Author: AIN Author

ಹುಬ್ಬಳ್ಳಿ: ಜಾರ್ಖಂಡ್‌ನ ಕಾಂಗ್ರೆಸ್ ಸಂಸದ ಧೀರಜ್ ಪ್ರಸಾದ್ ಸಾಹು ಅವರಿಗೆ ಸೇರಿದ್ದು ಎನ್ನಲಾದ ಉದ್ಯಮ ಸಮೂಹ ಸಂಸ್ಥೆ ಮೇಲೆ ಐ.ಟಿ ಅಧಿಕಾರಿಗಳು ದಾಳಿ ನಡೆಸಿದ್ದು, 200 ಕೋಟಿ ಹಣ ಜಪ್ತಿಗೆ ಮಾಡಿದ್ದಾರೆ. ಈ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ನವರು ಯಾಕೆ ಮಾತನಾಡುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಯವರಿಗೆ ಬಹಳ ಹತ್ತಿರದವರು. ರಾಹುಲ್ ಗಾಂಧಿ ಭ್ರಷ್ಟಾಚಾರದ ಹಾಗೂ ಮೊಹಬತ್ ಕಾ ದುಖಾನ್ ಬಗ್ಗೆ ಮಾತನಾಡುತ್ತಾರೆ. ಮೊಹಬತ್ ದುಖಾನ್ ನಲ್ಲಿ ಮೊದಲು ಸಿಗುವುದು ಭ್ರಷ್ಟಾಚಾರದ ಹಣ. ರಾಹುಲ್ ಗಾಂಧಿ ಈ ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್ ನವರು ಭ್ರಷ್ಟಾಚಾರದ ಬಗ್ಗೆ ಒಂದು ಶಬ್ಧ ಮಾತನಾಡುತ್ತಿಲ್ಲ ಎಂದು ಹರಿಹಾಯ್ದರು. ಉಚ್ಛಾಟಿತ ಸಂಸದೆ ಮಹುವಾ ಮೊಯಿತ್ರಾ ಅಂತ್ಯತ ಕೀಳಾಗಿ ಹಿಂದೂ ಬಗ್ಗೆ ಮಾತನಾಡುತ್ತಿದ್ದರು ಅಂಥವರಿಗೆ ಈಗ ದ್ರೌಪದಿ ವಸ್ತ್ರಭರಣದ ಬಗ್ಗೆ ಗೊತ್ತಾಗಿದೆ. ಭಾರತ ಸರ್ಕಾರ ಲಾಗಿಂನ್ ಖಾತೆ, ಅಧಿಕೃತ ಇ‌ ಮೇಲ್ ನೀಡಿದೆ.…

Read More

ಬೆಳಗಾವಿ:- ಇಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಶೇ 85 ರಷ್ಟು ಶಾಲೆಗಳಲ್ಲಿ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂಬುದು ಸರ್ಕಾರಕ್ಕೆ ತಿಳಿದಿದೆಯೇ ಎಂದು ಕಾಂಗ್ರೆಸ್ ಶಾಸಕ ಸಚಿವ ತನ್ವೀರ್ ಸೇಠ್ ಪ್ರಶ್ನಿಸಿದರು. ಇವರ ಪ್ರಶ್ನೆಗೆ ಉತ್ತರಿಸಿದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಸ್ತುತ 23 ಶಾಲೆಗಳಲ್ಲಿ ಶೌಚಾಲಯವಿಲ್ಲ. ಉಳಿದ ಶಾಲೆಗಳಲ್ಲಿ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲಾಗುವುದು. ಎಲ್ಲ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇದೆ ಎಂದು ಹೇಳಿದರು. ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಶೌಚಾಲಯ ವ್ಯವಸ್ಥೆ ಸುಧಾರಿಸುವ ಪ್ರಯತ್ನದ ಭಾಗವಾಗಿ, ಶಾಲೆಗಳಲ್ಲಿ ಹೊಸ ಶೌಚಾಲಯಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಮಾಡಿದ ಪ್ರಸ್ತಾವನೆಯನ್ನು ಜಾರಿಗೆ ತರಲು ಡಿಸೆಂಬರ್ 1 ರಂದು ರಾಜ್ಯವು ಆದೇಶ ಹೊರಡಿಸಿದೆ ಎಂದು ಉತ್ತರಿಸಿದರು.

