ಶ್ರೀಬ್ರಹ್ಮಲಿಂಗೇಶ್ವರ ಫಿಲಂಸ್ ಲಾಂಛನದಲ್ಲಿ ಕೆ.ಭಾಸ್ಕರ್ ನಾಯ್ಕ್ (ಮಾರಣಕಟ್ಟೆ) ಹಾಗೂ ಸಾಮ್ರಾಟ್ ಮಂಜುನಾಥ್.ವಿ (ಗರುಡಾಚಾರ್ ಪಾಳ್ಯ) ನಿರ್ಮಿಸುತ್ತಿರುವ ಹಾಗೂ ಮುರಳಿ ಎಸ್ ವೈ ನಿರ್ದೇಶನದ “ಕದನ ವಿರಾಮ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಬಿಲ್ಡರ್ ಸುರೇಶ್ ಆರಂಭ ಫಲಕ ತೋರಿದರು. ಉದ್ಯಮಿ ಚಿಕ್ಕಣ್ಣ ಕ್ಯಾಮೆರಾ ಚಾಲನೆ ಮಾಡಿದರು. ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. “ರಿವಿಲ್” ಚಿತ್ರದ ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರವಿದು. “ಕದನ ವಿರಾಮ” ಎಂದರೆ ಭೂಮಿ ಹಾಗೂ ಮನುಷ್ಯನ ನಡುವೆ ನಡೆಯುವ ಕಥೆ(ಲ್ಯಾಂಡ್ ವಿಚಾರವಾಗಿ). ನಿರ್ಮಾಪಕ ಭಾಸ್ಕರ್ ನಾಯ್ಕ್ ಕಥೆ ಬರೆದಿದ್ದಾರೆ. ನಾನು ಚಿತ್ರಕಥೆ, ಸಂಭಾಷಣೆ ಬರೆದಿದ್ದೇನೆ. ಐದು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ. ವಿ.ಮನೋಹರ್ ಸಂಗೀತ ನಿರ್ದೇಶನ ಹಾಗೂ ರಿಜೊ ಪಿ ಜಾನ್ ಅವರ ಛಾಯಾಗ್ರಹಣವಿರುವ “ಕದನ ವಿರಾಮ” ಚಿತ್ರದ ಬಹುತೇಕ ಚಿತ್ರೀಕರಣ ಕುಂದಾಪುರದಲ್ಲಿ ನಡೆಯಲಿದೆ. ಈ ತಿಂಗಳ ಕೊನೆಗೆ…
Author: AIN Author
ಬೆಂಗಳೂರು: ಈ ಬಿಬಿಎಂಪಿ ಅಧಿಕಾರಿಗಳ ದರ್ಪ, ಅಧಿಕಾರ ಏನಿದ್ರೂ, ಕೇವಲ ಬಡ ಜನರ ಅಮಾಯಕರ ಮೇಲೆ ಮಾತ್ರ. ನಗರದ ದೊಡ್ಡ ದೊಡ್ಡ ಉದ್ಯಮಿಗಳು ಉಳ್ಳವರ ಮುಂದಾಗಲಿ ಪಾಲಿಕೆ ಅಧಿಕಾರಿಗಳ ಆಟ ಏನು ನೆಡೆಯುವುದಿಲ್ಲ ಅಂತ ಇದೀಗ ಮತ್ತೊಮ್ಮೆ ಸಾಬೀತಾಗಿದೆ.