Author: AIN Author

ಆಂಧ್ರಪ್ರದೇಶ:- ಕಾರೊಂದು ನಿಯಂತ್ರಣ ತಪ್ಪಿ ಬಾವಿಗೆ ಬಿದ್ದು ಕರ್ನಾಟಕದ ಮೂವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಬಾಲಂವರಿಪಲ್ಲಿ ಗ್ರಾಮದಲ್ಲಿ ಜರುಗಿದೆ. https://ainkannada.com/actor-ajiths-car-tire-burst-during-a-car-race-what-happened-next/ ಚಿಂತಾಮಣಿ ಮೂಲದವರಾದ ಲೋಕೇಶ್, ಚಲಪತಿ ಮತ್ತು ಶಿವಣ್ಣ ಮೃತರು. ತಂಡುಪಲ್ಲಿಯ ಐವರು ಮದುವೆ ಸಮಾರಂಭಗಳಿಗೆ ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದರು. ಹಾಗೆಯೇ ಶನಿವಾರ ತಮಿಳುನಾಡಿನ ಹೊಸೂರಿನಲ್ಲಿ ನಡೆದ ಮದುವೆಯಲ್ಲಿ ಕ್ಯಾಟರಿಂಗ್ ಕೆಲಸ ಮುಗಿಸಿ ಹಿಂತಿರುಗುತ್ತಿದ್ದಾಗ ಬಾಲಂವರಿಪಲ್ಲಿಯಲ್ಲಿ ಕಾರು ನಿಯಂತ್ರಣ ತಪ್ಪಿ ಬಾವಿಗೆ ಬಿದ್ದಿದೆ. ಕಾರಿನಲ್ಲಿದ್ದ ಐದು ಪ್ರಯಾಣಿಕರಲ್ಲಿ ಕರ್ನಾಟಕದ ಮೂವರು ಮೃತಪಟ್ಟಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುನಿಲ್ ಹಾಗೂ ತಿಪ್ಪಾ ರೆಡ್ಡಿ ಕಾರಿನ ಹಿಂಭಾಗದ ಕಿಟಕಿಗಳನ್ನು ಒಡೆದು ಹೊರಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಕ್ರೇನ್ ಮೂಲಕ ಕಾರನ್ನು ಬಾವಿಯಿಂದ ಹೊರತೆಗೆದರು.

Read More

ನೆದರ್ಲ್ಯಾಂಡ್‌ನಲ್ಲಿ ನಡೆಯುತ್ತಿರುವ ಕಾರ್ ರೇಸ್ ವೇಳೆ ನಟ ಅಜಿತ್ ಕಾರ್ ಟಯರ್ ಸ್ಫೋಟಗೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗಿದೆ. https://ainkannada.com/entry-to-rcb-gujarat-punjab-play-off/ ಅಜಿತ್ ಕಾರಿನ ಟೈರ್ ಸಿಡಿದಾಗ, ಅವರು ತಕ್ಷಣ ಟ್ರ್ಯಾಕ್ ನಿಂದ ಹೊರಬಂದು ಕಾರನ್ನು ನಿಧಾನವಾಗಿ ತೆಗೆದುಕೊಂಡು ಹೋಗಿದ್ದಾರೆ. ಟೈರ್‌ ಸ್ಫೋಟದಿಂದ ಕಾರಿನ ಮುಂಭಾಗವೂ ಹಾನಿಗೊಳಗಾಗಿದೆ. ಇನ್ನೂ ಇದೇ ವರ್ಷ ಫೆಬ್ರವರಿಯಲ್ಲಿ ಸ್ಪೇನ್‌ನಲ್ಲಿ ನಡೆದ ರೇಸ್‌ನಲ್ಲಿ ನಟ ಅಜಿತ್ ಕುಮಾರ್ ಅವರ ಕಾರು ಅಪಘಾತಕ್ಕೀಡಾಗಿತ್ತು. ಸ್ಪೇನ್‌ನ ವೇಲೆನ್ಸಿಯಾದಲ್ಲಿ ನಡೆದ ರೇಸ್‌ನಲ್ಲಿ ಅಜಿತ್ ಭಾಗವಹಿಸಿದ್ದರು. ಈ ವೇಳೆ ಅವರ ಕಾರು ಇನ್ನೊಂದು ಕಾರಿಗೆ ಹಿಂಭಾಗದಿಂದ ಡಿಕ್ಕಿಯಾಗಿ, ಹಲವಾರು ಬಾರಿ ಪಲ್ಟಿಯಾಗಿ ನಿಂತಿತ್ತು. ಈ ಅಪಘಾತದ ವೀಡಿಯೊವನ್ನು ಅಜಿತ್ ಅವರ ವ್ಯವಸ್ಥಾಪಕ ಸುರೇಶ್ ಚಂದ್ರ ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು.

