Author: AIN Author

ಚಿತ್ತಾಪುರ:- ವಿಷ ಸೇವಿಸಿ ಅಪ್ರಾಪ್ತ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ತಾಪುರ ತಾಲೂಕಿನ ಕೊಲ್ಲೂರ ಗ್ರಾಪಂ ವ್ಯಾಪ್ತಿಯಲ್ಲಿ ಜರುಗಿದೆ. ರಾಂಪುರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ತರಕಸ್‌ಪೇಠ ಗ್ರಾಮದ ರಾಧಿಕಾ ಮೆತ್ತನ್(೧೪) ಹಾಗೂ ಯಾದಗಿರಿಯಲ್ಲಿ ಐಟಿಐ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೊಲ್ಲೂರ ಗ್ರಾಮದ ನಿವಾಸಿ ಆಕಾಶ ಬೋವಿ(೧೯) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂದ್ದಾರೆ. ತರಕಸಪೇಠ್ ಸಮೀಪದ ಚೌಕಂಡಿ ತಾಂಡಾ ಪರಿಸರದ ನಿರ್ಜನ ಪ್ರದೇಶದಲ್ಲಿ ಸೇರಿದ್ದ ಈ ಪ್ರೇಮಿಗಳು ಏಕಕಾಲಕ್ಕೆ ಕೀಟನಾಶಕ ಸೇವಿಸಿದ್ದಾರೆ ಎನ್ನಲಾಗಿದ್ದು, ಸಾವು ಬದುಕಿನ ಮಧ್ಯೆ ಹೊರಾಡುತ್ತಿದ್ದ ಪ್ರೇಮಿಗಳನ್ನು ಗಮನಿಸಿದ ಸ್ಥಳೀಯರು ಖಾಸಗಿ ವಾಹನದಲ್ಲಿ ಕೊಲ್ಲೂರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಇಬ್ಬರು ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.

Read More

ಐಸಿಸಿ ವಿಶ್ವಕಪ್ ವಿಜೇತ ಭಾರತ ಕ್ರಿಕೆಟ್ ತಂಡದ ನಾಯಕ ಮತ್ತು ಭಾರತೀಯ ಕ್ರಿಕೆಟ್ ಸೂಪರ್ಸ್ಟಾರ್ ಮಹೇಂದ್ರ ಸಿಂಗ್ ಧೋನಿ ಬೆಂಗಳೂರು ಮೂಲದ ಸ್ಟಾರ್ಟಪ್ ಒಂದರಲ್ಲಿ ಹಣ ಹೂಡಿಕೆ ಮಾಡಿದ್ದಾರೆ. ಬೆಂಗಳೂರಿನ ‘ತಗ್ಡಾ ರಹೋ’ ಹೆಸರಿನ ಫಿಟ್ನೆಸ್ ಸ್ಟಾರ್ಟ್ಅಪ್ನಲ್ಲಿ ಧೋನಿ ಹಣ ಹೂಡಿದ್ದಾರೆ. ಆದರೆ, ಸ್ಟಾರ್ಟಪ್ ಮಾಲೀಕರು ಧೋನಿ ಎಷ್ಟು ಪ್ರಮಾಣದ ಹೂಡಿಕೆ ಮಾಡಿದ್ದಾರೆ ಅಥವಾ ಎಷ್ಟು ಷೇರುಗಳನ್ನು ಖರೀದಿಸಿದ್ದಾರೆ ಎಂಬುದನ್ನು ಮಾತ್ರ ಬಹಿರಂಗಪಡಿಸಿಲ್ಲ. ಕ್ರಿಕೆಟಿಗರ ಫಿಟ್ನೆಸ್ಗೆ ಬೇಕಾಗುವ ಭಾರತೀಯ ಭೌತಿಕ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ತಗ್ಡಾ ರಹೋ ಸಂಸ್ಥಾಪಕ ರಿಷಬ್ ಮಲ್ಹೋತ್ರಾ ಹೇಳಿದ್ದಾರೆ. ಇದಕ್ಕೂ ಮುನ್ನ ಮಹೇಂದ್ರ ಸಿಂಗ್ ಧೋನಿ ಗರುಡ ಏರೋಸ್ಪೇಸ್, ಹೋಮ್ಲೇನ್, ರಿಗಿ ಸೇರಿದಂತೆ ಹಲವು ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದರು. ಇದೀಗ ಅವರು ಆಧುನಿಕ ತರಬೇತಿಗೆ ಬೇಕಾದ ಸಾಂಪ್ರದಾಯಿಕ ಭಾರತೀಯ ವ್ಯಾಯಾಮ ಸಾಧನಗಳನ್ನು ಒದಗಿಸುವ ಈ ಫಿಟ್ನೆಸ್ ಸ್ಟಾರ್ಟ್ಅಪ್ನಲ್ಲಿ ಹೂಡಿಕೆ ಮಾಡಿದ್ದಾರೆ. ಈ ಸ್ಟಾರ್ಟ್ಅಪ್ ತನ್ನ ವೆಬ್ಸೈಟ್ ಮೂಲಕವೂ ಫಿಟ್ನೆಸ್ಗೆ ಬೇಕಾದ ತರಬೇತಿ ಸಾಧನಗಳನ್ನು…

