ಬೆಳಗಾವಿ: ಗುಳೆ ಹೋಗುವುದನ್ನು ತಪ್ಪಿಸಲು ಮನರೇಗಾ ಯೋಜನೆಯ 100 ಮಾನವ ದಿನಗಳಿಂದ 150 ಮಾನವ ದಿನಗಳನ್ನಾಗಿ ಮಾಡಿಕೊಡಿ ಎಂದು ಕೋರಿದರೂ ಸಹಕಾರ ನೀಡಿಲ್ಲ, ಬರ ನಿರ್ವಹಣೆಗೆ ಕೇಂದ್ರಕ್ಕೆ ಮೂರು ಪತ್ರ ಬರೆದರೂ ಅದಕ್ಕೆ ಸ್ಪಂದನೆ ಸಿಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಪ್ರತಿಪಕ್ಷದ ಧರಣಿ ಮಧ್ಯೆಯೇ ಕಂದಾಯ ಸಚಿವ ಕೃಷ್ಣ ಭೈರೇಗೌಡ ಬರದ ವಿಷಯವಾಗಿ ಉತ್ತರ ನೀಡುವಾಗ ಮಧ್ಯ ಪ್ರವೇಶಿಸಿ ಅವರು ಮಾತನಾಡಿದರು. ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳಲ್ಲಿ ತೀವ್ರ ಬರ ಆಗಿದೆ. ರಾಜ್ಯ ಸರ್ಕಾರ ಬರ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡುತ್ತಿದೆ. ಕುಡಿವ ನೀರು, ಮೇವು, ಉದ್ಯೋಗ ಕಲ್ಪಿಸುವ ಕೆಲಸಗಳನ್ನೆಲ್ಲ ಮಾಡಿದ್ದೇವೆ. ಜಿಲ್ಲಾಡಳಿತದ ಬಳಿ 900 ಕೋಟಿ ರು. ಇದೆ. ಆದರೆ ಮನರೇಗಾ ಯೋಜನೆಯಡಿ ಇರುವ 100 ಮಾನವ ದಿನಗಳನ್ನು 150ಕ್ಕೆ ಏರಿಸಿ ಕೊಡಿ ಎಂದು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. https://ainlivenews.com/i-welcome-the-judgment-of-honble-supreme-court-amit-shah/ ಈವರೆಗೂ ಸ್ಪಂದಿಸಿಲ್ಲ ಎಂದರು. ಬರಪರಿಹಾರಕ್ಕಾಗಿ. ರೂ.18,171 ಕೋಟಿ ನೆರವನ್ನು ಕೇಂದ್ರ ಸರ್ಕಾರದಿಂದ ಕೇಳಿದ್ದೇವೆ. ಕೇಂದ್ರದ ತಂಡ…
Author: AIN Author
ವಾತಾವರಣದಲ್ಲಿ ಶೀತಗಾಳಿಯ ಪರಿಣಾಮ ಕೆಮ್ಮು, ಗಂಟಲು ನೋವು, ನೆಗಡಿ ಆರಂಭಗೊಳ್ಳುತ್ತದೆ. ಆದರೆ ಶೀತ, ಕೆಮ್ಮಿನಿಂದ ಬಳಲುತ್ತಿದ್ದವರು ಅದೆಷ್ಟೇ ಔಷಧಿ ಬಳಸಿದರು ಕೆಲ ದಿನದಲ್ಲಿ ಮತ್ತೆ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಹಾಗಾದ್ರೆ ಶೀತ, ಕೆಮ್ಮುವಿನಂತ ಕಾಯಿಲೆಯಿಂದ ದೂರವಿರಲು ಕೆಲವು ಸಲಹೆ ಇಲ್ಲಿದೆ. ಚಳಿಗಾಲದಲ್ಲಿ ನಾವು ಸೇವಿಸುವ ಆಹಾರದಲ್ಲಿ ನಮ್ಮ ಆರೋಗ್ಯದ ಗುಟ್ಟು ಅಡಗಿರುತ್ತದೆ. ನಾವು ನಿತ್ಯ ಸೇವಿಸುವ ಆರೋಗ್ಯದಲ್ಲಿ ಕಾಳು ಮೆಣಸಿನ ಪುಡಿ ಅಥವಾ ಕಾಳು ಮೆಣಸು ಬಳಸುವುದರಿಂದ ಈ ಕಾಲೋಚಿತ ಕಾಯಿಲೆಗಳಿಂದ ಪಾರಾಗಬಹುದು. ಕಾಳು ಮೆಣಸನ್ನು ಕಪ್ಪು ಚಿನ್ನ ಅಂತಲೂ ಕರೆಯುತ್ತಾರೆ. ಏಕೆಂದರೆ ಕಾಳು ಮೆಣಸಿನಲ್ಲಿ ಅಷ್ಟೊಂದು ಆರೋಗ್ಯಕರ ಅಂಶಗಳಿದ್ದು, ಇದೊಂದು ಅಮೂಲ್ಯ ವಸ್ತು ಎಂದು ಪರಿಗಣಿಸಲಾಗಿದೆ. ಕಾಳು ಮೆಣಸು ಹಲವು ಆರ್ಯುವೇದ ಔಷಧ ತಯಾರಿಕೆಯಲ್ಲೂ ಬಳಸಲ್ಪಡುತ್ತದೆ. ಹೀಗಾಗಿ ಕಾಳು ಮೆಣಸು ಔಷಧಿ ಗುಣವುಳ್ಳ ಕಪ್ಪು ಚಿನ್ನ ಎಂದು ಕರೆಯಲಾಗಿದೆ. ಕಾಳು ಮೆಣಸಿನಿಂದಾಗುವ ಪ್ರಯೋಜನಗಳೇನು? ತೂಕ ಇಳಿಸಲು: ಕಾಳು ಮೆಣಸಿನಲ್ಲಿ ಕೊಬ್ಬಿನಾಂಶ ಕರಗಿಸುವಂತಹ ಅಂಶ ಇರುವುದರಿಂದ ಹೊಸದಾಗಿ ರೂಪುಗೊಳ್ಳುವ ಫ್ಯಾಟ್ ಸೆಲ್ಸ್ಗಳ ಕರಗಿಸಲಿದೆ.…
ಹೊಸವರ್ಷಕ್ಕೆ ಯಾರಾದರೂ ಕಾರು ಕೊಳ್ಳುವ ಆಸ್ಕ್ತಿ ಇದೆಯಾ ಹಾಗಿದ್ರೆ ಈ ಸ್ಟೋರಿ ತಪ್ಪದೇ ನೋಡಿ ಯಾಕಂದರೆ 2024ರ ಹೊಸ ವರ್ಷದ ವೇಳೆಗೆ ಹೊಸ ಕಾರುಗಳು ಬಿಡುಗಡೆಯಾಗಲಿವೆ. ಹೊಸ ಕಾರುಗಳ ನೀರಿಕ್ಷಿತ ಬಿಡುಗಡೆ ದಿನಾಂಕ, ತಾಂತ್ರಿಕ ಮಾಹಿತಿ ಮತ್ತು ಅಂದಾಜು ಬೆಲೆಯ ಮತ್ತಷ್ಟು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಮಾರುತಿ ಸುಜುಕಿ ಸ್ವಿಫ್ಟ್ ಮಾರುತಿ ಸುಜುಕಿ ಕಂಪನಿಯು ಸ್ವಿಫ್ಟ್ ಕಾರಿನ ಹೊಸ ತಲೆಮಾರಿನ ಆವೃತ್ತಿಯನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. ಹೊಸ ಸ್ವಿಫ್ಟ್ ಮಾದರಿಯು ಹಲವಾರು ಬದಲಾವಣೆಗಳೊಂದಿಗೆ ನವೀಕೃತ ಎಂಜಿನ್ ಆಯ್ಕೆಯನ್ನು ಪಡೆದುಕೊಂಡಿದ್ದು, ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಹೊಸ ಕಾರು ಈ ಬಾರಿ ಜೆಡ್ ಸೀರಿಸ್ ತ್ರಿ ಸಿಲಿಂಡರ್ 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದ್ದು, ಇದು ಹೆಚ್ಚಿನ ಇಂಧನ ದಕ್ಷತೆಯೊಂದಿಗೆ ಪರ್ಫಾಮೆನ್ಸ್ ನಲ್ಲೂ ಗ್ರಾಹಕರನ್ನು ಸೆಳೆಯಲಿದೆ. ಪ್ರತಿ ಲೀಟರ್ ಪೆಟ್ರೋಲ್ ಗೆ ಇದು ಗರಿಷ್ಟ 40 ಕಿ.ಮೀ ಮೈಲೇಜ್ ಟಾಟಾ ಪಂಚ್ ಇವಿ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಸದ್ಯ ಅಗ್ರಸ್ಥಾನ…
