ಹೈದರಾಬಾದ್: ಕುಡಿಯುವ ನೀರಿಗಾಗಿ ಆಂಧ್ರಪ್ರದೇಶ (Andhra Pradesh) ಮತ್ತು ತೆಲಂಗಾಣ (Telangana) ರಾಜ್ಯಗಳ ನಡುವೆ ಉದ್ವಿಗ್ನತೆ ಉಂಟಾಗಿದೆ. ಆಂಧ್ರಪ್ರದೇಶವು ನಾಗಾರ್ಜುನ ಸಾಗರ ಅಣೆಕಟ್ಟಿನ ಉಸ್ತುವಾರಿ ವಹಿಸಿಕೊಂಡು ನೀರು ಬಿಡುಗಡೆ ಮಾಡಿದೆ. ಇದು ಎರಡು ರಾಜ್ಯಗಳ ಸಂಘರ್ಷಕ್ಕೆ ಕಾರಣವಾಗಿದೆ. ಬೆಳಗಿನ ಜಾವ ತೆಲಂಗಾಣದ ಬಹುತೇಕ ಅಧಿಕಾರಿಗಳು ಮತದಾನದಲ್ಲಿ ನಿರತರಾಗಿದ್ದಾಗ ಸುಮಾರು 700 ಆಂಧ್ರ ಪೊಲೀಸರು ಬಲ ಕಾಲುವೆ ತೆರೆದು ಗಂಟೆಗೆ 500 ಕ್ಯೂಸೆಕ್ ಕೃಷ್ಣಾ ನೀರನ್ನು ಬಿಡುಗಡೆ ಮಾಡಿದ್ದಾರೆ. ನಾವು ಕುಡಿಯುವ ನೀರಿನ ಉದ್ದೇಶಕ್ಕಾಗಿ ಕೃಷ್ಣಾ ನದಿಯ ನಾಗಾರ್ಜುನಸಾಗರ ಬಲ ಕಾಲುವೆಯಿಂದ ನೀರು ಬಿಡುತ್ತಿದ್ದೇವೆ ಎಂದು ಆಂಧ್ರಪ್ರದೇಶ ರಾಜ್ಯದ ನೀರಾವರಿ ಸಚಿವ ಅಂಬಟಿ ರಾಮಬಾಬು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು. ಆದರೆ ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವಿನ ಒಪ್ಪಂದದ ಪ್ರಕಾರ ರಾಜ್ಯಕ್ಕೆ ಸೇರಿದ ನೀರನ್ನು ಮಾತ್ರ ತೆಗೆದುಕೊಂಡಿದ್ದೇವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ನಾವು ಯಾವುದೇ ಒಪ್ಪಂದವನ್ನು ಉಲ್ಲಂಘಿಸಿಲ್ಲ. https://ainlivenews.com/dialysis-problem-not-caused-by-our-government-dinesh-gundurao/ ಕೃಷ್ಣಾ ನೀರಿನಲ್ಲಿ 66% ಆಂಧ್ರಪ್ರದೇಶಕ್ಕೆ ಮತ್ತು 34% ಪಾಲು ತೆಲಂಗಾಣಕ್ಕೆ ಸೇರಿದೆ. ನಮಗೆ ಸೇರದ ಒಂದು…
Author: AIN Author
ಬೆಳಗಾವಿ :-ಜಿಲ್ಲೆಯ ರಾಯಬಾಗ್ ತಾಲೂಕಿನ ಭಾವನ ಸೌದತ್ತಿ ಗ್ರಾಮದ ಯೋಧ ಭೀಮು ಅಶೋಕ್ ಭಾಪ್ಕರ್ 35 ವರ್ಷದ ಅವರು, ಭಾರತಿ ಸೇನೆಯಲ್ಲಿ 67 ಎಂ ಇ ಇ ರೇಜಮೆಂಟ್ನಲ್ಲಿ 15 ವರ್ಷಗಳಿಂದ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದು ಚಂಡಿಗಡದಲ್ಲಿ ಮೃತಪಟ್ಟಿದ್ದಾರೆ. ಸೇನೆಯಿಂದ ಆಯೋಜಿಸಿದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವೇಳೆ ಗಾಯಗೊಂಡಿದ್ದರು ಚಿಕಿತ್ಸೆ ಫಲಕರಿಯಾಗದೆ ಸಾವನಪ್ಪಿದ್ದಾರೆ. ತಂದೆ ತಾಯಿ ಪತ್ನಿ ಪುತ್ರ ಪುತ್ರಿ ಸಹೋದರ ಇದ್ದಾರೆ ಶನಿವಾರ ಸ್ವಗ್ರಾಮದ ಭಾವನ ಸೌದತ್ತಿ ಪ್ರಾರ್ಥಿವ ಶರೀರ ತರಲಾಗಿದೆ ವೀರ ಯೋಧನ ಅಂತಿಮ ದರ್ಶನ ಪಡೆಯಲು ಗ್ರಾಮದ ಜನರು ಹಾಗೂ ರಾಯಬಾಗ್ ಶಾಸಕ ಡಿ ಎಂ ಐಹೊಳೆ ಅವರು ಕೂಡ ಯೋಧನ ಅಂತಿಮ ದರ್ಶನ ಪಡೆದುಕೊಂಡು ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ನಂತರ ಮೃತ ಯೋಧನ ಸ್ವಗ್ರಾಮದಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತಕ್ರಿಯೆ ನೆರವರಿಸಿದ್ದರು.