Read More

ಬೆಳಗಾವಿ:-ರಾಜ್ಯ ಸರ್ಕಾರ ಬದುಕಿದೆಯೋ? ಸತ್ತಿದೆಯೋ? ಎಂದು ಹೇಳುವ ಮೂಲಕ ಆರ್ ಅಶೋಕ್ ಗುಡುಗಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು, ಸರ್ಕಾರ ಬದುಕಿದೆಯೋ ಸತ್ತಿದೆಯೋ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರ ವಿರುದ್ಧ ವಾಕ್​ಪ್ರಹಾರ ನಡೆಸಿದರು. ನಿಲುವಳಿ ಸೂಚನೆ ಮಂಡಿಸಿದ ಅವರು, ಸರ್ಕಾರ ಬಂದ ಮೇಲೆ 43 ಸಾವಿರ ಪ್ರಕರಣ ದಾಖಲಾಗಿದೆ. ಡಕಾಯಿತಿ, ದರೋಡೆ, ಕೊಲೆ ಪ್ರಕರಣ ಹೆಚ್ಚಾಗಿವೆ. ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಹಲ್ಲೆಯಾಯಿತು, ಪೊಲೀಸರೇ ಧರಣಿ ನಡೆಸಿದರು. ಭದ್ರಾವತಿ, ಬೆಳಗಾವಿಯಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆಯಾಯಿತು. ಶಿವಮೊಗ್ಗದಲ್ಲಿ ಟಿಪುಪ ಮತ್ತಿತರರ ಕಟೌಟ್​ನಿಂದ ಗಲಾಟೆಯಾಯಿತು ಎಂದರು. ಕಾನೂನು ಸುವ್ಯವಸ್ಥೆ ವಿಷಯ ನಿಲುವಳಿ ಸೂಚನೆ ವ್ಯಾಪ್ತಿಗೆ ಬಾರದಿರುವುದರಿಂದ ಪ್ರತ್ಯೇಕ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದ ಸ್ಪೀಕರ್ ಪ್ರತಿಪಕ್ಷದ ನಾಯಕರ ಮಾತಿಗೆ ಬ್ರೇಕ್ ಹಾಕಿದರು.

