Author: AIN Author

ಶಿವಮೊಗ್ಗ:- ಜಿಲ್ಲೆಯ ಹೊಸನಗರದ ಮಾರಿಗುಡ್ಡ ಬಡಾವಣೆಯಲ್ಲಿ ಆರು ವರ್ಷಗಳ ಕಾಲ ಪ್ರೀತಿಸಿ ಕೊನೆಗೆ ಯುವಕ ಕೈಕೊಟ್ಟ ಹಿನ್ನೆಲೆ ಮನನೊಂದ ಯುವತಿಯೊಬ್ಬಳು ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜರುಗಿದೆ. ಸುಧಾ ಮತ್ತು ಶ್ರೀಕಾಂತ್ ಕಳೆದ ಆರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಯಾಗುವುದಾಗಿ ಹೇಳಿ ಆಕೆಯೊಂದಿಗೆ ಶ್ರೀಕಾಂತ್ ದೈಹಿಕ ಸಂಪರ್ಕ ಕೂಡ ನಡೆಸಿದ್ದನು. ಕೊನೆಗೆ ಶ್ರೀಕಾಂತ್ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಇದರಿಂದ ಮನನೊಂದು ಸುಧಾ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅಸ್ವಸ್ಥ ಯುವತಿಯಲ್ಲಿದ್ದ ಮಗಳನ್ನು ಪೋಷಕರು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ.

Read More

ಚಿನ್ನದ ಬೆಲೆ ಗ್ರಾಮ್​ಗೆ 25 ರೂನಷ್ಟು ಏರಿಕೆ ಆಗಿದ್ದು, ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿಯ ವಿವರ ಇಲ್ಲಿದೆ ನೋಡಿ. ಭಾರತ ಹಾಗೂ ವಿವಿಧ ದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ತೀವ್ರ ಏರಿಕೆ ಕಾಣತೊಡಗಿದೆ. ಅಮೆರಿಕದ ಆರ್ಥಿಕತೆಯ ವಿವಿಧ ಅಂಶಗಳು ಸದ್ಯದಲ್ಲೇ ಬಹಿರಂಗಗೊಳ್ಳಲಿದ್ದು, ಮುನ್ನೆಚ್ಚರಿಕೆಯಾಗಿ ಹೂಡಿಕೆದಾರರು ಚಿನ್ನದ ಮೇಲೆ ಹಣ ಇರಿಸಿದ್ದಾರೆ. ಒಂದು ವೇಳೆ ಅಮೆರಿಕದ ಹಣದುಬ್ಬರ ಗಣನೀಯವಾಗಿ ಇಳಿಕೆಯಾದರೆ ಅಲ್ಲಿ ಬಡ್ಡಿದರವನ್ನೂ ಇಳಿಸಬಹುದು. ಆಗ ಚಿನ್ನದ ಬೆಲೆ ಹೆಚ್ಚತೊಡಗಬಹುದು ಎಂಬ ನಿರೀಕ್ಷೆಯಲ್ಲಿ ಬಹಳ ಮಂದಿ ಈಗಿಂದಲೇ ಚಿನ್ನ ಖರೀದಿಸತೊಡಗಿದ್ದಾರೆ. ಇದರ ಪರಿಣಾಮ ಭಾರತೀಯ ಚಿನಿವಾರಪೇಟೆಯ ಮೇಲೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,560 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,850 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100…