Read More

ಬಂಗಾರದ ಬೆಲೆಯಲ್ಲಿ ಹಾವು-ಏಣಿ ಆಟ ಮುಂದುವರಿದಿದ್ದು, 10 ಗ್ರಾಂ ಚಿನ್ನದ ಬೆಲೆ ಇಂತಿದೆ ನೋಡಿ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,150 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,350ರೂ. ಬೆಳ್ಳಿ ಬೆಲೆ 1 ಕೆಜಿ: 76,000 ರೂ. ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 57,700ರೂಪಾಯಿ ಇತ್ತು. ಆದರೆ ಇಂದು 57,150 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 550 ರೂಪಾಯಿ ಇಳಿಕೆಯಾಗಿದೆ. ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 62,950ರೂಪಾಯಿ ಇತ್ತು. ಆದರೆ ಇಂದು 62,350 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 600 ರೂಪಾಯಿ ಇಳಿಕೆಯಾಗಿದೆ. ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):…

Read More

ಬೆಂಗಳೂರು:- ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 11ನೇ ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. 1 ಲಕ್ಷ ರೂ. ಮೌಲ್ಯದ ಬಾಂಡ್, ಇಬ್ಬರು ಶ್ಯೂರಿಟಿ ಒದಗಿಸಬೇಕು, ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರಬಾರದೆಂದು ಹೈಕೋರ್ಟ್ ಷರತ್ತು ವಿಧಿಸಿದೆ. ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ಆರೋಪಿ ಈತನಾಗಿದ್ದಾನೆ. ಪ್ರಕರಣ ಸಂಬಂಧ ಇನ್ನೂ 400 ಸಾಕ್ಷಿಗಳ ವಿಚಾರಣೆ ಬಾಕಿಯಿರುವ ಹಿನ್ನೆಲೆ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ, ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

Read More

ಬೆಂಗಳೂರು :- ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ನಮ್ ರಾಜ್ಯಕ್ಕೆ ತುಂಬಾ ನೋವಾಗಿದೆ. 600 ಚಿತ್ರಗಳಲ್ಲಿ ಮಹಾತಾಯಿ ಲೀಲಾವತಿ ನಟಿಸಿದ್ದಾರೆ. ನಾನು 40 ವರ್ಷದಿಂದ ನೋಡಿದ್ದೀನಿ. ಥಿಯೇಟರ್ ಬಗ್ಗೆ ಚರ್ಚೆ ಮಾಡ್ತಿದ್ವಿ. ಕೊನೆ ಭೇಟಿಯಲ್ಲಿ ನನ್ ಮನೆಗೆ ಬಂದಿದ್ರು. ಪಶುವೈದ್ಯಶಾಲೆ ಕಟ್ಟಿ ನನ್ನನ್ನ ಕರೆದ್ರು. ಅದೃಷ್ಟ ಬದಲಾಗುತ್ತೆ, ನಿರ್ಧಾರ ಅಲ್ಲ..! ಅವರು ನನ್ನನ್ನ ಕರೆದ್ದಿದ್ದೆ ನನ್ ಅದೃಷ್ಟ. ಪಶುವೈದ್ಯಶಾಲೆ ಉದ್ಘಾಟನೆ ನನ್ ಭಾಗ್ಯ. ಅವರೇ ವ್ಯವಸಾಯ ಮಾಡ್ತಿದ್ರು. ಮನೆ ನಾಯಿ ಊಟ ಮಾಡಿಲ್ಲ ಅಂತ ಕೇಳಿ ಬೇಜಾರಾಯ್ತು. ಅವರ ಆದರ್ಶಗಳನ್ನ ನಾವು ಅನುಸರಿಸ್ಬೇಕು. ಸ್ಮಾರಕ ಬಗ್ಗೆ ನಾನು,ಸಿಎಂ ಚರ್ಚೆ ಮಾಡ್ತೀವಿ ಎಂದು ಹೇಳಿದ್ದಾರೆ.

Read More

ಅಂಬೇಡ್ಕರ್​​ ಮೈದಾನದಿಂದ ‌ಲೀಲಾವತಿ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ನಾಲ್ಕುವರೆ ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆ ನಟಿಯಾಗಿ ಮಿಂಚಿದ್ದ ಹಿರಿಯ ನಟಿ ಲೀಲಾವತಿ ಅವರು ಬರೋಬ್ಬರಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇವರ ಅಮೋಘ ಅಭಿನಯಕ್ಕೆ ಅಪಾರ ಸಂಖ್ಯೆಯ ಸಿನಿಪ್ರೇಮಿಗಳು ಮನಸೋತಿದ್ದರು. ಆದ್ರೆ ಕೆಲ ದಿನಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು. ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯಾತಿಗಣ್ಯರು ಲೀಲಾವತಿ ಅವ ನಿವಾಸಕ್ಕೆ ಆಗಮಿಸಿ, ಆರೋಗ್ಯ ವಿಚಾರಿಸಿದ್ದರು. ಆದ್ರೆ ಶುಕ್ರವಾರ ಸಂಜೆ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ರವೀಂದ್ರ ಕಲಾಕ್ಷೇತ್ರಕ್ಕೂ ಮುನ್ನ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ನಟಿ ಪಾರ್ಥೀವ ಶರೀರ ಇರಿಸಲಾಗಿತ್ತು. ಮುಂಜಾನೆ 5:30 ರಿಂದ 10:30ರ ವರೆಗೂ ಸಾರ್ವಜನಿಕರು ಆಗಮಿಸಿ ನಟಿಯ ಅಂತಿಮ ದರ್ಶನ ಪಡೆದರು. ಬಳಿಕ ಅಲ್ಲಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥೀವ ಶರೀರವನ್ನು ತರಲಾಯಿತು. ರವೀಂದ್ರ ಕಲಾಕ್ಷೇತ್ರದ ಬಯಲು ರಂಗಮಂದಿರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು,…

