ಬೆಂಗಳೂರು: ಮನೆ ಮುಂದೆ ಕಾರು ಪಾರ್ಕಿಂಗ್ ಮಾಡಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ ಅನಾಮಿಕ ವ್ಯಕ್ತಿ ಯುವತಿಗೆ ಕೆಟ್ಟ ಪದಗಳಿಂದ ನಿಂದಿಸಿರುವ ಘಟನೆ ನಿನ್ನೆ ರಾತ್ರಿ ಸಂಜಯ್ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. https://twitter.com/AdappaAdishtya/status/1730209024883425542?t=qx4djeKHIKuoZAbkP9rDcA&s=08 ಯುವತಿಯ ಸ್ನೇಹಿತರು ಸಮಾಧಾನ ಮಾಡುವ ಪ್ರಯತ್ನಪಟ್ಟರೂ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು ಇದರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಯುವತಿ ಸ್ನೇಹಿತನಿಂದ ಎಕ್ಸ್ ನಲ್ಲಿ ಕಮಿಷನರ್ ಗೆ ಟ್ಯಾಗ್ ಮಾಡಿ ಸಂಜಯ್ ನಗರ ಪೊಲೀಸರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪೊಲೀಸರಿಗೆ ವಿಡಿಯೋ ಸಮೇತ ದೂರು ಕೊಟ್ಟರು ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳದ ಬಗ್ಗೆ ಆರೋಪ ಮಾಡಲಾಗಿದೆ.
Author: AIN Author
ಬೆಂಗಳೂರು: ಹೊಸ ರೇಷನ್ ಕಾರ್ಡ್ ಅರ್ಜಿ ಪಡೆಯುವವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಕೊಟ್ಟಿದೆ.ಏನಾಪ್ಪಾ ಅಂದ್ರೆ ಹೊಸ ರೇಷನ್ ಕಾರ್ಡ್ ಅರ್ಜಿಗೆ ಅವಕಾಶ ಕಲ್ಪಿಸಿದ ಆಹಾರ ಇಲಾಖೆ ಡಿಸೆಂಬರ್ 3ರಂದು ಹೊಸ ರೇಶನ್ ಕಾರ್ಡ್ ಅರ್ಜಿಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಹೊಸ ರೇಶನ್ ಕಾರ್ಡ್ ಅರ್ಜಿಗೆ ಕೇವಲ ಒಂದು ದಿನವ ಅವಕಾಶ ಕೊಟ್ಟಿದ್ದು ಡಿಸೆಂಬರ್ 3ರಂದು 11ಗಂಟೆಯಿಂದ ಮಧ್ಯಾಹ್ನ 2ಗಂಟೆಯವರೆಗೆ ಮಾತ್ರ ಅರ್ಜಿಗೆ ಕಾಲಾವಕಾಶ ನೀಡಲಾಗಿದೆ. ಹೆಚ್ಚಿನ ಅರ್ಜಿ ಸಲ್ಲಿಕೆಯಾಗುವ ಹಿನ್ನೆಲೆ ಕಡಿಮೆ ಸಮಯಾವಕಾಶ ಕೊಟ್ಟ ಆಹಾರ ಇಲಾಖೆ ಎಲ್ಲರಿಗೂ ಭಾನುವಾರ ಅರ್ಜಿ ಕೊಡುವ ಹಿನ್ನೆಲೆ ಅಂದೇ ಹೊಸ ರೇಷನ್ ಮಾಡಿಸಲು ಅವಕಾಶ ನೀಡಲಾಗಿದೆ.
