Author: AIN Author

ರಾಯಚೂರು: ನಗರದ ಸುಪರ್ ಮಾರ್ಕೆಟ್ ಬಳಿ ಸ್ವಾಗತ ಕಮಾನು ನಿರ್ಮಾಣ ವಿವಾದ ಬಗ್ಗೆ ಜಿಲ್ಲಾಡಳಿತದಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆ ಯಾವುದೆ ಕಾರಣಕ್ಕೂ ಕೋಮು ಸೌಹಾರ್ದತೆ ಕದಡಲು ಬಿಡುವುದಿಲ್ಲವೆಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು. ಅವರಿಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಸ್ವಾಗತ ಕಮಾನು ನಿರ್ಮಾಣ ಬಗ್ಗೆ ವಿವಾದ ನಡೆದಿದ್ದು ಈ ಬಗ್ಗೆ ಜಿಲ್ಲಾಡಳಿತ ಮತ್ತು ನಗರಸಭೆಯಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆಂದ ಅವರು ಶಾಂತಿ ಸುವ್ಯವಸ್ಥೆ ಹದಗೆಡದಂತೆ ಸರ್ಕಾರ ಎಚ್ಚರಕೆ ವಹಿಸಲಿದ್ದು ಯಾವುದೆ ಅನಾಹುತ ಆಗಲು ಬಿಡುವುದಿಲ್ಲ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದರು.

Read More

ಧಾರವಾಡ: ನಾವು ಕಷ್ಟಪಟ್ಟ ಕಬ್ಬಿನ ಬೆಳೆಯನ್ನು ನಮ್ಮಗೆ ಬೇಕಾದ ಸಕ್ಕರೆ ಕಂಪನಿಗಳಿಗೆ ಮಾರಾಟ ಮಾಡಲು ಅನುಮತಿ ನೀಡಬೇಕು ಎಂದು ಅಗ್ರಹಿಸಿ, ಧಾರವಾಡದಲ್ಲಿ ಅಳ್ಳಾವಾರ ಕಬ್ಬು ಬೆಳೆದ ರೈತರು ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡರು.‌ ಸುಮಾರು ಮೂವತೈದಕ್ಕೂ ಹೆಚ್ಚು ರೈತರು ಜಿಲ್ಲಾಧಿಕಾರಿ ಕಚೇರಿಗೆ ಬಂದು, ತಮ್ಮ ಬೇಡಿಕೆ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಹಸ್ತಾರಿಸಿ ಮನವಿ‌ ಮಾಡಿಕೊಂಡರು. ಈಗಾಗಲೇ ಕಡಿಮೆ ಮಳೆ ಮತ್ತು ನೀರಿನ ಕೊರತೆಯಿಂದಾಗಿ ಕಬ್ಬಿನ ಬೆಳೆಯಲ್ಲಿ ಕುಂಠಿತವಾಗಿದೆವಾಗಿ ನಮ್ಮ ಭಾಗದ ಕಬ್ಬು ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ. ಜೊತೆಗೆ ಅಳ್ಳಾವಾರ ಗ್ರಾಮಗಳಲ್ಲಿನ ಕಬ್ಬಿನ ಬೆಳೆಯನ್ನು ಇಐಡಿ ಪ್ಯಾರಿ ಸಕ್ಕರೆ ಪ್ಯಾಕ್ಟರಿಗೆ ಹಂಚಿಕೆ ಮಾಡಲಾಗಿದೆ. ಪ್ರಸ್ತುತ ಇಐಡಿ ಪ್ಯಾರಿ ಫ್ಯಾಕ್ಟರಿ ರೈತರ ಜೊತೆಗೆ ದ್ವಿಪಕ್ಷೀಯ ಯಾವುದೇ ಒಡಂಬಡಿಕೆ ಮಾಡಿಕೊಂಡಿಲ್ಲ. ಹಾಗಾಗಿ ನಾವೆಲ್ಲರೂ ಕಳೆದ 20 ವರ್ಷಗಳಿಂದ ನಮ್ಮಗೆ ಬೇಕಾದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬನ್ನು ಕಳುಹಿಸುತ್ತಾ ಬಂದಿದ್ದೇವೆ. ಇಐಡಿ ಪ್ಯಾರಿ ಸಕ್ಕರೆ ಫ್ಯಾಕ್ಟರಿಯ ಕೆಲವು ಕ್ರಮಗಳು ರೈತರಿಗೆ ಸರಿ ಹೋಗುತ್ತಿಲ್ಲ. ಈ ಫ್ಯಾಕ್ಟರಿಯಲ್ಲಿ ನಮ್ಮ ಕಬ್ಬಿಗೆ ಬಿಲ್ ಕಡಿಮೆ…