Read More

ಧಾರವಾಡ :- ಪೊಲೀಸ್ ಠಾಣೆಯ ಕೂಗಳತೆ ದೂರಲ್ಲಿಯೇ ಪುಡಾರಿಗಳು ಬಡಿದಾಡಿಕೊಂಡ ಜರುಗಿದೆ. ಧಾರವಾಡ ಸಿಬಿಟಿ ನಿಲ್ದಾಣದ ಬಳಿ ತಡ ರಾತ್ರಿ ನಡೆದ ಘಟನೆಯಲ್ಲಿ ಎರಡು ಗುಂಪುಗಳ ನಡುವೆ ಫೈಟ್ ನಡೆದಿದೆ. ಘಟನೆ ನಡೆದ ಸ್ಥಳದಿಂದ 350 ಮೀಟರ್ ಅಂತರದಲ್ಲಿ ಶಹರ ಪೊಲೀಸ್ ಠಾಣೆ ಇದ್ದು, ಪುಡಾರಿಗಳ ಬಡಿದಾಟ ನೋಡಿ ಸ್ಥಳೀಯ ವ್ಯಾಪಾರಸ್ಥರು ಬೆಚ್ಚಿ ಬಿದ್ದಿದ್ದಾರೆ. ಹಿರಿಯ ನಾಗರಿಕರು ಜಗಳ ಬೀಡಿಸಲು ಹೋದರು ಪುಡಾರಿಗಳು ಕ್ಯಾರೆ ಎನ್ನುತ್ತಿಲ್ಲ. ಬಡಿದಾಟದ ದೃಶ್ಯ ಸ್ಥಳೀಯರ ಮೊಬೈಲ ಕ್ಯಾಮೆರದಲ್ಲಿ ಸೆರೆಯಾಗಿದೆ. ಪೊಲೀಸ್ ಠಾಣೆ ಹತ್ತಿರದಲ್ಲೇ ಇದ್ದರು ಯುವಕರು ಭಯವಿಲ್ಲದೆ ಬಡಿದಾಡಿದ್ದಾರೆ. ಯಾವುದೇ ಪ್ರಾಣ ಹಾನಿ ವರದಿಯಾಗಿಲ್ಲ.ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯವಾಗಿರುವ ಶಂಕೆ ವ್ಯಕ್ತವಾಗಿದೆ. ಧಾರವಾಡ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಜರುಗಿದೆ. ಬಡಿದಾಡಿಕೊಂಡ ಪುಡಾರಿಗಳು ಯಾರು ಎಂಬುವುದ ಪೊಲೀಸರ ತನಿಖೆ ಬಳಿಕ ತಿಳಿಬೇಕಾಗಿದೆ.

Read More

ವಿಜಯಪುರ:- ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿ ಹೊಡೆದಿದ್ದು, ಡ್ರೈವರಿಗೆ & ಸಿಬ್ಬಂದಿಗೆ ಗಾಯವಾಗಿದೆ. ವಿಜಯಪೂರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ರಸ್ತೆಯ ಮಧ್ಯೆ ಘಟನೆ ಜರುಗಿದೆ. ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ. ಗರ್ಭಿಣಿಯನ್ನು ತಾಳಿಕೋಟಿಯಿಂದ ವಿಜಯಪುರಕ್ಕೆ ಕರೆದು ಕೊಂಡು ಬರುವ ವೇಳೆ ಅಪಘಾತ ಸಂಭವಿಸಿದೆ. ಗರ್ಭಿಣಿಗೆ ಯಾವುದೇ ತೊಂದರೆ ಆಗಿಲ್ಲ. ಆಂಬ್ಯುಲೆನ್ಸ್ ಡ್ರೈವರ್‌ & ಸಿಬ್ಬಂದಿಗೆ ಸಣ್ಣಪುಟ್ಟ ಗಾಯವಾಗಿದೆ. ಜಿಲ್ಲಾಸ್ಪತ್ರೆಗೆ ಗಾಯಾಳುಗಳು ದಾಖಲಾಗಿದೆ. ಬಸವನಬಾಗೇವಾಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Read More

