಿಯಿಂದ ಹೊರಬಿದ್ದಿದೆ. ಪಂದ್ಯ ಮಳೆಯಿಂದ ರದ್ದಾಗಿರುವುದರಿಂದ ಎರಡೂ ತಂಡಗಳಿಗೆ ತಲಾ ಒಂದು ಪಾಯಿಂಟ್ ಸಿಕ್ಕಿದೆ. ಕೆಕೆಆರ್ ತಂಡ 12 ಪಂದ್ಯಗಳಲ್ಲಿ 5 ಗೆಲುವು, 6 ಸೋಲು ಮತ್ತು ಒಂದು ರದ್ದಾದ ಪಂದ್ಯದೊಂದಿಗೆ ಪ್ರಸ್ತುತ 12 ಅಂಕಗಳನ್ನು ಹೊಂದಿದೆ. ಇನ್ನು ಆರ್ ಸಿಬಿ ಆಡಿರುವ 11 ಪಂದ್ಯಗಳಲ್ಲಿ 8 ರಲ್ಲಿ ಗೆಲುವು ಸಾಧಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.…

Read More

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆಯಬೇಕಾಗಿದ್ದ RCB Vs KKR ಪಂದ್ಯ ಮಳೆಗಾಹುತಿಯಾಗಿದೆ. ಒಂದೆಡೆ ಮ್ಯಾಚ್ ರದ್ದಾಗಿರೋ ಬೇಸರ, ಮತ್ತೊಂದೆಡೆ ತಮ್ಮ ನೆಚ್ಚಿನ ವಿರಾಟ್ ಕೊಹ್ಲಿಗೆ ಬಿಗ್ ಸರ್ಪ್ರೈಸ್ ಕೊಡಬೇಕು ಅಂದುಕೊಂಡಿಿದ್ದ RCB ಫ್ಯಾನ್ಸ್ ಗೆ ಮಳೆ ಅಡ್ಡಿ ಮಾಡಿತು. ಆದರೂ ತೊಂದ್ರೆ ಇಲ್ಲ. ಏಕೆಂದರೆ ಚಿನ್ನಸ್ವಾಮಿ ಕ್ರೀಡಾಂಗಣ ಪೂರ್ತಿ ವೈಟ್ ಜರ್ಸಿಯಲ್ಲಿ ಮಿಂದೆದ್ದಿದೆ. ಮಳೆಯ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ಶ್ವೇತಮಯವಾಗಿಸಿದ್ದು ವಿರಾಟ್ ಕೊಹ್ಲಿಯ ಅಭಿಮಾನಿಗಳು. ತಮ್ಮ ನೆಚ್ಚಿನ ಆಟಗಾರನಿಗೆ ಟೆಸ್ಟ್ ಕ್ರಿಕೆಟ್​​ನಲ್ಲಿ ಗೌರವಯುತ ವಿದಾಯ ಸಿಕ್ಕಿಲ್ಲ ಎಂಬ ಕಾರಣಕ್ಕೆ, ಅಭಿಮಾನಿಗಳು ವೈಟ್ ಜೆರ್ಸಿ ಧರಿಸಿ ಆಗಮಿಸಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಕಿಂಗ್ ಕೊಹ್ಲಿಯನ್ನು ತಾವೆಷ್ಟು ಪ್ರೀತಿಸುತ್ತಿದ್ದೇವು ಎಂಬುದನ್ನು ಅಭಿಮಾನಿಗಳು ಸಾರಿ ಹೇಳಿದ್ದರು. ಇತ್ತ ಇಂತಹದೊಂದು ಅಭಿಮಾನವನ್ನು ನೋಡಿದ ವಿರಾಟ್ ಕೊಹ್ಲಿ ಭಾವುಕರಾಗಿ ಕಂಡು ಬಂದರು. ಗ್ಯಾಲರಿ ಪೂರ್ತಿ ವೈಟ್ ಜೆರ್ಸಿ ರಾರಾಜಿಸುತ್ತಿರುವುದು ಬಿಗ್ ಸ್ಕ್ರೀನ್​ನಲ್ಲಿ ತೋರಿಸುತ್ತಿದ್ದಂತೆ, ಇತ್ತ ಕೊಹ್ಲಿ ಏಕಾಂತವಾಗಿ ಭಾವುಕತೆಯಿಂದ ನೋಡುತ್ತಾ ಕೂತಿದ್ದರು. ಆದರೆ ವಿಧಿಯಾಟ,…