Read More

ಬೆಂಗಳೂರು:– ಕಾಂತರಾಜು ವರದಿ ಸ್ವೀಕರಿಸಲು ಸರ್ಕಾರ ಸಿದ್ಧ ಇದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜು ವರದಿಯನ್ನು ಸರ್ಕಾರ ಸ್ವೀಕಾರ ಮಾಡಲಿದ್ದು, ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವರದಿ ಸ್ವೀಕಾರ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ವರದಿ ಸಲ್ಲಿಕೆಯಾಗಿ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆದು, ಆ ಬಳಿಕ ನಿರ್ಧಾರ ಮಾಡಲಾಗುವುದು. ವರದಿಯಲ್ಲೇನಿದೆ ಎಂದು ಯಾರಿಗೂ ಗೊತ್ತಿಲ್ಲ. ವರದಿ ಬಗ್ಗೆ ಮೊದಲೇ ಕಲ್ಪನೆ ಮಾಡಿಕೊಳ್ಳುವುದು ಬೇಡ ಎಂದರು. https://ainlivenews.com/witchcraft-in-the-prestigious-karnataka-university-professors-chamber/ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿಸಿ ಸಮೀಕ್ಷೆ ಮಾಡಿಸಿರುವ ವರದಿಯನ್ನು ಸ್ವೀಕಾರ ಮಾಡಲ್ಲ ಎನ್ನಲು ಸಾಧ್ಯವೇ?, ಸರ್ಕಾರದಲ್ಲಿ ಸ್ವೀಕಾರ ಮಾಡಲಾಗಿರುವ ಇತರೆ ಹತ್ತಾರು ವರದಿಗಳಿವೆ. ಯಾವುದೇ ವರದಿಯನ್ನು ಸರ್ಕಾರ ಸ್ವೀಕಾರ ಮಾಡಲಿದೆ. ಆ ಬಗ್ಗೆ ಚರ್ಚೆ ನಡೆದು ನಿರ್ಧಾರ ಆಗಲಿದೆ. ವರದಿ ಸ್ವೀಕಾರವಾಗದೆ ಕಾಂತರಾಜು ವರದಿ ಬಗ್ಗೆ ವಿರೋಧ ವ್ಯಕ್ತಪಡಿಸುವುದು ಸೂಕ್ತವಲ್ಲ ಎಂದು ತಿಳಿಸಿದರು.

Read More

ಬೆಂಗಳೂರು:– ಯಾವ ಶಾಲೆಗಳಲ್ಲೂ ಬಾಂಬ್ ಇರಲು ಸಾಧ್ಯವಿಲ್ಲ ನನ್ನ ನಂಬಿಕೆ ಎಂದು ಪರಮೇಶ್ವರ್​ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕೈಜೈಟ್ಸ್ @ ಬೀಬಲ್ ಡಾಟ್ ಕಾಂ ಅನ್ನೋ ಮೇಲ್ ಐಡಿಯಿಂದ ಮೆಸೇಜ್ ಬಂದಿದೆ. ಬೆಂಗಳೂರಿನ ಸುಮಾರು 15 ಶಾಲೆಗಳಿಗೆ ಬಾಂಬ್ ಇಟ್ಟಿದ್ದೀವಿ, ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ ಎಂದು ಮೆಸೇಜ್ ಬಂದಿದೆ.  ಇದನ್ನ ನಾವು ಬಹಳ ಗಂಭೀರವಾಗಿ ಪರಿಶೀಲಿಸುತ್ತಿದ್ದೇವೆ. ಮೇಲ್​ನ ಮೂಲದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ಕಮಿಷನರ್​ಗೆ ಹಾಗೂ ಎಲ್ಲಾ ಅಧಿಕಾರಿಗಳಿಗೆ ಎಲ್ಲಾ ಶಾಲೆಗಳನ್ನ ಪರಿಶೀಲನೆ ಮಾಡುವಂತೆ ತಾಕೀತು ಮಾಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್​ ಹೇಳಿದರು. https://ainlivenews.com/witchcraft-in-the-prestigious-karnataka-university-professors-chamber/ ಯಾವ ಶಾಲೆಗಳಲ್ಲೂ ಬಾಂಬ್ ಇರಲು ಸಾಧ್ಯವಿಲ್ಲವೆಂಬುವುದ ನನ್ನ ನಂಬಿಕೆ. ಯಾವ ಉಗ್ರ ಸಂಘಟನೆ ಮಾಡಿದೆ, ಯಾರು ಇದನ್ನೆಲ್ಲಾ ಮಾಡಿದ್ದಾರೆ ಅನ್ನೋ ಪರಿಶೀಲಿಸುತ್ತಿದ್ದೇವೆ. ಅವರು ಭಾರತದವರೇ ಆಗಿದ್ದರೇ ಅಂತವರಿಗೆ ಏನು ಮಾಡಬೇಕು ಅಂತ ಭಾರತ ಸರ್ಕಾರದ ಜೊತೆ ಮಾತನಾಡುತ್ತೇವೆ. ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯೇ ಕಳುಹಿಸಿದೆ ಅನ್ನೋದನ್ನ ಇನ್ನೂ ಹೇಳಲು ಆಗಲ್ಲ…