ಬಿಗ್ ಬಾಸ್ ಮನೆಯ (Bigg Boss Kannada 10) ಗೇಮ್ ಮಾಸ್ಟರ್ ಡ್ರೋನ್ ಪ್ರತಾಪ್ (Drone Prathap) ಅವರು ತೆಗೆದುಕೊಂಡ ಆ ಒಂದು ನಿರ್ಧಾರದಿಂದ ಎಡವಿದ್ದಾರೆ. ಕಾರ್ತಿಕ್ಗೆ (Karthik Mahesh) ಗುನ್ನ ಕೊಟ್ಟಿದ್ದಕ್ಕೆ ಬಿಗ್ ಬಾಸ್ ಇದೀಗ ಉಲ್ಟಾ ಹೊಡೆದಿದ್ದಾರೆ. ಪ್ರತಾಪ್ ಆಡಿದ ಆಟಕ್ಕೆ ಕರ್ಮ ರಿಟರ್ನ್ಸ್ ಎಂಬಂತೆ ಆಗಿದೆ. ಪ್ರತಿ ವಾರದಂತೆ ಈ ವಾರವೂ ಕೂಡ 2 ತಂಡಗಳಾಗಿ ಬಿಗ್ ಬಾಸ್ ವಿಂಗಡಿಸಿದ್ದರು. ‘ಮಣ್ಣಿನ ಮಕ್ಕಳು’ ತಂಡಕ್ಕೆ ಡ್ರೋನ್ ಕ್ಯಾಪ್ಟನ್ ಆದರೆ ‘ವಿಕ್ರಾಂತ್’ ತಂಡಕ್ಕೆ ಮೈಕಲ್ ಕ್ಯಾಪ್ಟನ್ ಆಗಿದ್ದರು. ಪ್ರತಾಪ್ ಅವರ ತಂಡ ಸೇರಿದ್ದರು ಕಾರ್ತಿಕ್. ಆದರೆ, ದುರ್ಬಲ ಸದಸ್ಯರೊಬ್ಬರನ್ನ ತಂಡದಿಂದ ಹೊರಗೆ ತಳ್ಳಬೇಕಾದ ಪರಿಸ್ಥಿತಿ ಬಂದಾಗ ಕಾರ್ತಿಕ್ ಅವರನ್ನ ಡ್ರೋನ್ ಪ್ರತಾಪ್ ಹೊರಗಿಟ್ಟರು. ಆ ಮೂಲಕ ಕ್ಯಾಪ್ಟೆನ್ಸಿ ಓಟದಿಂದ ಕಾರ್ತಿಕ್ ಹೊರಬಿದ್ದರು ವಾರದ ಎಲ್ಲಾ ಟಾಸ್ಕ್ಗಳಲ್ಲಿ ಡ್ರೋನ್ ಪ್ರತಾಪ್ ನೇತೃತ್ವದ ತಂಡ ಸೋಲು ಅನುಭವಿಸಿದೆ. ಹೀಗಾಗಿ, ಡ್ರೋನ್ ಪ್ರತಾಪ್ ನೇತೃತ್ವದ ಸಂಪೂರ್ಣ ತಂಡ ಕ್ಯಾಪ್ಟೆನ್ಸಿ ರೇಸ್ನಿಂದ ಹೊರಬಿದ್ದಿದೆ. ಮೈಕಲ್…
ಹೈದರಾಬಾದ್: ಉತ್ತರ ಪ್ರದೇಶ (Uttar Pradesh) ಸರ್ಕಾರವು ಹಲಾಲ್ (Halal) ಟ್ಯಾಗ್ ಹೊಂದಿರುವ ಆಹಾರ ಉತ್ಪನ್ನಗಳನ್ನು ನಿಷೇಧಿಸಿದೆ. ಈ ಬೆನ್ನಲ್ಲೇ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರು, ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವ ಯಾವುದೇ ನಿರ್ಧಾರ ಸರ್ಕಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, https://ainlivenews.com/residents-own-property-in-bangalore-heres-the-good-news/ ಹಲಾಲ್ ಉತ್ಪನ್ನಗಳ ಮಾರಾಟ ನಿಷೇಧಿಸುವ ಯಾವುದೇ ನಿರ್ಧಾರವನ್ನು ಸರ್ಕಾರ ತೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಿಆರ್ಎಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಸಂವಿಧಾನವು ಯಾರಿಗೂ ವಿಶೇಷ ಕೊಡುಗೆ ನೀಡಲು ಅವಕಾಶ ನೀಡುವುದಿಲ್ಲ. ಧಾರ್ಮಿಕ ಮೀಸಲಾತಿಯನ್ನು ಕೆಸಿಆರ್ ನೀಡಿದ್ದಾರೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ. ನಾವು