Author: AIN Author

ಬೆಂಗಳೂರು: ದಸರಾ ಆನೆ ಅರ್ಜುನ ಪ್ರಾಣ ಕಳೆದುಕೊಂಡ ಜಾಗ ಹಾಗೂ ಮೈಸೂರಿನ ಹೆಚ್.ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಂಬಾರಿ ಹೊತ್ತ ಅರ್ಜುನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅರ್ಜುನನ ಸಾವಿನ ಕುರಿತು ಸಂಪೂರ್ಣ ಮಾಹಿತಿ ಕೇಳಿದ್ದೇನೆ. ಅರ್ಜುನ ಆನೆ ಸಕಲೇಶಪುರದಲ್ಲಿ ಎಲ್ಲಿ ಪ್ರಾಣ ಕಳೆದುಕೊಂಡಿದ್ನೋ ಅಲ್ಲಿಯೇ ಸ್ಮಾರಕ ಮಾಡುತ್ತೇವೆ. ಹಾಗೂ ಹೆಗ್ಗಡದೇವನಕೋಟೆಯಲ್ಲಿಯೂ ಸ್ಮಾರಕ ಮಾಡಲು ತಿಳಿಸಿದ್ದೇವೆ ಎಂದರು. ಅರ್ಜುನ ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದವನ ಅಚಾನಕ್ ಸಾವಾಗಿದೆ. ಆತ ಇನ್ನೂ ಹೆಚ್ಚು ಕಾಲ ಬದುಕಬೇಕಿತ್ತು, ಇನ್ನೊಂದು ಆನೆ ಕಾರ್ಯಾಚರಣೆಗೆ ಅರ್ಜುನ ನನ್ನ ಉಪಯೋಗಿಸಿದ ಕಾರಣ ಸಾವನಪ್ಪಿದೆ ಎಂದು ಸಿಎಂ ಹೇಳಿದರು. ಇತ್ತ ಹಾಸನದಲ್ಲಿ ಮಾವುತ ವಿನು ಮಾತನಾಡುತ್ತಾ, ಅರ್ಜುನನ್ನು ನೆನೆದು ಕಣ್ಣೀರು ಹಾಕಿದರು. https://ainlivenews.com/the-founder-of-byjus-who-barricaded-his-own-house-to-give-salary-to-the-employees/ ಕಾದಾಟದ ವೇಳೆ ಕಾಲಿನಲ್ಲಿ ರಕ್ತ ಬಂತು. ಆದರೂ ಮದಗಜದ ಜೊತೆಗೆ ಹೋರಾಡಿದ. ನಂತರ ಮಿಸ್ ಫೈರ್ ಆಗಿ ಕಾಲಿಗೆ ಗುಂಡು ಬಿತ್ತು. ಪ್ರಶಾಂತ ಇಲ್ಲದಿದ್ದರೂ ಅರ್ಜುನ ಹೋರಾಡಿ ಗೆಲ್ಲುತ್ತಿದ್ದನು. ಆದರೆ…