Read More

ಟೆಲ್‍ಅವೀವ್: ನಾಲ್ಕು ವರ್ಷದ ಇಸ್ರೇಲಿ-ಅಮೇರಿಕನ್ (Israeli-American) ಬಾಲಕಿ ಸೇರಿ ಮೂರನೇ ಬ್ಯಾಚ್‍ನ 17ಕ್ಕೂ ಹೆಚ್ಚು ಮಂದಿಯನ್ನು ಹಮಾಸ್ ಭಾನುವಾರ ಬಿಡುಗಡೆ ಮಾಡಿದೆ. ಇಸ್ರೇಲ್ ಮತ್ತು ಹಮಾಸ್ (Israel- Hamas) ನಡುವಿನ ಒಪ್ಪಂದದ ಅಡಿಯಲ್ಲಿ 50 ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದರೆ 150 ಪ್ಯಾಲೆಸ್ತೇನ್ ಕೈದಿಗಳನ್ನು ಇಸ್ರೇಲ್ ಬಿಡುಗಡೆ ಮಾಡಬೇಕು ಎಂದು ಹೇಳಲಾಗಿತ್ತು. ಹಾಗಾಗಿ ನಾಲ್ಕು ದಿನಗಳ ಕದನ ವಿರಾಮಕ್ಕೆ ಹಮಾಸ್ ಹಾಗೂ ಇಸ್ರೇಲ್ ಒಪ್ಪಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮೂರನೇ ಬ್ಯಾಚ್‍ನ 13 ಇಸ್ರೇಲಿಗಳು ಮತ್ತು 4 ವಿದೇಶಿ ಪ್ರಜೆಗಳ ಮೂರನೇ ಬ್ಯಾಚ್ ಅನ್ನು ರೆಡ್ ಕ್ರಾಸ್ ಸಂಸ್ಥೆಗೆ ಹಮಾಸ್ ಹಸ್ತಾಂತರಿಸಿದೆ ಎಂದು ಹೇಳಿದೆ. ಇಸ್ರೇಲ್ ಮತ್ತು ಹಮಾಸ್ ನಡುವೆ ನಾಲ್ಕು ದಿನಗಳ ಕದನ ವಿರಾಮ ನವೆಂಬರ್ 24 ರಂದು ಪ್ರಾರಂಭವಾಯಿತು. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಗಾಜಾ ಪಟ್ಟಿಗೆ ತೆರಳಿ ಸೈನಿಕರಿಗೆ ಸ್ಫೂರ್ತಿ ತುಂಬಿದರು. ಮೊದಲು ಹಮಾಸ್ ಅನ್ನು ನಾಶ ಮಾಡುವುದು ಹಾಗೂ ಎರಡನೆಯದು ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು…

Read More

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ(BY Vijayendra) ಅವರ ನೇಮಕ ಬಳಿಕ ಅಸಮಾಧಾನ ವಿಚಾರಕ್ಕೆ ಸಂಬಂಧಪಟ್ಟಂತೆ ‘ಸೋಮಣ್ಣ, ಸಿ.ಟಿ.ರವಿ, ಯತ್ನಾಳ್ ಸೇರಿ ಹಲವರು ಅಸಮಾಧಾನಗೊಂಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಎರಡು ಕಡೆ ವಿ.ಸೋಮಣ್ಣರನ್ನ ನಿಲ್ಲಿಸಿ ಬಲಿಪಶು ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್‌, ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್(MB Patil) ಹೇಳಿದ್ದಾರೆ. ಬಿಜೆಪಿಯಲ್ಲಿ ಅಸಮಾಧಾನ ಹಿನ್ನಲೆ ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕ ವಿಚಾರ ‘ಸಿಎಂ, ಡಿಸಿಎಂ, ಸತೀಶ್, https://ainlivenews.com/golden-opportunity-to-work-in-banking-sector-there-are-8283-vacancies-in-sbi/  ನನ್ನನ್ನು ಸಾಕಷ್ಟು ನಾಯಕರು ಸಂಪರ್ಕಿಸಿದ್ದಾರೆ. ಕಾದುನೋಡಿ ಲೋಕಸಭಾ ಚುನಾವಣೆ ಹೊತ್ತಿಗೆ ಅಥವಾ ನಂತರ ದೇಶ, ರಾಜ್ಯದಲ್ಲಿ ಬಹಳಷ್ಟು ಬದಲಾವಣೆ ಆಗುತ್ತವೆ. ಇನ್ನು ಇದೇ ವೇಳೆ ಲಿಂಗಾಯತ, ಒಕ್ಕಲಿಗರಿಂದ ಜಾತಿಗಣತಿ ವರದಿ ಮಂಡನೆಗೆ ವಿರೋಧ ‘ಈ ಬಗ್ಗೆ ಸಿಎಂ ಜೊತೆ ಚರ್ಚಿಸಿದ ಬಳಿಕ ನನ್ನ ಅಧಿಕೃತ ನಿಲುವು ಸ್ಪಷ್ಟಪಡಿಸುತ್ತೇನೆ. ಇನ್ನುಳಿದಂತೆ ಜಾತಿಗಣತಿ ವರದಿ ಮಂಡನೆಯಿಂದ ಜಾತಿ‌ಗಳ ನಡುವೆ ಸಂಘರ್ಷ ವಿಚಾರ ‘ಅದು ಏನೇ ಇದ್ದರೂ ಪಕ್ಷ ಹಾಗೂ ಸರ್ಕಾರದ ಚೌಕಟ್ಟಿನಲ್ಲಿ ಮಾತನಾಡುತ್ತೇವೆ ಎಂದರು.

