ತುಮಕೂರಿನ:- ಗುಂಚಿ ಸರ್ಕಲ್ ಬಳಿಯಿರುವ ಎಸ್ಎನ್ಡಿ ಜ್ಯುವೆಲ್ಲರಿ ಶಾಪ್ನಲ್ಲಿ ತಾಯಿ-ಮಗಳ ಸೋಗಿನಲ್ಲಿ ಜ್ಯುವೆಲ್ಲರಿ ಶಾಪ್ ಗೆ ಎಂಟ್ರಿಕೊಟ್ಟಿದ್ದ ಖತರ್ನಾಕ್ ಖದೀಮರು, ಚಿನ್ನ ಖರೀದಿಸುವ ನೆಪದಲ್ಲಿ ಬರೊಬ್ಬರಿ 32 ಗ್ರಾಂ ಚಿನ್ನದ ಸರ ಕದ್ದು ಪರಾರಿಯಾದ ಘಟನೆ ಜರುಗಿದೆ. ಇವರ ಕೈಚಳಕದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸದ್ಯ ಘಟನೆ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಖದೀಮರಿಗಾಗಿ ಶೋಧಕಾರ್ಯ ಮುಂದುವರೆದಿದೆ. ಈ ಘಟನೆ ಕಳೆದ ಡಿ.2 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇವರ ಕೃತ್ಯ ಸಿಸಿಕ್ಯಾಮೆರಾದಲ್ಲಿ ಸೆರೆ ಸಿಕ್ಕಿದೆ. ಅದರಲ್ಲಿ ತಾಯಿ -ಮಗಳ ಸೋಗಿನಲ್ಲಿ ಎಂಟ್ರಿ ಕೊಟ್ಟಿರುವ ಓರ್ವ ಯುವತಿ ಹಾಗೂ ಮಹಿಳೆ. ಚಿನ್ನದ ಸರ ಖರೀದಿ ಮಾಡುವುದಾಗಿ ಚಿನ್ನದ ಸರಗಳನ್ನು ವಿಕ್ಷೀಸುತ್ತಿದ್ದಾರೆ. ಬಳಿಕ ಮಾತಿನ ಮೂಲಕ ಜ್ಯುವೆಲ್ಲರಿ ಶಾಪ್ ಮಾಲೀಕನ ಗಮನ ಬೇರೆಡೆ ಸೆಳೆದ ಓರ್ವ ಯುವತಿ ಹಾಗೂ ಮಹಿಳೆ, ಸರ ಕದ್ದು, ಎಟಿಎಂ ನಲ್ಲಿ ಹಣ ಡ್ರಾ ಮಾಡಿಕೊಂಡು ಬರುವುದಾಗಿ ಹೇಳಿ ಎಸ್ಕೇಪದದ ಆಗಿದ್ದಾರೆ.…
Author: AIN Author
ಬೆಂಗಳೂರು : ದೇಶಕ್ಕಾಗಿ ಉಗ್ರರ ವಿರುದ್ಧದ ಹೋರಾಟದಲ್ಲಿ ವೀರ ಮರಣ ಹೊಂದಿದ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರ ಕೊಟ್ಟ ವಾಗ್ದಾನದಂತೆ ಸಹಾಯಾರ್ಥವಾಗಿ 50 ಲಕ್ಷ ಚೆಕ್ ಇಂದು ಜಿಲ್ಲಾಡಳಿತದ ಮೂಲಕ ಹಸ್ತಾಂತರ ಮಾಡಿದೆ. ಕ್ಯಾಪ್ಟನ್ ಪ್ರಾಂಜಲ್ ಅಂತಿಮ ದರ್ಶನ ಪಡೆದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಹುತಾತ್ಮ ವೀರ ಸೇನಾನಿ ಕುಟುಂಬಕ್ಕೆ 50 ಲಕ್ಷ ರಾಜ್ಯ ಸರ್ಕಾರದಿಂದ ಸಹಾಯಾರ್ಥವಾಗಿ ನೀಡುವುದಾಗಿ ಘೋಷಣೆ ಮಾಡಿದ್ದರು. ಕೊಟ್ಟ ಮಾತಿನಂತೆ ಇಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ ಎ ದಯಾನಂದ್, ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆ ನಿರ್ದೆಶಕರು ಶಶಿಧರ್ ಸೇರಿದಂತೆ ಹಿರಿಯ ಅಧಿಕಾರಿಗಳು ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಜಿಗಣಿ ಬಳಿಯ ನಂದನವನ ಬಡಾವಣೆಯಲ್ಲಿರುವ ಹುತಾತ್ಮ ಯೋಧ ಪ್ರಾಂಜಲ್ ಪೋಷಕರ ನಿವಾಸಕ್ಕೆ ಆಗಮಿಸಿ ರಾಜ್ಯ ಸರ್ಕಾರದ ಪರವಾಗಿ ಚೆಕ್ ಹಸ್ತಾಂತರ ಮಾಡಿದ್ದಾರೆ. ಪ್ರಾಂಜಲ್ ತಾಯಿ ಅನುರಾಧ ಮತ್ತು ಪತ್ನಿ ಅದಿತಿ ರವರೆಗೆ ತಲಾ 25 ಲಕ್ಷ ಚೆಕ್ ಹಸ್ತಾಂತರ…
ಪೀಣ್ಯ ದಾಸರಹಳ್ಳಿ:’ ಸಂಸ್ಕೃತಿಯ ಲೋಕಕ್ಕೆ ಪುಸ್ತಕಗಳು ತಾಯಿ ಬೇರಿದ್ದಂತೆ. ಈ ‘ಸಿಕ್ಕು’ ಕೃತಿಯಲ್ಲಿ ವ್ಯಕ್ತಿಯ ಭಾವನೆ, ಮಾನಸಿಕ ಸಂಘರ್ಷಗಳ ಸೂಕ್ಷ್ಮತೆಯನ್ನು ‘ಸಿಕ್ಕು’ ಕಾದಂಬರಿಯಲ್ಲಿ ಮನೋಜ್ಞವಾಗಿ ವಿವರಿಸಿದ್ದಾರೆ’ ಎಂದು ಕಾದಂಬರಿಗಾರ್ತಿ ಸಾಯಿಸುತೆ ತಿಳಿಸಿದರು. ಎಂಟನೇ ಮೈಲಿ ಹತ್ತಿರದ ಅಸೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಸನಾತನಿ ವೇದಿಕೆ ಮತ್ತು ಧ್ಯಾನ ಪ್ರಕಾಶನ ವತಿಯಿಂದ ಆಯೋಜಿಸಲಾದ ಕಾದಂಬರಿಗಾರ್ತಿ ಮಮತಾ ವಾರನಹಳ್ಳಿ ಅವರ ‘ಸಿಕ್ಕು’ ಕಾದಂಬರಿ ಬಿಡುಗಡೆ ಮಾಡಿ ಮಾತನಾಡಿದರು. ವಿಸ್ಮಯ ಜಗತ್ತಿನ ಮನುಷ್ಯ ಸಂಬಂಧಗಳ ತೊಳಲಾಟವನ್ನು ಮನಮುಟ್ಟುವಂತೆ ಮಮತಾ ಅವರು ಕಟ್ಟಿಕೊಟ್ಟಿದ್ದಾರೆ’ ಎಂದರು. ಮಾಜಿ ಸಚಿವ ಎನ್. ಮಹೇಶ್ ಮಾತನಾಡಿ’ ಮಹಿಳೆ ತಮ್ಮ ಭಾವನೆಗಳನ್ನು ಸಾಹಿತ್ಯದ ಮೂಲಕ ಅಭಿವ್ಯಕ್ತಗೊಳಿಸುತ್ತಾಳೆ. ಸಾಹಿತ್ಯ, ಸಂಗೀತ ಕೂಡ ಹೆಣ್ಣಿನ ಸಾಮರ್ಥ್ಯದಿಂದ ಬರುತ್ತದೆ. ಪ್ರತಿಯೊಬ್ಬರ ಜೀವನದಲ್ಲೂ ಸಿಕ್ಕು, ಒಗಟುಗಳು ಇರುತ್ತವೆ. ಅದನ್ನು ವಿವೇಚನೆ ಮತ್ತು ವ್ಯವಧಾನದಿಂದ ಬಿಡಿಸಿಕೊಂಡರೆ ಬದುಕು ಸುಂದರವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು. ಶಾಸಕ ಎಸ್. ಮುನಿರಾಜು ಮಾತನಾಡಿ’ ವಿದ್ಯಾಭ್ಯಾಸದ ಜೊತೆಗೆ ಒಳ್ಳೊಳ್ಳೆ ಪುಸ್ತಕಗಳನ್ನು ಓದುವಂತಹ, ಬರೆಯುವಂತಹ ಹವ್ಯಾಸ ಬೆಳೆಸಿಕೊಳ್ಳಬೇಕು’ ಎಂದು…