ಏನು ಅಂತೀರಾ ಈ ಸ್ಟೋರಿ ನೋಡಿ. ಬಿಬಿಎಂಪಿಯ ಕೆಲ ಅಧಿಕಾರಿಗಳು ಯಾವ ಕೆಲಸ ಮಾಡಲು ಇದ್ದರೋ ಗೊತ್ತಾಗ್ತಿಲ್ಲ, ಯಾಕಂದ್ರೆ ನಗರದಲ್ಲಿ ರಾಜಾ ರೋಷಾವಾಗಿ ಎಲ್ಲಾರೆದುರು ಜಾಹಿರಾತು ಪ್ರದರ್ಶನ ಮಾಡುವ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ನಿಂದ ಸುಮಾರು ಹತ್ತು ವರ್ಷಗಳಿಂದ ನಾಯಾಪೈಸೆ ಕೂಡ ಕಲೆಕ್ಟ ಮಾಡಿಲ್ವಂತೆ.ಹಾಗಾದ್ರೆ ಬಿಬಿಎಂಪಿಗೆ ಹತ್ತು ವರ್ಷಗಳಿಂದ ಶುಲ್ಕ ಕಟ್ಟದೇ ನೂರಾರು ಕೋಟಿ ವಂಚನೆ ಮಾಡಿರುವುದಾಗಿ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ KSCA ವಂಚನೆ ಮಾಡಿರೋದು ಬಯಲಿಗೆ ಬಂದಿದೆ. ಇನ್ನೂ ಪ್ರತಿ ಪಂದ್ಯಾ ನಡೆಯುವಾಗ ವಿವಿಧ ಸಂಸ್ಥೆಗಳು ಬ್ರ್ಯಾಂಡ್ ಗಳ ಜಾಹೀರಾತು ಪ್ರದರ್ಶನ ಮಾಡಿ ಎಂದು KSCA ಗೆ ಸಾವಿರಾರು ಕೋಟಿ ರೂಪಾಯಿ ಜಾಹೀರಾತು ಶುಲ್ಕ ಎಂದು ಕೋಟಿ ಕೋಟಿ ಸಂಗ್ರಹ…
ವಿಜಯ್ ರಾಘವೇಂದ್ರ ಅಭಿನಯದ ‘ಗ್ರೇ ಗೇಮ್ಸ್’ ಚಿತ್ರವು ಇತ್ತೀಚೆಗಷ್ಟೇ ಮುಕ್ತಾಯವಾದ 54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ರೆಡ್ ಕಾರ್ಪೆಟ್ ಗಾಲಾ ಪ್ರೀಮಿಯರ್ ವಿಭಾಗದಲ್ಲಿ ಪ್ರದರ್ಶನವಾಗಿದೆ. ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ಗಂಗಾಧರ್ ಸಾಲಿಮಠ್ ನಿರ್ದೇಶನದ ಈ ಚಿತ್ರಕ್ಕೆ ನೆರೆದಿದ್ದ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುವುದರ ಜೊತೆಗೆ ಒಳ್ಳೆಯ ವಿಮರ್ಶೆಗಳು ಸಿಕ್ಕಿವೆ. ಮೆಟಾವರ್ಸ್ ಮತ್ತು ಆನ್ಲೈನ್ ಗೇಮಿಂಗ್ ವೈಷಮ್ಯದ ಹಿನ್ನೆಲೆಯಲ್ಲಿ ನಿರ್ಮಾಣವಾಗಿರುವ ‘ಗ್ರೇ ಗೇಮ್ಸ್’ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಸೈಕಾಲಜಿಸ್ಟ್ ಪಾತ್ರದಲ್ಲಿ ಕಾಣಿಸಿಕೊಂಡರೆ, ಭಾವನಾ ರಾವ್ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆ. ಶ್ರುತಿ ಪ್ರಕಾಶ್ ಈ ಚಿತ್ರದಲ್ಲಿ ಒಬ್ಬ ನಟಿಯಾಗಿ ಅಭಿನಯಿಸಿದ್ದು, ಈ ಚಿತ್ರದ ಮೂಲಕ ವಿಜಯ್ ರಾಘವೇಂದ್ರ ಅವರ ಅಕ್ಕನ ಮಗ ಜೈ, ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುವುದರ ಜೊತೆಗೆ, ಇಲ್ಲಿ ಒಬ್ಬ ಗೇಮರ್ ಆಗಿ ಕಾಣಿಸಿಕೊಂಡಿದ್ದಾರೆ. ಗೋವಾ ಚಿತ್ರೋತ್ಸವದಲ್ಲಿ ಚಿತ್ರ ಪ್ರದರ್ಶನವಾಗಿದ್ದರ ಕುರಿತು ಸಂತೋಷ ವ್ಯಕ್ತಪಡಿಸಿರುವ ನಿರ್ದೇಶಕ ಗಂಗಾಧರ್ ಸಾಲಿಮಠ್, ‘ಚಿತ್ರೋತ್ಸವದಲ್ಲಿ ನಮ್ಮ ಚಿತ್ರಕ್ಕೆ ಸಿಕ್ಕ ಪ್ರೋತ್ಸಾಹ ಮತ್ತು ವಿಮರ್ಶೆಗಳಿಂದ ನಿಜಕ್ಕೂ ಹೃದಯ…
ಬೆಂಗಳೂರು: ಜನರಿಂದ, ಜನರಿಗಾಗಿ, ಜನರಿಗೋಸ್ಕರ ಅನ್ನೋ ಜನಪ್ರತಿನಿಧಿಗಳ ಅಸಲಿ ಮುಖವಾಡ ಕಳಚೋದು ಅಪರೂಪ. ಇದೇ ರೀತಿ ಒಬ್ಬರು ಜನ ಪ್ರತಿನಿಧಿಯ ಅಸಲಿ ಮುಖವಾಡ ಬಯಲಾಗಿದೆ. ರಾಜಕೀಯಕ್ಕಾಗಿ ನಾಲಿಗೆಗೆ ಹಚ್ಚಿದ್ದ ಬಣ್ಣ ಅಳಸಿ ಹೋಗಿ ಬಡವನ ವಿರುದ್ಧ ಮಾತಿನ ಬಾಣ ಚಿಮ್ಮಿದೆ. ಆದ್ರೆ ಅದೇ ಬಾಣ ಇದೀಗ ಮುಳುವಾಗೋ ಮುನ್ಸೂಚನೆ ಸಿಕ್ಕಿದೆ. ಹೌದು ಭವನಾ ರೇವಣ್ಣ ಕಾರು ಅಪಘಾತ ‘ಪ್ರಕರಣಕ್ಕೆ ಬಿಬಿಎಂಪಿ ಕಾಂಟ್ರಾಕ್ಟರ್ ಗಳ ನಂಟು ಸುತ್ತಿಕೊಂಡಿದೆ. ಏನ್ ಅವಾಜ್ ಏನ್ ಕತೆ. ನಡುರಸ್ತೆಲಿ ಒಬ್ರು ಮಹಿಳಾ ಮಣಿ ಬಾಯಲ್ಲಿ ಎಂತಾ ಸುಸಂಸ್ಕೃತ ಪದಗಳು. ಕಾರಿನ ಸುತ್ತ ರೌಂಡ್ಸ್ ಹಾಕುತ್ತ ದೊಡ್ಡಗೌಡರ ಕುಟುಂಬದ ಹಿರಿಯ ಸೊಸೆ, ಮಾಜಿ ಸಚಿವ ಹೆಚ್.ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಫುಲ್ ಗರಂ. ಹೌದು.. ಯಾರಾದ್ರೂ ಅಪಘಾತಕ್ಕೀಡಾದ್ರೆ ಮೊದಲು ಅವರಿಗೆ ಏನಾಗಿದೆ. ಅವರನ್ನ ಆಸ್ಪತ್ರೆಗೆ ಸೇರಿಸಬೇಕು ಅಂತ ಯೋಚನೆ ಮಾಡ್ಬೇಕು. ಆದರೆ ಭವಾನಿ ರೇವಣ್ಣ ಅವರು ಅಪಘಾತ ಆಗ್ತಿದ್ದಂತೆ ತೋರಿದ ದರ್ಪ ಆಡಿದ ಮಾತು ಮಾತ್ರ ಅತ್ಯಂತ…
ಬೆಂಗಳೂರು: ತಿರುಪತಿ ಲಡ್ಡು ಪ್ರಸಾದ ಅಂದ್ರೆ ಪ್ರತಿಯೊಬ್ಬ ಭಕ್ತರಿಗೂ ಅಚ್ಚುಮೆಚ್ಚು. ಕಷ್ಟಪಟ್ಟು ತಿರುಮಲ ಬೆಟ್ಟ ಹತ್ತೋ ಭಕ್ತರಂತೂ ಲಡ್ಡು ಪ್ರಸಾದವನ್ನು ಸ್ವೀಕರಿಸಿ ಪುನೀತರಾಗುತ್ತಾರೆ. ತಿಮ್ಮಪ್ಪನ ಲಡ್ಡು ಪ್ರಸಾದದ ಸ್ವಾದಿಷ್ಟ ರುಚಿಗೆ ನಂದಿನಿ ತುಪ್ಪವನ್ನೇ ಬಳಸಲಾಗುತ್ತಿತ್ತು. ಆದರೆ ಇನ್ನುಮುಂದೆ ತಿರುಪತಿ ಲಡ್ಡು ಪ್ರಸಾದದಲ್ಲಿ ನಂದಿನಿ ತುಪ್ಪ ಇರಲ್ಲ. ಯಾಕಂದ್ರೆ ತಿರುಪತಿ ತಿಮ್ಮಪ್ಪ ಹಾಗೂ ನಂದಿನಿ ತುಪ್ಪದ ಸಂಬಂಧ ಟೆಂಡರ್ ಮೂಲಕ ಮತ್ತೆ ಕಡಿತವಾಗಿದೆ. ತಿರುಪತಿ ತಿಮ್ಮಪ್ಪನ ವಿಷಯ ಬಂದ್ರೆ ಹಣ-ಭಕ್ತಿ ಜತೆಗೆ ಹೆಚ್ಚು ಪ್ರಸ್ತಾಪವಾಗೋದು ಅಲ್ಲಿ ಪ್ರಸಾದವಾಗಿ ನೀಡಲಾಗುವ ಲಾಡು. ರುಚಿಕರವಷ್ಟೇ ಅಲ್ಲ ಘಮಘಮಿಸುವ ಸುಗಂಧದಿಂದ ಎಲ್ಲರನ್ನು ಸೆಳೆಯುವ ಲಾಡುವಿನ ಶ್ರೇಯಸ್ಸಿಗೆ ಕರ್ನಾಟಕದ ನಂದಿನಿ ತುಪ್ಪದ ಕೊಡುಗೆ ಅಪಾರ ಇತ್ತು.ಆದ್ರೆ ಕೆಲ ವರ್ಷದಿಂದಲೂ ಅದ್ಹೇಕೋ ತಿರುಪತಿ ಲಾಡುವಿನ ರುಚಿ-ಸುಗಂಧ ಬಹುತೇಕರಿಗೆ ಸಹ್ಯವಾಗುತ್ತಿಲ್ಲ ಎನ್ನೋ ಆಪಾದನೆ ಇದೆ..ಇದಕ್ಕೆ ಕಾರಣ ನಮ್ಮ ನಂದಿನಿ ತುಪ್ಪದ ಪೂರೈಕೆ ಸ್ಥಗಿತ.ದರ ಸಂಧಾನದಲ್ಲಿ ವ್ಯತ್ಯಾಸಗಳಾಗಿದ್ದರಿಂದ ಕಡಿಮೆ ದರಕ್ಕೆ ತುಪ್ಪ ಪೂರೈಸ್ಲಿಕ್ಕೆ ಆಗೊಲ್ಲ ಎಂದು ಕೆಎಂಎಫ್ ಹೇಳಿರೋದ್ರಿಂದ ನಿಮ್ಮ ತುಪ್ಪ ನಮಗೆ…
