ಹುಬ್ಬಳ್ಳಿ: ಶಿಕ್ಷಣ ಇಲಾಖೆಯಲ್ಲಿ ನಿವೃತ್ತ ಪಿಂಚಿಣಿಗೆ ಸಂಬಂಧಿಸಿ ಲಂಚ ಪಡೆಯುವ ವೇಳೆ ಬಲೆಗೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಲೋಕಾಯುಕ್ತ ಬಲಿಗೆ ಬಿದ್ದ ಘಟನೆ ಶನಿವಾರ ನಡೆದಿದೆ. ಕುಂದಗೋಳ ತಾಲೂಕಿನ ಕ್ಷೇತ್ರ ಶಿಕ್ಷಣ ಅಧಿಕಾರ ಆಗಿರುವ ವಿದ್ಯಾ ಕುಂದರಗಿ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದು, 8 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ನಿವೃತ್ತ ಶಿಕ್ಷಕರ ಪಿಂಚಿಣಿ, ಗಳಿಕೆಯ ರಜೆ ನಗದೀಕರಣ, ಗ್ರೂಪ್ ಇನ್ಶೂರೆನ್ಸ್ ಇತ್ಯರ್ಥಕ್ಕೆ 10 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು. ಮೊದ ಮೊದಲು ಹಣ ಕೊಡಲು ನಿರಾಕರಿಸಿದ್ದ ನಿವೃತ್ತ ಶಿ್ಕ್ಷಕ ಇದರಿಂದಾಗಿ ಕಡತಕ್ಕೆ ಸಹಿ ಮಾಡದೆ ಸತಾಯಿಸಿದ್ದ ಆರೋಪ ಮಾಡಲಾಗಿದೆ. ಕೊನೆಗೆ ಲೋಕಾಯುಕ್ತ ಮೊರೆ ಹೋಗಿದ್ದ ನಿವೃತ್ತ ಶಿಕ್ಷಕ 8 ಸಾವಿರ ರೂಪಾಯಿ ಲಂಚ ಪಡೆಯುವಾಗ ದಾಳಿ ಮಾಡಲಾಗಿದೆ . ಲೋಕಾಯುಕ್ತ ಎಸ್.ಪಿ ಸತೀಶ್ ಚಿಟಗುಪ್ಪಿ ಮಾರ್ಗದರ್ಶನದಲ್ಲಿ ದಾಳಿ, ಡಿವೈಎಸ್ಪಿ ಶಂಕರ ರಾಗಿ, ಪಿಐ ಬಸವರಾಜ ರಿಂದ ದಾಳಿ,…
Author: AIN Author
ಚಿಕ್ಕಬಳ್ಳಾಪುರ:- ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದು ಮಾಜಿ ಸಚಿವ ಸುಧಾಕರ್ ಭವಿಷ್ಯ ನುಡಿದಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಮತದಾನದ ದಿನ ಸಂಗ್ರಹಿಸಿದ ಸಮೀಕ್ಷೆಗಳು ಯಾವ ರಾಜ್ಯದಲ್ಲಿ ಯಾರಿಗೆ ಎಷ್ಟು ಸ್ಥಾನಗಳು ಬರುತ್ತೆ ಅಂತ ಹೇಳಿವೆ. ಆದರೆ ಕೆಲವು ರಾಜ್ಯಗಳಲ್ಲಿ ಸಮೀಕ್ಷೆಗೆ ತದ್ವಿರುದ್ದವಾಗಿ ಫಲಿತಾಂಶ ಹೊರಬೀಳಲಿದೆ ಎಂದರು. ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದರು. ಆದರೆ ಅಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆಯುತ್ತದೆ. ಅಲ್ಲಿ ಸಮ್ಮಿಶ್ರ ಸರ್ಕಾರ ಬರಬಹುದು. ಮಧ್ಯಪ್ರದೇಶದಲ್ಲಂತೂ ಬಿಜೆಪಿ ಗೆಲುವು ಖಚಿತ ಹಾಗೆ ಹಿಮಾಚಲ ಪ್ರದೇಶ, ಚತ್ತೀಸ್ಘಡ, ರಾಜಾಸ್ಥಾನಗಳಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಗೆದ್ದು ಪ್ರಾಬಲ್ಯ ಮೆರೆಯಲಿದೆ ಎಂದು ಹೇಳಿದ್ದಾರೆ.
