ಬೆಂಗಳೂರು:- ಬಿಜೆಪಿ ಸರ್ಕಾರ ಡಿಕೆ ಶಿವಕುಮಾರ್ ಪ್ರಕರಣವನ್ನು ಸಿಬಿಐಗೆ ಕೊಟ್ಟಿದೇಕೆ ಎಂಬ ವಿಚಾರದ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಈ ಹಿಂದೆ ಎಜಿ ಒಪ್ಪಿಗೆ ಇಲ್ಲದೇ ಬಿಜೆಪಿಯವರು ಕಾನೂನು ಬಾಹಿರವಾಗಿ ಅನುಮತಿ ಕೊಟ್ಟಿದ್ದರು ಎಂದು ಆರೋಪಿಸಿದ್ದಾರೆ. ಆದರೆ ವಾಸ್ತವ ಸ್ಥಿತಿಯಲ್ಲಿ ಇಡಿಯವರು ಸಿಬಿಐಗೆ ಕೇಸ್ ಕೊಡಿಯೆಂದು ಪತ್ರ ಬರೆದಿದ್ದರು. ಹಾಗಾಗಿ ನಾವು ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದೇವೆ ಎಂದು ಇದೀಗ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದಿನ ಸರ್ಕಾರದ ಕಾನೂನು ಬಾಹಿರ ಆದೇಶ ವಾಪಸ್ ಪಡೆದಿದ್ದೇವೆ ಎಂದಿದ್ದಾರೆ. ಇದು ವಾಸ್ತವಿಕ ಅಂಶ ಅಲ್ಲ, ಡಿ.ಕೆ ಶಿವಕುಮಾರ್ ಅವರನ್ನು ರಕ್ಷಣೆ ಮಾಡಲು ಸಿದ್ದರಾಮಯ್ಯ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ನಾವು ಎಜಿ ಅಭಿಪ್ರಾಯ ಪಡೆದೇ ಸಿಬಿಐಗೆ ಪ್ರಕರಣ ಕೊಟ್ಟಿದ್ದೆವು. ಅಧಿವೇಶನದಲ್ಲಿ ದಾಖಲೆಗಳನ್ನು ಇಟ್ಟು ಇದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು. ಇನ್ನು ಡಿ.ಕೆ…
Author: AIN Author
ಬೆಂಗಳೂರು:- ದರೋಡೆಕೋರರ ರಕ್ಷಣೆಯೇ ಸರ್ಕಾರದ ಧ್ಯೇಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ವಿರುದ್ಧದ ಸಿಬಿಐ ಕೇಸ್ ವಾಪಸ್ ಪಡೆಯಲು ಸಂಪುಟ ಅನುಮೋದನೆ ನೀಡಿದ ಕುರಿತು ಈ ಪ್ರತಿಕ್ರಿಯೆ ನೀಡಿದರು. ಮರ್ಯಾದೆ ಇರುವವರು ಹೆದರುತ್ತಾರೆ. ಮರ್ಯಾದೆ ಇಲ್ಲದವರಿಗೆ ಕೋರ್ಟ್ನಲ್ಲಿ ಇದ್ದರೇನು? ಯಾವುದಲ್ಲಿದ್ದರೆ ಏನು? ಯಾವುದನ್ನು ಬೇಕಾದರೂ ಕೊಂಡುಕೊಳ್ಳುತ್ತೇವೆ ಎನ್ನುವ ದುರಹಂಕಾರ ದಲ್ಲಿರುತ್ತಾರೆ. ಅಂತಹವರಿಗೆ ಏನು ಹೇಳುವುದು ಎಂದು ವ್ಯಂಗ್ಯವಾಡಿದರು. ಸರ್ಕಾರದಲ್ಲಿ ನಡೆಯುತ್ತಿರುವ ಚಟುವಟಿಕೆಯ ಬಗ್ಗೆ ಬಹಳ ಮಾತನಾಡುವುದು ಇದೆ. ಚರ್ಚೆ ಮಾಡೋಣ, ಆ ಬಗ್ಗೆ ಆತುರ ಬೇಡ ಎಂದು ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳಿದ್ದಾರೆ.