ಮತ್ತೆ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಇರುವ 4% ಮೀಸಲಾತಿಯನ್ನೂ ನಿಷೇಧಿಸುತ್ತೇವೆ. ಅದನ್ನು ಪರಿಶಿಷ್ಟ ಜಾತಿ ಮತ್ತು ಇತರ ಹಿಂದುಳಿದ ವರ್ಗದ ಜನರಿಗೆ ನೀಡುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ಏರ್ ಪೋರ್ಟ್’ನಲ್ಲಿ ಏಕಕಾಲದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಿದ ಕೆಂಪೇಗೌಡ ವಿಮಾನ ನಿಲ್ದಾಣದ ಚಾಲಕರುತಾಯಿ ಭುವನೇಶ್ವರಿ ಜೊತೆ ಅಪ್ಪು ಬಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಅನ್ಯ ಭಾಷಗರಿಗೆ ಕನ್ನಡದ ಕಂಪನ್ನ ಪ್ರಸರಿಸಿದ ಕನ್ನಡಾಂಬೆಯ ಚಾಲಕರು ಸಾವಿರರು ಟ್ಯಾಕ್ಸಿಗಳಿಗೆ ಕನ್ನಡದ ಕೆಂಪು ಹಳದಿ ಧ್ವಜ ಅಳವಡಿಕೆ. ಈ ಅದ್ದೂರಿ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ ಭಾಗಿಯಾಗಿದ್ದರು. ಯಾವ ನಟರಿಗೂ ಕಮ್ಮಿ ಇಲ್ಲಾ ನಮ್ಮ ಚಾಲಕರು ವಿಮಿಕ್ರಿ, ಚಲನಚಿತ್ರ ಗೀತೆ, ಜಾನಪದ ಗೀತೆಗಳ, ಜಾನಪದ ಕಲೆಗಳ ಅನಾವರಣ. ಕೆ ಎಸ್ ಟಿ ಡಿ ಸಿ, ಎಸಿ, ಮತ್ತು ನಾನ್ ಎಸಿ ಟ್ಯಾಕ್ಸಿಗಳಿಂದ ವಿಮಾನ ನಿಲ್ದಾಣ ದಲ್ಲಿ ರ್ರ್ಯಾಲಿ ನಡೆಸಿದ್ದು ಹೊರ ದೇಶದ ಜನರ ಗಮನ ಸೆಳೆದ ನೂರಾರು ಟ್ಯಾಕ್ಸಿಗಳು.
ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕ ರಘು ಹಾಸನ್ ಮಾತನಾಡುತ್ತ ಈ ಚಿತ್ರದಲ್ಲಿ ಸಿಂಬನ ಮಗ ನಟಿಸುತ್ತಿದ್ದಾನೆ. ಸಿಂಬು ನಾಲ್ಕು ದಿನವಷ್ಟೇ ಶೂಟಿಂಗ್ ನಲ್ಲಿ ಭಾಗವಹಿಸಿ ನಿಧನ ಹೊಂದಿದ. ಈಗ ಅವನ ಮಗ ಸಿಂಬ ನಟಿಸುತ್ತಿದ್ದಾನೆ. ಗೋವಿಂದೇಗೌಡ ಹಾಗೂ ನಾಯಿಯ ಪಾತ್ರದ ಮೂಲಕ ಸಿನಿಮಾ ಮುಂದುವರೆಯಲಿದೆ. ಮೊದಲಭಾಗ ಮಾಡುವಾಗಲೇ ೨ರ ಕಥೆ ರೆಡಿ ಮಾಡಿಕೊಂಡಿದ್ದೆ. ಸೋಷಿಯಲ್ ಕನ್ ಸರ್ನ್ ಜೊತೆಗೆ ಡಿವೈನ್ ಕಂಟೆಂಟ್ ಕೂಡ ಚಿತ್ರದಲ್ಲಿದೆ. ಈಗಾಗಲೇ ಶಿವಮೊಗ್ಗ, ತೀರ್ಥಹಳ್ಳಿ, ಬಾಳೆಹೊನ್ನೂರು ಸುತ್ತಮುತ್ತ 50 ದಿನಗಳ ಶೂಟಿಂಗ್ ನಡೆಸಲಾಗಿದ್ದು, ಊಟಿ ಭಾಗದ 20 ದಿನದ ಚಿತ್ರೀಕರಣವಷ್ಟೇ ಬಾಕಿಯಿದೆ. ನಾನು ಪಾತ್ರವನ್ನು ಸದ್ಯದಲ್ಲೇ ರಿವೀಲ್ ಮಾಡುತ್ತೇವೆ. ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕ ರಘು ಹಾಸನ್ ಮಾತನಾಡುತ್ತ ಈ ಚಿತ್ರದಲ್ಲಿ ಸಿಂಬನ ಮಗ ನಟಿಸುತ್ತಿದ್ದಾನೆ. ಸಿಂಬು ನಾಲ್ಕು ದಿನವಷ್ಟೇ ಶೂಟಿಂಗ್ ನಲ್ಲಿ ಭಾಗವಹಿಸಿ ನಿಧನ ಹೊಂದಿದ. ಈಗ ಅವನ ಮಗ ಸಿಂಬ ನಟಿಸುತ್ತಿದ್ದಾನೆ. ಗೋವಿಂದೇಗೌಡ ಹಾಗೂ ನಾಯಿಯ ಪಾತ್ರದ ಮೂಲಕ ಸಿನಿಮಾ ಮುಂದುವರೆಯಲಿದೆ. ಮೊದಲಭಾಗ ಮಾಡುವಾಗಲೇ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂ ಬೆಳಗ್ಗೆ ಭಯಾನಕ ಆಕ್ಸಿಡೆಂಟ್ ನಡೆದಿದ್ದು ನಗರದ ಹಗದೂರಿನಲ್ಲಿ ನಡೆದಿದ್ದು ಸಿಸಿಟಿವಿಯಲ್ಲಿ ಡೆಡ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಕಂಟ್ರೋಲ್ ಸಿಗದೆ ಅಡ್ಡಾದಿಡ್ಡಿ ಚಾಲನೆ ಮಾಡಿದ ಚಾಲಕ ರಸ್ತೆ ಬದಿ ನಿಂತಿದ್ದವ್ರಿಗೆ ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ವಾಹನದ ಮುಂಭಾಗ ನಜ್ಜುಗುಜ್ಜಾಗಿದೆ. ಇಂದು ಬೆಳಗ್ಗೆ 7.30 ರ ಸುಮಾರಿಗೆ ನಡೆದಿರೋ ಘಟನೆಯಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಇಬ್ಬರು ವ್ಯಕ್ತಿಗಳು ಪಾರಾಗಿದ್ದಾರೆ. ಈ ವೇಳೆ ಬೈಕ್ ನಲ್ಲಿ ಕುಳಿತಿದ್ದ ಅಪ್ಪಣ್ಣ ಹಾಗೂ ಪೋನ್ ನಲ್ಲಿ ಮಾತಾಡಿಕೊಂಡು ಹೋಗ್ತಿದ್ದ ಶ್ರೀನಿವಾಸ್ ಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಜಂಪ್ ಮಾಡಿ ಬಿದ್ದಿದ್ದ ಅಪ್ಪಣ್ಣಗೆ ತಲೆಗೆ ಗಾಯ ಹಾಗೆ ಶ್ರೀನಿವಾಸ್ ಗೆ ಕಾಲಿಗೆ ಗಂಭೀರ ಗಾಯವಾಗಿದ್ದು, ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಅಪ್ಪಣ್ಣ ಸ್ಥಳೀಯ ವ್ಯಕ್ತಿಯಾಗಿದ್ದು, ಶ್ರೀನಿವಾಸ್ ಖಾಸಗಿ ಕಂಪನಿಯೊಂದ್ರಲ್ಲಿ ಮ್ಯಾನೇಜರ್ ಗಿ ಕೆಲಸ ಮಾಡುತ್ತಿದ್ದರು ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ವಾಹನದ ಮುಂಭಾಗ ನಜ್ಜುಗುಜ್ಜು..…
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಹಳ್ಳಿಯೊಂದರಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಡೆದಿದೆ ಎನ್ನಲಾದ ಅಶ್ಲೀಲ ನೃತ್ಯದ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಮುಖ್ಯವಾಗಿ ಸಭ್ಯ ಕಾರ್ಯಕ್ರಮವಾಗಬೇಕಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಅರೆಬರೆ ಬಟ್ಟೆ ತೊಟ್ಟ ಯುವತಿಯನ್ನು ಕುಣಿಸಿದ್ದು ವಿರೋಧಕ್ಕೆ ಕಾರಣವಾಗಿದೆ. ಇದಕ್ಕಿಂತ ಹೆಚ್ಚಾಗಿ ಒಬ್ಬ ಅಪ್ರಾಪ್ತ ಬಾಲಕನನ್ನ ಬಳಸಿಕೊಂಡು ಅಶ್ಲೀಲ ಭಂಗಿಗಳಲ್ಲಿ ಯುವತಿ ಕುಣಿದಿದ್ದಾಳೆ. ಇದು ಆಕ್ರೋಶಕ್ಕೆ ಗುರಿಯಾಗಿದೆ. ಎರಡುವರ ನಿಮಿಷದ ಮೊಬೈಲ್ ದೃಶ್ಯಾವಳಿಯಲ್ಲಿ ಯುವತಿಯು ಬಾಲಕನನ್ನ ಒಬ್ಬ ಪುರುಷನ ರೀತಿಯಲ್ಲಿ ಬಳಸಿಕೊಂಡು ಆತನ ಜೊತೆಗೆ ಸೆಕ್ಸ್ ಓರಿಯೆಂಟೆಡ್ ಸ್ಟೆಪ್ಗಳನ್ನು ಹಾಕುತ್ತಿದ್ದಾಳೆ. ಇನ್ನೂ ದೃಶ್ಯದ ಹಿಂದೆ ಕಾಣುವ ಬ್ಯಾನರ್ ನಲ್ಲಿ ಶಿವಮೊಗ್ಗ ಜಿಲ್ಲೆ ಎಂದು ಸ್ಪಷ್ಟವಾಗಿ ಬರೆಯಲಾಗಿದೆ. ಭದ್ರಾವತಿ ಮೂಲದ ಆಕ್ರೆಸ್ಟ್ರಾ ಎಂಬ ಬರಹ ಕೂಡ ಕಾಣುತ್ತಿದೆ. https://ainlivenews.com/residents-own-property-in-bangalore-heres-the-good-news/ ಮೂಲಗಳ ಪ್ರಕಾರ, ಕನ್ನಡ ಸಂಘಟನೆಯೊಂದರ ಕಾರ್ಯಕ್ರಮ ಇದಾಗಿತ್ತು ಎನ್ನಲಾಗಿದ್ದು ಸದ್ಯ ವಿಡಿಯೋ ವೈರಲ್ ಆಗುತ್ತಿದ್ದು, ಬಾಲಕನೊಬ್ಬನನ್ನ ಅಸಭ್ಯ ರೀತಿಯಲ್ಲಿ ಕುಣಿಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ…
ಬೆಂಗಳೂರು: ನಗರದ CAR ಮೈದಾನದಲ್ಲಿ ಮಾಸಿಕ ಪೊಲೀಸ್ ಕವಾಯತು ನಡೆದಿದ್ದು ಇದೇ ಮೊದಲ ಬಾರಿಗೆ ಲಾಠಿ ಡ್ರಿಲ್ ಪ್ರಾತ್ಯಕ್ಷಿಕತೆ ನಡೆದಿದೆ. ಬೆಂಗಳೂರು ನಗರ ಪೊಲೀಸರಿಂದ ಲಾಠಿ ಡ್ರಿಲ್ ನಡೆದಿದ್ದು ಸಿವಿಲ್, ಮಹಿಳಾ, CAR, ಟ್ರಾಫಿಕ್, ವಿಭಾಗದ ಸಿಬ್ಬಂದಿಯಿಂದ ಲಾಠಿ ಡ್ರಿಲ್ 330 ಸಿಬ್ಬಂದಿಯಿಂದ ಲಾಠಿ ಡ್ರಿಲ್ ಪ್ರಾತ್ಯಕ್ಷಿಕತೆ ನಡೆದಿದ್ದು ಕವಾಯತು ಕಾರ್ಯಕ್ರಮದಲ್ಲಿ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.
ಬೆಂಗಳೂರು/ ಬೀದರ್ : ನಾಳೆ ಬೀದರ್ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯ ಅಧಿಕಾರಿ ಕೆ.ಚಿರಂಜೀವಿ ಮಾಹಿತಿ ನೀಡಿದ್ದಾರೆ. ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 12.15ಕ್ಕೆ ಬೀದರ್ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ 12.20ಕ್ಕೆ ಬೀದರ್’ನಿಂದ ಹೆಲಿಕ್ಯಾಪ್ಟರ್ ಮೂಲಕ ಭಾಲ್ಕಿಗೆ ತೆರಳುವರು ನಂತರ ಭಾಲ್ಕಿ ಪಟ್ಟಣದ ಬಿಕೆಐಟಿ ಕಾಲೇಜಿನಲ್ಲಿ ನಡೆಯಲಿರುವ ಮಾಜಿ ಸಚಿವ ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಲೋಕನಾಯಕ ಅಭಿನಂದನ ಗ್ರಂಥ ಬಿಡುಗಡೆಗೊಳಿಸುವರು. ಸಂಜೆ 4ಕ್ಕೆ ಭಾಲ್ಕಿಯಿಂದ ಬೀದರ್ಗೆ ಬಂದು, ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ ಪ್ರಯಾಣ ಬೆಳಸಲಿದ್ದಾರೆ.