ಬಿಗ್ ಬಾಸ್ ಎಲಿಮಿನೇಶನ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬಿಸಿಬಿಸಿ ಚರ್ಚೆ ಆಗುತ್ತಿದ್ದು, ಯಾರಾಗಬಹುದು ಔಟ್ ಎಂಬೆಲ್ಲಾ ಚರ್ಚೆ ಒಂದೆಡೆ ಜೋರಾಗಿಯೇ ಇದೆ. ಈ ವೀಕೆಂಡ್ ಎಲಿಮಿನೇಶನ್ ಯಾರಿರಬಹುದು ಎಂಬ ಚರ್ಚೆ ಸೋಷಿಯಲ್ ಮೀಡಿಯಾಗಳಲ್ಲಿ ಜೋರಾಗಿ ನಡೆಯುತ್ತಿದೆ. ಹಲವರು ಸ್ನೇಹಿತ್ ಹೆಸರು ಹೇಳಿದರೆ ಕೆಲವರು ಸಿರಿ ಹೆಸರು ಹೇಳುತ್ತಿದ್ದಾರೆ. ನಮ್ರತಾ, ತನಿಷಾ ಹೆಸರುಗಳು ಕೂಡ ಕೇಳಿ ಬರುತ್ತಿದೆ. ಆದರೆ ನಿಜವಾಗಿ ಯಾರು ಎಂಬುದನ್ನು ಊಹಿಸಲು ಅಸಾಧ್ಯ. ಕಾರಣ, ನಾಳೆ ಎಲಿಮಿನೇಶನ್ ಇರಲಿದೆ, ಅದನ್ನು ಸಹಜವಾಗಿಯೇ ಸೀಕ್ರೆಟ್ ಆಗಿಯೇ ಇಟ್ಟಿರುತ್ತಾರೆ. ಬಿಗ್ ಬಾಸ್ ಮನೆಯಲ್ಲಿ ಸಹಜವಾಗಿಯೇ ಖುಷಿ, ಮನಸ್ತಾಪ, ಹೋರಾಟ, ಹಾರಾಟ ಎಲ್ಲವೂ ನಡೆಯುತ್ತಿವೆ. ಎಲ್ಲರೂ ಬಂದಿರುವುದು ಗೆಲ್ಲಲಿಕ್ಕಾಗಿ, ಅದೇ ಮಂತ್ರವನ್ನು ಬಿಗ್ ಬಾಸ್ ಮನೆಯಲ್ಲಿ ಎಲ್ಲ ಸ್ಪರ್ಧಿಗಳೂ ಜಪಿಸುತ್ತಾರೆ. ಆದರೆ ಟಾಸ್ಕ್, ಟೀಮ್ ಅಂತ ಬಂದಾಗ ಇರುವವರಲ್ಲೇ ಗ್ರೂಫ್ ಸೃಷ್ಟಿಯಾಗುತ್ತದೆ. ಬಿಗ್ ಬಾಸ್ ಸೀಸನ್ ಶುರುವಾದ ಹೊಸತರಲ್ಲಿ ವಿನಯ್ ಟೀಮ್ ಮತ್ತು ಕಾರ್ತಿಕ್ ಟೀಮ್ ಎಂದು ಎರಡು ಟೀಮ್ ಸೃಷ್ಟಿಯಾಗಿತ್ತು. ಆದರೆ, ಬರುಬರುತ್ತಾ…
ಬೆಂಗಳೂರು:- ರಾಜ್ಯಶಿಕ್ಷಣ ನೀತಿ ನಮ್ಮ ಆದ್ಯತೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯಕ್ಕೆ ಪ್ರತ್ಯೇಕವಾದ ಶಿಕ್ಷಣ ನೀತಿ ರೂಪಿಸುವುದಾಗಿ ಪ್ರಣಾಳಿಕೆಯಲ್ಲಿ ಬರೆದು ಜನರಿಗೆ ಭರವಸೆ ನೀಡಿ ಮತ ಹಾಕಿಸಿಕೊಂಡು ಅಧಿಕಾರದಲ್ಲಿದ್ದೇವೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಬಿಜೆಪಿಯವರು ಹೇಳಿದ್ದಾರೆ ಎಂಬ ಕಾರಣಕ್ಕೆ ಬದಲಾವಣೆ ಮಾಡಲಾಗುವುದಿಲ್ಲ ಎಂದರು. ರಾಜ್ಯ ಶಿಕ್ಷಣ ನೀತಿಯ ಬಗ್ಗೆ ಬಿಜೆಪಿಯವರು ವಿಧಾನಮಂಡಲದಲ್ಲಿ ಪ್ರಸ್ತಾಪ ಮಾಡುವುದಾದರೆ ಅದನ್ನು ಸ್ವಾಗತಿಸುತ್ತೇವೆ. ನಾವು ಚುನಾವಣೆಯ ಸಂದರ್ಭದಲ್ಲಿ ಸ್ಪಷ್ಟ ಭರವಸೆಯನ್ನು ನೀಡಿದ್ದೇವೆ. ಜನ ಅದಕ್ಕಾಗಿಯೇ ನಮಗೆ ಮತ ಹಾಕಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಭರವಸೆಗಳನ್ನು ಈಡೇರಿಸುವುದು ನಮ್ಮ ಕರ್ತವ್ಯ ಎಂದು ಪುನರುಚ್ಚರಿಸಿದರು. ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಭವಿಷ್ಯದ ಪ್ರಜೆಗಳನ್ನು ರೂಪಿಸುವಲ್ಲಿ ಉತ್ತಮವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅದರ ಬೆನ್ನಲ್ಲೇ ಬಿಜೆಪಿ ಎನ್ಇಪಿ ಜಾರಿಯನ್ನು ರಾಜ್ಯದಲ್ಲಿ ಮುಂದುವರೆಸಬೇಕು ಎಂದು ಪಟ್ಟು ಹಿಡಿದಿದೆ. ಇದಕ್ಕೆ ತಿರುಗೇಟು ನೀಡಿದ ಮಧುಬಂಗಾರಪ್ಪ, ಭರವಸೆಗಳನ್ನು ಈಡೇರಿಸದೇ ಇದ್ದರೆ ರಾಜ್ಯದ ಜನರಿಗೆ ಅನ್ಯಾಯ ಮಾಡಿದಂತಾಗುತ್ತದೆ. ಪಂಚಖಾತ್ರಿಗಳ ರೀತಿಯಲ್ಲೇ…
ಬೆಂಗಳೂರು:- ಯಾವ ಕಾರಣಕ್ಕೂ ಮುಖ್ಯಮಂತ್ರಿ ಕುರ್ಚಿ ಖಾಲಿಯಾಗುವುದೇ ಇಲ್ಲ ಎಂದು ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು ಇರಬಹುದು. ಅದನ್ನ ತಪ್ಪು ಎಂದು ಹೇಳುವುದಿಲ್ಲ. ಆದರೆ, ಮುಖ್ಯಮಂತ್ರಿ ಕುರ್ಚಿಯೇ ಖಾಲಿ ಇಲ್ಲವಲ್ಲ. ಯಾವ ಕಾರಣಕ್ಕೂ ಮುಖ್ಯಮಂತ್ರಿ ಖುರ್ಚಿ ಖಾಲಿಯಾಗುವುದೇ ಇಲ್ಲ ಎಂದರು. ಈಗ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ. ಹೀಗಿರುವಾಗ ಯಾಕೆ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆ ಉದ್ಭವಾಗುತ್ತದೆ’ ಎಂದರು. ‘ಸಿದ್ದರಾಮಯ್ಯಗೆ ಮೊದಲಿದ್ದ ಸ್ವಾತಂತ್ರ್ಯ ಈಗ ಇದ್ದಂತಿಲ್ಲ, 2013 ಸುವರ್ಣಯುಗವಾಗಿತ್ತು ಎಂಬ ಮಾಜಿ ಸಚಿವ ಆಂಜನೇಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ಅವರಿಗೆ ಯಾಕೆ ಸ್ವಾತಂತ್ರ್ಯ ಇಲ್ಲ. ಅವರು ಯಾವಾಗಲೂ ಸ್ವಾತಂತ್ರ್ಯ ಇರುವ ವ್ಯಕ್ತಿ. ಅವರು ಎಂದೂ ಸ್ವಾತಂತ್ರ್ಯ ಕಳೆದುಕೊಂಡು ಆಡಳಿತ ನಡೆಸುವುದಿಲ್ಲ. ಅವರ ಕೈ ಕಟ್ಟಿ ಹಾಕಿದಿದ್ದರೆ, ಸಹಿ ಯಾಕೆ ಹಾಕುತ್ತಾರೆ’ ಎಂದು ಪ್ರಶ್ನಿಸಿದರು. ಕಾಂಗ್ರೆಸ್ನ ಎಲ್ಲಾ ಅವಧಿಯೂ ಸುವರ್ಣಯುಗವೇ. ಬಡವರು, ದೀನ ದಲಿತರು, ಜನಸಾಮಾನ್ಯರಿಗೆ ಸುವರ್ಣಯುಗವೇ. ಅದರಲ್ಲೂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಹೆಚ್ಚೆಚ್ಚು ಒಳ್ಳೆಯ…
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಆನೆಗುಂದಿ ಗ್ರಾಮದ ಜಮೀನೊಂದರಲ್ಲಿ ಅರಿಶಿಣ ಬೆಳೆಯ ಮಧ್ಯೆ ಬೆಳೆಯಲಾಗಿದ್ದ ಗಾಂಜಾ ಗಿಡಗಳನ್ನು ಹನೂರು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹನೂರು ತಾಲೂಕಿನ ಆನೆಗುಂದಿ ಗ್ರಾಮದ ಎಸ್ ಬಾಲು (65) ಹಾಗೂ ಇವರ ಮಗ ಮಹಾಲಿಂಗ (35) ರನ್ನು ಪೊಲೀಸರು ಬಂಧಿಸಿದ್ದಾರೆ. ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಆನೆಗುಂದಿ ಗ್ರಾಮದ ಜಮೀನೊಂದರಲ್ಲಿ ಅಕ್ರಮ ಗಾಂಜಾ ಗಿಡಗಳನ್ನು ಬೆಳೆದಿದ್ದರು. ಇದರ ಖಚಿತ ಮಾಹಿತಿ ಮೇರೆಗೆ ಹನೂರು ಪೊಲೀಸರು ದಾಳಿ ನಡೆಸಿ ಅರಿಶಿಣ ಬೆಳೆಯ ಮಧ್ಯೆ ಬೆಳೆಯಲಾಗಿದ್ದ ಸುಮಾರು 2 ಲಕ್ಷ ಮೌಲ್ಯದ 95 ಗಾಂಜಾ (34 ಕೆಜಿ) ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳಾದ ಬಾಲು ಹಾಗೂ ಮಹಾಲಿಂಗರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ದಾವಣಗೆರೆ: ಬಿಜೆಪಿ ಬಿಟ್ಟು ಶಾಸಕರು, ಮಾಜಿ ಶಾಸಕರು, ಮುಖಂಡರು ಯಾರೂ ಕಾಂಗ್ರೆಸ್ ಗೆ ಹೋಗುವುದಿಲ್ಲ. ಬಿ. ವೈ. ವಿಜಯೇಂದ್ರ ಯಡಿಯೂರಪ್ಪ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಎಲ್ಲವೂ ಸರಿ ಹೋಗುತ್ತಿದೆ. ಅಸಮಾಧಾನಿತರ ಜೊತೆ ವಿಜಯೇಂದ್ರ ಅವರು ಮಾತುಕತೆ ನಡೆಸಿದ್ದು, ಹಾಗಾಗಿ, ಯಾರೂ ಹೋಗುವುದಿಲ್ಲ ಎಂದು ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು. ದಾವಣಗೆರೆಯಲ್ಲಿ ನಡೆದ ಪತ್ರಿಕಾಗೋಷ್ಛಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಕಾಂಗ್ರೆಸ್ ಗೆ ವಲಸೆ ಹೋಗುತ್ತಾರೆ ಎಂಬ ವದಂತಿ ಹಬ್ಬಿತ್ತು. ಆದ್ರೆ, ಈಗ ಎಲ್ಲವೂ ಶಮನವಾಗಿಲ್ಲ. ನನಗೂ ಪಕ್ಷದ ಕೆಲ ವಿಚಾರಗಳಿಗೆ ಸಂಬಂಧಿಸಿದಂತೆ ಅಸಮಾಧಾನ ಇತ್ತು. ಹಾಗೆಂದ ಮಾತ್ರಕ್ಕೆ ಬಿಜೆಪಿ ಬಿಡ್ತೀನಿ ಎನ್ನುವುದು ಸರಿಯಲ್ಲ. ನಾನು ಸಹ ಎಲ್ಲಿಯೂ ಕಾಂಗ್ರೆಸ್ ಗೆ ಹೋಗುತ್ತೀನಿ ಎಂದು ಹೇಳಿಲ್ಲ. ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪರ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಎದುರಿಸಬೇಕು ಹಾಗೂ ಬಿ. ವೈ. ವಿಜಯೇಂದ್ರ ರಾಜ್ಯ ಘಟಕದ ಅಧ್ಯಕ್ಷರಾಗಬೇಕು ಎಂಬ ಅಪೇಕ್ಷೆ ಇತ್ತು. ಅದು ಈಡೇರಿದೆ.…
ರಾಯಚೂರು,ಡಿ.2-ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿಚ್ಚಳ ಬಹುಮತ ಸಿಗಲಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು.ಅವರಿಂದು ಸುದ್ದಿಗಾರರೊಂದಿಗೆ ಮಾತನಾಡಿ ತೆಲಂಗಾಣದಲ್ಲಿ ಮ್ಯಾಜಿಕ್ ನಂಬರ್ ತಲುಪುತ್ತೇವೆ ಯಾವುದೆ ಆಪರೇಶನ್ ಅಥವಾ ಕುದುರೆ ವ್ಯಾಪಾರ ನಡೆಯುವುದಿಲ್ಲವೆಂದ ಅವರು ಬಿಆರ್ ಎಸ್ ಪಕ್ಷ ನೆಲಕ್ಕಚ್ಚಲಿದೆ ಎಂದರು. ಬಿಜೆಪಿಯವರು ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದಿದ್ದರು ಆದರೆ ಈಗ ಬಿಜೆಪಿ ಮುಕ್ತ ದಕ್ಷಿಣ ಭಾರತ ಆಗಲಿದೆ ನಾವು ಆ ರೀತಿ ಹೇಳುವುದಿಲ್ಲ ಕಾಂಗ್ರೆಸ್ ಪಕ್ಷ ಪ್ರಜಾ ಪ್ರಭುತ್ವದಲ್ಲಿ ವಿಶ್ವಾಸವಿಟ್ಟಿದೆ ವಿರೋಧ ಪಕ್ಷಗಳು ಇರಬೇಕು ಎನ್ನುತ್ತೇವೆ ದಮನಕಾರಿ ರಾಜಕಾರಣದಲ್ಲಿ ವಿಶ್ವಾಸವಿರಿಸಿಲ್ಲವೆಂದರು. ಪಂಚ ರಾಜ್ಯಗಳ ಚುನಾವಣೆಯಲ್ಲಿ ರಾಜಸ್ಥಾನ, ಛತ್ತೀಸಗಡ ಮತ್ತಿತರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರ ಬೆಂಬಲ ವ್ಯಕ್ತವಾಗುತ್ತಿದೆ ಎಂದರು. ಬೆಂಗಳೂರಿನಲ್ಲಿ ಶಾಲೆಗಳಲ್ಲಿ ಹುಸಿ ಬಾಂಬ್ ಕರೆ ಬಗ್ಗೆ ಗೃಹ ಇಲಾಖೆ ತನಿಖೆ ನಡೆಸಲಿದೆ ಯಾವುದೇ ವೈಫಲ್ಯ ಸರ್ಕಾರದಿಂದ ನಡೆದಿಲ್ಲವೆಂದು ಹೇಳಿದರು.