ಅಥಣಿ : ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾ ಸ್ವಾಮೀಜಿಯವರು ಅಥಣಿ, ತಾಲ್ಲೂಕು ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ 2024 ಪೂರ್ವಭಾವಿ ಸಭೆ ಹಾಗೂ ತಾಲ್ಲೂಕು ಮಟ್ಟದ ಜನಜಾಗೃತಿ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಆಶೀರ್ವಚನ ನೀಡಿದರು. ಜಾತ್ರೆ ಜಾಗೃತಿಗಾಗಿ, ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆಯ ಮೂಲಕ ಸಮುದಾಯವನ್ನು ಸದಾ ಜಾಗೃತಗೊಳಿಸಬೇಕು ಹಾಗೂ ಮಹಷಿ೯ ವಾಲ್ಮೀಕಿಯವರ ಮಾನವೀಯ ಮೌಲ್ಯಗಳನ್ನು, ಚಿಂತನೆಗಳನ್ನು ನಾಡಿನ ಜನತೆಗೆ ತಿಳಿಸುವುದರ ಜೊತೆಗೆ ಸಮುದಾಯವನ್ನು ಜಾತ್ರೆಯ ಮೂಲಕ ಜನ ಜಾಗೃತಿಗೊಳಿಸುವ ಜಾತ್ರೆ. ಕೇಂದ್ರ ಸರ್ಕಾರದ ಗೆಜೆಟ್ ನೋಟಿಫಿಕೇಷನ್ ನಂತೆ ಕ್ರಮ ಸಂಖ್ಯೆ 38 ರಲ್ಲಿ ಬರುವ ನಾಯಕ ತಳವಾರ ನಾಯಕ ಪರಿವಾರ ಜಾತಿಗೆ ಪ.ಪಂ ಜಾತಿ ಪ್ರಮಾಣ ಪತ್ರ ನೀಡಬೇಕೆಂಬ ಸ್ಪಷ್ಟ ಉಲ್ಲೇಖವಿದ್ದರೂ, ನಾಯಕ ಜಾತಿಯಲ್ಲದ ಇತರೆ ಜಾತಿಗಳು ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದಾರೆ ಈ ಬಗ್ಗೆ ಸಮುದಾಯ ಜಾಗೃತವಾಗಬೇಕು, ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಹಂತದಲ್ಲಿ ಹೋರಾಟ ನಡೆಯುತ್ತದೆ. ನಿಮ್ಮ ನಿಮ್ಮ ಗ್ರಾಮ ಮಟ್ಟದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ…
ಬೆಳಗಾವಿ: ವಿಧಾನಮಂಡಲದ ಚಳಿಗಾಲ ಅಧಿವೇಶನಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಗರಕ್ಕೆ ಆಗಮಿಸಿದರು. ಸಾಂಬ್ರಾ ವಿಮಾನ ನಿಲ್ದಾಣದ ಹೊರಗಡೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡರು. ಗ್ಯಾರಂಟಿ ಗಳನ್ನು ಘೋಷಿಸಿದಕ್ಕಾಗೇ ಕಾಂಗ್ರೆಸ್ ತೆಲಂಗಾಣದಲ್ಲಿ ಗೆಲ್ಲುವುದು ಸಾಧ್ಯವಾಯಿತು ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ತಮ್ಮ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ಚುನಾವಣೆ ಗೆದ್ದಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. https://ainlivenews.com/dialysis-problem-not-caused-by-our-government-dinesh-gundurao/ ಕರ್ನಾಟಕದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಿಸಿದ್ದು ಚುನಾವಣೆಯಲ್ಲಿ ಗೆಲ್ಲುವುದಕ್ಕಲ್ಲ, ಅವು ಎಲ್ಲಾ ವರ್ಗಗಳ ಬಡವರಿಗೆ ನೆರವಾಗಲು ರೂಪಿಸಿರುವ ಕಾರ್ಯಕ್ರಮಗಳು ಎಂದು ಹೇಳಿದ ಸಿದ್ದರಾಮಯ್ಯ, ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು 6 ತಿಂಗಳು ಸಮಯ ತೆಗೆದುಕೊಂಡ ಬಿಜೆಪಿಗೆ ತಮ್ಮ ಸರ್ಕಾರಕ್ಕೆ ಸಲಹೆ ನೀಡುವ ನೈತಿಕ ಹಕ್ಕಿಲ್ಲ ಎಂದು ಹೇಳಿದರು.
ಬೆಳಗಾವಿ:- ಡಿ.4ರಂದು ಸುವರ್ಣಸೌಧಕ್ಕೆ ರೈತರಿಂದ ಮುತ್ತಿಗೆ ಹಾಕಲಾಗುತ್ತದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವುದು ಸೇರಿದಂತೆ ಮತ್ತಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಡಿ.4ರ ವಿಧಾನಮಂಡಲ ಅಧಿವೇಶನದ ಮೊದಲ ದಿನವೇ ಸಾವಿರಾರು ರೈತರು ಪಾದಯಾತ್ರೆ ಮೂಲಕ ತೆರಳಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದರು. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಜಾರಿಗೊಳಿಸಿ ಬಳಿಕ ಅದನ್ನು ವಾಪಸ್ ಪಡೆದಿದೆ. ಆದರೆ, ಹಿಂದಿನ ಬಿಜೆಪಿ ಸರ್ಕಾರ ಕೃಷಿ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿತ್ತು. ಈ ವೇಳೆ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೇ ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುತ್ತೇವೆ ಎಂದು ಹೇಳಿದ್ದರು. ಆದರೆ, ಈಗ ಕೃಷಿ ಕಾಯ್ದೆಯನ್ನು ವಾಪಸ್ ಪಡೆದಿಲ್ಲ. ರೈತರ ದಿಕ್ಕು ತಪ್ಪಿಸುವ ಹುನ್ನಾರ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಬೆಂಬಲಿಸಿದ್ದರು. ಕಳೆದ ಅಧಿವೇಶನದಲ್ಲಿ ಸಚಿವ ಶಿವಾನಂದ ಪಾಟೀಲ್ ಕೃಷಿ ಕಾಯ್ದೆ…
