ಬೆಂಗಳೂರು: ಮಕ್ಕಳ ಕಳ್ಳಸಾಗಾಣಿಕೆ (Child Trafficking) ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು (CCB Police) ಭರ್ಜರಿ ಕಾರ್ಯಾಚರಣೆ ನಡೆಸಿ ಹಸುಗೂಸು ಮಾರಾಟ ದಂಧೆಯನ್ನು ಭೇದಿಸಿದ್ದಾರೆ. ಇನ್ನೂ ಈ ಗ್ಯಾಂಗ್ನಲ್ಲಿದ್ದ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಆರೋಪಿಗಳ ಪಾತ್ರ ಏನು ಎಂಬುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಈ ಕುರಿತ ಕಂಪ್ಲೀಟ್ ಮಾಹಿತಿ ಇಲ್ಲಿ ನೀಡಲಾಗಿದೆ. ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಗಳಾದ ಶರಣ್ಯ, ರಾಧ, ಸುಹಾಸಿನಿ, ಮಹಾಲಕ್ಷ್ಮಿ, ಗೋಮತಿ, ಹೇಮಲತಾ, ಕಣ್ಣನ್ ರಾಮಸ್ವಾಮಿ ಎಂಬವರನ್ನು ಬಂಧಿಸಲಾಗಿದೆ. ಈ 7 ಆರೋಪಿಗಳ ಪೈಕಿ ಮಹಾಲಕ್ಷ್ಮಿ ಮತ್ತು ರಾಧ ಪ್ರಮುಖ ಆರೋಪಿಗಳಾಗಿದ್ದಾರೆ. ಮಹಾಲಕ್ಷ್ಮಿ ಮಗು ಯಾರಿಗೆ ಬೇಕು ಎನ್ನುವುದನ್ನು ಹುಡುಕಿ ಡೀಲ್ ಮಾಡಿದರೇ ರಾಧ ಎಲ್ಲಿ ಮಗು ಇದೆ ಎಂಬುದನ್ನು ಹುಡುಕಿ ಅಲ್ಲಿಂದ ಡೀಲ್ ಮಾಡಿ ಮಹಾಲಕ್ಷ್ಮಿ ಹೇಳಿದ ಕಡೆಗೆ ಶರಣ್ಯ ಮತ್ತು ಇತರರ ಮೂಲಕ ಕಳುಹಿಸುತ್ತಿದ್ದಳು https://ainlivenews.com/if-you-are-looking-for-a-job-in-bangalore-young-men-and-women-beware/ ಶರಣ್ಯ: ಈಕೆ ರಾಧ ಮಗು ಸೇಲ್ ಮಾಡುವಾಗ ಜೊತೆಗೆ ಹೋಗುತ್ತಿದ್ದಳು ಮತ್ತು…
Author: AIN Author
ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಹಾಗು ಪೃಥ್ವಿ ರಾಜ್ ಸುಕುಮಾರನ್, ಅಮಲಾಪಾಲ್ ಅಭಿನಯದ ಆಡು ಜೀವಿತಂ ಸಿನಿಮಾ ಬಿಡುಗಡೆ ದಿನಾಂಕವನ್ನು ನವೆಂಬರ್ 30 ರಂದು ಚಿತ್ರತಂಡ ಘೋಷಣೆ ಮಾಡಲಿದೆ. ಬಹು ನಿರೀಕ್ಷೆ ಹುಟ್ಟಿಸಿರು ಈ ಸಿನಿಮಾದ ಪೋಸ್ಟರ್ಸ್ ಈಗಾಗಲೇ ಎಲ್ಲೆಡೆ ಮೆಚ್ಚುಗೆ ಪಡೆದಿವೆ. ಈ ಸಿನಿಮಾಗೆ ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ಸಂಗೀತ ಸ್ಪರ್ಶವಿದೆ. ಅಂದಹಾಗೆ ಈ ಆಡು ಜೀವಿತಂ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವತ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ. ನಿರ್ದೇಶಕ ಬ್ಲೆಸ್ಸಿ ಅವರ ಹದಿನೈದು ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ…