Read More

ಮಂಡ್ಯ: ಭ್ರೂಣ ಹತ್ಯೆ ಇದು ಸಮಾಜಘಾತುಕ ಕೆಲಸ. ಇದನ್ನ ಖಂಡಿಸುತ್ತೇನೆ. ಈ ರೀತಿ ಯಾರೂ ಮಾಡಬಾರದು, ಪ್ರೋತ್ಸಾಹ ಕೊಡುವುದೂ ತಪ್ಪು. ರಾಜ್ಯದಲ್ಲಿ ಎಲ್ಲೇ ಇಂಥ ಘಟನೆ ನಡೆದ್ರೆ ಕಠಿಣಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.  ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರಿಂದ ಭ್ರೂಣ ಹತ್ಯೆ ಪತ್ತೆ ಪ್ರಕರಣವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್‌ ಈ ಬಗ್ಗೆ ಗಮನಹರಿಸುತ್ತಾರೆ ಎಂದು ಹೇಳಿದ್ದಾರೆ. https://ainlivenews.com/golden-opportunity-to-work-in-banking-sector-there-are-8283-vacancies-in-sbi/ ಸೂಕ್ತ ಕ್ರಮವಾಗುತ್ತದೆ, ಎಲ್ಲದಕ್ಕೂ ಕಡಿವಾಣ ಹಾಕಲಾಗುವುದು. ವಿಪಕ್ಷಗಳು ಈ ಹಿಂದೆ ಆಡಳಿತ ಮಾಡಿದಾಗ ಇದಕ್ಕೆ ಕಡಿವಾಣ ಹಾಕಿಲ್ಲ. ನಾವು ಮಾಡುವಾಗ ಮಾಹಿತಿ ನೀಡಿ ಪ್ರೋತ್ಸಾಹ ಕೊಡುವ ಕೆಲಸಮಾಡಬೇಕು. ಅದನ್ನು ಬಿಟ್ಟು ವೈಯಕ್ತಿಕ ಟೀಕೆಗೆ ಮುಂದಾಗುತ್ತಾರೆ ಎಂದಿದ್ದಾರೆ.

Read More

ಮೈಸೂರು: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸಂಖ್ಯಾಶಾಸ್ತ್ರದ ಪ್ರಕಾರ ತಮ್ಮ ಇಂಗ್ಲಿಷ್ ಹೆಸರನ್ನ ಬದಲಿಸಿಕೊಂಡಿದ್ದಾರೆ. ಪ್ರತಾಪ್ ಸಿಂಹ ಎಂಬ ಹೆಸರನ್ನು ಸಂಖ್ಯಾಶಾಸ್ತ್ರದ ಪ್ರಕಾರ ಸಂಸದರು ಸ್ವಲ್ಪ ಬದಲು ಮಾಡಿಕೊಂಡಿದ್ದಾರೆ. Prathap Simha ಎಂಬ ಹೆಸರನ್ನು Pratap Simmha ಎಂದು ಬದಲು ಮಾಡಿಕೊಂಡಿರುವುದನ್ನ ಅಫಿಡೆವಿಟ್ ಮೂಲಕ ಘೋಷಿಸಿಕೊಂಡಿದ್ದಾರೆ. ಸಂಸದ ಪ್ರತಾಪ್ ಸಿಂಹಗಿಂತಲೂ ಮೊದಲೇ ಹಲವು ನಾಯಕರು ಇದೇ ಮಾದರಿಯ ಬದಲಾವಣೆ ಮಾಡಿಕೊಂಡಿದ್ದಾರೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕೂಡ ಇಂಗ್ಲಿಷ್ನಲ್ಲಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದರು. ಬಿಜೆಪಿ ಎಂಎಲ್ಸಿ ಹೆಚ್. ವಿಶ್ವನಾಥ್ ಕೂಡ ತಮ್ಮ ಹೆಸರಿನ ಹಿಂದೆ ಅಡಗೂರು ಎಂದು ಸೇರಿಸಿಕೊಂಡಿದ್ದರು. ತಮಿಳುನಾಡು ಸಿಎಂ ಆಗಿದ್ದ ಜೆ. ಜಯಲಲಿತಾ ಅವರು ಕೂಡ ಇದೇ ರೀತಿ ತಮ್ಮ ಹೆಸರು ಬದಲಿಸಿಕೊಂಡಿದ್ದರು. ಇದೀಗ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕೂಡ ತಮ್ಮ ಹೆಸರನ್ನು ಸಂಖ್ಯಾಶಾಸ್ತ್ರದ ಪ್ರಕಾರ ಬದಲಿಸಿಕೊಂಡಿದ್ದಾರೆ. ಲೋಕಸಭೆಗೂ ಮುನ್ನ ಹೆಸರು ಬದಲಾವಣೆ ಲೋಕಸಭಾ ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಇರುವಾಗ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು…

Read More

ಭೋಪಾಲ್: ಅಕ್ರಮ ಮರಳು ದಂಧೆ (Illegal Sand Mining) ತಡೆಯಲು ತೆರಳಿದ್ದ ಕಂದಾಯ ಅಧಿಕಾರಿಯೊಬ್ಬರ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ ಮಾಡಿದ ಘಟನೆ ಮಧ್ಯಪ್ರದೇಶದ (Madhya Pradesh) ಶಾಹದೋಲ್ ಎಂಬಲ್ಲಿ ನಡೆದಿದೆ. ಅಧಿಕಾರಿಯನ್ನು ಹತ್ಯೆಗೈದ ಆರೋಪಿಯನ್ನು ಪೊಲೀಸರು (Police) ಬಂಧಿಸಿದ್ದಾರೆ. ಟ್ರ್ಯಾಕ್ಟರ್ ಹರಿದು ಸಾವಿಗೀಡಾದ ಅಧಿಕಾರಿಯನ್ನು ಪಟ್ವಾರಿ ಪ್ರಸನ್ನ ಸಿಂಗ್ ಎಂದು ಗುರುತಿಸಲಾಗಿದೆ. ಸಿಂಗ್ ಸೇರಿದಂತೆ ಇಲಾಖೆಯ ಕೆಲವು ಸಿಬ್ಬಂದಿ ಗೋಪಾಲ್‍ಪುರ ಪ್ರದೇಶದ ಸೋನ್ ನದಿಯ ಬಳಿ ಅಕ್ರಮವಾಗಿ ಗಣಿಗಾರಿಕೆ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ಟ್ರಾಕ್ಟರ್ ಒಂದನ್ನು ತಡೆಯಲು ಯತ್ನಿಸಿದ್ದಾರೆ, ಆದರೆ ಚಾಲಕ ಅಧಿಕಾರಿಯ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ್ದಾನೆ. https://ainlivenews.com/golden-opportunity-to-work-in-banking-sector-there-are-8283-vacancies-in-sbi/ ಟ್ರಾಕ್ಟರ್ ಮೈಮೇಲೆ ಹರಿದ ಪರಿಣಾಮ ಪಟ್ಟಾರಿ ಪ್ರಸನ್ನ ಸಿಂಗ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  ಘಟನೆ ಬಳಿಕ ಆರೋಪಿ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದ. ಕೂಡಲೇ ಪೊಲೀಸರು ವಾಹನದ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿ ಪರಾರಿಯಾಗಿದ್ದ ಚಾಲಕ ಶುಭಂ ವಿಶ್ವಕರ್ಮ (25) ಎಂಬಾತನನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಟ್ರ್ಯಾಕ್ಟರ್‌ನ್ನು ವಶಪಡಿಸಿಕೊಳ್ಳಲಾಗಿದೆ.…