Read More

ಡಿ.ಎಂ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಟಿ.ಎಂ.ಸೋಮರಾಜು ಅವರು ನಿರ್ಮಿಸಿರುವ ಹಾಗೂ ಮುತ್ತು ಎ.ಎನ್ ನಿರ್ದೇಶಿಸಿರುವ “ಲೇಡಿಸ್ ಬಾರ್” ಚಿತ್ರದ ಟೀಸರ್ ಹಾಗೂ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು ರಾಜಕೀಯ ಮುಖಂಡರಾದ ಎಂ.ಡಿ.ಲಕ್ಷ್ಮೀನಾರಾಯಣ್ ಟೀಸರ್ ಬಿಡುಗಡೆ ಮಾಡಿದರು. ಹಾಡುಗಳನ್ನು ನಟಿ ರೂಪಿಕಾ, ಮಮತ ಹಾಗೂ ನಿರ್ಮಾಪಕ ಶಿಲ್ಪ ಶ್ರೀನಿವಾಸ್ ಹಾಡುಗಳನ್ನು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಸಿರಿ ಮ್ಯೂಸಿಕ್ ಮೂಲಕ ಹಾಡುಗಳು ಲೋಕಾರ್ಪಣೆಯಾಗಿದೆ. ನಂತರ ಚಿತ್ರತಂಡದ ಸದಸ್ಯರು “ಲೇಡಿಸ್ ಬಾರ್” ಕುರಿತು ಮಾಹಿತಿ ನೀಡಿದರು. “ಲೇಡಿಸ್ ಬಾರ್” ಶೀರ್ಷಿಕೆ ಕೇಳಿದ ತಕ್ಷಣ ಕುಡಿತದ ಬಗ್ಗೆ ಸಿನಿಮಾ ಅಂದುಕೊಳ್ಳುವುದು ಸಹಜ. ಆದರೆ ನಮ್ಮ ಚಿತ್ರದಲ್ಲಿ ಬರೀ ಕುಡಿತವಷ್ಟೇ ತೋರಿಸಿಲ್ಲ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಪ್ರಯತ್ನ ಮಾಡಿದ್ದೇವೆ. ಚಿತ್ರ ನೋಡಿದಾಗ ಅದು ತಿಳಿಯುತ್ತದೆ. ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣ ಮಾಡಿದ್ದೇವೆ‌. ಸದ್ಯದಲ್ಲೇ ಚಿತ್ರವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಲಿದ್ದು, ಜನವರಿಯಲ್ಲಿ ತೆರೆಗೆ ತರುತ್ತೇವೆ ಎಂದು ನಿರ್ದೇಶಕ ಎ.ಎನ್ ಮುತ್ತು ತಿಳಿಸಿದರು. ನಾನು ಉದ್ಯಮಿ ಜೊತೆಗೆ ರೈತ ಕೂಡ ಎಂದು ಮಾತನಾಡಿದ…

Read More

ಬೆಂಗಳೂರು;- ರಾಜ್ಯದಲ್ಲಿ ಭ್ರೂಣಹತ್ಯೆ ತಡೆಗೆ ಪೊಲೀಸ್ ಇಲಾಖೆ ಹೊಸ ನಿಯಮ ಜಾರಿಗೆ ತರಲು ಚಿಂತನೆ ನಡೆಸಿದೆ. ಇನ್ಮುಂದೆ 6 ತಿಂಗಳು ಮತ್ತು ನಂತರದ ಭ್ರೂಣ ಹತ್ಯೆ ಮಾಡಿದರೆ ಕೊಲೆ ಕೇಸ್​ ದಾಖಲಿಸಲು ಪೊಲೀಸ್ ಇಲಾಖೆ ಪ್ಲ್ಯಾನ್ ಮಾಡುತ್ತಿದೆ ಎಂದು ತಿಳಿದುಬಂದಿದೆ. ಇನ್ಮುಂದೆ 6 ತಿಂಗಳು ಮತ್ತು ನಂತರದ ಭ್ರೂಣ ಹತ್ಯೆ ಮಾಡಿದರೆ ಕೊಲೆ ಕೇಸ್​ ದಾಖಲಿಸಲು ಪೊಲೀಸ್ ಇಲಾಖೆ ಪ್ಲ್ಯಾನ್ ಮಾಡುತ್ತಿದೆ ಎಂದು ತಿಳಿದುಬಂದಿದೆ. ಭ್ರೂಣ ಹತ್ಯೆ ಮಾಡಿದ್ರೆ ಐಪಿಸಿ 302 ಅಡಿ ಕೇಸ್ ದಾಖಲಿಸಿಕೊಳ್ಳಲು ಚಿಂತನೆಗಳು ನಡೆದಿದ್ದು, ಈ ಹೊಸ ನಿಯಮ ಜಾರಿಗೆ ತರುವ ಬಗ್ಗೆ ಹಿರಿಯ ಪೊಲೀಸ್​ ಅಧಿಕಾರಿಗಳು ಗಂಭೀರ ಚಿಂತನೆ ನಡೆಸಿದ್ದಾರೆ. ಕೊಲೆ ಪ್ರಕರಣ ದಾಖಲು ಮಾಡಲು ಕರಡು ತಯಾರಿಸುವ ಬಗ್ಗೆ ಚರ್ಚೆಗಳು ನಡೆದಿದ್ದು, ಕರಡು ಸಿದ್ದಪಡಿಸಿ ಜಾರಿಗೆ ತರುವಂತೆ ಆರೋಗ್ಯ ಅಧಿಕಾರಿಗಳಿಗೆ ಸಲಹೆ ನೀಡಲಾಗಿದೆ. ಒಂದು ವೇಳೆ ಇದು ಜಾರಿಗೆ ಬಂದರೆ ಆರು ತಿಂಗಳು ಮತ್ತು ನಂತರದ ಭ್ರೂಣ ಹತ್ಯೆ ಮಾಡಿದರೆ ಅಂತರವರ ವಿರುದ್ಧ ಐಪಿಸಿ…