Read More

ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್‌ 10 ವಿಕೆಟ್‌ಗಳ ಜಯ ಸಾಧಿಸಿದ ಬಳಿಕ ಮೂರು ತಂಡಗಳು ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿವೆ. ಗುಜರಾತ್‌ 12ರಲ್ಲಿ 9 ಪಂದ್ಯ ಗೆದ್ದು 18 ಅಂಕ, ಆರ್‌ಸಿಬಿ ಹಾಗೂ ಪಂಜಾಬ್‌ 12ರಲ್ಲಿ ತಲಾ 8 ಪಂದ್ಯ ಗೆದ್ದು 17 ಅಂಕಗಳೊಂದಿಗೆ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿವೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 10ನೇ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಿದ್ರೆ, ಗುಜರಾತ್‌ ಟೈಟಾನ್ಸ್‌ 3ನೇ ಬಾರಿಗೆ ಹಾಗೂ ಪಂಜಾಬ್‌ ಕಿಂಗ್ಸ್‌ 11 ವರ್ಷಗಳ ಬಳಿಕ ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿದೆ. ಡೆಲ್ಲಿ ನೀಡಿದ 200 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಗುಜರಾತ್‌ ಒಂದೂ ವಿಕೆಟ್‌ ಕಳೆದುಕೊಳ್ಳದೇ 19 ಓವರ್‌ಗಳಲ್ಲಿ ಗುರಿ ತಲುಪುವಲ್ಲಿ ಯಶಸ್ವಿಯಾಯಿತು. ತಂಡದ ಪರ ಸಾಯಿ ಸುದರ್ಶನ್‌ 4 ಸಿಕ್ಸರ್‌ , 12 ಬೌಂಡರಿ ಸಿಡಿಸಿ 108 ರನ್‌, ಶುಭಮನ್‌ಗಿಲ್‌ 7 ಸಿಕ್ಸರ್‌ 3 ಬೌಂಡರಿ ನೆರವಿಂದ 93 ರನ್‌ ಗಳಿಸಿ ತಂಡಕ್ಕೆ ಜಯ…

Read More

ಸೂರ್ಯೋದಯ – 5:46 ಬೆ. ಸೂರ್ಯಾಸ್ತ – 6:38 ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವೈಶಾಖ ಮಾಸ, ವಸಂತ ಋತು, ತಿಥಿ – ಷಷ್ಠಿ ನಕ್ಷತ್ರ – ಶ್ರವಣ ಯೋಗ – ಬ್ರಹ್ಮ ಕರಣ – ವಣಿಜ ರಾಹು ಕಾಲ – 07:30 ದಿಂದ 09:00 ವರೆಗೆ ಯಮಗಂಡ – 10:30 ದಿಂದ 12:00 ವರೆಗೆ ಗುಳಿಕ ಕಾಲ -01:30 ದಿಂದ 03:00 ವರೆಗೆ ಬ್ರಹ್ಮ ಮುಹೂರ್ತ – 4:10 ಬೆ. ದಿಂದ 4:58 ಬೆ.ವರೆಗೆ ಅಮೃತ ಕಾಲ – 8:48 ಬೆ. ದಿಂದ 10:27 ಬೆ. ವರೆಗೆ ಅಭಿಜಿತ್ ಮುಹುರ್ತ – 11:46 ಬೆ. ದಿಂದ 12:38 ಮ. ವರೆಗೆ ನಿಮ್ಮ ಹೆಸರು, ಜನ್ಮ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು ಅದರ ಜೊತೆಗೆ ಭಾವ ಚಿತ್ರ ಹಾಗೂ ಹಸ್ತಸಾಮುದ್ರಿಕೆ ಕಳಿಸಿದರೆ ಸಂಪೂರ್ಣ ಭವಿಷ್ಯ…

