Author: AIN Author

ಬೆಂಗಳೂರು: ತೆಲಂಗಾಣ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ  ಬಹುಮತ ಸಾಧಿಸುವ ಭರವಸೆ ಇರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. https://ainlivenews.com/laser-therapy-soukhy-robotic-ortho-care/ ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು ಕೈಗೊಳ್ಳಲು ತೆಳಂಗಾಣಕ್ಕೆ ತೆರಳುತ್ತಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು.

Read More

ತಮ್ಮ ಸಹಜ ಅಭಿನಯದಿಂದ ಅಭಿಮಾನಿಗಳ ಮನ ಗೆದ್ದಿರುವ ಕೋಮಲ್ ಕುಮಾರ್ (Komal) ಅಭಿನಯದ  ‘ಕೋಣ’ (Kona) ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್ (Poster) ಇತ್ತಿಚೆಗೆ ಅನಾವರಣವಾಯಿತು. ಈ ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಲಿದೆ. ಡಾರ್ಕ್ ಕಾಮಿಡಿ ಜಾನರ್ ಇರುವ  ಈ ಚಿತ್ರವನ್ನು ಈ ಹಿಂದೆ ಜಗ್ಗೇಶ್ ಅವರು ಅಭಿನಯಿಸಿದ್ದ 8 ಎಂಎಂ  ಚಿತ್ರವನ್ನು ನಿರ್ದೇಶಿಸಿದ್ದ  ಎಸ್ ಹರಿಕೃಷ್ಣ (S. Harikrishna) ನಿರ್ದೇಶಿಸುತ್ತಿದ್ದಾರೆ. ಇದೊಂದು ನೈಜ ಘಟನೆ ಆಧಾರಿತ  ಚಿತ್ರವಾಗಿದೆ. ಕೋಮಲ್ ಕುಮಾರ್ ಅವರು ಈವರೆಗೂ ಅಭಿನಯಿಸಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಡದಲ್ಲಿ ಆನೆ, ನಾಯಿ, ಕೋತಿ ಮೊದಲಾದ ಪ್ರಾಣಿಗಳನ್ನು ಬಳಸಿಕೊಂಡು ಸಾಕಷ್ಟು ಬಂದಿದ್ದು ಈ ಚಿತ್ರದಲ್ಲಿ ‘ಕೋಣ’(ಪ್ರಾಣಿ) ಮುಖ್ಯ ಪಾತ್ರವಾಗಿರುವುದು ವಿಶೇಷವಾಗಿರಲಿದೆ. ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಹರಿಕೃಷ್ಣ ಎಸ್ ತಿಳಿಸಿದ್ದಾರೆ. ತೇಜ್ವಿನ್ ಪ್ರೊಡಕ್ಷನ್ ಲಾಂಛನದಲ್ಲಿ ವಿನೋದ್ ಕುಮಾರ್ ಹಾಗೂ ಸೆಲ್ವನ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ, ವಿನೋದ್ ಕುಮಾರ್ ಬಿ ಛಾಯಾಗ್ರಹಣ…

Read More

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್​ ನಡುವೆ ಪೋಸ್ಟರ್ ವಾರ್ ಮತ್ತೆ ಜೋರಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಒಂದನ್ನು ರಿಲೀಸ್ ಮಾಡಿರುವ ಬಿಜೆಪಿ, ಡಿ.ಕೆ. ಶಿವಕುಮಾರ್​ ಅವರನ್ನು ಜೈಲಿನಲ್ಲಿರುವಂತೆ ಬಿಂಬಿಸಿದೆ. ಈ ಪೋಸ್ಟ್​ಗೆ ಒಂದು ಆಕರ್ಷಕ ಟೈಟಲ್ ನೀಡಲಾಗಿದೆ. ಡಿ.ಕೆ. ಶಿವಕುಮಾರ್ ಅವರ ಕೊರಳಿಗೆ ‘ಸ್ವಯಂ ಘೋಷಿತ ನಿರಪರಾಧಿ’ ಎಂಬ ಬೋರ್ಡ್​ ಅನ್ನು ಹಾಕಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವ ಸಂಪುಟದ ಸದಸ್ಯರು ಹೊರಗಡೆ ಕುಳಿತಿರುವ ಪೋಸ್ಟರ್ ಹಂಚಿಕೊಂಡಿದೆ. ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಇರುವ ಕಾಂಗ್ರೆಸ್ ಸರ್ಕಾರ ಎಂದು ಬರೆದು ಕಾಂಗ್ರೆಸ್​ ಸರ್ಕಾರವನ್ನು ಲೇವಡಿ ಮಾಡಿದೆ. ಕಾಂಗ್ರೆಸ್‌ನ ಭ್ರಷ್ಟಾಚಾರ, ಗೂಂಡಾಗಳ ಮಹಾಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ. ಭ್ರಷ್ಟರ ಪಾಲಿನ ಆಲದಮರ ಹಾಗೂ ಪೋಷಕ. ಡಿ.ಕೆ. ಶಿವಕುಮಾರ್ ಅವರನ್ನು 380 ಪಟ್ಟು ಅಕ್ರಮ ಆಸ್ತಿ ಪ್ರಕರಣದಿಂದ ಪಾರು ಮಾಡಿದ್ದೇ ಈ ಭ್ರಷ್ಟ ಪೋಷಕ ಎಂದು ವಾಗ್ದಾಳಿ ನಡೆಸಿದೆ.

