Author: AIN Author

ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir) ಅವರು ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫ್ರಾಂಚೈಸಿ ಲಕ್ನೋ ಸೂಪರ್ ಜೈಂಟ್ಸ್‌ಗೆ (Lucknow Super Giants) ಗುಡ್‌ಬೈ ಹೇಳಿದ್ದಾರೆ. ಅಧಿಕೃತವಾಗಿ ಎಲ್‌ಎಸ್‌ಜಿ (LSG) ತೊರೆದು ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ತಂಡಕ್ಕೆ ಮತ್ತೆ ಮರಳಿದ್ದಾರೆ. ಕೆಕೆಆರ್‌ ತಂಡದಲ್ಲಿದ್ದಾಗ ನಾಯಕರಾಗಿ ಎರಡು ಪ್ರಶಸ್ತಿಗಳನ್ನು ತಂದುಕೊಟ್ಟಿದ್ದರು. ಕೆಕೆಆರ್‌ನ ಸಿಇಒ ವೆಂಕಿ ಮೈಸೂರು (Venky Mysuru) ಅವರು ಬುಧವಾರ ಈ ಸಂಬಂಧ ಮಾಹಿತಿ ಹಂಚಿಕೊಂಡಿದ್ದಾರೆ. ಗಂಭೀರ್‌ ಮೆಂಟರ್‌ ಆಗಿ ಬರುತ್ತಿರುವುದನ್ನು ಕೆಕೆಆರ್‌ ಸಹ-ಮಾಲೀಕ ಶಾರುಖ್‌ ಖಾನ್‌ ಸ್ವಾಗತಿಸಿದ್ದಾರೆ. ಫ್ರಾಂಚೈಸಿಗೆ ಗಂಭೀರ್ ಆಗಮನವನ್ನು ‘ನಾಯಕನ ಹಿಂತಿರುಗುವಿಕೆ’ ಎಂದು ಬಣ್ಣಿಸಿದ್ದಾರೆ. ಗಂಭೀರ್ ಎರಡು ವರ್ಷಗಳ ಕಾಲ LSG ಯ ಸಲಹೆಗಾರರಾಗಿ ಪಾತ್ರ ನಿರ್ವಹಿಸಿದ್ದರು. IPL 2022 ಆವೃತ್ತಿಯಲ್ಲಿ ತಂಡ ಫೈನಲ್ ತಲುಪಲು ಅಪಾರ ಶ್ರಮಿಸಿದ್ದರು. 2023 ರ ಆವೃತ್ತಿಯಲ್ಲಿ LSG ಲೀಗ್ ಸ್ಟ್ಯಾಂಡಿಂಗ್‌ನಲ್ಲಿ ಮೂರನೇ ಸ್ಥಾನ ಗಳಿಸಿತು. ಆದರೆ ಸತತವಾಗಿ ಎರಡನೇ ಬಾರಿಗೆ ಫೈನಲ್‌ಗೆ ಅರ್ಹತೆ…

Read More

ಲಕ್ನೋ: ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿಯನ್ನೇ ಹತ್ಯೆಗೈದಿದ್ದ ಪತ್ನಿ ಹಾಗೂ ಆಕೆಯ ಸಹೋದರನನ್ನು ಉತ್ತರ ಪ್ರದೇಶದ (Uttar Pradesh) ಪೊಲಿಸರು (Police) ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಭಾವನ ಸಿಂಗ್ ಮತ್ತು ಆಕೆಯ ಸಹೋದರ ದೇವೇಂದ್ರ ಕುಮಾರ್ ವರ್ಮಾ ಎಂದು ಗುರುತಿಸಲಾಗಿದೆ. ಆರೋಪಿಗಳು ಇನ್ಸ್‌ಪೆಕ್ಟರ್ ಆಗಿದ್ದ ಸತೀಶ್ ಸಿಂಗ್ ಅವರನ್ನು ಹತ್ಯೆಗೈದಿದ್ದರು. ಅಲ್ಲದೇ ಪ್ರಕರಣದ ದಿಕ್ಕು ತಪ್ಪಿಸಲು ಸೈಕಲ್ ಮೇಲೆ ಬಂದ ವ್ಯಕ್ತಿ ಕೊಲೆಗೈದು ಹೋಗಿದ್ದಾಗಿ ಕತೆಕಟ್ಟಿದ್ದರು. ಕೊಲೆ ನಡೆದ ಸ್ವಲ್ಪ ದೂರದಲ್ಲಿ ಸೈಕಲ್ ಹಾಗೂ ಬಟ್ಟೆಯನ್ನು ಎಸೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆಯ ವೇಳೆ ಇನ್ಸ್‌ಪೆಕ್ಟರ್ ಸತೀಶ್ ಸಿಂಗ್ ಅನೇಕ ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹೊಂದಿರುವುದು ಬೆಳಕಿಗೆ ಬಂದಿದೆ. https://ainlivenews.com/housewifes-body-found-hanging-in-bangalore/ ಇದರಿಂದಾಗಿ ಭಾವನಾ ಸಿಂಗ್ ಮತ್ತು ಸತೀಶ್ ಸಿಂಗ್ ನಡುವೆ ನಿರಂತರವಾಗಿ ವಾಗ್ವಾದ ನಡೆಯುತ್ತಿತ್ತು. ಇದರಿಂದ ಆತನನ್ನು ಹತ್ಯೆಗೈಯಲು ಆರೋಪಿಗಳು ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆಗೆ 10 ಕಿಲೋಮೀಟರ್ ವ್ಯಾಪ್ತಿಯ 400 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದಾಗ ಆರೋಪಿಗಳು…