ಬಾಳೆಹಣ್ಣಿನ ಬೋಂಡಾ ತುಂಬಾನೇ ರುಚಿಯಾಗಿರುತ್ತದೆ, ಅಲ್ಲದೆ ಸುಲಭವಾಗಿ ಮಾಡಬಹುದು. ಇನ್ನು ತುಂಬಾ ಹಣ್ಣಾದ ಬಾಳೆಹಣ್ಣಿದ್ದರೆ ಅದನ್ನು ಬಳಸಿಯೂ ಈ ಬೋಂಡಾ ಮಾಡಬಹುದು. ನಾವಿಲ್ಲಿ ಬಾಳೆಹಣ್ಣಿನ ಬೋಂಡಾದ ಸಿಂಪಲ್ ರೆಸಿಪಿ ನಿಡಿದ್ದೇವೆ ನೋಡಿ. ಬೇಕಾಗುವ ಸಾಮಗ್ರಿ 6 ಚಿಕ್ಕ ಬಾಳೆಹಣ್ಣು 1ಕಪ್ ಮೈದಾ 1/2 ಕಪ್ ಸಕ್ಕರೆ 1/4ಚಮಚ ಅಡುಗೆ ಸೋಡಾ 1/2ಚಮಚ ಏಲಕ್ಕಿ ಮಾಡುವ ವಿಧಾನ * 6 ಚಿಕ್ಕ ಬಾಳೆಹಣ್ಣಿನ ಸಿಪ್ಪೆ ಸುಲಿಯಿರಿ * ನಂತರ ಅದನ್ನು ಚಿಕ್ಕದಾಗಿ ಕತ್ತರಿಸಿ 1/2 ಕಪ್ ಸಕ್ಕರೆ ಹಾಕಿ ರುಬ್ಬಿ * ನಂತರ ಮಿಕ್ಸಿಂಗ್ ಬೌಲ್ನಲ್ಲಿ ಬಾಳೆಹಣ್ಣಿನ ಪೇಸ್ಟ್, 1 ಕಪ್ ಮೈದಾ, 1/4 ಚಮಚ ಅಡುಗೆ ಸೋಡಾ, 1/2 ಚಮಚ ಏಲಕ್ಕಿ ಪುಡಿ ಹಾಕಿ ಮಿಕ್ಸ್ ಮಾಡಿ. * ಮಿಕ್ಸ್ ಮಾಡುವಾಗ ಗಂಟು ಕಟ್ಟಬಾರದು, ಚೆನ್ನಾಗಿ ಮಿಕ್ಸ್ ಮಾಡಿ. * ನಂತರ ಬಾಣಲೆಗೆ ಎಣ್ಣೆ ಹಾಕಿ ಕುದಿಸಿ * ನಂತರ ಎಣ್ಣೆ ಕಾಯುವಾಗ ಕೈಯಿಂದ ಸ್ವಲ್ಪ ಹಿಟ್ಟು ತೆಗೆದು ಎಣ್ಣೆಯಲ್ಲಿ ಹಾಕಿ,…
ಇಂದು ಅಥವಾ ಮುಂದೆ ಎಂದಾದ್ರೂ ಮಟನ್ ಖರೀದಿಸಿದರೆ ಚೆಟ್ಟಿನಾಡ್ ಮಟನ್ ಕರಿ ಟ್ರೈ ಮಾಡಿ. ಸಾಮಗ್ರಿಗಳು ಹೆಚ್ಚಿಗೆ ಬೇಕಿದ್ರೂ ರುಚಿಗೆ ಮಾತ್ರ ಸರಿ ಸಮ ಬೇರೆ ಇಲ್ಲ. ಚೆಟ್ಟಿನಾಡ್ ಮಟನ್ ಕರಿ ತಯಾರಿಸಲು ಬೇಕಾಗುವ ಸಾಮಗ್ರಿಗಳು ಹಾಗೂ ತಯಾರಿಸುವ ವಿಧಾನ ಹೀಗಿದೆ. ಬೇಕಾಗುವ ಸಾಮಗ್ರಿಗಳು ಮಟನ್ – 1 ಕಿಲೋ ಧನಿಯಾ – 2 ಟೇಬಲ್ ಸ್ಪೂನ್ ಸೋಂಪು ಕಾಳು – 1 ಟೇಬಲ್ ಸ್ಪೂನ್ ಕರಿಮೆಣಸು – 1 ಟೇಬಲ್ ಸ್ಪೂನ್ ಚೆಕ್ಕೆ – 1 ಇಂಚು ಒಣಮೆಣಸಿನ ಕಾಯಿ -6 ಕಾಶ್ಮೀರಿ ಕೆಂಪು ಮೆಣಸಿನಕಾಯಿ – 4 ಸ್ಟಾರ್ ಅನಿಸ್ 1 ಜೀರ್ಗೆ – 1 ಟೇಬಲ್ ಸ್ಪೂನ್ ಏಲಕ್ಕಿ – 3 ಲವಂಗ – 8 ತೆಂಗಿನಕಾಯಿ ತುರಿ – 1/2 ಕಪ್ ಗಸಗಸೆ – 2 ಟೇಬಲ್ ಸ್ಪೂನ್ ಸ್ಟೋನ್ ಫ್ಲವರ್ – 1 ಇಂಚು ಸಾಂಬಾರ್ ಈರುಳ್ಳಿ – 1 ಕಪ್ ಕರಿಬೇವು -…