ಚಾಮರಾಜನಗರ:- ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಸೆನ್ ಅಪರಾಧಿ ಪೊಲೀಸರು ಸೋಮವಾರ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ರಾಮನಗರದ ಪ್ರಜ್ವಲ್ @ ಪ್ರಜ್ಜು(೨೨) ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ ೫.೧೪ ಗ್ರಾಂ ನ ಸುಮಾರು ೬೦ ಸಾವಿರ ಮೌಲ್ಯದ ಡ್ರಗ್ಸ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈತ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಮೈಸೂರಿನ ಖಾಸಗಿ ಕಾಲೇಜು ಬಳಿ ಅಪರಿಚಿತ ವ್ಯಕ್ತಿಯೋರ್ವ ಇದನ್ನು ನೀಡಿದ್ದು, ಇದನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ತಂದಿದ್ದನು ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರ್ಯಾಚರಣೆಯಲ್ಲಿ ಸೆನ್ ಠಾಣೆಯ ಪಿಎಸ್ಐ ಎಸ್.ಎಲ್. ಸಾಗರ್, ಎಎಸ್ಐ ಮಹದೇವಸ್ವಾಮಿ, ಮುಖ್ಯಪೇದೆಗಳಾದ ಮಹೇಶ್, ಸುಬ್ರಹ್ಮಣ್ಯ, ಪೇದೆಗಳಾದ ಜಗದೀಶ್, ರಾಜು, ಮಂಜುನಾಥ್ ಇದ್ದರು. ವರದಿ: ಪ್ರಮೋದ್ ಚಾಮರಾಜನಗರ
ನೀವು ಹೊಸ ಸಿಮ್ ಕಾರ್ಡ್ (Sim Card) ಖರೀದಿ ಮಾಡುತ್ತೀರಾ? ಹಾಗಾದ್ರೆ ಕೆಲ ಕಠಿಣ ನಿಯಮಗಳನ್ನು ಪಾಲಿಸಬೇಕು. ಗ್ರಾಹಕರು ಮಾತ್ರವಲ್ಲ ಸಿಮ್ ವಿತರಿಸುವ ಡೀಲರ್ಗಳು ಸಹ ಕಠಿಣ ನಿಯಮಗಳನ್ನು ಪಾಲಿಸಲೇಬೇಕು. ನಿಯಮ ಪಾಲಿಸದೇ ಉಲ್ಲಂಘನೆ ಮಾಡಿದರೆ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಗಂಭೀರ ಪ್ರಕರಣವಾದಲ್ಲಿ ಜೈಲು (Jail) ಶಿಕ್ಷೆಯನ್ನು ವಿಧಿಸಲಾಗುತ್ತದೆ. ಬಹುತೇಕ ಸೈಬರ್ ಅಪರಾಧಗಳು ಮತ್ತು ದೇಶವಿರೋಧಿ ಕೃತ್ಯಗಳನ್ನು ಸುಳ್ಳು ದಾಖಲೆಗಳೊಂದಿಗೆ ಜೋಡಿಸಲಾದ ಮೊಬೈಲ್ ಸಂಖ್ಯೆಗಳನ್ನು (Mobile Sim) ಬಳಸುತ್ತಿರುವ ಹಿನ್ನೆಲೆಯಲ್ಲಿ ಇವುಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಈಗ ಕಠಿಣ ಕ್ರಮ ಕೈಗೊಂಡಿದೆ. ಹೊಸ ನಿಯಮಗಳು ಏನು? ವ್ಯಾಪಾರಸ್ಥರು/ ಕಂಪನಿಗಳಿಗೆ ಮಾತ್ರ ಸಿಮ್ ಕಾರ್ಡ್ಗಳನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸಲು ಅನುಮತಿ ನೀಡಲಾಗಿದೆ. ಸಾಮಾನ್ಯ ಬಳಕೆದಾರರು ಒಂದು ಗುರುತಿನಿಂದ ಗರಿಷ್ಠ 9 ಸಿಮ್ಗಳನ್ನು ಮಾತ್ರ ಪಡೆಯಬಹುದು ಸಿಮ್ ಕಾರ್ಡ್ ರದ್ದು/ ನಿಷ್ಕ್ರಿಯಗೊಳಿಸಿದ 90 ದಿನಗಳ ನಂತರ ಆ ಸಂಖ್ಯೆಯನ್ನು ಬೇರೆ ಗ್ರಾಹಕರಿಗೆ ನೀಡಲಾಗುತ್ತದೆ. ಸಿಮ್ ಕಾರ್ಡ್ಗಳನ್ನು ಖರೀದಿಸುವ ಗ್ರಾಹಕರು ತಮ್ಮ…
ಬೆಳಗಾವಿ:- ಬಾಯಿ ಸರಿ ಇದ್ದಿದ್ದರೆ ನಾನು ಸಿಎಂ ಆಗ್ತಿದ್ನಂತೆ ಎಂದು ಯತ್ನಾಳ್ ಹೇಳಿದ್ದಾರೆ. ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿರುವ ಯತ್ನಾಳ್ ಎಚ್.ಡಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ವಿಜಯಪುರಕ್ಕೆ 105 ಕೋಟಿ ರೂ. ನೀಡಿದ್ದರು. ದುರ್ದೈವ ಅಂದರೆ ಬಿಜೆಪಿ ಅಧಿಕಾರಕ್ಕೆ ಬಂದಾಗ ಅದನ್ನು ರದ್ದು ಮಾಡಿತ್ತು. ಯತ್ನಾಳ್ ಅವರೇ ನಿಮ್ಮ ಬಾಯಿ ಸರಿ ಇದ್ದಿದ್ದರೆ ಸಿಎಂ ಆಗುವ ಯೋಗ್ಯತೆ ಇತ್ತು ಅಂತಾ ಕೆಲವರು ಹೇಳಿದ್ದರು. ನಾನ್ಯಾರಿಗೂ ಹೆದರುವುದಿಲ್ಲ ಹೇಲಬೇಕಾದ್ದನ್ನು ನೇರವಾಗಿ ಹೇಳ್ತೇನೆ ಎಂದಿದ್ದಾರೆ. ಪಿಎಸಿಗೆ ಸಿಸಿ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ ಸಮಾಧಾನ ಮಾಡಲು ಯತ್ನಿಸುತ್ತಿದ್ದಾರೆ. ಪಂಚಮಸಾಲಿ ಸಮುದಾಯವನ್ನು ಸಮಾಧಾನ ಮಾಡಲು ಹೊರಟಿದ್ದಾರೆ. ಇದಕ್ಕೆ ಮೇಲಿಂದ ಅನುಮತಿ ಪಡೆದಿದ್ದಾರೋ ಇಲ್ಲವೋ ಗೊತ್ತಿಲ್ಲ. ಬೊಮ್ಮಾಯಿ, ಭೈರತಿ ಬಸವರಾಜ್ ಅನುದಾನ ನೀಡಿ ನೆರವಾದರು ಅಧಿಕಾರದಲ್ಲಿದ್ದಾಗ ಸಹಾಯ ಮಾಡದವರು ಈಗ ಮಾಜಿಗಳಾಗಿದ್ದಾರೆ. ನಾನು ಟಾರ್ಗೆಟ್ ಮಾಡಿದರೆ ಅವರು ಮಾಜಿಯಾಗುವವರೆಗೂ ಬಿಡಲ್ಲ ನಾನು ಒಂಟಿ ಸಲಗ ಇದ್ದೇನೆ. ಒಂಟಿ ಸಲಗ ಆಗಿಯೇ ಹೊಡೆಯುತ್ತೇನೆ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ.