ಕಣ್ಣಿನ ಸುತ್ತ ಕೆಂಪು ಬಣ್ಣ,,ಕಡುಗಪ್ಪು ದಪ್ಪ ಹುಬ್ಬುಗಳು, ಕತ್ತಲೇ ಬಟ್ಟೆಯಾದಂಥ ನಿಲುವಂಗಿ, ಕೆಂಪು ಚೂಪು ಕೋಡುಗಳು ಒಂದೆಡೆ ಇಷ್ಟು ಭೀಕರ ರೂಪದ ರಕ್ಕಸರ ಗುಂಪು…. ಇನ್ನೊಂದೆಡೆ ಶಾಂತ ಭಾವವನ್ನು ಸೂಸುವ, ಬಿಳಿಯುಡುಗೆಯಲ್ಲಿ ನಗುನಗುತ್ತ ನಿಂತಿರುವವ, ನೆತ್ತಿಯ ಮೇಲೂ ಬಿಳಿಯಾದ ಹೂತೊಟ್ಟ ಗಂಧರ್ವರು. ಯಾವುದಿದು ಗಂಧರ್ವ-ರಕ್ಕಸರ ಮುಖಾಮುಖಿ? ಈ ಪ್ರಶ್ನೆಗೆ ಉತ್ತರ JioCinemaಬಿಡುಗಡೆ ಮಾಡಿರುವ ಪ್ರೊಮೊದಲ್ಲಿ ಇದೆ. ‘ಬಿಗ್ಬಾಸ್ ಮನೆ ಈ ಕ್ಷಣದಿಂದ ಬಿಗ್ಬಾಸ್ ಲೋಕ ಎಂಬ ಕಾಲ್ಪನಿಕ ಜಗತ್ತಾಗಿ ಬದಲಾಗುತ್ತದೆ. ಈ ಲೋಕದಲ್ಲಿ ಗಂದರ್ವರು ಹಾಗೂ ರಾಕ್ಷಸರು ಎಂಬ ಎರಡು ಗುಂಪುಗಳಿವೆ’ ಎಂದು ಬಿಗ್ಬಾಸ್ ಘೋಷಿಸಿದಾಗ ಎಲ್ಲ ಸ್ಪರ್ಧಿಗಳ ಮುಖದಲ್ಲಿ ಅಚ್ಚರಿ. ಕಾರ್ತಿಕ್, ಸಂಗೀತಾ, ತನಿಷಾ, ಅವಿನಾಶ್ ಎಲ್ಲರೂ ಮುಖಕ್ಕೆ ಬಣ್ಣ ಬಳಿದುಕೊಂಡು, ಕೋಡುಗಳುಳ್ಳ ಕಡುಗಪ್ಪು-ಕೆಂಪು ಉಡುಪು ತೊಟ್ಟ ರಕ್ಕಸರಾಗಿ ಬದಲಾದರೆ, ವಿನಯ್, ನಮ್ರತಾ, ವರ್ತೂರು, ತುಕಾಲಿ ಸಂತೋಷ್ ಎಲ್ಲರೂ ಬಿಳಿಯುಡುಗೆ ತೊಟ್ಟು ಗಂಧರ್ವರಾಗಿದ್ದಾರೆ. ಕಾರ್ತಿಕ್, ಅಡುಗೆ ಮನೆಯಲ್ಲಿ ನೀರು ಚೆಲ್ಲಿ, ಬೆಡ್ರೂಮಿನಲ್ಲಿ ಬಟ್ಟೆಗಳನ್ನೆಲ್ಲ ಚೆಲ್ಲಿ ಕಿರುಚಾಡುತ್ತ ಕುಣಿದಾಡಿದ್ದಾರೆ. ಸಂಗೀತಾ, ವಿನಯ್…
ಬೆಳಗಾವಿ:- ಮುಸ್ಲಿಮರಿಗೆ ಸಂಪತ್ತು ಹಂಚುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷದ ಸಂಪತ್ತು ಇದ್ದರೆ ಹಂಚಿಕೊಳ್ಳಲಿ ಎಂದು ವ್ಯಂಗ್ಯವಾಡಿದ್ದಾರೆ. ಟಿಪ್ಪು ಅಂದರೆ ಸಿದ್ದರಾಮಯ್ಯನವರಿಗೆ ಬಹಳ ಪ್ರೀತಿ. ಅವರ ಹೇಳಿಕೆ ದೇಶ ಮತ್ತು