ಬೆಂಗಳೂರು: ಹಸುಗೂಸುಗಳು ಮಾರಾಟ ಜಾಲದ ಬಂಧನ ಪ್ರಕರಣ ಸಿಸಿಬಿ ಪೊಲೀಸರಿಂದ ಎಂಟು ಆರೋಪಿಗಳ ತೀವ್ರ ವಿಚಾರಣೆ ನಡೆಯುತ್ತಿದ್ದು ಆರೋಪಿಗಳು ಭಯಾನಕ ಸ್ಪೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. ವಿಚಾರಣೆ ವೇಳೆ 6 ವರ್ಷಗಳಲ್ಲಿ 250ಕ್ಕೂ ಹೆಚ್ಚು ಮಕ್ಕಳ ಮಾರಾಟದ ಬಗ್ಗೆ ಬಾಯಿಬಿಟ್ಟಿರೋ ಆರೋಪಿಗಳು ಅದರಲ್ಲಿ ಕರ್ನಾಟಕದಲ್ಲಿ ಕೇವಲ 50-60 ಮಕ್ಕಳನ್ನು ಮಾರಾಟ ಮಾಡಿದ್ದು ಉಳಿದ ಮಕ್ಕಳನ್ನು ತಮಿಳುನಾಡಿನಲ್ಲಿ ಮಾರಾಟ https://ainlivenews.com/feticide-is-not-a-good-development-hd-kumaraswamy/ ಸದ್ಯ ಕರ್ನಾಟಕದಲ್ಲಿ ಮಾರಾಟ ಆಗಿರೋ ಮಕ್ಕಳ ಬಗ್ಗೆ ಮಾಹಿತಿ ಕಲೆಹಾಕ್ತಾ ಇರೋ ಸಿಸಿಬಿ ಹತ್ತು ಮಕ್ಕಳ ಬಗ್ಗೆ ಮಾತ್ರ ಸಿಸಿಬಿಗೆ ಮಾಹಿತಿ ಸಿಕ್ಕಿದ್ದು ಉಳಿದ ಮಕ್ಕಳನ್ನು ಯಾರಿಗೆ ಕೊಟ್ಟಿದ್ದಾರೆ ಅಂತ ತನಿಖೆ ಕರ್ನಾಟಕದ ಗ್ಯಾಂಗ್ ಲೀಡರ್ ಮಹಾಲಕ್ಷ್ಮೀ ಕಥೆಯೇ ಒಂದು ರೀತಿ ರೋಚಕವಾಗಿದ್ದು ಮನೆ ಕೆಲಸ ಮಾಡಿಕೊಂಡಿದ್ದಾಕೆ ಇವತ್ತು ಕೋಟ್ಯಾಧಿಪತಿ ಆಗಿದ್ದೇ ಆಶ್ಚರ್ಯ 2017 ರಿಂದಲೂ ಈ ದಂಧೆಯನ್ನು ಮಾಡ್ತಾ ಇರೋ ಮಹಾಲಕ್ಷ್ಮೀ ಬಾಡಿಗೆ ಮನೆಯಲ್ಲಿ ಇದ್ದಾಕೆ ಇವತ್ತು ಸ್ವಂತ ಮನೆ, ಕಾರು ಜೊತೆಗೆ ಮೈತುಂಬಾ ಚಿನ್ನಾಭರಣ ಮಾಡಿಸಿದ್ದಾಳೆ2015 ರಿಂದ 2017 ರವರೆಗೂ…
Author: AIN Author