ಬಹುನಿರೀಕ್ಷಿತ ಸಲಾರ್ ಸಿನಿಮಾಗೆ ಪ್ರಾದೇಶಿಕ ಸೆನ್ಸಾರ್ (Censor) ಮಂಡಳಿಯ ಪ್ರಮಾಣ ಪತ್ರವನ್ನು ನೀಡಿದೆ. ತೀವ್ರಗತಿಯ ಸಾಹಸ ಸನ್ನಿವೇಶಗಳು ಇರುವ ಕಾರಣದಿಂದಾಗಿ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ಸೆನ್ಸಾರ್ ಮಂಡಳಿ ನೀಡಿದೆ. ಭಾರತದಲ್ಲಿನ ಪ್ರದರ್ಶನಕ್ಕಾಗಿ ‘ಎ’ ಮತ್ತು ಹೊರ ದೇಶದಲ್ಲಿನ ಪ್ರದರ್ಶನಕ್ಕಾಗಿ ಯು/ಎ ಪ್ರಮಾಣ ಪತ್ರ ಸಿಕ್ಕಿದೆ ಎನ್ನಲಾಗುತ್ತಿದೆ. ಸಿನಿಮಾದ ಒಟ್ಟು ಅವಧಿ 2 ಗಂಟೆ 55 ನಿಮಿಷ ಎಂದು ಹೇಳಲಾಗುತ್ತಿದೆ. ನಾನಾ ಕಾರಣಗಳಿಂದಾಗಿ ಸಿನಿಮಾ ಕುತೂಹಲ ಮೂಡಿಸಿದೆ. ಡಾರ್ಲಿಂಗ್ ಪ್ರಭಾಸ್ (Prabhas) ನಾಯಕತ್ವದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಮೊನ್ನೆಯಷ್ಟೇ ‘ಸಲಾರ್’ (Salaar) ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಫ್ರೆಂಡ್ಶಿಪ್ ಜೊತೆ ಸೇಡಿನ ಕಥೆ ಹೊಂದಿರುವ ಈ ಸಿನಿಮಾದಲ್ಲಿ ರಕ್ತ ಸಿಕ್ತವಾಗಿ ಪ್ರಭಾಸ್ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ. 3 ನಿಮಿಷ 47 ಸೆಕೆಂಡ್ ಇರುವ ಈ ಟ್ರೈಲರ್ಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಆ ಟ್ರೈಲರ್ ನೋಡಿದಾಗಲೇ ಚಿತ್ರಕ್ಕೆ ಯಾವ ಪ್ರಮಾಣ ಪತ್ರ ಸಿಗಬಹುದು ಎಂದು ಅಂದಾಜಿಸಲಾಗಿತ್ತು ಹೊಂಬಾಳೆ ಸಂಸ್ಥೆ ನಿರ್ಮಾಣದ ಸಲಾರ್…
ಮಂಗಳೂರು: ಪಂಚರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಈಗ ಕಾಂಗ್ರೆಸಿಗರು ಬಿಜೆಪಿ ಗೆದ್ದಲ್ಲಿ ಇವಿಎಂ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ, ನಿಷ್ಪಕ್ಷಪಾತ ಚುನಾವಣೆಗೆ ಎಸಗುವ ಅಪಚಾರವಾಗಿದೆ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದರು. ಇಂತಹ ಅಪನಂಬಿಕೆ ಮೂಡಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಮುಂದೆ ಚುನಾವಣೆಗೆ ಸ್ಪರ್ಧಿಸದಂತೆ ನಿಬಂಧನೆ ವಿಧಿಸಬೇಕು ಎಂದು ಸಿ.ಟಿ.ರವಿ ಆಗ್ರಹಿಸಿದರು. https://ainlivenews.com/i-welcome-the-judgment-of-honble-supreme-court-amit-shah/ ಮೂರು ರಾಜ್ಯಗಳ ಚುನಾವಣಾ ಜನಾದೇಶ ಬಿಜೆಪಿಗೆ ಸೆಮಿ ಫೈನಲ್ ಗೆಲವು ಮಾತ್ರವಲ್ಲ, ಫೈನಲ್ ಗೆಲವು ಕೂಡ ನಮ್ಮದೇ ಎಂದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಡಿಎನ್ಎ ಸಂಘ ಪರಿವಾರದ್ದೇ ಹೊರತು ಕಾಂಗ್ರೆಸ್ ನದ್ದಲ್ಲ ಎಂದು ಮಾಜಿ ಸಚಿವ ಸಿ.ಟಿ. ರವಿ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರ ಚಿಕ್ಕಪ್ಪ ಜನ ಸಂಘ ದಿಂದ ಗೆದ್ದಿದ್ದರು. ಶೆಟ್ಟರ್ ಸಹ ಬಿಜೆಪಿಯಿಂದಲೇ ಗೆದ್ದು ಅಧಿಕಾರ ಅನುಭವಿಸಿದವರು. ಈಗ ಕಾಂಗ್ರೆಸ್ ಸೇರಿಕೊಂಡು ಏನೇನೋ ಮಾತನಾಡುತ್ತಿದ್ದಾರೆ ಎಂದು ದೂರಿದರು.