ಗದಗ:- ಡಿ.ಕೆ.ಶಿವಕುಮಾರ್ ಪ್ರಕರಣ ಸಿಬಿಐನಿಂದ ವಾಪಸ್ ಪಡೆದಿರುವುದು ಖಂಡನೀಯ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೇಲಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳನ್ನು ಸಿಬಿಐನಿಂದ ವಾಪಸ್ ಪಡೆದಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಖಂಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವಸರವಾಗಿ ಸಚಿವ ಸಂಪುಟ ಸಭೆಯನ್ನು ಕರೆದು ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ಈ ಅವಸರದ ಕ್ರಮ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಮಾನವಾಗಿದೆ. ಕಳ್ಳ ಎಂದಿಗೂ ಕಳ್ಳನೇ. ಕಾಂಗ್ರೆಸ್ ಸರ್ಕಾರದವರು 139 ಜನರ ಬೆಂಬಲದ ಮೇಲೆ ಮಾಡಬಾರದ್ದನ್ನೆಲ್ಲಾ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ತಮ್ಮ ಪರ ಎಲ್ಲಾ ನ್ಯಾಯಾಲಯದಲ್ಲಿ ಹಾಕಿದ್ದ ಅಪೀಲು ಬಿದ್ದು ಹೋಗಿದೆ. 5 ವರ್ಷದಲ್ಲಿ 250 ಕೋಟಿ ಆಸ್ತಿ ಜಾಸ್ತಿಯಾಗಿದೆ ಎಂದು ಸಿಬಿಐ ವರದಿಯಲ್ಲೇ ಇದೆ ಎಂದರು. ಸಿದ್ದರಾಮಯ್ಯನವರ ಸಚಿವ ಸಂಪುಟದಲ್ಲಿ ಕಾನೂನು ತಜ್ಞರು ಇಲ್ವಾ?, ಕಾನೂನು ತಜ್ಞರ ಗಮನಕ್ಕೆ ತಾರದೆ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಚಿವ…
ಹಾವೇರಿ :- ಕಾಡಾನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆಗಳು ನಾಶವಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಗೊಂದಿ ಹಿರೇಕೌಂಶಿ ಗ್ರಾಮಗಳಲ್ಲಿ ಜರುಗಿದೆ. ಸುಮಾರು 4 ಕಾಡಾನೆಗಳಿಂದ ದಾಳಿ ನಡೆದಿದೆ. ಆನೆಗಳನ್ನು ಕಾಡಿಗೆ ಓಡಿಸಲು ಅರಣ್ಯಾಧಿಕಾರಿಗಳು ಹಾಗೂ ಗ್ರಾಮಸ್ಥರು ಪರದಾಟ ನಡೆಸಿದ್ದಾರೆ. ಸುಮಾರು ಒಂದು ಲಕ್ಷಕ್ಕೂ ಹಚ್ಚಿನ ಮೌಲ್ಯದ ಬಾಳೆ,ಮೆಕ್ಕೆಜೋಳ ಬೆಳೆಗಳ ನಾಶವಾಗಿದ್ದು, ರೈತರ ಜಮೀನುಗಳಲ್ಲಿ ಕಾಡಾನೆಗಳು ಸುತ್ತಾಡಿರುವುದನ್ನು ಗ್ರಾಮಸ್ಥರು ವೀಕ್ಷಿಸುತ್ತಿದ್ದಾರೆ. ಹೊಲ,ಗದ್ದೆಗಳಿಗೆ ರೈತರು,ಸಾರ್ವಜನಿಕರು ತೆರಳದಂತೆ ಅನೌನ್ಸ್ ಮಾಡಲಾಗಿದೆ. ಹಾನಗಲ್ ಅರಣ್ಯಾಧಿಕಾರಿಗಳಿಂದ ಗ್ರಾಮಗಳ ಸುತ್ತಮುತ್ತ ಮೈಕ್ ನಲ್ಲಿ ಪ್ರಚಾರ ಕೈಗೊಳ್ಳಲಾಗಿದೆ. ಬೇರೆ ಕಡೆ ಕಾಡಾನೆಗಳನ್ನು ಓಡಿಸಲು ಅಧಿಕಾರಿಗಳು ಶತ ಪ್ರಯತ್ನ ಮಾಡುತ್ತಿದ್ದಾರೆ. ಹಾನಗಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ
ಕಲಬುರ್ಗಿ:- ಬೀದಿನಾಯಿ ದಾಳಿಗೆ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಕಲಬುರಗಿಯ ಚಿತ್ತಾಪುರ ಪಟ್ಟಣದಲ್ಲಿ ನಡೆದಿದೆ.. ಪಟ್ಟಣದ ತಳಿಗೇರಿ ಏರಿಯಾದಲ್ಲಿ ಘಟನೆ ನಡೆದಿದ್ದು ಮಹಿಳೆಯರು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಾಯಿಗಳ ದಾಳಿಗೆ ಆಕ್ರೋಶ ಹೊರಹಾಕಿರುವ ಜನ ಪುರಸಭೆ ವಿರುದ್ಧ ಕಿಡಿಕಾರಿದ್ದಾರೆ…
ತುಮಕೂರು:- ಬೈಕ್ ಹಾಗೂ ಓಮಿನಿ ಕಾರು ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ತುಮಕೂರು ತಾಲೂಕಿನ ಓಬಳಾಪುರ ಬಳಿ ಜರುಗಿದೆ. ಬೈಕ್ ನಲ್ಲಿದ್ದ ಸವಾರರಿಗೆ ಗಂಭೀರ ಗಾಯವಾಗಿದ್ದು, ಓಮಿನಿಯಲ್ಲಿದ್ದ ಮಹಿಳೆಗೂ ಗಾಯವಾಗಿದೆ. ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ನಡೆದಿದೆ. ತುಮಕೂರು ಕಡೆಯಿಂದ ಹೋಗ್ತಿದ್ದ ಬೈಕ್, ಕೊರಟಗೆರೆ ಕಡೆಯಿಂದ ಬರ್ತಿದ್ದ ಓಮಿನಿ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಬೈಕ್ ನವರು ಕುಡಚಿ ಮೂಲದವರು ಎನ್ನಲಾಗಿದೆ..ಎತ್ತಿನಹೊಳೆ ಕಾಮಗಾರಿ ಕೆಲಸಕ್ಕೆ ಬಂದಿದ್ದರು. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಬೆಂಗಳೂರು:- ಸಿಬಿಐ ತನಿಖೆ ಹೊತ್ತಲ್ಲಿ ಕೇಸ್ ವಾಪಸ್ ಪಡೆಯುವುದು ಸರಿಯಲ್ಲ ಎಂದು ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸಚಿವ ಸಂಪುಟದಲ್ಲಿ ಡಿಕೆಶಿ ಸಿಬಿಐ ಕೇಸ್ ವಾಪಸ್ ಪಡೆದ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯಿಸಿದ ಸಂಸದ ನಳಿನ್ ಕುಮಾರ್ ಕಟೀಲ್, ಇವರು ಪ್ರಾಮಾಣಿಕರು, ಪಾರದರ್ಶಕವಾಗಿದ್ದರೆ ಕೇಸ್ ಹಿಂಪಡೆಯುವ ಅಗತ್ಯವಿಲ್ಲ. ಇವರಿಗೆ ಭಯ ಯಾಕೆ, ಇವರ ಪ್ರಾಮಾಣಿಕತೆ ಪ್ರಶ್ನಾರ್ಥಕ ಚಿಹ್ನೆಯಲ್ಲಿದೆ ಎಂದು ಹೇಳಿದರು. ಸಿಬಿಐ ತನಿಖೆ ಹೊತ್ತಲ್ಲಿ ಸರ್ಕಾರ ಕೇಸ್ ವಾಪಸ್ ಪಡೆಯುವುದು ಸರಿಯಲ್ಲ. ಇದು ಸರ್ಕಾರದ ಭ್ರಷ್ಟಾಚಾರವನ್ನು ಸಾರ್ವಜನಿಕವಾಗಿ ತಿಳಿಸುತ್ತದೆ. ನಾನು ಖಂಡಿಸುತ್ತೇನೆ. ಹಾಗಂತ ಇದೊಂದೇ ಕೇಸ್ ಇಲ್ಲ, ಜಾರಿ ನಿರ್ದೇಶನಾಲಯದಲ್ಲೂ ಸಾಕಷ್ಟು ಕೇಸ್ಗಳಿವೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದರು.
