ನವದೆಹಲಿ: ಪ್ರತಿ ಪಕ್ಷದ ನಾಯಕರ ಅಲಭ್ಯತೆ ಹಿನ್ನಲೆ ಬುಧವಾರ ನಡೆಯಬೇಕಿದ್ದ INDIA ಒಕ್ಕೂಟದ ಸಭೆಯನ್ನು ಮುಂದೂಡಲಾಗಿದೆ. ಪಂಚರಾಜ್ಯಗಳ ಚುನಾವಣೆ ಹಿನ್ನಲೆ ಒಕ್ಕೂಟದ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಫಲಿತಾಂಶ ಪ್ರಕಟವಾದ ಬಳಿಕ ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದರು. ಮಿಚಾಂಗ್ ಚಂಡಮಾರುತದಿಂದ ಚೆನ್ನೈ ವಿಮಾನ ನಿಲ್ದಾಣವನ್ನು ಮುಚ್ಚಿದ್ದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ದೆಹಲಿಗೆ ಭೇಟಿ ನೀಡಲು ಮತ್ತು ಸಭೆಗೆ ಬರಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ. https://ainlivenews.com/good-news-for-rakibhai-fans-next-movie-title-announced-on-december-8/ ನಿತೀಶ್ ಕುಮಾರ್ ಅವರು ಅಸ್ವಸ್ಥರಾಗಿದ್ದು, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮತ್ತು ಅಖಿಲೇಶ್ ಯಾದವ್ ಸಭೆಗೆ ಗೈರಾಗುವ ಬಗ್ಗೆ ಮೊದಲೇ ಮಾಹಿತಿ ನೀಡಿದ್ದರು. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕೂಡಾ ಸಭೆಯಲ್ಲಿ ಭಾಗಿಯಾಗಿರುವ ಖಚಿತ ಪಡಿಸಿದ್ದರು. ಆಮ್ ಆದ್ಮಿ ಪಕ್ಷವು ಸಭೆಯಲ್ಲಿ ಭಾಗಿಯಾಗುವ ಬಗ್ಗೆ ಯಾವುದೇ ದೃಢೀಕರಣ ನೀಡಿರಲಿಲ್ಲ. ಪ್ರಮುಖ ನಾಯಕರ ಅಲಭ್ಯತೆ ಹಿನ್ನಲೆ ಸಭೆಯನ್ನು ಮುಂದೂಡಲು ನಿರ್ಧರಿಸಿದ್ದು ಮುಂದಿನ ಎರಡು ವಾರಗಳಲ್ಲಿ…
Author: AIN Author
ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯ ವೇಳೆ ಮೃತಪಟ್ಟ ಕರ್ನಾಟಕದ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ. ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಿದೆ. ಈ ಸಂಬಂಧ ಸಿಎಂ ಆಫ್ ಕರ್ನಾಟಕ ಎಕ್ಸ್ ಮಾಡಿದ್ದು, ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ “ಕ್ಯಾಪ್ಟನ್ ಎಂ.ವಿ ಪ್ರಾಂಜಲ್” ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ. ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ ಎಂದು ತಿಳಿಸಲಾಗಿದೆ. ಯೋಧರ ಸಾವು-ನೋವು ಮುಂದಿಟ್ಟುಕೊಂಡು ರಾಜಕಾರಣ ಮಾಡುವವರು ನಾವಲ್ಲ. ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ. https://twitter.com/CMofKarnataka/status/1731980390359810463 ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಹಾರೈಸಬಲ್ಲೆ ಎಂದು ಸಿಎಂ ತಿಳಿಸಿದ್ದಾರೆ. ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ ಬೆಂಗಳೂರಿಗೆ ಬಂದಾಗ ಅವರಿಗೆ ನಮನ…
ಸಕಲೇಶಪುರ : ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ದಸರಾ ಆನೆ ಅರ್ಜುನ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅರ್ಜುನ ಆನೆ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. 8 ಬಾರಿ ಅಂಬಾರಿಯನ್ನು ಹೊತ್ತಿದ್ದ ಅರ್ಜುನ ಆನೆ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಅರ್ಜುನ ಆನೆ ಹೆಸರಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕು. ಆ ನಿಟ್ಟಿನಲ್ಲಿ ಸೂಕ್ತ ಸ್ಥಳದಲ್ಲಿ ಅಂತ್ಯಕ್ರಿಯೆ ನಡೆಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು, ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. https://ainlivenews.com/good-news-for-rakibhai-fans-next-movie-title-announced-on-december-8/ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಜನರ ಮನವೊಲಿಕೆಗೆ ಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಪ್ರತಿಭಟನೆಯನ್ನು ತೀವ್ರಗೊಳಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ಪೊಲೀಸರು ಲಾಠಿ ಬೀಸುತ್ತಿದ್ದಂತೆ ಪ್ರತಿಭಟನಾಕಾರರು, ಸಾರ್ವಜನಿಕರು ದಿಕ್ಕಾಪಾಲಾಗಿ ಓಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು ದಬ್ಬಳ್ಳಿಕಟ್ಟೆಯಲ್ಲಿ ಅರ್ಜುನ ಮೃತಪಟ್ಟ ಸ್ಥಳದಲ್ಲಿಯೇ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದು 2 ಜೆಸಿಬಿಗಳ ಮೂಲಕ ಆಳವಾದ ಗುಂಡಿಗಳನ್ನು ತೆಗೆದು…
