Author: AIN Author

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಶ್ರೀ ಶಂಕರಲಿಂಗ ಸರ್ಕಲದಲ್ಲಿ ಪಂಚರಾಜ್ಯ ಚುನಾವಣೆ ರಾಜಸ್ಥಾನ ಮಧ್ಯಪ್ರದೇಶ ಛತ್ತಿಸ್ಗಢ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಭಾರತ ದೇಶದ ಭದ್ರತೆಗಾಗಿ ಮತದಾರರು ಬಿಜೆಪಿ ಗೆಲ್ಲಿಸಿದ್ದಾರೆ. ಬಿಟ್ಟಿ ಗ್ಯಾರಂಟಿಗೆ ಬಗ್ಗದೆ ದೇಶದ ಭದ್ರತೆಗಾಗಿ ಮತದಾರರು ಬಿಜೆಪಿ ಗೆಲ್ಲಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರ ಜೆಬಿಗೆ ಕತ್ರಿ ಹಾಕಿ ಬಿಟ್ಟಿ ಭಾಗ್ಯಗಳು ನೀಡುತ್ತಿದ್ದಾರೆ. ಅಂತಹ ಬಿಟ್ಟಿ ಭಾಗ್ಯಗಳಿಗೆ ಪಂಚ ರಾಜ್ಯ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ಸಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ದೇಶದ ಸುಭದ್ರತೆ ಮತ್ತು ಮೋದಿಯವರ ಕಾರ್ಯ ವೈಖರಿಯಗಳನ್ನು ನೋಡಿ ರಾಜಸ್ಥಾನ ಮಧ್ಯಪ್ರದೇಶ ಛತ್ತಿಸ್ಗಢ ದಲ್ಲಿ ಅಬುತಪೂರ್ವ ಬಿಜೆಪಿ ಗೆಲ್ಲಿಸುವುದರ ಜೊತೆಗೆ ಕಾಂಗ್ರೆಸ್ಸಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ರಾಮಣ್ಣ ಹುಲಕುಂದ. ಸಂಜಯ ತೆಗ್ಗಿ. ಬಸವರಾಜ ತೆಗ್ಗಿ. ಮಾರುತಿ ಗಾಡಿವಡ್ಡರ. ರವಿ ಕೋರತಿ. ಶ್ರೀಶೈಲ ದಲಾಲ ಮಾಹಾದೇವ ದುಪದಾಳ ಬಸವರಾಜ ಅಮ್ಮನಿಗಿಮಠ ಯಲ್ಲಪ್ಪ ಕಟಗಿ ಪ್ರಕಾಶ…

Read More

ಹಾವೇರಿ: ಅಂಗವಿಕಲ ದಿನಾಚರಣೆ ಹಿನ್ನೆಲೆ ಹಾವೇರಿಯಲ್ಲಿ ನುರಾರು ಮಕ್ಕಳಿಂದ ಮೆರವಣಿಗೆ ನಡೆಸಲಾಗಿತ್ತು. ಈ ವೇಳೆ ಬುದ್ಧಿಮಾಂದ್ಯ ಮಗನೊಂದಿಗೆ ಪೊಲೀಸ್ ಪೇದೆ ಹಾಕಿದರು. ಅಂಗವಿಕಲ ಮಕ್ಕಳ ಮೆರವಣಿಗೆಯ ಕಾವಲಿಗೆ ಸಿಬ್ಬಂದಿಗಳು ಬಂದಿದ್ದರು. ಮಂಜುನಾಥ ಮಂಗೋಡಿ ಬುದ್ದಿ ಮಾಂದ್ಯ ಮಗನನ್ನ ಕಂಡು ಭಾವುಕನಾಗಿ ಹೆಜ್ಜೆ ಹಾಕಿದರು. ಡಾ ಪುನಿತ್ ರಾಜ್ ಕುಮಾರ್ ರವರ ಗೊಂಬೆ ಹೇಳುತೈತೆ ಹಾಡಿಗೆ ಹೆಜ್ಜೆ ಹಾಕಿದ ಅಂದ, ಕಿವುಡ, ಬುದ್ಧಿಮಾಂದ್ಯ ಮಕ್ಕಳು