Read More

ಭುವನೇಶ್ವರ: ಅಕ್ರಮ ಸಂಬಂಧದ ಶಂಕೆಯ ಮೇಲೆ ಪತ್ನಿಯನ್ನು ಕೊಂದು ಆಕೆಯ ತಲೆಯನ್ನು ಕತ್ತರಿಸಿ, ಅದನ್ನು ಹಿಡಿದುಕೊಂಡೇ ಪತಿ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಆಘಾತಕಾರಿ ಘಟನೆ ಒಡಿಶಾದ (Odisha) ನಯಾಗಢ (Nayagarh) ಜಿಲ್ಲೆಯಲ್ಲಿ ನಡೆದಿದೆ. ಬಿಡಪಾಜು ಗ್ರಾಮದ ನಿವಾಸಿ ಅರ್ಜುನ ಬಾಘಾ (35) ಪತ್ನಿ ಧರಿತ್ರಿಯನ್ನು (30) ಅಕ್ರಮ ಸಂಬಂಧ ಹೊಂದಿರುವ ಶಂಕೆಯ ಮೇಲೆ ಹತ್ಯೆ ಮಾಡಿದ್ದಾನೆ. ಆಕೆಯನ್ನು ಕ್ರೂರವಾಗಿ ಕೊಂದ ಬಳಿಕ ಹರಿತವಾದ ಆಯುಧ ಬಳಸಿ ಶಿರಚ್ಛೇದನ (Beheading) ಮಾಡಿದ್ದಾನೆ. ಬಳಿಕ ಪತ್ನಿಯ ರುಂಡವನ್ನು ಹಿಡಿದುಕೊಂಡು ನಡೆದೇ ಪೊಲೀಸ್ ಠಾಣೆಗೆ ಹೋಗಿದ್ದಾನೆ. ವ್ಯಕ್ತಿ ದಾರಿಯುದ್ದಕ್ಕೂ ಪತ್ನಿಯ ತಲೆಯನ್ನು ಝಾಡಿಸಿ ಸ್ಥಳೀಯರನ್ನು ಬೆಚ್ಚಿಬೀಳಿಸಿದ್ದಾನೆ. https://ainlivenews.com/see-how-hot-and-hot-this-cold-can-be/ ಪೊಲೀಸ್ ಠಾಣೆಗೆ ಬಂದ ಬಾಘಾ ಪೊಲೀಸರ ಮುಂದೆ ತಾನು ಪತ್ನಿಯನ್ನು ಅಕ್ರಮ ಸಂಬಂಧ ಹೊಂದಿದ್ದ ಹಿನ್ನೆಲೆ ಕೊಂದಿರುವುದಾಗಿ ತಿಳಿಸಿ ಶರಣಾಗಿದ್ದಾನೆ. ಜೊತೆಗೆ ಪೊಲೀಸ್ ಠಾಣೆ ವರೆಗೂ ಹಿಡಿದುಕೊಂಡೇ ಬಂದಿದ್ದ ಪತ್ನಿಯ ತಲೆಯನ್ನು ತೋರಿಸಿದ್ದಾನೆ. ವ್ಯಕ್ತಿಯ ಅಮಾನವೀಯ ಕೃತ್ಯ ಕಂಡು ಪೊಲೀಸರು ತಬ್ಬಿಬ್ಬಾಗಿದ್ದಾರೆ. ಪತ್ನಿಯನ್ನು ಕ್ರೂರವಾಗಿ ಕೊಂದ ಆರೋಪಿಯನ್ನು…

Read More

ದಾಳಿಂಬೆ ನಾರಿನಂಶ, ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಈ ಹಣ್ಣು ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ದಾಳಿಂಬೆ ಸಿಪ್ಪೆಯ ಚಹಾವನ್ನು ಮನಸ್ಸನ್ನು ಚುರುಕುಗೊಳಿಸಲು ತಯಾರಿಸಬಹುದು. ದಾಳಿಂಬೆ ಸಿಪ್ಪೆಯ ಚಹಾವನ್ನು ತಯಾರಿಸಲು ಸುಲಭವಾದ ಪಾಕವಿಧಾನವನ್ನು ಹಂಚಿಕೊಂಡಿದ್ದಾರೆ. ಇದನ್ನು ನೀವು ಸ್ಥಳೀಯ ಭಾಷೆಯಲ್ಲಿ ದಾಳಿಂಬೆ ಸಿಪ್ಪೆಗಳ ಕಷಾಯ ಎಂದೂ ಕರೆಯಬಹುದು. ದಾಳಿಂಬೆ ಸಿಪ್ಪೆ ಚಹಾ(Pomogranate peel tea ) ತಯಾರಿಸೋದು ಹೇಗೆ ಎಂದು ಇಲ್ಲಿದೆ ನೋಡಿ: ದಾಳಿಂಬೆ ಸಿಪ್ಪೆ ಚಹಾ ತಯಾರಿಸಲು, ಮೊದಲನೆಯದಾಗಿ, ಖಾಲಿ ಟೀ ಬ್ಯಾಗ್ ತೆಗೆದುಕೊಂಡು ಅದರಲ್ಲಿ ಒಂದು ಟೀಸ್ಪೂನ್ ದಾಳಿಂಬೆ ಸಿಪ್ಪೆ ಪುಡಿಯನ್ನು ಬೆರೆಸಿ ಮತ್ತು ಅದನ್ನು ಒಂದು ಲೋಟ ಬಿಸಿ ನೀರಿಗೆ ಹಾಕಿ. ಚಹಾದ ರುಚಿಯನ್ನು ಹೆಚ್ಚಿಸಲು  ಈ ಚಹಾಕ್ಕೆ ಸ್ವಲ್ಪ ಜೇನುತುಪ್ಪ ಸಹ ಸೇರಿಸಬಹುದು. ದಾಳಿಂಬೆ ಸಿಪ್ಪೆಯಿಂದ ತಯಾರಿಸಿದ ಚಹಾ ಕುಡಿಯುವುದರ ಪ್ರಯೋಜನಗಳು ಚರ್ಮದ ಸಮಸ್ಯೆಗಳಿಗೆ ಸಹಾಯಕಾರಿ- ದಾಳಿಂಬೆ ಸಿಪ್ಪೆಗಳಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ಪಾಲಿಫಿನಾಲ್…

