ಹುಬ್ಬಳ್ಳಿ: ರಸ್ತೆ ದಾಟುತ್ತಿರುವಾಗ ವೇಗವಾಗಿ ಬಂದ ಕಾರು ಚಾಲಕ, ಪಾದಾಚಾರಿಗೆ ಗುದ್ದಿದ ಪರಿಣಾಮ, ಆ ವ್ಯಕ್ತಿಯ ಕಾಲು ಮುರಿದು ರಕ್ತಗತವಾಗಿ ಗಂಭೀರವಾದ ಗಾಯವಾದ ಘಟನೆ ಇಂದು ಬೆಳಿಗ್ಗೆ, ಹುಬ್ಬಳ್ಳಿ ತಾಲ್ಲೂಕಿನ ಅದರಗುಂಚಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹೌದು,,, ಅಪರಿಚಿತ ಪಾದಾಚಾರಿಯೊಬ್ಬರು ರಸ್ತೆ ದಾಟುತ್ತಿರುವಾಗ ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ಹೊರಟ ಕಾರು ಚಾಲಕ ಆ ಪಾದಾಚಾರಿಗೆ ಗುದ್ದಿ ನಿಲ್ಲಿಸದೆ ಪರಾರಿಯಾಗಿದ್ದಾನೆ. ಪಾದಾಚಾರಿಗೆ ಗಂಭೀರವಾದ ಗಾಯವಾಗಿದ್ದು, ಅಲ್ಲೆ ಸ್ಥಳದಲ್ಲಿದ್ದ ಸಾರ್ವಜನಿಕರು ಪೊಲೀಸರಿಗೆ ಮತ್ತು ಆ್ಯಂಬುಲೆನ್ಸ್ ಗೆ ಕರೆ ಮಾಡಿ ತಿಳಿಸಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸರು ತನಿಖೆ ನಡೆಸಿದ್ದಾರೆ.
Author: AIN Author
ಬೆಂಗಳೂರು:- ಕಾಂಗ್ರೆಸ್ ನ ಪಂಚ ಗ್ಯಾರಂಟಿಗಳ ಪೈಕಿ ಕೊನೆಯ ಗ್ಯಾರಂಟಿಯಾದ ‘ಯುವನಿಧಿ’ ಯೋಜನೆಗೆ ಜನವರಿಯಲ್ಲಿ ಚಾಲನೆ ನೀಡಲಿದ್ದು, ಡಿಸೆಂಬರ್ ಮಾಸಾಂತ್ಯದ ವೇಳೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಯುವ ನಿಧಿ ಕಾರ್ಯಕ್ರಮ ಅರ್ಜಿ ಸಲ್ಲಿಸಲು ಡಿಸೆಂಬರ್ 21 ರಿಂದ ಅವಕಾಶ ನೀಡಲಾಗಿದ್ದು ಜನವರಿಯಿಂದ ಯುವನಿಧಿ ಯೋಜನೆ ಚಾಲನೆ ನೀಡಲಾಗುವುದು ಹಾಗೆ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಐದನೇ ಗ್ಯಾರಂಟಿಗೆ ಮುಹೂರ್ತ ನಿಗದಿಯಾಗಿದೆ. ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಿಸಲಾಗಿದ್ದ 5 ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೆ ಸರ್ಕಾರವು 4 ಗ್ಯಾರಂಟಿ ಯೋಜನೆಗಳನ್ನು ವ್ಯವಸ್ಥಿತವಾಗಿ ಜಾರಿಗೊಳಿಸಿದೆ. ಇದೀಗ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಜಾರಿಗೆ ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ಗೊತ್ತಾಗಿದೆ.
ಬೆಳಗಾವಿ: ವಿಧಾನಸಭೆ ಕಲಾಪ ಸದ್ದುಗದ್ದಲದಲ್ಲೇ ಕೊನೆಯಾಯ್ತು.ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆಯಾಯ್ತು.ಯತ್ನಾಳ್,ಜೆ.ಟಿ.ಪಾಟೀಲ್ ಸೇರಿದಂತೆ ಹಲವರು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ್ರು. ಮಹಿಳೆಯ ವಿವಸ್ತ್ರಗೊಳಿಸಿದ ಪ್ರಕರಣವೂ ಸದ್ದುಮಾಡ್ತು.. ಭ್ರೂಣಹತ್ಯೆಯ ಪ್ರಸ್ತಾಪವೂ ಆಯ್ತು.. ಪ್ರಶ್ನೋತ್ತರದ ವೇಳೆ ಹಲವರು ತಮ್ಮ ಕ್ಷೇತ್ರಗಳ ಸಮಸ್ಗೆಗಳ ಬಗ್ಗೆ ಪ್ರಸ್ತಾಪಿಸಿ ಪರಿಹಾರ ಕಂಡುಕೊಂಡ್ರು. ಕುಂದನಗರಿಯಲ್ಲಿ ಅರಂಭವಾಗಿರೋ ಚಳಿಗಾಲದ ಅಧಿವೇಶನದ ಮೊದಲ ದಿನವೇ ಉತ್ತರದ ಚರ್ಚೆಗೆ ಅವಕಾಶ ಕೊಡಿ ಎಂದು ಒತ್ತಾಯ ಮಾಡಲಾಯಿತು.ಆದ್ರೆ ಕೆಲವೊಂದು ವಿಷಯಗಳ ಸದ್ದುಗದ್ದಲದಲ್ಲಿ ಸದನ ಕದನವಾಗಿತ್ತು. ಆದ್ರೆ ಎರಡನೇ ವಾರದ ಎರಡನೇ ದಿನ ಇದೀಗ ಉತ್ತರದ ಕಡೆ ಕೊನೆಗೂ ಸದನ ಬಂತು.ಇಂದು ಉತ್ತರ ಕರ್ನಾಟಕದ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆಯಾಯಿತು. https://ainlivenews.com/see-how-hot-and-hot-this-cold-can-be/ ಇನ್ನು ಉತ್ತರ ಕರ್ನಾಟಕದ ಚರ್ಚೆ ಮೊದಲಾವಧಿಯ ವೇಳೆ ಡಿಸಿಎಂ ಡಿಕೆಶಿಯನ್ನ ಯತ್ನಾಳ್ ಲೇವಡಿ ಮಾಡಿದ ಪ್ರಸಂಗಕ್ಕೆ ಸದನ ಸಾಕ್ಷಿಯಾಯ್ತು.ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಯಾಗ್ತಿಲ್ಲ, ಹಳೆ ಮೈಸೂರು ಭಾಗ ಮಾತ್ರ ಅಭಿವೃದ್ಧಿಯಾಗ್ತಿದೆ.ಅದಕ್ಕೆ ಮೈಸೂರು ಮಹಾರಾಜರು ಕಾರಣ.ಹಾಗೆ ಕನಕಪುರವೂ ಅಭಿವೃದ್ಧಿಯಾಗಿಲ್ಲ. ಅಲ್ಲಿರುವ ಶಾಸಕರ ಆದಾಯ ಮಾತ್ರ…
ಬೆಂಗಳೂರು: ಬಿಜೆಪಿಯ ಅಸಮಾಧಾನಕ್ಕೆ ಮದ್ದೆರೆಯಲು ಮುಂದಾದ ರಾಜಾಹುಲಿ ಕಳೆದ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಗ್ಗಟ್ಟಿನ ಮಂತ್ರ ಪಠಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪಕ್ಷದ ಆಂತರಿಕ ಭಿನ್ನಮತ ಸರಿಪಡಿಸಲು ಪ್ಲಾನ್ ರೂಪಿಸಿಸದ ಬಿಎಸ್ ವೈ ಪಕ್ಷದ ವಿರುದ್ಧ ರೆಬಲ್ ಆಗಿರುವ ಯತ್ನಾಳ್, ವಿಶ್ವನಾಥ್, ಬೆಲ್ಲದ್ ಅವರನ್ನ ಸಮಾಧಾನ ಪಡಿಸುವಂತೆ ಸಲಹೆ ನೀಡಿದರು ಹಾಗೆ ಸದನದಲ್ಲಿ ಎಲ್ಲರೂ ಅಶೋಕ್, ವಿಜಯೇಂದ್ರ ಗೆ ಸಹಕಾರ ಕೊಡುವಂತೆ ಶಾಸಕರಿಗೆ BSY