Read More

ಧಾರವಾಡ: ಪಂಚರಾಜ್ಯ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಜಯ ಸಾಧಿಸಿದ ಹಿನ್ನೆಲೆ ಧಾರವಾಡದ ಬಿಜೆಪಿಯಲ್ಲಿ ಸಂಭ್ರಮ ಮನೆ ಮಾಡಿದೆ. ಪಟಾಕಿ‌ ಸಿಡಿಸಿ ಪರಸ್ಪರ ಸಹಿ ಹಂಚಿಕೊಂಡ ಬಿಜೆಪಿಗರು. ನಗರದ ಸುಭಾಷ್ ರಸ್ತೆಯ ಬಿಜೆಪಿ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಸಂಭ್ರಮಾಚರಣೆ ಮಾಡಲಾಗಿದ್ದು, ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗಿದ ಕಾರ್ಯಕರ್ತರು. ಮಧ್ಯಪ್ರದೇಶ,ರಾಜಸ್ಥಾನ ಹಾಗೂ ಛತ್ತೀಸ್‌ಗಡ್‌ನಲ್ಲಿ ಬೆಜೆಪಿಗೆ ಅಧಿಕಾರ ಬಂದಿರುವುದರಿಂದ ಮೂರು ರಾಜ್ಯದ ಮತದಾರರಿಗೆ ಜಿಲ್ಲೆಯ ಬಿಜೆಪಿಗರು ಧನ್ಯವಾದ ತಿಳಿಸಿದರು.

Read More

ದಾವಣಗೆರೆ: ದೇಶದಲ್ಲಿ ಪಂಚರಾಜ್ಯ ಚುನಾವಣೆಯಲ್ಲಿ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಹಿನ್ನೆಲೆ ಹೊನ್ನಾಳಿಯಲ್ಲಿ ಮಾಜಿ ಸಚಿವ ಎಂ‌.ಪಿ‌.ರೇಣುಕಾಚಾರ್ಯ ಸಂಭ್ರಮಾಚರಣೆ ಮಾಡಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ನಿವಾಸದಲ್ಲಿ ಸಂಭ್ರಮಾಚರಣೆ ಮಾಡಿದ ಬಿಜೆಪಿ ಮುಖಂಡರು. ಮುಂದಿನ ಲೋಕಸಭಾ ಚುನಾವಣೆಗೆ ಈ ಚುನಾವಣೆ ದಿಕ್ಸೂಚಿಯಾಗಿದ್ದು, ಇದು ಸೆಮಿ ಪೈನಲ್ ಚುನಾವಣೆಗಳು ಎಂದರೆ ತಪ್ಪಾಗಲಾರದು.  ಕರ್ನಾಟಕದಲ್ಲಿ ಕೊಟ್ಟ ಭರವಸೆಗಳು ಎಲ್ಲಾ ಪೇಲೂರ್ ಆಗಿದೆ‌. ಭರವಸೆಗಳಿಂದ ಜನರ ಮತಗಳನ್ನು ಪಡೆಯಲು ಸಾಧ್ಯವಿಲ್ಲಾ. ದೇಶಕ್ಕೆ ಬಲಿಷ್ಟ ನಾಯಕ ಬೇಕು, ಅದು ನರೇಂದ್ರ ಮೋದಿಜಿ . ಮುಂದೆ ದೇಶದಲ್ಲಿ 350 ಕ್ಕೂ ಹೆಚ್ಚು ಲೋಕಸಬಾ ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಮೂಲಕ ಮೂರನೇ ಬಾರಿಗೆ ನರೇಂದ್ರ ಮೋದಿಜಿ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಹೇಳಿದ್ದಾರೆ.

