2024ರ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಸಲುವಾಗಿ ಡಿಸೆಂಬರ್ 19ರಂದು ದುಬೈನಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಅಂದಹಗಾಎ ಐಪಿಎಲ್ 2024 ಟೂರ್ನಿಯ ಮಿನಿ ಆಕ್ಷನ್ಗೂ ಮುನ್ನ ಎಲ್ಲಾ 10 ತಂಡಗಳು ತಾವು ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಬೇಕಿದ್ದು, ಈ ಸಲುವಾಗಿ ನವೆಂಬರ್ 26ರ ಗಡುವು ನಿಗದಿಯಾಗಿದೆ. ಹೀಗಾಗಿ ಹಲವು ಫ್ರಾಂಚೈಸಿಗಳು ತಮ್ಮಲ್ಲಿನ ಆಟಗಾರರನ್ನು ಹರಾಜಿಗೂ ಮೊದಲೇ ಅದಲು ಬದಲು ಮಾಡಿಕೊಳ್ಳುವ ಪ್ರಯತ್ನ ನಡೆಸುತ್ತಿವೆ. 2022ರ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ಮತ್ತು ಐದು ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ದೊಡ್ಡ ವಹಿವಾಟನ್ನೇ ನಡೆಸಲು ಮುಂದಾಗಿರುವ ಬಗ್ಗೆ ಇತ್ತೀಚಿನ ವರದಿಗಳು ಬಹಿರಂಗ ಪಡಿಸಿವೆ. 2021ರ ಐಪಿಎಲ್ ಬಳಿಕ ಮುಂಬೈ ಇಂಡಿಯನ್ಸ್ ತೊರೆದು ಹೊಸ ಫ್ರಾಂಚೈಸಿ ಗುಜರಾತ್ ಟೈಟನ್ಸ್ ತಂಡಕ್ಕೆ ಕ್ಯಾಪ್ಟನ್ ಆಗಿ ಸೇರಿದ್ದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಮರಳಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಮುಂಬೈ ಇಂಡಿಯನ್ಸ್ ಪ್ರಯತ್ನ ಮಾಡುತ್ತಿದೆ. ಪ್ಲೇಯರ್ಸ್ ಟ್ರಾನ್ಸ್ಫರ್ ವಿಂಡೋ ಬಳಕೆ ಮಾಡಿ ಟೈಟನ್ಸ್ ಫ್ರಾಂಚೈಸಿಯ…
Author: AIN Author
ಬೆಂಗಳೂರು:- ಶೀಘ್ರದಲ್ಲೇ ಬೆಂಗಳೂರಿನಲ್ಲಿ ಚಿರತೆ ಪಡೆ ಕಾರ್ಯಾರಂಭ ಆಗಲಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಗರದ ಹೊರವಲಯದಲ್ಲಿ ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚನೆ ಸಂಬಂಧ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಮುಂದಿನ ಎರಡು ದಿನಗಳ ಒಳಗಾಗಿ ಕಾರ್ಯಾರಂಭಿಸಲಿದೆ ಎಂದರು. ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಅರಣ್ಯ ಪಡೆ ಮುಖ್ಯಸ್ಥ ಬ್ರಿಜೇಶ್ ಕುಮಾರ್ ದೀಕ್ಷಿತ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ಮಾತನಾಡಿದರು. ಕಳೆದ 2 ವರ್ಷಗಳಲ್ಲಿ ರಾಜ್ಯದಲ್ಲಿ ಸಂಭವಿಸಿರುವ ಆನೆ ದಾಳಿ ಸಾವಿನ ಎಲ್ಲ ಪ್ರಕರಣಗಳ ಕುರಿತಂತೆ ಪರಾಮರ್ಶಿಸಿ, ಯಾವ ಭಾಗದಲ್ಲಿ ಹೆಚ್ಚು ಸಾವು ಸಂಭವಿಸುತ್ತಿದೆ?, ಇದಕ್ಕೆ ಕಾರಣವೇನು? ಎಂಬ ಬಗ್ಗೆ ತಿಳಿದು ಪರಿಹಾರೋಪಾಯಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಬಳಿಕ, ಆನೆಗಳು ಯಾವ ಯಾವ ಋತುವಿನಲ್ಲಿ ಯಾವ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತವೆ ಎಂಬ ಬಗ್ಗೆಯೂ ಅಧ್ಯಯನ ನಡೆಸಿ, ಸ್ಥಳೀಯರಿಗೆ ಮುಂಚಿತವಾಗಿಯೇ ಜಾಗೃತಿ ಮೂಡಿಸಲು ಮತ್ತು ಮಾಹಿತಿ ನೀಡಲು ನಿರ್ದೇಶನ ನೀಡಿದರು.…
ಬೆಂಗಳೂರು:-ಬೆಂಗಳೂರು ಕಂಬಳಕ್ಕೆ ಕ್ಷಣಗಣನೆ ಶುರುವಾಗಿದೆ. ತುಳುಕೂಟಕ್ಕೆ 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಪ್ಯಾಲೇಸ್ ಗ್ರೌಂಡ್ನಲ್ಲಿ ಇದೇ ಮೊದಲ ಬಾರಿಗೆ ಕಂಬಳ ಆಯೋಜಿಸಿದೆ. ಕೋಣಗಳ ಸ್ಪರ್ಧೆಗೆ ಈಗಾಗಲೇ ನೀರಿನ ಟ್ರ್ಯಾಕ್(ಕರೆ) ನಿರ್ಮಿಸಲಾಗಿದ್ದು, ತ್ರಿವರ್ಣಧ್ವಜದ ಬಣ್ಣಗಳಿಂದ ಅಲಂಕರಿಸಲಾಗಿದೆ. ಕಂಬಳದ ಟ್ರ್ಯಾಕ್ 157 ಮೀಟರ್ ಉದ್ದ ಹಾಗೂ 8 ಮೀಟರ್ ಅಗಲವಿದೆ. ಒಟ್ಟು 200ಕ್ಕೂ ಹೆಚ್ಚು ಕೋಣಗಳು ಕಂಬಳಕ್ಕೆ ಇಳಿಯಲಿವೆ. ಕೋಣಗಳಿಗೆ ಸಕಲೇಶಪುರ, ಹಾಸನ, ನೆಲಮಂಗಲ ಮೂರು ಕಡೆ ಕೋಣಗಳ ವಿಶ್ರಾಂತಿಗೆ ಅವಕಾಶ ಕಲ್ಪಿಸಲಾಗಿದ್ದು, ಇಂದು ಕೋಣಗಳು ರಾಜಧಾನಿಗೆ ಬಂದಿಳಿಯಲಿವೆ. ಎರಡು ದಿನದ ಕಂಬಳಕ್ಕೆ ಅಂದಾಜು 