Read More

ಸೂರ್ಯೋದಯ – 5:47 ಬೆ. ಸೂರ್ಯಾಸ್ತ – 6:38 ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವೈಶಾಖ ಮಾಸ, ವಸಂತ ಋತು, ತಿಥಿ – ಪಂಚಮಿ ನಕ್ಷತ್ರ – ಉತ್ತರಾಷಾಢ ಯೋಗ – ಶುಭ ಕರಣ – ತೈತಲ ಮಳೆ ನಕ್ಷತ್ರ : ಕೃತಿಕಾ ರಾಹು ಕಾಲ -04:30 ದಿಂದ 06:00 ವರೆಗೆ ಯಮಗಂಡ – 12:00 ದಿಂದ 01:30 ವರೆಗೆ ಗುಳಿಕ ಕಾಲ -03:00 ದಿಂದ 04:30 ವರೆಗೆ ಬ್ರಹ್ಮ ಮುಹೂರ್ತ – 4:11 ಬೆ. ದಿಂದ 4:59 ಬೆ. ವರೆಗೆ ಅಮೃತ ಕಾಲ – 12:09 ಮ. ದಿಂದ 1:49 ಮ. ವರೆಗೆ ಅಭಿಜಿತ್ ಮುಹುರ್ತ – 11:46 ಬೆ. ದಿಂದ 12:38 ಮ.ವರೆಗೆ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ…

Read More

ಬೆಂಗಳೂರು:- ಐಪಿಎಲ್ 2025ರ 58 ನೇ ಪಂದ್ಯ ಇಂದು ಅಂದರೆ ಮೇ 17 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಪಂದ್ಯ ಇದುವರೆಗೂ ಆರಂಭವಾಗಿಲ್ಲ. ಟಾಸ್ ಕೂಡ ನಡೆದಿಲ್ಲ. ಹೀಗಾಗಿ ಈ ಪಂದ್ಯ ನಡೆಯುವುದು ಕಷ್ಟಸಾಧ್ಯವಾಗಿದೆ. https://ainkannada.com/abd-says-he-will-come-to-india-rcb-fans-are-happy/ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಮಳೆ ಆರ್ಭಟ ಜೋರಾಗಿದ್ದು, ಫುಲ್ ಟ್ರಾಫಿಕ್ ಜಾಮ್ ಆಗಿದೆ. ನಗರದ ಶಾಂತಿನಗರ, ರಿಚ್ಮಂಡ್​ ಸರ್ಕಲ್​, ಕಾರ್ಪೊರೇಷನ್, ಕಬ್ಬನ್​ಪಾರ್ಕ್, ಚಿನ್ನಸ್ವಾಮಿ ಮೈದಾನ, ವಿಧಾನಸೌಧ, ಕೆ.ಆರ್​.ಮಾರ್ಕೆಟ್, ಮೆಜೆಸ್ಟಿಕ್​, ರಾಜಾಜಿನಗರ, ಲಾಲ್​ಬಾಗ್​, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಭಾರಿ ಮಳೆಯಾಗುತ್ತಿರುವುದರಿಂದ ನಗರದ ಹಲವು ರಸ್ತೆಗಳ ಮೇಲೆ ನೀರು ನಿಂತಿದೆ. ಹೆಬ್ಬಾಳದಲ್ಲಿ ಮಳೆ ಬರುತ್ತಿರುವುದರಿಂದ ವೀರಣ್ಣಪಾಳ್ಯ ಕಡೆಯಿಂದ ಹೆಬ್ಬಾಳ ಕಡೆ ಹೋಗುವ ರಸ್ತೆಯಲ್ಲಿ ತೀವ್ರ ಸಂಚಾರದಟ್ಟಣೆ ಉಂಟಾಗಿದೆ. ಹಾಗೆ, ವರ್ತೂರು ಕಡೆಯಿಂದ, ವೈಟಫಿಲ್ಡ್ ಕಡೆಗೆ ಹೋಗುವ ಮಾರ್ಗದಲ್ಲಿ, ಕಸ್ತೂರಿನಗರ ಕಡೆಯಿಂದ ಹೆಬ್ಬಾಳ ಮುಖ್ಯ ರಸ್ತೆಯ ಕಡೆಗೆ ಹೋಗುವ ಮಾರ್ಗದಲ್ಲಿ,…