Read More

ಬೆಂಗಳೂರು:- ಆರೋಪಿಗೆ ಪಾಸ್​ಪೋರ್ಟ್ ನವೀಕರಣ ಅವಕಾಶ ನಿರಾಕರಿಸಿದ್ದ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ, ಪಾಸ್‌ ಪೋರ್ಟ್ ನವೀಕರಣಕ್ಕೆ ನಿರಾಕರಿಸಿ ಪ್ರಾದೇಶಿಕ ಪಾಸ್ ಪೋರ್ಟ್ ಅಧಿಕಾರಿ ನೀಡಿದ್ದ ಹಿಂಬರಹವನ್ನು ಎತ್ತಿಹಿಡಿದಿದೆ. ಪಾಸ್ ಪೋರ್ಟ್ ಕಾಯಿದೆಯ ಯಾವುದೇ ನಿಯಮಗಳಲ್ಲಿ ಪಾಸ್ ಪೋರ್ಟ್ ವಿತರಣೆ/ನವೀಕರಣಕ್ಕೆ ಬಾಕಿ ಇರುವ ಕ್ರಿಮಿನಲ್ ಕೇಸ್ ಅಲಕ್ಷಿಸುವ ಯಾವುದೇ ಪ್ರತ್ಯೇಕ ಮಾನದಂಡವಿಲ್ಲ. ಭಾರತೀಯ ಸಂವಿಧಾನದ 226ನೇ ವಿಧಿಯಡಿ ಲಭ್ಯವಿರುವ ಅಧಿಕಾರವನ್ನು ಬಳಸಿ ಈ ಕೋರ್ಟ್ ಒಂದು ಆದೇಶದ ಮೂಲಕ ನಿಯಮವನ್ನು ಸರಳೀಕರಣ ಮಾಡಲಾಗದು. ಸೆಕ್ಷನ್ 6(2)(ಎಫ್) ಪ್ರಕಾರ ಯಾವುದೇ ಪಾಸ್​ ಪೋರ್ಟ್ ಅರ್ಜಿ ಸಲ್ಲಿಕೆಯಾದರೂ ಸಹ ಅದು ಹೊಸದಾಗಿ ವಿತರಣೆ, ನವೀಕರಣ ಹಾಗೂ ಮರು ವಿತರಣೆಗೆ ಆಗಿರಬಹುದು. ಅಂತಹ ವೇಳೆ ನಿಯಮಗಳನ್ನು ಸಡಿಲಿಕೆ ಮಾಡಲಾಗದು ಎಂದು ಪೀಠ ತಿಳಿಸಿದೆ.

