Author: AIN Author

ಯಾದಗಿರಿ:- ಕಾಲುವೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕುರಿಗಾಹಿಗಳು ನೀರುಪಾಲಾಗಿರುವ ಘಟನೆ ಸುರಪುರ ತಾಲೂಕಿನ ಏವೂರ ಗ್ರಾಮದ ಬಳಿಯ ಬಸವಸಾಗರ ಜಲಾಶಯದ ಜೆಬಿಸಿ ಕಾಲುವೆಯಲ್ಲಿ ಜರುಗಿದೆ. https://ainkannada.com/refresh-modter-as-soon-as-the-lap-top-turns-on-so-you-see-this/ ಜಟ್ಟೆಪ್ಪ (19), ಕರಿಯಪ್ಪ (19) ಮೃತರು. ರವಿವಾರ (ಮೇ.18) ಒಟ್ಟು ಆರು ಮಂದಿ ಕುರಿಗಾಯಿಗಳು ಕುರಿ ಮೇಯಿಸಲು ತೆರಳಿದ್ದರು. ಆರೂ ಮಂದಿ ಕಾಲುವೆಯಲ್ಲಿ ಈಜಲು ತೆರಳಿದ್ದಾರೆ. ಆರು ಮಂದಿ ಕುರಿಗಾಹಿಗಳ ಪೈಕಿ ಇಬ್ಬರು ನೀರುಪಾಲಾಗಿದ್ದು, ನಾಲ್ವರು ಪಾರಾಗಿದ್ದಾರೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಲ್ಯಾಪ್​ಟಾಪ್ ಈಗಿನ ಕಾಲದಲ್ಲಿ ಯಾರಲ್ಲಿ ಇಲ್ಲ ಹೇಳಿ. ಕಂಪನಿ ಕೆಲಸಕ್ಕಾಗಲಿ, ಗೇಮ್​ ಆಡ್ಲಿಕ್ಕಾಗಲಿ ಲ್ಯಾಪ್​ಟಾಪ್​ ಬಳಸುತ್ತಾರೆ. ಆದ್ರೆ ಕೆಲವೊಂದು ಲ್ಯಾಪ್​​ಟಾಪ್​ಗಳು ಖರೀದಿಸಿದ ಸ್ವಲ್ಪ ಸಮಯದಲ್ಲೇ ಏನಾದರೊಂದು ಸಮಸ್ಯೆ ಬರುತ್ತದೆ https://ainkannada.com/greater-bangalore-luter-bangalore-hd-kumaraswamy/ ಹೆಚ್ಚಿನ ಜನರು ಲ್ಯಾಪ್​​ಟಾಪ್​ ಬಳಸುತ್ತಾರೆ. ಆದರೆ ಅದರಲ್ಲಿರುವಂತಹ ಕೆಲವೊಂದು ಕೀಗಳು ಬಗ್ಗೆ, ಟೆಕ್ನಿಕ್​ಗಳ ಬಗ್ಗೆ ಇನ್ನೂ ಹೆಚ್ಚಿನ ಜನರಿಗೆ ತಿಳಿದಿಲ್ಲ. ಹೆಚ್ಚಿನ ಜನರು ಸಾಮಾನ್ಯವಾಗಿ ಲ್ಯಾಪ್​​ಟಾಪ್​ ಅಥವಾ ಕಂಪ್ಯೂಟರ್​ ಅನ್ನುಆನ್​ ಮಾಡಿದಾಗ ತಕ್ಷಣ ಹೋಮ್​ಸ್ಕ್ರೀನ್​ನಲ್ಲಿ ರಿಫ್ರೆಶ್​ ಮಾಡುತ್ತಾರೆ. ಜೊತೆಗೆ ಎಫ್​​​5 ಅನ್ನು ಕ್ಲಿಕ್ ಮಾಡುವ ಮೂಲಕ ರ್‍ಯಾಮ್ ಕ್ಲಿಯರ್ ಆಗುತ್ತದೆ ಎಂದು ಭಾವಿಸುತ್ತಾರೆ. ಆದ್ರೆ ಇದರಿಂದ ಏನು ಬದಲಾವಣೆಯಾಗುತ್ತದೆ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಆದರೆ, ಹೋಮ್ ಸ್ಕ್ರೀನ್‌ನಲ್ಲಿರುವ ರಿಫ್ರೆಶ್ ಆಯ್ಕೆಯನ್ನು ಕ್ಲಿಕ್ ಮಾಡುವುದರ ಮೂಲಕ ಈ ರೀತಿ ಏನೂ ಬದಲಾವಣೆಗಳು ಆಗುವುದಿಲ್ಲ. ಆದರೆ ಏನಾದರು ಚೇಂಜಸ್ ಆಗುತ್ತೆ ಎಂದು ತಿಳಿದಿದ್ರೆ ಈ ಸ್ಟೋರಿ ಓದಿ. ಕಂಪ್ಯೂಟರ್​ನಲ್ಲಿರುವಂತಹ ಹೋಮ್ ಸ್ಕ್ರೀನ್ ಸ್ವತಃ ಫೋಲ್ಡರ್ ಅನ್ನು ಕ್ರಿಯೇಟ್​ ಮಾಡುತ್ತದೆ. ಈ ಸಂದರ್ಭದಲ್ಲಿ, ನೀವು…

