ಬೆಂಗಳೂರು: ಸಂಸತ್ ದಾಳಿಯಾದ ಘಟನೆಯನ್ನು ಎಲ್ಲರೂ ಖಂಡಿಸಬೇಕಾಗುತ್ತದೆ. ಪಾಸ್ಗಳನ್ನು ಕೊಡುವಾಗ ಗೊತ್ತಿರುವವರಿಗೆ ಮಾತ್ರ ಕೊಡಬೇಕು. ಗೊತ್ತಿಲ್ಲದವರಿಗೆ ಪಾಸ್ ಕೊಡಬಾರದು. ಈ ಘಟನೆ ಮೇಲ್ನೋಟಕ್ಕೆ ಭದ್ರತಾ ಲೋಪ ಎನ್ನುವುದು ಗೊತ್ತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಲೋಕಸಭೆ (Loksabha) ಘಟನೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸತ್ಗೆ ಯಾರಿಂದಲೋ ಪಾಸ್ ಪಡೆದು ಹೋಗಿದ್ದಾರೆ. ಸಂಸತ್ ಸದಸ್ಯರೊಬ್ಬರಿಂದ ಪಾಸ್ ಪಡೆದಿದ್ದಾರೆ ಎನ್ನಲಾಗಿದೆ. ಭದ್ರತಾ ಸಿಬ್ಬಂದಿ ಸರಿಯಾಗಿ ಅವರನ್ನು ತಪಾಸಣೆ ಮಾಡಿಲ್ಲ ಅನ್ಸತ್ತೆ. ಸಚಿವರಿಗೆ ಸೇರಿ ಎಲ್ಲರಿಗೂ ತಪಾಸಣೆ ಮಾಡ್ತಾರೆ. ತಪಾಸಣೆ ಮಾಡಿದರೂ ಹೇಗೆ ಸ್ಮೋಕ್ ಸ್ಪ್ರೇ ಮಾಡಿದ್ರು?. ನಾನು ಅನುಮಾನ ವ್ಯಕ್ತಪಡಿಸ್ತಿಲ್ಲ. ಇಲ್ಲೂ ಕೂಡಾ ನಾವೆಲ್ಲರೂ ಎಚ್ಚರಿಕೆಯಿಂದ ಇರಬೇಕು. ಪಾಸ್ ಪಡೆದು ಒಳ್ಳೆಯವ್ರೂ ಬರಬಹುದು, ಕೆಟ್ಟವರೂ ಬರಬಹುದು, ಉಗ್ರರೂ ಬರಬಹುದು. ಹಿಂದೆ ಸಂಸತ್ ನಲ್ಲಿ ಉಗ್ರರು ನುಗ್ಗಿದ್ರು ಎಂದು ಸಿಎಂ ತಿಳಿಸಿದ್ದಾರೆ. ಗೃಹ ಸಚಿವರು (Home Minister) ಅಧಿವೇಶನ ಕ್ಕೆ ಭಾರೀ ಪೊಲೀಸ್ ಬಂದೋಬಸ್ತ್ ಕೊಡಲು ಹೇಳ್ತೀನಿ. ಸ್ಪೀಕರ್ ಅವರು ಕೂಡಾ ನಿಮ್ಮ…
Author: AIN Author
ನವದೆಹಲಿ: ಕಲಾಪ ನಡೆಯುತ್ತಿರುವಾಗಲೇ ಭದ್ರತಾ ಲೋಪ (Security Breach) ಸಂಭವಿಸಿದ ಬೆನ್ನಲ್ಲೇ ಲೋಕಸಭಾ ಸ್ಪೀಕರ್ (Lok Sabha Speaker) ಓಂ ಬಿರ್ಲಾ (Om Birla) ಅವರು ವೀಕ್ಷಕರಿಗೆ ನೀಡುವ ಪಾಸ್ ಅನ್ನು ನಿರ್ಬಂಧಿಸಿದ್ದಾರೆ. ಇಂದು ಇಬ್ಬರು ಲೋಕಸಭಾ (Lok Sabha) ಗ್ಯಾಲರಿಯಿಂದ ಕಲಾಪ ನಡೆಯುವ ವೇಳೆ ಮೇಲಿನಿಂದ ಜಿಗಿದು ಸ್ಮೋಕ್ ಬಾಂಬ್ ಸಿಡಿಸಿದ್ದರು. ಈ ಘಟನೆಯಿಂದ ಎಚ್ಚೆತ್ತು