ಜೈಪುರ: ಇದೇ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಭಜನ್ಲಾಲ್ ಶರ್ಮಾ (Bhajanlal Sharma) ಅವರನ್ನು ರಾಸ್ಥಾನದ ನೂತನ ಸಿಎಂ ಆಯ್ಕೆ ಮಾಡುವ ಮೂಲಕ ಬಿಜೆಪಿ ಅಚ್ಚರಿ ಮೂಡಿಸಿದೆ. ಈ ಬೆನ್ನಲ್ಲೇ ರಾಜವಂಶಸ್ಥೆ ದಿಯಾ ಕುಮಾರಿ (Diya Kumari) ಹಾಗೂ ಹಿರಿಯ ನಾಯಕ ಪ್ರೇಮ್ಚಂದ್ ಬೈರ್ವಾ ಅವರನ್ನ ಉಪಮುಖ್ಯಮಂತ್ರಿಗಳಾಗಿ ನೇಮ ಮಾಡಿದೆ. ಯಾರೀ ರಾಜಕುಮಾರಿ? ರಾಜ್ಯಸ್ಥಾನದ ನೂತನ ಉಪಮುಖ್ಯಮಂತ್ರಿಗಳಲ್ಲಿ (Rajasthan DCM) ಒಬ್ಬರಾದ ದಿಯಾ ಕುಮಾರಿ ಅವರು 1970ರ ಜನವರಿ 30 ರಂದು ರಾಜಮನೆತನದಲ್ಲಿ (Royal Family) ಜನಿಸಿದರು. ಅವರ ಅಜ್ಜ ಮಾನ್ ಸಿಂಗ್ II (2ನೇ ಮಾನ್ಸಿಂಗ್) ಜೈಪುರದ ಕೊನೆಯ ಆಡಳಿತ ಮಹರಾಜರಾಗಿದ್ದರು. ಇನ್ನೂ ದಿಯಾ ಕುಮಾರಿ ಅವರ ತಂದೆ ಬ್ರಿಗೇಡಿಯರ್ ಸವಾಯಿ ಭವಾನಿ ಸಿಂಗ್ ಅವರಿಗೆ 1971ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಹೋರಾಡಿದ ಶೌರ್ಯಕ್ಕಾಗಿ ಮಹಾವೀರ ಚಕ್ರ ನೀಡಿ ಗೌರವಿಸಲಾಗಿತ್ತು. https://ainlivenews.com/see-how-hot-and-hot-this-cold-can-be/ ದಿಯಾ ಕುಮಾರಿ ಅವರು ಮಹಾರಾಣಿ ಗಾಯತ್ರಿ ದೇವಿ ಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣ ಪೂರ್ಣಗೊಳಿಸಿದರು. ಜೈಪುರದ ಮಹಾರಾಣಿ ಕಾಲೇಜಿನಲ್ಲಿ ಕಾಲೇಜು…
Author: AIN Author
ಪ್ರಶಾಂತ್ ನೀಲ್ (Prashant Neel) ಹಾಗೂ ಪ್ರಭಾಸ್ ಕಾಂಬಿನೇಷನ್ ನ ಸಲಾರ್ ಸಿನಿಮಾದ ಮೊದಲ ಹಾಡು (Song) ಇಂದು ಬಿಡುಗಡೆ ಆಗಲಿದೆ. ಒಟ್ಟು ಐದು ಭಾಷೆಗಳಲ್ಲಿ ಹಾಡು ಬಿಡುಗಡೆಯಾಗಲಿದ್ದು, ಮೊದಲ ಹಾಡಿಗಾಗಿ ಅಭಿಮಾನಿಗಳು ತುದಿಗಾಲಿಲ್ಲ ಕಾಯುತ್ತಿದ್ದಾರೆ. ಬಿಡುಗಡೆಯ ಸಮಯವನ್ನು ಹೊಂಬಾಳೆ ಸಂಸ್ಥೆ ತಿಳಿಸದೇ ಇದ್ದರೂ, ಇಂದು ಪಕ್ಕಾ ಹಾಡು ಬಿಡುಗಡೆ ಮಾಡುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ. ಪ್ರಭಾಸ್ ಅಲ್ಲದೇ, ಸಲಾರ್ ಸಿನಿಮಾದಲ್ಲಿ ಮಲಯಾಳಂನ ಹೆಸರಾಂತ ನಟ ಪೃಥ್ವಿರಾಜ್ ಸುಕುಮಾರನ್ (Pruthviraj Sukumaran) ಹೊಸಬಗೆಯ ಪಾತ್ರ ಮಾಡಿದ್ದಾರೆ. ಐದು ಭಾಷೆಗಳಲ್ಲಿ ಈ ಸಿನಿಮಾ ಮೂಡಿ ಬಂದಿದ್ದು ವಿಶೇಷವೆಂದರೆ ತಮ್ಮ ಪಾತ್ರಕ್ಕೆ ಐದೂ ಭಾಷೆಗಳಲ್ಲಿ ತಾವೇ ಡಬ್ (Dubbing) ಮಾಡಿದ್ದಾರಂತೆ ಪೃಥ್ವಿರಾಜ್ ಈಗಾಗಲೇ ಸಿನಿಮಾ ರಿಲೀಸ್ ಗೆ ಸರ್ವಸಿದ್ಧತೆ ನಡೆದಿದೆ. ಈ ನಡುವೆ ಸಲಾರ್ ಸಿನಿಮಾಗೆ ಪ್ರಾದೇಶಿಕ ಸೆನ್ಸಾರ್ (Censor) ಮಂಡಳಿಯ ಪ್ರಮಾಣ ಪತ್ರವನ್ನು ನೀಡಿದೆ. ತೀವ್ರಗತಿಯ ಸಾಹಸ ಸನ್ನಿವೇಶಗಳು ಇರುವ ಕಾರಣದಿಂದಾಗಿ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ಸೆನ್ಸಾರ್ ಮಂಡಳಿ ನೀಡಿದೆ. ಭಾರತದಲ್ಲಿನ…
ನವದೆಹಲಿ: ಅಧಿವೇಶನ (Session) ನಡೆಯುತ್ತಿರುವಾಗಲೇ ಸಂಸತ್ʼನಲ್ಲಿ ಭದ್ರತಾ ಲೋಪ ನಡೆದಿದೆ. ಲೋಕಸಭಾ ವೀಕ್ಷಕರ ಗ್ಯಾಲರಿಯಿಂದ ಒಬ್ಬ ವ್ಯಕ್ತಿ ಮೇಲಿನಿಂದ ಜಿಗಿದಿದ್ದಾನೆ. ಕೂಡಲೇ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದಿದ್ದಾರೆ. https://ainlivenews.com/know-how-to-take-care-of-gums-and-teeth-in-winter-here-are-the-tips/ ಸಂಸತ್ ಮೇಲೆ ದಾಳಿ ನಡೆದು 22 ವರ್ಷವಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಲಾಗಿತ್ತು. ಸಂಸತ್ ಒಳ ಪ್ರವೇಶಕ್ಕೆ ಪಾಸ್ ಇಲ್ಲದೇ ಯಾರನ್ನು ಬಿಡಲ್ಲ. ಹೀಗಿರುವಾಗ ಇಷ್ಟೊಂದು ದೊಡ್ಡ ಮಟ್ಟದ ಭದ್ರತಾ ಲೋಪ ನಡೆದಿದ್ದು ಹೇಗೆ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.