Read More

ನವದೆಹಲಿ: ಕರ್ನಾಟಕದ ರಾಜಧಾನಿ ಬೆಂಗಳೂರು ನಗರ ಮಳೆ ಅನಾಹುತಕ್ಕೆ ಸಿಕ್ಕಿ ನಲುಗುತ್ತಿರುವ ಬಗ್ಗೆ ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಸಂಗ್ರಹ ಆಗುತ್ತಿರುವ ಆದಾಯ, ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ್ದಾರೆ. https://ainkannada.com/action-for-permanent-solution-to-sai-layout-maheshwar-rao/ ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಗ್ರೇಟರ್ ಬೆಂಗಳೂರು ಹೆಚ್ಚು ಮಳೆಯಾದರೆ ಮುಳುಗುತ್ತದೆ! ಕಡಿಮೆ ಸುರಿದರೆ ತೇಲುತ್ತದೆ! ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ರಸ್ತೆಗಳಲ್ಲಿಯೇ ಕೆರೆ, ಚರಂಡಿ! ಗುಂಡಿಗೆ ಹಿಡಿ ಮಣ್ಣಾಕುವುದಕ್ಕೂ ಬಿಡಿಗಾಸಿಲ್ಲ. ಸುರಂಗಕ್ಕೆ ಮಾತ್ರ ಸಾವಿರಾರು ಕೋಟಿ ಟೆಂಡರು! ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು! ವಾರಕ್ಕೊಮ್ಮೆ ತೆರಿಗೆ ಬರೆ, ದರ ಏರಿಕೆ! ಜನರೆಂದರೆ ಜೀವರಹಿತ ಕಲ್ಲುಬಂಡೆಗಳೇ? ಮನಸೋಇಚ್ಛೆ ಒಡೆದು ಬಡಿದು ನುಂಗಲು!? ನಾಡು ಎಂದರೆ ಕಲ್ಲು ಬಂಡೆಗಳಲ್ಲ, ನಾಡು ಎಂದರೆ ಮನುಷ್ಯರು ಎಂದು ನಗರದ ಉಸ್ತುವಾರಿ ಹೊಂದಿರುವವರ ವಿರುದ್ಧ ಕೇಂದ್ರ ಸಚಿವರು ಹರಿಹಾಯ್ದಿದ್ದಾರೆ. ಕೆರೆಯ ನೀರನು ಕೆರೆಗೆ ಚೆಲ್ಲುತ್ತಿಲ್ಲವೇಕೆ? ಕೆರೆ ನೀರಿಗೆ…

Read More

ಬೆಂಗಳೂರು: ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಸಾಯಿ ಲೇಔಟ್  ಜಲಾವೃತವಾಗುವುದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುವುದೆಂದು *ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್* ರವರು ತಿಳಿಸಿದರು. https://ainkannada.com/there-is-no-response-to-the-letter-the-outrage-of-the-mla-for-the-police-commissioners-move/ ನಗರದಲ್ಲಿ ನಿನ್ನೆ ಸುರಿದ ಮಳೆಯಿಂದಾಗಿ ಸಮಸ್ಯೆಯಾಗಿರುವ ಪ್ರದೇಶಗಳಿಗೆ ಭೇಟಿ ನಿಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಗರದಲ್ಲಿ ಜೋರು ಮಳೆಯಾಗಿದ್ದು, ಅಧಿಕಾರಿಗಳೆಲ್ಲಾ ರಾತ್ರಿ 1 ಗಂಟೆಯವರೆಗೆ ಫೀಲ್ಡ್ ನಲ್ಲೇ ಇದ್ದು, ಮೇಲ್ವಿಚಾರಣೆ ಮಾಡಿ ಇರುವ ಸಮಸ್ಯೆಯನ್ನು ಬಗೆಹರಿಸಿದ್ದಾರೆ ಎಂದು ತಿಳಿಸಿದರು. ಸಾಯಿ ಲೇಔಟ್ ಪ್ರದೇಶವನ್ನು ಬಿ.ಡಿ.ಎ. ಅಭಿವೃದ್ಧಿಪಡಿಸಿದ್ದು, ಬಿ.ಡಿ.ಎ ಅಧಿಕಾರಿಗಳ ಜೊತೆ ಸಭೆ ನಡೆಸಿ ಇರುವ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಬಿ.ಡಿ.ಎ ವತಿಯಿಂದ ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ಜಾಕ್ ವೆಲ್ ವ್ಯವಸ್ಥೆ ಮಾಡಿ ಪಂಪ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು. ಸಾಯಿ ಲೇಔಟ್ ಪ್ರದೇಶವು ರಾಜಕಾಲುವೆಗಿಂದ ತುಂಬಾ ಕೆಳ ಮಟ್ಟದಲ್ಲಿರುವ ಕಾರಣ ಜಲಾವೃತವಾಗುತ್ತಿದೆ. ಜೊತೆಗೆ ರಾಜಕಾಲುವೆ ಹಾದುಹೋಗುವ ಜಾಗದಲ್ಲಿ ರೈಲ್ವೆ ವೆಂಟ್ ಸಣ್ಣದಾಗಿರುವ ಪರಿಣಾಮ ನೀರು…