Read More

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಅವರು ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. https://ainkannada.com/ipl-2025-rcb-kkr-match-is-limited-to-just-5-over/ ಮೊದಲ ಬಾರಿಗೆ ಐಪಿಎಲ್ ಪ್ರಶಸ್ತಿ ಗೆಲ್ಲುವ ಇರಾದೆಯಲ್ಲಿರುವ ಆರ್​ಸಿಬಿಗೆ ಎಬಿ ಡಿವಿಲಿಯರ್ಸ್ ಮತ್ತೊಂದು ಸಂತಸದ ಸುದ್ದಿ ನೀಡಿದ್ದಾರೆ. ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಆರ್‌ಸಿಬಿಯ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್, ‘ಆರ್​ಸಿಬಿ ಫೈನಲ್‌ಗೆ ತಲುಪುವಲ್ಲಿ ಯಶಸ್ವಿಯಾದರೆ, ನಾನು ಫೈನಲ್ ಪಂದ್ಯವನ್ನು ನೋಡಲು ಖಂಡಿತವಾಗಿಯೂ ಭಾರತಕ್ಕೆ ಬರುವುದಾಗಿ ತಿಳಿಸಿದ್ದಾರೆ. ಹಾಗೆಯೇ ವಿರಾಟ್ ಕೊಹ್ಲಿ ಜೊತೆ ಟ್ರೋಫಿ ಎತ್ತುವ ಆಸೆ ಇದೆ ಅಂತಲೂ ಡಿವಿಲಿ ಹೇಳಿಕೊಂಡಿದ್ದಾರೆ ನನ್ನ ಮಾತುಗಳನ್ನು ನೆನಪಿಟ್ಟುಕೊಳ್ಳಿ, ಆರ್‌ಸಿಬಿ ಫೈನಲ್ ತಲುಪಿದರೆ, ನಾನು ತಂಡದೊಂದಿಗೆ ಕ್ರೀಡಾಂಗಣದಲ್ಲಿ ಇರುತ್ತೇನೆ. ವಿರಾಟ್ ಕೊಹ್ಲಿ ಜೊತೆ ಟ್ರೋಫಿ ಎತ್ತಿ ಹಿಡಿಯುವುದಕ್ಕಿಂತ ಹೆಚ್ಚಿನ ಸಂತೋಷ ನನಗೆ ಬೇರೊಂದಿಲ್ಲ. ನಾನು ಹಲವು ವರ್ಷಗಳಿಂದ ಇದನ್ನು ಮಾಡಲು ಪ್ರಯತ್ನಿಸುತ್ತಿದ್ದೇನೆ ಎಂದು ಡಿವಿಲಿಯರ್ಸ್​ ಹೇಳಿಕೊಂಡಿದ್ದಾರೆ.