Read More

ನವದೆಹಲಿ:-ಚಲಿಸುವ ರೈಲಿನಲ್ಲಿ ಯುವಜೋಡಿ ಮದುವೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪ್ರಯಾಣಿಕರ ನಡುವೆ ಯುವಕನೊಬ್ಬ ಯುವತಿಗೆ ತಾಳಿ ಕಟ್ಟುತ್ತಿರುವ ಮತ್ತು ಹಾರ ಬದಲಾಯಿಸುತ್ತಿರುವ ದೃಶ್ಯವಿದೆ. ಪರಸ್ಪರ ಇಬ್ಬರು ತಬ್ಬಿಕೊಳ್ಳುತ್ತಿರುವುದು ಹಾಗೂ ಯುವತಿಯನ್ನು ಯುವಕ ಸಂತೈಸುತ್ತಿರುವುದು ಮತ್ತು ಪ್ರಯಾಣಿಕರು ನವಜೋಡಿಗೆ ಶುಭ ಹಾರೈಸುತ್ತಿರುವ ಭಾವುಕ ಕ್ಷಣಗಳಿಗೆ ರೈಲು ಸಾಕ್ಷಿಯಾಯಿತು. ವರದಿಗಳ ಪ್ರಕಾರ ಅಸನ್ಸೋಲ್-ಜಸಿದಿಹ್ ರೈಲಿನಲ್ಲಿ ಈ ವಿಶಿಷ್ಟ ವಿವಾಹ ನಡೆಯಿತು. ಸಹ ಪ್ರಯಾಣಿಕರ ಹರ್ಷೋದ್ಘಾರದ ನಡುವೆ ಯುವಕ, ಯುವತಿಯ ಕುತ್ತಿಗೆಗೆ ಮಂಗಳಸೂತ್ರವನ್ನು ಕಟ್ಟುವ ಮೂಲಕ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರಯಾಣಿಕರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಮದುವೆಯ ದೃಶ್ಯವನ್ನು ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿದೆ.

Read More

ಪ್ರಿಟೋರಿಯಾ: ಭಾರತ (Team India) ವಿರುದ್ಧದ ಮೂರು ಸರಣಿಗಳಿಗೆ ದಕ್ಷಿಣ ಆಫ್ರಿಕಾ (South Africa) ತಂಡ ಪ್ರಕಟಿಸಿದ್ದು, ಟಿ20 ಮತ್ತು ಏಕದಿನ ಸರಣಿಯಿಂದ ನಾಯಕ ತೆಂಬಾ ಬವುಮಾ ಮತ್ತು ಕಗಿಸೊ ರಬಾಡ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಈ ಇಬ್ಬರೂ ಆಟಗಾರರು ಭಾರತ ವಿರುದ್ಧದ ಟೆಸ್ಟ್ ಸರಣಿಯನ್ನು ಆಡಲಿದ್ದಾರೆ. ಇವರ ಅನುಪಸ್ಥಿತಿಯಲ್ಲಿ ತಂಡವನ್ನು ಏಡನ್‌ ಮಾರ್ಕ್ರಮ್‌ (Aiden Markram) ಮುನ್ನೆಡೆಸಲಿದ್ದಾರೆ. ಟೀಂ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ಮುಖಾಮುಖಿ 3 ಪಂದ್ಯಗಳ ಟಿ20 ಸರಣಿಯೊಂದಿಗೆ ಆರಂಭವಾಗಲಿದೆ. ಬಳಿಕ ನಡೆಯಲಿರುವ ಏಕದಿನ ಸರಣಿಯಿಂದ ಖಾಯಂ ನಾಯಕ ತೆಂಬಾ ಬವುಮಾಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಸ್ಥಾನವನ್ನು ಏಡನ್‌ ಮಾರ್ಕ್ರಮ್‌ ತುಂಬಲಿದ್ದಾರೆ. ಮಾಕ್ರ್ರಾಮ್ ಈ ಹಿಂದೆಯೂ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಉಳಿದಂತೆ ಟಿ20 ಸರಣಿಗೆ ಆಯ್ಕೆಯಾಗಿರುವ ಜೆರಾಲ್ಡ್ ಕೊಯೆಟ್ಜಿ, ಮಾರ್ಕೊ ಯಾನ್ಸನ್ ಮತ್ತು ಲುಂಗಿ ಎನ್‍ಗಿಡಿಗೆ ಮೂರನೇ ಟಿ20 ಮತ್ತು ಏಕದಿನ ಸರಣಿಯಿಂದ ಕೋಕ್ ನೀಡಲಾಗಿದೆ. ಮೂರು ಸ್ವರೂಪಗಳಿಗೆ ದಕ್ಷಿಣ ಆಫ್ರಿಕಾದ ತಂಡ ಟಿ20 ತಂಡ: ಏಡನ್‌ ಮಾರ್ಕ್ರಮ್‌…