ನವದೆಹಲಿ: ಅಯೋಧ್ಯೆಯ ರಾಮಮಂದಿರ (Ayodhya Ram Mandir) ಉದ್ಘಾಟನೆಗೆ ಇನ್ನೊಂದು ತಿಂಗಳಷ್ಟೇ ಬಾಕಿಯಿದೆ. ಈ ಐತಿಹಾಸಿಕ ದಿನಕ್ಕಾಗಿ ಕೇವಲ ಭಾರತವಷ್ಟೇ ಅಲ್ಲ ವಿದೇಶಗಳೂ ಕಾತುರದಿಂದ ಕಾಯುತ್ತಿದೆ. ಇದೀಗ ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕಾಗಿ ಥೈಲ್ಯಾಂಡ್ (Thailand) ವಿಶೇಷ ಮಣ್ಣನ್ನು (Soil) ಕಳುಹಿಸುತ್ತಿದೆ. ಹೌದು, ಅಯೋಧ್ಯೆಯಿಂದ 3,500 ಕಿ.ಮೀ ದೂರದಲ್ಲಿರುವ ಥೈಲ್ಯಾಂಡ್ನ ಅಯುತಾಯ (Ayutthaya) ನಗರದಿಂದ ವಿಶೇಷ ಮಣ್ಣನ್ನು ತರಲಾಗುತ್ತಿದೆ. 2024ರ ಜನವರಿಯಲ್ಲಿ ಉದ್ಘಾಟನೆಗೊಳ್ಳುತ್ತಿರುವ ರಾಮ ಮಂದಿರಕ್ಕೆ ಥೈಲ್ಯಾಂಡ್ ಮಣ್ಣನ್ನು ಕಳುಹಿಸುತ್ತಿದೆ. ಭಾರತ-ಥೈಲ್ಯಾಂಡ್ ಸಂಬಂಧ: ಥೈಲ್ಯಾಂಡ್ನ ಸಿಯಾಮ್ ಸಾಮ್ರಾಜ್ಯದಲ್ಲಿರುವ ಅಯುತಾಯಾವನ್ನು 13ನೇ ಶತಮಾನದಲ್ಲಿ ಸ್ಥಾಪಿಸಲಾಗಿದೆ ಎಂದು ನಂಬಲಾಗಿದೆ. ಸಿಯಾಮ್ ಸಾಮ್ರಾಜ್ಯದ ರಾಜಧಾನಿ ಮತ್ತು ಆರ್ಥಿಕ ಕೇಂದ್ರವೂ ಆಗಿತ್ತು. ಆದರೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಥೈಲ್ಯಾಂಡ್ನಿಂದ ಈ ರೀತಿ ಕಳುಹಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ರಾಮ ಮಂದಿರಕ್ಕಾಗಿ ಥೈಲ್ಯಾಂಡ್ನಿಂದ ವಿಶೇಷ ನೀರನ್ನು ಕಳುಹಿಸಲಾಗಿತ್ತು. ಈ ಕ್ರಿಯೆಯು ಥೈಲ್ಯಾಂಡ್ ಮತ್ತು ಭಾರತದ ನಡುವಿನ ಅನನ್ಯ ಸಾಂಸ್ಕೃತಿಕ ಸಂಬಂಧಗಳಿಂದ ಹುಟ್ಟಿಕೊಂಡಿದೆ. ಇದು ಮುಂದಿನ ದಿನಗಳಲ್ಲಿ ಮತ್ತಷ್ಟು ಆಳವಾಗಲಿದೆ. ವಿಶ್ವ…