ಶಿವಮೊಗ್ಗ :- ಸಿದ್ದರಾಮಯ್ಯರೇ ಇನ್ನೂ 4 ವರ್ಷ ನೀವೇ CM ಆಗಬೇಕೆನ್ನುವುದು ನನ್ನ ಆಸೆ ಎಂದು ಮಾಜಿ ಸಿಎಂ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸ್ನೇಹಿತನಾಗಿ, ಹಿತೈಷಿಯಾಗಿ, ಸಹೋದರನಾಗಿ ಹೇಳುತ್ತೇನೆ ಎಷ್ಟು ದಿನ ನೀವು ಮುಖ್ಯಮಂತ್ರಿ ಆಗಿರುತ್ತಿರೆಂದು ಗೊತ್ತಿಲ್ಲ. ನೀವು ಇನ್ನೂ ನಾಲ್ಕು ವರ್ಷ ಮುಖ್ಯಮಂತ್ರಿ ಆಗಿರಬೇಕೆಂದು ನನ್ನ ಆಸೆ. ನಿಮ್ಮ ಆಡಳಿತದಲ್ಲಿ ದೇವರಾಜ್ ಅರಸ್ ಅವರು ಮಾಡಿದ ಕೆಲಸ ಮಾಡಲಾಗಲ್ಲ. ಅವರನ್ನು ಪದೇ ಪದೆ ನೆನಪಿಸಿಕೊಳ್ಳುತ್ತಿರಿ. ವಸತಿ ಯೋಜನೆಯ ಮನೆಗಳು ಶಿವಮೊಗ್ಗದಲ್ಲಿ ನಿಂತು ಹೋಗಿದೆ. ಬಡವರಿಗೆ ಮನೆ ಕಟ್ಟಲು ಹಿಂದಿನ ಸರ್ಕಾರ ಮಾಡಿದ ಕೆಲಸವನ್ನು ಪೂರ್ಣಗೊಳಿಸಿ. ಆಗ ಜನ ನಿಮ್ಮ ಪೋಟೋ ಹಾಕಿ ನೆನಪಿಸಿಕೊಳ್ಳುತ್ತಾರೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದರು. ಕರ್ನಾಟಕದಲ್ಲಿ ಅತಿ ಹೆಚ್ಚು ಬಜೆಟ್ ಮಾಡಿರುವ ಅರ್ಥ ಸಚಿವರು ನೀವು. ಆದರೂ ಗ್ಯಾರಂಟಿಗಳ ಹಳ್ಳಕ್ಕೆ ಯಾಕೆ ಬಿದ್ದಿರಿ ಗೊತ್ತಿಲ್ಲ. ಹಾಸ್ಟೆಲ್, ಸಮುದಾಯ ಭವನಗಳು ಅರ್ಧಕ್ಕೆ ನಿಂತು ಹೋಗಿದೆ. ನಿಮ್ಮ ಸ್ವತಂತ್ರ ಯೋಚನೆಗಳನ್ನು…
ಬೆಳಗಾವಿ:- ಬಿಜೆಪಿ ಬಿಟ್ಟು ನಾನೆಲ್ಲೂ ಹೋಗಲ್ಲ ಎಂದು ಹೇಳುವ ಮೂಲಕ ಎಸ್ ಟಿ ಸೋಮಶೇಖರ್ ಅವರು ಯು ಟರ್ನ್ ಹೊಡೆದಿದ್ದಾರೆ. ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಪಕ್ಷದ ಮೇಲೆಯೇ ಮುನಿಸಿಕೊಂಡಿದ್ದ ಮಾಜಿ ಸಚಿವ ಎಸ್ಟಿ ಸೋಮಶೇಖರ್ ಯುಟರ್ನ್ ತೆಗೆದುಕೊಂಡಂತೆ ಕಾಣಿಸುತ್ತಿದೆ. ಬಿಜೆಪಿ ಸಭೆಗಳಿಗೆ ಗೈರಾಗುತ್ತಿದ್ದ ಎಸ್ಟಿ ಸೋಮಶೇಖರ್, ಸದ್ಯಕ್ಕೆ ಪಕ್ಷ ಬಿಟ್ಟು ಹೋಗಲ್ಲ ಎಂದು ಹೇಳಿದ್ದಾರೆ. ಮೂರು ರಾಜ್ಯಗಳ ಬಿಜೆಪಿ ಗೆಲುವು ಏನು ಹೇಳೋಕೆ ಆಗಲ್ಲ. ಅದು ರಾಷ್ಟ್ರೀಯ ಪಕ್ಷಗಳಿಗೆ ಕಾಮನ್. ಸದನದಲ್ಲಿ ನನ್ನ ನಿಲುವು ಏನಿರುತ್ತೆ ಅಂದರೆ ಏನು ಹೇಳಲಿ? ಸದ್ಯಕ್ಕೆ ಬಿಜೆಪಿಯಲ್ಲಿ ಇದ್ದೇನೆ, ಮುಂದೆ ನೋಡೋಣ ಎಂದು ಎಸ್ಟಿ ಸೋಮಶೇಖರ್ ಹೇಳಿದರು.