ಚಿಕ್ಕಬಳ್ಳಾಪುರ: ರಾಮನಗರ ಜಿಲ್ಲೆಯ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಮುನೇಗೌಡ ಸಂಬಂಧಿಸಿದ ಹಲವು ನಿವಾಸಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕ ಕಾಲದಲ್ಲಿ ದಾಳಿ ಮಾಡಿದ್ದು, ಮುನೇಗೌಡರ ಎರಡನೇ ಪತ್ನಿಯ ನಿವಾಸ ಚಿಕ್ಕಬಳ್ಳಾಪುರದ ನಂದಿ ಕ್ರಾಸ್ ಬಳಿಯೂ ದಾಳಿ ನಡೆಸಲಾಗಿದೆ. ದಾಳಿ ವೇಳೆ ಮುನೇಗೌಡ ಸಹ ಇದೇ ಮನೆಯಲ್ಲಿದ್ದು ಹಲವು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ 250 ಗ್ರಾಂ ಚಿನ್ನಾಭರಣ, 3 ಕೆಜಿ ಬೆಳ್ಳಿ, ಹಾಗೂ 66 ಸಾವಿರ ನಗದು ಹಣ ವಶಪಡಿಸಿಕೊಳ್ಳಲಾಗಿದೆ ಅಂತ ಮಾಹಿತಿ ಸಿಕ್ಕಿದೆ. https://ainlivenews.com/good-news-for-rakibhai-fans-next-movie-title-announced-on-december-8/ ಇನ್ನೂ ಮುನೇಗೌಡ ಸ್ವಗ್ರಾಮ ಕೆಜಿ ಪುರದಲ್ಲೂ ನಿವಾಸಗಳ ಮೇಲೂ ದಾಳಿ ನಡೆಸಲಾಗಿದ್ದು ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಚಿಕ್ಕಬಳ್ಳಾಪುರ ಎಸ್ಪಿ ರಾಮ್ ಅರಸಿದ್ದಿ ನೇತೃತ್ವದಲ್ಲಿ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಇನ್ನೂ ಇದೇ ಚಿಕ್ಕಬಳ್ಳಾಪುರ ಜಿಲ್ಲೆಯ ಚಾಕವೇಲು ಬಳಿಯ ವೆಂಕಟೇಶಪಲ್ಲಿ ಗ್ರಾಮದಲ್ಲೂ ಬೆಸ್ಕಾಂ ಜಾಗೃತ ದಳದ ಡಿಜಿಎಂ ಸುಧಾಕರ್ ರೆಡ್ಡಿ ಅವರ ಮಾವ ಹಿರಿಯ ವಕೀಲ ಕೃಷ್ಣಾರೆಡ್ಡಿ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು…
ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತದ ಚುರುಕು ಮುಟ್ತಿಲ್ಲ ಅನ್ಸುತ್ತೆ. ಒಂದರ ಮೇಲೆ ಒಂದು ದಾಳಿ ನಡೀತಾ ಇದ್ರು ಸರ್ಕಾರಿ ಅಧಿಕಾರಿಗಳು ಎಚ್ಚೆತ್ತುಕೊಳ್ತಿಲ್ಲ. ಇಂದು ಕೂಡ ರಾಜ್ಯದಲ್ಲಿ ಲೋಕಾಯಕ್ತ ಮೆಗಾ ರೇಡ್ ನಡೆದಿದ್ದು, ಭ್ರಷ್ಟರ ಕೋಟೆಯ ಸಂಪತ್ತು ಬಯಲಾಗಿದೆ. ಅದರ ಫುಲ್ ಡಿಟೆಲ್ಸ್ ಇಲ್ಲಿದೆ. ರಾಜ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಮತ್ತೊಮ್ಮೆ ಮೆಗಾ ರೇಡ್ ನಡೆಸಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಅಖಾಡಕ್ಕಿಳಿದ ಲೋಕಾಯುಕ್ತ ಅಧಿಕಾರಿಗಳು ಚಳಿಯಲ್ಲಿ ಬೆಚ್ಚಗೆ ಮಲಗಿದ್ದ ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. https://ainlivenews.com/good-news-for-rakibhai-fans-next-movie-title-announced-on-december-8/ ಯೆಸ್. ಬೆಂಗಳೂರಿನ ಮೂವರು ಅಧಿಕಾರಿಗಳು ಸೇರಿದಂತೆ ರಾಜ್ಯದ 13 ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. 