Read More

ಮಂಗಳೂರು: ” ಅಧಿವೇಶನದ ಸ್ಪೀಕರ್‌ ಬಗ್ಗೆ ಹೇಳಿಕೆ ಕೊಟ್ಟಿರುವ ಸಚಿವ ಜಮೀರ್‌ ಅವರನ್ನು ರಸ್ತೆಯಲ್ಲಿ ಓಡಾಡಲು ಬಿಟ್ಟಿರುವುದೇ ಅಪರಾಧ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣವೇ ಜಮೀರ್‌ ಅವರ ರಾಜೀನಾಮೆ ಪಡೆಯಬೇಕು. ಇಲ್ಲವಾದರೆ ನಾವು ಹೋರಾಟ ನಡೆಸುತ್ತೇವೆ ” ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ. ವಕ್ಫ್‌ ಸಚಿವ ಜಮೀರ್ ಅಹಮದ್‌ ಖಾನ್‌ರನ್ನು ರಸ್ತೆಯಲ್ಲಿ ಓಡಾಡಲು ನಾವು ಬಿಟ್ಟಿರೋದೇ ಹೆಚ್ಚು, ಸ್ಪೀಕ‌ರ್ ಸ್ಥಾನಕ್ಕೆ ಜಾತಿ ಧರ್ಮದ ಬಣ್ಣ ಹಚ್ಚಿ ತಲೆ ತಗ್ಗಿಸುವ ಕೆಲಸ ಮಾಡಿದ್ದಾರೆ. ಇಷ್ಟು ಹೊತ್ತಿಗೆ ಅವರಿಂದ ಸಿಎಂ ರಾಜಿನಾಮೆ ತೆಗೆದುಕೊಳ್ಳಬೇಕಿತ್ತು. ಮುಂದಿನ ಅಧಿವೇಶನದಲ್ಲಿ ಹೇಗೆ ಭಾಗವಹಿಸುತ್ತಾರೆ ನೋಡುತ್ತೇವೆ. ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು. https://ainlivenews.com/housewifes-body-found-hanging-in-bangalore/  ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಅದನ್ನು ನಿಭಾಯಿಸಲು ಸರಕಾರ ವಿಫಲವಾಗಿದೆ. ಉಸ್ತುವಾರಿ ಸಚಿವರು ಜಿಲ್ಲಾ ಪ್ರವಾಸ ಮಾಡಿಲ್ಲ, ಅಧಿಕಾರಿಗಳ ಸಭೆ ಕೂಡ ಕರೆದಿಲ್ಲ. ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಬರದ ವಿಚಾರ ಮಾತನಾಡದೆ ಲೋಕಸಭಾ…