ರಾಜ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಟಿಪ್ಪು ಮೇಲೆ ಅತಿಯಾದ ಪ್ರೀತಿ ತೋರಿಸಿ ಹಿಂದೆ ಏನಾಯ್ತು? ಎಂಬುದನ್ನು ಅವರು ಮನಗಾಣಬೇಕು ಎಂದು ಟೀಕಿಸಿದರು. ಹಿಂದೂಗಳನ್ನ ಎರಡನೇ ದರ್ಜೆಯ ಪ್ರಜೆಗಳ ರೀತಿ ನೋಡುತ್ತಿದ್ದಾರೆ. ಎಲ್ಲರಿಗೂ ಸಮಾನತೆ ಇರಬೇಕು. ಟಿಪ್ಪು ಜಯಂತಿ, ಶಾದಿ ಭಾಗ್ಯ, ಮುಸ್ಲಿಂ ವಿವಾಹಕ್ಕೆ ಧನ ಸಹಾಯ ಈ ರೀತಿ ಕಾರ್ಯಕ್ರಮಗಳನ್ನ ತಂದರು. ಮುಸ್ಲಿಂಮರನ್ನ ವೋಟಿನ ಗಾಳವಾಗಿ ಕಾಂಗ್ರೆಸ್ ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು. ಬಿಜೆಪಿ ಕಾರ್ಯಕರ್ತನ ಮೇಲೆ ಚಾಕು ಇರಿತ ಪ್ರಕರಣ ಕುರಿತು ಮಾತನಾಡಿದ ಅಶೋಕ್, ನಾನು ಸಂಜೆ ಪೃಥ್ವಿರಾಜ್ ಅವರನ್ನು ಭೇಟಿಯಾಗುತ್ತೇನೆ. ಘಟನೆಯ ಹಿಂದೆ ಕಾಂಗ್ರೆಸ್ ಕೈವಾಡ ಇರುವುದು ಪಕ್ಕಾ ಇದೆ ಎಂದು ಆರೋಪಿಸಿದರು.
ಬಿಗ್ಬಾಸ್ ಮನೆಯಲ್ಲಿ ಹೀಗೊಂದು ಫ್ಲವರ್ ವರ್ಸಸ್ ಫೈಯರ್ ಟೆಸ್ಟ್ ನಡೆದಿದೆ. ಇದರ ಪರಿಣಾಮವಾಗಿ ವಿನಯ್-ಸಂಗೀತಾ ಮಧ್ಯ ಮತ್ತೆ ಹಳೆಯ ಕಿಡಿ ಹೊತ್ತಿಕೊಂಡಿರುವಂತಿದೆ. ಅದರ ಸುಳಿವು JioCinema ಬಿಡುಗಡೆ ಮಾಡಿರುವ ದಿನದ ಮೊದಲ ಪ್ರೋಮೊದಲ್ಲಿಯೇ ಕಾಣಿಸಿಕೊಂಡಿದೆ. ಮನೆಯ ಸ್ಪರ್ಧಿಗಳಿಗೆ ಬಿಗ್ಬಾಸ್ ಒಂದು ಚಟುವಟಿಕೆ ನೀಡಿದ್ದಾರೆ. ಒಂದಿಷ್ಟು ಬಿಳಿ ಮತ್ತೊಂದಿಷ್ಟು ಕಪ್ಪು ಹೂಗಳನ್ನು ಇಡಲಾಗಿದೆ. ಒಬ್ಬೊಬ್ಬ ಸದಸ್ಯನೂ, ಮನೆಯೊಳಗೆ ತಮ್ಮ ದೃಷ್ಟಿಯಲ್ಲಿ ಅತ್ಯಂತ ಧನಾತ್ಮಕ ವ್ಯಕ್ತಿ ಯಾರು ಎಂದು ಆರಿಸಿ ಅವರಿಗೆ ಬಿಳಿ ಹೂವು ನೀಡಬೇಕು. ಹಾಗೆಯೇ ಯಾರು ಅತ್ಯಂತ ಋಣಾತ್ಮಕ ವ್ಯಕ್ತಿ ಎಂಬುದನ್ನೂ ಆರಿಸಿ ಅವರಿಗೆ ಕಪ್ಪು ಹೂವು ನೀಡಬೇಕು. ಈ ಟಾಸ್ಕ್ನಲ್ಲಿ ಬೆಳ್ಳಗಿನ ಹೂಗಳನ್ನು ಪಡೆದುಕೊಂಡವರ ಮುಖದಲ್ಲಿ ಹೂವಿನಂಥದ್ದೇ ನಗು ಅರಳಿದರೆ, ಕಪ್ಪು ಹೂವು ಪಡೆದವರ ಕಣ್ಣುಗಳಲ್ಲಿ ಅಸಮಧಾನದ ಹೊಗೆ ಎದ್ದಿದೆ. ಅದರಲ್ಲಿಯೂ ವಿಶೇಷವಾಗಿ ಸಂಗೀತಾ, ವಿನಯ್ ಅವರಿಗೆ ಕಪ್ಪುಹೂವು ನೀಡಿ, ‘ಮೊದಲಿಂದಾನೂ ನೆಗೆಟಿವಿಟಿಯ ರೂಟೇ ನೀವು’ ಎಂದು ಆರೋಪಿಸಿದ್ದಾರೆ. ಅದಕ್ಕೆ ಠಕ್ಕರ್ ನೀಡಿದ ವಿನಯ್, ‘ನಾನು ನೆಗೆಟಿವಿಟಿಗೆ ಬೇರು. ಆದರೆ…