6 ರಿಂದ 7 ಲಕ್ಷದಷ್ಟು ಜನರು ಬರುವ ಸಾಧ್ಯತೆ ಇದ್ದು, ಜನರು ಕಂಬಳ ವೀಕ್ಷಿಸಲು ದೊಡ್ಡ ಸ್ಟೇಜ್ಗಳನ್ನು ನಿರ್ಮಾಣ ಮಾಡಲಾಗಿದೆ. ವಿಐಪಿ, ವಿವಿಐಪಿ, ಸಾರ್ವಜನಿಕರಿಗೆ ಪ್ರತ್ಯೇಕ ಪಾಸ್, ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ದೂರದ ಊರುಗಳಿಂದ ಕಂಬಳಕ್ಕೆ ಬಂದಿರುವ ಕೋಣಗಳ ಬಗ್ಗೆ ಮಾಲೀಕರು ವಿಶೇಷ ಗಮನ ವಹಿಸಿದ್ದಾರೆ. ಕಂಬಳದ ಕೋಣಗಳಿಗೆ ಕುಡಿಯಲು ನೀರು ಸಹ ಮಂಗಳೂರಿನಿಂದಲೇ ತರಲಾಗಿದೆ. ಕಂಬಳದ ಕೋಣಗಳನ್ನು…
ಹುಬ್ಬಳ್ಳಿ: ಅದು ಹುಬ್ಬಳ್ಳಿಯ ಪ್ರತಿಷ್ಠಿತ ಗಲ್ಲಿಯಲ್ಲಿರುವ ಸರ್ಕಾರಿ ಶಾಲೆ. ಈ ಶಾಲೆಯ ಮುಂದಿರುವ ಅವ್ಯವಸ್ಥೆ ನೋಡಿದರೇ ಯಾವ ಸಮಯಕ್ಕೆ ಏನಾಗುತ್ತದೆಯೋ ಎಂಬ ಆತಂಕ ಸ್ಥಳೀಯರಲ್ಲಿ ಮಾತ್ರವಲ್ಲದೆ ಪಾಲಕರ ಮನಸ್ಸಿನಲ್ಲಿ ಆತಂಕ ಮನೆ ಮಾಡಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ ಒಂದಿಲ್ಲೊಂದು ಅವ್ಯವಸ್ಥೆಯಿಂದ ಸುದ್ಧಿಯಾಗುತ್ತಲೇ ಇದೆ. ಮೊನ್ನೆಯಷ್ಟೇ ಬೆಸ್ಕಾಂ ನಿರ್ಲಕ್ಷ್ಯದಿಂದ ತಾಯಿ, ಮಗು ಮೃತಪಟ್ಟ ಘಟನೆ ಸಂಭವಿಸಿದ್ದರೂ ಕೂಡ ಹೆಸ್ಕಾಂ ಎಚ್ಚೇತ್ತುಕೊಂಡಿಲ್ಲ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ಮರಾಠಗಲ್ಲಿಯಲ್ಲಿರುವ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಹೌದು.. ಎಲ್ಲೆಂದರಲ್ಲಿ ಹರಿದು ಬಿದ್ದಿರುವ ಕೇಬಲ್, ತಲೆಗೆ ತಗಲುವಂತಿರುವ ವಿದ್ಯುತ್ ಪ್ರವಹಿಸುವ ಕೇಬಲ್, ಶಾಲೆಯ ಕಟ್ಟಡಕ್ಕೆ ಹೊಂದಿಕೊಂಡಿರುವ ವಿದ್ಯುತ್ ಕಂಬಗಳು. ಇವೆಲ್ಲವೂ ಅಪಘಾತಕ್ಕೆ ಆಹ್ವಾನ ನೀಡುವಂತಿದ್ದರೂ ಯಾರೊಬ್ಬರೂ ಕಾಳಜಿ ವಹಿಸಿಲ್ಲ.. https://ainlivenews.com/housewifes-body-found-hanging-in-bangalore/ ಈಗಾಗಲೇ ಸ್ಥಳೀಯರು ಹಾಗೂ ಶಾಲೆಯ ಆಡಳಿತ ಮಂಡಳಿ ಹೆಸ್ಕಾಂ ಇಲಾಖೆ,ಶಿಕ್ಷಣ ಇಲಾಖೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಕೂಡ ಯಾವುದೇ…