Read More

ಬೆಂಗಳೂರು:- ಜಾತಿ ಗಣತಿ ವರದಿಯಲ್ಲಿ ಏನಿದೆ ಎಂಬುದು ಗೊತ್ತಿಲ್ಲ ಎಂದು ಸಚಿವ ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಜಾತಿ ಗಣತಿ ವರದಿಯಲ್ಲಿ ಏನಿದೆ ಎಂಬುದು ತಮಗೆ ಗೊತ್ತಿಲ್ಲ. ಜಾತಿ ಗಣತಿ ವರದಿ ಇನ್ನು ಬಂದಿಲ್ಲ. ಸುಮ್ಮನೆ ನೀರಿನೊಳಗೆ ಎಮ್ಮೆ ನಿಲ್ಲಿಸಿ ಹಾಲು ಕರೆದಂತೆ ಎಂದ ಅವರು ಅದು ಕೋಣಾನೋ, ಎಮ್ಮೆನೋ ಯಾರಿಗೆ ಗೊತ್ತು ಎಂದರು. ವರದಿ ಬಂದ ಬಳಿಕ ಈ ಬಗ್ಗೆ ಚರ್ಚೆಯಾಗುತ್ತದೆ ಎಂದ ಅವರು ಬಿಹಾರದಲ್ಲಿ ವರದಿ ಬಿಡುಗಡೆಯಾಗಿದೆ. ಆಕಾಶ ಬಿದ್ದು ಹೋಯ್ತಾ ಎಂದು ಪ್ರಶ್ನಿಸಿದರು. ಇನ್ನು ವರದಿ ಬಂದಿಲ್ಲ, ಹೀಗಾಗಿ ಸುಮ್ಮನೆ ಊಹಾಪೋಹಗಳ ಮೇಲೆ ಪ್ರಶ್ನೆ ಮಾಡುವುದು ಸರಿಯಲ್ಲ ಎಂದರು. ಆಯೋಗದ ಅಧ್ಯಕ್ಷರಿಗೆ ಒಂದು ತಿಂಗಳು ಹೆಚ್ಚಿಗೆ ಕಾಲಾವಕಾಶ ನೀಡಲಾಗಿದೆ. ವರದಿನೇ ಆಚೆ ಬಂದಿಲ್ಲ, ವರದಿ ಆಚೆ ಬಂದ ನಂತರ ಪರ ವಿರೋಧ ಅಭಿಪ್ರಾಯಗಳು ಕೇಳಿಬರಬಹದು. ಏನೂ ಇಲ್ಲದೇನೆ ಹೀಗೆ ಚರ್ಚೆ ನಡೆಸೋದು ಎಷ್ಟರ ಮಟ್ಟಿಗೆ ಸರಿ ಎಂದರು. ವಿ. ಸೋಮಣ್ಣ ಕರೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ…

Read More

ಬೆಂಗಳೂರು: ಮಂಡ್ಯದಿಂದ ಸ್ಪರ್ಧಿಸುವಂತೆ ಜೆಡಿಎಸ್ (JDS) ಯುವಮುಖಂಡ ನಿಖಿಲ್ ಕುಮಾರಸ್ವಾಮಿಗೆ  ಆಹ್ವಾನ ಬಂದಿದೆ ಎಂದು ಜೆಡಿಎಸ್​ ಮಾಜಿ ಶಾಸಕ ಸುರೇಶ್ ಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲಾ ಜೆಡಿಎಸ್​ ನಾಯಕರು ಸೇರಿದಂತೆ ನಿಲ್ ಕುಮಾರಸ್ವಾಮಿಗೆ ಆಹ್ವಾನ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಮಂಡ್ಯದಲ್ಲಿ ನಿಖಿಲ್​ ಕಣಕ್ಕಿಳಿಸಲು ನಮ್ಮ ವರಿಷ್ಠರಿಗೆ ಕೇಳಿದ್ದೇವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್​​ಗೆ ಸೋಲಾಗಿತ್ತು. ಈ ಬಾರಿ ಸ್ಪರ್ಧೆಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ದೇವೆ. ಬಿಜೆಪಿ-ಜೆಡಿಎಸ್ ಜೊತೆಯಾಗಿ ಹೋಗಲು ತೀರ್ಮಾನ ಮಾಡಿದ್ದೇವೆ. ನಿಖಿಲ್ ಸ್ಪರ್ಧಿಸಬೇಕು ಎಂಬುದೇ ನಮ್ಮೆಲ್ಲರ ಒತ್ತಾಯ. ಮಂಡ್ಯ ಟಿಕೆಟ್‌ಗೆ ಮೊದಲ ಆದ್ಯತೆ ನಿಖಿಲ್ ಕುಮಾರಸ್ವಾಮಿಗೆ ಎಂದು ಹೇಳಿದ್ದಾರೆ.

