ಬಳ್ಳಾರಿ:- ಬೆಳಗಾವಿ ಅಧಿವೇಶನದಲ್ಲಿ ಮತ್ತೆ ಮುಂದುವರೆದ ಬಳ್ಳಾರಿ ರೆಡ್ಡಿ ವರ್ಸ್ಸ್ ರೆಡ್ಡಿ ಕಾಳಗ. ಈಗಾಗಲೇ ಬಳ್ಳಾರಿ ಜಿಲ್ಲೆಯಲ್ಲಿ ಹಲವು ಸಭೆ ಸಮಾರಂಭಗಳಲ್ಲಿ ಗಂಗಾವತಿ ಶಾಸಕ ಜನಾರ್ಧನ್ ರೆಡ್ಡಿ ಹಾಗೂ ನಗರ ಶಾಸಕ ಭರತ್ ರೆಡ್ಡಿ ಅವರ ನಡುವೆ ಆರೋಪ ಮತ್ತು ಪ್ರತ್ಯಾರೋಪ ಮಾಡುತ್ತಿದ್ದರು.ಇದೇ ಆರೋಪ-ಪ್ರತ್ಯಾರೋಪ ಬೆಳಗಾವಿ ಅಧಿವೇಶನದಲ್ಲಿ ಮುಂದುವರೆದಿದೆ. ಈ ಕುರಿತು ಜಿಲ್ಲೆಯ ಜನರು ಪ್ರತಿಕ್ರಿಯಿಸಿ ಬಳ್ಳಾರಿ ಅಭಿವೃದ್ದಿಯ ವಿಚಾರವಾಗಿ ಮಾಜಿ ಸಚಿವ ಜನಾರ್ಧನ್ ರೆಡ್ಡಿ ಅವರು ಮಾತನಾಡಿದ ವಿಷಯಕ್ಕೆ ಸಂಬಂಧಿಸಿದಂತೆ, ಮಾತು ಪ್ರಾರಂಭಿಸಿದ ಭರತ್ ರೆಡ್ಡಿ ಬಳ್ಳಾರಿ ಅಭಿವೃದಿಯ ಕುರಿತು ಸರಿಯಾಗಿ ಪ್ರತಿಕ್ರಿಯಿಸಿದ್ದಾರೆ. ಜನಾರ್ಧನ ರೆಡ್ಡಿ ಅವರು ಬಳ್ಳಾರಿಯನ್ನು ಅಭಿವೃದ್ದಿ ಮಾಡಿರುವುದಕ್ಕಿಂತ, ಅಕ್ರಮ ಗಣಿಗಾರಿಕೆಯ ಮೂಲಕ ಸಂಪಾದಿಸಿಕೊಂಡು ಜಿಲ್ಲೆಗೆ ಕುಖ್ಯಾತಿಯನ್ನು ತಂದಿದ್ದಾರೆ.ಅಷ್ಟೇ ಅಲ್ಲದೇ ಅವರ ಬಳ್ಳಾರಿಯನ್ನು ರಿ ಪಬ್ಲಿಕ್ ಬಳ್ಳಾರಿ ಮಾಡ ಹೊರಟಿದ್ದರು. ಅದನ್ನು ತಪ್ಪಿಸಿ ಬಳ್ಳಾರಿಯನ್ನು, ಮತ್ತೆ ನೈಜಸ್ಥಿತಿಗೆ ತಂದವರು ಕಾಂಗ್ರೇಸ್ ಅವರು ಎಂದು ಕುರುಗೋಡು ಪಟ್ಟಣ ಪಂಚಾಯಿತಿಯ ಸದಸ್ಯರಾದ ಚನ್ನಪಟ್ನ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
Author: AIN Author
ಬಳ್ಳಾರಿ: ವಿಚಿತ್ರ ರೂಪದ ಕುರಿಮರಿ ಜನನವಾಗಿರುವ ಘಟನೆ ಸಿರಗುಪ್ಪ ತಾಲೂಕಿನ ಕೆಂಚನಗುಡ್ಡ ಗ್ರಾಮದಲ್ಲಿ ಘಟನೆ ಜರುಗಿದೆ. ರೈತ ಶಂಕರ್ ನಾಯ್ಕ್ ಅವರಿಗೆ ಸೇರಿದ ಕುರಿ ಮರಿ ಇದಾಗಿದ್ದು, ಮರಿಯನ್ನು ನೋಡಲು ಹೆಚ್ಚು ಹೆಚ್ಚು ಬರುತ್ತಿದ್ದಾರೆ. ಸದ್ಯಕ್ಕೆ ಕುರಿಮರಿ ಆರೋಗ್ಯ ಚೆನ್ನಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅದರೆ ಈ ರೀತಿಯ ವಿಚಿತ್ರ ಅಕಾರದ ಪ್ರಾಣಿಗಳು ಬದುಕುಳಿಯುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.