ಕಿವಿಮಾತು ಕೂಡ ನೀಡಿದರು. ಕಾಂಗ್ರೆಸ್ ಸರ್ಕಾರದ ವೈಪಲ್ಯಗಳನ್ನು ಅಸ್ತ್ರಗಳನ್ನಾಗಿ ಮಾಡಿಕೊಳ್ಳುವಂತೆ ಕಮಲ ಶಾಸಕರಿಗರ ಯಡಿಯೂರಪ್ಪ ಪಾಠ ಮಾಧ್ಯಮಗಳ ಮುಂದೆ ಬಹಿರಂಗ ಅಸಮಾಧಾನ ಹೊರ ಹಾಕದಂತೆ ನೋಡಿಕೊಳ್ಳಲು ಸಲಹೆ ಕೊಟ್ಟರು. ಕಳೆದ ರಾತ್ರಿ ಶಾಸಕ ವಿಶ್ವನಾಥ್ ಜೊತೆ ಪ್ರತ್ಯೇಕ ಸಭೆ ನಡೆಸಿ ಅಸಮಾಧಾನ ಶಮನ ಮಾಡಿರುವ ಯಡಿಯೂರಪ್ಪ ನಿನ್ನ ಏನೇ ಸಮಸ್ಯೆ ಇದ್ರು ನಾನು ಬಗೆಹರಿಸ್ತೀನಿ ಅಂತ ವಿಶ್ವನಾಥ್ ಗೆ ಅಭಯ ನೀಡಿದ ಮಾಜಿ ಸಿಎಂ ಯತ್ನಾಳ್, ಬೆಲ್ಲದ್ ಮನವೊಲಿಸುವಂತೆ ಅಶೋಕ್,…
ಬೆಂಗಳೂರು: ಏಳನೇ ದಿನದ ವಿಧಾನಸಭೆ ಕಲಾಪ ಸದ್ದುಗದ್ದಲದಲ್ಲೇ ಕೊನೆಯಾಯ್ತು.ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆಯಾಯ್ತು.ಯತ್ನಾಳ್,ಜೆ.ಟಿ.ಪಾಟೀಲ್ ಸೇರಿದಂತೆ ಹಲವರು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ್ರು. ಮಹಿಳೆಯ ವಿವಸ್ತ್ರಗೊಳಿಸಿದ ಪ್ರಕರಣವೂ ಸದ್ದುಮಾಡ್ತು.. ಭ್ರೂಣಹತ್ಯೆಯ ಪ್ರಸ್ತಾಪವೂ ಆಯ್ತು.. ಪ್ರಶ್ನೋತ್ತರದ ವೇಳೆ ಹಲವರು ತಮ್ಮ ಕ್ಷೇತ್ರಗಳ ಸಮಸ್ಗೆಗಳ ಬಗ್ಗೆ ಪ್ರಸ್ತಾಪಿಸಿ ಪರಿಹಾರ ಕಂಡುಕೊಂಡ್ರು. ಕುಂದನಗರಿಯಲ್ಲಿ ಅರಂಭವಾಗಿರೋ ಚಳಿಗಾಲದ ಅಧಿವೇಶನದ ಮೊದಲ ದಿನವೇ ಉತ್ತರದ ಚರ್ಚೆಗೆ ಅವಕಾಶ ಕೊಡಿ ಎಂದು ಒತ್ತಾಯ ಮಾಡಲಾಯಿತು.ಆದ್ರೆ ಕೆಲವೊಂದು ವಿಷಯಗಳ ಸದ್ದುಗದ್ದಲದಲ್ಲಿ ಸದನ ಕದನವಾಗಿತ್ತು. ಆದ್ರೆ ಎರಡನೇ ವಾರದ ಎರಡನೇ ದಿನ ಇದೀಗ ಉತ್ತರದ ಕಡೆ ಕೊನೆಗೂ ಸದನ ಬಂತು.ಇಂದು ಉತ್ತರ ಕರ್ನಾಟಕದ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆಯಾಯಿತು. ಇನ್ನು ಉತ್ತರ ಕರ್ನಾಟಕದ ಚರ್ಚೆ ಮೊದಲಾವಧಿಯ ವೇಳೆ ಡಿಸಿಎಂ ಡಿಕೆಶಿಯನ್ನ ಯತ್ನಾಳ್ ಲೇವಡಿ ಮಾಡಿದ ಪ್ರಸಂಗಕ್ಕೆ ಸದನ ಸಾಕ್ಷಿಯಾಯ್ತು.ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಯಾಗ್ತಿಲ್ಲ, ಹಳೆ ಮೈಸೂರು ಭಾಗ ಮಾತ್ರ ಅಭಿವೃದ್ಧಿಯಾಗ್ತಿದೆ.ಅದಕ್ಕೆ ಮೈಸೂರು ಮಹಾರಾಜರು ಕಾರಣ.ಹಾಗೆ ಕನಕಪುರವೂ ಅಭಿವೃದ್ಧಿಯಾಗಿಲ್ಲ. ಅಲ್ಲಿರುವ ಶಾಸಕರ ಆದಾಯ…
