ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ ‘ಮಾಫಿಯಾ’ (Mafia) ಚಿತ್ರದ ಟೀಸರ್ (Teaser) ಇತ್ತೀಚಿಗೆ ಬಿಡುಗಡೆಯಾಯಿತು. ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರ್ಗಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾಫಿಯಾ ಕುರಿತು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಲೋಹಿತ್ (Lohit), ಈವರೆಗೂ ಯಾರು ತೋರಿಸಿರದ ಮಾಫಿಯಾ ಈ ಚಿತ್ರದಲ್ಲಿ ತೋರಿಸಿದ್ದೇವೆ. ಬೇರೆ ಬೇರೆ ಮಾರ್ಕೆಟ್ ಹೆಸರು ಕೇಳಿರುತ್ತೀರಾ. ಆದರೆ ಇದೆ ಮೊದಲ ಬಾರಿಗೆ ರೆಡ್ ಮಾರ್ಕೆಟ್ ಪರಿಚಯಿಸಲಾಗಿದೆ. ಅದು ಏನೆಂಬುದನ್ನು ಚಿತ್ರದಲ್ಲೇ ನೋಡಬೇಕು ಎಂದರು. ಪ್ರಜ್ವಲ್ ದೇವರಾಜ್ ಅಭಿನಯದ 35 ನೇ ಚಿತ್ರವನ್ನು ನಿರ್ಮಿಸುತ್ತಿರುವುದು ಖುಷಿಯಾಗಿದೆ. ನಿರ್ದೇಶಕ ಲೋಹಿತ್ ಸೇರಿದಂತೆ ಚಿತ್ರತಂಡದ ಸಹಕಾರದಿಂದ “ಮಾಫಿಯಾ” ಚಿತ್ರ ಚೆನ್ನಾಗಿ ಮೂಡಿಬಂದಿದೆ. ಜನವರಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ ಎಂದರು ನಿರ್ಮಾಪಕ ಕುಮಾರ್…
Author: AIN Author
ಗದಗ: ವಿಕಲಚೇತನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸವಾಗಬೇಕು. ಸಮಾಜದಲ್ಲಿ ವಿಕಲಚೇತನರನ್ನು ಅಶಕ್ತರು ಎಂಬ ಕೀಳರಿಮೆಯಿಂದ ನೋಡಬಾರದು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು ಇವರುಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. https://ainlivenews.com/congress-president-has-called-an-important-meeting-on-december-6/#google_vignette ವಿಕಲಚೇತನರು ವಿಕಲತೆಯನ್ನು ಮೆಟ್ಟಿ ನಿಂತು ತಮ್ಮಲ್ಲಿ ಹುದುಗಿರುವ ಕಲೆಯನ್ನು ಪ್ರೋತ್ಸಾಹಿಸಬೇಕು. ವಿಕಲಚೇತನರನ್ನು ಇತರ ರೀತಿಯಿಂದ ಶಕ್ತನಾಗಿರುವವನು ( Differently Abled Person ) ಎಂದು ಜಗತ್ತು ಗುರುತಿಸುತ್ತಿದೆ.…
ಬೆಂಗಳೂರು: ಇಬ್ಬರು ಚಾಲಕರ ನಡುವೆ ಕಿರಿಕ್ ನಿಂದಾಗಿ ಮತ್ತೋರ್ವ ಚಾಲಕ ಕಾರnfnu ಸ್ವಲ್ಪ ದೂರದವರೆಗೆ ನೂಕಿಕೊಂಡು ಹೋದ ಭಯಾನಕ ಘಟನೆ ನಗರದ ಹೆಬ್ಬಾಳ ಫ್ಲೈ ಓವರ್ ಮೇಲೆ ನಡೆದಿದೆ. ಇಟಿಯಾಸ್ ಚಾಲಕ ಅಡ್ಡ ಬಂದ್ರು ಕಾರು ಮೂವ್ ಮಾಡಿದ ಇನೋವಾ ಡ್ರೈವರ್ ಇಟಿಯಾಸ್ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಇನೋವಾ ಚಾಲಕ ಸ್ವಲ್ವ ಯಾಮಾರಿದ್ರೂ ಹೋಗ್ತಿತ್ತು ಇಟಿಯಾಸ್ ಚಾಲಕನ ಪ್ರಾಣ ಹೆಬ್ಬಾಳ ಫ್ಲೈ ಒವರ್ ಮೇಲೆ ನವೆಂಬರ್ 29ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಎಕ್ಸ್(ಟ್ವಿಟರ್)ನಲ್ಲಿ ಘಟನೆಯ ವಿಡಿಯೋ ಶೇರ್ ಮಾಡಿರುವ ವ್ಯಕ್ತಿ ಘಟನೆಯ ವಿಡಿಯೋ ಪಕ್ಕದಲ್ಲೇ ಇದ್ದ ಕಾರಿನ ಡಾಶ್ ಬೋರ್ಡ್ ಕ್ಯಾಮಾರದಲ್ಲಿ ರೆಕಾರ್ಡ್ ಎರಡು ಯೆಲ್ಲೋ ಬೋರ್ಡ್ ಕಾರುಗಳು ಗಾಡಿಯಲ್ಲಿ ಪ್ಯಾಸೆಂಜರ್ ಕೂಡ ಇದ್ದರೂ ಇಂಥ ಘಟನೆ ನಾನು ಮುಂದೆಯಿಂದ ಟ್ರಾಫಿಲ್ ಪೊಲೀಸರಿಗೂ ಮಾಹಿತಿ ನೀಡಿದ್ದೇನೆ ಎಂದು ಟ್ವೀಟ್ ಕೆಎ 05, ಎಎಲ್ 7999 ವಾಹನ ಚಾಲಕನಿಂದ ಅತಿರೇಕದ ವರ್ತನೆ
ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಹಿನ್ನೆಲೆ ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ಎಂಇಎಸ್ ಮತ್ತು ಶಿವಸೇನೆ ಠಾಕ್ರೆ ಬಣದಿಂದ ಹೈಡ್ರಾಮಾ ನಡೆದಿದೆ. ಕೊಲ್ಲಾಪುರ ಜಿಲ್ಲೆಯ ಶಿನ್ನೋಳ್ಳಿ ಗಡಿಯಲ್ಲಿ ರಸ್ತೆ ಬಂದ್ ಮಾಡಿ ಪುಂಡಾಟ ಮೆರೆದಿದ್ದಾರೆ. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಶಿವಸೇನೆ ಕಾರ್ಯಕರ್ತರಿಂದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://ainlivenews.com/congress-president-has-called-an-important-meeting-on-december-6/#google_vignette ಅದಲ್ಲದೆ ಇತ್ತ ಕರ್ನಾಟಕ ಸರ್ಕಾರದ ವಿರುದ್ಧ ಎಂಇಎಸ ಪುಂಡರು ನಾಡವಿರೋಧಿ ಘೋಷಣೆ ಕೂಗಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ಬೀಗಿ ಖಾಗಿ ಭದ್ರತೆ ಒದಗಿಸಲಾಗಿದ್ದು, ಕರ್ನಾಟಕ ಗಡಿ ಪ್ರವೇಶಿಸದಂತೆ ಪೊಲೀಸರು ತಡೆ ಹಿಡಿದಿದ್ದಾರೆ.
ಬೆಳಗಾವಿ: ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕಾಗಿ ಬೆಳಗಾವಿಗೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿಮಾನ ನಿಲ್ದಾಣದ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಅಧಿವೇಶನದಲ್ಲಿ ಬಿಜೆಪಿ ಒಂದು ಸಮರ್ಥ ವಿರೋಧ ಪಕ್ಷವಾಗಿ ಕೆಲಸ ಮಾಡುವ ಜೊತೆಗೆ ಜನ ಅದರಲ್ಲೂ ವಿಶೇಷವಾಗಿ ಬಡಜನ ಎದುರಿಸುತ್ತಿರುವ ಸಮಸ್ಯೆಗಳನ್ನು ಪ್ರಸ್ತಾಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉತ್ತರ ಪಡೆಯುವುದಾಗಿ ಹೇಳಿದರು. https://ainlivenews.com/congress-president-has-called-an-important-meeting-on-december-6/#google_vignette ಪಂಚ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶಗಳ ಬಗ್ಗೆ ಮಾತಾಡಿದ ಅವರು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪೊಳ್ಳು ಗ್ಯಾರಂಟಿಗಳನ್ನು ನೀಡಿ ಗೆದ್ದ ಹಾಗೆಯೇ ಅದರ ನೇತೃತ್ವ ಇಂಡಿಯ ಮೈತ್ರಿಕೂಟ ದೇಶದ ಬೇರೆ ಭಾಗಗಳಲ್ಲೂ ಗ್ಯಾರಂಟಿಗಳ ಮಂತ್ರ ಪಠಿಸಿತು. ಆದರೆ, ಜನ ಅವಟ ಟೊಳ್ಳು ಗ್ಯಾರಂಟಿಗಳನ್ನು ನಂಬಲು ತಯಾರಿಲ್ಲ, ಅವರಿಗೆ ಬೇಕಿರುವುದು ದೇಶದ ರಕ್ಷಣೆ ಮತ್ತು ಅಭಿವೃದ್ಧಿಯ ಗ್ಯಾರಂಟಿ ಮತ್ತು ಅದನ್ನು ಕೇವಲ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತ್ರ ನೀಡಬಲ್ಲರು ಎಂದು ವಿಜಯೇಂದ್ರ ಹೇಳಿದರು.
