ಬಳ್ಳಾರಿ:- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೇಯ ಯೋಜನೆಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯ, ಪಡಿತರ ಅಕ್ಕಿಗೆ ನ್ಯಾಯ ಬೆಲೆಯ ಅಂಗಡಿಯ ಮಾಲೀಕರೆ ಕನ್ನ ಹಾಕಿರುವ ಘಟನೆ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.ಬಡವರ ಹೊಟ್ಟೆ ತುಂಬಿಸುವ ಸಲುವಾಗಿ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದರೇ, ಇತ್ತ ಕಡೆ ಬಡವರಿಗೆ ತಲುಪುವ ಮಾರ್ಗದಲ್ಲಿಯೇ ಸೋರಿಕೆಯ ಮಾರ್ಗಗಳು ಬೆಳಕಿಗೆ ಬಂದಿವೆ.ಈ ಕುರಿತು ಒಂದು ಸ್ಟೋರಿಯನ್ನು ನೋಡೋಣ ಬನ್ನಿ….. • ನ್ಯಾಯ ಬೆಲೆ ಅಂಗಡಿಯ ಮಾಲೀಕರಿಂದಲೇ ಪಡಿತರದಾರರಿಗೆ ಮೋಸ, • ಕಣ್ಮುಚಿ ಕುಳಿತ ಆಹಾರ ಇಲಾಖೆಯ ಅಧಿಕಾರಿಗಳು, • ತಕ್ಕಡಿಯ ಅಳತೆಯಲ್ಲಿ ಗೋಲ್ ಮಾಲ್, • 5 ಕೆಜಿ ತುಕಕ್ಕೆ- 4 ಕೆಜಿ ಅಕ್ಕಿ ವಿತರಣೆ, • ಪಡಿತರದಾರರಿಂದ ತೀವ್ರ ವೀರೋಧ, ರಾಜ್ಯದ ಜನರು ಯಾರು ಸಹ ಹಸಿವುನಿಂದ ಬಳಲಬಾರದು ಎಂದು ರಾಜ್ಯ ಸರ್ಕಾರ ಜಾರಿಗೆ ತಂದ ಈ ಅನ್ನಭಾಗ್ಯ ಯೋಜನೆಯ ಅಕ್ಕಿಗೆ ಕಳ್ಳಾರ ಕಾಟ ಹೆಚ್ಚಾಗಿದೆ. ಇಲ್ಲಿಯವರಗೆ ಕೇವಲ ಹೊರಗಿನ ಕಳ್ಳರನ್ನು ಮಾತ್ರ ನೋಡಿದ್ದು ಉಂಟು.ಆದರೆ ಗಣಿನಾಡು ಬಳ್ಳಾರಿ…
Author: AIN Author
ಬೆಂಗಳೂರು:- ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಈ ಸಂಬಂಧ ಮಾತನಾಡಿದ ಅವರು,ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ವಿಜಯನಗರ, ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ನ.28ರಿಂದ ಡಿ.1ರವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು:- ಜನತಾದರ್ಶನದ ವೇಳೆ ಸ್ವೀಕಾರಗೊಂಡ ಅರ್ಜಿಗಳ ಇತ್ಯರ್ಥಕ್ಕೆ 15 ದಿನಗಳ ಗಡುವು ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ಜನಸ್ಪಂದನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಎರಡು ತಿಂಗಳ ಹಿಂದೆಯೇ ಈ ಕಾರ್ಯಕ್ರಮ ನಡೆಯಬೇಕಾಗಿತ್ತು. ಎಲ್ಲ ಜಿಲ್ಲಾ ಸಚಿವರಿಗೆ ಪತ್ರ ಬರೆದಿದ್ದೆ; ಜಿಲ್ಲೆಗಳಲ್ಲಿ ಜನತಾ ಸ್ಪಂದನ ಕಾರ್ಯಕ್ರಮ ಮಾಡಿ ನನಗೆ ವರದಿ ಸಲ್ಲಿಸಬೇಕು ಎಂದು ತಿಳಿಸಲಾಗಿತ್ತು. ಕೆಲವು ಜಿಲ್ಲೆಗಳಿಂದ ಮಾತ್ರ ವರದಿ ಬಂದಿದೆ. ಉಳಿದ ಜಿಲ್ಲೆಗಳಿಂದ ವರದಿ ಬಂದಿಲ್ಲ. ಸಹಿಸಲ್ಲ. ಜನತಾ ಸ್ಪಂದನ – ಅನೇಕ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಥಳದಲ್ಲಿ ಪರಿಹಾರ ನೀಡಲು ಸಾಧ್ಯವಾಗುತ್ತದೆ. ಕೆಲವು ಅರ್ಜಿಗಳು ಕೂಡಲೇ ತೀರ್ಮಾನ ಮಾಡಲು ಆಗುವುದಿಲ್ಲ. ಸಮಯ ಬೇಕಾಗುತ್ತದೆ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕು. ಇಲ್ಲವಾದರೆ ಬೆಳೆಯುತ್ತಲೇ ಹೋಗುತ್ತವೆ ಎಂದರು. ಕಟ್ಟುನಿಟ್ಟಿನ ಸೂಚನೆಯನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ್ದೇನೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಸ್ಪತ್ರೆ, ಪೊಲೀಸ್ ಠಾಣೆ, ಹಾಸ್ಟೆಲ್ಗಳು ಮತ್ತಿತರ ಸ್ಥಳಗಳಿಗೆ ಭೇಟಿ ನೀಡಬೇಕು. ಜನರ…
ಬೆಂಗಳೂರು: ಮಲೆನಾಡು ಗೆಳೆಯರ ಸಂಘದ ವತಿಯಿಂದ ಮಲೆನಾಡು ಮಹಿಳೆಯರ ಮಹಾಸಂಗಮ 2023 ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಭಾನುವಾರ ಯಶಸ್ವಿಯಾಗಿ ಕಾರ್ಯಕ್ರಮ ನೆರವೇರಿತು. ಬೆಂಗಳೂರಿನ ದಾಸರಹಳ್ಳಿಯ ಸೌಂದರ್ಯ ಕಾಲೇಜು ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮಲೆನಾಡು ಗೆಳೆಯರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದ ಅಂಗವಾಗಿ ಮಹಿಳೆಯರಿಗೋಸ್ಕರ ಥ್ರೋಬಾಲ್ ಪಂದ್ಯಾವಳಿಯನ್ನು ಆಯೋಜನೆ ಮಾಡಿದ್ದರು. ಸುಮಾರು 15 ಕ್ಕಿಂತ ಹೆಚ್ಚು ತಂಡಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು. ಈ ಕ್ರೀಡಾಕೂಟದಲ್ಲಿ ಮಲೆನಾಡು ಮಹಿಳೆಯರ ಸಂಘ ಮೊದಲನೆಯ ಬಹುಮಾನವನ್ನು ಪಡೆಯಿತು. ಅಲ್ಲದೆ ಮಹಿಳೆಯರಿಗಾಗಿ ಹಗ್ಗ ಜಗ್ಗಾಟ ಸ್ಪರ್ಧೆ, ಮಲೆನಾಡ ಸಾಂಸ್ಕೃತಿಕ ಕ್ರೀಡೆಯಾದ ಲಗೋರಿ, ಕಾಯಿಗೆ ಕಲ್ಲು ಹೊಡೆಯುವ ಸ್ಪರ್ಧೆ ಜೊತೆಗೆ ಮಲೆನಾಡ ಸುಗ್ಗಿ ಕುಣಿತ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಎಲ್ಲಾ ಕಾರ್ಯಕ್ರಮದಲ್ಲೂ ಮಹಿಳೆಯರು ಅತಿ ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ರು. ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದಂತ ಮಲೆನಾಡ ಸಾಧಕ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮ ಯಶಸ್ವಿಯಾಗೋದಕ್ಕೆ ಹಲವು ಗಣ್ಯರು ಕೂಡ…
ಬೆಂಗಳೂರು:- ಹೃದಯಾಘಾತದಿಂದ ಕಂಟ್ರಾಕ್ಟರ್ಸ್ ಅಸೋಸಿಯೇಷನ್ನ ಉಪಾಧ್ಯಕ್ಷ ಅಂಬಿಕಾಪತಿ ಅವರು ನಿಧನ ಹೊಂದಿದ್ದಾರೆ. ಐಟಿ ದಾಳಿಗೆ ಒಳಗಾದ ಬಳಿಕ ಸ್ವಲ್ಪ ಖಿನ್ನರಾಗಿದ್ದ ಅಂಬಿಕಾಪತಿ ಅವರು ಅದರ ಜತೆಗೆ ವಯೋಸಹಜ ಆರೋಗ್ಯ ಸಮಸ್ಯೆಗಳನ್ನೂ ಹೊಂದಿದ್ದರು. ಕಾವಲ್ ಭೈರಸಂದ್ರದಲ್ಲಿರುವ ಮನೆಯಲ್ಲಿ ಅವರು ಹೃದಯಾಘಾತಕ್ಕೆ ಒಳಗಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರು ಸಂಜೆ 6.40ರ ಹೊತ್ತಿಗೆ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅಕ್ಟೋಬರ್ 13ರಂದು ಮಾನ್ಯತಾ ಟೆಕ್ ಪಾರ್ಕ್ನ ಅಂಬಿಕಾಪತಿ ಅವರ ಮನೆ ಮತ್ತು ಬೆಂಗಳೂರಿನ ಆರ್ಟಿ ನಗರ ಸಮೀಪದ ಸುಲ್ತಾನ್ ಪಾಳ್ಯದಲ್ಲಿರುವ ಆತ್ಮಾನಂದ ಕಾಲೊನಿಯ ಅಂಬಿಕಾಪತಿ ಪುತ್ರ ಪ್ರದೀಪ್ ಅವರ ಮನೆಗೆ ದಾಳಿ ಮಾಡಲಾಗಿತ್ತು. ಪ್ರದೀಪ್ ಅವರ ಮನೆಯಲ್ಲಿ 500 ರೂ.ಯನ್ನು 22 ಬಾಕ್ಸ್ಗಳಲ್ಲಿ ಜೋಡಿಸಿಟ್ಟ ಸ್ಥಿತಿಯಲ್ಲಿ 42 ಕೋಟಿ ರೂ. ಪತ್ತೆಯಾಗಿತ್ತು. ಇದು ರಾಜ್ಯದ ಕಾಂಗ್ರೆಸ್ ನಾಯಕರಿಗೆ ಸೇರಿದ ಹಣ ಎಂದು ಆರೋಪ ಮಾಡಲಾಗಿತ್ತು. ಗುತ್ತಿಗೆದಾರರಿಗೆ ಬಿಡುಗಡೆ ಮಾಡಿದ ಹಣದಲ್ಲಿ ಪಡೆದ ಕಮಿಷನ್ ಹಣ ಇದಾಗಿದ್ದು, ಅದನ್ನು ತೆಲಂಗಾಣ ಚುನಾವಣೆಯಲ್ಲಿ…