Read More

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನಡುವಿನ IPL ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಹೀಗಾಗಿ ಉಭಯ ತಂಡಗಳ ನಡುವಿನ ಪಂದ್ಯ ಪಂದ್ಯ 5 ಓವರ್‌ಗಳ ಆಟಕ್ಕೆ ಸೀಮಿತವಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. https://ainkannada.com/hubli-outbreak-leopard-direct-locals-are-worried/ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು ಪಂದ್ಯ ಇನ್ನೂ ಆರಂಭವಾಗಿಲ್ಲ. ಒಂದು ವೇಳೆ ಮಳೆ ಮುಂದುವರಿದರೆ ಓವರ್‌ ಕಡಿತವಾಗುತ್ತದೆ. ರಾತ್ರಿ 8:45ಕ್ಕೆ ಪಂದ್ಯ ಆರಂಭವಾದರೆ ಓವರ್‌ನಲ್ಲಿ ಕಡಿತವಾಗುವುದಿಲ್ಲ. ನಂತರ ಪಂದ್ಯ ನಡೆದರೆ ಓವರ್‌ ಕಡಿತವಾಗುತ್ತದೆ. ರಾತ್ರಿ 10:56ರ ವರೆಗೆ ಪಂದ್ಯ ನಡೆಸಲು ಅವಕಾಶವಿದ್ದು ಕನಿಷ್ಠ 5 ಓವರ್‌ ಆದರೂ ಆಡಿಸಬಹುದು. ರಾತ್ರಿ 10:50 ರ ನಂತರವೂ ಮಳೆ ಸುರಿದರೆ ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ. ಪಂದ್ಯ ರದ್ದುಗೊಂಡರೆ ಎರಡು ತಂಡಗಳಿಗೂ ಸಮಾನವಾಗಿ ಒಂದೊಂದು ಅಂಕ ನೀಡಲಾಗುತ್ತದೆ. ಹೀಗಾಗಿ ಆರ್‌ಸಿಬಿ 12 ಪಂದ್ಯಗಳಿಂದ 17 ಅಂಕ ಪಡೆದರೆ ಕೆಕೆಆರ್‌ 13 ಪಂದ್ಯವಾಡಿ 12 ಅಂಕ ಪಡೆಯುತ್ತದೆ. ಈ ಮೂಲಕ ಕೆಕೆಆರ್‌ ಟೂರ್ನಿಯಿಂದ ನಿರ್ಗಮಿಸುತ್ತದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಷ್ಟೇ…

Read More

ಹುಬ್ಬಳ್ಳಿ:- ಏಕಾಏಕಿ ಪ್ರತ್ಯಕ್ಷವಾದ ಚಿರತೆ ಕಂಡು ಸ್ಥಳೀಯರು ಗಾಬರಿಗೊಂಡ ಘಟನೆ ನಗರದ ಗೋಕುಲ ರಸ್ತೆಯಲ್ಲಿ ಭಾರತಿನಗರದಲ್ಲಿ ಜರುಗಿದೆ. https://ainkannada.com/bad-news-for-r-cb-fans-doubt/ ನಗರದ ಜನಜನಿಬಿಡ ಪ್ರದೇಶದಲ್ಲಿ ತಡರಾತ್ರಿ ಚಿರತೆ ಕಾಣಿಸಿಕೊಂಡಿದೆ. ಚಿರತೆ ಅಡ್ಡಾಡುವ ದೃಶ್ಯ ಸಿಸಿಟಿವಿ ಸೆರೆಯಾಗಿದೆ. ಜಿಮ್ಯಾಟೋ ಡೆಲಿವರಿ ಭಾಯ್ ಕಣ್ಣಿಗೆ ಚಿರತೆ ಬಿದ್ದಿದ್ದು, ನಾಯಿವೊಂದನ್ನ ಎತ್ತಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಘಟನೆಯಿಂದ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