‘ಅಣ್ಣ ತಂಗಿ’ ಸೀರಿಯಲ್ ನಟಿ ಅಖಿಲಾ ಪ್ರಕಾಶ್ (Akhila Prakash) ಅವರು ದಾಂಪತ್ಯ ಜೀವನಕ್ಕೆ (Wedding) ಕಾಲಿಟ್ಟಿದ್ದಾರೆ. ಭರತ್ ಕಾಂತ್ ಎಂಬುವವರ ಜೊತೆ ಅಖಿಲಾ ಹೊಸ ಬಾಳಿಗೆ ಕಾಲಿಟ್ಟಿದ್ದು, ಹೊಸ ಜೋಡಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಕೊಡಗಿನ ಕುವರಿ ಅಖಿಲಾ ಪ್ರಕಾಶ್ ಮತ್ತು ಭರತ್ ಕಾಂತ್ (Bharath Kanth) ಹಲವು ವರ್ಷಗಳು ಪ್ರೀತಿಸಿ, ಗುರುಹಿರಿಯರ ಸಮ್ಮತಿ ಪಡೆದು ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ಕೆಲ ತಿಂಗಳುಗಳ ಹಿಂದೆ ಇಬ್ಬರೂ ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. ಇದೀಗ ಮದುವೆಯಾಗಿದ್ದಾರೆ. ಅಖಿಲಾ ಪ್ರಕಾಶ್ ಮದುವೆಗೆ ‘ಅಣ್ಣ ತಂಗಿ’ (Anna Thangi Serial) ಸೀರಿಯಲ್ ತಂಡ ಮತ್ತು ಹಲವು ಕಿರುತೆರೆ ಕಲಾವಿದರು ಆಗಮಿಸಿ ಹೊಸ ಜೋಡಿಗೆ ಶುಭಹಾರೈಸಿದ್ದಾರೆ.
ತಿರುವನಂತಪುರಂ: ಅಯ್ಯಪ್ಪನ (Ayyappa) ದರ್ಶನಕ್ಕೆಂದೇ 48 ದಿನಗಳವರೆಗೂ ವ್ರತ ಆಚರಿಸಿ ಶಬರಿಮಲೆಗೆ (Sabarimala) ತೆರಳಿದ್ದ ಕರ್ನಾಟಕ (Karnatka) ಸೇರಿ ಹಲವು ರಾಜ್ಯಗಳ ಭಕ್ತರು, ಅಯ್ಯಪ್ಪನ ದರ್ಶನ ಮಾಡಲಾಗದೆಯೇ ಮರಳುತ್ತಿದ್ದಾರೆ. ಭಕ್ತರ ನಿರ್ವಹಣೆ, ಭಕ್ತರ ವಾಹನಗಳ ನಿರ್ವಹಣೆಯಲ್ಲಿ ಟ್ರಾವಂಕೂರು ದೇವಸ್ಥಾನ ಮಂಡಳಿ (Travancore Devaswom Board) ಮತ್ತು ಪೊಲೀಸರು ಪೂರ್ಣ ವಿಫಲರಾಗಿದ್ದು, https://twitter.com/MahaRathii/status/1734631520248180749?ref_src=twsrc%5Etfw%7Ctwcamp%5Etweetembed%7Ctwterm%5E1734631520248180749%7Ctwgr%5E00ec421c0e355497bae00bc08db0d04062161e3c%7Ctwcon%5Es1_&ref_url=https%3A%2F%2Fpublictv.in%2Fpoor-management-lack-of-basic-arrangements-pilgrims-return-without-entering-sabarimala%2F ಕೇರಳ ಸರ್ಕಾರದ (Kerala Government) ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ದೇವರ ದರ್ಶನಕ್ಕೆ ಭಕ್ತರು ಹಲವು ಗಂಟೆಗಳ ಕಾಲ ಅನ್ನ, ನೀರು ಇಲ್ಲದೇ ಸರದಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ. ಅವ್ಯವಸ್ಥೆ ಪ್ರಶ್ನಿಸಿದ್ದಕ್ಕೆ ಪೊಲೀಸರು ಭಕ್ತರ ಮೇಲೆಯೇ ಹಲ್ಲೆ ನಡೆಸಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದೆ. https://twitter.com/pratheesh_Hind/status/1734560366288589109?ref_src=twsrc%5Etfw%7Ctwcamp%5Etweetembed%7Ctwterm%5E1734560366288589109%7Ctwgr%5E00ec421c0e355497bae00bc08db0d04062161e3c%7Ctwcon%5Es1_&ref_url=https%3A%2F%2Fpublictv.in%2Fpoor-management-lack-of-basic-arrangements-pilgrims-return-without-entering-sabarimala%2F ಕಣ್ಣೀರಿಟ್ಟ ಬಾಲಕ: ನೀಲಕ್ಕಲ್ನಲ್ಲಿ ತಂದೆಯಿಂದ ತಪ್ಪಿಸಿಕೊಂಡ ಪುಟ್ಟ ಬಾಲಕನೊಬ್ಬ ಬಸ್ಸಿನಲ್ಲೇ ತಂದೆಯನ್ನು ಹುಡುಕಿಕೊಡುವಂತೆ ಕಣ್ಣೀರೀಟ್ಟು ಕೈಮುಗಿದು ಬೇಡಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ. ಬಾಲಕ ಕಣ್ಣೀರಿಟ್ಟ ಕೆಲ ಹೊತ್ತಿನಲ್ಲೇ ಆತನ ತಂದೆ ವಾಹನದ ಬಳಿ ಪುತ್ರನನ್ನು ಸಂತೈಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ.