Read More

ಮುಂಬೈ: ಹದಿನೈದು ವರ್ಷಗಳ ಹಿಂದೆ ಈ ದಿನ (26/11/2008) ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಗೆ (Mumbai Terror Attacks) 166 ಜನ ಬಲಿಯಾಗಿದ್ದರು. 10 ಭಯೋತ್ಪಾದಕರ ಗುಂಪಿನ ಈ ಸಂಘಟಿತ ದಾಳಿ ಭಾರತದಲ್ಲಿ ಮಾತ್ರವಲ್ಲದೇ ವಿಶ್ವದೆಲ್ಲೆಡೆ ಭಾರೀ ಸಂಚಲನ ಮೂಡಿಸಿತ್ತು. ಈ ಭೀಕರ ದಾಳಿ ನಡೆದು ಅದರ ತೀವ್ರತೆ ಇಂದಿಗೂ ಕಡಿಮೆಯಾಗಿಲ್ಲ. ಕುಟುಂಬಗಳ ರೋಧನೆ, ದಾಳಿಯಿಂದ ಕಲಿತ ಪಾಠಗಳೂ ಇಂದಿಗೂ ಮರೆತಿಲ್ಲ.  ಮುಂಬೈ ದಾಳಿಯ ನಂತರ ಪಾಕಿಸ್ತಾನವು ಭಾರತದ (India vs Pakistan) ಪಾಲಿಗೆ ಶತ್ರು ರಾಷ್ಟ್ರವಾಗಿಯೇ ಉಳಿದುಬಿಟ್ಟಿದೆ. ಪ್ರತಿ ವರ್ಷವೂ ನವೆಂಬರ್‌ 26ನೇ ತಾರೀಖು ಬಂದಾಗೆಲ್ಲಾ ಇಡೀ ದೇಶದ ಜನ ಈ ದಾಳಿಯನ್ನ ನೆನೆದು ಶತ್ರು ರಾಷ್ಟ್ರಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. 2008ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ (Lashkar-e-Taiba) ಭಯೋತ್ಪಾದಕರು ಪ್ರವೇಶಿಸಿದ್ದರು. https://ainlivenews.com/young-woman-cheated-in-the-name-of-work-from-home-5-lakhs-from-the-account/ 60 ಗಂಟೆಗಳಿಗೂ ಹೆಚ್ಚು ಕಾಲ ಮುತ್ತಿಗೆ ಹಾಕಿ, ಭಯೋತ್ಪಾದಕರು ಸರಣಿ ಗುಂಡಿನ ದಾಳಿ…

Read More

ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆ ಕೇಸ್ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ ಅವರು,ಯಾರೇ ತಪ್ಪು ಮಾಡಿದ್ರು ಕೂಡ ಅವರ ವಿರುದ್ಧ ಕಠಿಣ ಕ್ರಮ ತಗೊತ್ತೇವೆ ಅದರ ಬಗ್ಗೆ ಒಂದು ಸಭೆ ಮಾಡಿ ಸೂಕ್ತ ಕ್ರಮದ ನಿರ್ಣಯ ಮಾಡ್ತೀವಿ ಎಂದು ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ. https://ainlivenews.com/laser-therapy-soukhy-robotic-ortho-care/ ಹಾಗೆ ತೆಲಂಗಾಣಕ್ಕೆ ಚುನಾವಣಾ ಪ್ರಚಾರಕ್ಕಾಗಿ ಹೋಗ್ತಿದ್ದೇನೆ ನನಗೆ ಇರುವ ಮಾಹಿತಿ ಪ್ರಕಾರ ನಾವೇ ಗೆಲ್ತೀವಿ ನೂರಕ್ಕೆ ನೂರರಷ್ಟು ನಾವೇ ಅಲ್ಲಿ ಅಧಿಕಾರಕ್ಕೆ ಬರ್ತೇವೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವ ಬಗ್ಗೆ ಸಿಎಂ ವಿಶ್ವಾಸ ಇದೆ ಎಂದು ಹೇಳಿದರು. ಒಂದು ಟೀಮ್ ನಿಂದ ಸಿದ್ದರಾಮಯ್ಯ ರನ್ನು ಇಳಿಸುವ ಪ್ರಯತ್ನ ಎಂಬ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪಾಪ ಅಶೋಕ್ ಇವಾಗ ಏನೋ ವಿರೋಧ ಪಕ್ಷದ ನಾಯಕರಾಗಿದ್ದಾರೆ ಏನೇನೋ ಮಾತಾಡ್ಬೇಕು ಅದಕ್ಕಾಗಿ ಮಾತಾಡ್ತಿದ್ದಾರೆ ಮಾತಾಡಿದ್ರೆ ಮಾತಾಡಲಿ ಬಿಡಿ ಎಂದು ಹೇಳಿ ಹೊರಟ ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವಿಚಾರ…