Read More

ಬೆಂಗಳೂರು:- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಪಂದ್ಯ ನಡೆಯಬೇಕಾಗಿತ್ತು. ಆದರೆ ಮಳೆ ಅದಕ್ಕೆ ಅಡ್ಡಿ ಮಾಡಿದೆ. https://ainkannada.com/hubli-abbayya-a-brave-legislator-for-the-deceased-chetan-family/ ಟಾಸ್​ ಪ್ರಕ್ರಿಯೆ ವಿಳಂಬ ಆಗಲಿದೆ. ಮಳೆ ನಿಂತು 45 ನಿಮಿಷ ಕಳೆದ ನಂತರ ಪಂದ್ಯದ ಭವಿಷ್ಯ ನಿರ್ಧಾರ ಆಗಲಿದೆ. ಆದರೆ ಹವಾಮಾನ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಮುಂದಿನ ಮೂರು ಗಂಟೆಗಳ ಕಾಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿ ಹಲವೆಡೆ ಮಳೆಯಾಗಲಿದೆ. ಆರ್​​ಸಿಬಿ ಅಭಿಮಾನಿಗಳು ಕೆಕೆಆರ್​ ವಿರುದ್ಧ ಗೆಲುವು ನಿರೀಕ್ಷೆ ಮಾಡಿದ್ದರು. ಆ ಮೂಲಕ ಆರ್​ಸಿಬಿ ತವರಿನ ಅಂಗಳದಲ್ಲೇ ಪ್ಲೇ-ಆಫ್​​ಗೆ ಅಧಿಕೃತವಾಗಿ ಎಂಟ್ರಿ ನೀಡುವ ಕನಸು ಕಂಡಿದ್ದರು. ಜೊತೆಗೆ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ವಿರಾಟ್ ಕೊಹ್ಲಿಗೆ ಅಭಿನಂದನೆ ಸಲ್ಲಿಸಲು ಸಾವಿರಾರು ಕ್ರಿಕೆಟ್ ಅಭಿಮಾನಿಗಳು ಮೈದಾನಕ್ಕೆ ಬಂದಿದ್ದರು. ಇದೀಗ ಅವರೆಲ್ಲರಿಗೂ ನಿರಾಸೆ ಆಗಿದೆ. ಮುಂದಿನ ಮೂರು ಗಂಟೆಗಳ ಕಾಲ ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್​ ಇರಲಿದೆ ಎಂದು ಹವಾಮಾನ ಇಲಾಖೆ…

Read More

ಹುಬ್ಬಳ್ಳಿ:- ಇತ್ತೀಚೆಗೆ ಕಮರಿಪೇಟೆಯಲ್ಲಿ ನಡೆದ ಘಟನೆಯಲ್ಲಿ ಚಾಕು ಇರಿತದಿಂದ ಸಾವಿಗಿಡಾದ ಗುರುಸಿದ್ದೇಶ್ವರ ನಗರದ ಚೇತನ ಅವರ ಮನೆಗೆ ಪೂರ್ವ ಕ್ಷೇತ್ರದ ಶಾಸಕರು, ಸ್ಲಮ್ ಬೋರ್ಡ್ ಅಧ್ಯಕ್ಷರಾದ ಪ್ರಸಾದ ಅಬ್ಬಯ್ಯ ಅವರು ಭೇಟಿನೀಡಿ ತಂದೆ, ತಾಯಿ ಕುಟುಂಬದವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ವೈಯಕ್ಯಿವಾಗಿ 50ಸಾವಿರ ರೂ. ಆರ್ಥಿಕ ಸಹಾಯ ಮಾಡಿದರು. ಅವರು, ಶನಿವಾರ ಇಲ್ಲಿನ ಮೂರು ಸಾವಿರಮಠದ ಹಿಂಬಾಗದ ಗುರುಸಿದ್ಧೇಶ್ವರ ನಗರದಲ್ಲಿರುವ ಮೃತ ಚೇತನ ರಕ್ಕಸಗಿ ಮನೆಗೆ ಭೇಟಿ ನೀಡಿದ ವೇಳೆ, ಇರುವ ಒಬ್ಬನೇ ಮಗನನ್ನು ಕಳೆದುಕೊಂಡಿದ್ದೇವೆ. ಎರಡನೇ ಮಗಳ ಮದುವೆ ತಯಾರಿಯಲ್ಲಿದ್ದ ನಮಗೆ ಮಗನ ಸಾವು ಬರಸಿಡಿಲು ಬಡದಂತಾಗಿದೆ ಎಂದು ಪೋಷಕರು ದುಃಖ ತೋಡಿಕೊಂಡರು. ಕುಟುಂಬದವರಿಗೆ ಸಂತೈಸಿದ ಶಾಸಕರು, ಮನೆಗೆ ಆಸರೆಯಾಗಿದ್ದ ಮಗನ ಸಾವಾಗಿದ್ದು, ತೀರ ಅನ್ಯಾಯದ ಸಂಗತಿ. ಅದರಲ್ಲು ಕೊಲೆಯಂಥ ದುರ್ಘಟನೆ ಸಹಿಸಲು ಸಾಧ್ಯವೇ ಇಲ್ಲ. ಇನ್ನುಳಿದ ಹೆಣ್ಣುಮಕ್ಕಳ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಧೈರ್ಯ ತಂದುಕೊಳ್ಳಿ. ಸರ್ಕಾರದಿಂದ ಸಹಾಯಸ್ಥ ಕೊಡಿಸಲಾಗುವುದು ಎಂದು ಭರವಸೆ ನೀಡಿದ ಶಾಸಕ…