Read More

ದಾವಣಗೆರೆ: ನಿಮ್ಮ ಬಗ್ಗೆ ನಮಗೆ ಅಪಾರ ಗೌರವವಿದೆ. ದಯವಿಟ್ಟು ಭಿನ್ನಾಭಿಪ್ರಾಯಗಳನ್ನು ಕೈ ಬಿಡಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಮನವಿ ಮಾಡಿಕೊಂಡರು. ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಆತ್ಮೀಯ ಸ್ನೇಹಿತರು ಕೇಂದ್ರ ಸಚಿವರಾಗಿರುವ ಅನುಭವ ಇದೆ. ನಿಮ್ಮ ಬಗ್ಗೆ ಗೌರವವಿದೆ, ನಾನು ವಿನಂತಿ ಮಾಡುತ್ತೇನೆ. ನಮ್ಮ ಸಂಘರ್ಷದಿಂದಲೇ ಕಳೆದ ಬಾರಿ ಅಧಿಕಾರ ಕಳೆದುಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಪ್ರತಿ ಬಾರಿ ಯಡಿಯೂರಪ್ಪ, ವಿಜಯೇಂದ್ರ ಅವರ ಬಗ್ಗೆ ಹಗುರವಾಗಿ ಮಾತನಾಡಬಾರದು ಎಂದು ಹೇಳಿದರು. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಎಲ್ಲರೂ ಒಟ್ಟಾಗಿ ಮಾಡಿದ್ದಾರೆ. ಮುಂದಿನ ಲೋಕಸಭೆಗೆ 28 ಸ್ಥಾನ ಗೆಲ್ಲ ಬೇಕು. ಯತ್ನಾಳ್ ಜೆಡಿಎಸ್ ಗೆ ಹೋದಾಗ ಯಡಿಯೂರಪ್ಪನವರು ಪಕ್ಷಕ್ಕೆ ವಾಪಸ್ ಕರೆ ತಂದಿದ್ದರು. ಆದರೆ ಯಡಿಯೂರಪ್ಪನವರ ಬಗ್ಗೆ ಪದೇ ಪದೇ ಟೀಕೆ ಮಾಡಿದರೆ ಒಳ್ಳೆಯದಲ್ಲ. ಈ ರೀತಿ ಟೀಕೆ ಮಾಡಿದರೆ ಪಕ್ಷಕ್ಕೆ ಡ್ಯಾಮೇಜ್ ಆಗಲಿದೆ ಎಂದು ತಿಳಿಸಿದರು.

Read More

ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಕಳೆದ 4 -5 ದಿನಗಳಿಂದ ಚಿನ್ನದ ದರದಲ್ಲಿ ನಿರಂತರ ಇಳಿಕೆಯಾಗಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ… ಒಂದು ಗ್ರಾಂ ಚಿನ್ನ (1GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5845 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,376 ಎಂಟು ಗ್ರಾಂ ಚಿನ್ನ (8GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 46,760 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 51,008 ಹತ್ತು ಗ್ರಾಂ ಚಿನ್ನ (10GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 58,450 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 63,760 ನೂರು ಗ್ರಾಂ ಚಿನ್ನ (100GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  5,84,500…

Read More

ಬಿಗ್ ಬಾಸ್ ಮನೆಯಲ್ಲಿ (Bigg Boss Kannada 10) ಈ ವಾರ ನಮ್ರತಾ ಗೌಡ (Namratha Gowda) ಅವರು ಉತ್ತಮವಾಗಿ ಆಡಿದ್ದಾರೆ. ಸ್ಪರ್ಧಿಗಳಿಂದಲೇ ನಮ್ರತಾ ಉತ್ತಮ ಎಂದೆನೆಸಿಕೊಂಡಿದ್ದಾರೆ. 55 ದಿನಗಳ ನಂತರ ನಮ್ರತಾರ ಆಟ ಮತ್ತು ಆ್ಯಕ್ಟಿವಿಟಿ ನೋಡಿ ಸುದೀಪ್ ಕೂಡ ಮೆಚ್ಚುಗೆ ಸೂಚಿಸಿ ಚಪ್ಪಾಳೆ ತಟ್ಟಿದ್ದಾರೆ. ಕಳೆದ ವಾರ ಡ್ರೋನ್ ಪ್ರತಾಪ್, ತನಿಷಾ ಕುಪ್ಪಂಡಗೆ (Tanisha Kuppanda) ವೀಕ್ಷಕರಿಂದ ಹೆಚ್ಚಿನ ಮತ ಸಿಕ್ಕಿತ್ತು. ಇದರಿಂದ ನಮ್ರತಾ ತುಂಬ ಬೇಸರ ಮಾಡಿಕೊಂಡಿದ್ದರು. ಸಿಕ್ಕಾಪಟ್ಟೆ ಕೂಗಾಡುವ ತನಿಷಾ ಜನರಿಗೆ ಇಷ್ಟ ಆಗ್ತಾರೆ, ನಾನು ಹೊರಗಡೆ ಸುಮ್ಮನೆ ಪ್ರಾಜೆಕ್ಟ್ ಮಾಡಿಕೊಂಡು ಇರಬಹುದಿತ್ತು ಎಂದು ನಮ್ರತಾ ಹೇಳಿದ್ದರು. ಆದರೆ ಈ ವಾರ ಅವರ ಅದೃಷ್ಟ ಬದಲಾಗಿದೆ. ಈ ವಾರವೇ ನಮ್ರತಾ ಗೌಡ ಅವರು ಸ್ಪರ್ಧಿಗಳ ಕಣ್ಣಲ್ಲಿ ಉತ್ತಮ ಪಟ್ಟದ ಜೊತೆಗೆ ಕಿಚ್ಚ ಸುದೀಪ್ ಅವರಿಂದ ಕಿಚ್ಚನ ಚಪ್ಪಾಳೆಯನ್ನು ಕೂಡ ಪಡೆದರು. https://ainlivenews.com/congress-president-has-called-an-important-meeting-on-december-6/  ಕ್ಯಾಪ್ಟೆನ್ಸಿ ಹಣಾಹಣಿಯಲ್ಲಿ ಕಾಲಿಗೆ ಪೆಟ್ಟಾಗಿದ್ದರಿಂದ ತನಿಷಾ ಪರ ನಮ್ರತಾ ಆಟ ಆಡಿದ್ದರು. 4…