ಹಾಸನ: ಮದುವೆಯಾಗಲು ನಿರಾಕರಿಸಿದಳೆಂದು ದುರುಳರು ಶಾಲಾ ಶಿಕ್ಷಕಿಯನ್ನೇ ಅಪಹರಿಸಿರುವ ಘಟನೆ ಹಾಸನ ಜಿಲ್ಲೆಯ ಬಿಟ್ಟಗೌಡನಹಳ್ಳಿಯ ಬಳಿ ಇಂದು ಬೆಳಗ್ಗೆ ನಡೆದಿದೆ. ಅರ್ಪಿತಾ, ಅಪಹರಣಕ್ಕೊಳಗಾದ ಶಿಕ್ಷಕಿ. ಶಿಕ್ಷಕಿ ಕೆಲಸ ಮಾಡುತ್ತಿದ್ದ ಶಾಲೆ ಮುಂಭಾಗ ಅಪಹರಿಸಿರೋ ದುರುಳರು. ಇನ್ನೋವಾ ಕಾರಿನಲ್ಲಿ ಬಂದು ಅಪಹರಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿಕ್ಷಕಿ ಪ್ರತಿರೋಧ ತೋರಿದರೂ ಬಿಡದ ಕಿರಾತಕರು. ಕಳೆದ 15 ದಿನಗಳ ಹಿಂದೆ ಅರ್ಪಿತಾಳ ಮದುವೆ ಮಾಡಿಕೊಳ್ಳುವ ಪ್ರಸ್ತಾಪ ಮಾಡಲು ಮನೆಗೆ ಬಂದಿದ್ದ ರಾಮು ಎಂಬ ವ್ಯಕ್ತಿ ಮತ್ತವನ ಪೋಷಕರು. https://ainlivenews.com/residents-own-property-in-bangalore-heres-the-good-news/ ಇವರು ಅರ್ಪಿತಾ ಸಂಬಂಧಿ ಎಂದು ಹೇಳಲಾಗಿದೆ. ಮದುವೆ ಪ್ರಸ್ತಾಪ ಮಾಡಿದಾಗ, ಅರ್ಪಿತಾ ಹಾಗೂ ಮನೆಯವರು ಒಪ್ಪಿಗೆ ನೀಡಿಲ್ಲ. ಮದುವೆಗೆ ಒಪ್ಪಲಿಲ್ಲವೆಂದು ಅಪಹರಣಕ್ಕೆ ಸಂಚು ರೂಪಿಸಿದ್ದ ಕಿರಾತಕರು. ಇಂದು ಬೆಳಗ್ಗೆ ಎಂದಿನಂತೆ ಶಿಕ್ಷಕಿ ಅರ್ಪಿತಾ ಶಾಲೆಗೆ ಹೊರಟ ಸಂದರ್ಭದಲ್ಲಿ ಇನ್ನೋವಾ ಕಾರಿನಲ್ಲಿ ಬಂದ ದುರುಳರು. ಕಾರಿನಲ್ಲಿ ಅಪಹರಿಸಿದ್ದಾರೆ. ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು: ಪ್ರತಿಷ್ಠಿತ ಬ್ರಾಂಡ್ ಹೆಸರನ್ನ ನಕಲಿಸಿ ಬಟ್ಟೆ ಮಾರುತ್ತಿದ್ದ ಗೋಡೌನ್ ಮೇಲೆ ಬೆಳ್ಳಂ ಬೆಳಗ್ಗೆ ಸಿಸಿಬಿ ದಾಳಿ ನಡೆಸಿದೆ. ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ದಾಳಿ ವೇಳೆ ಬರೋಬ್ಬರಿ1.5ಕೋಟಿ ಮೌಲ್ಯದ ಬಟ್ಟೆಗಳು ಜಪ್ತಿ ಮಾಡಿರುವ ಸಿಸಿಬಿ ಟೀಂ. ಅರ್ಮನಿ, ಬರ್ಬರಿ, ಗ್ಯಾಂಟ್ ಸೇರಿದಂತೆ ಪ್ರತಿಷ್ಠಿತ ಬ್ರಾಂಡ್ ಗಳ ಬಟ್ಟೆ ಎಂದು ಅಕ್ರಮ ಮಾರಾಟ ಮಾಡುತ್ತಿದ್ದ ಟೀಂ ಪಟೆಲ್ ಎಕ್ಸ್ಪೋರ್ಟ್ ಹಾಗೂ ಆರ್ ಬಿ ಫ್ಯಾಷನ್ ಗೋಡೌನ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆ ವೇಳೆ ಬೇರೆ ಬೇರೆ ಕಡೆಯೂ ಇದೇ ರೀತಿ ಫೇಕ್ ಬ್ರಾಂಡ್ ಗೋಡೌನ್ ಹೊಂದಿರೋದು ಬೆಳಕಿಗೆ ಬಂದಿದ್ದು ಎಸ್ ಆರ್ ನಗರ, ಮಾಗಡಿ ರೋಡ್, ಬೇಗೂರು ಸೇರಿದಂತೆಹಲವು ಠಾಣಾ ವ್ಯಾಪ್ತಿಯಲ್ಲಿ ನಕಲಿ ಬ್ರಾಂಡ್ ಬಟ್ಟೆಯ ಗೋಡೌನ್ ಇರೋದು ಬೆಳಕಿಗೆ.. ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿರೋ ಸಿಸಿಬಿ ಟೀಂ
ಬೆಂಗಳೂರು: ಅತ್ಯಾಧುನಿತ ತಂತ್ರ ಹೊಂದಿರೋ ಸುಮಾರು 262 ಹೊಸ ಆ್ಯಂಬುಲೆನ್ಸ್ಗಳು ಇಂದು ಆರೋಗ್ಯ ಇಲಾಖೆಗೆ ಸೇರ್ಪಡೆಯಾಗಲಿವೆ. https://ainlivenews.com/residents-own-property-in-bangalore-heres-the-good-news/ ಆಧುನಿಕ ತಂತ್ರಜ್ಞಾನ ಹೊಂದಿರುವ ಆ್ಯಂಬುಲೆನ್ಸ್ಗಳನ್ನ ಸಿಎಂ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ಜೊತೆಗೆ 120 ಕೋಟಿ ವೆಚ್ಚದ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ. ಆರೋಗ್ಯ ಇಲಾಖೆ ಪಾಳಯ ಸೇರಿರುವ 157 ಬೇಸಿಕ್ ಲೈಫ್ ಸಪೋರ್ಟ್ 108 ಆಂಬ್ಯುಲೆನ್ಸ್ಗಳು. ಹೊಸ 262 ಆ್ಯಂಬುಲೆನ್ಸ್ ಸೇರ್ಪಡೆಯೊಂದಿಗೆ ರಾಜ್ಯದಲ್ಲಿ ಒಟ್ಟು 715 ಆ್ಯಂಬುಲೆನ್ಸ್ಗಳು ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸಲಿವೆ. ಸದ್ಯ ಲೋಕಾರ್ಪಣೆ ಆಗಲು ವಿಧಾನಸೌಧದ ಮುಂಭಾಗದಲ್ಲಿ ಸಜ್ಜಾಗಿ ನಿಂತಿವೆ.