ಬೆಳಗಾವಿ: ಸಮನ್ವಯತೆ ಕೊರತೆಯಿಂದ ನಿನ್ನೆ ಸದನದಲ್ಲಿ ಗೊಂದಲ ಆಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸ್ಪಷ್ಟನೆ ನೀಡಿದ್ದಾರೆ. ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಧರಣಿ, ಸಭಾತ್ಯಾಗ ವಿಚಾರದಲ್ಲಿ ಬಿಜೆಪಿ ನಾಯಕರ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿ, ನಿನ್ನೆ ನಡೆದ ಘಟನೆ ಬಗ್ಗೆ ಮಾಧ್ಯಮದಲ್ಲಿ ಗೊಂದಲ ಎಂದು ಸುದ್ದಿಯಾಗಿದೆ. ಎಲ್ಲ ನಾಯಕರ ಅಭಿಪ್ರಾಯ ಪಡೆದು ತೀರ್ಮಾನ ಮಾಡಿದ್ದೆವು. ಬಸನಗೌಡ ಪಾಟೀಲ್ ಯತ್ನಾಳ್ ಅವರು ಬುಧವಾರದಿಂದ ಉತ್ತರ ಕರ್ನಾಟಕ ವಿಚಾರ ಚರ್ಚೆಗೆ ಬರಬೇಕಿತ್ತು. ಆದರೆ ಧರಣಿಯಿಂದ ಅದಕ್ಕೆ ಅವಕಾಶ ಸಿಗುತ್ತಿಲ್ಲ. ಮತ್ತೆ ನೀವು ಧರಣಿ ಮಾಡಿದರೆ ಅವಕಾಶ ಸಿಗಲ್ಲ. ಸಭಾತ್ಯಾಗ ಮಾಡಬೇಕು ಎಂದು ಅವರೇ ನನ್ನ ಬಳಿ ಬಂದು ಚರ್ಚೆ ಮಾಡಿದ್ದರು ಎಂದು ಸ್ಪಷ್ಟಪಡಿಸಿದರು. ನಿನ್ನೆ ಯತ್ನಾಳ ಅವರು ನನ್ನ ಹತ್ತಿರ ಬಂದು, ಪ್ರತಿದಿನ ಧರಣಿ ಮಾಡಿದರೆ ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಚರ್ಚೆ ಆಗ್ತಿಲ್ಲ. ನೀವು ಸದನದ ಬಾವಿಗೆ ಇಳಿದರೂ ಚರ್ಚೆ ಆಗಲ್ಲ. ಇಲ್ಲಿಗೆ ಬಂದು ಉತ್ತರ ಕರ್ನಾಟಕ ಬಗ್ಗೆ ಚರ್ಚೆ ಆಗಬೇಕು ಎಂದಿದ್ದರು. ಉತ್ತರ…