Read More

ಬಳ್ಳಾರಿ:  ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಮುನಿಸು ಇನ್ನೂ ಶಮನವಾಗಿಲ್ಲ.‌ ಒಂದು ಕುಟುಂಬದಲ್ಲಿ ಹುಟ್ಟಿ ಬೆಳೆದ ಇಬ್ಬರು ಸಹೋದರರು ರಾಜಕೀಯ ವೈರತ್ವ, ಕುಟುಂಬದ ಮದುವೆಯಲ್ಲೂ ಮುಂದುವರಿದಿದೆ.‌ ನಿನ್ನೆ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಅವರ ಹಿರಿಯ ಮಗ ಸಂದೀಪ್ ರೆಡ್ಡಿ ಉದ್ಯಮಿ ಸುಧಾಕರ ರೆಡ್ಡಿ ಮಗಳು ದಿವ್ಯ ಜೊತೆಗೆ ಅದ್ದೂರಿಯಾಗಿ ಮದುವೆ ಸಮಾರಂಭ ಆಂಧ್ರದ ನೆಲ್ಲೂರುನಲ್ಲಿ ನಡೆದಿದೆ.‌ ಈ ಒಂದು ಮದುವೆ ಸಮಾರಂಭಕ್ಕೆ ರಾಜಕಾರಣಿಗಳು ಪಕ್ಷ ಭೇದ ಮರೆತು ಭಾಗಿಯಾಗಿದ್ದರು. ಆದರೆ ಜನಾರ್ದನ ರೆಡ್ಡಿ ಕುಟುಂಬ ಮಾತ್ರ ಮದುವೆ ಸಮಾರಂಭದಿಂದ ದೂರ ಉಳಿದಿದೆ. ಇನ್ನು ಹೊಸ ಪಕ್ಷ ಕಟ್ಟಿದ ಜನಾರ್ದನ ರೆಡ್ಡಿ ಸ್ವಂತ ಅಣ್ಣನ ವಿರುದ್ಧವೇ ಪತ್ನಿಯನ್ನು ಕಣಕ್ಕಿಳಿಸಿದ್ದರು. ಸೋಮಶೇಖರ್ ರೆಡ್ಡಿ ಸೋಲಿಗೆ ಪರೋಕ್ಷವಾಗಿ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ ಕಾರಣರಾಗಿದ್ದರು. ಜನಾರ್ದನ ರೆಡ್ಡಿ ಪಕ್ಷ ಕಟ್ಟಿದಾಗಿನಿಂದಲೂ ಸಹೋದರರ ಮಧ್ಯೆ ಭಿನ್ನಾಭಿಪ್ರಾಯ ಜೋರಾಗಿಯೇ ಇತ್ತು. ಇದೀಗ ಸೋಮಶೇಖರ್ ರೆಡ್ಡಿ ಮಗನ ಮದುವೆಗೆ ಜನಾರ್ದನ…