13 ಅಧಿಕಾರಿಗಳ 63ಕ್ಕೂ ಹೆಚ್ಚು ಸ್ಥಳಗಳ ಮೇಲೆ ಏಕಕಾಲದಲ್ಲೇ ದಾಳಿ ನಡೆಸಿರೋ ಲೋಕಾಯುಕ್ತ ಟೀಂ ಅಧಿಕಾರಿಗಳ ಬೆವರಿಳಿಸಿದ್ದಾರೆ. ಅಷ್ಟಕ್ಕೂ ಯಾವ್ಯಾವ ಅಧಿಕಾರಿಗಳ ಮೇಲೆ ದಾಳಿ ನಡೆದಿದೆ ಅನ್ನೋದನ್ನ ತೋರಿಸ್ತೀವಿ ನೋಡಿ. ಲೋಕಾಯುಕ್ತ ರೇಡ್ (ಹೆಡ್ಡರ್) ಚನ್ನಕೇಶವ H.D, EE, ಬೆಸ್ಕಾಂ, ಜಯನಗರ ಉಪವಿಭಾಗ, ಬೆಂಗಳೂರು ಸುಧಾಕರ್…
ಬೆಂಗಳೂರು: ರಾಜ್ಯದಲ್ಲಿ ಬಿಯರ್ ಗೆ ಎಲ್ಲೆಲ್ಲದ ಡಿಮ್ಯಾಂಡ್ ಶುರುವಾಗಿದೆ. ಇದರ ಜೊತೆಗೆ ಲಿಕ್ಕರ್ ಸೇಲ್ ಫುಲ್ ಸಹ ಜೋರಿದೆ. ನವೆಂಬರ್ನಲ್ಲಿ ಬಿಯರ್ ಮಾರಾಟ ಪ್ರಮಾಣ ಹೆಚ್ಚಾಗಿದೆ. ಈ ಮೂಲಕ ಗ್ಯಾರಂಟಿಗಳನ್ನು ಜಾರಿಗೊಳಿಸಿದ ಸರ್ಕಾರಕ್ಕೆ ಮದ್ಯಪ್ರಿಯರು ಆರ್ಥಿಕವಾಗಿ ಕೈ ಜೋಡಿಸಿದ್ದಾರೆ. https://ainlivenews.com/good-news-for-rakibhai-fans-next-movie-title-announced-on-december-8/ ರಾಜ್ಯದಲ್ಲಿ ವರ್ಷಾಂತ್ಯದ ವೇಳೆ ಬಿಯರ್, ಲಿಕ್ಕರ್ ಸೇಲ್ ಜೋರಿರುತ್ತೆ. ಮಧ್ಯಪ್ರಿಯರು ಡ್ರಿಂಕ್ಸ್ ಮಾಡ್ತಾ ನ್ಯೂ ಇಯರ್ ವೆಲ್ ಕಮ್ ಮಾಡ್ತಾರೆ. ಆದರೆ ಈ ವರ್ಷದ ಹೊಸ ವರುಷ ಬರುವ ಮುನ್ನವೇ ಬಿಯರ್, ಹಾಟ್ ಡ್ರಿಂಕ್ಸ್ ಸೇಲ್ ಹೆಚ್ಚಾಗಿದೆ. ಚಳಿಗಾಲ ಶುರುವಾಗ್ತಿದ್ದಂತೆ ರಾಜ್ಯದಲ್ಲಿ ಬಿಯರ್ ಗೆ ಭಾರೀ ಬೇಡಿಕೆ ಬಂದಿದೆ. ತಿಂಗಳು ಬಿಯರ್ ಲಿಕ್ಕರ್(MSIL) ಮಾರಾಟ ಏಪ್ರಿಲ್ ಶೇ. 4.75 – ಶೇ. 1.49 ಮೇ ಶೇ. 10 – ಶೇ. 7.20 ಜೂನ್ ಶೇ. 26.84 – ಶೇ. 3.99 ಜುಲೈ ಶೇ. 26.81 – ಶೇ. 20.64 ಆಗಸ್ಟ್ ಶೇ. 21.40 – ಶೇ.6.84 ಸೆಪ್ಟೆಂಬರ್ ಶೇ. 3.54…
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳಿಗೆ ಹೊಸ ಹೊಸ ಟಾಸ್ಕ್ಗಳನ್ನ ನೀಡಲಾಗುತ್ತದೆ ನೆನ್ನೆ ಸಹ ಇಂತಹದ್ದೇ ಟಾಸ್ಕ್ ಆಡಿಸಲಾಗಿತ್ತು.