Read More

ಬೆಂಗಳೂರು:- ಸಂವಿಧಾನದ ಮೂಲಸ್ಪೂರ್ತಿಗೆ ವಿರುದ್ಧವಾಗದ ಎಲ್ಲ ಅಭಿವ್ಯಕ್ತಿಗಳ ಪರವಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ X ನಲ್ಲಿ ಪೋಸ್ಟ್ ಮಾಡಿರುವ ಅವರು,ರಾಜ್ಯ ಸರ್ಕಾರವು ಸಂವಿಧಾನದ ಮೂಲ ಆಶಯಗಳಡಿ ನಡೆಸುವ ಚಟುವಟಿಕೆಗಳನ್ನು ನಿಲ್ಲಿಸುವ ಅಥವಾ ತಡೆಯುವ ಯಾವುದೇ ಕೆಲಸವನ್ನು ಮಾಡುವುದಿಲ್ಲ. https://ainlivenews.com/witchcraft-in-the-prestigious-karnataka-university-professors-chamber/ ಕಥೆ, ಕಾವ್ಯ, ನಾಟಕ, ಸಂಗೀತ ಮುಂತಾದ ಸೃಜನಶೀಲ ಅಭಿವ್ಯಕ್ತಿಯನ್ನು ಯಾವುದೇ ಕಾರಣಕ್ಕೂ ತಡೆಯುವ ಕೆಲಸವನ್ನು ಮಾಡುವುದಿಲ್ಲ. ನಾವು ಸಂವಿಧಾನದ ಮೂಲಸ್ಪೂರ್ತಿಗೆ ವಿರುದ್ಧವಾಗದಂತೆ ನಡೆಯುವ ಎಲ್ಲ ಅಭಿವ್ಯಕ್ತಿಗಳ ಪರವಾಗಿದ್ದೇವೆ. ಕೆಳಹಂತದ ಪೊಲೀಸ್ ಅಧಿಕಾರಿಗಳ ತಪ್ಪು ತಿಳಿವಳಿಕೆಯ ಕಾರಣಕ್ಕೆ ಒಂದೆರಡು ಅನಾವಶ್ಯಕವಾದ ಗೊಂದಲಗಳು ನಿರ್ಮಾಣವಾಗಿವೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಯಾವುದೇ ಗೊಂದಲಗಳು ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು ಎಂದು ನಾನು ಪೊಲೀಸ್ ಮಹಾನಿರ್ದೇಶಕರಿಗೆ ಸೂಕ್ತ ಸೂಚನೆಗಳನ್ನು ನೀಡಿರುತ್ತೇನೆ” ಎಂದಿದ್ದಾರೆ. “ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸಗಳ ಜೊತೆ ಸರ್ಕಾರವು ಸದಾ ನಿಲ್ಲುತ್ತದೆ ಎಂಬುದನ್ನು ತಿಳಿಯ ಸಬಯಸುತ್ತೇನೆ. ಆದ್ದರಿಂದ ಯಾವುದೇ ರೀತಿಯ ಗೊಂದಲಗಳನ್ನು ಸೃಷ್ಟಿಸಬಾರದು ಎಂದು, ಅಭಿವ್ಯಕ್ತಿ ಸ್ವಾತಂತ್ರ್ಯದ ವಿಚಾರದಲ್ಲಿ ಆತಂಕಿತ…