Read More

ಬೆಂಗಳೂರು/ ಬೆಳಗಾವಿ:- ರಾಜ್ಯದಲ್ಲಿ ಹೊಸದಾಗಿ ಸಾರಿಗೆ ಸೆಸ್‌ ವಿಧಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಸಂತೋಷ್ ಲಾಡ್‌ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿನ ಗ್ಯಾರೇಜ್‌ ಕಾರ್ಮಿಕರು ಸೇರಿದಂತೆ ಸಾರಿಗೆ ಕ್ಷೇತ್ರದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ರೂಪಿಸುವ ಸಲುವಾಗಿ ಮೋಟಾರು ವಾಹನಗಳ ಖರೀದಿ ಮೇಲೆ ಸಾರಿಗೆ ಸೆಸ್‌ ವಿಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಇದರಿಂದ 25 ರಿಂದ 40 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ’ ಎಂದರು. ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಗುರ್ಮೆ ಸುರೇಶ್‌ ಶೆಟ್ಟಿ, ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಮಂದಿ ಟೈಲರಿಂಗ್‌ ವೃತ್ತಿನಿರತ ಕಾರ್ಮಿಕರಿದ್ದಾರೆ. ಅವರಿಗೆ ಕಾರ್ಮಿಕ ಇಲಾಖೆಯು ಯಾವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಜತೆಗೆ ಕಟ್ಟಡ ಕಾರ್ಮಿಕರ ಸೆಸ್‌ನಿಂದ ಟೈಲರ್‌ಗಳು, ನೇಕಾರರಂತಹ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಸಂತೋಷ್‌ ಲಾಡ್‌, ಇ-ಶ್ರಮ್‌ ಪೋರ್ಟಲ್‌ ಮೂಲಕ 7.28 ಲಕ್ಷ ಟೈಲರ್‌ ಗಳು ಅಸಂಘಟಿತ ಕಾರ್ಮಿಕರಾಗಿ ನೋಂದಣಿ…

Read More

ಬೆಂಗಳೂರು:- ಮಹಾನಗರಗಳ ಪೈಕಿ ಬೆಂಗಳೂರು ನಗರ ಸೈಬರ್ ಅಪರಾಧಗಳಲ್ಲಿ ಮೊದಲ ಸ್ಥಾನದಲ್ಲಿದೆ. ಸೈಬರ್ ಕ್ರೈಂ ಕುರಿತು ಜನರಲ್ಲಿ ಜಾಗೃತಿ ಮೂಡಿ ಪೊಲೀಸ್ ಠಾಣೆಗೆ ದೂರು ಕೊಡುವರ ಮತ್ತು ಕಳ್ಳರ ಪ್ರಮಾಣದಲ್ಲಿ ಹೆಚ್ಚಳದ ಪರಿಣಾಮ ಪ್ರಕರಣಗಳ ಸರಾಸರಿ ಏರಿಕೆಯಾಗಿದೆ ಎನ್ನಲಾಗಿದೆ. ದೇಶದಲ್ಲಿ 2021ರಲ್ಲಿ 52,974 ಸೈಬರ್ ಪ್ರಕರಣಗಳು ದಾಖಲಾಗಿದ್ದರೇ, 2022ರಲ್ಲಿ 65,893 ಕೇಸ್ ದಾಖಲಾಗಿವೆ. ಇದೇ ಅಲ್ಲದೆ ಆರ್ಥಿಕ ಅಪರಾಧ (ಶೇ.11), ಹಿರಿಯ ನಾಗರಿಕರ ವಿರುದ್ಧ ಅಪರಾಧ (ಶೇ.9), ಮಹಿಳೆಯರ ವಿರುದ್ಧ (ಶೇ.4) ಅಪರಾಧಗಳು ಸಹ ಹೆಚ್ಚಳವಾಗಿರುವ ಅಂಶ ರಾಷ್ಟ್ರೀಯ ಅಪರಾಧ ದಾಖಲಾತಿ ಸಂಸ್ಥೆ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯಲ್ಲಿ ಬೆಳಕಿಗೆ ಬಂದಿದೆ. ಸೈಬರ್ ಕ್ರೈಂ ಅಡಿಯಲ್ಲಿ 65,893 ಪ್ರಕರಣಗಳು ದಾಖಲಾಗಿವೆ. ತೆಲಂಗಾಣದಲ್ಲಿ 2022ನೇ ಸಾಲಿನಲ್ಲಿ 15,297 ಕೇಸ್‌ಗಳು ದಾಖಲಾಗಿದ್ದು, ಮೊದಲ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ 12,556 ಮತ್ತು ಉತ್ತರ ಪ್ರದೇಶದಲ್ಲಿ 10,117 ಪ್ರಕರಣಗಳು ದಾಖಲಾಗಿದ್ದು, 2 ಮತ್ತು 3ನೇ ಸ್ಥಾನದಲ್ಲಿವೆ. ಕರ್ನಾಟಕದಲ್ಲಿ ದಾಖಲಾಗಿರುವ 12,556 ಸೈಬರ್ ಕ್ರೈಂಗಳ ಪೈಕಿ 11,025 ವಂಚನೆ, 338…