ಕಾಂತಾರ ಸಿನಿಮಾ ಬಗ್ಗೆ ದಿನಕ್ಕೊಂದು ಮಾಹಿತಿ ಹೊರ ಬೀಳುತ್ತಿವೆ. ಸಿನಿಮಾ ಟೀಮ್ ಅಧಿಕೃತವಾಗಿ ಯಾವುದೇ ಮಾಹಿತಿ ಸಿಗದೇ ಇದ್ದರೂ, ಬಲ್ಲ ಮೂಲಗಳು ಮಾಹಿತಿಯನ್ನು ಹೊರ ಹಾಕುತ್ತಲೇ ಇವೆ. ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿತ್ತು. ಹಿಟ್ ಆದ ನಂತರ ಹಲವು ಭಾಷೆಗಳಲ್ಲಿ ಅದನ್ನು ಡಬ್ ಮಾಡಲಾಯಿತು. ಆದರೆ, ಕಾಂತಾರ 2 ಬರೋಬ್ಬರಿ ಏಳು ಭಾಷೆಗಳಲ್ಲಿ ನಿರ್ಮಾಣವಾಗಲಿದೆಯಂತೆ. ಹಾಗಾಗಿ ಅದ್ಧೂರಿ ಮೇಕಿಂಗ್ ಕೂಡ ಇರಲಿದೆಯಂತೆ. ಮೊನ್ನೆಯಷ್ಟೇ ಸಿನಿಮಾ ಮಹೂರ್ತದ (Muhurta) ಕುರಿತಂತೆ ಪಂಜುರ್ಲಿ (Panjurl) ಮತ್ತು ಗುಳಿಗ ದೈವಕ್ಕೆ ಚಿತ್ರತಂಡ ಮೊರೆ ಹೋಗಿದ್ದು, ದೈವಗಳು ಅಸ್ತು ಎಂದಿವೆ ಎನ್ನುವ ಮಾಹಿತಿ ಸಿಕ್ಕಿತ್ತು. ಹೀಗಾಗಿ ಸಿನಿಮಾ ತಂಡ ಮುಹೂರ್ತಕ್ಕೆ ಸರ್ವ ಸಿದ್ಧತೆ ಮಾಡಿಕೊಂಡಿದೆ. ಮತ್ತೊಂದು ಸಮಾಚಾರವೆಂದರೆ, ಈ ಸಿನಿಮಾದಲ್ಲಿ 14ನೇ ಶತಮಾನದಿಂದ ಶುರುವಾಗುವ ಕಥೆ ಕೂಡ ಇರಲಿದೆಯಂತೆ. ಈ ಕುರಿತು ಚಿತ್ರತಂಡ ಮಾಹಿತಿ ನೀಡದೇ ಇದ್ದರೂ, ಗಾಂಧಿ ನಗರದ ಗಲ್ಲಿ ಗಲ್ಲಿಗಳಲ್ಲಿ ಕಾಂತರ ಕಥೆ ಹಾಟ್ ಕೇಕ್ ತರಹ ಮಾರಾಟವಾಗುತ್ತಿದೆ. ‘ಕಾಂತಾರ‘ ಸಿನಿಮಾ ವರ್ಲ್ಡ್ ವೈಡ್ ರೀಚ್ ಸಕ್ಸಸ್ಫುಲ್ ಪ್ರದರ್ಶನ ಕಂಡಿತ್ತು. ‘ಕಾಂತಾರ‘ ಪಾರ್ಟ್ 2 ಯಾವಾಗ ಎಂದು ಕಾದು ಕುಳಿತ ಫ್ಯಾನ್ಸ್ಗೆ ಸಿಹಿಸುದ್ದಿ ಸಿಕ್ಕಿದೆ. ಇದೇ ನವೆಂಬರ್ಗೆ ಮುಹೂರ್ತ ಫಿಕ್ಸ್ ಆಗಿದೆ. ಹೊಂಬಾಳೆ ಸಂಸ್ಥೆ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2′ ಚಿತ್ರದ ಮುಹೂರ್ತ ಇದೇ ನವೆಂಬರ್ 27ರಂದು ಸೋಮವಾರ ಸರಳವಾಗಿ ಜರುಗಲಿದೆ.