Read More

ಹಿರಿಯ ನಟಿ ಲೀಲಾವತಿ (Leelavati) ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹಲವು ದಿನಗಳಿಂದ ಅವರಿಗೆ ಕೃತಕ ಉಸಿರಾಟ ನೀಡಲಾಗುತ್ತಿದೆ. ಹಾಗಾಗಿ ಚಿತ್ರೋದ್ಯಮದ ಅನೇಕ ಗಣ್ಯರು ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಮೊನ್ನೆಯಷ್ಟೇ ಶಿವರಾಜ್ ಕುಮಾರ್, ಅರ್ಜುನ್ ಸರ್ಜಾ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಈಗಾಗಲೇ ಮನೆಗೆ ಬಂದು ಆರೋಗ್ಯ ವಿಚಾರಿಸಿದ್ದಾರೆ. ಇದೀಗ ಲಹರಿ ವೇಲು (Lahari Velu) ಕೂಡ ಭೇಟಿ ನೀಡಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದ ಮನೆಗೆ ಆಗಮಿಸಿದ್ದ ಲಹರಿ ವೇಲು, ಲೀಲಾವತಿ ಅವರ ಪುತ್ರ ವಿನೋದ್ ರಾಜ್ (Vinod Raj) ಜೊತೆ ಕೆಲ ಹೊತ್ತು ಮಾತನಾಡಿದ್ದಾರೆ. ತಾಯಿ ಆರೋಗ್ಯದ ಬಗ್ಗೆ ವಿಚಾರಿಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ವೇಲು, ಅವರನ್ನ ನೋಡಿದ್ರೆ ನನ್ನ ತಾಯಿ ನೆನಪಾಗುತ್ತಾರೆ. https://ainlivenews.com/witchcraft-in-the-prestigious-karnataka-university-professors-chamber/ ಅವರು ಎಲ್ಲರಿಗೂ ತಾಯಿ. ಬೇಗ ಗುಣಮುಖರಾಗುತ್ತಾರೆ. ಪ್ರಾಥಮಿಕ ಆರೋಗ್ಯ ಆಸ್ಪತ್ರೆ, ಪಶು ಆಸ್ಪತ್ರೆ ಹೀಗೆ ನಾಡಿಗೆ ಸಾಕಷ್ಟು ನೆರವಾಗಿದ್ದಾರೆ . ತಾಯಿಯ ಸೇವೆ ಅಪಾರವಾದದ್ದು ಎಂದರು. ಲೀಲಾವತಿ ಅವರ ಅನಾರೋಗ್ಯದ…

Read More

ಬೆಂಗಳೂರು:  ಎರಡು ದಿನದ ಹಸುಗೂಸಿಗೆ ದೇಹ ಪೂರ್ತಿ ಜಿರಳೆಗಳು ಕಚ್ಚಿರುವ ಘಟನೆ ನಗರದ ವಾಣಿವಿಲಾಸ ಸರ್ಕಾರಿ ಆಸ್ಪತ್ರೆ ಯಲ್ಲಿ ನಡೆದಿದೆ. ಹೌದು ಬೆಂಗಳೂರಿನ ವಾಣಿವಿಲಾಸ ಸರ್ಕಾರಿ ಆಸ್ಪತ್ರೆ ಯಲ್ಲಿ ಅವ್ಯವಸ್ಥೆ ಎದುರಾಗಿದ್ದು,ಆಸ್ಪತ್ರೆ ವೈದ್ಯರು, ಸಿಬ್ಬಂದಿ ಎಡವಟ್ಟಿನಿಂದ ಜಿರಳೆ ಕಾಟಕ್ಕೆ ಮಕ್ಕಳು, ಆಸ್ಪತ್ರೆಯಲ್ಲಿರುವ ಬಾಣಂತಿಯರು ಪರದಾಡಿದ್ದಾರೆ. 2 ದಿನದ ಹಿಂದೆ ಗಂಡು ಮಗುವಿಗೆ ಆಶಾರಾಣಿ ಜನ್ಮ ನೀಡಿದ್ದರು. ಬಾಣಂತಿ ವಾರ್ಡ್​​ನಲ್ಲಿ ಆಸ್ಪತ್ರೆಯ ಸಿಬ್ಬಂದಿ ಬೆಡ್ ಸ್ವಚ್ಛತೆ ಮಾಡಿಲ್ಲ. ಹೆರಿಗೆ ವಾರ್ಡ್​ನಲ್ಲೂ ಸ್ವಚ್ಛತೆ ಇಲ್ಲದ್ದರಿಂದ ಜಿರಳೆ ಕಾಟ ಹೆಚ್ಚಿದೆ.