ದಿಯಾ ಸಿನಿಮಾ ಮೂಲಕ ಕನ್ನಡಿಗರ ಹೃದಯ ಕದ್ದ ಕರಾವಳಿ ಕುವರ ಪೃಥ್ವಿ ಅಂಬಾರ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡದ ಜೊತೆಗೆ ತಮಿಳಿಗೂ ಪಾದರ್ಪಣೆ ಮಾಡಿರುವ ಪೃಥ್ವಿ, ಹೊಸ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಯುವ ಪ್ರತಿಭೆ ವೈಭವ್ ಮಹಾದೇವ್ ಸಾರಥ್ಯ ‘ಜೂನಿ’ ಸಿನಿಮಾದಲ್ಲಿ ಪೃಥ್ವಿ ನಾಯಕನಾಗಿ ನಟಿಸುತ್ತಿದ್ದಾರೆ. ‘ಜನ್ನಿ’ ಎಂಬ ಕಿರುಚಿತ್ರ ನಿರ್ದೇಶಿಸಿದ್ದ ವೈಭವ್ ಮಹಾದೇವ್ ಜೂನಿ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಪ್ರಾಗ್ ಫಿಲ್ಮ್ ಸ್ಕೂಲ್ ನಲ್ಲಿ ನಿರ್ದೇಶಕರ ಕೋರ್ಸ್ ಮುಗಿಸಿರುವ ಅವರೀಗ ಈ ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ವಿಭಿನ್ನ ಟೈಟಲ್ ನ ಜೂನಿ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಪೃಥ್ವಿ ಅಂಬಾರ್ ಜೊತೆಗೆ ನಾಯಕಿ ರಿಷಿಕಾ ನಾಯಕ್ ಡಿಫರೆಂಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಜೂನಿ’ ರೋಮ್ಯಾಂಟಿಕ್ ಕಥಾಹಂದರದ ಸಿನಿಮಾ. ದಿಯಾ ಬಳಿಕ ಪೃಥ್ವಿ ಮತ್ತೊಮ್ಮೆ ಪ್ರೇಮಕಥೆಗೆ ಬಣ್ಣ ಹಚ್ಚಿದ್ದಾರೆ. ಯಾರ ಮೇಲೆ ಪ್ರೀತಿ ಹುಟ್ಟುತ್ತೋ ಅವರ ಮೇಲೆ ಪ್ರೀತಿ ಆಗುತ್ತಾ?…
ಬೆಂಗಳೂರು: ಸಿಲ್ಕ್ಯಾರ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಬರುವಂತೆ ಮಾಡಿದ ರಕ್ಷಣಾ ಕಾರ್ಯಾಚರಣೆ ತಂಡವನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಂಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ನವೆಂಬರ್ 12 ರಿಂದ ಉತ್ತರಾಖಂಡದಲ್ಲಿ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಇಂದು ಯಶಸ್ವಿಯಾಗಿ ರಕ್ಷಿಸಲಾಗಿದ್ದು ಹೃದಯಾ ತುಂಬಿಬಂದಿದೆ. ಅವರ ಅಚಲ ಬದ್ಧತೆ ಮತ್ತು ಸಮರ್ಪಣೆಗಾಗಿ ರಕ್ಷಣಾ ತಂಡದ ವೀರೋಚಿತ ಪ್ರಯತ್ನಗಳಿಗೆ ನನ್ನ ಪ್ರಾಮಾಣಿಕ ಅಭಿನಂದನೆಗಳು. ಎನ್ನುವ ಮೂಲಕ ತಮ್ಮ ಪ್ರಶಂಸೆಗಳು ತಿಳಿಸಿದ್ದಾರೆ. ಏನಿದು ಘಟನೆ: ನವೆಂಬರ್ 12 ರಂದು ಸಿಲ್ಕ್ಯಾರ ಸುರಂಗದಲ್ಲಿ ಕಾರ್ಮಿಕರು ಕಾರ್ಯನಿರತರಾಗಿದ್ದ ವೇಳೆ ಸುರಂಗದಲ್ಲಿ ಕುಸಿತಗೊಂಡಿತ್ತು ಈ ವೇಳೆ 41 ಕಾರ್ಮೀಕರು ಸುರಂಗದಲ್ಲಿ ಸಿಲುಕಿಕೊಂಡಿದ್ದರು. ಇವರನ್ನು ರಕ್ಷಣಾ ಕಾರ್ಯಾಚರಣೆ ಪಡೆ 17 ದಿನಗಳ ಕಾಲ ನಿರಂತರ ಯಶಸ್ವಿ ಕಾರ್ಯಾಚರಣೆ ಮಾಡುವ ಮೂಲಕ ನ.28 ರಂದು ಸುರಕ್ಷಿತವಾಗಿ ಹೊರತೆಗೆಯಲಾಯಿತು.