Read More

ನೆಲಮಂಗಲ:- ತಾಲ್ಲೂಕಿನಲ್ಲಿ ಈಚೆಗೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ರೌಡಿಶೀಟರ್‌ಗಳನ್ನು ಕರೆಸಿ ಪೊಲೀಸರಿಂದ ರೌಡಿ ಪರೇಡ್ ಮಾಡಲಾಯಿತು. ನೆಲಮಂಗಲ ಉಪ ವಿಭಾಗದ ಮಾದನಾಯಕನಹಳ್ಳಿ ಪೊಲೀಸರಿಂದ 60 ಕ್ಕೂ ಹೆಚ್ಚು ರೌಡಿಶೀಟರ್ ಪರೇಡ್ ಮಾಡಲಾಗಿದೆ. https://ainkannada.com/hat-hero-hero-shivannas-one-and-a-half-hour-secret-meeting-who-was-involved/ ಈ ವೇಳೆ ಸಾಕಷ್ಟು ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರಗಳ ಮಾಹಿತಿ ಸಂಗ್ರಹಿಸಲಾಗಿದೆ. ಇನ್ನೂ ನೆಲಮಂಗಲದ ಬೆತ್ತನಗೆರೆ ಶಂಕರ, ಬಂಡೆ ಮಂಜ ಸೇರಿದಂತೆ ಹಲವರು ಗೈರಾಗಿದ್ಜರು. ರೌಡಿಶೀಟರಗಳ ಮಾಹಿತಿ ಜೊತೆಗೆ ಅವರು ಚಲನವಲನಗಳ ಪರಿಶೀಲನೆ ಮಾಡುತ್ತಿದ್ದಾರೆ. ಸನ್ನಡತೆಯ ಆಧಾರದ ಮೇಲೆ ಕೆಲ ರೌಡಿಶೀಟರ್ ಪಟ್ಟಿ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗಿದೆ. ಉನ್ನತ ಅಧಿಕಾರಿಗಳ ಗಮನಕ್ಕೆ ತಂದು ರೌಡಿಶೀಟರಗಳ ಪಟ್ಟಿ ಪರಿಶೀಲನೆ ಮಾಡಲಾಗಿದೆ. 10 ವರ್ಷದಿಂದ ಯಾವುದೇ ಪ್ರಕರಣದಲ್ಲಿ ಭಾಗಿಯಾಗದವರನ್ನ ಕೈಬಿಡುವ ಬಗ್ಗೆ ಪರಿಶೀಲನೆ ಮಾಡಮಾಡಲಾಗಿದೆ. ಭಾಗಿಯಾದವರ ಹಿನ್ನೆಲೆ ಮಾಹಿತಿ ಪಡೆದು ಪೊಲೀಸರು ಕಳುಹಿಸಿದ್ದಾರೆ.

Read More