ಮಂಡ್ಯ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ರಾಡ್ʼನಿಂದ ಹೊಡೆದು ಕೊಲೆ ಮಾಡಿದ್ದಾನೆ. ಮಂಡ್ಯದ ಮಳವಳ್ಳಿ ತಾಲೂಕಿನ ದೇಶುವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಧುಶ್ರೀ (32) ಎಂಬವರನ್ನು ಮಹದೇವ ಎಂಬಾತ ಕೊಂದು ಹಾಕಿದ್ದಾನೆ. ಗಂಡ-ಹೆಂಡತಿ ನಡುವೆ ಆಗಾಗ ಜಗಳ ಸಾಮಾನ್ಯವಾಗಿತ್ತು. https://ainlivenews.com/know-how-to-take-care-of-gums-and-teeth-in-winter-here-are-the-tips/ ಆದರೆ, ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಮಂಗಳವಾರ ತಡರಾತ್ರಿ ತಾರಕಕ್ಕೇರಿತ್ತು. ಈ ವೇಳೆ ಸಿಟ್ಟಿಗೆದ್ದ ಮಹದೇವ ರಾಡ್ನಿಂದ ಪತ್ನಿಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಹೊಡೆತ ತಿಂದ ಹೆಂಡತಿ ಸತ್ತು ಹೋಗಿದ್ದಾಳೆ ಎಂಬುದು ತಿಳಿಯುತ್ತಿದ್ದಂತೆಯೇ ಭಯಗೊಂಡ ಮಹದೇವ ಕೂಡಲೇ ಕಿರುಗಾವಲು ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶ್ವದಲ್ಲೇ ಸದ್ದು ಮಾಡಿದ ಕರಾವಳಿಯ ಕಥೆ ‘ಕಾಂತಾರ ಚಿತ್ರದ ಬಗ್ಗೆ ಇದೀಗ ಹೊಸ ಅಪ್ ಡೇಟ್ ಕೂಡ ಕೊಟ್ಟಿದ್ಸಾರೆ ಕೇಳಿದ್ರೆ ಸಿನಿಮಾ ಪ್ರೇಕ್ಷಕರು ಫುಲ್ ಖುಷಿಯಾಗುತ್ತಾರೆ. ಸ್ಯಾಂಡಲ್ ವುಡ್ ಬಹುನಿರೀಕ್ಷೆಯ ಚಿತ್ರವಾಗಿದ್ದ ಹಾಗೂ ಕರಾವಳಿಯ ಕಥೆ ‘ಕಾಂತಾರ ಚಾಪ್ಟರ್-1’ರಲ್ಲಿ ನಿಮಗೂ ಅಭಿನಯಿಸೋ ಆಸೆ ಇದೆಯಾ? ಹಾಗಿದ್ರೆ ತಡ ಯಾಕೆ.. kantara.film ಒತ್ತಿ ನಿಮ್ಮ ಪ್ರತಿಭೆ ತೋರಿಸಿ. ಈ ಲಿಂಕ್ ಡಿಸೆಂಬರ್ 14ರವರೆಗೆ ಚಾಲ್ತಿಯಲ್ಲಿರುತ್ತದೆ. ರೀಲ್ಸ್ಗಳಿಗೆ ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ. ಸಿನಿಮಾದಲ್ಲಿ ನಟಿಸಲು 30ರಿಂದ 60 ವಯಸ್ಸಿನ ಪುರುಷರು ಬೇಕಾಗಿದ್ದಾರೆ ಹಾಗೆ 18ರಿಂದ 60 ವಯಸ್ಸಿನ ಮಹಿಳೆಯರು