ಯಾರು ಬುದ್ಧಿವಂತರು ಎಂದು ಮನೆಯಲ್ಲಿ ಅಂದುಕೊಂಡಿದ್ದಾರೆ ಹಾಗೂ ಯಾರು ಯಾರ ಸ್ನೇಹವನ್ನು ಬಯಸುವುದಿಲ್ಲ ಹೀಗೆ ಹಲವಾರು ಪ್ರಶ್ನೆಗಳನ್ನ ಕೇಳಲಾಗಿತ್ತು ಇಂದು ಸಹ ಅಂತಹದ್ದೇ ಟಾಸ್ಕನ್ನು ಬಿಗ್ ಬಾಸ್ ಮನೆಯಲ್ಲಿ ಆಡಿಸಲಾಗಿದೆ. ಇದರಿಂದಾಗಿ ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳಿಗೆ ಇದರ ಸ್ಪರ್ಧಿಗಳ ಮೇಲೆ ಯಾವ ರೀತಿ ಅಭಿಪ್ರಾಯವಿದೆ ಎಂಬುದನ್ನು ಹೊರಹಾಕಬಹುದು ಎಂಬ ದೃಷ್ಟಿಕೋನದಿಂದ ಈ ತರಹದ ಟಾಸ್ಕ್ ಗಳನ್ನು ನೀಡಲಾಗುತ್ತದೆ. ಇವತ್ತು ಸಹ ವಿನಯ್ ಮೇಲೆ ಸಂಗೀತಾಗೆ ಯಾವ ಅಭಿಪ್ರಾಯವಿದೆ ಹಾಗೂ ಸಂಗೀತ ಮೇಲೆ ವಿನಯ್ ಗೆ ಯಾವ ಅಭಿಪ್ರಾಯವಿದೆ ಎಂಬುವುದು ಗೊತ್ತಾಗಿದೆ. ಬಿಗ್ ಬಾಸ್ನಲ್ಲಿ (Bigg Boss) ಈ ವಾರ ಎರಡು ತಂಡಗಳನ್ನಾಗಿ ಮಾಡಲಾಗಿದೆ. https://ainlivenews.com/good-news-for-rakibhai-fans-next-movie-title-announced-on-december-8/ ಗಂಧರ್ವರು ಒಂದು ಕಡೆ ಹಾಗೂ ರಾಕ್ಷಸರು ಇನ್ನೊಂದು ಕಡೆ. ಇವರ ಮಧ್ಯೆ ಟಾಸ್ಕ್ ನಡೆಯಲಿದೆ. ಈ ಗ್ರೂಪ್ನ ಆಯ್ಕೆ ಮಾಡಲು ಬಿಗ್ ಬಾಸ್ ಬೇರೆಯದೇ ಆದ ತಂತ್ರ ಉಪಯೋಗಿಸಿತ್ತು.…
ಬೆಂಗಳೂರು: ಕರ್ನಾಟಕ ರಾಜ್ಯದ ಉಚ್ಛ ನ್ಯಾಯಾಲಯದ ಕಲಾಪಕ್ಕೂ ಸೈಬರ್ ಕಳ್ಳರ ಹಾವಳಿ ಉಂಟಾಗಿದೆ. ಹೈಕೋರ್ಟ್ ಕಲಾಪದ ವೇಳೆ ವಿಡಿಯೋ ಕಾನ್ಫೆರೆನ್ಸ್ ಆ್ಯಪ್ ಅನ್ನು ಹ್ಯಾಕ್ ಮಾಡಿ ಅಶ್ಲೀಲ ದೃಶ್ಯಾವಳಿಗಳನ್ನು ಅಪ್ಲೋಡ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಸ್ಥಗಿತಗೊಳಿಸಲಾಗಿದೆ. ಹೌದು, ಇಷ್ಟು ದಿನ ಜನಸಾಮಾನ್ಯರ ಹಾಗೂ ಸಣ್ಣಪುಟ್ಟ ಖಾಸಗಿ ಸಂಘ- ಸಂಸ್ಥೆಗಳ ಸೈಬರ್ ಹ್ಯಾಕ್ ಮಾಡುತ್ತಿದ್ದ ಸೈಬರ್ ಕಳ್ಳರು ಇಂದು ನೇರವಾಗಿ ಕರ್ನಾಟಕದ ಹೈಕೋರ್ಟ್ನ ವಿಡಿಯೋ ಕಾನ್ಫರೆನ್ಸ್ ಅಪ್ಲಿಕೇಶನ್ ಅನ್ನೇ ಹ್ಯಾಕ್ ಮಾಡಿದ್ದಾರೆ. https://ainlivenews.com/good-news-for-rakibhai-fans-next-movie-title-announced-on-december-8/ ಇಷ್ಟಕ್ಕೇ ಸುಮ್ಮನಾಗದ ಸೈಬರ್ ಹ್ಯಾಕ್ ಖದೀಮರು, ವಿಡಿಯೋ ಕಾನ್ಪರೆನ್ಸ್ ಆ್ಯಪ್ ನಲ್ಲಿ ಅಶ್ಲೀಲ್ ದೃಶ್ಯಾವಳಿ ಅಪ್ ಲೋಡ್ ಮಾಡಿದ್ದಾರೆ. ಈ ಬಗ್ಗೆ ಹೈಕೋರ್ಟ್ ಕಲಾದ ವಿಡಿಯೋನಲ್ಲಿ ಅಶ್ಲೀಲ ವಿಡಿಯೋ ಬರುತ್ತಿದ್ದಂತೆ ಅದನ್ನು ನಿರ್ವಹಣೆ ಮಾಡುತ್ತಿದ್ದ ಸಿಬ್ಬಂದಿಯನ್ನು ಕರೆದು ಕೇಳಿದಾಗ ಸೈಬರ್ ಹ್ಯಾಕ್ ಆಗಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಹೈಕೋರ್ಟ್ ವಿಡಿಯೋ ಕಲಾಪದಲ್ಲಿ ಇಂತಹ ಕೃತ್ಯ ನಡೆದ ಕೂಡಲೇಬ ವಿಡಿಯೋ ಕಾನ್ಫರೆನ್ಸ್ ಮೂಲಕ…