ಬೆಂಗಳೂರು:- ಸೋಷಿಯಲ್ ಮೀಡಿಯಾದಲ್ಲಿ ಹವಾ ಇಟ್ಟ ದಾಸ ಕಿಂಗ್ ಮೇಕರ್ ಅರೆಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಯಲಹಂಕ ಠಾಣೆಯಲ್ಲಿ ಅಟ್ರಾಸಿಟಿ ಮತ್ತು ಹಲ್ಲೆ ಕೇಸ್ ದಾಖಲಾಗಿತ್ತು. ಜಾಗದ ವಿಚಾರಕ್ಕೆ SC ಕುಟುಂಬಕ್ಕೆ ಎದುರುಗಡೆಯವರು ಕಿರುಕುಳ ಕೊಟ್ಟ ಕೇಸ್ ಆಗಿತ್ತು. ಒಬ್ಬ ಲೇಡಿ ಕೆನ್ನೆಗೆ ಹೊಡೆದು ಕಿವಿಯಲ್ಲಿ ಗಾಯ ಆಗಿತ್ತು. ಜಾಗದ ವಿಚಾರಕ್ಕೆ ಎ1 ರಾಮಮೂರ್ತಿ ಎಂಬಾತ ರೌಡಿ ಆಕ್ಟಿವಿಟಿಯಲ್ಲಿರೋ ದಾಸನ ಸಹಾಯ ಪಡೆದಿದ್ದ. SC ಕುಟುಂಬಕ್ಕೆ ಬೆದರಿಕೆ ಹಾಕಲು ದಾಸನ ಹುಡುಗರನ್ನ ಕರೆಸಿಕೊಂಡಿದ್ದ. ಸಧ್ಯ ದಾಸ ಎಂಬಾತನನ್ನು ಅರೆಸ್ಟ್ ಮಾಡಿದ್ದೇವೆ. ಆತನ ವಿರುದ್ದ ರೌಡಿಶೀಟರ್ ಹಾಕುವ ಪ್ರಕ್ರಿಯೆ ನಡಿತಿದೆ ಎಂದು ಹೇಳಿದ್ದಾರೆ.
ಬೆಂಗಳೂರು:- ಹೊಸ ವರ್ಷಕ್ಕೆ ಈ ಬಾರಿ ಯಾವುದೇ ಕಂಡೀಷನ್ ಇಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಬಾರಿ ಹೊಸ ವರ್ಷಕ್ಕೆ ಯಾವದೇ ಕಂಡೀಷನ್ ಇಲ್ಲ. ಕಳೆದ ಬಾರಿಯೂ ಯಾವದೇ ಕಂಡೀಷನ್ ಇರಲಿಲ್ಲ. ಈ ಬಾರಿಯೂ ಯಾವದೇ ನಿರ್ಬಂಧ ಇರೋದಿಲ್ಲ. 2022 ರಲ್ಲಿ ಕೋವಿಡ್ ಕಾರಣದಿಂದ ನಿರ್ಬಂಧ ಹಾಕಲಾಗಿತ್ತು. ಈ ಬಾರಿಯೂ ಎಲ್ಲಾ ನಿರ್ಬಂಧಗಳು ಸಡಿಲಿಕೆ ಮಾಡುತ್ತೇವೆ. ಸುರಕ್ಷತೆಗೆ ಬಗ್ಗೆ ಪೊಲೀಸ್ ಅಧಿಕಾರಿಗಳು ಗಮನ ಹರಿಸುತ್ತಾರೆ. ಹೊಸ ವರ್ಷ ಸಂಭ್ರಮಾಚರಣೆ ನಿರ್ಬಂಧಗಳನ್ನ ಪೊಲೀಸ್ ಕಮಿಷನರ್ ತಿಳಿಸುತ್ತಾರೆ. ಹೊಸ ವರ್ಷಕ್ಕೆ ಬಿಬಿಎಂಪಿ ಯಿಂದ ಕಂಡೀಷನ್ ಇಲ್ಲ ಎಂದು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಹೇಳಿಕೆ ನೀಡಿದ್ದಾರೆ.