ಬೆಂಗಳೂರು:- ಹಿಂದಿನ ಬಿಜೆಪಿ ಸರ್ಕಾರದಿಂದ ನಮ್ಮ ನಾಯಕರನ್ನು ಕಟ್ಟಿ ಹಾಕಲು ಸಂಚು ರೂಪಿಸಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಹಿಂದಿನ ಬಿಜೆಪಿ ಸರ್ಕಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐಗೆ ನೀಡಿದ್ದು ಕಾನೂನುಬಾಹಿರ. ರಾಜಕೀಯ ದುರುದ್ದೇಶ ಇಟ್ಟುಕೊಂಡು ಈ ಮೂಲಕ ನಮ್ಮ ನಾಯಕರಾದ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರನ್ನು ಕಟ್ಟಿ ಹಾಕಲು ಬಿಜೆಪಿ ಸಂಚು ಮಾಡಿತ್ತು ಎಂದರು. ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ವಿರೋಧ ಪಕ್ಷವನ್ನು ಮುಗಿಸಬೇಕು ಎಂದು ಸಂಚು ರೂಪಿಸುತ್ತಿದ್ದಾರೆ. ವಿಪಕ್ಷದವರನ್ನು ಕಟ್ಟಿ ಹಾಕಬೇಕು ಎಂದು ಬಿಜೆಪಿ ಮಾಡುತ್ತಿದೆ. ಧ್ವನಿ ಕಟ್ಟಿಹಾಕಲು ಕೆಲವರನ್ನು ಐಟಿ ಇಡಿ ಮೂಲಕ ಹೆದರಿಸುತ್ತಾರೆ. ಥ್ರೆಟ್ ಆಗುವಂತವರನ್ನು ರಾಜಕೀಯವಾಗಿ ಮುಗಿಸುವುದಕ್ಕೆ ಯತ್ನ ಮಾಡುತ್ತಾರೆ ಎಂದು ಆರೋಪಿಸಿದರು. ಎಐಸಿಸಿ ಅಧ್ಯಕ್ಷರಿಂದ ಹಿಡಿದು ಪಿಸಿಸಿ ಅಧ್ಯಕ್ಷರ ತನಕವೂ ನಾಯಕರ ವಿರುದ್ದ ಸಂಚು ರೂಪಿಸುತ್ತಾರೆ. ಅನವಶ್ಯಕವಾಗಿ ಡಿಕೆಶಿ ಮತ್ತು ಸಿಎಂ ವಿರುದ್ದ ಆರೋಪ ಮಾಡುತ್ತಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಪ್ರಾಮಾಣಿಕವಾಗಿ ಸಂಚು…
ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ಅಮಾನತು ವಿಚಾರ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಡಿ.ಕೆ. ಶಿವಕುಮಾರ್ ಅವರ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಬಿಜೆಪಿಗರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. https://ainlivenews.com/now-let-satya-harishchandra-prove-himself-to-the-people-of-dkeshi-state/ ಕಳೆದ 9ರಿಂದ 10 ವರ್ಷದಿಂದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿರೋಧ ಪಕ್ಷಗಳನ್ನು ಮುಗಿಸಲು ಸಂಚು ರೂಪಿಸುತ್ತಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಕೇವಲ ಕಾಂಗ್ರೆಸ್ ಮುಖಂಡರ ಮನೆ ಮೇಲೆ ಐಟಿ ದಾಳಿ ಆಗುತ್ತೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂಬ ಭಯದಲ್ಲಿ ಈ ಹಿಂದೆ ಡಿ.