Read More

ದಾಖಲೆ ಮಟ್ಟಕ್ಕೆ ಏರಿದ್ದ ಚಿನ್ನದ ಬೆಲೆ ಮತ್ತೆ ಇಳಿಕೆ ಕಂಡಿದೆ. ನಿನ್ನೆ ದಾಖಲೆ ಮಟ್ಟಕ್ಕೆ ಚಿನ್ನದ ಬೆಲೆ ಹೋಗಿತ್ತು. ಈಗ ತುಸು ಕಡಿಮೆ ಆಗಿರುವುದು ಗಮನಾರ್ಹ. ಗ್ರಾಮ್​ಗೆ 100 ರೂನಷ್ಟು ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,850 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,925 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 6ಕ್ಕೆ): 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,850 ರೂ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,110 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 785 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22…

Read More

ಹುಬ್ಬಳ್ಳಿ: ರಾಜ್ಯದ ವಿವಿಧ ಜಿಲ್ಲೆಗಳನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಿದ್ದು, ಧಾರವಾಡ ಜಿಲ್ಲೆಗೆ ₹212 ಕೋಟಿ ಬರ ಪರಿಹಾರದ ಹಣ ಬರಬೇಕಿತ್ತು. ಆದರೆ ಇದುವರೆಗೆ ಯಾವುದೇ ಹಣ ಜಮಾ ಆಗಿಲ್ಲ. ಈ ಕೂಡಲೇ ಧಾರವಾಡ ಜಿಲ್ಲೆಗೆ ಪರಿಹಾರ ಬಿಡುಗಡೆ ಮಾಡಲು ಆಗ್ರಹಿಸಿ ಬಾರುಕೋಲು ಚಳುವಳಿ ಮುಖಾಂತರ ರತ್ನಭಾರತ ರೈತ ಸಮಾಜದ ವತಿಯಿಂದ ಡಿ. 7ರಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರತ್ನ ರೈತ ಭಾರತ ಸಮಾಜದ ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ಕಳಸಾ ಬಂಡೂರಿ ಮಹದಾಯಿ ಯೋಜನೆ ಹೋರಾಟಗಾರರು ಆದ ಹೇಮನಗೌಡ ಬಸನಗೌಡ್ರ ಆಗ್ರಹಿಸಿದರು. ರಾಜ್ಯದಾದ್ಯಂತ ಬರಗಾಲಕ್ಕೆ ತುತ್ತಾಗಿ ರೈತರು ಬೆಳೆ ಸಾಲ ಮಾಡಿ ತುಂಬಲಾಗದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ರೈತರು ತುಂಬಿದ ಬೆಳೆ ವಿಮೆ ಹಣವನ್ನು ಮಿಮಾ ಕಂಪನಿಯಿಂದ ಕೊಡಿಸಬೇಕು, ಕೇಂದ್ರ ಸರ್ಕಾರದಿಂದ ರೈತರಿಗೆ ₹6 ಸಾವಿರ ಮತ್ತು ರಾಜ್ಯ ಸರ್ಕಾರದಿಂದ ಬರುವ ₹4 ಸಾವಿರವನ್ನು ರಾಜ್ಯ ಸರ್ಕಾರ ತಡೆ ಹಿಡಿದಿದ್ದು, ಕೂಡಲೇ ಪುನರಾರಂಭಿಸುವಂತೆ ಅಧಿವೇಶನದಲ್ಲಿ ಕ್ರಮ ಕೈಗೊಳ್ಳಬೇಕು…

Read More