Read More

ಯಾದಗಿರಿ:- ಕಾಲುವೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕುರಿಗಾಹಿಗಳು ನೀರುಪಾಲಾಗಿರುವ ಘಟನೆ ಸುರಪುರ ತಾಲೂಕಿನ ಏವೂರ ಗ್ರಾಮದ ಬಳಿಯ ಬಸವಸಾಗರ ಜಲಾಶಯದ ಜೆಬಿಸಿ ಕಾಲುವೆಯಲ್ಲಿ ಜರುಗಿದೆ. https://ainkannada.com/refresh-modter-as-soon-as-the-lap-top-turns-on-so-you-see-this/ ಜಟ್ಟೆಪ್ಪ (19), ಕರಿಯಪ್ಪ (19) ಮೃತರು. ರವಿವಾರ (ಮೇ.18) ಒಟ್ಟು ಆರು ಮಂದಿ ಕುರಿಗಾಯಿಗಳು ಕುರಿ ಮೇಯಿಸಲು ತೆರಳಿದ್ದರು. ಆರೂ ಮಂದಿ ಕಾಲುವೆಯಲ್ಲಿ ಈಜಲು ತೆರಳಿದ್ದಾರೆ. ಆರು ಮಂದಿ ಕುರಿಗಾಹಿಗಳ ಪೈಕಿ ಇಬ್ಬರು ನೀರುಪಾಲಾಗಿದ್ದು, ನಾಲ್ವರು ಪಾರಾಗಿದ್ದಾರೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಲ್ಯಾಪ್​ಟಾಪ್ ಈಗಿನ ಕಾಲದಲ್ಲಿ ಯಾರಲ್ಲಿ ಇಲ್ಲ ಹೇಳಿ. ಕಂಪನಿ ಕೆಲಸಕ್ಕಾಗಲಿ, ಗೇಮ್​ ಆಡ್ಲಿಕ್ಕಾಗಲಿ ಲ್ಯಾಪ್​ಟಾಪ್​ ಬಳಸುತ್ತಾರೆ. ಆದ್ರೆ ಕೆಲವೊಂದು ಲ್ಯಾಪ್​​ಟಾಪ್​ಗಳು ಖರೀದಿಸಿದ ಸ್ವಲ್ಪ ಸಮಯದಲ್ಲೇ ಏನಾದರೊಂದು ಸಮಸ್ಯೆ ಬರುತ್ತದೆ https://ainkannada.com/greater-bangalore-luter-bangalore-hd-kumaraswamy/ ಹೆಚ್ಚಿನ ಜನರು ಲ್ಯಾಪ್​​ಟಾಪ್​ ಬಳಸುತ್ತಾರೆ. ಆದರೆ ಅದರಲ್ಲಿರುವಂತಹ ಕೆಲವೊಂದು ಕೀಗಳು ಬಗ್ಗೆ, ಟೆಕ್ನಿಕ್​ಗಳ ಬಗ್ಗೆ ಇನ್ನೂ ಹೆಚ್ಚಿನ ಜನರಿಗೆ ತಿಳಿದಿಲ್ಲ. ಹೆಚ್ಚಿನ ಜನರು ಸಾಮಾನ್ಯವಾಗಿ ಲ್ಯಾಪ್​​ಟಾಪ್​ ಅಥವಾ ಕಂಪ್ಯೂಟರ್​ ಅನ್ನುಆನ್​ ಮಾಡಿದಾಗ ತಕ್ಷಣ ಹೋಮ್​ಸ್ಕ್ರೀನ್​ನಲ್ಲಿ ರಿಫ್ರೆಶ್​ ಮಾಡುತ್ತಾರೆ. ಜೊತೆಗೆ ಎಫ್​​​5 ಅನ್ನು ಕ್ಲಿಕ್ ಮಾಡುವ ಮೂಲಕ ರ್‍ಯಾಮ್ ಕ್ಲಿಯರ್ ಆಗುತ್ತದೆ ಎಂದು ಭಾವಿಸುತ್ತಾರೆ. ಆದ್ರೆ ಇದರಿಂದ ಏನು ಬದಲಾವಣೆಯಾಗುತ್ತದೆ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಆದರೆ, ಹೋಮ್ ಸ್ಕ್ರೀನ್‌ನಲ್ಲಿರುವ ರಿಫ್ರೆಶ್ ಆಯ್ಕೆಯನ್ನು ಕ್ಲಿಕ್ ಮಾಡುವುದರ ಮೂಲಕ ಈ ರೀತಿ ಏನೂ ಬದಲಾವಣೆಗಳು ಆಗುವುದಿಲ್ಲ. ಆದರೆ ಏನಾದರು ಚೇಂಜಸ್ ಆಗುತ್ತೆ ಎಂದು ತಿಳಿದಿದ್ರೆ ಈ ಸ್ಟೋರಿ ಓದಿ. ಕಂಪ್ಯೂಟರ್​ನಲ್ಲಿರುವಂತಹ ಹೋಮ್ ಸ್ಕ್ರೀನ್ ಸ್ವತಃ ಫೋಲ್ಡರ್ ಅನ್ನು ಕ್ರಿಯೇಟ್​ ಮಾಡುತ್ತದೆ. ಈ ಸಂದರ್ಭದಲ್ಲಿ, ನೀವು…

Read More

ನವದೆಹಲಿ: ಕರ್ನಾಟಕದ ರಾಜಧಾನಿ ಬೆಂಗಳೂರು ನಗರ ಮಳೆ ಅನಾಹುತಕ್ಕೆ ಸಿಕ್ಕಿ ನಲುಗುತ್ತಿರುವ ಬಗ್ಗೆ ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಸಂಗ್ರಹ ಆಗುತ್ತಿರುವ ಆದಾಯ, ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ್ದಾರೆ. https://ainkannada.com/action-for-permanent-solution-to-sai-layout-maheshwar-rao/ ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಗ್ರೇಟರ್ ಬೆಂಗಳೂರು ಹೆಚ್ಚು ಮಳೆಯಾದರೆ ಮುಳುಗುತ್ತದೆ! ಕಡಿಮೆ ಸುರಿದರೆ ತೇಲುತ್ತದೆ! ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ರಸ್ತೆಗಳಲ್ಲಿಯೇ ಕೆರೆ, ಚರಂಡಿ! ಗುಂಡಿಗೆ ಹಿಡಿ ಮಣ್ಣಾಕುವುದಕ್ಕೂ ಬಿಡಿಗಾಸಿಲ್ಲ. ಸುರಂಗಕ್ಕೆ ಮಾತ್ರ ಸಾವಿರಾರು ಕೋಟಿ ಟೆಂಡರು! ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು! ವಾರಕ್ಕೊಮ್ಮೆ ತೆರಿಗೆ ಬರೆ, ದರ ಏರಿಕೆ! ಜನರೆಂದರೆ ಜೀವರಹಿತ ಕಲ್ಲುಬಂಡೆಗಳೇ? ಮನಸೋಇಚ್ಛೆ ಒಡೆದು ಬಡಿದು ನುಂಗಲು!? ನಾಡು ಎಂದರೆ ಕಲ್ಲು ಬಂಡೆಗಳಲ್ಲ, ನಾಡು ಎಂದರೆ ಮನುಷ್ಯರು ಎಂದು ನಗರದ ಉಸ್ತುವಾರಿ ಹೊಂದಿರುವವರ ವಿರುದ್ಧ ಕೇಂದ್ರ ಸಚಿವರು ಹರಿಹಾಯ್ದಿದ್ದಾರೆ. ಕೆರೆಯ ನೀರನು ಕೆರೆಗೆ ಚೆಲ್ಲುತ್ತಿಲ್ಲವೇಕೆ? ಕೆರೆ ನೀರಿಗೆ…