ಕೆ. ಶಿವಕುಮಾರ್ ಮೇಲೆ ಇಡಿಯಿಂದ ದಾಳಿ ನಡೆಸಲಾಯಿತು ಎಂದು ಕುಟುಕಿದ್ದಾರೆ. 13 ತಿಂಗಳ ನಂತರ ಎಫ್ಐಆರ್ 24-09-2019ರಂದು ಅಂದಿನ ಬಿಜೆಪಿ ಸರ್ಕಾರದ ಸಿಎಂ ಫೋನ್ ನಲ್ಲಿ ನೇರವಾಗಿ ಸಿಬಿಐ ಜೊತೆ ಮಾತನಾಡಿದ್ದರು. ಪ್ರಕಾರಣವನ್ನು ಸಿಬಿಐಗೆ ವರ್ಗಾಯಿಸುವ ಮೊದಲು ಅನುಸರಿಸಬೇಕಿದ್ದ ಮಾನದಂಡಗಳನ್ನು ಸರ್ಕಾರ ಪಾಲಿಸಿಲ್ಲ. ರಾಜ್ಯ ತನಿಖಾ ತಂಡಗಳನ್ನು…
ಲಕ್ನೋ: ಮಥುರಾದಲ್ಲಿ (Mathura) ದೀಪಾವಳಿ ಹಬ್ಬಕ್ಕಾಗಿ ನಿರ್ಮಿಸಿದ್ದ ಪಟಾಕಿ ಅಂಗಡಿಗಳಿಗೆ ಬೆಂಕಿ ತಗುಲಿ (Fire Accident) ನಡೆದ ಅವಘಡದಲ್ಲಿ ಗಾಯಗೊಂಡಿದ್ದ ಅಪ್ರಾಪ್ತ ಸೇರಿ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಈ ಮೂಲಕ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಪಿಟಾ ನಾಗ್ಲಾ ಗ್ರಾಮದ ದೀಪಚಂದ್ (28) ಹಾಗೂ ನೌಜಿಲ್ ನಿವಾಸಿ ರಿಂಕು (17) ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಮೊದಲು ದೀಪಕ್ಚಂದ್ನನ್ನು ಆಗ್ರಾದ ಎಸ್ಎನ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಿಲ್ಲದೆ ಅವನನ್ನು ಮನೆಗೆ ಕರೆತಂದಿತ್ತು. ರಿಂಕು ಎಂಬವನನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. https://ainlivenews.com/miley-is-the-new-president-of-argentina-who-talks-to-a-dead-dog/ ಇದಕ್ಕೂ ಮುನ್ನ ಸುಟ್ಟಗಾಯಗಳಿಂದ ಬಳಲುತ್ತಿದ್ದ 10 ಮಂದಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದರು. ಇನ್ನೂ ಇಬ್ಬರು ದೆಹಲಿಯ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನ.12 ರಂದು ಮಥುರಾದ ರಾಯಾ ಪ್ರದೇಶದ ಗೋಪಾಲ್ಬಾಗ್ನಲ್ಲಿ ಈ ಅವಘಡ ಸಂಭವಿಸಿತ್ತು. ಘಟನೆಯಲ್ಲಿ 23 ಪಟಾಕಿ…