ಬೇಕಾಗಿದ್ದಾರೆ ಎಂದು ತಿಳಿಸಿದ್ದಾರೆ. ಡಿಸೆಂಬರ್ 14ರವರೆಗೆ ಈ ಲಿಂಕ್ ಚಾಲ್ತಿಯಲ್ಲಿರುತ್ತದೆ ಎಂದು ಸ್ವತಃ ರಿಷಬ್ ಶೆಟ್ಟಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು: ರಾಜಭವನಕ್ಕೆ ಬಾಂಬ್ ಬೆದರಿಕೆ ಸಂಬಂಧ ಆರೋಪಿ ಬಂಧನ ಪ್ರಕರಣ ಸಂಬಂಧ ಕೇಂದ್ರ ವಿಭಾಗ ಡಿಸಿಪಿ ಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ. ಡಿಸೆಂಬರ್ 11 ರಂದು ರಾತ್ರಿ 11.35 ಕ್ಕೆ ಎನ್ಐಎ ಗೆ ಅನಾಮಿಕ ಕರೆ ಮಾಡಿದ್ದ ರಾಜಭವನಕ್ಕೆ ಬಾಂಬ್ ಇಟ್ಟಿರೋದಾಗಿ ಹೇಳಿದ್ದ ಎನ್ಐಎ ಬೆಂಗಳೂರು ಕಂಟ್ರೋಲ್ ರೂಂ ಗೆ ಮಾಹಿತಿ ನೀಡಿದ್ರು ವಿಧಾನಸೌಧ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು ಯಾವುದೆ ಅನುಮಾನಸ್ಪದ ವಸ್ತು ಪತ್ತೆಯಾಗಿರಲಿಲ್ಲ ಪ್ರಕರಣ ಸಂಬಂಧ 34 ವರ್ಷದ ವ್ಯಕ್ತಿ ಬಂಧಿಸಲಾಗಿದೆ ಬೆಂಗಳೂರಿಗೆ ಬಂದು 10.30 ಕ್ಕೆ ನಡೆದುಕೊಂಡು ಹೋಗಿದ್ದ ಈ ವೇಳೆ ಮೊಬೈಲ್ ನಲ್ಲಿ ಎನ್ಐಎ ನಂಬರ್ ಪಡೆದು ಕರೆ ಮಾಡಿದ್ದ ಆ ಸಮಯದಲ್ಲಿ ಆತನಿಗೆ ಕರೆ ಮಾಡಬೇಕು ಅಂತ ಅನಿಸಿದೆ ಆಂದ್ರದ ಚಿತ್ತೂರಿನಿಂದ ಆರೋಪಿ ಬಂಧಿಸಲಾಗಿದೆ
ರಾಯ್ಸ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸುತ್ತಿರುವ, ಕೆ.ಎಂ.ರಘು (KM Raghu) ನಿರ್ದೇಶನದಲ್ಲಿ ಶ್ರೀ (Shri) ಹಾಗೂ ಪ್ರಣತಿ ನಾಯಕ- ನಾಯಕಿಯಾಗಿ ನಟಿಸಿರುವ ಜಸ್ಟ್ ಪಾಸ್ (Just Past) ಚಿತ್ರದ ಟೀಸರ್ (Teaser) ಡಿಸೆಂಬರ್ 10ರಂದು ದುಬೈನಲ್ಲಿ ನಡೆಯಲಿರುವ ದುಬೈ ದಸರಾ ಸಂಗೀತ ರಸಸಂಜೆ ಕಾರ್ಯಕ್ರಮದಲ್ಲಿ ಪ್ರಸಾರವಾಗಲಿದೆ. ನಾಡಿನ ಹೆಸರಾಂತ ಕಲಾವಿದರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಸಾವಿರಾರು ಕನ್ನಡಿಗರ ಸಮ್ಮುಖದಲ್ಲಿ ಜಸ್ಟ್ ಪಾಸ್ ಚಿತ್ರದ ಟೀಸರ್ ಪ್ರದರ್ಶನವಾಗಲಿದೆ. ಡಿಸೆಂಬರ್ 