ನವದೆಹಲಿ: ದೇಶದಲ್ಲಿ ಬಿಜೆಪಿಯ ಪರ ವಾತಾವರಣ ಇದೆ ಎಂದು ದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಬೇಕೆಂದು ಜನ ಬಯಸಿದ್ದಾರೆ. ಸುನಾಮಿ ರೀತಿ ಭಾರತೀಯ ಜನತಾ ಪಾರ್ಟಿಯ ಅಲೆ ಎದ್ದಿದೆ. ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಬಹುಮತ ಪಡೆಯುತ್ತೆ. https://ainlivenews.com/israeli-prime-minister-orders-to-find-and-kill-hamas-leaders/ ದೇಶದ ಜನರು ದೇಶದ ರಕ್ಷಣೆಯ ಗ್ಯಾರಂಟಿ ಬಯಸುತ್ತಿದ್ದಾರೆ. ಅಧಿಕಾರವನ್ನು ಕಬಳಿಸುವ ಗ್ಯಾರಂಟಿಯನ್ನು ಜನರು ಬಯಸುತ್ತಿಲ್ಲ. ಗ್ಯಾರಂಟಿ ಆಮಿಷವೊಡ್ಡಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.ಇದರಿಂದ ರಾಜ್ಯದ ಜನರು ಪಶ್ಚಾತ್ತಾಪಪಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದರು.
Author: AIN Author
ಶಿವಮೊಗ್ಗ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲವಿನತ್ತ ಸಾಗಿರುವುದಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಜನತೆ ಮತ್ತೆ ಪ್ರದಾನಿಯಾಗಬೇಕು ಎಂದು ಬಯಸಿದ್ದು, ಮೂರು ರಾಜ್ಯಗಳಲ್ಲಿ ಗೆಲುವಿನ ಗಿಫ್ಟ್ ನೀಡಿದ್ದಾರೆ. ಇದು ದೇಶದ ಎಲ್ಲಾ ಕಾರ್ಯಕರ್ತರಿಗೆ ಸಂತಸ ತಂದಿದೆ. ಇಂತಹ ಸಂತಸ ಪದೇ ಪದೇ ಬರಲಿ ಮಧ್ಯ ಪ್ರದೇಶ ರಾಜಸ್ಥಾನ ಗೆಲ್ಲುತ್ತೇವೆ ಎಂಬ ವಿಶ್ವಾಸ ವಿತ್ತು. ಆದರೆ ಛತ್ತಿಸ್ ಘಡ ಗೆಲ್ಲುತ್ತೇವೆ ಎಂಬ ನಂಬಿಕೆ ಇರಲಿಲ್ಲ. ಕಾಂಗ್ರೇಸ್ ನವರು ಐದು ರಾಜ್ಯಗಳಲ್ಲಿ ಗೆಲ್ಲುತ್ತೇವೆ ಎಂದು ಹೇಳಿದ್ದರು. https://ainlivenews.com/israeli-prime-minister-orders-to-find-and-kill-hamas-leaders/ ಕೇವಲ ಒಂಜು ರಾಜ್ಯದಲ್ಲಿ ಅವರು ಗೆದ್ದಿದ್ದಾರೆ. ತೆಲಂಗಾಣದಲ್ಲಿ ಮುಖ್ಯಮಂತ್ರಿಗಳ ಮೇಲೆ ಜನರಿಗಿದ್ದ ಬೇಸರ, ಗ್ಯಾರಂಟಿ ಯೋಜನೆಯಿಂದ ರಾಜ್ಯದ ಜನತದೆಗೆ ಹೇಗೆ ಮೋಸ ಮಾಡಿದರೋ..ಹಾಗೆಯೇ ಮುಸ್ಲಿಂ ಮತಗಳನ್ನು ಕ್ರೂಡಿಕರಿಸಿ ಗೆಲುವು ಸಾಧಿಸಿದ್ದಾರೆ. ಗ್ಯಾರಂಟಿಗಳ ಮೂಲಕ ತೆಲಂಗಾಣ ಬಡವರಿಗೆ ಕಾಂಗ್ರೇಸ್ ಮೋಸ ಮಾಡಿದೆ. ಮುಂದಿನ ಚುನಾವಣೆಯಲ್ಲಿ ಅವರು ತೆಲಂಗಾಣವನ್ನು ಕೂಡ ಗೆಲ್ಲಲು ಸಾಧ್ಯವಿಲ್ಲ. ಇಂದಿನ ಫಲಿತಾಂಶ ಮುಂದಿನ…