ಮಸಾಲೆಯುಕ್ತ ಮೊಟ್ಟೆ ಮೆಣಸಿನಕಾಯಿ ಬೇಯಿಸಿದ ಮೊಟ್ಟೆಗಳೊಂದಿಗೆ ನಾವು ಸುಲಭವಾಗಿ ತಯಾರಿಸಬಹುದಾದ ರುಚಿಕರವಾದ ಪಾಕವಿಧಾನಗಳಲ್ಲಿ ಒಂದಾಗಿದೆ. ಕೆಳಗೆ ಹೇಳಿದಂತೆ ಮಾಡುವ ಈ ಮೊಟ್ಟೆಯ ಮಸಾಲೆ ತುಂಬಾ ರುಚಿಕರವಾಗಿರುತ್ತದೆ. ಈ ರುಚಿಕರವಾದ ಮಸಾಲೆಯುಕ್ತ ಮೊಟ್ಟೆಯ ಪಲ್ಯವನ್ನು ಹೇಗೆ ತಯಾರಿಸುವುದು? ನಾವೀಗ ತಯಾರಿಕೆಗೆ ಬೇಕಾಗುವ ಪದಾರ್ಥಗಳ ಬಗ್ಗೆ ಕಲಿಯೋಣ. ಮಸಾಲೆಯುಕ್ತ ಮೊಟ್ಟೆ ಮೆಣಸಿನ ಪುಡಿ ತಯಾರಿಸಲು ಬೇಕಾಗುವ ಪದಾರ್ಥಗಳು. ಎಣ್ಣೆ- 1/2 ಕಪ್, ಬೇಯಿಸಿದ ಮೊಟ್ಟೆ- 4, ಸಣ್ಣಗೆ ಹೆಚ್ಚಿದ ಹಸಿಮೆಣಸಿನಕಾಯಿ- 2, ಉಪ್ಪು- ರುಚಿಗೆ ತಕ್ಕಷ್ಟು, ಅರಿಶಿನ ಪುಡಿ- 1/2 ಚಮಚ, ಜೀರಿಗೆ- 1/2 ಚಮಚ, ಕೊತ್ತಂಬರಿ ಸೊಪ್ಪು- 1/2 ಚಮಚ, ಕೊತ್ತಂಬರಿ ಸೊಪ್ಪು- 1/2 ಚಮಚ, ಉಪ್ಪು- ರುಚಿಗೆ ತಕ್ಕಷ್ಟು, ಉಪ್ಪು- ರುಚಿಗೆ ತಕ್ಕಷ್ಟು. ಮಸಾಲಾ ಪುಡಿ ಮಾಡಲು ಬೇಕಾಗುವ ಸಾಮಾಗ್ರಿಗಳು.. ಕೊತ್ತಂಬರಿ ಸೊಪ್ಪು – 2 ಚಮಚ, ದಾಲ್ಚಿನ್ನಿ – ಒಂದು ಇಂಚು ತುಂಡು, ಏಲಕ್ಕಿ – 4, ಸೋಂಪು ಹೂವು – 1, ಲವಂಗ – 6, ಬೆಳ್ಳುಳ್ಳಿ ಎಸಳು…
ತೆಲುಗಿನ ಯುವ ನಟ ಸುಧೀರ್ ಬಾಬು ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಹರೋಮ್ ಹರ. ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಟೀಸರ್ ನಾಳೆ ಪಂಚ ಭಾಷೆಯಲ್ಲಿ ಅನಾವರಣಗೊಂಡಿದೆ. ತೆಲುಗು, ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಹರೋಮ್ ಹರ ಟೀಸರ್ ಬಿಡುಗಡೆಗೆಯಾಗಿದ್ದು, ಈ ಐದು ಭಾಷೆಯ ಸೂಪರ್ ಸ್ಟಾರ್ಸ್ ಟೀಸರ್ ರಿಲೀಸ್ ಮಾಡಡಿದ್ದಾರೆ. ತೆಲುಗಿನಲ್ಲಿ ಪ್ರಭಾಸ್, ಕನ್ನಡದಲ್ಲಿ ಕಿಚ್ಚ ಸುದೀಪ್, ಮಲಯಾಳಂನಲ್ಲಿ ಮಮ್ಮುಟ್ಟಿ, ತಮಿಳಿನಲ್ಲಿ ವಿಜಯ್ ಸೇತುಪತಿ ಹಾಗೂ ಹಿಂದೆ ಭಾಷೆಯಲ್ಲಿ ಟೈಗರ್ ಶ್ರಾಫ್ ಸುಧೀರ್ ಬಾಬು ಸಿನಿಮಾದ ಝಲಕ್ ರಿವೀಲ್ ಮಾಡಿದ್ದಾರೆ. ಸುಧೀರ್ ಬಾಬು ನಾಯಕನಾಗಿ ನಟಿಸುತ್ತಿದ್ದು, ಅವರಿಗೆ ಜೋಡಿಯಾಗಿ ಮಾಳವಿಕ ಶರ್ಮಾ ಸಾಥ್ ಕೊಟ್ಟಿದ್ದಾರೆ. ಪ್ರಮುಖ ಪಾತ್ರದಲ್ಲಿ ಸುನಿಲ್, ವಿಲನ್ ಆಗಿ ಕನ್ನಡದ ನಟ ಅರ್ಜುನ್ ಗೌಡ ತೊಡೆತಟ್ಟಿದ್ದಾರೆ. ಜೆ.ಪಿ.ಅಕ್ಷರಗೌಡ, ಲಕ್ಕಿ ಲಕ್ಷ್ಮಣ್, ರವಿಕಾಳೆ ತಾರಾಬಳಗದಲ್ಲಿದ್ದಾರೆ. ಹರೋಮ್ ಹರ, ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕೊನೆ ಹಂತದ ಶೂಟಿಂಗ್ ನಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. 1989ರಲ್ಲಿ…