ಬಿರ್ಲಾ ಅವರು ವೀಕ್ಷಕರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದಾರೆ. ಇಂದು ಇಬ್ಬರು ಲೋಕಸಭಾ (Lok Sabha) ಗ್ಯಾಲರಿಯಿಂದ ಕಲಾಪ ನಡೆಯುವ ವೇಳೆ ಮೇಲಿನಿಂದ ಜಿಗಿದು ಸ್ಮೋಕ್ ಬಾಂಬ್ ಸಿಡಿಸಿದ್ದರು. ಈ ಘಟನೆಯಿಂದ ಎಚ್ಚೆತ್ತು ಬಿರ್ಲಾ ಅವರು ವೀಕ್ಷಕರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದಾರೆ. ಒಳ ನುಗ್ಗಿದ ಇಬ್ಬರನ್ನು ಬಂಧಿಸಲಾಗಿದೆ ಮತ್ತು ಅವರ ಬಳಿಯಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊರಗಡೆ ಪ್ರತಿಭಟನೆ ನಡೆಸಿದ ಇಬ್ಬರನ್ನು ಬಂಧಿಸಲಾಗಿದೆ ಎಂದು ಓಂ ಬಿರ್ಲಾ ಹೇಳಿದ್ದಾರೆ. ಸಂಸತ್ ಒಳ ಪ್ರವೇಶಕ್ಕೆ ಪಾಸ್ ಇಲ್ಲದೇ ಯಾರನ್ನು ಬಿಡಲ್ಲ. ಮೂರು ಹಂತದಲ್ಲಿ ತಪಾಸಣೆ ಮಾಡಿಯೇ ಬಿಡಲಾಗುತ್ತದೆ. ಪೆನ್,…
‘ಅಣ್ಣ ತಂಗಿ’ ಸೀರಿಯಲ್ ನಟಿ ಅಖಿಲಾ ಪ್ರಕಾಶ್ (Akhila Prakash) ಅವರು ದಾಂಪತ್ಯ ಜೀವನಕ್ಕೆ (Wedding) ಕಾಲಿಟ್ಟಿದ್ದಾರೆ. ಭರತ್ ಕಾಂತ್ ಎಂಬುವವರ ಜೊತೆ ಅಖಿಲಾ ಹೊಸ ಬಾಳಿಗೆ ಕಾಲಿಟ್ಟಿದ್ದು, ಹೊಸ ಜೋಡಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಕೊಡಗಿನ ಕುವರಿ ಅಖಿಲಾ ಪ್ರಕಾಶ್ ಮತ್ತು ಭರತ್ ಕಾಂತ್ (Bharath Kanth) ಹಲವು ವರ್ಷಗಳು ಪ್ರೀತಿಸಿ, ಗುರುಹಿರಿಯರ ಸಮ್ಮತಿ ಪಡೆದು ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ಕೆಲ ತಿಂಗಳುಗಳ ಹಿಂದೆ ಇಬ್ಬರೂ ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. ಇದೀಗ ಮದುವೆಯಾಗಿದ್ದಾರೆ. ಅಖಿಲಾ ಪ್ರಕಾಶ್ ಮದುವೆಗೆ ‘ಅಣ್ಣ ತಂಗಿ’ (Anna Thangi Serial) ಸೀರಿಯಲ್ ತಂಡ ಮತ್ತು ಹಲವು ಕಿರುತೆರೆ ಕಲಾವಿದರು ಆಗಮಿಸಿ ಹೊಸ ಜೋಡಿಗೆ ಶುಭಹಾರೈಸಿದ್ದಾರೆ.