ಚಳಿಗಾಲದಲ್ಲಿ ತ್ವಚೆಯಲ್ಲಿ ಶುಷ್ಕತೆ, ಚರ್ಮ ಕಪ್ಪಾಗುವುದು ಮತ್ತು ತ್ವಚೆ ಬಿರುಕು ಬಿಡುವುದು, ತುಟಿ ಒಡೆಯುವುದು, ಪಾದ ಬಿರುಕು ಬಿಡುವಂತಹದ್ದು ತುಂಬಾ ಸಾಮಾನ್ಯ. ಆದರೆ, ಇವುಗಳಿಂದಾಗುವ ಕಿರಿಕಿರಿ ಸಹಿಸಿಕೊಳ್ಳಲು ಆಗುವುದಿಲ್ಲ. ಹೀಗಾಗಿ ಚಳಿಗಾಲದಲ್ಲಿ ತಮ್ಮ ಚರ್ಮವನ್ನು ಆರೋಗ್ಯವಾಗಿ ಇಟ್ಟುಕೊಳ್ಳಲು ತೆಂಗಿನ ಎಣ್ಣೆ ಅಥವಾ ಕೊಬ್ಬರಿ ಎಣ್ಣೆ ತುಂಬಾ ಒಳ್ಳೆಯದು. ಕೊಬ್ಬರಿ ಎಣ್ಣೆಯು ಚರ್ಮವನ್ನು ಹಾನಿಕಾರಕ ಸೂಕ್ಷ್ಮಾಣುಜೀವಿಗಳಿಂದ ರಕ್ಷಿಸುತ್ತದೆ. ತೆಂಗಿನ ಎಣ್ಣೆಯಲ್ಲಿರುವ ಲಾರಿಕ್ ಮತ್ತು ಕ್ಯಾಪ್ರಿಕ್ ಆಮ್ಲಗಳಂತಹ ಕೊಬ್ಬಿನಾಮ್ಲಗಳು ತಮ್ಮ ಆಯಂಟಿಮೈಕ್ರೊಬಿಯಲ್ ಗುಣಲಕ್ಷಣಗಳಿಂದಾಗಿ ಚರ್ಮವನ್ನು ಆರೋಗ್ಯಕರವಾಗಿ ಇರಿಸುತ್ತದೆ ಮತ್ತು ನಮ್ಮ ಚರ್ಮದ ಮೇಲೆ ಬೆಳೆಯುವ ಹಾನಿಕಾರಕ ಸೂಕ್ಷ್ಮಜೀವಿಗಳನ್ನು ನಾಶಮಾಡುತ್ತವೆ. ಮೊಡವೆ, ಫೋಲಿಕ್ಯುಲೈಟಿಸ್, ಸೆಲ್ಯುಲೈಟಿಸ್ ಮುಂತಾದ ಚರ್ಮದ ಸೋಂಕುಗಳು, ಶಿಲೀಂಧ್ರಗಳು ಮತ್ತು ಬ್ಯಾಕ್ಟೀರಿಯಾಗಳಿಂದ ಉಂಟಾಗುತ್ತವೆ ಮತ್ತು ಇವುಗಳಿಗೆ ತೆಂಗಿನ ಎಣ್ಣೆ ಮುಕ್ತಿ ನೀಡುತ್ತದೆ. ತೆಂಗಿನ ಎಣ್ಣೆಯು ಒಣ, ಒಡೆದ ಚರ್ಮಕ್ಕೆ ಅತ್ಯಂತ ಪರಿಣಾಮಕಾರಿ ಮಾಯಿಶ್ಚರೈಸರ್ ಆಗಿದೆ. ತೆಂಗಿನ ಎಣ್ಣೆ ಚರ್ಮವನ್ನು ಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ ಮತ್ತು ತೇವಾಂಶವನ್ನು ಚೆನ್ನಾಗಿ ಉಳಿಸಿಕೊಳ್ಳಲು ಉಪಯುಕ್ತವಾಗಿದೆ. ತೆಂಗಿನ ಎಣ್ಣೆ…
ಪ್ರಜ್ವಲ್ ದೇವರಾಜ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇದೇ ನವೆಂಬರ್ 29ಕ್ಕೆ ಪ್ರಜ್ವಲ್ ನಟನೆಯ ಮಾಫಿಯಾ ಸಿನಿಮಾದ ಟೀಸರ್ (Teaser) ರಿಲೀಸ್ ಆಗಲಿದೆ. ಇದೊಂದು ವಿಭಿನ್ನ ಕಥಾ ಹಂದರ ಹೊಂದಿರುವ ಸಿನಿಮಾವಾಗಿದ್ದು, ಚಿತ್ರದ ಬಗ್ಗೆ ನಿರೀಕ್ಷೆ ಮೂಡಿಸಿದೆ. ಅದರ ಭಾಗವಾಗಿ ಟೀಸರ್ ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್. ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ, ಅದಿತಿ ಪ್ರಭುದೇವ (Aditi Prabhudeva) ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ ಮಾಫಿಯಾ (Mafia) ಚಿತ್ರಕ್ಕೆ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಡಬ್ಬಿಂಗ್ (Dubbing) ಕಾರ್ಯ ಮುಕ್ತಾಯವಾಗಿದೆ. ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿವೆ. ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.