ಧಾರವಾಡ: ಬೆಳಗಾವಿ ಸುವರ್ಣಸೌಧದ ಪಕ್ಕ ಶಾಸಕರ ಭವನ ಕಟ್ಟಿಸುವ ಬದಲಿಗೆ ತಾಜ್ನಂತಹ ಹೋಟೆಲ್ಗೆ ಒಪ್ಪಂದದ ಮೇರೆಗೆ ಅನುಮತಿ ನೀಡಿದರೆ ಸೂಕ್ತವಾಗುತ್ತದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಸುವರ್ಣಸೌಧದ ಪಕ್ಕ 20 ಎಕರೆ ಜಮೀನು ಇದೆ. ಶಾಸಕರ ಭವನವನ್ನು ಅಲ್ಲಿಯೇ ಮಾಡಬೇಕು ಎಂಬ ಚರ್ಚೆ ನಡೆದಿದೆ. ಅಲ್ಲಿ ಶಾಸಕರ ಭವನ ಮಾಡಿದರೆ ಅಧಿವೇಶನ ಸಮಯ ಹೊರುತುಪಡಿಸಿ ಉಳಿದ ಸಮಯದಲ್ಲಿ ಅದು ಖಾಲಿ ಉಳಿಯುತ್ತದೆ. ಅದಕ್ಕಾಗಿ ತಾಜ್ನಂತಹ ದೊಡ್ಡ ಹೋಟೆಲ್ವರನ್ನು ಮಾತನಾಡಿಸಿ ಒಪ್ಪಂದದ ಮೇಲೆ ಅವರಿಗೆ ಕೊಡಬಹುದು. ಶಾಸಕರಿಗಾಗಿ ಅಲ್ಲಿ 10 ರೂಮ್ಗಳನ್ನು ಕಾಯಂ ಆಗಿ ಇಡಬೇಕು. ಉಳಿದ ರೂಮ್ ಅವರು ಉಪಯೋಗಿಸಬಹುದು. https://ainlivenews.com/residents-own-property-in-bangalore-heres-the-good-news/ ಅಧಿವೇಶನದ ವೇಳೆ ಮಾತ್ರ ಎಲ್ಲ ರೂಮ್ಗಳನ್ನು ಶಾಸಕರಿಗೆ ನೀಡುವ ಚರ್ಚೆ ಮಾಡಬೇಕು ಎಂದರು. ಸರ್ಕಾರದ ಮುಂದೆ ಈ ಪ್ರಸ್ತಾವನೆ ಇಟ್ಟಿದ್ದೇವೆ. ಸರ್ಕಾರ ಆ ಬಗ್ಗೆ ಕ್ರಮ ಕೈಗೊಳ್ಳಲಿ. ಅದನ್ನು ಮಾಡಿದರೆ ಒಳ್ಳೆಯದಾಗುತ್ತದೆ. ಅಧಿವೇಶನದ ಸಮಯದಲ್ಲಿ ವಸತಿಗಾಗಿಯೇ 4 ಕೋಟಿ ಖರ್ಚಾಗುತ್ತಿದೆ. ತಾಜ್ ನಂತಹ…
ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಜನತಾ ದರ್ಶನವನ್ನು ಜನಸ್ಪಂದನಾ ಎಂದಿದ್ದಾರೆ. ಸಿಎಂ ಅವರ ಜನ ಸ್ಪಂದನವನ್ನು ಅಭಿನಂದಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ಬರಲು ಹೇಳಿ ನಾಡಿನ ಜನತೆಯ ಸಮಸ್ಯೆ ಆಲಿಸಿದ್ದಾರೆ. ಈಗಲಾದರೂ ಇವರಿಗೆ ರಾಜ್ಯದ ಜನತೆಯ ಗ್ರೌಂಡ್ ರಿಯಾಲಿಟಿ ಅರ್ಥವಾಗಿದೆ ಎಂದುಕೊಂಡಿದ್ದೇನೆ. ವಿವಿಧ ಸಮಸ್ಯೆಗಳು ಜನಸ್ಪಂದನದಲ್ಲಿ ಅರ್ಥವಾಗಿರಬಹುದು. https://ainlivenews.com/residents-own-property-in-bangalore-heres-the-good-news/ ಒಬ್ಬ ಸಿಎಂ ಜನಸ್ಪಂದನೆ ಮಾಡುವುದನ್ನು ನಾನು ಅಭಿನಂದಿಸುತ್ತೇನೆ. ಈ ವಿಷಯದಲ್ಲಿ ನಾನು ಎಲ್ಲವನ್ನು ಟೀಕಿಸುವುದಿಲ್ಲ ಎಂದಿದ್ದಾರೆ. ಮುಂದಿನ 3 ತಿಂಗಳಲ್ಲಿ ಮತ್ತೆ ಜನಸ್ಪಂದನಾ ಮಾಡುತ್ತೇನೆ ಎಂದಿದ್ದಾರೆ. ಅಧಿಕಾರಿಗಳಿಗೆ 3 ತಿಂಗಳ ಗಡುವು ನೀಡಿದ್ದಾರೆ. ಈಗ ಅವರಿಗೆ ಅರ್ಥ ಆಗಿರಬಹುದು. ಅಧಿಕಾರಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು. ನಾನು ಜನತಾ ದರ್ಶನ ಮಾಡಿದಾಗ ಬೆಳಗ್ಗೆ 9 ರಿಂದ ರಾತ್ರಿ 1 ಗಂಟೆವರೆಗೆ ಮಾಡಿದ್ದೆ. ಅಂದು ಇದ್ದ ಸಮಸ್ಯೆಗಳು ಈಗಲೂ ಮುಂದುವರಿದಿವೆ ಎಂದು ತಿಳಿಸಿದರು.