Read More

ಬೆಂಗಳೂರು: ಮೈಸೂರು ಮತ್ತು ಕೊಡಗು ಲೋಕಸಭಾ ಸದಸ್ಯ ಪ್ರತಾಪ ಸಿಂಹ ಅವರು ತಮ್ಮ ಇಂಗ್ಲಿಷ್‌ ಹೆಸರಿನಲ್ಲಿ ಸಂಖ್ಯಾಶಾಸ್ತ್ರದ ಅನ್ವಯ ಸಣ್ಣ ಬದಲಾವಣೆ ಮಾಡಿಕೊಂಡಿದ್ದಾರೆ. ಹೌದು, Prathap simha ಎಂಬ ಹೆಸರನ್ನು ಅವರು Pratap simmha ಎಂದು ಬದಲಿಸಿಕೊಂಡಿರುವುದಾಗಿ ಅಫಿಡೆವಿಟ್‌ ಮೂಲಕ ಘೋಷಿಸಿಕೊಂಡಿದ್ದಾರೆ. https://ainlivenews.com/laser-therapy-soukhy-robotic-ortho-care/ ಸಂಖ್ಯಾಶಾಸ್ತ್ರದ ಅನ್ವಯ ಸಣ್ಣ ಬದಲಾವಣೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ಅನೇಕ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ, ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಕೆಲವು ರಾಜಕಾರಣಿಗಳು ಸಂಖ್ಯಾಶಾಸ್ತ್ರ ಮತ್ತು ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬದಲಿಸಿಕೊಂಡ ಉದಾಹರಣೆ ಇದೆ. ಈ ಹಿಂದೆ ಮೈಸೂರು- ಕೊಡಗು ಮಾಜಿ ಸಂಸದ, ಹಾಲಿ ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಅವರು ಕೂಡ ತಮ್ಮ ಹೆಸರಿನ ಹಿಂದೆ ಅಡಗೂರು ಸೇರಿಸಿಕೊಂಡಿದ್ದರು. MP ಚುನಾವಣೆಗೂ ರಾಜ್ಯಾಧ್ಯಕ್ಷರ ನೇಮಕಕ್ಕೂ ಸಂಬಂಧವಿಲ್ಲ ಎಂದರು.

Read More

ಬೆಂಗಳೂರು: ಟ್ರಾಫಿಕ್ ಸಿಗ್ನಲ್ ಬ್ಯಾಟರಿ ಕದಿಯುತ್ತಿದ್ದ ಆರೋಪಿಗಳನ್ನ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸೈಫ್ ಪಾಷಾ, ಸಲ್ಮಾನ್ ಖಾನ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ಐದು ಲಕ್ಷ ಮೌಲ್ಯದ 80 ಬ್ಯಾಟರಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಹಲವು ಜಂಕ್ಷನ್ ಗಳಲ್ಲಿ ಸಿಗ್ನಲ್‌ಗಳಿಗೆ ಅಳವಡಿಸಿದ್ದ ಬ್ಯಾಟರಿಗಳನ್ನ ಖದೀಮರು ಕದ್ದಿದ್ದರು. https://ainlivenews.com/laser-therapy-soukhy-robotic-ortho-care/ ಕಳೆದ 6 ತಿಂಗಳಿಂದ ಸಿಗ್ನಲ್ ಬ್ಯಾಟರಿ ಕಳ್ಳತನ   ಕಳೆದ 6ತಿಂಗಳಿಂದ ಬ್ಯಾಟರಿ ಕಳ್ಳತನ ಮಾಡಿ ಗುಜರಿಗಳಲ್ಲಿ ಮಾರಾಟ ಮಾಡುತ್ತಿದ್ದರು ಖತರ್ನಾಕ್‌ ಖದೀಮರು. ಇದರಿಂದ ಬಂದ ಹಣದಿಂದ ಮೋಜು ಮಸ್ತಿ ಮಾಡುತ್ತಿದ್ದರು. ಆರೋಪಿಗಳ ಪತ್ತೆಗೆ ಪೊಲೀಸರು ಸುಮಾರು 120 ಸಿಸಿಟಿವಿಗಳನ್ನ ಪರಿಶೀಲನೆ ಮಾಡಿದ್ದರು. ಇದೀಗ ಬನಶಂಕರಿ ಮೂಲದ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಇಂದು ಸಿಲಿಕಾನ್ ಸಿಟಿಯಲ್ಲಿ 2ನೇ ದಿನದ ಕಂಬಳ (Kambala) ನಡೆಯುತ್ತಿದೆ. ಬೆಳಗ್ಗೆ ಸುಮಾರು 10 ಗಂಟೆಗೆ ಆರಂಭವಾಗುವ ಸಭಾ ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಹಿರಿಯ ರಾಜಕಾರಣಿಗಳು, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮತ್ತೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ನವದೆಹಲಿ ಎನ್‌ಸಿಸಿಎಫ್ ಅಧ್ಯಕ್ಷ ವಿಶಾಲ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡಾ ಇಂದು ಮಧ್ಯಾಹ್ನ ಕಂಬಳದಲ್ಲಿ ಭಾಗಿಯಾಗಲಿದ್ದಾರೆ. ಸಾಧಕ ಕುಸ್ತಿಪಟುಗಳಿಗೆ ಕಂಬಳ ಸಮಿತಿಯ ವತಿಯಿಂದ ಸನ್ಮಾನ ನಡೆಯಲಿದ್ದು, ಇಂದು ಸಂಜೆ 4 ಗಂಟೆಗೆ ಕಂಬಳ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಸಮಾರೋಪ ಸಮಾರಂಭ ನೆರವೇರಲಿದೆ. ಅತ್ತ ವೇದಿಕೆ 2ರಲ್ಲಿ ನಿರಂತರವಾಗಿ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯಲಿದೆ. ಕರಂಗೋಲು ನೃತ್ಯ, ಗಂಡುಕಲೆ ಯಕ್ಷಗಾನ, ಆಟಿ ಕಳಂಜ, ಆಕ್ಸಿಜನ್ ಡ್ಯಾನ್ಸ್ ಟೀಮ್ ಮಂಗಳೂರು ಕಾಮಿಡಿ ಕಲಾವಿದರಿಂದ ಪ್ರದರ್ಶನ, ಮಿಮಿಕ್ರಿ, ಮಂಕಾಳಿ ನಲಿಕೆ ಇರಲಿದೆ. ಇಂದು ಸಂಜೆ 7 ರಿಂದ ಸೆಲೆಬ್ರಿಟಿಗಳ ಸಂಗೀತ ಸಂಜೆ…