ನಾಗಮಂಗಲ: ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ ಆಗಲಿದೆ ಎಂದು ಅವರು ಕನಸು ಕಾಣುತ್ತಲೇ ಇರಲಿ. ನಾವು ಮಾತ್ರ ಇದೇ ರೀತಿ ಅಧಿಕಾರದಲ್ಲಿ ಮುಂದುವರಿಯುತ್ತೇವೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು. ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಇಡೀ ಸಚಿವ ಸಂಪುಟ, ಎಲ್ಲ ಶಾಸಕರು ಒಗ್ಗಟ್ಟಾಗಿದ್ದೇವೆ. ಲೋಕಸಭಾ ಚುನಾವಣೆಯಲ್ಲೂ 20 ಸ್ಥಾನಗಳಲ್ಲಿ ಗೆಲ್ಲುತ್ತೇವೆ. 5 ವರ್ಷ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮುಂಬರುವ ಲೋಕಸಭಾ ಚುನಾವಣೆ ನಂತರ ಚಾಮರಾಜನಗರ- ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ಶ್ರೀರಘುರಾಮಪುರ ಗೇಟ್ ಮಾರ್ಗವಾಗಿ ಮೇಲುಕೋಟೆಗೆ, https://ainlivenews.com/i-welcome-the-judgment-of-honble-supreme-court-amit-shah/ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ ಕ್ರಮ ವಹಿಸುವುದಾಗಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ತಾಲೂಕಿನ ಗೊಟಕಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನಾಡಿ ಕೇಂದ್ರ ಮತ್ತು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಕಟ್ಟಡ ಉದ್ಘಾಟಿಸಿ ಮಾತನಾಡಿ, ಗ್ರಾಮದ…
ಸುವರ್ಣಸೌಧ:- ಪಂಚಮಸಾಲಿ ಮುಖಂಡರು, ಮಠಾಧೀಶರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮೀಸಲಾತಿಗೆ ಆಗ್ರಹಿಸಿದರು. ಈ ವೇಳೆ ಪಂಚಮಸಾಲಿ ಸಮುದಾಯದಕ್ಕೆ 2ಎ ಮೀಸಲಾತಿ ಕಲ್ಪಿಸುವ ಕುರಿತು ಅಧಿವೇಶನ ಮುಗಿದ ಕೂಡಲೇ ಕಾನೂನು ತಜ್ಞರು, ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಮತ್ತು ಅಡ್ವೊಕೇಟ್ ಜನರಲ್ ಜೊತೆ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ನಡುವೆ ಮುಖ್ಯಮಂತ್ರಿಗಳ ಭರವಸೆಯಂತೆ ಅಧಿವೇಶನ ಮುಗಿಯುವವರೆಗೆ ಕಾಯಬೇಕೇ ಅಥವಾ ನಿಗದಿಯಂತೆ ಬುಧವಾರದಿಂದ ಪ್ರತಿಭಟನೆ ಹೋರಾಟ ಆರಂಭಿಸಬೇಕೇ ಎಂಬ ಬಗ್ಗೆ ಸಮುದಾಯದ ಮುಖಂಡರಲ್ಲಿ ಗೊಂದಲ ಮೂಡಿತು. ಈ ವೇಳೆ ಮಾತನಾಡಿದ ಮೀಸಲು ಹೋರಾಟದ ನೇತೃತ್ವದ ವಹಿಸಿರುವ ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಸ್ವಾಮೀಜಿ ಅವರು, ಕಳೆದ ಮೂರು ವರ್ಷಗಳಿಂದ ಪಕ್ಷಾತೀತವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಸಮುದಾಯದ ಹಿತದೃಷ್ಟಿಯಿಂದ ಮುಂದೆಯೂ ಅದೇ ರೀತಿ ಎಲ್ಲರೂ ಒಟ್ಟಾಗಿ ಹೋರಾಟ ನಡೆಸುವುದು ಎಲ್ಲರಿಗೂ ಗೌರವ. ಬುಧವಾರ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಆಯೋಜಿಸಿರುವ ಸಮುದಾಯದ ಮುಖಂಡರ ಸಭೆಯಲ್ಲಿ ಭಾಗಿಯಾಗಿ, ಸರ್ಕಾರದ ಭರವಸೆಯಂತೆ…
ವಿಜಯಪುರ: ಜೆಡಿಎಸ್ ಪಕ್ಷದಲ್ಲಿ ಇದ್ದಾಗ ಮುಸ್ಲಿಮರ ಓಲೈಕೆ ಮಾಡುತ್ತಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಬಿಜೆಪಿ ಸೇರುತ್ತಲೇ ‘ಹಿಂದೂ ಹುಲಿ’ ಎಂದು ಬಿರುದು ಇರಿಸಿಕೊಂಡು ಓಡಾಡುತ್ತಿದ್ದಾರೆ. ಅವರು ಸಮಾನತೆ ಸಾರಿರುವ ಬಸವನಾಡಿನಲ್ಲಿ ಜನಿಸಿದ್ದಾರೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳರು ಇಸ್ಲಾಂ ಹಾಗೂ ಧರ್ಮಗುರು ತನ್ವೀರ್ ಪೀರಾ ಹಾಶ್ಮಿ ವಿರೋಧಿ ನಡೆ ಅನುಸರಿಸುತ್ತಾ ಬಂದಿದ್ದಾರೆ. ಅವರ ಮುಸ್ಲಿಂ ದ್ವೇಷದಿಂದಲೇ ಈಚೆಗೆ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದ ನೆಪ ಮಾಡಿಕೊಂಡು ಧರ್ಮಗುರು ತನ್ವೀರ್ ಪೀರಾ ಹಾಶ್ಮಿ ವಿರುದ್ಧ ಐಸಿಸ್ ಸಂಪರ್ಕದ ಆರೋಪ ಮಾಡಿರುವುದಲ್ಲದೆ, ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ- ಮೌಲ್ವಿ ಜೊತೆಗಿನ ಫೋಟೋ ಹಾಕಿ ವೈರಲ್ ಮಾಡಿಸಿದ್ದಾರೆ. ಹೀಗೆ ಯತ್ನಾಳ ಅನಗತ್ಯವಾಗಿ ಮತ್ತೊಬ್ಬರ ಚಾರಿತ್ರ್ಯಹರಣದಂಥ ಹೀನಕೃತ್ಯ ಮಾಡಬಾರದು. ಅವರಿಗದು ಶೋಭೆ ತರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು. https://ainlivenews.com/i-welcome-the-judgment-of-honble-supreme-court-amit-shah/ ಇನ್ನು, ಈ ವಿಷಯದ ತನಿಖೆಗೆ ರಾಜ್ಯ ಸರ್ಕಾರದ ಅನುಮತಿ ಬೇಕಿಲ್ಲ. ತಾಕತ್ತಿದ್ದರೆ ಯತ್ನಾಳರೇ ಎನ್ಐಎ ಮೂಲಕವೋ, ಇಲ್ಲವೆ ಅವರೇ ನೇರವಾಗಿ…