Read More

ಬೆಂಗಳೂರು: ಡಿ.ಕೆ ಶಿವಕುಮಾರ್ ಜನರ ಹಿತ ಹಾಗೂ ಕಷ್ಟಗಳನ್ನು ಕಡೆಗಣಿಸಿ ತೆಲಂಗಾಣಕ್ಕೆ ಹೋಗಿದ್ದಾರೆ ಎಂದು ಡಿಕೆಶಿ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಇಲ್ಲಿನ ಜನರ ಕಷ್ಟಗಳ ಬಗ್ಗೆ ಮಾತಾಡುತ್ತಿದ್ದೇವೆ. ಆದರೆ ಡಿ.ಕೆ ಶಿವಕುಮಾರ್ ಜನರ ಹಿತ ಹಾಗೂ ಕಷ್ಟಗಳನ್ನು ಕಡೆಗಣಿಸಿ ತೆಲಂಗಾಣಕ್ಕೆ ಹೋಗಿದ್ದಾರೆ. ತೆಲಂಗಾಣ ಶಾಸಕರಿಗೆ ಯಾವ ಹೋಟೆಲ್‍ನಲ್ಲಿ ಇರಿಸಬೇಕು. https://ainlivenews.com/witchcraft-in-the-prestigious-karnataka-university-professors-chamber/ ಮಟನ್ ಬಿರಿಯಾನಿ ಇಲ್ಲವೇ ಚಿಕನ್ ಬಿರಿಯಾನಿ ಕೊಡಿಸಬೇಕಾ ಅಂತ ವಿಚಾರಿಸಲು ತೆರಳಿದ್ದಾರೆ ಎಂದು ಡಿಕೆಶಿ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಡಿಕೆಶಿಗೆ ತೆಲಂಗಾಣದ ಶಾಸಕರ ಹಿತವೇ ಮುಖ್ಯವಾಗಿದೆ. ಸರ್ಕಾರ ಬಂದಾಗಿಂದ 60 ತಪ್ಪುಗಳಾಗಿವೆ. ಅಧಿಕಾರಕ್ಕೆ ಬಂದ ಕೂಡಲೇ ವರ್ಗಾವಣೆ ಅಂಗಡಿ ತೆರೆದಿದ್ದರು. ಅಲ್ಲದೇ ಐಟಿ ದಾಳಿಯಾಗಿ ಇವರ ಲೂಟಿ ಹಣ ಸಿಕ್ಕಿದೆ. ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ ಹೋರಾಟ ಮಾಡಲಿದೆ. ನಿಲುವಳಿಗಳನ್ನೂ ಒಟ್ಟಾಗಿ ಮಂಡಿಸಿ ಚರ್ಚೆ ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