ಬೆಂಗಳೂರು:- ಅಪಘಾತ ಮಾಡಿ ಎಸ್ಕೇಪ್ ಆಗಿದ್ದ ಆರೋಪಿಯ ವಿವಿಪುರಂ ಸಂಚಾರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಸ್ಲಾಂಪಾಷಾ (65)ಬಂಧಿತ ಆರೋಪಿ.. ತನ್ನ ಆಟೋದಿಂದ ಅಪಘಾತ ಎಸಗಿ ಆರೋಪಿ ಎಸ್ಕೇಪ್ ಆಗಿದ್ದ. ಅಜಾಗರೂಕತೆಯಿಂದ ಮತ್ತು ನಿರ್ಲಕ್ಷ್ಯ ಚಾಲನೆ ಮಾಡಿ ಅಪಘಾತ ಸಂಭವಿಸಿತ್ತು. ಅಸ್ಲಾಂಪಾಷಾ ಎಸ್ಕೇಪ್ ಆಗಿದ್ದ ಆರೋಪಿ. ಪೊಲೀಸರು ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ವಿವಿಪುರಂ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ:- ರಾಜ್ಯ ಬಿಜೆಪಿ ಬಗ್ಗೆ ಕೇಂದ್ರ ನಾಯಕರಿಗೆ ಬೇಸರ ಇರುವುದು ನಿಜ. ಯಾಕೆ ಬೇಸರ ಎಂದು ಕೇಳುತ್ತೇವೆ. ಕೇಂದ್ರದ ನಿಯಂತ್ರಣವಿಲ್ಲ ಎಂಬುವುದು ಸುಳ್ಳು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ನಾಯಕರಿಗೆ ರಾಜ್ಯದ ನಾಯಕರು ಹೆದರುತ್ತಾರೆ ಎಂಬುವುದು ಸುಳ್ಳು. ರಾಜ್ಯದಲ್ಲಿ ಸಂಘಟಿತವಾಗಿರುವ ಪಕ್ಷವಾಗಿದೆ ನಮ್ಮದು ಎಂದರು. ಪಕ್ಷದಲ್ಲಿ ಒಂದಿಬ್ಬರು ತಮ್ಮ ವೈಯಕ್ತಿಕ ಅಸಮಧಾನ ವ್ಯಕ್ತಪಡಿಸಿದರೆ ಶಿಸ್ತು ಇಲ್ಲವಂತಲ್ಲ. ಒಂದು ಕೋಟಿ ಸದಸ್ಯರಿರುವ ಪಕ್ಷದಲ್ಲಿ ಒಂದಿಬ್ಬರು ಅಸಮಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದ ಹಿರಿಯ ನಾಯಕರು ಕರೆದು ಮಾತನಾಡುತ್ತಾರೆ. ಎಲ್ಲವೂ ಸರಿಯಾಗುತ್ತದೆ. ಕೆಲವರ ವೈಯಕ್ತಿಕ ಹೇಳಿಕೆಗಳಿಗೆ ಪಕ್ಷವು ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಅವರು ಐಸಿಸ್ ನಂಟಿರುವ ಮೌಲ್ವಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದರು ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ದಲಿತರು, ಹಿಂದುಳಿದವರ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಸುಳ್ಳಿಗೆ ನೋಬೆಲ್ ಪ್ರಶಸ್ತಿ ಕೊಡುವುದಿದ್ದರೆ ಇವರಿಗೆ ಕೊಡಬೇಕು. ಹಿಂದುಳಿದ, ದಲಿತರ ಬಗ್ಗೆ ಕಾಳಜಿಯಿದ್ದರೆ ಜಾತಿ ಗಣತಿ ಬಿಡುಗಡೆ ಮಾಡಬೇಕಿತ್ತು.…