ಬೆಂಗಳೂರು:- ಕೆಎಸ್ಎಟಿ ಕಲಾಪ ವೇಳೆ ಅಶ್ಲೀಲ ವಿಡಿಯೋ ಪ್ರದರ್ಶಿಸಿ ದುಷ್ಕೃತ್ಯ ಎಸಗಲಾಗಿದೆ. ಘಟನೆ ಬಗ್ಗೆ ಕೆಎಸ್ಎಟಿಯ ಅಧಿಕಾರಿ ಬೆಂಗಳೂರಿನ ಸೆಂಟ್ರಲ್ ಸೆನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ವೇಳೆ ಲಾಗಿನ್ ಆಗಿ ಆಕ್ಷೇಪಾರ್ಹ ವಿಡಿಯೋ ಪ್ರದರ್ಶನ ಮಾಡಿದ ಅನಾಮಧೇಯ ವ್ಯಕ್ಯಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆ ಬಳಿಕ ಅಧಿಕಾರಿಗಳು ಆನ್ಲೈನ್ ಕಲಾಪ ಸ್ಥಗಿತಗೊಳಿಸಿದರು. ಈ ಬಗ್ಗೆ ಐಟಿ ಕಾಯ್ದೆ ಸೆಕ್ಷನ್ 67, 67a ಅಡಿ ಪ್ರಕರಣ ದಾಖಲಾಗಿದೆ. ಅಶ್ಲೀಲ ವಿಡಿಯೋ ಪ್ರದರ್ಶಿಸಿದ ಕಿಡಿಗೇಡಿಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಾರದ ಹಿಂದೆ ಕರ್ನಾಟಕ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಕಲಾಪದ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ ಮಾಡಿದ ಘಟನೆ ನಡೆದಿತ್ತು. ಇದೀಗ ಮತ್ತೆ ಅಂತಹ ಘಟನೆ ನಡೆದಿದೆ.
ನವದೆಹಲಿ: ಪ್ರಶ್ನೆ ಕೇಳಲು (Cash for Query) ಲಂಚ ಪಡೆದ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಿಂದ ಉಚ್ಛಾಟನೆಯಾಗಿರುವ ಟಿಎಂಸಿ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ಶ್ರೀಘ್ರವೇ ತಮ್ಮ ಅಧಿಕೃತ ನಿವಾಸವನ್ನು ತೊರೆಯಲಿದ್ದಾರೆ. ಲೋಕಸಭೆಯ (Lok Sabha) ವಸತಿ ಸಮಿತಿಯು ನಗರಾಭಿವೃದ್ಧಿ ಸಚಿವಾಲಯಕ್ಕೆ ಪತ್ರ ಬರೆದಿದ್ದು 30 ದಿನಗಳ ಒಳಗಡೆ ತನ್ನ ಅಧಿಕೃತ ನಿವಾಸವನ್ನು ಖಾಲಿ ಮಾಡುವಂತೆ ಕೇಳಿಕೊಳ್ಳುವಂತೆ ಸೂಚಿಸಿದೆ. ಮೊಯಿತ್ರಾ ಅವರಿಗೆ ವಿಶೇಷ ಕೋಟಾದ ಅಡಿಯಲ್ಲಿ ಸಚಿವಾಲಯವು ಮನೆಯನ್ನು ಮಂಜೂರು ಮಾಡಿದೆ. ಲೋಕಸಭೆಯಿಂದ ಉಚ್ಛಾಟನೆ ಮಾಡಿದ್ದನ್ನು ಪ್ರಶ್ನಿಸಿ ಮೊಯಿತ್ರಾ ಸುಪ್ರೀಂ ಕೋರ್ಟ್ನಲ್ಲಿ (Suprme Court) ಅರ್ಜಿ ಸಲ್ಲಿಸಿದ್ದಾರೆ. ನೀತಿ ಸಮಿತಿ ನೀಡಿದ ವರದಿಯ ಆಧಾರದ ಮೇಲೆ ಲೋಕಸಭೆಯಿಂದ ಮಹುವಾ ಮೊಯಿತ್ರಾ ಅವರನ್ನು ಉಚ್ಛಾಟನೆ ಮಾಡಲಾಗಿದೆ. https://ainlivenews.com/see-how-hot-and-hot-this-cold-can-be/ ಮೊಯಿತ್ರಾ ಅವರು ಸಂಸತ್ತಿನಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳುವ ಸಲುವಾಗಿ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ 2 ಕೋಟಿ ರೂ. ನಗದು ಮತ್ತು ಐಷಾರಾಮಿ ಉಡುಗೊರೆ ವಸ್ತುಗಳು ಸೇರಿದಂತೆ ಲಂಚ ಪಡೆದ…