13 ರಂದು ಈ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಚಿತ್ರದಲ್ಲಿ ಇರುವುದೆಲ್ಲವ ಬಿಟ್ಟು, ಗಜಾನನ ಗ್ಯಾಂಗ್ ಖ್ಯಾತಿಯ ನಟ ಶ್ರೀ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಸ್ಕ್ರಿಪ್ಟ್ ಕೆಲಸಗಳೆಲ್ಲ ಮುಗಿಸಿ ಶೂಟಿಂಗ್ ಹೊರಡಲು ಸಿನಿಮಾ ತಂಡ ಸಕಲ ತಯಾರಿ ನಡೆಸಿಕೊಂಡಿದೆ. ಚಿತ್ರಕ್ಕೆ ಹೀರೋಯಿನ್ ಹುಡುಕಾಟಲ್ಲಿದ್ದ ಚಿತ್ರತಂಡಕ್ಕೆ ಹೊಸ ಪ್ರತಿಭೆ ಪ್ರಣತಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಡಾನ್ಸ್ ಕರ್ನಾಟಕ ಡಾನ್ಸ್, ಫ್ಯಾಮಿಲಿ ವಾರ್ ಸೀಸನ್ 2 ರನ್ನರ್ ಅಪ್ ಆಗಿರುವ ಪ್ರಣತಿ…
ಸ್ಯಾಂಡಲ್ವುಡ್ ನಲ್ಲಿ ಕರಾವಳಿ (Karavali) ಭಾಗದ ಸಂಸ್ಕೃತಿ ಸಾರುವ ಮತ್ತೊಂದು ಸಿನಿಮಾ ಸಖತ್ ಸದ್ದು ಮಾಡುತ್ತಿದೆ. ‘ಕರಾವಳಿ’ ಹೆಸರಿನಲ್ಲೇ ಹೊಸ ಸಿನಿಮಾ ಅನೌನ್ಸ್ ಆಗಿದ್ದು ಸದ್ಯ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗಿದೆ. ವಿಶೇಷ ಎಂದರೆ ಕರಾವಳಿ ಭಾಗದ ಬಗ್ಗೆಯೇ ಇರುವ ಈ ಸಿನಿಮಾದ ಟೀಸರ್ ಅನ್ನು ಮಂಗಳೂರಿನಲ್ಲಿ ಅದ್ದೂರಿಯಾಗಿ ಲಾಂಚ್ ಮಾಡಲಾಯಿತು. ಅಂದಹಾಗೆ ‘ಕರಾವಳಿ’ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕನಾಗಿ ನಟಿಸುತ್ತಿರುವ ಸಿನಿಮಾ. ಈ ಚಿತ್ರಕ್ಕೆ ಗುರುದತ್ ಗಾಣಿಗ (Gurudutt Ganiga) ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಗುರುದತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 2ನೇ ಸಿನಿಮಾ ಇದಾಗಿದೆ. ಸದ್ಯ ರಿಲೀಸ್ ಆಗಿರುವ ಟೀಸರ್ನಲ್ಲಿ ಜಗತ್ತಿಗೆ ಎಂಟ್ರಿ ಕೊಡುವ ಎರಡು ಹೊಸ ಜೀವಗಳನ್ನು ನೋಡಬಹುದು. ತಾಯಿ ಮಗುವಿಗೆ ಜನ್ಮ ನೀಡುತ್ತಿರುವ ದೃಶ್ಯದ ಜೊತೆಗೆಯೇ ಎಮ್ಮೆ ಕೂಡ ತನ್ನ ಮಗುವಿಗೆ ಜನ್ಮ ನೀಡುತ್ತಿದೆ. ಈ ಟೀಸರ್…