KCC ಕ್ರಿಕೆಟ್ ಟೂರ್ನಿಗೂ ಮುನ್ನ ಕಿಚ್ಚ ಸುದೀಪ್ಗೆ ರಾಬಿನ್ ಉತ್ತಪ್ಪ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಟೂರ್ನಿ ಆರಂಭಕ್ಕೂ ಮುನ್ನ ರಾಬಿನ್ ಉತ್ತಪ್ಪ ತಮಗೆ ಎಚ್ಚರಿಕೆ ನೀಡಿರುವುದಾಗಿ ಕಿಚ್ಚ ಸುದೀಪ್ ಹೇಳಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಇದೇ ಡಿಸೆಂಬರ್ 23,24 & 25ರಂದು ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಟೂರ್ನಿ ನಡೆಯಲಿದೆ. ಟೂರ್ನಿಗೆ ಭರದ ಸಿದ್ದತೆಗಳು ನಡೆಯುತ್ತಿವೆ. , ಈ ಬಾರಿಯ ಕೆಸಿಸಿ ಟೂರ್ನಿಯಲ್ಲಿ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗರಾದ ಕನ್ನಡಿಗ ರಾಬಿನ್ ಉತ್ತಪ್ಪ, ಸುರೇಶ್ ರೈನಾ, ಮುರಳಿ ವಿಜಯ್, ತಿಲಕರತ್ನೆ ದಿಲ್ಷ್ಯಾನ್, ಹರ್ಷಲ್ ಗಿಬ್ಸ್ ಹಾಗೂ ಎಸ್ ಬದ್ರಿನಾಥ್ ಪಾಲ್ಗೊಳ್ಳುತ್ತಿದ್ದಾರೆ. ಈ ಟೂರ್ನಿಯ ಕುರಿತಾಗಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಿಚ್ಚ ಸುದೀಪ್, ರಾಬಿನ್ ಉತ್ತಪ್ಪ ತಮಗೆ ವಾರ್ನಿಂಗ್ ನೀಡಿದ್ದಾಗಿ ಹೇಳಿದ್ದಾರೆ. “ನಾನು ಸದ್ಯ ಒಳ್ಳೆಯ ಫಾರ್ಮ್ನಲ್ಲಿದ್ದೇನೆ, ಚೆನ್ನಾಗಿ ಬಾರಿಸ್ತೀನಿ” ಎಂದು ಉತ್ತಪ್ಪ ತಮಗೆ ಹೇಳಿರುವುದಾಗಿ ತಿಳಿಸಿದ್ದಾರೆ. ಕನ್ನಡ ಹಾಗೂ ಕರ್ನಾಟಕದ ಬಗ್ಗೆ ಈ ಬಾರಿ ಕೆಸಿಸಿಯಲ್ಲಿ ವಿಭಿನ್ನವಾಗಿ ಪ್ಲಾನ್ ಮಾಡಿಕೊಂಡಿದ್ದೇವೆ. ಕಳೆದ…
ಬೆಳಗಾವಿ:- ಬಾಲ್ಯ ವಿವಾಹ ಪದ್ಧತಿಯನ್ನು ಬೇರು ಸಮೇತ ಕಿತ್ತು ಹಾಕ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಶಾಸಕ ಶರಣಗೌಡ ಕಂದಕೂರು ಕೇಳಿದ ಪ್ರಶ್ನೆಗೆ ಬುಧವಾರ ವಿಧಾನಸಭೆಯಲ್ಲಿ ಉತ್ತರ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬಾಲ್ಯ ವಿವಾಹ ಪದ್ಧತಿಯನ್ನು ಬೇರು ಸಮೇತ ಕಿತ್ತು ಹಾಕಲು ನಮ್ಮ ಇಲಾಖೆ ಸನ್ನದ್ಧವಾಗಿದೆ ಎಂದರು. ಬಾಲ್ಯವಿವಾಹ ಪ್ರಕರಣವನ್ನು ಮುಚ್ಚಿಹಾಕಲು ಯಾರಿಂದಲೂ ಸಾಧ್ಯವಿಲ್ಲ. ಈಗ ಕಾನೂನು ಹಿಂದಿನಂತಿಲ್ಲ. ಅತ್ಯಂತ ಪ್ರಬಲವಾದ ಕಾನೂನು ರಾಜ್ಯದಲ್ಲಿ ಜಾರಿ ಇದೆ. ಯಾವುದಾದರೂ ನಿರ್ದಿಷ್ಟ ಪ್ರಕರಣದಲ್ಲಿ ಲೋಪ ಕಂಡುಬಂದಲ್ಲಿ ಗಮನಕ್ಕೆ ತಂದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ವಿವಿಧ ನಿಯಮಗಳ ಅಡಿಯಲ್ಲಿ ಕೆಲಸ ಮಾಡಲಾಗುತ್ತಿದೆ. ಅನುಷ್ಠಾನದಲ್ಲಿರುವ ಕೆಲವು ಕುಂದುಕೊರತೆಗಳನ್ನು ಸರ್ಕಾರ ಗಮನಿಸಿದೆ. ಅವುಗಳನ್ನು ಪರಿಹರಿಸಿ ಮಕ್ಕಳ ಹಕ್ಕುಗಳನ್ನು ಸಂರಕ್ಷಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಶಿಕ್ಷಣ ಇಲಾಖೆ, ಪೊಲಿಸ್ ಇಲಾಖೆ, ಕಾರ್ಮಿಕ ಇಲಾಖೆ, ಮತ್ತಿತರ ಸಂಬಂಧಿಸಿದ ಇಲಾಖೆಗಳಲ್ಲದೆ ರಾಜ್ಯ ಅಪರಾಧ ಜಾಗೃತಿ ದಳ…
ದಿನದ ಮೂರು ಹೊತ್ತು ಸರಿಯಾದ ಪ್ರಮಾಣದಲ್ಲಿ, ಸರಿಯಾದ ಆಹಾರವನ್ನು ತಿನ್ನುವುದು ಮನುಷ್ಯನ ಆರೋಗ್ಯಕ್ಕೆ ಅತೀ ಅಗತ್ಯ. ಆದ್ರೆ ಇತ್ತೀಚಿಗೆ ಹೆಚ್ಚಿನವರು ಕಾಲೇಜ್, ಆಫೀಸಿಗೆ ಲೇಟಾಯ್ತು ಅನ್ನೋ ಕಾರಣಕ್ಕೆ ಬೆಳಗ್ಗಿನ ಉಪಾಹಾರವನ್ನು ಸ್ಕಿಪ್ ಮಾಡ್ತಾರೆ. ಆದ್ರೆ ಇಂಥಾ ಅಭ್ಯಾಸದಿಂದ ಆರೋಗ್ಯಕ್ಕೆಷ್ಟು ತೊಂದ್ರೆಯಾಗುತ್ತೆ, ಅದರಿಂದ ಉಂಟಾಗುವ ಅಡ್ಡಪರಿಣಾಮಗಳ ಬಗ್ಗೆ ತಿಳಿಯೋಣ ಇಲ್ಲಿ. ಬೆಳಗ್ಗಿನ ಉಪಾಹಾರವು ಬಹಳ ಮುಖ್ಯವಾದ ಊಟವಾಗಿದೆ. ಇದು ನಿಮ್ಮ ಈಡೀ ದಿನಗಳ ಮೇಲೆ ಪರಿಣಾಮ ಬೀರುತ್ತದೆ. ಆದರೆ ಕೆಲವೊಮ್ಮ ಸಮಯದ ಅಭಾವದಿಂದ ಬೆಳಗ್ಗಿನ ಉಪಾಹಾರವನ್ನು ತಪ್ಪಿಸುತ್ತಾರೆ. ಇನ್ನು ಕೆಲವರು ತೂಕ ಇಳಿಸಬೇಕು ಅನ್ನೋ ಕಾರಣಕ್ಕೆ ಬೆಳಗ್ಗೆ ತಿನ್ನುವುದಿಲ್ಲ. ಬೆಳಗ್ಗಿನ ಆರೋಗ್ಯಕರ ಉಪಾಹಾರ ಸೇವಬೆ ನಿಮ್ಮನ್ನು ಅನೇಕ ಸಮಸ್ಯೆಗಳಿಂದ ರಕ್ಷಿಸಬಹುದು. ಅದೇ ಬೆಳಗ್ಗಿನ ಉಪಾಹಾರವನ್ನು ಬಿಟ್ಟು ಬಿಡುವ ಅಭ್ಯಾಸ ನಿಮ್ಮಲ್ಲಿ ಹಲವು ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡಬಹುದು. ಬ್ರೇಕ್ಫಾಸ್ಟ್ ಸ್ಕಿಪ್ ಮಾಡೋದ್ರಿಂದ ಏನೆಲ್ಲಾ ತೊಂದ್ರೆಯಾಗುತ್ತೆ ತಿಳ್ಕೊಳ್ಳಿ. ಶಕ್ತಿಯ ಕೊರತೆ ಹೌದು, ಬೆಳಗ್ಗಿನ ಉಪಹಾರವನ್ನು ಸ್ಕಿಪ್ ಮಾಡುವುದರಿಂದ, ದೇಹದಲ್ಲಿ ಶಕ್ತಿಯ ಕೊರತೆ ಆಗುತ್ತದೆ. ಏಕೆಂದರೆ…