Read More

ಧಾರವಾಡ: ಹುಬ್ಬಳ್ಳಿ – ಧಾರವಾಡ ಅವಳಿನಗರಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ನಡೆಯುತ್ತಿದೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಹಾಗೂ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ವಿಚಾರವಾಗಿ ಧಾರವಾಡದಲ್ಲಿ ಶಾಸಕ ಅರವಿಂದ ಬೆಲ್ಲದ ಮಾತನಾಡಿದ್ದಾರೆ. https://ainkannada.com/mission-impossible-at-the-box-office-of-india-hollywood-cinema/ ಅಪರಿಚಿತ ವ್ಯಕ್ತಿಗಳ ಬಗ್ಗೆ ಪರಿಶೀಲಿಸುವಂತೆ ನಾನು ಪತ್ರ ಬರೆದಿದ್ದೇನೆ. ಕೆಲವು ಜಾಗೃತ ನಾಗರಿಕರು ನನಗೆ ಕರೆ ಮಾಡಿದ್ದಾರೆ. ಹೊರಗಿನ ಜನ ಅವಳಿನಗರಗಳಲ್ಲಿ ಓಡಾಡುತ್ತಿದಾರೆ ಎಂದು ಹೇಳಿದ್ದಾರೆ. ಯಾವ ರೀತಿ ಇದ್ದಾರೆ ಎಂದು ಕೇಳಿದಾಗ ಅವರು ಬೇರೆ ರೀತಿಯ ಜನ ಇದ್ದಾರೆ ಎಂದು ಹೇಳಿದ್ದಾರೆ. ಬಾಂಗ್ಲಾದೇಶದ ಜನರ ರೀತಿ ಇದ್ದಾರಾ ಎಂದು ಪ್ರಶ್ನಿಸಿದರೆ, ಅವರು, ಪಾಕಿಸ್ತಾನ ಜನರ ರೀತಿ ಇದ್ದಾರೆ ಎಂದು ಹೇಳಿದ್ದಾರೆ ಎಂದರು. ಹೀಗಾಗಿ ನಾನು ಆಯುಕ್ತರಿಗೆ ಕರೆ ಮಾಡಿ ಹೇಳಿದ್ದೇನೆ. ಅಷ್ಟೇ ಅಲ್ಲದೆ ಆಯಕ್ತರಿಗೆ ಹಾಗೂ ಗೃಹ ಮಂತ್ರಿಗೆ ಪತ್ರ ಬರೆದಿದ್ದೇನೆ. ಇದು ಸೂಕ್ಷ್ಮ ವಿಚಾರವಾಗಿದ್ದಕ್ಕೆ ಯಾವ ಪತ್ರಿಕೆಗೆ ಹಾಗೂ ಮೀಡಿಯಾಗೆ ಹೇಳಿಕೆ ನೀಡಿರಲಿಲ್ಲ. ಅವರತನಿಖೆಗೆ ಅನೂಕೂಲವಾಗಲೆಂದು ನಾನು ಹೇಳಿಲ್ಲ. ಆದರೆ…

Read More

ಹಾಲಿವುಡ್‌ನ ಸ್ಪೈ, ಆಕ್ಷನ್ ಥ್ರಿಲ್ಲರ್‌ಗಳು ಭಾರತದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ ಉದಾಹರಣೆಗಳು ಸಾಕಷ್ಟಿವೆ. ಅದರಲ್ಲೂ ಹಾಲಿವುಡ್ ಸೂಪರ್‌ಸ್ಟಾರ್ ಟಾಮ್ ಕ್ರೂಸ್ ನಟನೆಯ ‘ಮಿಷನ್ ಇಂಪಾಸಿಬಲ್’ ಸೀರಿಸ್‌ಗಳೇ ಸಾಕ್ಷಿ. ಮೇ 17 ಹಾಲಿವುಡ್ ಸಿನಿಮಾ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಮಿಷನ್ ಇಂಪಾಸಿಬಲ್ ಕೊನೆಯ ಸರಣಿ ಕೊನೆಗೂ ರಿಲೀಸ್ ಆಗಿದೆ. ಟ್ರೇಡ್ ಎಕ್ಸ್‌ಪರ್ಟ್‌ಗಳ ಪ್ರಕಾರ ಈ ಸಿನಿಮಾ ಭಾರತದಲ್ಲಿ ಸಿಕ್ಕಾಪಟ್ಟೆ ಒಳ್ಳೆಯ ಓಪನಿಂಗ್ ಪಡೆದುಕೊಂಡಿದೆ. https://ainkannada.com/around-25-people-killed-in-america/ ಇನ್ನೂ ಭಾರತದ ಬಾಕ್ಸ್ ಆಫೀಸ್​ನಲ್ಲಿ ಹಾಲಿವುಡ್ ಸಿನಿಮಾ ಮಿಷನ್ ಇಂಪಾಸಿಬಲ್ ದಾಖಲೆ ಬರೆದಿದೆ. ವಿಶ್ವದ ನಂಬರ್ 1 ಜನಪ್ರಿಯ ನಟ ಟಾಮ್ ಕ್ರೂಸ್ ನಟನೆಯ ‘ಮಿಷನ್ ಇಂಪಾಸಿಬಲ್: ಫೈನಲ್ ರೆಕನಿಂಗ್’ ಸಿನಿಮಾ ನಿನ್ನೆ ಭಾರತದಲ್ಲಿ ಬಿಡುಗಡೆ ಆಗಿತ್ತು. ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆಗಳಿದ್ದವು. ಅದಕ್ಕೆ ತಕ್ಕಂತೆ ‘ಮಿಷನ್ ಇಂಪಾಸಿಬಲ್’ ಸಿನಿಮಾ ಮೊದಲ ದಿನ ಭರ್ಜರಿ ಗಳಿಕೆ ಮಾಡಿದೆ. ಮಾತ್ರವಲ್ಲದೆ, ಭಾರತದಲ್ಲಿ ಮೊದಲ ದಿನ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಹಾಲಿವುಡ್ ಸಿನಿಮಾ ಎಂಬ ಹೆಗ್ಗಳಿಕೆಗೆ ಮಾತ್ರವಾಗಿದೆ. ಮಿಷನ್…