ಬೆಳಗಾವಿ: ಬೆಳಗಾವಿ ವಿಧಾನಸಭಾ ಅಧಿವೇಶನದ ಎರಡನೇ ದಿನದ ಕಾರ್ಯಕಲಾಪ ಶುರುವಾದಾಗ ಮಂತ್ರಿಗಳ ಗೈರುಹಾಜರಿ ಬಗ್ಗೆ ವಿರೋಧ ಪಕ್ಷದ ನಾಯಕರ ಸರ್ಕಾರದ ವಿರುದ್ಧ ಕಿಡಿಕಾರಿದರು. ಸದಸ್ಯರೊಬ್ಬರು ಮಾತಾಡುವಾಗ ಸಭಾಧ್ಯಕ್ಷ ಯುಟಿ ಖಾದರ್ ಅವರನ್ನು ಕೂರುವಂತೆ ಹೇಳುವಾಗಲೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎದ್ದುನಿಂತು ಸ್ಪೀಕರ್ ಅವರು ಆಡಳಿತ ಪಕ್ಷದ ಸದಸ್ಯರ ವಿರುದ್ಧ ಚಾಟಿ ಬೀಸದಿದ್ದರೆ 5 ವರ್ಷಗಳ ಕಾಲ ಸಭಾಧ್ಯಕ್ಷರಾಗೇ ಉಳಿಯಬೇಕಾಗುತ್ತದೆ, ಯಾವತ್ತೂ ಮಂತ್ರಿ ಮಾಡಲ್ಲ ಎಂದು ಹೇಳಿದಾಗ ಸಭಾಧ್ಯಕ್ಷಕರು, https://ainlivenews.com/good-news-for-rakibhai-fans-next-movie-title-announced-on-december-8/ ಕೇವಲ ಮಂತ್ರಿಯಾಗುವ ಉದ್ದೇಶಕ್ಕೆ ಕಠೋರ ನಿರ್ಣಯಗಳನ್ನು ತೆಗೆದುಕೊಳ್ಳಲಾಗಲ್ಲ, ತಾನು ಹಾಗೆ ಮಾಡುವುದು ಸಾಧ್ಯವೇ ಇಲ್ಲ ಎಂದು ಹೇಳಿದರು. ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಎದ್ದು ನಿಂತು, ಸದನ ಆರಂಭಗೊಳ್ಳುವ ಮೊದಲು ಎಲ್ಲರೂ ಒಳಗೆ ಬಂದು ಕೂತಿರಬೇಕು ಅಂತ ಸೋಮವಾರ ಸ್ಪೀಕರ್ ಎಲ್ಲರಿಗೆ ಬುದ್ಧಿವಾದ ಹೇಳಿದರೂ ಸಚಿವರ ಸ್ಥಾನಗಳೆಲ್ಲ ಖಾಲಿ ಇವೆ, ತಾವು ಯಾರನ್ನು ಪ್ರಶ್ನಿಸುವುದು ಅಂತ ಕೇಳಿದರು. ಅದಕ್ಕೆ ಸ್ಪೀಕರ್, ನಾವು ಕಾರ್ಯಕಲಾಪ ಶುರು ಮಾಡೋಣ ಅವರು ಬಂದು ಜಾಯಿನ್ ಆಗುತ್ತಾರೆ ಅಂತ ಹೇಳಿದರು.
ಬೆಳಗಾವಿ: ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ, ನಿಮ್ಮನ್ನು (ಮುಸ್ಲಿಂ) ನಾನು ರಕ್ಷಣೆ ಮಾಡುತ್ತೇನೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೇಳಿಗೆ ಸ್ಪಷ್ಟನೆ ನೀಡಿದ್ದಾರೆ. ವಾಟ್ ಇಸ್ ರಾಂಗ್ ಇನ್ ದ್ಯಾಟ್. ಮುಸ್ಲಿಮರು ಸೇರಿ ಎಲ್ಲರನ್ನೂ ರಕ್ಷಣೆ ಮಾಡುತ್ತೇವೆಂದು ನಾನು ಹೇಳಿದ್ದು. https://ainlivenews.com/good-news-for-rakibhai-fans-next-movie-title-announced-on-december-8/ ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಒಂದು ಪತ್ರಿಕೆ ಮಾತ್ರ ನಾನು ಹೇಳಿದ್ದನ್ನು ಸರಿಯಾಗಿ ಬರೆದಿದೆ. ಅದನ್ನ ಬಿಟ್ಟು ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಸ್ಪಷ್ಟನೆ ನೀಡಿದರು.