Read More

ತಾನು ಗರ್ಭಿಣಿ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು ಇಲಿಯಾನಾ. ಮದುವೆ ಆಗದೇ ಅದು ಹೇಗೆ ಮಗು ಹುಟ್ಟಲು ಸಾಧ್ಯ? ಎಂದು ಹಲವರು ಪ್ರಶ್ನೆ ಮಾಡಿದ್ದರು. ನೀವು ಸಿಂಗಲ್ ಪೇರೆಂಟಾ? ಎಂದು ಕೇಳಿದ್ದರು. ಈಗ ಎಲ್ಲದಕ್ಕೂ ಇಲಿಯಾನಾ ಉತ್ತರಿಸಿದ್ದಾರೆ. ತಮ್ಮ ಗಂಡನ ಫೋಟೋವನ್ನು ಶೇರ್ ಮಾಡಿ, ತಾವು ಸಿಂಗಲ್ ಪೇರೆಂಟ್ ಅಲ್ಲ ಎಂದು ಹೇಳಿಕೊಂಡಿದ್ದಾರೆ ಇಲಿಯಾನಾ(Ileana)  ಅವರು ಆಗಸ್ಟ್ 1ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಈ ಸಂತಸದ ಸುದ್ದಿ ರಿವೀಲ್ ಆಗಿರುವ ಬೆನ್ನಲ್ಲೇ ನಟಿಯ ಬಗ್ಗೆ ಮತ್ತೊಂದು ಬ್ಲಾಸ್ಟಿಂಗ್ ಸುದ್ದಿಯೊಂದು ಸಿಕ್ಕಿತ್ತು. ಸಿನಿಮಾರಂಗ, ಅಭಿಮಾನಿಗಳು ಸೇರಿದಂತೆ ಅನೇಕರು ಇಲಿಯಾನಾ ಮದುವೆಯಾಗಿಲ್ಲ ಎಂದು ಭಾವಿಸಿದ್ದರು. ಆದರೆ ಈ ಸುದ್ದಿಗೆ ನಯಾ ಟ್ವಿಸ್ಟ್‌ ಸಿಕ್ಕಿತ್ತು. ತಮ್ಮ ಮಗುವಿಗೆ ಕೋವಾ ಫೀನಕ್ಸ್ ಡೋಲನ್ (Koa Phoenix Dolan) ಎಂದು ಹೆಸರಿಟ್ಟಾಗಲೂ ಮಗುವಿನ ತಂದೆ ಯಾರು ರಿವೀಲ್ ಮಾಡಿ ಎಂದು ಫ್ಯಾನ್ಸ್ ಬೇಡಿಕೆ ಇಟ್ಟಿದ್ದರು. ಇದೀಗ ಎಲ್ಲದಕ್ಕೂ ಫುಲ್ ಸ್ಟಾಪ್ ಇಟ್ಟಿದ್ದಾರೆ ನಟಿ