ಸ್ಪ್ಯಾನಿಷ್ :- ಸ್ಪ್ಯಾನಿಷ್ನಲ್ಲಿ ಇಂತಹದ್ದೊಂದು ವಿಚಿತ್ರ ಘಟನೆ ನಡೆದಿದ್ದು, ಮಹಿಳೆಯೊಬ್ಬಳು ಹಲ್ಲುಜ್ಜುವ ಬ್ರಷ್ ಅನ್ನು ನುಂಗಿ ಉಸಿರುಗಟ್ಟಿ ಸಾವು- ಬದುಕಿನ ಮಧ್ಯೆ ಹೋರಾಡಿ ಕೊನೆಗೂ ಸಾವಿನ ಅಂಚಿನಿಂದ ಪಾರಾಗಿದ್ದಾಳೆ. ಯುವತಿ ಟರ್ಕಿ ಮಾಂಸ ತಿಂದಿದ್ದಳು. ಆದರೆ ಆಕೆಗೆ ಏನಾಯ್ತೋ ಗೊತ್ತಿಲ್ಲ. ಬುಧವಾರ ತನ್ನ ಗಂಟಲಿನಿಂದ ಟರ್ಕಿಯ ಮಾಂಸವನ್ನು ಬಲವಂತವಾಗಿ ಹೊರಹಾಕಲು ಪ್ರಯತ್ನಿಸಿದಳು. ಆದರೆ ಈ ವೇಳೆ ಆಕಸ್ಮಿಕವಾಗಿ ಹಲ್ಲುಜ್ಜುವ ಟೂತ್ ಬ್ರಷ್ ನುಂಗಿದ್ದಾಳೆ. ಹೈಜಿಯಾ ತಂದೆಯನ್ನು ಅನಾರೋಗ್ಯದಿಂದ ಗಾಲಿಕುರ್ಚಿ ಬಿಟ್ಟು ಕೆಳಗೆ ಇಳಿಯಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಅವಳು ಹಲ್ಲುಜ್ಜುವ ಬ್ರಷ್ ಅನ್ನು ಸೇವಿಸಿದಾಗ ಅವಳು ತನ್ನನ್ನು ತಾನೇ ನೋಡಿಕೊಳ್ಳಬೇಕಾಗಿತ್ತು. ತಂದೆ, ಮಗಳು ನರಳಾಡುತ್ತಿರುವುದನ್ನು ನೋಡುತ್ತಿದ್ದರು ಸಹಾಯ ಮಾಡಲು ಆಗದೇ ಇರುವ ಸ್ಥಿತಿ ಇತ್ತು. ಸ್ವಲ್ಪ ಸಮಯದ ನಂತರ, ಅವಳು ಸಹಾಯಕ್ಕಾಗಿ ವೈದ್ಯರ ಬಳಿ ಹೋಗಿದ್ದಾಳೆ. ಆಸ್ಪತ್ರೆಯಲ್ಲಿ ವೈದ್ಯರು ಎಕ್ಸರೆ ಮಾಡಿದ್ದಾರೆ. ಆಕೆಯನ್ನು ಪರೀಕ್ಷಿಸಲು ವೈದ್ಯಕೀಯ ತಜ್ಞರು ಸುಮಾರು ಮೂರು ಗಂಟೆಗಳ ಕಾಲ ತೆಗೆದುಕೊಂಡರು. ನಂತರ ಹಲ್ಲುಜ್ಜುವ ಬ್ರಷ್ ಅನ್ನು ತೆಗೆದುಹಾಕುವಲ್ಲಿ ಯಶಸ್ವಿಯಾಗಿದ್ದಾರೆ.…