ನವದೆಹಲಿ: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಈ ನಡುವೆ ಡಿಸೆಂಬರ್ 6 ರಂದು INDIA ಮೈತ್ರಿಕೂಟದ ನಾಯಕರ ಸಭೆ ಕರೆಯಲಾಗಿದೆ. ಡಿಸೆಂಬರ್ 6 ರಂದು ಮುಂದಿನ ಭಾರತ ಮೈತ್ರಿ ಸಭೆಗೆ ಕಾಂಗ್ರೆಸ್ ಪಕ್ಷ ಕರೆ ನೀಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಸಭೆ ನಡೆಸಲಾಗುವುದು ಎಂದು ಮೈತ್ರಿ ಸದಸ್ಯರಿಗೆ ತಿಳಿಸಿದ್ದಾರೆ. https://ainlivenews.com/israeli-prime-minister-orders-to-find-and-kill-hamas-leaders/ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ತೆಲಂಗಾಣ ಈ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ಈಗಾಗಲೇ ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಇನ್ನು ಮಿಜೋರಾಂ ರಾಜ್ಯದ ಚುನಾವಣಾ ಫಲಿತಾಂಶವು ಸೋಮವಾರ ಪ್ರಕಟವಾಗಲಿದೆ.
ನವದೆಹಲಿ: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢದಲ್ಲಿ ಬಿಜೆಪಿ ಜಯ ಸಾಧಿಸಿದೆ. ಉತ್ತರ ಭಾರತದ ಜನತೆ ನರೇಂದ್ರ ಮೋದಿ ಕೈಬಲಪಡಿಸಿದ್ದಾರೆ ಎಂದು ನವದೆಹಲಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದರು. ನರೇಂದ್ರ ಮೋದಿಯನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ. https://ainlivenews.com/nia-raid-accused-making-fake-notes-arrested/ 2024ರಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗ್ತಾರೆ. ನರೇಂದ್ರ ಮೋದಿಯವರ ನಾಯಕತ್ವಕ್ಕೆ ಜನಬೆಂಬಲ ಸಿಗುತ್ತಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಬಿಜೆಪಿಯನ್ನು ಬಲಪಡಿಸಬೇಕಿದೆ ಎಂದರು. ಛತ್ತೀಸ್ಗಢ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 48 ಕ್ಷೇತ್ರಗಳಲ್ಲಿ ಬಿಜೆಪಿ, 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುಂದಿದೆ.
ಭೋಪಾಲ್: ಬಿಜೆಪಿ ಮತ್ತೆ ಅಧಿಕಾರಕ್ಕೆ ಏರಿದೆ. ಹೌದು. ಮಧ್ಯಪ್ರದೇಶದಲ್ಲಿ ಮಹಿಳೆಯರು ಕೈ ಹಿಡಿದ ಪರಿಣಾಮ ಮತ್ತೆ ಅಧಿಕಾರಕ್ಕೆ ಏರಿದೆ. ಕರ್ನಾಟಕದಲ್ಲಿ ಮಹಿಳೆಯರಿಗೆ ಗೃಹಲಕ್ಷ್ಮಿ ಆರಂಭಿಸಿದ ಬೆನ್ನಲ್ಲೇ ಸಿಎಂ ಶಿವರಾಜ್ ಸಿಂಹ್ ಚೌಹಾಣ್ ಲಾಡ್ಲಿ ಬೆಹನಾ ಹೆಸರಿನ ಯೋಜನೆ ಆರಂಭಿಸಿತ್ತು. ಕಾಂಗ್ರೆಸ್ ಇದು ಚುನಾವಣೆ ಗಿಮಿಕ್ ಎಂದು ಬಣ್ಣಿಸಿದರೆ ಮಧ್ಯಪ್ರದೇಶ ಸರ್ಕಾರ ಘೋಷಣೆ ಮಾತ್ರ ಮಾಡದೇ ಚಾಲನೆ ನೀಡಿತ್ತು. ಬಡ ಮಹಿಳೆಯರಿಗೆ ಪ್ರತಿ ತಿಂಗಳು 1,250 ರೂ. ನೀಡಿದ್ದರೆ ಪಿಎಂ ಉಜ್ವಲಾ ಯೋಜನೆ ಅಡಿ ಸಿಲಿಂಡರ್ಗೆ 450 ರೂ. ನೀಡುವುದಾಗಿ ಭರವಸೆ ನೀಡಿತ್ತು. https://ainlivenews.com/nia-raid-accused-making-fake-notes-arrested/ ಕರ್ನಾಟಕ ಚುನಾವಣೆಯಲ್ಲೂ ಮಹಿಳೆಯರು ಪ್ರಧಾನ ಪಾತ್ರ ವಹಿಸಿದ್ದರು. ಇದನ್ನು ಮೊದಲೇ ಗಮನಿಸಿದ್ದ ಮಧ್ಯಪ್ರದೇಶ ಸರ್ಕಾರ ಮಹಿಳಾ ಪರವಾದ ಯೋಜನೆಗಳು ಪ್ರಕಟಿಸಿದ ಪರಿಣಾಮ ಈ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಮಧ್ಯಾಹ್ನ 12 ಗಂಟೆಯ ಟ್ರೆಂಡ್ ಪ್ರಕಾರ ಮಧ್ಯಪ್ರದೇಶದಲ್ಲಿ ಬಿಜೆಪಿ 157, ಕಾಂಗ್ರೆಸ್ 70, ಇತರರು 6 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಬೆಂಗಳೂರು: 4 ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಠುಸ್ ಪಟಾಕಿ ಆಗಿದೆ, ಯಾವುದೇ ಪರಿಣಾಮ ಬೀರಿಲ್ಲ. ಅಲ್ಲಿ ಮೋದಿ ಅವರ ಪ್ರಭಾವ ಎದ್ದು ಕಾಣುತ್ತಿದೆ ಎಂದು ವಿರೋಧ ಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿರುವ ಅಶೋಕ್, ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಬಿಜೆಪಿ ಸ್ವೀಪ್ ಆಗಲಿದೆ. https://ainlivenews.com/nia-raid-accused-making-fake-notes-arrested/ ತೆಲಂಗಾಣದಲ್ಲೂ ಬಿಜೆಪಿಗೆ 11 ಸ್ಥಾನ ಈಗ ಬಂದಿದೆ. ಎಲ್ಲ ಕಡೆ ಬಿಜೆಪಿ ತನ್ನ ಸ್ಥಾನ ಹೆಚ್ಚಿಸಿಕೊಳ್ಳುತ್ತಿದೆ. ಮೋದಿಯವರ ಪ್ರಭಾವ ಎಲ್ಲ ಕಡೆ ಕಾಣ್ತಿದೆ. ಛತ್ತಿಸ್ಗಢದಲ್ಲೂ ಬಿಜೆಪಿ ಗೆಲ್ಲುವ ಪ್ರಯತ್ನ ಮುಂದುವರಿದಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ನವರು ರೆಸಾರ್ಟ್ ರಾಜಕಾರಣ ಮಾಡಲು ಹೊರಟಿದೆ. ದೊಡ್ಡ ಶೋ ಕೊಡಲು ಡಿಕೆಶಿ ತೆಲಂಗಾಣಕ್ಕೆ ಹೋಗಿದ್ದಾರೆ. ಜನರ ಕಷ್ಟ ಮರೆತು ತೆಲಂಗಾಣ ಶಾಸಕರಿಗಾಗಿ ಡಿಕೆಶಿ ಹೋಗಿದ್ದಾರೆ, ಇದು ನಾಚಿಕೆಗೇಡಿನ ಸಂಗತಿ ಎಂದು ಕಿಡಿ ಕಾರಿದ್ದಾರೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕರಿಂದ ರಾಜ್ಯಪಾಲರನ್ನೂ ಭೇಟಿ ಮಾಡಿದರು. ರಾಜಭವನದಲ್ಲಿ ರಾಜ್ಯಪಾಲರನ್ನ ಭೇಟಿಯಾಗಿ ಪಕ್ಷದ ವತಿಯಿಂದ ರಾದ್ಯಾಧ್ಯಂತ ಕೈಗೊಳ್ಳಲಾಗಿದ್ದ ಬರ ಅಧ್ಯಾಯನ ವರದಿ ಹಾಗೂ ಬರ ಪರಿಹಾರ ಕುರಿತಂತೆ ಜೆಡಿಎಸ್ ನಿಯೋಗ ಮನವಿ ಪತ್ರ ಸಲ್ಲಿಸಿದರು. https://ainlivenews.com/nia-raid-accused-making-fake-notes-arrested/ ಕುಮಾರಸ್ವಾಮಿಗೆ ಶಾಸಕರಾದ ಜಿ.ಟಿ.ದೇವೇಗೌಡ,ಹನೂರ್ ಮಂಜುನಾಥ್, ಶರವಣ ಸೇರಿದಂತೆ ಇತರ ಶಾಸಕರು ಸಾಥ್ ನೀಡಿದರು. ಜೆಡಿಎಸ್ ಪಕ್ಷ ಕೈಗೊಂಡಿದ್ದ ಬರ ಅಧ್ಯಯನ ವರದಿಯನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಕುಮಾರಸ್ವಾಮಿ ಅವರು ಇಂದು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹಲೊತ್ ಅವರಿಗೆ ಸಲ್ಲಿಸಿದರು.ಪಕ್ಷದ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು ಜಿಲ್ಲಾಧ್ಯಕ್ಷರು ಉಪಸ್ಥಿತರಿದ್ದರು.
