ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ಗೆ ಮರಳಿದ್ದರಿಂದ ಬೂಮ್ರಾಗೆ ಬೇಸರವಾಗಿದೆ ಎಂಬ ಮಾತುಗಳು ಕೇಳಿ ಬಂದಿದೆ. ಗುಜರಾತ್ ಟೈಟನ್ಸ್ಗೆ ಎರಡು ವರ್ಷ ಆಡಿದ ನಂತರ ಹಾರ್ದಿಕ್ ಅವರು ಭಾನುವಾರ ಮುಂಬೈ ತಂಡಕ್ಕೆ ವಾಪಸಾಗಿದ್ದಾರೆ. 2015 ರಿಂದ 2022ರವರೆಗೆ ಅವರು ಮುಂಬೈ ತಂಡದಲ್ಲಿದ್ದರು. ಗುಜರಾತ್ಗೆ ದೊಡ್ಡ ಮೊತ್ತ ಪಾವ ತಿಸಿ ಮುಂಬೈ ತಂಡ ಹಾರ್ದಿಕ್ ಅವರನ್ನು ಪಡೆದ ಬಳಿಕ ಬೂಮ್ರಾ ಅವರು ಇನ್ಸ್ಟಾ ಸ್ಟೋರಿಯಲ್ಲಿ ‘ಕೆಲವೊಮ್ಮೆ ಮೌನವೇ ಅತ್ಯುತ್ತಮ ಉತ್ತರವಾಗುತ್ತದೆ’ ಎಂದು ಒಗಟಿನ ರೀತಿ ಸಂದೇಶ ಹಾಕಿದ್ದರು ಎಂದು ಹೇಳಲಾಗಿದೆ.
Author: AIN Author
ಮುಂಬೈ: ಇತ್ತೀಚಿನ ದಿನಗಳಲ್ಲಿ ಗಂಡ-ಹೆಂಡತಿಯ ನಡುವೆ ವೈಮನಸ್ಸು ಉಂಟಾಗುತ್ತಿರುವುದು ಸಹಜವಾಗಿಬಿಟ್ಟಿದೆ. ಸಣ್ಣ ಸಣ್ಣ ಕಾರಣಕ್ಕೆ ಭಿನ್ನಾಭಿಪ್ರಾಯ ಮೂಡುತ್ತಿದ್ದು, ಕೊಲೆಯಲ್ಲಿ ಅಂತ್ಯವಾಗುತ್ತಿದೆ. ಇದಕ್ಕೆ ಪುಣೆಯಲ್ಲಿ ನಡೆದಿರುವ ಘಟನೆ ತಾಜಾ ಉದಾಹರಣೆಯಾಗಿದೆ. ಹೌದು. 36 ವರ್ಷದ ವ್ಯಕ್ತಿಯೊಬ್ಬ ತನ್ನ ಹುಟ್ಟುಹಬ್ಬಕ್ಕೆ ದುಬೈಗೆ (Dubai Trip) ಕರೆದುಕೊಂಡು ಹೋಗಲಿಲ್ಲ ಅಂತಾ, ಹೆಂಡತಿ ತನ್ನ ಗಂಡನನ್ನ ಹೊಡೆದು ಸಾಯಿಸಿದ್ದಾಳೆ. ಗಂಡನ ಮುಖಕ್ಕೆ ಗುದ್ದಿ ಸಾಯಿಸಿದ್ದಾಳೆ. ಪುಣೆಯ ವನವಡಿ ಪ್ರದೇಶದಲ್ಲಿರುವ ಅಪಾರ್ಟ್ಮೆಂಡ್ನಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ನಿಖಿಲ್ ಘನ್ನಾ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಉದ್ಯಮಿಯಾಗಿದ್ದ ಈತ 6 ವರ್ಷಗಳ ಹಿಂದೆ ರೇಣುಕಾ ಎಂಬ ಮಹಿಳೆಯೊಂದಿಗೆ ಪ್ರೇಮ ವಿವಾಹವಾಗಿದ್ದರು. https://ainlivenews.com/do-you-know-which-are-the-most-visited-websites-by-indians/ ಪ್ರಾಥಮಿಕ ತನಿಖೆ ಪ್ರಕಾರ, ಮಧ್ಯಾಹ್ನದ ವೇಳೆಗೆ ಘಟನೆ ನಡೆದಿದೆ. ರೇಣುಕಾ ತನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಲು (Birthday Celebration) ಪತಿ ನಿಖಿಲ್ ದುಬೈಗೆ ಕರೆದುಕೊಂಡು ಹೋಗದ ಕಾರಣ ಇಬ್ಬರ ನಡುವೆ ಜಗಳವಾಗಿತ್ತು. ಅಲ್ಲದೇ ತನ್ನ ಹುಟ್ಟುಹಬ್ಬ ಮತ್ತು ವಾರ್ಷಿಕೋತ್ಸವಕ್ಕೂ ದುಬಾರಿ ಉಡುಗೊರೆ ನೀಡಲಿಲ್ಲ. ತಮ್ಮ ಸಂಬಂಧಿಕರ ಹುಟ್ಟುಹಬ್ಬಕ್ಕೆ ರೇಣುಕಾ…
ನಾವು ತಿನ್ನುವ ಆಹಾರ ರುಚಿಯಾಗಿರಬೇಕು ಎಂದರೆ ಅದರಲ್ಲಿ ಇರಬೇಕಾದ ಎಲ್ಲವೂ ಹೆಚ್ಚು ಕಡಿಮೆ ಆಗದಂತೆ ಸಮತೋಲನ ವಾಗಿರಬೇಕು. ಏಕೆಂದರೆ ಅವುಗಳಲ್ಲಿ ಯಾವುದು ಹೆಚ್ಚಾದರೂ ಅಥವಾ ಕಡಿಮೆಯಾದರೂ ಅಡುಗೆ ಹಾಳಾಗುತ್ತದೆ. ಇಂದು ನಾವು ನಮ್ಮ ಆಹಾರದಲ್ಲಿ ಒಂದು ಮುಖ್ಯ ಉತ್ಪನ್ನವಾಗಿ ಬಳಕೆ ಆಗುವ ಆಹಾರ ಪದಾರ್ಥದ ಬಗ್ಗೆ ಮಾತನಾಡುತ್ತಿದ್ದೇವೆ. ಅದೇ ಉಪ್ಪು. ಆಹಾರದ ರುಚಿಗಾಗಿ ಬಳಸುವ ಉಪ್ಪು ಹೆಚ್ಚಾದರೆ ರುಚಿ ಕೂಡ ಹೆಚ್ಚಾಗುತ್ತದೆ ಎನ್ನುವುದು ಸುಳ್ಳು. ಏಕೆಂದರೆ ನಿಮಗೆ ಅನುಭವವಾಗಿರುವ ಹಾಗೆ ಉಪ್ಪು ಹೆಚ್ಚಾದ ಯಾವುದೇ ಆಹಾರವನ್ನು ಬಾಯಲ್ಲಿ ಕೂಡ ಇಡಲು ಸಾಧ್ಯವಿಲ್ಲ. ಒಂದು ವೇಳೆ ತಿಂದರೂ ಕೂಡ ಅದರಿಂದ ಮುಂದಾಗುವ ಅನಾಹುತಗಳ ಬಗ್ಗೆ ತಿಳಿದುಕೊಳ್ಳುವುದು ಅಗತ್ಯವಾಗಿದೆ. ಕೆಲವರಿಗೆ ತಾತ್ಕಾಲಿಕ ವಾಗಿ ಆರೋಗ್ಯದ ತೊಂದರೆಗಳು ಎದುರಾದರೆ ಇನ್ನು ಕೆಲವರಿಗೆ ದೀರ್ಘಕಾಲದ ಆರೋಗ್ಯದ ಸಮಸ್ಯೆಗಳು ಕಂಡುಬರುತ್ತವೆ. ಊತ: ದೇಹದಲ್ಲಿ ಉಪ್ಪಿನ ಪ್ರಮಾಣ ಹೆಚ್ಚಾದಾಗ ದೇಹದಲ್ಲಿ ನೀರು ವಿಪರೀತವಾಗಿ ಶೇಖರಣೆಯಾಗುತ್ತದೆ.ಇದರಿಂದಾಗಿ . ಕೈ, ಕಾಲು ಮತ್ತು ಕಣಕಾಲುಗಳಲ್ಲಿ ಊತದ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಈ ಸಮಸ್ಯೆ ನಿಮ್ಮನ್ನು…
ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ದ್ರಾವಿಡ್ ಮುಂದುವರಿಯಲಿದ್ದಾರೆ.ದ್ರಾವಿಡ್ ತರಬೇತಿಯ ಭಾರತ ತಂಡ ಇತ್ತೀಚೆಗೆ ಏಕದಿನ ವಿಶ್ವಕಪ್ನಲ್ಲಿ ಅಮೋಘ ಪ್ರದರ್ಶನ ನೀಡಿತ್ತು. ಅಹಮದಾಬಾದಿನಲ್ಲಿ ನ. 19ರಂದು ಫೈನಲ್ನಲ್ಲಿ ಆಸ್ಟ್ರೇಲಿಯಾಕ್ಕೆ ಸೋಲುವ ಮೊದಲು ಸತತವಾಗಿ 10 ಪಂದ್ಯಗಳನ್ನು ಗೆದ್ದು ಅಜೇಯ ಸಾಧನೆ ಪ್ರದರ್ಶಿಸಿತ್ತು. ದ್ರಾವಿಡ್ ಅವರೊಂದಿಗೆ ನೆರವು ಸಿಬ್ಬಂದಿ ಗುತ್ತಿಗೆಯನ್ನೂ ವಿಸ್ತರಿಸಲಾಗಿದೆ. ರವಿ ಶಾಸ್ತ್ರಿ ಅವರ ಉತ್ತರಾಧಿಕಾರಿಯಾಗಿ 2021ರ ನವೆಂಬರ್ನಲ್ಲಿ (ಟಿ20 ವಿಶ್ವಕಪ್ ನಂತರ) ದ್ರಾವಿಡ್ ಎರಡು ವರ್ಷಗಳ ಅವಧಿಗೆ ಕೋಚ್ ಆಗಿ ನೇಮಕಗೊಂಡಿದ್ದರು. ವಿಶ್ವಕಪ್ವರೆಗೆ ಅವರ ಗುತ್ತಿಗೆ ಅವಧಿಯಿತ್ತು. ದ್ರಾವಿಡ್ ಅವಧಿಯಲ್ಲಿ ಭಾರತ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನಲ್ಲೂ ರನ್ನರ್ ಅಪ್ ಆಗಿತ್ತು. ಅಲ್ಲೂ ಆಸ್ಟ್ರೇಲಿಯಾ ಜಯಶಾಲಿಯಾಗಿತ್ತು. ‘ಐಸಿಸಿ ಟ್ರೋಫಿ ಗೆಲ್ಲಿಸಿಕೊಡಬೇಕೆಂಬ ದ್ರಾವಿಡ್ ಬೆನ್ನಿಗೆ ಬಿಸಿಸಿಐ ನಿಲ್ಲಲಿದೆ. ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸ್ಥಿರವಾದ ಪ್ರದರ್ಶನ ನೀಡಲು ಅಗತ್ಯವಿರುವ ಎಲ್ಲಾ ರೀತಿಯ ಬೆಂಬಲವನ್ನು ಅವರಿಗೆ ನೀಡಲಿದೆ’ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಭಾರತ ಸುಮಾರು 12 ವರ್ಷಗಳಿಂದ ಐಸಿಸಿಯ ಯಾವುದೇ…
ವಿಜಯಪುರ:- ರಾಜೀನಾಮೆ ಕುರಿತು ಬಿಆರ್ ಪಾಟೀಲ್ ಪತ್ರ ವಿಚಾರವಾಗಿ ಸಚಿವ ಕೃಷ್ಣ ಬೈರೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಶಾಸಕ ಬಿ.ಆರ್.ಪಾಟೀಲರ ಬಳಿ ದಾಖಲೆಗಳಿದ್ದರೆ ಅವನ್ನು ಮುಖ್ಯಮಂತ್ರಿಗೆ ಕೊಡಲಿ. ಬಿ.ಆರ್.ಪಾಟೀಲ ಅವರ ಬಳಿ ದಾಖಲೆ ಇವೆ ಎನ್ನುತ್ತಾರೆ. ಇದ್ದರೆ ಸಂಬಂಧಿಸಿದವರಿಗೆ ಕೊಡಲಿ. ನನ್ನ ಬಳಿಯೂ ದಾಖಲೆಗಳಿವೆ ಎಂದರು.
ಬೆಂಗಳೂರು:- ಗುತ್ತಿಗೆದಾರರಿಗೆ ಹಣ ನೀಡದ ಸರ್ಕಾರಕ್ಕೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಹೈಕೋರ್ಟ್ ಆದೇಶ ಪಾಲಿಸದ ಬಿಬಿಎಂಪಿ ಮತ್ತು ಸರ್ಕಾರದ ವಿರುದ್ಧ ಮೆಸರ್ಸ್ ನಿಕ್ಷೇಪ ಇನ್ಫ್ರಾ ಪ್ರಾಜೆಕ್ಟ್ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ನ್ಯಾ।ಪಿ.ಬಿ.ವರಾಳೆ ಹಾಗೂ ನ್ಯಾ। ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತು. ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸಲು ವಿಳಂಬ ಮಾಡುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಮತ್ತು ಬೆಂಗಳೂರು ಮಹಾನಗರ ಪಾಲಿಕೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಸರ್ಕಾರ ಹೇಳಿರುವಂತೆ ಈಗಾಗಲೇ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು? ಬಾಕಿ ಹಣ ಬಿಡುಗಡೆ ಮಾಡುವುದರಲ್ಲಿಯೇ ಹಿರಿತನವನ್ನು ಏಕೆ ಅನುಸರಿಸಬೇಕು? ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಲು ಬಿಡಬಾರದು ಎಂದು ಕಟುವಾಗಿ ನುಡಿದಿದೆ. ಕೆಲವು ಕಾಮಗಾರಿಗಳಿಗೆ ಸ್ಥಳೀಯ ಸಂಸ್ಥೆ ಟೆಂಡರ್ ಕರೆದು, ಆ ಕಾಮಗಾರಿಗಳನ್ನು ಪೂರ್ಣಗೊಳಿಸಿದ ಬಳಿಕ ಹಣ ಪಾವತಿಗೆ ಷರತ್ತುಗಳನ್ನು ಒಡ್ಡುವುದು ಹಾಗೂ ಅನಗತ್ಯ ವಿಳಂಬ ಮಾಡುವುದು…
ಇಸ್ಲಾಮಾಬಾದ್: ಸಾಮಾಜಿಕ ಜಾಲತಾಣದಲ್ಲಿ (Social Media) ಯುವತಿಯೊಬ್ಬಳು ಯುವಕರೊಂದಿಗೆ ಕಾಣಿಸಿಕೊಂಡ ಕಾರಣಕ್ಕೆ ಆಕೆಯನ್ನು ಹತ್ಯೆ ಮಾಡಿದ ಘಟನೆ ಪಾಕಿಸ್ತಾನದ (Pakistan) ಕೊಹಿಸ್ತಾನ್ ಎಂಬಲ್ಲಿ ನಡೆದಿದೆ. ಜಿರ್ಗಾ ಎಂದು ಕರೆಯಲ್ಪಡುವ ಹಿರಿಯರ ಮಂಡಳಿಯು ಆಕೆಯನ್ನು ಕೊಲ್ಲಲು ಆದೇಶಿಸಿದ ನಂತರ ಈ ಕೃತ್ಯ ಎಸಗಲಾಗಿದೆ ಎಂದು ವರದಿಯಾಗಿದೆ. ಯುವತಿ ಸ್ಥಳೀಯ ಯುವಕರೊಂದಿಗೆ ನೃತ್ಯ ಮಾಡುತ್ತಿರುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಳು. https://ainlivenews.com/do-you-know-which-are-the-most-visited-websites-by-indians/ ಬಳಿಕ ಆ ವೀಡಿಯೋ ವೈರಲ್ ಆಗಿತ್ತು. ಈ ವಿಚಾರ ಸ್ಥಳೀಯ ಮುಖಂಡರ ಕೋಪಕ್ಕೆ ಕಾರಣವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೊಬ್ಬ ಯುವತಿಗೂ ಜೀವ ಬೆದರಿಕೆ ಹಾಕಲಾಗಿದ್ದು, ಪೊಲೀಸರು ಆಕೆಯನ್ನು ರಕ್ಷಿಸಿದ್ದಾರೆ. ಬಳಿಕ ನ್ಯಾಯಾಲಯ ಆಕೆಯ ಜೀವಕ್ಕೆ ಯಾವುದೇ ಅಪಾಯ ಇಲ್ಲ ಎಂದು ಖಚಿತಪಡಿಸಿಕೊಂಡ ನಂತರ ಆಕೆಯ ತಂದೆಯೊಂದಿಗೆ ಮನೆಗೆ ಕಳುಹಿಸಿಕೊಟ್ಟಿದೆ ಎಂದು ವರದಿಯಾಗಿದೆ.
ಬೆಂಗಳೂರು:- ಲವರ್ ಫೋನ್ ನಲ್ಲಿ ತನ್ನ ವಿಧ ಮಹಿಳೆಯರ 13 ಸಾವಿರ ನಗ್ನ ಫೋಟೋಗಳನ್ನು ಕಂಡ ಯುವತಿಯೊಬ್ಬರು ಪೊಲೀಸ್ ಠಾಣಾ ಮೆಟ್ಟಿಲೇರಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ವೈಟ್ ಫೀಲ್ಡ್ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ. ಯುವತಿಯು ಬೆಳ್ಳಂದೂರಿನಲ್ಲಿರುವ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದು, ಕಳೆದ ನಾಲ್ಕು ತಿಂಗಳುಗಳಿಂದ ಯುವಕನೊಬ್ಬನೊಂದಿಗೆ ಸಂಬಂಧದಲ್ಲಿದ್ದರು. ಆತ ಸಹ ಐದು ತಿಂಗಳುಗಳಿಂದ ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಇಬ್ಬರು ಸಂಬಂಧದಲ್ಲಿದ್ದ ಸಂದರ್ಭದಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ ತಮ್ಮಿಬ್ಬರ ಕೆಲ ಆತ್ಮೀಯ ಕ್ಷಣಗಳ ವಿಡಿಯೋವನ್ನ ಸಂತ್ರಸ್ತೆ ಡಿಲೀಟ್ ಮಾಡಲು ಮುಂದಾಗಿದ್ದರು. ಪ್ರಿಯತಮನ ಫೋನ್ ಅನ್ನು ಆತನಿಗೆ ತಿಳಿಯದೇ ತೆಗೆದುಕೊಂಡು ಫೋಟೋ ಗ್ಯಾಲರಿ ತೆರೆದಿದ್ದರು. ಈ ವೇಳೆ ತನ್ನ, ತನ್ನ ಸಹದ್ಯೋಗಿಯೊಬ್ಬಳು ಸೇರಿದಂತೆ ವಿವಿಧ ಮಹಿಳೆಯರ ಸುಮಾರು 13 ಸಾವಿರ ನಗ್ನ ಫೋಟೋಗಳು ಆತನ ಫೋನ್ನಲ್ಲಿ ಪತ್ತೆಯಾಗಿವೆ. ಈ ಎಲ್ಲ ಫೋಟೋಗಳನ್ನ ನೋಡಿ ವಿಚಲಿತಳಾದ ಆಕೆ ತಕ್ಷಣ ಆತನೊಂದಿಗಿನ ಸಂಬಂಧವನ್ನು ಕಡಿದುಕೊಂಡಿದ್ದಾಳೆ. ಅಲ್ಲದೇ ತಕ್ಷಣವೇ ಕಂಪನಿಯ ಲೀಗಲ್ ಎಕ್ಸಿಕ್ಯುಟಿವ್ಗೆ…
ಗದಗ:- ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗಜೇಂದ್ರಗಡ-ಕುಷ್ಟಗಿ ರಸ್ತೆಯಲ್ಲಿ ಜರುಗಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಲಾಲಬಂಡಿ ನಿವಾಸಿಗಳಾದ ಹಸನ್ಸಾಬ್ (30) ದಾವಲ್ಸಾಬ್(28) ಮೃತ ದುರ್ದೈವಿಗಳು. ಸಿಂಧನೂರನಿಂದ ಗಜೇಂದ್ರಗಡಕ್ಕೆ ಬರುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಸ್ಥಳಕ್ಕೆ ಗಜೇಂದ್ರಗಡ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
2023-24ನೇ ಕೌಶಲ್ಯಾಭಿವೃದ್ಧಿ ಇಲಾಖೆ ವ್ಯಾಪ್ತಿಯ ಸಿಡಾಕ್ ಸಂಸ್ಥೆಯ ಮೂಲಕ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಯುವಜನರಿಗೆ ಉದ್ಯಮಶೀಲತೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಸಮಾಜ ಕಲ್ಯಾಣ ಇಲಾಖೆಯ ಆನ್ ಲೈನ್ ತಂತ್ರಾಂಶದ ಮೂಲಕ ಅರ್ಜಿಗಳನ್ನು 2023 ರ ನವೆಂಬರ್ 30 ರೊಳಗಾಗಿ ಸಲ್ಲಿಸಬಹುದು. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು https://www.scsptsp.karnataka.gov.in/HMS/CDOC/EDPRe gistrationForm.aspread ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರ ವಯೋಮಿತಿ ಕನಿಷ್ಟ 21 ವರ್ಷ, ಗರಿಷ್ಟ 50 ವರ್ಷದೊಳಗಿರಬೇಕು. ಶೈಕ್ಷಣಿಕ ಅರ್ಹತೆಯು ಪಿ.ಯು.ಸಿ ಮತ್ತು ಮೇಲ್ಪಟ್ಟವರಾಗಿರಬೇಕು ತರಬೇತಿಗೆ ಹಾಜರಾಗಲು ಪ್ರತಿ ಅಭ್ಯರ್ಥಿಗೆ ಪ್ರಯಾಣ ಭತ್ಯೆಯಾಗಿ ಹತ್ತು ದಿನಗಳಿಗೆ ರೂ.1000/-ಗಳನ್ನು ನೀಡಲಾಗುವುದು. ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಛೇರಿ. ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ.217. 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ -562110. ದೂರವಾಣಿ ಸಂಖ್ಯೆ-080-29787447, ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ತಾಲ್ಲೂಕು ದೂ.ಸಂ. 080-27681784, ದೊಡ್ಡಬಳ್ಳಾಪುರ ತಾಲ್ಲೂಕು ದೂ.ಸಂ. 080-27623681, ಹೊಸಕೋಟೆ ತಾಲ್ಲೂಕು ದೂ.ಸಂ. 080-27931528, ನೆಲಮಂಗಲ ತಾಲ್ಲೂಕ