Read More

ಬೆಂಗಳೂರು:- ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ನಡೆಯಲಿದೆ. ಮೂರು ದಿನಗಳ ಕಾಲ ಕಂಬಳ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ವೇದಿಕೆ ಕಾರ್ಯಕ್ರಮ ಉದ್ಘಾಟನೆ ಆಗಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಇನ್ನೂ ಸಂಜೆ 3:30 ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಕಂಬಳ ಉದ್ಘಾಟನೆ ಮಾಡಲಿದ್ದಾರೆ. ವೀಕೆಂಡ್​ನಲ್ಲಿ ಕಂಬಳ ವೀಕ್ಷಣೆಗೆ 6 ರಿಂದ 7 ಲಕ್ಷ ಜನ ಬರುವ ಸಾಧ್ಯತೆ ಇದೆ. ಇದಕ್ಕಾಗಿ ಸಕಲ ತಯಾರಿ ಮಾಡಲಾಗಿದ್ದು, ಜನರು ಕೂತು ಕಂಬಳ ವೀಕ್ಷಿಸಲು ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರಿಗೆ ಉಚಿತ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕೋಣಗಳಿಗೂ ಸೂಕ್ತ ಜಾಗ, ಮೇವು, ನೀರಿನ ವ್ಯವಸ್ಥೆ ಮಾಡಲಾಗಿದೆ. ಕಂಬಳಕ್ಕೆ 77.50- 78 ಕೋಟಿ ರೂ. ವೆಚ್ಚ ತಗಲುವ ನಿರೀಕ್ಷೆಯಿದ್ದು, ಸರ್ಕಾರ ಒಂದು ಕೋಟಿ ರೂ. ಅನುದಾನ ಪ್ರಕಟಿಸಿದೆ. ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಗಳು ಹಣ ಸಹಾಯ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಕೈಜೋಡಿಸಿವೆ. ವಿಜೇತರ ಬಹುಮಾನ ವಿವರ ಹೀಗಿದೆ ಬೆಂಗಳೂರು ಕಂಬಳದಲ್ಲಿ ವಿಜೇತರಾಗುವ…

Read More

ಅರ್ಜೆಂಟೀನಾ: ಅರ್ಜೆಂಟೀನಾದ ಹೊಸ ಅಧ್ಯಕ್ಷರಾಗಿ ಲಿಬರ್ಟೇರಿಯನ್ ಹೊರಗಿನ ಜೇವಿಯರ್ ಮಿಲೀ ಅವರನ್ನು ಆಯ್ಕೆ ಮಾಡಿದೆ. ಮೂರು-ಅಂಕಿಯ ಹಣದುಬ್ಬರ, ಮುಂಚೂಣಿಯಲ್ಲಿರುವ ಆರ್ಥಿಕ ಹಿಂಜರಿತ ಮತ್ತು ಹೆಚ್ಚುತ್ತಿರುವ ಬಡತನದಿಂದ ಜರ್ಜರಿತವಾಗಿರುವ ಆರ್ಥಿಕತೆಯನ್ನು ಸರಿಪಡಿಸಲು ಮೂಲಭೂತ ದೃಷ್ಟಿಕೋನಗಳೊಂದಿಗೆ ಹೊರಗಿನವರವನ್ನು ಆಯ್ಕೆ ಮಾಡಿದೆ. ಅಧಿಕೃತ ಫಲಿತಾಂಶಗಳು ಮಿಲೀ ಅವರ ಪ್ರತಿಸ್ಪರ್ಧಿ, ಪೆರೋನಿಸ್ಟ್ ಆರ್ಥಿಕ ಸಚಿವ ಸೆರ್ಗಿಯೊ ಮಾಸ್ಸಾಗೆ 56% ಮತ್ತು 44% ರಷ್ಟನ್ನು ತೋರಿಸಿದವು. ಸರ್ಕಾರ ಹೊರಡಿಸಿರುವ ಅಧಿಕೃತ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಲಾಗಿದೆ. ಪೆರೋನಿಸ್ಟ್ ಪಕ್ಷದ ಸೆರ್ಗಿಯೋ ಚುನಾವಣೆಯಲ್ಲಿ ಗೆದ್ದ ಜೇವಿಯರ್ ಅವರನ್ನು ಅಭಿನಂದಿಸಿದ್ದಾರೆ. ತನ್ನನ್ನು ಅರಾಜಕತಾವಾದಿ-ಬಂಡವಾಳಶಾಹಿ ಎಂದು ಕರೆದುಕೊಳ್ಳುವ ಮಿಲ್ಲಿಯನ್ನು ಸಾಮಾನ್ಯವಾಗಿ ಮಾಜಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಹೋಲಿಸಲಾಗುತ್ತದೆ. ಕೆಲವೊಮ್ಮೆ ಅವರ ನಡವಳಿಕೆ, ಕೆಲವೊಮ್ಮೆ ಅವರ ಕೆಲಸದ ಆಧಾರದ ಮೇಲೆ ಈ ಹೆಸರಿನಲ್ಲಿ ಕರೆಯಲಾಗುತ್ತದೆ. https://ainlivenews.com/housewifes-body-found-hanging-in-bangalore/ ಅರ್ಜೆಂಟೀನಾದ ಹೊಸ ಅಧ್ಯಕ್ಷರನ್ನು ದಿ ಲಯನ್, ದಿ ವಿಗ್ ಮತ್ತು ದಿ ಮ್ಯಾಡ್‌ಮ್ಯಾನ್ ಎಂಬ ಮೂರು ಅಡ್ಡಹೆಸರುಗಳಿಂದ ಕರೆಯಲಾಗುತ್ತದೆ. ಸತ್ತ ನಾಯಿಯಿಂದ ಸಲಹೆಯನ್ನು ಪಡೆಯುವ ಕಾರಣ…