Read More

ವಾಷಿಂಗ್ಟನ್:- ಬಿರುಗಾಳಿ ಅಬ್ಬರಕ್ಕೆ ಕನಿಷ್ಠ 35 ಮಂದಿ ಬಲಿಯಾಗಿದ್ದು, ಹಲವರು ಗಾಯಗೊಂಡ ಘಟನೆ ಅಮೆರಿಕದಲ್ಲಿ ಜರುಗಿದೆ. https://ainkannada.com/onion-brings-tears-to-farmers-eyes-price-drops-sharply/ ಶುಕ್ರವಾರ ತಡರಾತ್ರಿಯಿಂದ ಈ ಪ್ರದೇಶಗಳಲ್ಲಿ ಬಿರುಗಾಳಿ ಬೀಸುತ್ತಿದ್ದು, ಸುಮಾರು 5,000ಕ್ಕೂ ಹೆಚ್ಚು ಕಟ್ಟಡಗಳು ನೆಲಸಮವಾಗಿದೆ. ಇಲ್ಲಿಯವರೆಗೆ 25 ಮಂದಿ ಸಾವನ್ನಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಯುತ್ತಿದೆ. ಸೇಂಟ್ ಲೂಯಿಸ್‌ನ ಮೃಗಾಲಯ ಮತ್ತು ಐತಿಹಾಸಿಕ ಸ್ಮಾರಕಗಳು ಇರುವ ಫಾರೆಸ್ಟ್ ಪಾರ್ಕ್‌ನಲ್ಲಿ ಬಿರುಗಾಳಿ ಬೀಸಿದ ಪರಿಣಾಮ ಕಟ್ಟಡಗಳು ಹಾನಿಯಾಗಿವೆ. ಬಿರುಗಾಳಿ ಅಬ್ಬರಕ್ಕೆ ಗ್ರೇಟ್ ಲೇಕ್ಸ್‌ನ ಲಕ್ಷಾಂತರ ಮನೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಬಿರುಗಾಳಿಯಿಂದಾಗಿ ಸೆಂಟಿನಿಯಲ್ ಕ್ರಿಶ್ಚಿಯನ್ ಚರ್ಚ್‌ನ ಒಂದು ಭಾಗ ಕುಸಿದು ಬಿದ್ದಿದೆ. ಮಿಡ್‌ವೆಸ್ಟ್ ಹಾಗೂ ಮಧ್ಯ ಅಟ್ಲಾಂಟಿಕ್‌ನಲ್ಲಿ ಸಂಭವಿಸಿದ ಚಂಡಮಾರುತ ಪರಿಣಾಮ ಬಿರುಗಾಳಿ ಬೀಸುತ್ತಿದೆ ಎನ್ನಲಾಗಿದೆ.