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೆಲಸ ಅರಸೋ ಯುವಕ ಯುವತಿಯರೇ ಎಚ್ಚರ ತಲೆ ಎತ್ತಿದೆ ಕೆಲಸ ಕೊಡ್ತೀವಿ ಅಂತಾ ವಂಚಿಸುವ ಜಾಲ ನೀವೇನಾದ್ರೂ ಅಪ್ಪಿ ತಪ್ಪಿ ಯಾವುದೋ ಕಂಪನಿ ಹೆಸರು ಹೇಳಿದ್ರೂ ಸೇರಿಕೊಂಡ್ರೆ ಹಣವೆಲ್ಲಾ ಗೋತ. ಇಲ್ಲಿದೆ ನೋಡಿ ಇಂಟ್ರಸ್ಟಿಂಗ್ ಸ್ಟೋರಿ! ಹೀಗೆ ಬರೋಬ್ಬರಿ ಒಂದೂ ಸಾವಿರಕ್ಕೂ ಹೆಚ್ಚು ಯುವಕ ಯುವತಿಯರನ್ನೇ ಟಾರ್ಗೆಟ್ ಮಾಡಿ ವಂಚಿಸುವ ಟೀಂ. ಆಂಧ್ರ ಮೂಲದ ವಿದ್ಯಾವಂತರೇ ಇವರ ಟಾರ್ಗೆಟ್ ಆಗಿದ್ದು ಒಬ್ಬೊಬ್ಬರಿಂದ ಲಕ್ಷ ಲಕ್ಷ ಹಣ ಪಡೆದು ವಂಚನೆ ಪವನ್ ಕುಮಾರ್ ಕೊಲ್ಲಿ ಮತ್ತು ತಂಡದಿಂದ ವಂಚನೆ 20 ಕೋಟಿಗೂ ಅಧಿಕ ಹಣ ವಸೂಲಿ ಮಾಡಿದೆ ಈ ಟೀಂ ವೈಟ್ ಫೀಲ್ಡ್ ಪೊಲೀಸರಿಂದ ಆರೋಪಿ ಪವನ್ ಕುಮಾರ್ ಬಂಧನ ಅಷ್ಟಕ್ಕೂ ಈ ಪವನ್ ಹೇಗೆ ವಂಚಿಸ್ತಿದ್ದ ಗೊತ್ತಾ? ಹೈಫೈ ಟೆಕ್ ಪಾರ್ಕ್ ನಲ್ಲಿ ಕಚೇರಿ ಮಾಡ್ತಿದ್ದ ಐಟಿ ಕಂಪನಿ ಹೆಸರಲ್ಲಿ ಮಾಡ್ತಿದ್ದ ಮೋಸ ಪರಿಚಯಸ್ಥರ ಮೂಲಕ ನಿರುದ್ಯೋಗಿ ಯುವಕ,ಯುವತಿಯರಿಗೆ ಗಾಳ ಹಾಕಿ ನಮ್ಮ ಕಂಪನಿಯಲ್ಲಿ ಕೆಲಸ ಕೊಡ್ತೀನಿ…
ಬೆಂಗಳೂರು: ಮೆಟ್ರೋದಲ್ಲಿ ಸಿಕ್ಕ ಚಿನ್ನದ ಉಂಗುರವನ್ನ ವಾಪಸ್ ಒಪ್ಪಿಸಿದ ಹೋಮ್ ಗಾರ್ಡ್ಸ್.ಈ ಹೋಮ್ ಗಾರ್ಡ್ಸ್ ಪ್ರಾಮಾಣಿಕ ನಡೆಗೆ ಭಾರಿ ಮೆಚ್ಚುಗೆ ಎಲ್ಲೆಡೆ ವ್ಯಕ್ತವಾಗಿದೆ. ಸೋಮವಾರ ಮೆಟ್ರೋ ಪ್ರಯಾಣದ ವೇಳೆ 30,000 ಅಧಿಕ ಮೌಲ್ಯದ ಚಿನ್ನದ ಉಂಗುರು ಸಿಕ್ಕಿತ್ತು ಈ ಚಿನ್ನದ ಉಂಗುರವನ್ನು ಬ್ಯಾಂಕ್ ಉದ್ಯೋಗಿ ದಿವ್ಯ ಎಂಬುವರು ಕಳೆದುಕೊಂಡಿದ್ದರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹೊಸಕೋಟೆ ಶಾಖೆಯಲ್ಲಿ ಕೆಲಸ ಮಾಡ್ತಿದ್ದ ದಿವ್ಯ https://ainlivenews.com/good-news-for-those-going-to-sabarimala-ksrtc-bus-system-from-the-state-government/ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೆಟ್ರೋ ನಿಲ್ದಾಣದಿಂದ ಬೆನ್ನಿಗಾನಹಳ್ಳಿ ನಿಲ್ದಾಣಕ್ಕೆ ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಿದ್ದು ಅಲ್ಲಿಂದ ತಮ್ಮ ಕಚೇರಿಗೆ ಬಸ್ನಲ್ಲಿ ಹೋಗಿದ್ದಾರೆ ಈ ವೇಳೆ ಚಿನ್ನದ ಉಂಗುರ ಕಳೆದುಕೊಂಡಿದ್ದ ದಿವ್ಯಾ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೆಟ್ರೋ ನಿಲ್ದಾಣದಿಂದ ಹೊರಡುವಾಗ ಉಂಗುರ ಮಿಸ್ ಆಗಿರೋದು ಗೊತ್ತಾಗಿದೆ ಕೂಡಲೇ ಕಂಟ್ರೋಲರ್ ರೂಂಗೆ ಮಾಹಿತಿ ಕೊಟ್ಟಿದ್ದ ದಿವ್ಯಾ ಬಟ್ ಚಿನ್ನದ ಉಂಗುರ ಸಿಕ್ಕಿದ ತಕ್ಷಣ ಅದನ್ನ ಸಹಾಯಕ ಸುರಕ್ಷತಾ ಅಧಿಕಾರಿಗೆ ಒಪ್ಪಿಸಿದ್ದ ಹೋಮ್ ಗಾರ್ಡ್ಸ್ ಸೋಮವಾರ ಸಂಜೆ 6.45ರ ಸುಮಾರಿಗೆ ಬೆನ್ನಿಗಾನಹಳ್ಳಿ ಮೆಟ್ರೊ…
ನವದೆಹಲಿ: ಚುನಾವಣಾ ಮಾದರಿ ನೀತಿ ಸಂಹಿತೆ (Code Of Conduct) ಉಲ್ಲಂಘನೆ ಆರೋಪ ಹಿನ್ನೆಲೆ ರೈತ ಬಂಧು ಯೋಜನೆ (Rythu Bandhu Scheme) ಮುಂದೂಡುವಂತೆ ತೆಲಂಗಾಣ (Telangana) ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗ (Election Commission) ಸೂಚನೆ ನೀಡಿದೆ. ಮತದಾನಕ್ಕೂ (Voting) ಮುನ್ನ ರೈತರ ಅಕೌಂಟ್ಗೆ ಹಣ ಹಾಕಿ ಅದರ ಲಾಭ ಪಡೆಯಲು ಬಿಆರ್ಎಸ್ (BRS) ಚಿಂತಿಸಿತ್ತು. ಇದಕ್ಕೂ ಮೊದಲು ಯೋಜನೆಗೆ ಅನುಮತಿ ನೀಡಿದ್ದ ಕೇಂದ್ರ ಚುನಾವಣಾ ಆಯೋಗ ಪ್ರಚಾರಕ್ಕೆ ಬಳಸಿಕೊಳ್ಳದಂತೆ ಷರತ್ತು ವಿಧಿಸಿತ್ತು. ಅದಾಗ್ಯೂ ಬಿಆರ್ಎಸ್ನಿಂದ ಸ್ಪರ್ಧಿಸಿರುವ ರಾಜ್ಯ ಹಣಕಾಸು ಸಚಿವ ಟಿ ಹರೀಶ್ ರಾವ್ ಚುನಾವಣಾ ಪ್ರಚಾರಗಳಿಗೆ ಯೋಜನೆಯನ್ನು ಬಳಸಿಕೊಂಡಿದ್ದರು. ಈ ಬಗ್ಗೆ ಪ್ರತಿಪಕ್ಷಗಳಿಂದ ದೂರು ದಾಖಲಾದ ಹಿನ್ನೆಲೆ ಯೋಜನೆಗೆ ತಾತ್ಕಾಲಿಕ ತಡೆ ನೀಡಿದೆ. https://ainlivenews.com/this-is-the-father-of-my-child-actress-says-i-am-not-a-single-parent/ 2018ರಲ್ಲಿ ಪ್ರಾರಂಭವಾದ ರೈತ ಬಂಧು ಯೋಜನೆಯು ರೈತರಿಗೆ ಅನಿಶ್ಚಿತತೆಗಳನ್ನು ಪೂರೈಸಲು ಮತ್ತು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಅನುವು ಮಾಡಿಕೊಡಲು ಒಂದು ಬೆಳೆ ಋತುವಿಗೆ ಎಕರೆಗೆ 5,000 ರೂ. ನಗದು ಹಣವನ್ನು ರೈತರ…