Read More

ಬೆಂಗಳೂರು : ದಕ್ಷಿಣ ಭಾರತದ ಅತಿ ಹೆಚ್ಚು ಜನಸಂದಣಿಯಾಗುವ ಪ್ರಮುಖ ತೀರ್ಥ ಕ್ಷೇತ್ರಗಳಲ್ಲಿ ಶಬರಿಮಲೆಯೂ ಒಂದು. ಇಲ್ಲಿಗೆ ಬರುವ ಯಾತ್ರಾರ್ಥಿಗಳ ಸುರಕ್ಷತೆಯ ಸಲುವಾಗಿ ಇದೀಗ ಅಗ್ನಿಶಾಮಕ ರಕ್ಷಣಾ ಸೇನೆ ಮತ್ತು ನಾಗರಿಕ ರಕ್ಷಣಾ ಸ್ವಯಂಸೇವಕರು ಸಜ್ಜಾಗಿದ್ದಾರೆ. ಪಂಪಾ ನಿಯಂತ್ರಣ ಕೊಠಡಿಗಳಡಿ 14 ಮತ್ತು ನೀಲಕ್ಕಲ್​ನಿಂದ ಕಾಳಕಟ್ಟಿವರೆಗೆ 25 ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದ್ದು, ಒಟ್ಟಾರೆ 295 ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜೊತೆಗೆ ಶಬರಿಮಲೆ ಪರಿಸರದಲ್ಲಿ ಸಂಭವನೀಯ ಅಪಾಯ ತಪ್ಪಿಸಲು ಮಾರ್ಗಸೂಚಿಗಳನ್ನು ಸಹ ಬಿಡುಗಡೆಗೊಳಿಸಲಾಗಿದೆ. ಸನ್ನಿಧಾನಂ-ಪಂಪಾ ನಿಯಂತ್ರಣ ಕೊಠಡಿಗಳಡಿ 14 ಅಗ್ನಿಶಾಮಕ ಕೇಂದ್ರ ಮತ್ತು ನೀಲಕ್ಕಲ್‌ನಿಂದ ಕಾಳಕಟ್ಟಿವರೆಗೆ 25 ಅಗ್ನಿಶಾಮಕ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. ಈ ಎಲ್ಲ ಮಅಗ್ನಿಶಾಮಕ ಕೇಂದ್ರಗಳಲ್ಲಿ ಏಕಕಾಲದಲ್ಲಿ 295 ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಾಹಿತಿ ನೀಡಿದ್ದಾರೆ. ಶಬರಿಮಲೆ ಪರಿಸರದಲ್ಲಿ ಸಂಭವನೀಯ ಅಪಾಯ ತಪ್ಪಿಸಲು ಅಗ್ನಿಶಾಮಕ ದಳ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಅಯ್ಯಪ್ಪ ಭಕ್ತರಿಗೆ ಮಾರ್ಗಸೂಚಿ ಭಕ್ತಾದಿಗಳು ಅಪರಿಚಿತ ಜಲಮೂಲಗಳಲ್ಲಿ ಸ್ನಾನ ಮಾಡುವಂತಿಲ್ಲ…

Read More