‘ಬಿಗ್ಬಾಸ್ ಮನೆಗೆ ‘ಚಾರ್ಲಿ’ ಬರ್ತಾನೆ ಎನ್ನುವುದು ಸಾಕಷ್ಟು ಸುದ್ದಿಯಾಗಿತ್ತು. ಆದರೆ ಇದುವರೆಗೆ ಚಾರ್ಲಿ ಬಿಗ್ಬಾಸ್ಗೆ ಎಂಟ್ರಿ ಕೊಟ್ಟಿಲ್ಲ. ಆದರೆ ‘ಚಾರ್ಲಿ’ಗೆ ಸಿನಿಮಾದಲ್ಲಿ ಚಿಕಿತ್ಸೆ ನೀಡಿದ್ದ ಡಾಕ್ಟರ್, ಸಂಗೀತಾ ಶೃಂಗೇರಿ ನಾಯಿ ಥರ ಆಡ್ತಿದ್ದಾರೆ! ಇದೇನು ಇಷ್ಟು ಕೀಳುಭಾಷೆಯಲ್ಲಿ ಸ್ಪರ್ಧಿಯನ್ನು ಹೀಗಳೆಯುತ್ತಿದ್ದಾರೆ ಎಂದು ಕೋಪಿಸಿಕೊಳ್ಳಬೇಡಿ. ಇದು ಹೀಗಳೆಯಲು ಹೇಳಿದ್ದು ಖಂಡಿತ ಅಲ್ಲ. ಈ ಮಾತು ಅಕ್ಷರಶಃ ಸತ್ಯ! ಅದು ಹೇಗೆಂಬುದು ಇಂದು JioCinema ಬಿಡುಗಡೆ ಮಾಡಿರುವ ಪ್ರೊಮೊದಲ್ಲಿ ಜಾಹೀರಾಗಿದೆ. ಸಂಗೀತಾ ಅವರು ನಾಯಿಯ ಹಾಗೆ ಕೈಗಳನ್ನೂ ಕಾಲಾಗಿಸಿಕೊಂಡು, ಮನೆಯೊಳಗೆ ನಾಯಿಯ ಹಾಗೆ ನಡೆದಾಡುತ್ತ, ಅಳುವ ನಾಯಿಯ ಹಾಗೆ ಕೂಗುತ್ತ ಓಡಾಡುತ್ತಿದ್ದಾರೆ! ಬಿಗ್ಬಾಸ್ ಮನೆಯೊಳಗೆ ಇದೇನೂ ಹೊಸ ಸಮಸ್ಯೆ ಎನ್ನಬೇಡಿ. ಇದು ಬಿಗ್ಬಾಸ್ ಅವರೇ ಮನೆಯ ಸ್ಪರ್ಧಿಗಳಿಗೆ ನೀಡಿದ ಹೊಸ ಟಾಸ್ಕ್! ‘ಬಿಗ್ಬಾಸ್ ಸೂಚಿಸಿದ ಚಟುವಟಿಕೆಗಳನ್ನು ಮನೆಯ ಸ್ಪರ್ಧಿಗಳು ಮಾಡಬೇಕು’ ಎಂಬುದು ಈ ವಾರದ ಮೊದಲ ಟಾಸ್ಕ್. ಇದರ ಭಾಗವಾಗಿಯೇ ಸಂಗೀತಾ ಅಳುತ್ತಿರುವ ನಾಯಿಯ ಹಾಗೆ ಆಡುತ್ತಿದ್ದಾರೆ. ತುಕಾಲಿ ಸಂತೋಷ್ ಕೂಡ ನಾಯಿಯ ಹಾಗೆ…