Read More

ಶೂಟಿಂಗ್ ವೇಳೆ ಭಾರೀ ಅನಾಹುತ (Accident) ಸಂಭವಿಸಿ, ಪೆಟ್ಟು ಮಾಡಿಕೊಂಡಿದ್ದ ನಟ ಮಂಡ್ಯ ರಮೇಶ್ (Mandya Ramesh) ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದುಕೊಂಡು ಇದೀಗ ಮನೆಗೆ ವಾಪಸ್ಸಾಗಿದ್ದಾರೆ. ಸೋಮವಾರ ಈ ಘಟನೆ ನಡೆದಿದ್ದು ಕೈಗೆ, ಹೊಟ್ಟೆಗೆ, ಕಾಲಿಗೆ, ತಲೆಗೆ ಏಟು ಬಿದ್ದಿದೆ. ಕೂಡಲೇ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ (Hospital) ದಾಖಲಿಸಲಾಗಿತ್ತು. ಆಸೆ ಧಾರಾವಾಹಿ ಶೂಟಿಂಗ್ ವೇಳೆ ಅವಘಡ ನಡೆದಿದ್ದು, ಅವರಿಗೆ ತೀವ್ರ ಗಾಯವಾಗಿತ್ತು. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ ಕಾಲು ಜಾರಿ ಬಿದ್ದಿದ್ದರು. ಬಿದ್ದ ರಭಸಕ್ಕೆ ಅವರ ದೇಹದ ನಾನಾ ಭಾಗಗಳಿಗೆ ತೀವ್ರ ತೆರನಾದ ಪೆಟ್ಟಾಗಿತ್ತು. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಆಸೆ ಸೀರಿಯಲ್ ನಲ್ಲಿ ಮಂಡ್ಯ ರಮೇಶ್ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. https://ainlivenews.com/witchcraft-in-the-prestigious-karnataka-university-professors-chamber/ ಈ ಧಾರಾವಾಹಿಯ ದೃಶ್ಯದ ಚಿತ್ರೀಕರಣದಲ್ಲಿ ಇಂಥದ್ದೊಂದು ಅವಘಡ ಸಂಭವಿಸಿದೆ. ನಾಲ್ಕೈದು ಅಡಿಯಿಂದ ಜಲ್ಲಿಕಲ್ಲ ಮೇಲೆ ರಮೇಶ್ ಬಿದ್ದಿದ್ದರು ಎಂದು ಹೇಳಲಾಗುತ್ತಿದೆ. ರಮೇಶ್ ಅರವಿಂದ್ ನಿರ್ಮಾಣದಲ್ಲಿ ಈ ಧಾರಾವಾಹಿ…

Read More

ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ಯುವ ಸಿನಿಮೋತ್ಸಾಹಿಗಳು ವಿಭಿನ್ನ ಬಗೆಯ ಕಥಾಹಂದರದ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ತಯಾರಾಗಿರುವ ಸಿನಿಮಾವೇ ಒನ್ ಅಂಡ್ ಆಫ್. ರಂಗ್ಬಿರಂಗಿ, ಡೆವಿಡ್, ದಿ ವೆಕೆಂಟ್ ಹೌಸ್ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಯುವ ಪ್ರತಿಭೆ ಶ್ರೇಯಸ್ ಚಿಂಗಾ ಒನ್ ಅಂಡ್ ಆಫ್ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ನಿರ್ದೇಶನದ ಜೊತೆಗೆ ನಾಯಕನಾಗಿಯೂ ಶ್ರೇಯಸ್ ಅಭಿನಯಿಸ್ತಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನ ರೇಣುಕಾಂಬ ಸ್ಟುಡಿಯೋಸ್ ನಲ್ಲಿ ಸುಲಕ್ಷ್ಮೀ ಫಿಲಂಸ್ ನಿರ್ಮಾಣ ಸಂಸ್ಥೆ ಲೋಗೋ ಹಾಗೂ ಒನ್ ಅಂಡ್ ಸಿನಿಮಾದ ಫಸ್ಟ್ ಲುಕ್ ಅನಾವರಣ ಮಾಡಲಾಯಿತು. ಈ ವೇಳೆ ಇಡೀ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನಟ ಕಂ ನಿರ್ದೇಶಕ ಶ್ರೇಯಸ್ ಚಿಂಗಾ ಮಾತನಾಡಿ, ಕಂಪ್ಲೀಟ್ ಕಾಮಿಡಿ ಸಿನಿಮಾ. ಇವತ್ತಿನಿಂದ ಶೂಟಿಂಗ್ ಶುರುವಾಗಿದೆ. ಐಟಿ ಕಂಪನಿ ಅಂದ್ಮೇಲೆ ಸಾಕಷ್ಟು ಜನ ಹುಡುಗಿಯರು ಇರುತ್ತಾರೆ. ಮಾನ್ವಿತಾ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಬೆಂಗಳೂರು, ಗೋವಾ ಭಾಗದಲ್ಲಿ ಶೂಟಿಂಗ್…

Read More