Read More

ಬೆಂಗಳೂರು: ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಸಾಯಿ ಲೇಔಟ್  ಜಲಾವೃತವಾಗುವುದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುವುದೆಂದು *ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್* ರವರು ತಿಳಿಸಿದರು. https://ainkannada.com/there-is-no-response-to-the-letter-the-outrage-of-the-mla-for-the-police-commissioners-move/ ನಗರದಲ್ಲಿ ನಿನ್ನೆ ಸುರಿದ ಮಳೆಯಿಂದಾಗಿ ಸಮಸ್ಯೆಯಾಗಿರುವ ಪ್ರದೇಶಗಳಿಗೆ ಭೇಟಿ ನಿಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಗರದಲ್ಲಿ ಜೋರು ಮಳೆಯಾಗಿದ್ದು, ಅಧಿಕಾರಿಗಳೆಲ್ಲಾ ರಾತ್ರಿ 1 ಗಂಟೆಯವರೆಗೆ ಫೀಲ್ಡ್ ನಲ್ಲೇ ಇದ್ದು, ಮೇಲ್ವಿಚಾರಣೆ ಮಾಡಿ ಇರುವ ಸಮಸ್ಯೆಯನ್ನು ಬಗೆಹರಿಸಿದ್ದಾರೆ ಎಂದು ತಿಳಿಸಿದರು. ಸಾಯಿ ಲೇಔಟ್ ಪ್ರದೇಶವನ್ನು ಬಿ.ಡಿ.ಎ. ಅಭಿವೃದ್ಧಿಪಡಿಸಿದ್ದು, ಬಿ.ಡಿ.ಎ ಅಧಿಕಾರಿಗಳ ಜೊತೆ ಸಭೆ ನಡೆಸಿ ಇರುವ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಬಿ.ಡಿ.ಎ ವತಿಯಿಂದ ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ಜಾಕ್ ವೆಲ್ ವ್ಯವಸ್ಥೆ ಮಾಡಿ ಪಂಪ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು. ಸಾಯಿ ಲೇಔಟ್ ಪ್ರದೇಶವು ರಾಜಕಾಲುವೆಗಿಂದ ತುಂಬಾ ಕೆಳ ಮಟ್ಟದಲ್ಲಿರುವ ಕಾರಣ ಜಲಾವೃತವಾಗುತ್ತಿದೆ. ಜೊತೆಗೆ ರಾಜಕಾಲುವೆ ಹಾದುಹೋಗುವ ಜಾಗದಲ್ಲಿ ರೈಲ್ವೆ ವೆಂಟ್ ಸಣ್ಣದಾಗಿರುವ ಪರಿಣಾಮ ನೀರು…

Read More

ಧಾರವಾಡ: ಹುಬ್ಬಳ್ಳಿ – ಧಾರವಾಡ ಅವಳಿನಗರಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ನಡೆಯುತ್ತಿದೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಹಾಗೂ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ವಿಚಾರವಾಗಿ ಧಾರವಾಡದಲ್ಲಿ ಶಾಸಕ ಅರವಿಂದ ಬೆಲ್ಲದ ಮಾತನಾಡಿದ್ದಾರೆ. https://ainkannada.com/mission-impossible-at-the-box-office-of-india-hollywood-cinema/ ಅಪರಿಚಿತ ವ್ಯಕ್ತಿಗಳ ಬಗ್ಗೆ ಪರಿಶೀಲಿಸುವಂತೆ ನಾನು ಪತ್ರ ಬರೆದಿದ್ದೇನೆ. ಕೆಲವು ಜಾಗೃತ ನಾಗರಿಕರು ನನಗೆ ಕರೆ ಮಾಡಿದ್ದಾರೆ. ಹೊರಗಿನ ಜನ ಅವಳಿನಗರಗಳಲ್ಲಿ ಓಡಾಡುತ್ತಿದಾರೆ ಎಂದು ಹೇಳಿದ್ದಾರೆ. ಯಾವ ರೀತಿ ಇದ್ದಾರೆ ಎಂದು ಕೇಳಿದಾಗ ಅವರು ಬೇರೆ ರೀತಿಯ ಜನ ಇದ್ದಾರೆ ಎಂದು ಹೇಳಿದ್ದಾರೆ. ಬಾಂಗ್ಲಾದೇಶದ ಜನರ ರೀತಿ ಇದ್ದಾರಾ ಎಂದು ಪ್ರಶ್ನಿಸಿದರೆ, ಅವರು, ಪಾಕಿಸ್ತಾನ ಜನರ ರೀತಿ ಇದ್ದಾರೆ ಎಂದು ಹೇಳಿದ್ದಾರೆ ಎಂದರು. ಹೀಗಾಗಿ ನಾನು ಆಯುಕ್ತರಿಗೆ ಕರೆ ಮಾಡಿ ಹೇಳಿದ್ದೇನೆ. ಅಷ್ಟೇ ಅಲ್ಲದೆ ಆಯಕ್ತರಿಗೆ ಹಾಗೂ ಗೃಹ ಮಂತ್ರಿಗೆ ಪತ್ರ ಬರೆದಿದ್ದೇನೆ. ಇದು ಸೂಕ್ಷ್ಮ ವಿಚಾರವಾಗಿದ್ದಕ್ಕೆ ಯಾವ ಪತ್ರಿಕೆಗೆ ಹಾಗೂ ಮೀಡಿಯಾಗೆ ಹೇಳಿಕೆ ನೀಡಿರಲಿಲ್ಲ. ಅವರತನಿಖೆಗೆ ಅನೂಕೂಲವಾಗಲೆಂದು ನಾನು ಹೇಳಿಲ್ಲ. ಆದರೆ…