ಬೆಳಗಾವಿ : ರಾಜ್ಯದಲ್ಲಿ ನಡೆಯುತ್ತಿವೆ ಎನ್ನಲಾದ ಕಾನೂನು ಬಾಹಿರ ಭ್ರೂಣ ಪರೀಕ್ಷೆ ಮತ್ತು ಭ್ರೂಣ ಹತ್ಯೆ ಪ್ರಕರಣಗಳನ್ನು ಹತ್ತಿಕ್ಕುವ ನಿಟ್ಟಿನಲ್ಲಿ ವಿಶೇಷವಾದ ನೀತಿಯೊಂದನ್ನು ಜಾರಿ ಮಾಡಲು ಸರ್ಕಾರದಿಂದ ಚಿಂತನೆ ನಡೆದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು. ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಭಾರತಿ ಶೆಟ್ಟಿ, ಶರವಣ ಟಿ.ಎ., ಬಿ.ಎಂ.ಫಾರೂಖ್, ಸಿ.ಎನ್.ಮಂಜೇಗೌಡ ಅವರು ವಿಧಾನ ಪರಿಷತನಲ್ಲಿ ಗಮನ ಸೆಳೆಯುವ ಸೂಚನೆಯಡಿ ಕೇಳಿದ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಕಾನೂನು ಬಾಹಿರ ಭ್ರೂಣ ಪರೀಕ್ಷೆ ಮತ್ತು ಭ್ರೂಣ ಹತ್ಯೆ ಪ್ರಕರಣಗಳನ್ನು ಹೇಗೆ ಬೇಧಿಸಬಹುದು ಎಂಬುದರ ಬಗ್ಗೆ ಆರೋಗ್ಯ ಇಲಾಖೆಯು ಎಚ್ಚೆತ್ತುಕೊಂಡು ಗಂಭೀರ ಚಿಂತನೆ ನಡೆಸಿದೆ. https://ainlivenews.com/know-how-to-take-care-of-gums-and-teeth-in-winter-here-are-the-tips/ ಈ ಬಗ್ಗೆ ಅಂಕಿಸಂಖ್ಯೆಗಳನ್ನು ಸಂಗ್ರಹಿಸಿ, ಗುಪ್ತಚರವಾಗಿ ಮಾಹಿತಿ ಪಡೆದು ಇಲಾಖೆಯ ಕಾರ್ಯಾಚರಣೆಯನ್ನು ಬಲಗೊಳಿಸಲಾ ಗುವುದು ಎಂದು ಅವರು ತಿಳಿಸಿದರು. ಜಿಲ್ಲೆಯಲ್ಲಿ ಪಿಸಿಪಿಎನ್ಡಿಸಿ ಸೆಲ್ಗಳು ಕಾಲಕಾಲಕ್ಕೆ ಸಭೆ ನಡೆಸಿ ಜಿಲ್ಲಾ ಹಂತದಲ್ಲಿ ಕಾನೂನು ಬಾಹಿರ ಭ್ರೂಣ ಪರೀಕ್ಷೆ ಮತ್ತು ಭ್ರೂಣ ಹತ್ಯೆ ಪ್ರಕರಣ ತಡೆಗೆ ಕಾರ್ಯಪ್ರವೃತ್ತವಾಗಿವೆ.…
ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿದ್ದ ‘ಕಿರಿಕ್ ಪಾರ್ಟಿ’ ತೆರೆಕಂಡು ಬರೋಬ್ಬರಿ ಏಳು ವರ್ಷಗಳಾಗಿವೆ. ಅದರ ಯಶಸ್ಸಿನ ಬಳಿಕ ಇಡೀ ತಂಡ ಬೇರೆ ಬೇರೆ ಪ್ರಾಜೆಕ್ಟ್ಗಳಲ್ಲಿ ತೊಡಗಿಸಿಕೊಂಡಿದ್ದು ಗೊತ್ತೇ ಇದೆ. ಇದೀಗ ಅವರೆಲ್ಲರೂ ಮತ್ತಷ್ಟು ಖ್ಯಾತರಾಗಿದ್ದಾರೆ. ಉನ್ನತ ಮಟ್ಟದಲ್ಲಿದ್ದಾರೆ… ಆದರೆ, ಆ ರೀತಿಯ ಯೂತ್ ಕಾಮಿಡಿ ಸ್ಟೋರಿ ಮತ್ತೊಂದು ಬರಲಿಲ್ಲವಲ್ಲ ಎಂಬ ಕೊರಗನ್ನು ನೀಗಿಸಲು ಮತ್ತದೇ ಬರಹಗಾರರ ತಂಡ ಸಜ್ಜಾಗಿದೆ. ಅವರೀಗ ‘ಬ್ಯಾಚುಲರ್ ಪಾರ್ಟಿ’ ಕೊಡಲು ಸಜ್ಜಾಗಿದ್ದಾರೆ ಎಂಬುದು ವಿಶೇಷ. ಹೌದು. ‘ಕಿರಿಕ್ ಪಾರ್ಟಿ’ಯ ಬರಹಗಾರ ಅಭಿಜಿತ್ ಮಹೇಶ್, ಈಗಾಗಲೇ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಸೇರಿದಂತೆ ಅನೇಕರ ಸಿನಿಮಾಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ನಿರ್ದೇಶಕರಾಗಿ ಬಡ್ತಿ ಪಡೆದಿದ್ದು, ‘ಬ್ಯಾಚುಲರ್ ಪಾರ್ಟಿ’ಗೆ ಆಕ್ಷನ್ ಕಟ್ ಹೇಳಿದ್ದಾರೆ. ಕಚಗುಳಿಯಿಡುವ ಸಂಭಾಷಣೆಗೆ ಖ್ಯಾತರಾಗಿರುವ ಅಭಿ, ತಮ್ಮ ಮೊದಲ ಸಿನಿಮಾದಲ್ಲಿ ಯಾವ ರೀತಿ ಮೋಡಿ ಮಾಡಲಿದ್ದಾರೆ ಎಂಬುದಕ್ಕೆ ಸಿನಿಮಾ ಬಿಡುಗಡೆಯವರೆಗೂ ಕಾಯಬೇಕು. ಅದಕ್ಕೂ ಮುನ್ನ ‘ಬ್ಯಾಚುಲರ್ ಪಾರ್ಟಿ’ಯ ಮೊದಲ ಝಲಕ್ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ದಿಗಂತ್, ಲೂಸ್…
ಬೆಂಗಳೂರು: ಪ್ರತಾಪ್ ಸಿಂಹ (Prathap Simha) ಬಹಳ ಬುದ್ಧಿವಂತ. ಅರ್ಯಾಕೆ ಇಂಥವರಿಗೆ ಪಾಸ್ ಕೊಟ್ಟರೋ? ಅವರ ಹೆಸರು ಹೇಳಲು ಇಲ್ಲಿ ನನಗೆ ಇಷ್ಟವಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ್ದಾರೆ. ಕಲಾಪ ನಡೆಯುತ್ತಿದ್ದ ಹೊತ್ತಿನಲ್ಲೇ ಪಾರ್ಲಿಮೆಂಟ್ (Parliament) ಒಳಗೆ ಕಲರ್ ಸ್ಮೋಕ್ ಸಿಡಿಸಿದ ಯುವಕರಿಗೆ ಪ್ರತಾಪ್ ಸಿಂಹ ಕಚೇರಿಯಿಂದಲೇ ಪಾಸ್ ವಿತರಣೆಯಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿ, ಎಲ್ಲರೂ ಫೋನ್ ಮಾಡುತ್ತಿದ್ದಾರೆ. ಏನು? ಯಾಕೆ? ಅಂತ ಕೇಳುತ್ತಿದ್ದಾರೆ. ನಾನು ಟಿವಿಯಲ್ಲಿ ನೋಡಿದೆ. ಮೇಲಿಂದಲೇ ಅವರು ಹಾರಿದ್ದಾರೆ. ಸಂಸದರೆಲ್ಲ ಇಲಿಗಳಂತೆ ಬಚ್ಚಿಕೊಳ್ಳುತ್ತಿದ್ದಾರೆ. ನಮ್ಮ ಪ್ರತಿಪಕ್ಷದವರೇ ಇದರ ಹೊಣೆ ತೆಗೆದುಕೊಳ್ಳಬೇಕು. ಅವರು ಏನು ಬುದ್ಧಿವಾದ ಹೇಳುತ್ತಾರೋ ಹೇಳಲಿ ಎಂದು ಹರಿಹಾಯ್ದರು ಮೈಸೂರು ಮೂಲದ ಮನೋರಂಜನ್ ಹಾಗೂ ಸಾಗರ್ ಶರ್ಮಾ ಎಂಬ ಇಬ್ಬರು ಯುವಕರು ಕಲಾಪದ ವೇಳೆ ನುಗ್ಗಿರುವುದು ಎಂದು ತಿಳಿದು ಬಂದಿದೆ. ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.…
ಬೆಳಗಾವಿ: ಬಿಡಿಎ, ಬಿಬಿಎಂಪಿ ಆಸ್ತಿಯನ್ನು ಯಾರೇ ಒತ್ತುವರಿ ಮಾಡಿದ್ದರೂ ಮುಲಾಜಿಲ್ಲದೆ ತೆರವಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ, ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ಪ್ರಶ್ನೆಗೆ ಅವರು ಉತ್ತರಿಸಿದರು. ಬಿಡಿಎ ಅಧೀನದಲ್ಲಿ ಇರುವ ಉದ್ಯಾನಗಳ ಸಂಖ್ಯೆ ಮತ್ತು ಉದ್ಯಾನಗಳ ಒತ್ತುವರಿಯ ಬಗ್ಗೆ ಕೇಳಿದ ಪ್ರಶ್ನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದರು. https://ainlivenews.com/know-how-to-take-care-of-gums-and-teeth-in-winter-here-are-the-tips/ ನಮ್ಮ ಸರ್ಕಾರ ಅಧಿಕಾರವಹಿಸಿಕೊಂಡ ತಕ್ಷಣ ಬೆಂಗಳೂರಿನ ಆಸ್ತಿಗಳನ್ನು ಹೊಸ ತಂತ್ರಜ್ಞಾನದ ಮೂಲಕ ಮ್ಯಾಪಿಂಗ್ ಕೆಲಸ ಮಾಡುತ್ತಿದೆ. ಒಂದಷ್ಟು ಆಸ್ತಿ ವ್ಯಾಜ್ಯಗಳು ನ್ಯಾಯಾಲಯದಲ್ಲಿವೆ. ಸರ್ಕಾರಿ ಆಸ್ತಿಗಳನ್ನು ಉಳಿಸಿ ಸಾರ್ವಜನಿಕರ ಉಪಯೋಗಕ್ಕೆ ಬಳಕೆ ಮಾಡಲಾಗುವುದು ಎಂದರು. ಒತ್ತುವರಿಯ ಬಗ್ಗೆ ನಿಮ್ಮ ಬಳಿ ನಿರ್ದಿಷ್ಟ ದಾಖಲೆಗಳು ಇದ್ದರೆ ಈಗಲೇ ಕೊಡಿ, ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ. ಯಾರನ್ನೂ ರಕ್ಷಣೆ ಮಾಡುವ ಸಂದರ್ಭ ಬರುವುದಿಲ್ಲ ಎಂದರು.