“ಡೆಡ್ಲಿ ಸೋಮ” ಖ್ಯಾತಿಯ ಆದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ “ಕಾಂಗರೂ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯ ಮಾತಿನ ಜೋಡಣೆ(ಡಬ್ಬಿಂಗ್) ನಡೆಯುತ್ತಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಆದಿತ್ಯ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ರಂಜನಿ ರಾಘವನ್ ಅಭಿನಯಿಸಿದ್ದು, ಸೈಕಿಯಾಟ್ರಿಸ್ಟ್ ಡಾಕ್ಟರ್ ಪಾತ್ರ ನಿರ್ವಹಿಸಿದ್ದಾರೆ. ಶಿವಮಣಿ, ಕರಿಸುಬ್ಬು, ನಾಗೇಂದ್ರ ಅರಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳು ಸಾಕಷ್ಟು ಬಂದಿದೆ. ಆದರೆ ನಮ್ಮ ಚಿತ್ರ ಸ್ವಲ್ಪ ವಿಭಿನ್ನ. ವಿಶೇಷವಾಗಿ ಫ್ಯಾಮಿಲಿ ಆಡಿಯನ್ಸ್ ಗಾಗಿ ಮಾಡಿರುವ ಕಥೆವಿದು. ಇನ್ನು “ಕಾಂಗರೂ” ಶೀರ್ಷಿಕೆ ಕುರಿತು ಹೇಳುವುದಾದರೆ, “ಕಾಂಗರೂ” ಒಂದು ಮುಗ್ಧ ಪ್ರಾಣಿ. ಅದು ಯಾರಿಗೂ ಏನು ಮಾಡುವುದಿಲ್ಲ. ಮತ್ತು ಈ ಕಾಂಗರೂ ತನ್ನ ಮರಿಗೆ ಜನ್ಮ ನೀಡಿದ ನಂತರ ಅದರ ಹೊಟ್ಟೆಯ ಮೇಲ್ಬಾಗದಲ್ಲಿ ಇರುವ ಚೀಲದಲ್ಲಿ ಆ ಮರಿಯನ್ನು ಇಟ್ಟು ಕಾಪಾಡುತ್ತದೆ, ಅಂತ ಸಮಯದಲ್ಲಿ ತನ್ನ ಮರಿಯ ತಂಟೆಗೆ…
ಹೈದರಾಬಾದ್: ಗ್ಯಾರಂಟಿಗಳು ನಮ್ಮ ಕೈ ಹಿಡಿಯುತ್ತವೆ ಎಂದು ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಹೇಳಿದ್ದಾರೆ. ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರ ಬೀಳಲಿದ್ದು, ಈ ಹಿನ್ನೆಲೆಯಲ್ಲಿ ಶಾಸಕರು ಮಾತನಾಡಿದರು. ನಮ್ಮ ಕರ್ನಾಟಕದ ಗ್ಯಾರಂಟಿ ಸಕ್ಸಸ್ ಆಗಿದೆ ಇಲ್ಲಿ ಇನ್ಸ್ ಪೇರಷನ್ ಆಗಿ ತಗೊಂಡಿದ್ದಾರೆ. ಗ್ಯಾರಂಟಿಗಳು ನಮ್ಮ ಕೈ ಹಿಡಿಯುತ್ತವೆ. ಗ್ಯಾರಂಟಿಗಳನ್ನ ಟೀಕೆ ಮಾಡ್ತಾ ಇರೋದು ಕೆಸಿಆರ್ ಮತ್ತೆ ಅವರ ಬಂಧು, https://ainlivenews.com/nia-raid-accused-making-fake-notes-arrested/ ಪ್ರಭಾಕರ್ ರೆಡ್ಡಿ (Prabhakar Reddy) ಅಷ್ಟೇ ಬೇರೆ ಯಾರು ಮಾಡ್ತಿಲ್ಲ ಎಂದು ಶಾಸಕರು ವಾಗ್ದಾಳಿ ನಡೆಸಿದರು. 10 ವರ್ಷದಲ್ಲಿ ಬಿಆರ್ಎಸ್ ಪಕ್ಷದ ದುರಾಡಳಿತವನ್ನ ಜನ ನೋಡಿದ್ದಾರೆ. 70ಕ್ಕೂ ಹೆಚ್ಚು ಕಾಂಗ್ರೆಸ್ (Congress) ಸೀಟ್ ತೆಲಂಗಾಣದಲ್ಲಿ ಗೆಲ್ಲುತ್ತವೆ. ಈ ಹಿಂದೆ ವೈಎಸ್ ರಾಜ್ ಶೇಖರ್ ರೆಡ್ಡಿ ಅವರು ಒಳ್ಳೆ ಕೆಲಸ ಮಾಡಿದ್ದಾರೆ. ಅದು ನಮ್ಮ ಕೈ ಹಿಡಿಯುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರಿನ ಕೆಆರ್ ಪುರ ಸಮೀಪದ ಚಿಕ್ಕಬಸವನಪುರದಲ್ಲಿ 5 ಎಕರೆ ಸರ್ಕಾರಿ ಭೂಮಿಯನ್ನು ಖಾಸಗೀ ವ್ಯಕ್ತಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಪೂರ್ವ ತಾಲ್ಲೂಕು ವಿಶೇಷ ತಹಶೀಲ್ದಾರ್ ಎಸ್ , ಆರ್ ಮಹೇಶ್ ಅವರಿಗೆ ದೂರು ನೀಡಿ ಒತ್ತುವರಿ ಜಾಗವನ್ನ ತೆರವುಗೊಳ್ಳಿಸುವಂತೆ ಗ್ರಾಮಸ್ಥರು ಮನವಿ ಪತ್ರಸಲ್ಲಿಸಿದ್ದಾರೆ . ಈ ವೇಳೆ ಮಾಧ್ಯಮಗಳ ಜೊತೆ ದೂರುದಾರ ಪ್ರತಾಪ್ ಕುಮಾರ್ ಮಾತನಾಡಿ ಚಿಕ್ಕಬಸವನಪುರದ ಸರ್ವೆ ನಂ. 1. ರಲ್ಲಿ 16 ಎಕರೆ, 18 ಗುಂಟೆ ಸರ್ಕಾರಿ ಜಮೀನಿದ್ದು, ಇದರ ಪೈಕಿ 4 ಎಕರೆ 28 ಗುಂಟೆ ಖರಾಬು ಜಾಗವಾಗಿದ್ದು, ಉಳಿದ 8 ಎಕರೆ 10 ಗುಂಟೆ ಜಾಗದಲ್ಲಿ 3 ಎಕರೆ 10 ಗುಂಟೆ ಭೂಮಿ ಡಿ ರಾಮಯ್ಯರೆಡ್ಡಿ ಎಂಬುವವರಿಗೆ ಮಂಜೂರಾಗಿದೆ . ಉಳಿದ 5 ಎಕರೆ ಸರ್ಕಾರಿ ಭೂಮಿ ಕಬಳಿಸಲು ಅವರ ಅಣ್ಣತಮ್ಮದಿರು ಸರ್ಕಾರಿ ಜಾಗ ನಮ್ಮ ಸ್ವತ್ತು ಎಂದು ನ್ಯಾಯಲಯದ ಮೊರೆ ಹೋಗಿದ್ದು , ನ್ಯಾಯಲಯ ಇದು ಸರ್ಕಾರಿ ಭೂಮಿ…