Read More

ಹುಬ್ಬಳ್ಳಿ: ಪಕ್ಷದ ಕುರಿತು, ಪಕ್ಷದಲ್ಲಿರುವವರ ಕುರಿತು ಏನೇ ಅತೃಪ್ತಿಗಳಿರಲಿ ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಸಚಿವ ವಿ. ಸೋಮಣ್ಣ ಹೈಕಮಾಂಡ್ ಗೆ ದೂರು ನೀಡುತ್ತಿರುವ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ನಿಮ್ಮ ಕುಂದು ಕೊರತೆಗಳು ಏನೇ ಇರಲಿ ಅದನ್ನು ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಇತರ ರಾಷ್ಟ್ರೀಯ ನಾಯಕರಿಗೆ ಮಾಹಿತಿ ನೀಡಲಿ. ಮಾಧ್ಯಮದ ಮೂಲಕ ಇದನ್ನು ಚರ್ಚಿಸುವುದು ಒಳ್ಳೆಯದಲ್ಲ. ಸೋಮಣ್ಣ ಪಕ್ಷದ ಪ್ರಮುಖ ನಾಯಕರು. ವೈಯಕ್ತಿಕವಾಗಿಯೂ ನನ್ನೊಂದಿಗೆ ಆತ್ಮೀಯರಾಗಿದ್ದು, ಈ ಕುರಿತು ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲಿ ಉತ್ತರ ಕರ್ನಾಟಕ ಕಡೆಗಣನೆ ವಿಚಾರಕ್ಕೆ ಉತ್ತರಿಸಿದ ಜೋಶಿ, https://ainlivenews.com/golden-opportunity-to-work-in-banking-sector-there-are-8283-vacancies-in-sbi/ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಅಂತ ಭಾಗ ಮಾಡಲು ಆಗುವುದಿಲ್ಲ. ಒಂದು ವ್ಯವಸ್ಥೆಯೊಳಗೆ ಈ ಪ್ರಕ್ರಿಯೆ ಮಾಡಲಾಗಿದೆ. ಉತ್ತರ ಕರ್ನಾಟಕಕ್ಕೆ ಮೊದಲ ಆದ್ಯತೆ ಕೊಟ್ಟಿದ್ದೇ ಬಿಜೆಪಿ.…

Read More

ಬೆಂಗಳೂರು : ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಭಾರತೀಯರಿಂದ ಅತಿ ಹೆಚ್ಚು ಬಳಕೆಯಾದ Top 10 ವೆಬ್ ಸೈಟ್​ಗಳ ಪಟ್ಟಿಯನ್ನು ವರ್ಲ್ಡ್​ ಆಫ್​ ಸ್ಟಾಟಿಸ್ಟಿಕ್ಸ್​ ಬಿಡುಗಡೆಯಾಗಿದೆ. ಪ್ರತಿ ತಿಂಗಳಿನಂತೆ ಅಕ್ಟೋಬರ್ ತಿಂಗಳಿನಲ್ಲಿ ಅಂತರ್ಜಾಲದಲ್ಲಿ ಅತಿ ಹೆಚ್ಚು ಸರ್ಚ್ ಆದ ಟಾಪ್ 10​ ವೆಬ್​ ಸೈಟ್​ಗಳನ್ನು ಗೂಗಲ್​ ಬಿಡುಗಡೆಗೊಳಿಸಿದ್ದು ಈ ಪೈಕಿ ಅಂತರ್ಜಾಲದಲ್ಲಿ ಅತಿ ಹೆಚ್ಚು ಬಳಕೆಯಾದ​ ಸರ್ಚ್​ ಎಂಜಿನ್​ ಗಳ ಪೈಕಿ ಗೂಗಲ್​ ಅಗ್ರ ಸ್ಥಾನದಲ್ಲಿದೆ. ಇನ್ನು ಎರಡನೇ ಸ್ಥಾನದಲ್ಲಿ ಯೂಟೂಬ್​ ಮತ್ತು ಮೂರನೇ ಸ್ಥಾನದಲ್ಲಿ ಫೇಸ್​ ಬುಕ್​ ಸ್ಥಾನ ಪಡೆದುಕೊಂಡಿದೆ. ಭಾರತದಲ್ಲಿ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಭಾರತೀಯರು ಅತಿ ಹೆಚ್ಚು ಬಳಕೆ ಮಾಡಲಾದ ಟಾಪ್​ 10 ವೆಬ್ ಸೈಟ್​ಗಳು ಇಂತಿವೆ. google.com 2.Youtube.com 3.Facebook 4.instagram 5.xhamster.desi 6.cricbuzz.com 7.samsung.com 8.ajtak.com 9.xhamster.com 10.whatsapp.com ಈ ಮೇಲಿನ ಎಲ್ಲಾ ವೆಬ್​ ಸೈಟ್​ಗಳು ಮತ್ತು ಆ್ಯಪ್​ ಗಳನ್ನು ಅಂತರ್ಜಾಲದಲ್ಲಿ ಅತಿ ಹೆಚ್ಚಾಗಿ ಬಳಕೆ ಮಾಡಲಾಗಿದೆ.

Read More