ಬೆಂಗಳೂರು: ಈಗಾಗಲೇ ಮದುವೆ ಸೀಜನ್ಸ್ ಆರಂಭವಾಗಿದ್ದು, ಸಾಕಷ್ಟು ಮದುವೆಗಳು ನಡೆಯುತ್ತಿವೆ. ಆದರೆ ಈ ಸಮಯದಲ್ಲೇ ಜನರಿಗೆ ಗೋಲ್ಡ್ ಶಾಕ್ ಎದುರಾಗಿದೆ. ಅದು ಸಹ ಇತಿಹಾಸದಲ್ಲೇ ಪ್ರಥಮ ಬಾರಿಗೆ ಗರಿಷ್ಠ ಬೆಲೆಗೆ ಚಿನ್ನ (Gold) ಏರಿಕೆಯಾಗಿದೆ. ಚಿನ್ನ ಕಷ್ಟಕಾಲದ ಆಪದ್ಬಾಂಧವ. ಮಹಿಳೆಯರ ಪಾಲಿಗೆ ಫೇವರೆಟ್. ಆದರೆ ಈ ಚಿನ್ನವನ್ನು ಕೊಳ್ಳುವ ಹಾಗಿಲ್ಲ, ಮುಟ್ಟುವ ಹಾಗಿಲ್ಲ ಎನ್ನುವಂತಾಗಿದೆ. ಬಡವರು ಹಾಗೂ ಮಧ್ಯಮ ವರ್ಗದ ಜನರ ಪಾಲಿಕೆ ಗಗನ ಕುಸುಮವಾಗಿದೆ. ಅದರಲ್ಲೂ ಬಂಗಾರ 65,000 ರೂ.ಗಳ ಗಡಿ ದಾಟಿದ್ದು, ಬೆಳ್ಳಿ 78,000 ರೂ. ದಾಟಿದೆ. ಬುಧವಾರದ ಚಿನ್ನ, ಬೆಳ್ಳಿಯ ದರವನ್ನು ನೋಡುವುದಾದರೆ, 10 ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆ 65,000 ರೂ., 10 ಗ್ರಾಂನ 22 ಕ್ಯಾರೆಟ್ ಚಿನ್ನದ ಬೆಲೆ 58,500 ರೂ., ಒಂದು ಕೆಜಿ ಬೆಳ್ಳಿಗೆ 78,500 ಸಾವಿರ ರೂ. ಇತ್ತು. ಗುರುವಾರವೂ ಈ ದರ ಮುಂದುವರಿದಿದೆ. ಈಗ ಮದುವೆ ಸೀಜನ್ ಆಗಿರುವುದರಿಂದ ಚಿನ್ನಕ್ಕೆ ಬೇಡಿಕೆಯಿದೆ. ಮುಂದೆ ಕ್ರಿಸ್ಮಸ್, ಹೊಸ ವರ್ಷ ಪ್ರಾರಂಭವಾಗುವುದರಿಂದ…
ಉಡುಪಿ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರರನ್ನು ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ. https://ainlivenews.com/the-drunk-driver-stopped-the-truck-on-the-railway-tracks-what-happened-next/ ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದನು. ಲಂಚ ನೀಡಲು ಒಪ್ಪದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.
