ಶಿವಮೊಗ್ಗ: ಆರ್ಥಿಕ ಸ್ಥಿತಿಗತಿಗೆ ಸರಿ ಹೋಗುವುದಾದರೆ ಆ ವರದಿ ಬರಲಿ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದ ಒಕ್ಕಲಿಗರ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಾತಿ ಜನಗಣತಿ ವರದಿ ಅವೈಜ್ಞಾನಿಕವಾಗಿದ್ದು, ಈ ವರದಿಯನ್ನು ಮನೆ ಬಾಗಿಲಿಗೆ ಹೋಗಿ ತಯಾರಿಸಲಾಗಿಲ್ಲ. ಬದಲಿಗೆ ಯಾವುದೋ ಕಂಪನಿಗೆ ಕೊಟ್ಟು ಏನೇನೋ ಮಾಡಿ ಆ ವರದಿ ತಯಾರು ಮಾಡಿದ್ದಾರೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದಾರೆ. ಜಾತಿ ಜನಗಣತಿ ವರದಿ ಬಗ್ಗೆ ಬೆಂಗಳೂರಿನಲ್ಲಿ ಒಕ್ಕಲಿಗರ ಸಂಘದ ವತಿಯಿಂದ ಒಕ್ಕಲಿಗ ಶಾಸಕರ ಸಭೆ ಕರೆದಿದ್ದರು. ಈ ಸಭೆಯಲ್ಲಿ ನಾನು ಸಹ ಭಾಗವಹಿಸಿದ್ದೆ. ಒಕ್ಕಲಿಗ ಸಮಾಜಕ್ಕೆ ಇನ್ನೊಂದು ವರ್ಗಕ್ಕೆ ಏನು ಸಿಗಬಾರದು ಎಂಬ ಚಿಂತನೆ ಇಲ್ಲ ಎಂದರು. ಜಾತಿ ಜನಗಣತಿ ವರದಿ ತಯಾರಾಗಿ 8 ವರ್ಷ ಕಳೆದಿದೆ. 2017 ರ ಕೊನೆಯಲ್ಲಿ ಈ ವರದಿ ತಯಾರಾಗಿದೆ. https://ainlivenews.com/upi-id-with-no-transaction-for-1-year-upi-number-de-activate-reason/ ಅಂದಿನ ಮುಖ್ಯಮಂತ್ರಿ ಆ ವರದಿಯನ್ನು ಸ್ವೀಕಾರ ಮಾಡಿರಲಿಲ್ಲ. ಇವತ್ತು ಅದೇ ಮುಖ್ಯಮಂತ್ರಿ ಸ್ವೀಕಾರ…
Author: AIN Author
ಅಥಣಿ: ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವೈರ್ ತುಳಿದ ತಾಯಿ ಹಾಗೂ ಮಗು ಸಾವನ್ನಪ್ಪಿದ್ದ ಘಟನೆ ಮಾಸುವ ಮುನ್ನವೇ ಅಥಣಿಯಲ್ಲಿ ತಂದೆ ಮತ್ತು ಮಗನಿಗೆ ವಿದ್ಯುತ್ ತಗುಲಿ ಸ್ಥಳದಲ್ಲಿ ಇಬ್ಬರು ಮೃತಪಟ್ಟಿರುವ ಧಾರಣ ಘಟನೆ ರವಿವಾರ ಸಂಜೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಮಲ್ಲಿಕಾರ್ಜುನ ಸದಾಶಿವ ಪೂಜಾರಿ (32) ಹಾಗೂ ಪ್ರೀತಮ ಮಲ್ಲಿಕಾರ್ಜುನ ಪೂಜಾರಿ (7) ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಧ್ಯಾಹ್ನ ಮೃತ ಮಲ್ಲಿಕಾರ್ಜುನ ತೋಟದಲ್ಲಿ ಬೋರ್ವೆಲ್ ಮೋಟಾರ್ ಪ್ರಾರಂಭಿಸಿ ಬೇರೆ ಕಡೆ ನೀರು ತಿರುವಿಗೆ ( ವಾಲ್ ಟರ್ನ್) ಮುಂದಾಗಿದ್ದಾರೆ, ಆದರೆ ಬೋರ್ವೆಲ್ ಹತ್ತಿರ ವಯರ್ ತುಂಡಾಗಿದ್ದು ಗಮನಿಸದೇ ವಿದ್ಯುತ್ ಕೈಗೆ ತಗೋಲಿ ಸಾವು ಸಂಭವಿಸಿದೆ, ಅಪ್ಪನನ್ನು ಉಳಿಸಲು ಹೋಗಿ ಮಗ ಪ್ರೀತಮ್ ಕೂಡ ಸ್ಥಳದಲ್ಲಿ ಮೃತಪಟ್ಟು ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ :- ಜಿಲ್ಲೆ ಅಫಜಲಪುರ ತಾಲೂಕಿನ ಪುಣ್ಯ ಕ್ಷೇತ್ರ ಗಾಣಗಾಪುರದಲ್ಲಿಂದು ಶ್ರೀ ಗುರುದತ್ತನ ಸನ್ನಿಧಿಯಲ್ಲಿ ಪಲ್ಲಕ್ಕಿ ಉತ್ಸವ ನಡೆಯಲಿದೆ. ಪ್ರತಿ ವರ್ಷದ ಸಂಪ್ರದಾಯದಂತೆ ಕಾರ್ತಿಕ ಮಾಸದಲ್ಲಿ ಬರುವ ಗೌರಿ ಹುಣ್ಣಿಮೆಯಂದು ಉತ್ಸವ ನಡೆಯುತ್ತೆ.. ಆಂಧ್ರ ತೆಲಂಗಾಣ ಮಹಾರಾಷ್ಟ್ರ ಸೇರಿದಂತೆ ಇತರೇ ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಬರ್ತಾರೆ..ಪಲ್ಲಕ್ಕಿ ಉತ್ಸವದ ನಂತ್ರ ಮಧ್ಯಾನ ಸಂಗಮ ನದಿ ತೀರದಲ್ಲಿ ಸಾವಿರಾರು ಭಕ್ತರು ಸೇರಿ ಬುತ್ತಿ ಊಟ ಮಾಡುವುದು ಉತ್ಸವದ ಮತ್ತೊಂದು ವಿಶೇಷ..
ತುಮಕೂರು: ವಿಪಕ್ಷ ನಾಯಕ ಆರ್.ಅಶೋಕ್ ತುಮಕೂರು ಜಿಲ್ಲೆಯಲ್ಲಿ ಬರ ವೀಕ್ಷಣೆ ಮಾಡಿದ್ದಾರೆ..ಶಿರಾದ ರೈತರ ಜಮೀನಿಗೆ ತೆರಳಿ ಮಳೆ ಇಲ್ಲದೇ ಒಣಗಿರೋ ಬೆಳೆಯನ್ನ ಪರಿಶೀಲಿಸಿ,ರೈತರೊಟ್ಟಿಗೆ ಸಮಾಲೋಚನೆ ನಡೆಸಿದ್ದಾರೆ..ಇದೇ ವೇಳೆ ಬರ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ದ ಅಶೋಕ್ ಕಿಡಿಕಾರಿದ್ದಾರೆ.. ತುಮಕೂರು ಜಿಲ್ಲೆಯಲ್ಲಿ ಬಿಜೆಪಿ ಬರ ಅಧ್ಯಯನ ನಡೆಸಿದೆ..ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಶಾಸಕ ಜ್ಯೋತಿಗಣೇಶ್, ಎಂಎಲ್ಸಿ ಚಿದಾನಂದ್ ಸೇರಿ ಸ್ಥಳೀಯರ ಮುಖಂಡರು ಬರ ವೀಕ್ಷಣೆ ನಡೆಸಿದ್ದಾರೆ.. ಶಿರಾ ತಾಲ್ಲೂಕಿನ ದೇವರಹಳ್ಳಿ ಗ್ರಾಮದ ರೈತ ಪಾಂಡುರಂಗಪ್ಪ ಎನ್ನುವರ ಜಮೀನಿಗೆ ಭೇಟಿ ನೀಡಿದ ತಂಡ ರೈತ ಬೆಳೆದಿದ್ದ ಜೋಳ, ಹುರುಳಿ ಬೆಳೆಯನ್ನ ವೀಕ್ಷಿಸಿದ್ದಾರೆ..3 ಎಕರೆ 30 ಗುಂಟೆಯಲ್ಲಿ ಜೋಳ,ಹುರುಳಿ ಬೆಳೆದಿದ್ದ ರೈತ ಪಾಂಡುರಂಗಪ್ಪ ಆನೆ ಕಾಲು ಕಾಯಿಲೆಗೆ ತುತ್ತಾಗಿದ್ದಾರೆ..ಕಾಂಗ್ರೆಸ್ ನವರು ಯಾರು ಕೇಳಿಲ್ಲ,ಮೂರು ವರ್ಷದ ಹಿಂದೆ ಬೆಳೆ ವಿಮೆ ಮಾಡಿದ್ದೆ.ಹಣ ಬರಲಿಲ್ಲ, ಈಗ ಕಾಲು ಸರಿಯಿಲ್ಲ ಹಾಗಾಗಿ ಬೆಳೆ ವಿಮೆ ಕಟ್ಟಲಿಲ್ಲ.50 ಸಾವಿರ ಹಣ…
ತಮಗೆ ಪಿರಿಯಡ್ಸ್ ಆಗಿಲ್ಲ, ಗರ್ಭಿಣಿಯೇ (Pregnant) ಎಂದು ತಿಳಿದುಕೊಳ್ಳುವುದಕ್ಕಾಗಿ ರಕ್ತ ಪರೀಕ್ಷೆ ಮಾಡಿಸಿದ್ದೇನೆ. ನಾನು ಪ್ರಗ್ನೆಂಟ್ ಆಗಿದ್ದೇನೆ ದಯವಿಟ್ಟು ಮನೆಯಿಂದ ನನ್ನ ಆಚೆ ಕಳುಹಿಸಿ ಎಂದು ಹಿಂದಿ ಬಿಗ್ ಬಾಸ್ (Bigg Boss) ಸ್ಪರ್ಧಿ, ನಟಿ ಅಂಕಿತಾ ಲೋಖಂಡೆ (Ankita Lokhande) ಹೇಳಿಕೊಂಡಿದ್ದರು. ಅಂಕಿತಾ ಹೇಳಿಕೆ ಭಾರೀ ಚರ್ಚೆ ಹುಟ್ಟು ಹಾಕಿತ್ತು. ಅಂಕಿತಾ ಲೋಖಂಡೆ ಕೋರಿಕೆಯಂತೆ ಬಿಗ್ ಬಾಸ್ ಟೀಮ್ ಪ್ರೆಗ್ನೆಸಿ ಟೆಸ್ಟ್ ಮಾಡಿಸಿತ್ತು. ಇದೀಗ ಟೆಸ್ಟ್ ರಿಸೆಲ್ಟ್ ಬಂದಿದ್ದು, ನೆಗೆಟಿವ್ ರಿಸೆಲ್ಟ್ ಬಂದಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಅಂಕಿತಾ ಇನ್ನಷ್ಟು ದಿನ ಅದೇ ಮನೆಯಲ್ಲಿ ಉಳಿದುಕೊಳ್ಳಲಿದ್ದಾರೆ. ಸದ್ಯ ಪ್ರಸಾರವಾಗುತ್ತಿರುವ ಸೀಸನ್ ನಲ್ಲಿ ನಟಿ ಅಂಕಿತಾ ಲೋಖಂಡೆ ಮತ್ತು ಪತಿ ವಿಕ್ಕಿ ಜೈನ್ (Vicky Jain)ಇಬ್ಬರೂ ಬಿಗ್ ಬಾಸ್ ಮನೆಯೊಳಗೆ ಇದ್ದಾರೆ. ಮನೆಗೆ ಹೋಗುವ ಮುನ್ನವೇ ಅಂಕಿತಾ ಗರ್ಭಿಣಿಯಾಗಿದ್ದು, ಆ ಕುರಿತು ಅವರಿಗೆ ಮಾಹಿತಿ ಇರಲಿಲ್ಲ ಎಂದು ಹೇಳಲಾಗಿತ್ತು. ಮತ್ತು ತಮ್ಮನ್ನು ಹೊರಗೆ ಕಳುಹಿಸುವಂತೆ ಅವರು ಕೇಳಿಕೊಂಡಿದ್ದರು.