Read More

ಪ್ರಕೃತಿಯಲ್ಲಿ ದೊರೆಯುವ ವಿವಿಧ ಹಣ್ಣುಗಳಲ್ಲಿ ಪಪ್ಪಾಯಿ ಅತ್ಯಂತ ಅದ್ಭುತವಾಗಿದೆ. ಇದು ವಿಟಮಿನ್ ಸಿ, ಉತ್ಕರ್ಷಣ ನಿರೋಧಕಗಳು, ವಿಟಮಿನ್ ಬಿ, ವಿಟಮಿನ್ ಕೆ, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಅನೇಕ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ. ಹಾಗಾಗಿಯೇ ಪಪ್ಪಾಯಿ ಆರೋಗ್ಯಕ್ಕೆ ಒಳ್ಳೆಯದು. ಆದರೆ ಕೆಲವು ಆರೋಗ್ಯ ಸಮಸ್ಯೆಗಳಿರುವವರಿಗೆ ಪಪ್ಪಾಯಿ ಒಳ್ಳೆಯದಲ್ಲ ಎಂದು ವೈದ್ಯರು ಸೂಚಿಸುತ್ತಾರೆ. ಅಲರ್ಜಿ ಸಮಸ್ಯೆ ಇರುವವರು ಪಪ್ಪಾಯಿಯನ್ನು ತ್ಯಜಿಸಬೇಕು. ಏಕೆಂದರೆ ಪಪ್ಪಾಯಿಯ ಹಾಲು ಅಲರ್ಜಿಯನ್ನು ಉಂಟು ಮಾಡುತ್ತದೆ. ಪಪ್ಪಾಯಿಯನ್ನು ಗರ್ಭಿಣಿಯರು ತಿನ್ನಬಾರದು. ಇದರಲ್ಲಿರುವ ಪಾಪೈನ್ ಗರ್ಭದಲ್ಲಿರುವ ಮಗುವಿಗೆ ಹಾನಿ ಮಾಡುತ್ತದೆ. ಪಪ್ಪಾಯಿಯನ್ನು ಮಿತಿ ಮೀರಿ ತಿನ್ನುವುದರಿಂದ ಗ್ಯಾಸ್, ಹೊಟ್ಟೆ ಉಬ್ಬುವುದು ಮತ್ತು ಅತಿಸಾರ ಸಮಸ್ಯೆಗಳು ಬರಬಹುದು. ಪಪ್ಪಾಯಿಯಲ್ಲಿ ವಿಟಮಿನ್ ಕೆ ಅಧಿಕವಾಗಿದೆ. ಇದರಿಂದ ರಕ್ತ ಬೇಗ ಹೆಪ್ಪುಗಟ್ಟುತ್ತದೆ. ರಕ್ತ ತೆಳುವಾಗಿಸುವವರು ತಮ್ಮ ವೈದ್ಯರ ಸಲಹೆಯಂತೆ ಪಪ್ಪಾಯಿಯನ್ನು ಸೇವಿಸಬೇಕು.

Read More

ನಮ್ಮ ಆರೋಗ್ಯವನ್ನು ಬಲಪಡಿಸಲು ನಾವು ಯಾವ ಹಣ್ಣನ್ನು ತಿನ್ನಬಹುದು ಎಂದು ನಮಗೆ ಖಚಿತವಿಲ್ಲ. ನಮ್ಮ ಆಯ್ಕೆಯ ಒಂದು ನಿರ್ದಿಷ್ಟ ಹಣ್ಣು ಅಥವಾ ನಿರ್ದಿಷ್ಟ ಹಣ್ಣು ನಮ್ಮ ಆರೋಗ್ಯಕ್ಕೆ ಒಳ್ಳೆಯದು ಎಂದು ಯಾರಾದರೂ ಹೇಳಿದರೆ, ಅಥವಾ ನಾವು ಅದನ್ನು ಎಲ್ಲಿಯಾದರೂ ಓದಿದರೆ, ನಾವು ಸಾಕಷ್ಟು ಹಣ್ಣುಗಳನ್ನು ತಿನ್ನುತ್ತೇವೆ. ಆದರೆ ನಮ್ಮ ಸುತ್ತಮುತ್ತಲಿನ ಹಣ್ಣುಗಳಲ್ಲಿ ಕಂಡುಬರುವ ಪೋಷಕಾಂಶಗಳ ಬಗ್ಗೆ ನಮಗೆ ಸ್ವಲ್ಪ ಕಡಿಮೆ ತಿಳಿದಿದೆ. ಅವುಗಳಲ್ಲಿ ಒಂದಾದ ಪೇರಳೆ, ಆರೋಗ್ಯವನ್ನು ಕಾಪಾಡಿಕೊಳ್ಳಲು ನಮಗೆ ಸಹಾಯ ಮಾಡುತ್ತದೆ. ಪೇರಳೆ ಹಣ್ಣನ್ನು ಸೇವಿಸುವ ಮೂಲಕ ರಕ್ತದಲ್ಲಿನ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಮಧುಮೇಹ ಹೊಂದಿರುವ ಜನರು ದಿನವಿಡೀ ನಿಯಮಿತವಾಗಿ ಸೇವಿಸುವ ಮೂಲಕ ತಮ್ಮ ಸಕ್ಕರೆಯನ್ನು ಕಡಿಮೆ ಮಾಡಬಹುದು. ಬಹಳ ಪರಿಣಾಮಕಾರಿಯಾಗಿ ಕಡಿಮೆ ಮಾಡಬಹುದು. ಪೇರಳೆ ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ, ವಿಶೇಷವಾಗಿ ಇನ್ಸುಲಿನ್ ಉತ್ಪಾದನೆಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಪ್ರತಿಯೊಬ್ಬರೂ ಪೇರಳೆ ಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಆದರೆ ಇದರ ಆರೋಗ್ಯ ಪ್ರಯೋಜನಗಳು ನಿಮಗೆ ತಿಳಿದಿದ್ದರೆ, ನೀವು ಕೋರಿಮಾರಿ ಹಣ್ಣನ್ನು ಪಡೆದು…

Read More

ಗ್ಕೆಬರ್ಹಾ: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 2ನೇ ಟಿ20 ಪಂದ್ಯದಲ್ಲಿ ವಿಶ್ವದ ನಂ.1 ಟಿ20 ಬ್ಯಾಟರ್‌ ಸೂರ್ಯಕುಮಾರ್‌ ಯಾದವ್‌‌ (Suryakumar Yadav), ವಿರಾಟ್‌ ಕೊಹ್ಲಿ (Virat Kohl) ಅವರ ಹೆಸರಲ್ಲಿದ್ದ 13 ವರ್ಷಗಳ ಹಳೆಯ ದಾಖಲೆಯೊಂದನ್ನ ಸರಿಗಟ್ಟಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಗ್ಕೆಬರ್ಹಾ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಸೂರ್ಯಕುಮಾರ್‌ 36 ಎಸೆತಗಳಲ್ಲಿ 56 ರನ್‌ (3 ಸಿಕ್ಸರ್‌, 5 ಬೌಂಡರಿ) ಗಳಿಸುವ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 2 ಸಾವಿರ ರನ್‌ ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ವೇಗದ 2000 ರನ್‌ ಪೂರೈಸಿದ ಬ್ಯಾಟರ್‌ ಎನಿಸಿಕೊಂಡರು. 2010ರಲ್ಲಿ ಇಂಗ್ಲೆಂಡ್‌ ವಿರುದ್ಧ ಮ್ಯಾಂಚೆಸ್ಟರ್‌ನಲ್ಲಿ‌ 56ನೇ ಇನಿಂಗ್ಸ್ ನಲ್ಲಿ 2000 ಸಾವಿರ ರನ್‌ ಪೂರೈಸಿದ್ದರು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಸೂರ್ಯಕುಮಾರ್‌ ಯಾದವ್‌ ಸಹ ತಮ್ಮ 56ನೇ ಇನ್ನಿಂಗ್ಸ್‌ನಲ್ಲಿ 2,000 ರನ್‌ ಪೂರೈಸಿದ್ದಾರೆ. 2000 ರನ್‌ ಪೂರೈಸಲು 1,164 ಎಸೆತಗಳನ್ನು ಎದುರಿಸಿದ್ದಾರೆ.…