Read More

ಬೆಂಗಳೂರು: ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ವಹಿಸಿದ್ದ ಪ್ರಹ್ಲಾದ್‌ ಜೋಷಿ ಸುದ್ದಿಗೋಷ್ಠಿ ನಡೆಸಿದರು. ಕಾಂಗ್ರೆಸ್​ನ ಸುಳ್ಳು ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ. ತೆಲಂಗಾಣ ಬಿಟ್ಟು ಉಳಿದ ಕಡೆ ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ. BRS ದುರಾಡಳಿತದ ಪರಿಣಾಮ ಕಾಂಗ್ರೆಸ್ ಗೆಲ್ಲುವಂತಾಗಿದೆ. https://ainlivenews.com/congress-president-has-called-an-important-meeting-on-december-6/ ರಾಜಸ್ಥಾನದಲ್ಲಿ ಕಾಂಗ್ರೆಸ್ ದುರಾಡಳಿತ ಬಗ್ಗೆ ಜನರಿಗೆ ತಿಳಿಸಿದ್ದೆವು. ಬಿಜೆಪಿಯ ಹಿರಿಯ ನಾಯಕರು ಒಟ್ಟಾಗಿ ಕೆಲಸ ಮಾಡಿದ್ದೆವು. ರಾಜಸ್ಥಾನದಲ್ಲಿ 124ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ತೇವೆ. ಮಧ್ಯಪ್ರದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಕೆಲಸ ಮಾಡಿದೆ ಎಂದರು.

Read More

ನವದೆಹಲಿ: ತೆಲಂಗಾಣದಲ್ಲಿ ಬಿಆರ್​ಎಸ್​​ನಿಂದ ಆಪರೇಷನ್​ ಭೀತಿ ಹಿನ್ನೆಲೆ ಕರ್ನಾಟಕದಲ್ಲಿ ಕಾಂಗ್ರೆಸ್​ನಿಂದ 17 ಜನರನ್ನು ಯಾರು ಕಳಿಸಿದರು? ಎಂದು ದೆಹಲಿಯಲ್ಲಿ ಕಾಂಗ್ರೆಸ್​ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಕಿಡಿಕಾರಿದ್ದಾರೆ. ಸಿದ್ದರಾಮಯ್ಯಗೆ ಕುಮಾರಸ್ವಾಮಿ ಕುಟುಂಬ ಕಂಡರೆ ದ್ವೇಷ ಇದೆ. https://ainlivenews.com/congress-president-has-called-an-important-meeting-on-december-6/ ಈ ಹಿಂದೆ ಕಾಂಗ್ರೆಸ್​ನವರೇ ಶಾಸಕರನ್ನು ಕಳುಹಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ನಿಂದ ಜ್ಯೋತಿರಾದಿತ್ಯ ಏಕೆ ಬಂದರು. ಕಾಂಗ್ರೆಸ್​ನಲ್ಲೇ ಆಂತರಿಕ ಸಮಸ್ಯೆ ಇದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ 6 ತಿಂಗಳಲ್ಲೇ ಜಗಳವಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಕಿಡಿಕಾರಿದರು.

Read More

ಬೆಂಗಳೂರು: ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಈ ಹಿಂದೆ ರಾಜಸ್ಥಾನದಲ್ಲಿ ಕಾಂಗ್ರೆಸ್​ ಪಕ್ಷ ಅಧಿಕಾರದಲ್ಲಿತ್ತು. ಈಗ ರಾಜಸ್ಥಾನದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. https://ainlivenews.com/congress-president-has-called-an-important-meeting-on-december-6/ ಛತ್ತೀಸ್​ಗಢ ರಾಜ್ಯದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಈ ಫಲಿತಾಂಶ ಕಾಂಗ್ರೆಸ್​ ಧೂಳೀಪಟ ಮಾಡುವುದಕ್ಕೆ ನಾಂದಿ ಹಾಡುತ್ತೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಹೇಳಿದರು.

Read More