ಕನ್ನಡ ಹಿರಿಯ ನಟಿ ಲೀಲಾವತಿಯವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಶುಕ್ರವಾರ ನಿಧನರಾಗಿದ್ದಾರೆ. ಅವರ ಅಂತ್ಯಕಗ್ರಿಯೆ ಇಂದು, ಡಿಸೆಂಬರ್-9 ರಂದು ಸೋಲದೇವನಹಳ್ಳಿ ತೋಟದ ಮನೆಯಲ್ಲಿಯೇ ನಡೆಯಲಿದೆ. ಇನ್ನೂ ಲೀಲಾವತಿ ನಿಧನ ಹಿನ್ನೆಲೆ, ಲೀಲಾವತಿ ನೆನೆದು ಶ್ವಾನ‌ ಕಣ್ಣೀರು ಹಾಕಿದೆ. ಬ್ಲಾಕಿ ಹೆಸರಿನ ನಾಯಿ ಲೀಲಾವತಿ ಫೋಟೋ ಮುಂದೆ ಕಣೀರು ಹಾಕಿರುವುದು ಮನಕಲುಕುವಂತಿದೆ. ಇನ್ನು ನಟಿ ಲೀಲಾವತಿಯ ಅಂತ್ಯಕ್ರಿಯೆ ಬಗ್ಗೆ ಮಗ ವಿನೋದ್ ರಾಜ್ ಮಾಹಿತಿ ನೀಡಿದ್ದು, ಈ ವೇಳೆ ತಾಯಿಯನ್ನು ನೆನೆದು ಭಾವುಕರಾಗಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ವಿನೋದ್ ರಾಜ್ ಅಂಬೇಡ್ಕರ್ ಮೈದಾನದಕ್ಕೆ ಪಾರ್ಥೀವ ಶರೀರ ಕೊಂಡೊಯ್ಯಲಾಗುತ್ತದೆ. ನಂತ್ರ ಅಲ್ಲಿಂದ 11 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಇರಿಸಲಾಗುತ್ತೆ. ತೋಟದ ಮನೆಯಲ್ಲಿ ಕಾರ್ಯ ನಡೆಸಲಾಗುತ್ತೆ ಎಂದಿದ್ದಾರೆ.

Read More

ಕಲಬುರ್ಗಿ:- ಪಿಎಸ್​ಐ ಹಗರಣಕ್ಕೆ ಆರ್‌.ಡಿ. ಪಾಟೀಲ್ ವಿರುದ್ಧದ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು ಮಾಡಲಾಗಿದೆ. ಕಲಬುರಗಿ ಹೈಕೋರ್ಟ್ ಪೀಠ ಕಿಂಗ್‌ಪಿನ್ ಆರ್‌.ಡಿ. ಪಾಟೀಲ್ (RD Patil) ವಿರುದ್ಧ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದೆ. ರಾಜ್ಯದೆಲ್ಲೆಡೆ ತನ್ನ ವಿರುದ್ಧ ದಾಖಲಾದ ಪ್ರಕರಣಗಳನ್ನ ವೀಲಿನಗೊಳಿಸಿ ಒಂದೇ ಕಡೆ ವಿಚಾರಣೆ ನಡೆಸಲು ಆರ್‌.ಡಿ. ಪಾಟೀಲ್ ಮನವಿ ಮಾಡಿದ್ದರು. ಅಲ್ಲಿವರೆಗೆ ತನ್ನ ವಿರುದ್ಧ ದಾಖಲಾದ ಪ್ರಕರಣಗಳ ತನಿಖೆಗೆ ತಡೆಯಾಜ್ಞೆ ಪಡೆದಿದ್ದರು. ಇದೀಗ ಆರ್‌.ಡಿ. ಪಾಟೀಲ್‌ಗೆ ನೀಡಲಾಗಿದ್ದ ತಡೆಯಾಜ್ಞೆಯನ್ನ ಹೈಕೋರ್ಟ್ ತೆರವುಗೊಳಿಸಿದೆ. ಎಲ್ಲಾ ಎಫ್‌ಐಆರ್‌ಗಳಿಗೆ ದಾಖಲಾದ ಪ್ರಕರಣಗಳನ್ನ ಒಂದೇ ಕಡೆ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಕಿಂಗ್‌ಪಿನ್ ಆರ್‌.ಡಿ. ಪಾಟೀಲ್ ಮೇಲ್ಮನವಿಗೆ ಹೈಕೋರ್ಟ್ ಪೀಠ ಪ್ರತಿಕ್ರಿಯೆ ನೀಡಿದೆ. ಸದ್ಯ ತಡೆಯಾಜ್ಞೆ ತೆರವು ಹಿನ್ನಲೆ ಪಿಎಸ್​ಐ ಕೇಸ್ ನಲ್ಲೂ ವಿಚಾರಣೆ ಸಾಧ್ಯತೆ ಇದೆ.

Read More