ಕೋಲಾರ :- 7 ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ವೇಮಗಲ್ ಪಟ್ಟಣ ಪಂಚಾಯಿತಿಯಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಸಿಎಸ್ ವೆಂಕಟೇಶ್ ಅವ್ರು ತಿಳಿಸಿದ್ರು. ಕೋಲಾರ ತಾಲೂಕಿನ ವೇಮಗಲ್ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ರು, ಗಲ್ಲಿ ಗಲ್ಲಿಯಲ್ಲಿ ಕನ್ನಡ ಬಾವುಟ ಕನ್ನಡದ ದೀಪಾಲಂಕಾರಗಳು ರಾರಾಜಿಸುತ್ತಿವೆ ವಿಶೇಷವಾಗಿ 7 ನೇ ವರ್ಷದ ಕನ್ನಡದ ಹಬ್ಬವನ್ನು ಎಲ್ಲಾ ಸಂಘಟನೆಗಳ ಜೊತೆಗೆ ಹಬ್ಬದ ರೀತಿಯಲ್ಲಿ ರಾಜ್ಯೋತ್ಸವವನ್ನು ಆಚರಿಸುತ್ತಿದ್ದೆವೆ ಇದು ಒಂದು ವಿಶೇಷ ದಿನವಾಗಿದ್ದು ಸಂವಿಧಾನ ಸಮರ್ಪಣಾ ದಿನವಾಗಿದೆ ಇಂತಹ ದಿನ ಕನ್ನಡದ ಹಬ್ಬ ಮಾಡುತ್ತಿರುವುದಕ್ಕೆ ಬಹಳ ಸಂತೋಷವಾಗಿದೆ ಎಂದು ತಿಳಿಸಿದ್ರು. ಅಲ್ಲದೆ ಸಂಜೆ ರಸಮಂಜರಿ ಕಾರ್ಯಕ್ರಮವಿದ್ದು ಸಿನಿಮಾ ನಟರು ಆಗಮಿಸಲಿದ್ದಾರೆ ಎಂದು ಹೇಳಿದ್ರು., ಕರ್ನಾಟಕ ಹಿತ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಬಾಬಣ್ಣ ( ನಾರಾಯಣಸ್ವಾಮಿ), ವಿ.ಪಿ ಪ್ರಕಾಶ್, ಕಾರು ಮಣಿ,ಯುವ ಮುಖಂಡ ವೆಂಕಟೇಶ್, ವಕೀಲ ನಾಗೇಶ್, ವೆಂಕಟೇಶ್ ಗೌಡ, ತರಕಾರಿ ಆರ್.ಎಂ…
ರಾಯಚೂರು: ಆಂಧ್ರಪ್ರದೇಶದ ವಿಜಯವಾಡದಲ್ಲಿ ಡಿ.1 ರಿಂದ 23ರ ವರೆಗೆ ನಡೆಯಲಿರುವ ಅಂಡರ್-16 ಬಿಸಿಸಿಐ ವಿಜಯ್ ಮರ್ಚಂಟ್ ಟ್ರೋಫಿ 2022-23ರ (VIjay Merchant Trophy) ಉಪನಾಯಕನಾಗಿ ರಾಯಚೂರಿನ (Raichur) ಯುವಕ ಅನಿಕೇತ್ ರೆಡ್ಡಿ ಆಯ್ಕೆಯಾಗಿದ್ದಾರೆ. ಈ ತಂಡಕ್ಕೆ ನಾಯಕನಾಗಿ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಪುತ್ರ ಅನ್ವಯ್ ದ್ರಾವಿಡ್ ಆಯ್ಕೆಯಾಗಿದ್ದಾರೆ. ಅನಿಕೇತ್ ರೆಡ್ಡಿಯವರು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ವಿಕ್ರಂ ಸಿಂಹರೆಡ್ಡಿ ಅವರ ಪುತ್ರರಾಗಿದ್ದಾರೆ. ವಿಜಯ್ ಮರ್ಚಂಟ್ ಟ್ರೋಫಿ ಪಂದ್ಯಾವಳಿಗಳಿಗೆ ಆಯ್ಕೆಯಾಗಿರುವುದಕ್ಕೆ ಕುಟುಂಬಸ್ಥರು ಹಾಗೂ ಜಿಲ್ಲೆಯ ಕ್ರೀಡಾಪಟುಗಳು ಸಂತಸ ವ್ಯಕ್ತಪಡಿಸಿದ್ದಾರೆ ಅನಿಕೇತ್ ರೆಡ್ಡಿ ಎಲ್ಲಾ ಟೂರ್ನಮೆಂಟ್ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಇದರಿಂದಾಗಿ ಅವರು ಆಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಪ್ರದರ್ಶನ ನೀಡಲಿ ಎಂದು ಸ್ಥಳೀಯ ತರಬೇತಿದಾರರು ಹಾಗೂ ಆಟಗಾರರು ಶುಭಕೋರಿದ್ದಾರೆ.