ಬಾಗಲಕೋಟೆ ನ 23: ಭೋವಿ ಅಧ್ಯಯನ ಪೀಠ ಮಾಡುವುದಕ್ಕೆ ಮತ್ತು ಸಮುದಾಯದ ಒಬ್ಬರನ್ನು KPSC ಸದಸ್ಯರನ್ನಾಗಿಸುವುದಕ್ಕೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಬಾಗಲಕೋಟೆಯಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಭೋವಿ ಜನಾಂಗದ ಕಸುಬಾದ ಕಲ್ಲು ಹೊಡೆಯುವ ಮೂಲಕ ಭೋವಿ ಸಮುದಾಯದ ಕುಲಗುರು ಶರಣಬಸವ ಅಪ್ಪಂಗಳ್ ಅವರ ಕುಟೀರವನ್ನು ಉದ್ಘಾಟಿಸಿ, ಶಿಲಾಮಂಟಪದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಭೋವಿ ಅಭಿವೃದ್ಧಿ ನಿಗಮ ಮಾಡುವ ಭರವಸೆ ನಾನು ನೀಡಿದ್ದೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೇ ಅಭಿವೃದ್ಧಿ ನಿಗಮ ಮಾಡಿದೆ. ಈಗಲೂ ನಿಮ್ಮ ಬೇಡಿಕೆ ಈಡೇರಿಸಲು ನಾನು ಸಿದ್ದ ಎಂದು ಭರವಸೆ ನೀಡಿದರು. ಭೋವಿ ಸಮಾಜದ ಹಿತ ಕಾಯುವ ಪಕ್ಷ ನಮ್ಮದು. ನಾನು ಸಮುದಾಯಕ್ಜೆ ಆರ್ಥಿಕ ಶಕ್ತಿ ನೀಡುತ್ತೇನೆ. ನಿಮ್ಮ ಆಶೀರ್ವಾದ ನಮಗಿರಲಿ. ನಾನು ಸಿದ್ದರಾಮೇಶ್ವರರ ವಚನಗಳಲ್ಲಿ, ಆಶಯಗಳಲ್ಲಿ ನಂಬಿಕೆ ಇಟ್ಟುಕೊಂಡಿದ್ದೇನೆ ಎಂದರು. ಬಸವಣ್ಣನವರಿಗಿಂತ ಮೊದಲು ಧರ್ಮ ಬೋಧನೆ ಜನರ ಭಾಷೆಯಲ್ಲಿ ಆಗುತ್ತಿರಲಿಲ್ಲ. ಶರಣರು ಬಂದ ಬಳಿಕ ಜನರ ಭಾಷೆಯಲ್ಲಿ ಧಾರ್ಮಿಕ ಬೋಧನೆ ಶುರುವಾಯಿತು.…
2023ರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ (World Cup) ಭಾರತ ಸೋತು ವಾರ ಕಳೆಯುವ ಮೊದಲೇ ರೋಹಿತ್ ಶರ್ಮಾ (Rohit Sharma) ಅವರ ನಿವೃತ್ತಿ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ. ರೋಹಿತ್ ನಿವೃತ್ತಿ ಬಗ್ಗೆ ಬಿಸಿಸಿಐ (BCCI) ಬಳಿ ಈಗಾಗಲೇ ಮಾತಾಡಿದ್ದಾರೆ ಎಂದು ವರದಿಯಾಗಿದೆ. ಟೀಂ ಇಂಡಿಯಾದ ಉತ್ತಮ ಬ್ಯಾಟರ್ಗಳಲ್ಲಿ ಒಬ್ಬರಾದ ರೋಹಿತ್, ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಮುಂದುವರಿಯುದಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ. ಅಲ್ಲದೇ ಟೀಂ ಇಂಡಿಯಾದ ಟಿ20 ತಂಡಕ್ಕೆ ಪರಿಗಣಿಸದೇ ಇದ್ದರೂ ಸಮಸ್ಯೆ ಇಲ್ಲ ಎಂದು ರೋಹಿತ್ ಹೇಳಿಕೊಂಡಿದ್ದಾಗಿ ವರದಿಯಾಗಿದೆ. 