Read More

ವಿಜಯಪುರ:- ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಇಳಿಕೆಯಾಗಿದ್ದು, ಬೆಳೆಗಾರರನ್ನು ಕಂಗಾಲು ಮಾಡಿದೆ. ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ಈರುಳ್ಳಿ ಬೆಳೆದ ರೈತರ ಗೋಳು ಕೋಳೋರು ಯಾರು ಎಂಬಂತಾಗಿದೆ. https://ainkannada.com/sp-prithvik-shankar-gets-dgigp-disc-award/ ಪ್ರತಿ ಈರುಳ್ಳಿ ಕ್ವಿಂಟಾಲ್ ರೂಪಾಯಿ ನಾಲ್ಕು ನೂರು ಇದೆ. ಬಿತ್ತನೆ ಬೀಜ, ಗೊಬ್ಬರ,ಕೂಲಿ ಆಳಿನ ಸಂಬಳ ಹೆಚ್ಚಾಗಿದೆ. ಈರುಳ್ಳಿ ಬೆಲೆ ಕುಸಿತ ಆಗಿರೋದ್ರಿಂದ ಸಾಲದ ಹೊರೆ ಹೆಚ್ಚಾಗಿದೆ ಎಂದು ರೈತ ನವಾಬ್ ಬಳಗಾನೂರ ಅಳಲು ತೋಡಿಕೊಂಡಿದ್ದಾರೆ. ಹೀಗಾಗಿ ಕೇಂದ್ರ ರಾಜ್ಯ ಸರ್ಕಾರ ಈರುಳ್ಳಿಗೆ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

Read More

ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆಗೈದ ಅಧಿಕಾರಿಗಳಿಗೆ ಕೊಡಮಾಡುವ ಅತ್ಯುನ್ನತ ಡಿಜಿ &ಐಜಿಪಿ ಪ್ರಶಸ್ತಿಗೆ ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಭಾಜನಾರಾಗಿದ್ದಾರೆ. https://ainkannada.com/that-pakistan-munde-can-be-squeezed-like-a-lemon-but-cm-ibrahim/ 2024- 25ನೇ ಸಾಲಿನ ಡಿಜಿ& ಐಜಿಪಿ ಕಮನ್ಡೇಶನ್ ಡಿಸ್ಕ್ ಪ್ರಶಸ್ತಿಗೆ ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಭಾಜನರಾಗಿದ್ದು, ಪೊಲೀಸ್ ಅಧಿಕಾರಿಯ ಅತ್ಯುತ್ತಮ ಕಾರ್ಯಕ್ಷಮತೆ, ಸಮರ್ಪಣೆ ಹಾಗೂ ಶೌರ್ಯ ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ಈ ಹಿಂದೆ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ದಂಧೆಗೆ ಅಧಿಕಾರ ವಹಿಸಿಕೊಂಡ ಕೆಲವೇ ತಿಂಗಳಲ್ಲಿ ಕಡಿವಾಣ ಹಾಕಿ ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಎಸ್ಪಿ ಪೃಥ್ವಿಕ್ ಶಂಕರ್ ಜಿಲ್ಲೆಗೂ ಬರುವ ಮೊದಲು ಜಿಲ್ಲೆಯಾಧ್ಯಂತ ಅಕ್ರಮ ಚಟುವಟಿಕೆಗಳು ಅವ್ಯಾಹತವಾಗಿ ‌ನಡೆಯುತ್ತಿದ್ದವು. ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಇಸ್ಪೀಟು, ಮಟಕಾ, ಮರಳು ದಂಧೆ ಸೇರಿ ಅಕ್ರಮ ದಂಧೆಗೆ ಸಂಪೂರ್ಣ ಕಡಿವಾಣ ಹಾಕುವ‌ ಮೂಲಕ ಜನಮಣನೆ ಗಳಿಸಿದ್ದಾರೆ. ಇದೆಲ್ಲವನ್ನೂ ಗುರುತಿಸಿ ಪೊಲೀಸ್ ಇಲಾಖೆ ಅತ್ಯುನ್ನತ ಪ್ರಶಸ್ತಿ ನೀಡಿರುವುದು ಎಸ್ಪಿ ಪೃಥ್ವಿಕ್ ಶಂಕರ್ ಅವರ ಶ್ರಮಕ್ಕೆ ಸಿಕ್ಕ ಗೌರವವಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ…