ಭೋಪಾಲ್:- ಮಧ್ಯ ಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಯಾರು? ಅವರ ಹಿನ್ನೆಲೆಯೇನು ಎಂಬುವುದನ್ನು ತಿಳಿಯೋಣ ಬನ್ನಿ. ಒಬಿಸಿ ನಾಯಕ ಮತ್ತು ಮೂರು ಬಾರಿ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿನ್ನೆಲೆಯವರು ಎಂಬುದು ಮೋಹನ್ ಯಾದವ್ ಅವರ ಇತಿಹಾಸವಾಗಿದೆ. ಅವರು ವಿದ್ಯಾರ್ಥಿಯಾಗಿದ್ದಾಗಲೇ ತಮ್ಮ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸಿ ಎತ್ತರಕ್ಕೆ ಏರುತ್ತಾ ಹೋಗಿ ಮಧ್ಯಪ್ರದೇಶ ಸರ್ಕಾರದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ. ಉಜ್ಜಯಿನಿ ದಕ್ಷಿಣ ಕ್ಷೇತ್ರದ 58 ವರ್ಷದ ಮೋಹನ್ ಯಾದವ್ ಮಧ್ಯ ಪ್ರದೇಶದಲ್ಲಿ ಉಮಾಭಾರತಿ, ಬಾಬುಲಾಲ್ ಗೌರ್ ಮತ್ತು ಶಿವರಾಜ್ ಸಿಂಗ್ ಚೌಹಾಣ್ ನಂತರ 2003 ರಿಂದ ಭಾರತೀಯ ಜನತಾ ಪಕ್ಷದಿಂದ ರಾಜ್ಯದ ನಾಲ್ಕನೇ ಒಬಿಸಿ ಸಮುದಾಯಕ್ಕೆ ಸೇರಿದ ಮುಖ್ಯಮಂತ್ರಿಯಾಗಿದ್ದಾರೆ. ಅವರು ಕಾಂಗ್ರೆಸ್ನ ಪ್ರಕಾಶ್ ಚಂದ್ರ ಸೇಥಿ ನಂತರ ಉಜ್ಜಯಿನಿಯಿಂದ ಆಯ್ಕೆಯಾದ ಎರಡನೇ ಮುಖ್ಯಮಂತ್ರಿಯಾಗಿದ್ದಾರೆ. ಮೋಹನ್ ಯಾದವ್ ಅವರು ಇಂದು ಸಿಎಂ ಸ್ಥಾನ ಅಲಂಕರಿಸಿರುವುದು ಅಚ್ಚರಿಯ ವಿಷಯ. ಏಕೆಂದರೆ ಸಿಎಂ ಸ್ಥಾನದಲ್ಲಿ ಅವರ ಹೆಸರು ಕೇಳಿಬರಲೇ ಇಲ್ಲ. ಮುಂಬರುವ ಲೋಕಸಭೆ ಚುನಾವಣೆಗೆ…
ಬೆಂಗಳೂರು/ಬೆಳಗಾವಿ: ಸರ್ಕಾರಿ ಜಮೀನಿನ ಅಕ್ರಮ ಪರಭಾರೆಗೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಅಂತ ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ಭರವಸೆ ನೀಡಿದ್ದಾರೆ. ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ನಾರಾಯಣಸ್ವಾಮಿ (Narayanaswamy) ಪ್ರಶ್ನೆ ಕೇಳಿದರು. ಬೆಂಗಳೂರು, ಬೆಂಗಳೂರು ಗ್ರಾಮಾಂತರದಲ್ಲಿ ಸರ್ಕಾರಿ ಭೂಮಿ ಒತ್ತುವರಿ ಆಗಿದೆ. ಇದಕ್ಕೆ ಸರ್ಕಾರಿ ಅಧಿಕಾರಗಳೇ ಕೈ ಜೋಡಿಸಿದ್ದಾರೆ. ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಅಂತ ಒತ್ತಾಯ ಮಾಡಿದ್ರು. ಇದಕ್ಕೆ ಉತ್ತರ ನೀಡಿದ ಸಚಿವರು, ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ 51,555 ಎಕರೆ ಸರ್ಕಾರಿ ಜಮೀನು ಗೋಮಾಳ ಅತಿಕ್ರಮವಾಗಿದೆ. ಈ ಸಂಬಂಧ 23307 ಪ್ರಕರಣ ದಾಖಲಾಗಿದೆ. 51,555 ಎಕರೆ ಪೈಕಿ 12434 ಪ್ರಕರಣಗಳಲ್ಲಿ ಸುಮಾರು 28,264 ಎಕರೆ ಒತ್ತುವರಿ ತೆರವು ಆಗಿದೆ. ರಾಜ್ಯಾದ್ಯಂತ 63,32,484 ಸರ್ಕಾರಿ ಎಕರೆ ಜಾಗ ಇದೆ. ಇದರಲ್ಲಿ 14,72,493 ಎಕರೆ ಜಮೀನು ಒತ್ತುವರಿ ಆಗಿದೆ ಎಂದರು. ವಿವಿಧ ನ್ಯಾಯಾಲಯಗಳಲ್ಲಿರುವ ಪ್ರಕರಣಗಳು, ಅಕ್ರಮ, ಸಕ್ರಮ ಯೋಜನೆ, ಸಾರ್ವಜನಿಕ ಬಳಕೆಗೆ 10,82,752 ಎಕರೆ ಜಮೀನು…
ದೆಹಲಿ: ಲೋಕಸಭೆಯಲ್ಲಿ ಇಂದು ನಡೆದ ಗಂಭೀರ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ. ಇವರು ಯಾವುದೇ ಸಂಘಟನೆಗೆ ಸೇರಿದವರಲ್ಲ, ಸರ್ಕಾರದ ವಿರುದ್ಧ ಪ್ರತಿಭಟನೆಯೇ ಇವರ ಉದ್ದೇಶ ಎಂದು ತಿಳಿದುಬಂದಿದೆ. ಶೂಗಳ ಒಳಗೆ ಗ್ಯಾಸ್ ಕ್ಯಾನಿಸ್ಟರ್ಗಳನ್ನು ಇಟ್ಟುಕೊಂಡು ಒಳಗೆ ಕೊಂಡೊಯ್ದಿದ್ದು ಹಳದಿ ಅನಿಲವನ್ನು ಸ್ಪ್ರೇ ಮಾಡಿದ್ದಾರೆ. ಜೊತೆಗೆ ʼತಾನಾಶಾಹಿ ನಹೀ ಚಲೇಗೀʼ (ಸರ್ವಾಧಿಕಾರವನ್ನು ಸಹಿಸುವುದಿಲ್ಲ) ಎಂಬ ಸ್ಲೋಗನ್ ಕೂಗಿದ್ದಾರೆ. ಇವರಲ್ಲಿ ಒಬ್ಬಾತ ಡಿ.ಮನೋರಂಜನ್ ಎಂದು ಗುರುತಿಸಲಾಗಿದೆ. ಮನೋರಂಜನ್ ಮೈಸೂರಿನವನು ಹಾಗೂ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ಎಂದು ಗೊತ್ತಾಗಿದೆ. ಇನ್ನೊಬ್ಬಾತ ಸಾಗರ್ ಶರ್ಮಾ ಎಂಬ ಹೆಸರಿನವನು. ಇಬ್ಬರಲ್ಲಿ ಒಬ್ಬನ ಬಳಿ ಲಖನೌ ಮೂಲದ ಆಧಾರ್ ಕಾರ್ಡ್ ದೊರೆತಿದೆ. ವಿಚಾರಣೆಯ ವೇಳೆ “ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಿದ್ದೇವೆ. ನಾವು ವಿದ್ಯಾರ್ಥಿಗಳು. ನಾವು ಯಾವುದೇ ಸಂಘಟನೆಗೆ ಸೇರಿಲ್ಲ. ನಮ್ಮ ಹಕ್ಕುಗಳನ್ನು ದಮನಿಸಲಾಗುತ್ತಿದೆ. ಸರ್ವಾಧಿಕಾರದ ವಿರುದ್ಧ ನಮ್ಮ ಹೋರಾಟʼʼ ಎಂದು ಹೇಳಿದ್ದಾರೆ ಎಂದು ಗೊತ್ತಾಗಿದೆ. ಇದು ಲೋಕಸಭೆಯ ಒಳಗೆ ನಡೆದರೆ, ಸಂಸತ್ತಿನ ಹೊರಗೆ ಇಬ್ಬರು…