2021ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ ಭಾರತ ತಂಡದ ನಾಯಕತ್ವ ವಹಿಸಿಕೊಂಡಿದ್ದ ರೋಹಿತ್ ಶರ್ಮಾ 2023ರ ಏಷ್ಯಾ ಕಪ್ನಲ್ಲಿ ಮಾತ್ರ ಗೆಲುವು ಸಾಧಿಸಿದ್ದರು ಸದ್ಯಕ್ಕೆ ರೋಹಿತ್ ಟೆಸ್ಟ್ ಕ್ರಿಕೆಟ್ ಕಡೆಗೆ ತಮ್ಮ ಗಮನ ನೀಡುವ ಸಾಧ್ಯತೆ ಹೆಚ್ಚಿದೆ. 3ನೇ ಆವೃತ್ತಿಯ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್ಷಿಪ್ ಟೂರ್ನಿಯ ಫೈನಲ್ ಕೂಡ 2025ರಲ್ಲೇ ನಡೆಯಲಿದೆ. ಹೀಗಾಗಿ ತಂಡದಲ್ಲಿ…
ಆಸ್ಟ್ರೇಲಿಯಾದ ಬ್ಯಾಟರ್ ಮಿಚೆಲ್ ಮಾರ್ಷ್ ಕಾಲಿಟ್ಟು ವಿಶ್ರಾಂತಿ ಪಡೆಯುವ ಮೂಲಕ ಟ್ರೋಫಿಗೆ ಅಗೌರವ ತೋರಿದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಪ್ರತಿಕ್ರಿಯೆ ನೀಡಿದ್ದು, ನಿಜಕ್ಕೂ ತುಂಬಾ ನೋವಾಯಿತು ಎಂದಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಸಾಧನೆ ಮಾಡಿರುವ ಶಮಿ, ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮಿಚೆಲ್ ಮಾರ್ಷ್ ನಡೆಯನ್ನು ಕುಟುವಾಗಿ ಟೀಕಿಸಿದ್ದಾರೆ. ನನಗೆ ತುಂಬಾ ಬೇಸರವಾಯಿತು. ವಿಶ್ವದ ಎಲ್ಲ ತಂಡಗಳು ಹೋರಾಡುವ ಮತ್ತು ತಲೆಯ ಮೇಲೆ ಹೊತ್ತು ಸಂಭ್ರಮಿಸಲು ಬಯಸುವ ಟ್ರೋಫಿಯ ಮೇಲೆ ಕಾಲು ಇಟ್ಟಿದ್ದು, ನನಗೆ ಸಂತೋಷ ನೀಡಲಿಲ್ಲ ಎಂದು ಶಮಿ ಹೇಳಿದರು. ಇದೇ ಸಂದರ್ಭದಲ್ಲಿ ಪಿಚ್ ಬಗ್ಗೆ ಮಾತನಾಡಿದ ಶಮಿ, ಸಾಮಾನ್ಯವಾಗಿ ಬೌಲರ್ಗಳು ಮೈದಾನಕ್ಕೆ ಬಂದ ಬಳಿಕ ಪಿಚ್ ಅನ್ನು ಪರಿಶೀಲಿಸುತ್ತಾರೆ. ನಾನು ಎಂದಿಗೂ ವಿಕೆಟ್ ಬಳಿ ಹೋಗುವುದಿಲ್ಲ ಏಕೆಂದರೆ, ನೀವು ವಿಕೆಟ್ ಮೇಲೆ ಬೌಲ್ ಮಾಡಿದಾಗ ಮಾತ್ರ ಅದು ಬಗ್ಗೆ ನಿಮಗೆ ತಿಳಿಯುತ್ತದೆ. ಹೀಗಿರುವಾಗ ಏಕೆ ಒತ್ತಡವನ್ನು…