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿರುವ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಪಿಜಿ ಪಾಳ್ಯ ವನ್ಯಜೀವಿ ವಲಯದಲ್ಲಿ ಇಂದಿನಿಂದ ಸಫಾರಿ ಶುರುವಾಗಿದ್ದು ಸ್ಥಳೀಯ ಶಾಸಕ ಎಂ.ಆರ್. ಮಂಜುನಾಥ್ ರಿಂದ ಚಾಲನೆ ದೊರಕಿತು. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗ ವ್ಯಾಪ್ತಿಯ ಪಿಜಿ ಪಾಳ್ಯ ವನ್ಯಜೀವಿ ವಲಯದ ಸಫಾರಿಗೆ ಲೊಕ್ಕನಹಳ್ಳಿ ಬಳಿ ಇಂದು ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಶಾಸಕರು ಮಲೆ ಮಹದೇಶ್ವರ ವನ್ಯಜೀವಿ ವಿಭಾಗ ವ್ಯಾಪ್ತಿಯ ಪಿಜಿ ಪಾಳ್ಯ ವನ್ಯಜೀವಿ ವಲಯದಲ್ಲಿ ಸಫಾರಿ ಆರಂಭವಾಗಿರುವುದರಿಂದ ಪ್ರವಾಸೋದ್ಯಮ ಅಭಿವೃದ್ದಿಗೆ ಹೆಚ್ಚಿನ ಅವಕಾಶವಾಗಲಿದೆ. ಕೊಳ್ಳೇಗಾಲ ಪಟ್ಟಣದಿಂದ ಸಫಾರಿ ಪ್ರದೇಶಕ್ಕೆ 24 ಕಿ.ಮೀ ದೂರವಿದೆ. ಮೈಸೂರಿನಿಂದ ಪಿಜಿ ಪಾಳ್ಯಕ್ಕೆ 90 ಕಿ.ಮೀ ಅಂತರ ವಿರುವುದರಿಂದ ಪ್ರವಾಸಿಗರು ಸಫಾರಿಗೆ ಬರಲು ಅನುಕೂಲವಾಗಲಿದೆ ಎಂದರು. ಹನೂರು ಭಾಗದಲ್ಲಿ ಗುಂಡಾಲ್ ಜಲಾಶಯ, ಇನ್ನಿತರ ಪ್ರವಾಸಿ ತಾಣಗಳನ್ನು ಪ್ರವಾಸಿಗರು ವೀಕ್ಷಿಸಬಹುದಾಗಿದೆ. ಈ ಭಾಗದ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವುದರಿಂದ ಸ್ಥಳೀಯರಿಗೆ…
ಹುಬ್ಬಳ್ಳಿ: ಬೆಂಗಳೂರಿನಲ್ಲಿ ಶಾಲೆಗಳಿಗೆ ಬಾಂಬ್ ಸುದ್ದಿ ಹುಸಿ ಎಂಬುದು ಸ್ಪಷ್ಟವಾಗಿದೆ. ಬಾಂಬ್ ಸ್ಫೋಟವೇನು ಆಗಿಲ್ಲ. ಇಂತಹ ಕರೆಗಳು ಬರುತ್ತವೆ. ಬಾಂಬ್ ಕರೆ ಹುಸಿ ಎಂದ ಬಳಿಕವೂ ಆ ವಿಷಯವನ್ನೇ ಹಿಡಿದು ಜಗ್ಗಾಡುವುದು ಯಾಕೆ ಎಂದು ಸಚಿವ ಸತೀಶ ಜಾರಕಿಹೊಳಿ ಪ್ರಶ್ನಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏನು ಆಗಿಲ್ಲ ಅಂತಾ ನಿನ್ನೆಯೇ ಸ್ಪಷ್ಟವಾಗಿದೆ. ಅದ್ಯಾವುದೋ ಒಂದು ವಿಷಯಕ್ಕೆ ನಾವು ಇಷ್ಟೆಲ್ಲಾ ಸಮಯ ವ್ಯರ್ಥ ಮಾಡಿದರೆ ಹೇಗೆ? ಅದಕ್ಕೆ ಸರ್ಕಾರ, ಪೊಲೀಸ್ ಇಲಾಖೆ ಇದೆ. ಅದನ್ನು ತನಿಖೆ ಮಾಡಿಯೇ ಮಾಡುತ್ತಾರೆ. ಬೇರೆ ಸಮಸ್ಯೆಗಳು ಸಾಕಷ್ಟಿವೆ. ಇಂತಹ ವಿಷಯಗಳ ಬಗ್ಗೆ ಅನಗತ್ಯ ಭೀತಿ ಹುಟ್ಟಿಸಿದರೆ ಜನ ಗೊಂದಲಕ್ಕೆ ಸಿಲುಕುತ್ತಾರೆ ಎಂದರು. ಲೋಕಸಭಾ ಚುನಾವಣೆ ಸಿದ್ಧತೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈಗಾಗಲೇ ನಮ್ಮ ಪಕ್ಷದಿಂದ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ. ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಕಳುಹಿಸಿದ ನಂತರ ಅದನ್ನು ಹೈಕಮಾಂಡ್ ಅಂತಿಮಗೊಳಿಸುತ್ತದೆ ಎಂದರು. ಬೆಳಗಾವಿಯಲ್ಲಿನ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ, ಬರಗಾಲದ ಚರ್ಚೆ ಆಗುತ್ತದೆ. ಶಾಸಕರು ತಮ್ಮ…