Read More

ರಾಮನಗರ:- ಆ ಪಾಕಿಸ್ತಾನ ಮುಂಡೇವನ್ನು ನಿಂಬೆಹಣ್ಣು ಹಿಂಡಿದ ಹಾಗೆ ಹಿಂಡಬಹುದು ಎಂದು ಈಗ ಒಬ್ಬ ನರಪಿಳ್ಳೆಯನ್ನೂ ಹಿಡಿದಿಲ್ಲ ಎಂದು ಕೇಂದ್ರದ ವಿರುದ್ಧ ಮಾಜಿ ಸಚಿವ ಸಿಎಂ ಇಬ್ರಾಹಿಂ ಕಿಡಿಕಾರಿದ್ದಾರೆ. https://ainkannada.com/wearing-a-copper-ring-will-change-the-luck-of-these-3-zodiac-signs-money-will-flow-in/ ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಕಾಂಗ್ರೆಸ್ಸಿಗರಿಗೆ ಮಾತ್ರ ಅಲ್ಲ, ದೇಶಕ್ಕೆ ಅನುಮಾನ ಇದೆ. ಪಹಲ್ಗಾಮ್‌ಗೆ ಉಗ್ರರು ಬಂದು ಅವರ ಕೆಲಸ ಮುಗಿಸಿ ಸುಸೂತ್ರವಾಗಿ ವಾಪಸ್ ಹೋಗಿದ್ದಾರೆ. ದೇಶದ ಭದ್ರತಾ ವ್ಯವಸ್ಥೆ ಏನು ಮಾಡುತ್ತಿತ್ತು? ಪುಲ್ವಾಮ ದಾಳಿ ಸೇರಿ ಸಾಕಷ್ಟು ದಾಳಿ ಆಗಿದೆ. ಅದನ್ನು ಮಾಡಿದ್ಯಾರು, ಅವರು ದೇಶದ ಒಳಗೆ ಹೇಗೆ ಬಂದರು? ಕಾಶ್ಮೀರದ ಭದ್ರತಾ ವ್ಯವಸ್ಥೆ ಕಾಶ್ಮೀರಿ ಪೊಲೀಸರ ಕೈಯಲಿಲ್ಲ, ಲೆಫ್ಟಿನೆಂಟ್ ಗವರ್ನರ್ ಕೈಯಲ್ಲಿದೆ. ಇದಕ್ಕೆ ಲೆಫ್ಟಿನೆಂಟ್ ಗವರ್ನರ್ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು. ದೇಶದ ಸೈನಿಕರಿಂದಲೇ ಈ ದೇಶ ಉಳಿದಿದೆ. ಇದರಲ್ಲಿ ಕೇಂದ್ರ ಸರ್ಕಾರದ ವೈಫಲ್ಯತೆ ಎದ್ದು ಕಾಣಿಸುತ್ತಿದೆ. ಯುದ್ಧ ಆರಂಭವಾದಾಗ ಇಡೀ ದೇಶದ ಜನ ಮೋದಿಗೆ ಸಂಪೂರ್ಣ ಬೆಂಬಲ ಕೊಟ್ಟರು. ಆದರೆ ಇದ್ದಕ್ಕಿದ್ದಂತೆ ಟ್ರಂಪ್ ಹೇಳಿದ…

Read More