Read More

ಬೆಂಗಳೂರು:- ಲೋಕಸಭೆಯಲ್ಲಿ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಬಿಕೆ ಹರಿಪ್ರಸಾದ್ ಆಕ್ರೋಶ ಹೊರ ಹಾಕಿದ್ದಾರೆ. “ಈ‌ ಹಿಂದೆ ಉಗ್ರಗಾಮಿಗಳು ‌ಪಾರ್ಲಿಮೆಂಟ್‌ ಮೇಲೆ ದಾಳಿ‌ ನಡೆಸಿದ್ದರು. ಹುತಾತ್ಮರಿಗೆ ಸಂತಾಪ ಸೂಚಿಸುವ ದಿನವೇ‌ ಈ ಘಟನೆ ನಡೆದಿದೆ. ಹೊಸ‌ ಪಾರ್ಲಿಮೆಂಟ್ ಕಟ್ಟಿದ್ದಾರೆ. ಆದರೂ‌ ರಾಷ್ಟ್ರದ ಭದ್ರತೆ ಕುಸಿದಿದೆ. ಭದ್ರತಾ ವೈಫಲ್ಯದ ಹೊಣೆಯನ್ನ ಗೃಹ ಸಚಿವರು‌ ಹೊರಬೇಕು. ಈ ಘಟನೆಯನ್ನು ನಾನು ಖಂಡಿಸುತ್ತೇನೆ” ಎಂದು ಹೇಳಿದರು.

Read More

ಟೆಲ್ ಅವಿವ್: ಇಸ್ರೇಲ್ (Israel) ಸೇನೆ ಗಾಜಾದಲ್ಲಿನ (Gaza) ಹಮಾಸ್ (Hamas) ಉಗ್ರರು ಅವಿತುಕೊಳ್ಳಲು ಬಳಸುತ್ತಿದ್ದ ಸುರಂಗಗಳಿಗೆ (Tunnel) ಸಮುದ್ರದ ನೀರನ್ನು ಬಿಡಲು ಪ್ರಾರಂಭಿಸಿದೆ ಎಂದು ವರದಿಯಾಗಿದೆ. ಹಮಾಸ್ ಉಗ್ರರು ಒತ್ತೆಯಾಳು ಗಳನ್ನು, ಯುದ್ಧ ಸಾಮಾಗ್ರಿಗಳನ್ನು ಅಡಗಿಸಲು ಮಾತ್ರವಲ್ಲದೇ ತಾವೂ ಕೂಡಾ ಅವಿತುಕೊಳ್ಳಲು ಬಳಸಲಾಗುತ್ತಿದೆ ಎಂದು ನಂಬಲಾಗಿರುವ ಈ ಸುರಂಗಗಳನ್ನು ನಾಶಪಡಿಸಲು, https://ainlivenews.com/know-how-to-take-care-of-gums-and-teeth-in-winter-here-are-the-tips/  ಸಮುದ್ರದ ನೀರನ್ನು ಹರಿಸಲಾಗುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಆಡಳಿತದ ಕೆಲ ಅಧಿಕಾರಿಗಳು ಹೇಳಿರುವುದಾಗಿ ವರದಿಯಾಗಿದೆ.  ಸಮುದ್ರ ನೀರು ಹರಿಸುವುದರಿಂದ ಶುದ್ಧ ಕುಡಿಯುವ ನೀರು ಪೂರೈಕೆಗೆ ಅಪಾಯವಾಗಲಿದೆ ಎಂದು ಇತರ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ವರದಿಗೆ ಇಸ್ರೇಲ್‌ನ ಸೇನೆ ಸದ್ಯ ಪ್ರತಿಕ್ರಿಯೆ ನೀಡಿಲ್ಲ.

Read More