ಮುಂಬೈ: ಐಪಿಎಲ್ ಆಟಗಾರರ ಮಿನಿ ಹರಾಜು (IPL 2024 Auction) ಪ್ರಕ್ರಿಯೆ ಡಿಸೆಂಬರ್ 19ರಂದು ದುಬೈನಲ್ಲಿ ನಡೆಯಲಿದೆ. ಅದಕ್ಕೂ ಮುನ್ನವೇ ಎಲ್ಲಾ 10 ತಂಡಗಳು ಉಳಿಸಿಕೊಂಡ ಆಟಗಾರರ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಒಟ್ಟು 10 ತಂಡಗಳಿಂದ 173 ಆಟಗಾರರು ರಿಟೇನ್ ಆಗಿದ್ದಾರೆ. 50 ಆಟಗಾರರಿಗೆ ಗೇಟ್ ಪಾಸ್ ನೀಡಲಾಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ. RCB ಉಳಿಸಿಕೊಂಡಿರುವ ಆಟಗಾರರು: ಆಕಾಶ್ ದೀಪ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ವೆಲ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಮಹಿಪಾಲ್ ಲೊಮ್ರೋರ್, ಮನೋಜ್ ಭಾಂಡಗೆ, ಮಯಾಂಕ್ ದಾಗರ್ (T- ಟ್ರೇಡ್ ವಿಂಡೋ ನಿಯಮ- ಅಂದ್ರೆ ಫ್ರಾಂಚೈಸಿಗಳು ಪರಸ್ಪರ ಆಟಗಾರರನ್ನ ವಿನಿಮಯ ಮಾಡಿಕೊಳ್ಳುವುದು), ಮೊಹಮ್ಮದ್ ಸಿರಾಜ್, ರಾಜನ್ ಕುಮಾರ್, ರಜತ್ ಪಾಟಿದಾರ್, ರೀಸ್ ಟೋಪ್ಲಿ, ಸುಯಶ್ ಪ್ರಭುದೇಸಾಯಿ ಕೊಹ್ಲಿ, ವೈಶಾಕ್ ವಿಜಯ್ ಕುಮಾರ್, ವಿಲ್ ಜಾಕ್ಸ್, ಕ್ಯಾಮರೂನ್ ಗ್ರೀನ್ (T). CSK ಉಳಿಸಿಕೊಂಡ ಆಟಗಾರರು: ಅಜಯ್ ಮಂಡಲ್, ಅಜಿಂಕ್ಯ ರಹಾನೆ, ದೀಪಕ್…
ಮುಂಬೈ: 2024ರ ಐಪಿಎಲ್ ಹರಾಜು ಪ್ರಕ್ರಿಯೆಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಉಳಿಸಿಕೊಂಡಿರುವ ಹಾಗೂ ಕೈ ಬಿಟ್ಟಿರುವ ಆಟಗಾರರ ಪಟ್ಟಿಯನ್ನು ಪ್ರಕಟಿಸಿವೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್, ಪಂಜಾಬ್ ಕಿಂಗ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್ ತಂಡಗಳು ಸಹ ತಮ್ಮ ಆಟಗಾರರ ಪಟ್ಟಿಯನ್ನು ಪ್ರಕಟಿಸಿವೆ. ಲಕ್ನೋ ಸೂಪರ್ ಜೈಂಟ್ಸ್ ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಆಯುಷ್ ಬದೋನಿ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯ್ನಿಸ್, ದೀಪಕ್ ಹೂಡಾ, ದೇವದತ್ ಪಡಿಕ್ಕಲ್ (ಆರ್ಆರ್ ತಂಡದಿಂದ ಟ್ರೇಡ್), ರವಿ ಬಿಷ್ಣೋಯ್, ನವೀನ್ ಉಲ್ ಹಕ್, ಕೃನಾಲ್ ಪಾಂಡ್ಯ, ಯುಧ್ವಿರ್ ಸಿಂಗ್, ಪ್ರೇರಕ್ ಮಂಕಡ್, ಯಶ್ ಠಾಕೂರ್, ಅಮಿತ್ ಮಿಶ್ರಾ, ಮಾರ್ಕ್ ವುಡ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್ ತಂಡಕ್ಕೆ ರಿಟೇನ್ ಆಗಿದ್ದಾರೆ. ಜಯದೇವ್ ಉನದ್ಕತ್, ಡೇನಿಯಲ್ ಸಾಮ್ಸ್, ಮನನ್ ವೋಹ್ರಾ, ಸ್ವಪ್ನಿಲ್ ಸಿಂಗ್, ಕರಣ್ ಶರ್ಮಾ, ಅರ್ಪಿತ್ ಗುಲೇರಿಯಾ, ಸೂಯಾರ್ಂಶ್ ಶೆಡ್ಗೆ, ಕರುಣ್ ನಾಯರ್ ಆಟಗಾರರನ್ನು ಕೈಬಿಡಲಾಗಿದೆ. ಸನ್ ರೈಸರ್ಸ್ ಹೈದರಾಬಾದ್…
ಬೆಂಗಳೂರು: ಕೇರಳದ ಪ್ರಸಿದ್ಧ ಯಾತ್ರಾ ಸ್ಥಳ ಶಬರಿಮಲೆಗೆ ಅಯ್ಯಪ್ಪನ ದರ್ಶನಕ್ಕಾಗಿ ತೆರಳುವವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬೆಂಗಳೂರಿನಿಂದ ಬಸ್ ವ್ಯವಸ್ಥೆ ಮಾಡಿದೆ. ಡಿಸೆಂಬರ್ 1 ರಿಂದ ಶಬರಿಮಲೆಗೆ ವೋಲ್ವೋ ಬಸ್ ಸಂಚರಿಸಲಿದೆ. ವೋಲ್ವೊ ಬಸ್ನ ಟಿಕೆಟ್ ದರ, ಮಾರ್ಗ, ಸಂಚಾರದ ವೇಳಾಪಟ್ಟಿಯ ಕುರಿತು ಕೆಎಸ್ಆರ್ಟಿಸಿ ಮಾಹಿತಿ ನೀಡಿದೆ. ವಯಸ್ಕರಿಗೆ ಬೆಂಗಳೂರಿಂದ ಶಬರಿಮಲೆಗೆ 1600 ರೂಪಾಯಿ ದರ ನಿಗದಿ ಮಾಡಲಾಗಿದೆ. ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50 ಕ್ಕೆ ಹೊರಡಲಿರುವ ವೋಲ್ವೋ ಬಸ್ ಮರುದಿನ ಬೆಳಿಗ್ಗೆ 6.45 ಕ್ಕೆ ಪಂಪಾ ತಲುಪಲಿದೆ. ಅಂದು ಸಂಜೆ ಮತ್ತೆ ಪಂಪಾದಿಂದ ಹೊರಟು ಮರುದಿನ ಬೆಳಿಗ್ಗೆ 10 ಗಂಟೆಗೆ ಬೆಂಗಳೂರು ತಲುಪಲಿದೆ. ಶಬರಿಮಲೆ ಬಸ್ಗೆ ಟಿಕೆಟ್ ಬುಕಿಂಗ್ ಹೇಗೆ? ಕೆಎಸ್ಆರ್ಟಿಸಿ ಅಧಿಕೃತ ವೆಬ್ಸೈಟ್ (www.ksrtc.in) ಮೂಲಕ ಅಥವಾ ರಾಜ್ಯದಾದ್ಯಂತ ಪ್ರಮುಖ ಬಸ್ ಡಿಪೋಗಳಲ್ಲಿ ಕಾರ್ಯನಿರ್ವಹಿಸುವ ಕೆಎಸ್ಆರ್ಟಿಸಿ ಟಿಕೆಟ್ ಕೌಂಟರ್ಗಳಲ್ಲಿ ಟಿಕೆಟ್ ಕಾಯ್ದಿರಿಸುವಂತೆ ಸಂಸ್ಥೆಯು ಪ್ರಯಾಣಿಕರಿಗೆ ಸಲಹೆ ನೀಡಿದೆ. ಕೆಎಸ್ಆರ್ಟಿಸಿ ಪ್ಯಾಸೆಂಜರ್ ಅಡ್ವೈಸರಿಯಲ್ಲಿರುವ ಮಾಹಿತಿ ಪ್ರಕಾರ, ಕರ್ನಾಟಕ ರಾಜ್ಯದಾದ್ಯಂತ ಮತ್ತು…