ಬೆಂಗಳೂರು:- ಮಧು ಬಂಗಾರಪ್ಪ ಜಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಎಂಬ ಖಾತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪೋಸ್ಟ್ ಮಾಡಲಾಗಿದೆ. ಅಲ್ಲದೆ, ಸಾವಿರಾರು ಕೋಟಿ ಹಗರಣ ನಡೆಸಿದ್ದನ್ನು ಮುಂದಿಟ್ಟುಕೊಂಡು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಅಣಕಿಸಿ ಪೋಸ್ಟ್ ಮಾಡಲಾಗಿದೆ. ಫೇಸ್ಬುಕ್ ಗ್ರೂಪ್ ಡಿಪಿಯಲ್ಲಿ ಮಧು ಬಂಗಾರಪ್ಪ ಪೋಟೋ ಇದ್ದು, 58 ಸಾವಿರ ಫಾಲೋವರ್ಗಳಿದ್ದಾರೆ. ಈ ಪೇಸ್ಬುಕ್ ಗ್ರೂಪ್ ಅನ್ನು ಕುಂದಾಪುರ ವಿರಾಟ ಹೆಸರಿನ ಪೇಸ್ಬುಕ್ ಬಳಕೆದಾರರು ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಅಣಕಿಸುವ ಪೋಸ್ಟ್ನಲ್ಲಿ “ಯೇ ಹೈ ಅಚ್ಚೇ ದಿನ್, ದೇಶವನ್ನು ನುಂಗಿ ನೀರು ಕುಡಿದಿದ್ದ ಕಾಂಗ್ರೇಸ್. ಬಹಳ ಜನ ಅಚ್ಚೇ ದಿನ್ ಎಲ್ಲಿ ಅಂತ ಕೇಳಿದ್ದರು. ಇದು ಅಚ್ಚೇ ದಿನ್ ನೋಡಿ ಖುಷಿ ಪಡಿ ಎಂದು ಬರೆದುಕೊಳ್ಳಲಾಗಿದೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ಜಿ.ಡಿ ಮಂಜುನಾಥ್ ಎಂಬವರು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು…
ಮಂಡ್ಯ:- ಬಿಜೆಪಿ ನಾಯಕರು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಮರೆತೇ ಬಿಟ್ಟರಾ? ಹೀಗೊಂದು ಪ್ರಶ್ನೆ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಬಿಜೆಪಿ ನಾಯಕರು ಇತ್ತೀಚೆಗಿನ ದಿನಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಜತೆಗೆ ರಾಜಕೀಯಕ್ಕೆ ಸಂಬಂಧಿಸಿದಂತೆ ಯಾವುದೇ ಹೇಳಿಕೆಗಳನ್ನು ನೀಡುತ್ತಿಲ್ಲ. ಇದೆಲ್ಲವನ್ನು ಗಮನಿಸಿದರೆ ಚುನಾವಣೆ ಮುನ್ನವೇ ಬೇಡವಾದರಾ? ಎಂಬ ಸಂಶಯ ಕಾಡಲಾರಂಭಿಸಿದೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡ ಸುಮಲತಾ ಅವರಿಗೆ ಯಾವುದೇ ರಾಜಕೀಯ ಪಕ್ಷ ಅನಿವಾರ್ಯವಲ್ಲ. ಆದರೆ ಕಳೆದ ಚುನಾವಣೆಗೂ ಈ ಬಾರಿ ನಡೆಯಲಿರುವ ಚುನಾವಣೆಗೆ ಬಹಳಷ್ಟು ವ್ಯತ್ಯಾಸಗಳಿರುವುದರಿಂದ ಮತ್ತು ಸದ್ಯ ಅವರನ್ನು ಮತದಾರರು ಕೂಡ ರಾಜಕಾರಣಿಯನ್ನಾಗಿಯೇ ನೋಡುವುದರಿಂದ, ಹಿಂದಿನ ಅನುಕಂಪ ಈ ಬಾರಿ ದೊರೆಯುವುದು ದೂರದ ಮಾತಾಗಿದೆ. ಜೆಡಿಎಸ್ ನೊಂದಿಗಿನ ಮೈತ್ರಿ ಬಳಿಕದ ಬೆಳವಣಿಗೆಗಳು ಸುಮಲತಾ ಅವರಿಗೆ ಪೂರಕನಾ? ಮಾರಕನಾ? ಎಂಬುದು ಈಗ ಎಲ್ಲರ ಮುಂದಿರುವ ಕುತೂಹಲವಾಗಿದೆ. ಈ ಹಿಂದೆಯೇ ನಾನು ರಾಜಕೀಯ ಬಿಡುತ್ತೇನೆ ಆದರೆ ಸ್ವಾಭಿಮಾನ ಬಿಡಲ್ಲ. ನಾನು ಮಂಡ್ಯದವಳು ಮಂಡ್ಯದಲ್ಲಿಯೇ ಇರುತ್ತೇನೆ. ಇಲ್ಲಿಯೇ…
ಗದಗ:- ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ CBI ತನಿಖೆ ವಾಪಸ್ ವಿಚಾರವಾಗಿ ಕಾನೂನು ಸಚಿವ ಎಚ್ ಕೆ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಡಿಸಿಎಂ ಡಿಕೆಶಿ ಕೇಸ್ ವಿಚಾರದ ಸಂಪುಟ ತೆಗೆದುಕೊಂಡ ನಿರ್ಧಾರ ಸರಿಯಾಗಿದೆ. ಹಿಂದಿನ ಸರ್ಕಾರ ಕಾನೂನು ಬಾಹಿರವಾಗಿ ತನಿಖೆಗೆ ಕೊಟ್ಟಿತ್ತು. ಕಾನೂನಿನ ಪ್ರಕಾರ ಸರಿಯಾಗಿ ಇರಲಿಲ್ಲ. ಸಂಪುಟ ನಿರ್ಣಯದ ಆದೇಶ ಹೊರಡಿಸಿದ ನಂತರ ಸೂಕ್ತ ಮಾಹಿತಿ ಸಿಗಲಿದೆ.. ಸ್ಪೀಕರ ಅನುಮತಿ ಇರಲಿಲ್ಲ, ಅಡ್ವೆಕೆಟ್ ಜನರಲ್ ಅಭಿಪ್ರಾಯದಂತಿಲ್ಲ.ಲಿಖಿತ ಆದೇಶ ಇರಲಿಲ್ಲ.. ಇವೆಲ್ಲ ಕಾನೂನು ಬಾಹೀರ ಹೆಜ್ಜೆಗಳು. ಹೀಗಾಗಿ ಆಗಿನ ಸರ್ಕಾರದ ನಿರ್ಣಯವನ್ನ ಸಂಪುಟ ತಿರಸ್ಕಾರ ಮಾಡಿದೆ.ಕೋರ್ಟ್ ನಲ್ಲಿ ಇರುವಾಗ ಮಾಡ್ಬಾರ್ದು ಅಂತಾ ನಿರ್ಬಂಧ ಇಲ್ಲ. ಸಚಿವ ಸಂಪುಟ ತನ್ನ ವ್ಯಾಪ್ತಿಯಲ್ಲಿ ಏನ್ ನಿರ್ಣಯ ಮಾಡ್ಬಹುದಿತ್ತೊ ಆ ನಿರ್ಣಯ ಮಾಡಿದೆ ಎಂದರು ಲೋಕಸಭೆ ಚುನಾವಣೆಗೆ ಹಿರಿಯ ಸಚಿವರನ್ನ ಕಣಕ್ಕಿಳಿಸುವ ವಿಚಾರವಾಗಿ ಮಾತನಾಡಿ, ನನ್ನ ಹೆಸರು ಪ್ರಸ್ತಾಪವಾಗಿರುವ ವಿಚಾರ ಗೊತ್ತಿಲ್ಲ.. ಹೈಕಮಾಂಡ್ ನಿರ್ಣಯವನ್ನ ಎಲ್ಲ ಕಾರ್ಯಕರ್ತರು ಕೇಳಬೇಕಾಗುತ್ತದೆ.…