ತುಮಕೂರು:-ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸ್ ಠಾಣೆಯ ಪೇದೆ ನಾಪತ್ತೆ ಆಗಿರುವ ಘಟನೆ ಜರುಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬಿದರಕೆರೆ ಬಳಿ ಪೇದೆ ಬಟ್ಟೆ,ಮೊಬೈಲ್, ಬೈಕ್ ಪತ್ತೆಯಾಗಿದೆ. ವೀರೇಶ 24 ನಾಪತ್ತೆಯಾದ ಪೇದೆ ಎನ್ನಲಾಗಿದೆ. ಕೊಪ್ಪಳ ಮೂಲದ ಪೊಲೀಸ್ ಪೇದೆಯಾದ ಇವರು, ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಕಾಣೆಯಾಗಿದ್ದು, ಕೆರೆ ಹಾಗೂ ಬಾವಿ ಬಳಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಅಗ್ನಿ ಶಾಮಕದಳ ಜೊತೆಗೆ ಪೊಲೀಸರಿಂದ ಹುಡುಕಾಟ ಕಾರ್ಯ ನಡೆದಿದೆ. ಇವರಿಗೆ ಡಿಸೆಂಬರ್ 22 ರಂದು ಮದುವೆ ಕೂಡ ನಿಶ್ಚಯವಾಗಿತ್ತು.. ಮದುವೆಗೆಂದು ರಜೆ ಪಡೆದ ಪೊಲೀಸ್ ಪೇದೆ ಇದಕ್ಕಿದ್ದಂತೆ ನಾಪತ್ತೆ ಆಗಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ!
ಧಾರವಾಡ:- ಶಾಸಕ ಬಸನಗೌಡಪಾಟೀಲ್ ಯತ್ನಾಳ ವಿರುದ್ಧ ಕಾಂಗ್ರೆಸ್ ಮುಖಂಡ ತಮ್ಮಾಟಗಾರ ಕಿಡಿಕಾರಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಶಾಸಕ ಯತ್ನಾಳರಿಗೆ ಬಿಜೆಪಿಯ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಯತ್ನಾಳವರು ಹುಚ್ಚರಂತೆ ಮಾತಾಡುತ್ತಿದ್ದಾರೆ. ಅವರಿಗೆ ಮೆಂಟಲ್ ಆಸ್ಪತ್ರೆಯ ಚಿಕಿತ್ಸೆ ಅವಶ್ಯಕತೆ ಇದೆ. ಮುಸ್ಲಿಂ ಧರ್ಮಗುರುಗಳ ಬಗ್ಗೆ ಬೇಕಾಬಿಟ್ಟಿಯಾಗಿ ಮಾತಾಡುತ್ತಿದ್ದಾರೆ ಮುಸ್ಲಿಂ ಗುರುಗಳಾದ ತನ್ವೀರ್ ಹಾಸ್ಮಿ ಪೀರಾ ಅವರ ಬಗ್ಗೆ ಸೊಸಿಯಲ್ ಮೀಡಿಯಾ, ಮಾಧ್ಯಮ ಮುಂದೆ ಸುಖಾಸುಮ್ಮನೆ ಮಾಡುತ್ತಿದ್ದಾರೆ. ಅವರ ಪಕ್ಷದ ಕೇಂದ್ರ ಸಚಿವರಾದ ಗಡ್ಕರಿಗೂ ಗುರುಗಳಾದ ತನ್ವೀರ ಅವರು ಭೇಟಿಯಾಗಿದ್ದಾರೆ. ಅದರ ಪೋಟೋ ಕೂಡಾ ನಾವು ನೀಡುತ್ತೇವೆ. ಯತ್ನಾಳ ಅವರು ನೀಡಿರುವ ಪೋಟೋ ಅಲ್ ಹಾಸ್ಮಿ ಡಾಟ್ ವರ್ಜ್ ವೆಬಸೈಟ್ನಲ್ಲಿದ್ದು, ವೇಬ್ ಸೈಟಲ್ಲಿ 12 ವರ್ಷ ಹಿಂದಿನ ಪೀರಾ ಗುರುಗಳು ಹಾಕಿರುವ ಪೋಟೊ ಅವು. ದೇಶದಲ್ಲಿನ ಫೇಮಸ್ ದರ್ಗಾದ್ ಹಾಗೇ ಇರಾಕನ ಬಗ್ದಾದ್ ಒಳಗಿನ ಮೆಹಬೂಬ್ ಸುಬಾನಿ ಫೇಮಸ್ ದರ್ಗಾ ಆಗಿದೆ. ದೇಶ ವಿದೇಶಗಳಿಂದ…