ಭೋಪಾಲ್ : ಮಧ್ಯಪ್ರದೇಶದ (Madhya Pradesh) ನೂತನ ಮುಖ್ಯಮಂತ್ರಿಯಾಗಿ ಡಾ.ಮೋಹನ್ ಯಾದವ್ (Mohan Yadav) ಅಧಿಕಾರ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿಯವರೊಂದಿಗೆ ಅವರ ಸಂಪುಟದ ಇಬ್ಬರು ಉಪಮುಖ್ಯಮಂತ್ರಿಗಳಾಗಿ ರಾಜೇಂದ್ರ ಶುಕ್ಲಾ ಮತ್ತು ಜಗದೀಶ್ ದಿಯೋರಾ ಕೂಡ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಮಂಗುಭಾಯಿ ಸಿ. ಪಟೇಲ್ ಪ್ರಮಾಣವಚನ ಬೋಧಿಸಿದರು. ಹದಿನೆಂಟು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರನ್ನು ಕೈ ಬಿಟ್ಟು ಬಿಜೆಪಿ ಹೈಕಮಾಂಡ್ (BJP High Command) ಮುಖ್ಯಮಂತ್ರಿ ಹುದ್ದೆಗೆ ಡಾ.ಮೋಹನ್ ಯಾದವ್ ಹೆಸರನ್ನು ಪರಿಗಣಿಸುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿತ್ತು. ಮೂರು ಬಾರಿ ಶಾಸಕರಾಗಿರುವ ಡಾ.ಮೋಹನ್ ಯಾದವ್ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ ಅಲ್ಲದೇ ಸಂಘದ ಜೊತೆಗೆ ಗುರಿತಿಸಿಕೊಂಡಿದ್ದಾರೆ. ಅಲ್ಲದೇ ರಾಜ್ಯದ ಜನಸಂಖ್ಯೆಯ 48% ಕ್ಕಿಂತ ಹೆಚ್ಚು ಹೊಂದಿರುವ ಇತರ ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯ ಪ್ರತಿನಿಧಿಸುತ್ತಿದ್ದಾರೆ. https://ainlivenews.com/know-how-to-take-care-of-gums-and-teeth-in-winter-here-are-the-tips/ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi), ಗೃಹ ಸಚಿವ ಅಮಿತ್ ಶಾ (Amit…
ಚಿಕ್ಕಬಳ್ಳಾಪುರ : ಜಿಲ್ಲೆಯ ಚೇಳೂರು ತಾಲ್ಲೂಕಿನ ಚಾಕವೇಲು ಗ್ರಾಮದ ಮುಖ್ಯರಸ್ತೆ ವೃತ್ತದಲ್ಲಿ ಕೆಟ್ಟು ನಿಂತಿರುವ ಹೈಮಾಸ್ಕ್ ಲೈಟ್ ರಿಪೇರಿ ಮಾಡಲು ಹೋಗಿದ್ದ ಕಾರ್ಮಿಕ 240 ವೋಲ್ಟ್ ವಿದ್ಯುತ್ ತಂತಿ ಮೇಲೆ ಪ್ರಜ್ಞೆ ತಪ್ಪಿ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಚಾಕವೇಲು ಗ್ರಾಮ ಪಂಚಾಯತಿ ವತಿಯಿಂದ ವಿದ್ಯುತ್ ಬಲ್ಫ್ ಗಳು ರಿಪೇರಿ ಮಾಡಲು