ಸ್ಯಾಂಡಲ್ವುಡ್ ಹಿರಿಯ ನಟ ಮಂಡ್ಯ ರಮೇಶ್ ಅವರನ್ನು ದಿಢೀರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ಮಂಡ್ಯ ರಮೇಶ್ ದಾಖಲಾಗಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ರಾಜರಾಜೇಶ್ವರಿ ನಗರದಲ್ಲಿ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ. ಕಲ್ಲು ಕ್ವಾರಿಯಲ್ಲಿ ಶೂಟಿಂಗ್ ಮಾಡುತ್ತಿದ್ದಾಗ ಮಂಡ್ಯ ರಮೇಶ್ ಕಾಲು ಜಾರಿ ಬಿದ್ದರು. ಹೀಗಾಗಿ. ಕಾಲಿಗೆ ಚಿಕಿತ್ಸೆ ಕೊಡಲಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಮಂಡ್ಯ ರಮೇಶ್ ಪತ್ನಿ ಸರೋಜಾ ಹೆಗಡೆ ಮಾಹಿತಿ ನೀಡಿದ್ದು, ವೈದ್ಯರ ಸಲಹೆ ಮೇರೆಗೆ ನಾಳೆ ಆಸ್ಪತ್ರೆಯಿಂದ ಮಂಡ್ಯ ರಮೇಶ್ ಡಿಸ್ಚಾರ್ಜ್ ಆಗಲಿದ್ದಾರೆ. ಸದ್ಯ ಮಂಡ್ಯ ರಮೇಶ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಗುಣಮುಖದ ಹಂತದಲ್ಲಿದ್ದಾರೆ ಎಂದು ಹೇಳಿದ್ದಾರೆ.
ಹೈದರಾಬಾದ್: ಜಿದ್ದಾಜಿದ್ದಿ ಕಣವಾಗಿರುವ ತೆಲಂಗಾಣ ರಾಜ್ಯದಲ್ಲಿಂದು ಮತದಾನ (Telangana Assembly Election 2023) ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ ವರೆಗೆ ಮತದಾನಕ್ಕೆ ಅವಕಾಶ ಸಿಗಲಿದೆ. 119 ವಿಧಾನಸಭಾ ಕ್ಷೇತ್ರಗಳಲ್ಲಿರುವ 32.6 ದಶಲಕ್ಷ ಮತದಾರರು 2,290 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi), https://ainlivenews.com/the-drunk-driver-stopped-the-truck-on-the-railway-tracks-what-happened-next/ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi), ಭಾರತ ರಾಷ್ಟ್ರ ಸಮಿತಿ ಮುಖ್ಯಸ್ಥ ಕೆ. ಚಂದ್ರಶೇಖರ ರಾವ್ ಸೇರಿ ಹಲವು ಪ್ರಭಾವಿ ನಾಯಕರು ಅಬ್ಬರದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಡ, ಮಿಜೋರಾಂಗಳಲ್ಲಿ ಈಗಾಗಲೇ ನ.7ರಿಂದ ನವೆಂಬರ್ 25ರ ಒಳಗೆ ಮತದಾನ ಮುಕ್ತಾಯವಾಗಿದೆ. ತೆಲಂಗಾಣದಲ್ಲಿಂದು ಮತದಾನ ನಡೆಯಲಿದ್ದು, ಈ ಮೂಲಕ ಪಂಚರಾಜ್ಯ ಚುನಾವಣೆಗೆ (Five State Election) ತೆರೆ ಬೀಳಲಿದೆ. ಡಿಸೆಂಬರ್ 3 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.