ಹೈದರಾಬಾದ್: ತೆಲಂಗಾಣದ ಮೇದಕ್ ಜಿಲ್ಲೆಯ ತೂಪ್ರಾನ್ನ ರಾವೆಲ್ಲಿ ಗ್ರಾಮದಲ್ಲಿ ತರಬೇತಿ ವಿಮಾನವೊಂದು (Trainer Aircraft) ಪತನಗೊಂಡ ಪರಿಣಾಮ ಭಾರತೀಯ ವಾಯುಪಡೆಯ (IAF) ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ಹೈದರಾಬಾದ್ನಲ್ಲಿರುವ ಏರ್ ಫೋರ್ಸ್ ಅಕಾಡೆಮಿಯಿಂದ (AFA) ವಾಡಿಕೆಯ ತರಬೇತಿಗಾಗಿ Pilatus PC 7 Mk-II ವಿಮಾನ ಟೇಕಾಫ್ ಆಗಿತ್ತು. ಈ ವೇಳೆ ಅಪಘಾತ ಸಂಭವಿಸಿ ವಿಮಾನದಲ್ಲಿದ್ದ ತರಬೇತುದಾರ ಮತ್ತು ತರಬೇತಿ ನಿರತ ಪೈಲಟ್ ಇಬ್ಬರೂ ಸಾವನ್ನಪ್ಪಿದ್ದಾರೆ. ಸದ್ಯ ಅಪಘಾತಕ್ಕೆ ನಿಖರ ಕಾರಣ ಪತ್ತೆಹಚ್ಚಲು ತನಿಖೆಗೆ ಆದೇಶಿಸಲಾಗಿದೆ. ಪಿಲಾಟಸ್ PC 7 Mk-II ವಿಮಾನವು ಒಂದೇ ಎಂಜಿನ್ ಒಳಗೊಂಡ ತರಬೇತಿ ವಿಮಾನವಾಗಿದೆ. IAF ಪೈಲಟ್ಗಳ ತರಬೇತಿಗಾಗಿ ಇದನ್ನು ಬಳಸಲಾಗುತ್ತದೆ. ಸ್ವಿಟ್ಜರ್ಲೆಂಡಿನ ಪಿಲಾಟಸ್ ಸಂಸ್ಥೆಯು ಇದನ್ನು ವಿನ್ಯಾಸಗೊಳಿಸಿ, ತಯಾರಿಸಲಿದೆ. ಈ ವಿಮಾನವನ್ನು ಏರೋಬ್ಯಾಟಿಕ್ಸ್, ಯುದ್ಧತಂತ್ರ ಮತ್ತು ರಾತ್ರಿ ಹಾರಾಟ ಸೇರಿದಂತೆ ಎಲ್ಲಾ ಮೂಲಭೂತ ತರಬೇತಿ ಕಾರ್ಯಗಳಿಗೆ ಬಳಸಲಾಗುತ್ತದೆ. ಸರಿಸುಮಾರು 1,330 ಕೆ.ಜಿ ತೂಕ ಹೊಂದಿರುತ್ತದೆ ಎಂದು ಅಂದಾಜಿಸಲಾಗಿದೆ.
ದೆಹಲಿ:ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆ ಭಾರೀ ಹಿನ್ನಡೆಯಾಗಿದ್ದು ಅಂದಾಜು ಮೀರಿ ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಪಕ್ಷ ಸೋತಿದ್ದು ಪಕ್ಷದ ಹಿರಿಯ ನಾಯಕರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿನ ಬೆನ್ನಲ್ಲಿಯೇ ಸೋಲಿನ ಪರಾಮರ್ಶೆ ಆರಂಭವಾಗಿದೆ. ಸ್ವತಃ ಕಾಂಗ್ರೆಸ್ನಲ್ಲಿಯೇ ಪಕ್ಷದ ಕೆಲವೊಂದು ನಿರ್ಧಾರಗಳ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ ದೇಶದಲ್ಲಿ ಸನಾತನ ಧರ್ಮವನ್ನು ಸ್ವತಃ ಕಾಂಗ್ರೆಸ್ ವಿರೋಧಿಸಲು ನಿಂತಿದ್ದೇ ಈ ಸೋಲಿಗೆ ಕಾರಣ ಎಂದು ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಹೇಳಿದ್ದಾರೆ ಖಾಸಗಿ ವಾಹಿನಿಯೊಂದಿಗೆ ಮಾತನಾಡುವ ವೇಳೆ,ಈ ಮಾತುಗಳನ್ನ ಹೇಳಿದ್ದಾರೆ. ಮಹಾತ್ಮಾ ಗಾಂಧಿ ತೋರಿಸಿಕೊಟ್ಟಿದ್ದ ದಾರಿಯಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಪಕ್ಷ, ಮಾರ್ಕ್ಸ್ ದಾರಿಯಲ್ಲಿ ಸಾಗಿದಾಗ ಇಂಥ ಫಲಿತಾಂಶಗಳು ಸಿಗುತ್ತವೆ ಎಂಧು ಆಚಾರ್ಯ ಪ್ರಮೋದ್ ಕಿಡಿ ಕಾರಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ನನ್ನನ್ನು ಸ್ಟಾರ್ ಕ್ಯಾಂಪೇನರ್ ಲಿಸ್ಟ್ನಲ್ಲಿ ಇರಿಸಿದ್ದಾಗ ಇಲ್ಲಿ ಸರ್ಕಾರ ರಚನೆ ಮಾಡಿದ್ದೆವು. ಆದರೆ, ಈ ಬಾರಿ ನಾನು ಈ ಪಟ್ಟಿಯಲ್ಲೇ ಇದ್ದಿರಲಿಲ್ಲ. ಇದರಿಂದಾಗಿ ಮೂರೂ ರಾಜ್ಯಗಳಲ್ಲಿ ಸೋಲು ಕಂಡಿದೆ. ಒಬ್ಬ…
ರಾಯಪುರ: ಛತ್ತೀಸಗಢದಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸುವುದು ನಿಚ್ಚಳವಾಗಿದೆ. ಈ ಹೊತ್ತಿನಲ್ಲಿ ಬಿಜೆಪಿ ಅಭ್ಯರ್ಥಿಯೊಬ್ಬರ ಗೆಲುವಿನ ಹಿಂದಿನ ಕುತೂಹಲಕಾರಿ ವಿಷಯವೊಂದನ್ನು ಉಲ್ಲೇಖಿಸಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಕಿರುವ ಪೋಸ್ಟ್ ವೈರಲ್ ಆಗಿದೆ. ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಬಿ.ಎಲ್.ಸಂತೋಷ್, ಈತ ಈಶ್ವರ್ ಸಾಹು. ಛತ್ತೀಸಗಢ ರಾಜ್ಯದ ಬಿಜೆಪಿ ಅಭ್ಯರ್ಥಿ. 