ಗುತ್ತಿಗೆದಾರರಾದ ಶಮೀರ್ ಗೆ ಗುತ್ತಿಗೆ ನೀಡಿದ್ದು, ಗುತ್ತಿಗೆ ದಾರರು ಹೈಮಾಸ್ಕ್ ಲೇಟ್ ರಿಪೇರಿ ಮಾಡಿದ ನಂತರ ವಿದ್ಯುತ್ ಸಂಪರ್ಕವನ್ನು ಮಾಡಲು ಚಾಕವೇಲು ಗ್ರಾಮದ ಉಮಾಶಂಕರ್ ನನ್ನು ಬಳಸಿಕೊಂಡು ವಿದ್ಯುತ್ ಕಂಬವನ್ನು ಹತ್ತಿ ತಂತಿ ಸಂಪರ್ಕ ನೀಡಲು ಸೂಚಿಸಿದ್ದು,ಉಮಾಶಂಕರ್ ತಂತಿ ಸಂಪರ್ಕ ಕೊಡಲು ಹೋಗಿ ಗ್ರಾಮದಲ್ಲಿ ಹಾದುಹೋಗಿರುವ 240 ವೋಲ್ಟ್ ತಂತಿಯನ್ನು ಮುಟ್ಟಿ ಪ್ರಜ್ಞೆ ತಪ್ಪಿ ತಂತಿ ಮೇಲೆ ನೇತಾಡುತ್ತಿರುವುದನ್ನು ಗ್ರಾಮಸ್ಥರು ನೋಡಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ ತಕ್ಷಣ ಚಾಕವೇಲು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ನಂತರ ಬಾಗೇಪಲ್ಲಿ ಆಸ್ಪತ್ರೆಗೆ ಕರೆದೋಯ್ಯಲಾಗಿ ಆಸ್ಪತ್ರೆಯಲ್ಲಿ, https://ainlivenews.com/know-how-to-take-care-of-gums-and-teeth-in-winter-here-are-the-tips/ ಚಿಕಿತ್ಸೆ ಪಡೆದು ಪ್ರಾಣಕ್ಕೆ…
ಬೆಂಗಳೂರು: ಟಿಕೆಟ್ ಪಡೆಯದೆ ಪ್ರಯಾಣ ಮಾಡ್ತಿದ್ದವರಿಗೆ BMTC ಶಾಕ್ ನೀಡಿದೆ. ಮಹಿಳೆಯರಿಗೆ ಮೀಸಲಾದ ಸೀಟ್ ನಲ್ಲಿ ಕೂತು ಪ್ರಯಾಣಿಸುವವರಿಗೂ ದಂಡ ವಿಧಿಸಿದ ಬಿಎಂಟಿಸಿ ನವೆಂಬರ್ ನಲ್ಲಿ ಟಿಕೆಟ್ ರಹಿತ ಪ್ರಯಾಣಿಕರಿಗೆ ವಿಧಿಸಿದ ದಂಡದಿಂದ BMTC ಬೊಕ್ಕಸಕ್ಕೆ ಬಿತ್ತು 6,68,610 ರೂ ಮಹಿಳಾ ಪ್ರಯಾಣಿಕರಲ್ಲಿ ಮೀಸಲಿರಿಸಿದ್ದ ಸೀಟ್ ನಲ್ಲಿ ಪ್ರಯಾಣಿಸಿದ್ದ 438 ಪುರುಷರಿಗೂ ದಂಡ* 16,421ಟ್ರಿಪ್ ಗಳಲ್ಲಿ ತಪಾಸಣೆ ಮಾಡಿದ್ದ ಚೆಕ್ಕಿಂಗ್ ಇನ್ಸ್ಪೆಕ್ಟರ್ ಗಳು ಈ ವೇಳೆ 3,329ಮಂದಿ ಟಿಕೆಟ್ ರಹಿತ ಪ್ರಯಾಣ ಪತ್ತೆ ಇದೇ ವೇಳೆ ಬೇಜವಾಬ್ದಾರಿ 1,062 ನಿರ್ವಾಹಕರ ವಿರುದ್ಧವೂ ನಿಗಮ ದಂಡಾಸ್ತ್ರ ಪ್ರಯೋಗ ಮಹಿಳಾ ಸೀಟ್ ನಲ್ಲಿ ಕುಳಿತ ಪ್ರಯಾಣಿಕರಿಂದ 43800ರೂ ದಂಡ ವಸೂಲಿ ಮೋಟಾರು ವಾಹನ ಕಾಯ್ದೆ 1988ರ ಕಾಲಂ 177&94 ರ ಅನ್ವಯದಂತೆ ದಂಡ ನವೆಂಬರ್ ತಿಂಗಳಲ್ಲಿ ಬಿಎಂಟಿಸಿ ಬೊಕ್ಕಸಕ್ಕೆ ಬಿತ್ತು 7,12,410 ರೂ