Read More

ಹಾಲಿವುಡ್‌ನ ಸ್ಪೈ, ಆಕ್ಷನ್ ಥ್ರಿಲ್ಲರ್‌ಗಳು ಭಾರತದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ ಉದಾಹರಣೆಗಳು ಸಾಕಷ್ಟಿವೆ. ಅದರಲ್ಲೂ ಹಾಲಿವುಡ್ ಸೂಪರ್‌ಸ್ಟಾರ್ ಟಾಮ್ ಕ್ರೂಸ್ ನಟನೆಯ ‘ಮಿಷನ್ ಇಂಪಾಸಿಬಲ್’ ಸೀರಿಸ್‌ಗಳೇ ಸಾಕ್ಷಿ. ಮೇ 17 ಹಾಲಿವುಡ್ ಸಿನಿಮಾ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಮಿಷನ್ ಇಂಪಾಸಿಬಲ್ ಕೊನೆಯ ಸರಣಿ ಕೊನೆಗೂ ರಿಲೀಸ್ ಆಗಿದೆ. ಟ್ರೇಡ್ ಎಕ್ಸ್‌ಪರ್ಟ್‌ಗಳ ಪ್ರಕಾರ ಈ ಸಿನಿಮಾ ಭಾರತದಲ್ಲಿ ಸಿಕ್ಕಾಪಟ್ಟೆ ಒಳ್ಳೆಯ ಓಪನಿಂಗ್ ಪಡೆದುಕೊಂಡಿದೆ. https://ainkannada.com/around-25-people-killed-in-america/ ಇನ್ನೂ ಭಾರತದ ಬಾಕ್ಸ್ ಆಫೀಸ್​ನಲ್ಲಿ ಹಾಲಿವುಡ್ ಸಿನಿಮಾ ಮಿಷನ್ ಇಂಪಾಸಿಬಲ್ ದಾಖಲೆ ಬರೆದಿದೆ. ವಿಶ್ವದ ನಂಬರ್ 1 ಜನಪ್ರಿಯ ನಟ ಟಾಮ್ ಕ್ರೂಸ್ ನಟನೆಯ ‘ಮಿಷನ್ ಇಂಪಾಸಿಬಲ್: ಫೈನಲ್ ರೆಕನಿಂಗ್’ ಸಿನಿಮಾ ನಿನ್ನೆ ಭಾರತದಲ್ಲಿ ಬಿಡುಗಡೆ ಆಗಿತ್ತು. ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆಗಳಿದ್ದವು. ಅದಕ್ಕೆ ತಕ್ಕಂತೆ ‘ಮಿಷನ್ ಇಂಪಾಸಿಬಲ್’ ಸಿನಿಮಾ ಮೊದಲ ದಿನ ಭರ್ಜರಿ ಗಳಿಕೆ ಮಾಡಿದೆ. ಮಾತ್ರವಲ್ಲದೆ, ಭಾರತದಲ್ಲಿ ಮೊದಲ ದಿನ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಹಾಲಿವುಡ್ ಸಿನಿಮಾ ಎಂಬ ಹೆಗ್ಗಳಿಕೆಗೆ ಮಾತ್ರವಾಗಿದೆ. ಮಿಷನ್…

Read More