7 ಬಾರಿ ಗೆದ್ದಿದ್ದ ಕಾಂಗ್ರೆಸ್ ಶಾಸಕ ರವೀಂದ್ರ ಚೌಬೆ ಅವರನ್ನು ಸಾಹು ಸೋಲಿಸಿದ್ದಾರೆ. ಈ ವ್ಯಕ್ತಿಯ ಮಗ ಗುಂಪು ಹಿಂಸಾಚಾರದಲ್ಲಿ ಹತ್ಯೆಗೀಡಾಗಿದ್ದರು. ಆ ಗಲಭೆಕೋರರಿಗೆ ಕಾಂಗ್ರೆಸ್ ಬೆಂಬಲ ನೀಡಿತ್ತು. ಇಂದು ಸಾಹು ಪ್ರಜಾಪ್ರಭುತ್ವ ಯುದ್ಧದಲ್ಲಿ ಅನ್ಯಾಯದ ವಿರುದ್ಧ ಸೇಡು ತೀರಿಸಿಕೊಂಡಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ. ತಮ್ಮ ಮಗನಿಗಾದ ಅನ್ಯಾಯಕ್ಕಾಗಿ ಕಾಂಗ್ರೆಸ್ ವಿರುದ್ಧ ಸೇಡು ತೀರಿಸಿಕೊಳ್ಳುವ ಛತ್ತೀಸ್ಗಢದ ಸಾಜಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಈಶ್ವರ್ ಸಾಹು ಅವರ ಆಸೆ ಕೊನೆಗೂ ನೆರವೇರಿದೆ. ಸತತ ಏಳು ಭಾರಿ ಗೆದ್ದು ಶಾಸಕರಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ರವೀಂದ್ರ ಚೌಬೆಯನ್ನು ಬಿಜೆಪಿ ಅಭ್ಯರ್ಥಿ ಸಾಹು…
ಬಿಗ್ ಬಾಸ್ ಮನೆಯ (Bigg Boss Kannada 10) ಲವ್ ಬರ್ಡ್ಸ್ ನಮ್ರತಾ-ಸ್ನೇಹಿತ್ ಜೋಡಿ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ನಮ್ರತಾ (Namratha Gowda) ಮೇಲೆ ಫೀಲಿಂಗ್ಸ್ ಇದೆ. ನಮ್ರತಾ ಜೊತೆ ಫ್ರೆಂಡ್ಶಿಪ್ಗಿಂತ ತುಸು ಜಾಸ್ತಿ ಅಟ್ಯಾಚ್ ಆಗಿದ್ದೀನಿ ಎಂದು ಸ್ನೇಹಿತ್ (Snehith Gowda) ಇದೀಗ ವಿನಯ್ ಬಳಿ ಅಳಲು ತೋಡಿಕೊಂಡಿದ್ದಾರೆ. ಬಿಗ್ ಮನೆಯಲ್ಲಿ 55 ದಿನಗಳಿಂದ ಆಗ್ತಿರೋದು ಒಂದೇ ವಿಚಾರ. ನಮ್ರತಾ ಬೀಳಲ್ಲ, ಸ್ನೇಹಿತ್ ಬಿಡಲ್ಲ. ಸ್ನೇಹಿತ್ ಲವ್ವಿ-ಡವ್ವಿ ಆಟದಲ್ಲಿ ನಾನಿಲ್ಲ ಎಂದು ನಮ್ರತಾ ಹೇಳುತ್ತಲೇ ಬಂದಿದ್ದಾರೆ. ಆದರೆ ಸ್ನೇಹಿತ್ಗೆ ಅರ್ಥವಾಗುವ ಲಕ್ಷಣ ಕಾಣ್ತಿಲ್ಲ. ಬಿಗ್ ಬಾಸ್ ಮನೆಗೆ ಸ್ನೇಹಿತ್ ಕಾಲಿಟ್ಟಾಗ ಮೊದಲು ಇದ್ದ ಹುಮ್ಮಸ್ಸು ಇದೀಗ ಇಲ್ಲ. ನಮ್ರತಾ ಹಿಂದೆ ಓಡಾಡೋದು ಬಿಟ್ಟು ಸ್ನೇಹಿತ್ ಆಟ ಸೊನ್ನೆಯಾಗಿ ನಿಂತಿದ್ದಾರೆ. ಕಳೆದ ವಾರ ಬಾಟಮ್ 2ರಲ್ಲಿ ಸ್ನೇಹಿತ್ ಸೇವ್ ಆಗಿದ್ದರು. ಸದ್ಯ ವಾರದ ಕ್ಯಾಪ್ಟನ್ ಆಗಿ ಸ್ನೇಹಿತ್ ಆಯ್ಕೆಯಾಗಿ ಆಟ ಆಡುತ್ತಿದ್ದಾರೆ. ಇದೆಲ್ಲದರ ನಡುವೆ ನಮ್ರತಾ ಮೇಲಿನ…
ಹುಬ್ಬಳ್ಳಿ: ಕಾರು ಮತ್ತು ಟಿಪ್ಪರ ನಡುವೆ ಅಪಘಾತವಾದ ಪರಿಣಾಮ, ಕಾರು ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ವರೂರ ಬಳಿ ಈಗಷ್ಟೇ ನಡೆದಿದೆ. ಹೌದು, ಹುಬ್ಬಳ್ಳಿಯತ್ತ ಬರುತ್ತಿದ್ದ ಕಾರು ಮತ್ತು ಟಿಪ್ಪರ್ ನಡುವೆ ಅಪಘಾತವಾಗಿದೆ. ಡಿಕ್ಕಿ ರಭಸಕ್ಕೆ ಕಾರು ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಹಾನಿಯಾಗಿಲ್ಲ. ಸ್ಥಳಕ್ಕೆ ಗ್ರಾಮೀಣ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.