ಪತಿ-ಪತ್ನಿ ಕೆಲ ಕೆಲಸಗಳನ್ನು ಮಾಡುವಾಗ, ಅವರ ಮಧ್ಯ ಹೋಗಬಾರದಂತೆ. ಹಾಗಾದ್ರೆ ಯಾವಾಗ ಅಧಿಕಪ್ರಸಂಗತನ ಮಾಡಬಾರದು ಅಂತಾ ತಿಳಿಯೋಣ ಬನ್ನಿ. ಪತಿ-ಪತ್ನಿ ಜಗಳ ಮಾಡುವಾಗ ಮೂರನೇಯವರು ಹೋಗಬಾರದು. ಪತಿ- ಪತ್ನಿ ಜಗಳವಾಡುವಾಗ, ಮೂರನೇಯವರು ಮಧ್ಯ ಹೋಗಬಾರದು. ಪತಿ-ಪತ್ನಿ ಜಗಳವಾಡಿ, ಒಂದಾಗಬಹುದು. ಮಧ್ಯ ಜಗಳ ಬಿಡಿಸಲು ಹೋದವರು, ಕೆಟ್ಟವರಾಗಬಹುದು. ಅಥವಾ ನೀವು ಒಳ್ಳೆಯದನ್ನೇ ಬಯಸಿ, ಜಗಳ ನಿಲ್ಲಿಸಲು ಹೋಗಿರಬಹುದು. ಆದರೆ ನಿಮ್ಮ ಮಾತಿನಿಂದ, ಅವರ ಜಗಳ ಇನ್ನೂ ಹೆಚ್ಚಾಗಬಹುದು. ಆಗಲೂ ನೀವೇ ಕೆಟ್ಟವರಾಗುತ್ತೀರಿ. ಹಾಗಾಗಿ ಪತಿ-ಪತ್ನಿ ಮಧ್ಯೆ ಜಗಳವಾಗುವಾಗ, ಮಧ್ಯೆ ಹೋಗಬೇಡಿ. ಪತಿ-ಪತ್ನಿ ಅನ್ಯೋನ್ಯವಾಗಿ ಮಾತನಾಡುತ್ತ, ಕಾಲ ಕಳೆಯುವಾಗ ಮೂರನೇಯವರು ಹೋಗಬಾರದು. ಪತಿ-ಪತ್ನಿ ಮಾತನಾಡುತ್ತಾ, ಪರಸ್ಪರ ಸಮಯ ಕಳೆಯುತ್ತಿದ್ದರೆ, ಮಧ್ಯದಲ್ಲಿ ಹೋಗಿ, ಅವರನ್ನು ಮಾತಾಡಿಸಿ, ಅವರ ಸಮಯವನ್ನು ಹಾಳು ಮಾಡಬಾರದು. ಇದು ಬುದ್ಧಿವಂತರ ಲಕ್ಷಣವಲ್ಲ. ಪತಿ-ಪತ್ನಿ ಸೇರಿ ಯಾವುದಾದರೂ ಕೆಲಸ ಮಾಡುವಾಗ ಮೂರನೇಯವರು ಹೋಗಬಾರದು. ಪತಿ ಪತ್ನಿ ಸೇರಿ ನಗು ನಗುತ್ತಾ ಅಡುಗೆ ಕೆಲಸ, ಸ್ವಚ್ಛತೆಯ ಕೆಲಸ, ಅಥವಾ ಬೇರೆ ಇನ್ಯಾವುದೇ ಕೆಲಸ ಮಾಡುವಾಗ,…