ಬೆಂಗಳೂರು:- ನಗರದ ಅರಮನೆ ಮೈದಾನದಲ್ಲಿ ತುಳು ಕೂಟದ ವತಿಯಿಂದ ನಡೆದ ಬೆಂಗಳೂರು ಕಂಬಳ ನೋಡಲೇ ಸಿನಿ ದಿಗ್ಗಜರೇ ಆಗಮಿಸಿದರು. ಭಾನುವಾರ ರಾತ್ರಿ 2 ಗಂಟೆ ಸುಮಾರಿಗೆ ಮುಕ್ತಾಯಗೊಂಡಿದೆ. ನವೆಂಬರ್ 25ರ ಬೆಳಗ್ಗೆ 11 ಗಂಟೆಗೆ ಆರಂಭವಾದ ಕೋಣಗಳ ಓಟ ನವೆಂಬರ್ 26ರ ರಾತ್ರಿ 2 ಗಂಟೆಗೆ ಅಂತ್ಯಗೊಂಡಿದ್ದು, ಫಲಿತಾಂಶ ಪ್ರಕಟಗೊಂಡಿದೆ ಎರಡೂ ದಿನಗಳಲ್ಲಿ ಅರಮನೆ ಮೈದಾನದಲ್ಲಿ ಕಾಲಿಡಲೂ ಜಾಗವಿಲ್ಲದಂತೆ ಕಂಬಳ ಅಭಿಮಾನಿಗಳು ನೆರೆದಿದ್ದು ಈ ಮೂಲಕ ಹೊಸ ಚರಿತ್ರೆಯನ್ನೇ ಬರೆಯಲಾಗಿದೆ. 159ರ ಜೋಡಿ ಕೋಣಗಳು ಭಾಗವಹಿಸಿದ ಈ ಮಹಾ ಕೂಟದಲ್ಲಿ ಅತ್ಯಂತ ಪ್ರತಿಷ್ಠೆಯ ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ಅವರ ಸಿ ಕೋಣಗಳು ಪ್ರಥಮ ಬಹುಮಾನ ಪಡೆದರೆ ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ ಅವರ ಕೋಣಗಳು ದ್ವಿತೀಯ ಬಹುಮಾನ ಪಡೆದಿವೆ. ಶ್ರೀಕಾಂತ್ ಭಟ್ ಅವರ ಕೋಣಗಳನ್ನು ಬಂಬ್ರಾಣ ಬೈಲು ವಂದಿತ್ ಶೆಟ್ಟಿ ಅವರು ಓಡಿಸಿದ್ದಾರೆ. ಈ ಕೋಣಗಳು 9.51 ಸೆಕೆಂಡ್ನಲ್ಲಿ ಓಟವನ್ನು ಮುಗಿಸಿವೆ. ಇದು ಕೂಟ…
ಬೆಂಗಳೂರು: ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ ಪ್ರೀಕ್ವೆಲ್ನ ಫಸ್ಟ್ ಲುಕ್ ಇಂದು ಬಿಡುಗಡೆಯಾಗಲಿದೆ. ಮೊದಲ ಭಾಗದಂತೆಯೇ, ಎರಡನೇ ಭಾಗವನ್ನು ಸಹ ರಿಷಬ್ ಶೆಟ್ಟಿ ಬರೆದು ನಿರ್ದೇಶಿಸಲಿದ್ದಾರೆ, ಅವರು ಪ್ರಮುಖ ಪಾತ್ರದಲ್ಲಿ ನಟಿಸುವ ನಿರೀಕ್ಷೆಯಿದೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ನ ವಿಜಯ್ ಕಿರಂಗಂದೂರು ನಿರ್ಮಿಸಿರುವ ಈ ಸೀಕ್ವೆಲ್ ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್ನಲ್ಲಿ ಬಿಡುಗಡೆಯಾಗಲಿದೆ. ನಟ ರಿಷಬ್ ಶೆಟ್ಟಿ ಅವರ ಸಿನಿಪಯಣದ ದಿಕ್ಕನ್ನು ಬದಲಿಸಿದ ಸಿನಿಮಾ ಕಾಂತಾರ. ವಿಶ್ವವ್ಯಾಪಿ ಪ್ರೇಕ್ಷಕರ ಮನಗೆಲ್ಲುವುದರೊಂದಿಗೆ, ಬಾಕ್ಸ್ ಆಫೀಸ್ನಲ್ಲಿ ಕೋಟಿ ಕೋಟಿ ಹಣವನ್ನೂ ಬಾಚಿತ್ತು. ಇದೀಗ ಈ ಸಿನಿಮಾದ ಪ್ರೀಕ್ವೆಲ್ ತೆರೆಯ ಮೇಲೆ ಬರಲಿದ್ದು, ಪ್ರೇಕ್ಷಕರಲ್ಲಿ ಹೆಚ್ಚಿನ ನಿರೀಕ್ಷೆ ಹುಟ್ಟಿಸಿದೆ.
ತಿರುವನಂತಪುರಂ: ಆಸ್ಟ್ರೇಲಿಯಾ ವಿರುದ್ದ ಎರಡನೇ ಟಿ20 ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ಟೀಮ್ ಇಂಡಿಯಾ ಓಪನರ್ ಯಶಸ್ವಿ ಜೈಸ್ವಾಲ್ ಅವರು ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಪವರ್ಪ್ಲೇನಲ್ಲಿ ಅರ್ಧಶತಕ ಸಿಡಿಸಿದ ಮೂರನೇ ಬ್ಯಾಟ್ಸ್ಮನ್ ಸಾಧನೆಗೆ ಜೈಸ್ವಾಲ್ ಭಾಜನರಾಗಿದ್ದಾರೆ. ಭಾನುವಾರ ಇಲ್ಲಿನ ಗ್ರೀನ್ ಫೀಲ್ಡ್ ಇಂಟರ್ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆದಿದ್ದ ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ ತಂಡದ ಪರ ಇನಿಂಗ್ಸ್ ಆರಂಭಿಸಿದ ಯಶಸ್ವಿ ಜೈಸ್ವಾಲ್ ಮೊದಲ ಎಸೆತದಿಂದಲೇ ಸ್ಪೋಟಕ ಬ್ಯಾಟ್ ಮಾಡಿದರು. ಕೇವಲ 24 ಎಸೆತಗಳಲ್ಲಿ ಅರ್ಧಶತಕವನ್ನು ಪೂರ್ಣಗೊಳಿಸಿದ ಜೈಸ್ವಾಲ್, ಅಂತಿಮವಾಗಿ 25 ಎಸೆತಗಳಲ್ಲಿ 52 ರನ್ ಗಳಿಸಿ ನೇಥನ್ ಎಲ್ಲಿಸ್ಗೆ ವಿಕೆಟ್ ಒಪ್ಪಿಸಿದರು. ಅದರಲ್ಲಿಯೂ ವಿಶೇಷವಾಗಿ ಪಂದ್ಯದ ನಾಲ್ಕನೇ ಓವರ್ನಲ್ಲಿ ಶೇನ್ ಎಬಾಟ್ ಅವರ ಬೌಲಿಂಗ್ನಲ್ಲಿ 24 ರನ್ಗಳನ್ನು ಚಚ್ಚಿದ್ದರು. ಆ ಮೂಲಕ ಆಸ್ಟ್ರೇಲಿಯಾ ತಂಡದ ಎದುರು ಟಿ20ಐ ಪವರ್ಪ್ಲೇನಲ್ಲಿ ಭಾರತ ತಂಡ ಅತ್ಯಂತ ಗರಿಷ್ಠ ಮೊತ್ತವನ್ನು ದಾಖಲಿಸಲು ನೆರವು ನೀಡಿದ್ದರು. ಜೈಸ್ವಾಲ್ ಅವರ ಸ್ಪೋಟಕ…