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ (Siddaramaiah) ಟಿಪ್ಪು ಅಂದ್ರೆ ಬಹಳ ಪ್ರೀತಿ. ಅವರದ್ದು ಟಿಪ್ಪು ಅಜೆಂಡಾ. ಅವರು ಹಿಂದೂಗಳನ್ನ ಎರಡನೇ ದರ್ಜೆ ಥರಾ ನೋಡ್ತಾ ಇದ್ದಾರೆ. ಸಿದ್ದರಾಮಯ್ಯ ಅವರು ಮುಸ್ಲಿಮರನ್ನಷ್ಟೇ ಓಲೈಕೆ ಮಾಡುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಹೇಳಿದರು. ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ಮುಸ್ಲಿಂ ಮತಕ್ಕಾಗಿ ಸಿದ್ಧರಾಮಯ್ಯ ಈ ರೀತ ರಾಜಕಾರಣ ಮಾಡುತ್ತಿದ್ದಾರೆ. https://ainlivenews.com/good-news-for-rakibhai-fans-next-movie-title-announced-on-december-8/ ಅವರು ಮುಸ್ಲಿಮರ ಓಲೈಕೆ ಜೊತೆಗೆ ಟಿಪ್ಪು ಜಯಂತಿ, ಶಾದಿ ಭಾಗ್ಯ, ಇವೆಲ್ಲಾ ಕೈ ಬಿಡಬೇಕು ಎಂದರು. ರಾಜ್ಯದಲ್ಲಿ 13 ತಾಲೂಕು ಬಿಟ್ರೆ ಉಳಿದ ಎಲ್ಲಾ ಕಡೆ ಬರಯಿದೆ. ಈ ಸಮಯದಲ್ಲಿ ಸರ್ಕಾರಕ್ಕೆ ತಾಯಿ ಹೃದಯ ಇರಬೇಕಿತ್ತು. ಆದ್ರೆ ಸರ್ಕಾರಕ್ಕೆ ಕಟುಕನ ಹೃದಯವಿದೆ. ಬರ ನಿರ್ವಹಣೆ ಮಾಡೋದು ಬಿಟ್ಟು ತೆಲಂಗಾಣದಲ್ಲಿ ರಾಜಕೀಯ ಮಾಡುವುದಕ್ಕೆ ಹೋಗ್ತಾರೆ. ಇದು ಜನ ವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಪೃಥ್ವಿ ಸಿಂಗ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸುವೆ. ಬಿಜೆಪಿ ಕಾರ್ಯಕರ್ತರ ಮೇಲೆ…
ಬೆಳಗಾವಿ: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಒಂದೇ ಆಡಳಿತ ಕೊಡಬೇಕು. ಅವರು ಎಲ್ಲಾ ಸಮುದಾಯವನ್ನೂ ಸಮನಾಗಿ ನೋಡಿಕೊಳ್ಳಬೇಕು. ಆದರೆ ರಾಜಕೀಯ ಪ್ರೇರಿತವಾಗಿ ಮುಸ್ಲಿಂ ಸಮುದಾಯಕ್ಕೆ (Muslim Community) ತುಷ್ಟೀಕರಣ ಮಾಡುತ್ತಾರೆ. ಕಾಂಗ್ರೆಸ್ (Congress) ಪಕ್ಷದವರು ಕೋಮುವಾದಿಗಳು ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್ (CN Ashwath Narayan) ಹೇಳಿದ್ದಾರೆ. https://ainlivenews.com/good-news-for-rakibhai-fans-next-movie-title-announced-on-december-8/ ಮುಸ್ಲಿಂ ಸಮುದಾಯಕ್ಕೆ 10,000 ಕೋಟಿ ರೂ. ಖರ್ಚು ಮಾಡಲು ಸಿದ್ಧ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ಸಿಎಂ ಸಮಾನವಾಗಿ ಎಲ್ಲರನ್ನೂ ನೋಡಿಕೊಳ್ಳಬೇಕು. ಕಾಂಗ್ರೆಸ್ ಪಕ್ಷದ ಕೋಮುವಾದಿಗಳಿಂದ ರಾಜ್ಯದಲ್ಲಿ ಅಸ್ವಾಸ್ತ್ಯ ಇದೆ. ಬರಗಾಲ, ರೈತರ ಆತ್ಮಹತ್ಯೆಗೆ ಪರಿಹಾರ ಕೊಡಲು ಆಗುತ್ತಿಲ್ಲ. ಆದರೆ ಈ ರೀತಿಯಲ್ಲಿ ಮಾತನಾಡಿ ಸಿಎಂ ಸಿದ್ದರಾಮಯ್ಯ ಅವರು ಎಲ್ಲರಿಗೂ ಕಿವಿಗೆ ಹೂ ಇಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದರು.
ನ್ಯಾಚುರಲ್ ಸ್ಟಾರ್ ನಾನಿ ನಟನೆಯ ಹಾಯ್ ನಾನ್ನ ಸಿನಿಮಾ ಇದೇ ಡಿಸೆಂಬರ್ 7ರಂದು ಪಂಚ ಭಾಷೆಯಲ್ಲಿ ರಿಲೀಸ್ ಆಗ್ತಿದೆ. ಈ ಹಿನ್ನೆಲೆ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಚಾರ ನಡೆಸುತ್ತಿರುವ ನಾನಿ ಇಂದು ಬೆಂಗಳೂರಿನಲ್ಲಿ ತಮ್ಮ ಚಿತ್ರದ ಪ್ರಮೋಷನ್ ನಡೆಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಗೂ ಮುನ್ನ ಅವರು, ನಾಗವಾರದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮನೆಗೆ ಭೇಟೆ ಕೊಟ್ಟು ಒಂದಷ್ಟು ಅವರ ಮನೆಯಲ್ಲಿ ಬ್ರೇಕ್ ಫಾಸ್ಟ್ ಸವಿದು ಕೆಲ ಕಾಲ ಸಮಯ ಕಳೆದಿದ್ದಾರೆ.ಶಿವಣ್ಣನ ಭೇಟಿ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ನಾನಿ ಸಿನಿಮಾ ಬಗ್ಗೆ ಒಂದಷ್ಟು ವಿಷಯ ಹಂಚಿಕೊಂಡಿದ್ದಾರೆ. ನ್ಯಾಚುರಲ್ ಸ್ಟಾರ್ ನಾನಿ ಮಾತನಾಡಿ, ನನ್ನ ಹಿಂದಿನ ಸಿನಿಮಾ ದಸರಾಗೆ ನೀವು ಬೆಂಬಲ ಕೊಟ್ಟಿದ್ದೀರಾ. ಅದೇ ರೀತಿ ಹಾಯ್ ನಾನ್ನ ಚಿತ್ರಕ್ಕೂ ಸಪೋರ್ಟ್ ಮಾಡಿ. ಹಾಯ್ ನಾನ್ನ ಎಂದು ಕನ್ನಡದಲ್ಲಿ ಟೈಟಲ್ ಇಡಲು ಕಾರಣವೇನೆಂದರೆ, ಸೌತ್ ಇಂಡಸ್ಟ್ರೀಯ ಎಲ್ಲಾ ಭಾಷೆಯಲ್ಲಿಯೂ ಇದೆ ಟೈಟಲ್ ಇಡಲಾಗಿದೆ. ರಿವ್ಯೂ ಮಾಡಲು, ಬುಕ್ ಮೈಶೋನಲ್ಲಿ ಸಿನಿಮಾ…