Read More

ಬೆಂಗಳೂರು:- KEA ಪರೀಕ್ಷೆಯಲ್ಲಿನ ಅಕ್ರಮ ಎಸಗಿದ ಆರ್.ಡಿ. ಪಾಟೀಲಗೆ ಮತ್ತೆ ನ್ಯಾಯಾಂಗ ಬಂಧನ ನೀಡಲಾಗಿದೆ. ಕಳೆದ ಅಕ್ಟೋಬರ್ 28ರಂದು ನಡೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಪ್ರಮುಖ ಆರೋಪಿ ಅಫಜಲಪುರದ ಆರ್.ಡಿ. ಪಾಟೀಲ ಪೊಲೀಸ್ ಕಸ್ಟಡಿಯ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಇಲ್ಲಿನ ಪ್ರಧಾನ ಜೆಎಂಎಫ್‌ಸಿ ನ್ಯಾಯಾಲಯವು ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿತ್ತು. ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿ ತನಿಖೆಗಾಗಿ ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಮಾಹಿತಿ ಸಂಗ್ರಹಿಸಿದ ಬಳಿಕ ಗುರುವಾರ ಆರ್.ಡಿ. ಪಾಟೀಲನನ್ನು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಧೀಶ ಸಂತೋಷ ಶ್ರೀವಾಸ್ತವ ಅವರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಇದುವರೆಗೆ ಕಲಬುರಗಿಯ ಅಶೋಕ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದರು. ವಿಶ್ವವಿದ್ಯಾಲಯ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಮತ್ತೆ ತಮ್ಮ ವಶಕ್ಕೆ ನೀಡುವಂತೆ ಸಿಐಡಿ…

Read More

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ (Rakshit Shetty) ಅವರು ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಇದೀಗ ಟ್ರೆಂಡ್‌ನಲ್ಲಿರುವ ಸಾಲನ್ನ ಆಪ್ತರೊಬ್ಬರಿಗೆ ಹೇಳಿದ್ದಾರೆ. ಸೋ ಮೂಡಿ, ಸೋ ಬ್ಯೂಟಿಫುಲ್ ಎಂದು ಸೋಷಿಯಲ್ ಮೀಡಿಯಾದಲ್ಲಿ ರಕ್ಷಿತ್ ಬರೆದುಕೊಂಡಿರುವ ಪೋಸ್ಟ್ ಸಖತ್ ವೈರಲ್ ಆಗಿದೆ. ಸೋ ಮೂಡಿ, ಸೋ ಬ್ಯೂಟಿಫುಲ್ ಎಂದು ರಕ್ಷಿತ್ ಶೆಟ್ಟಿ ಹೇಳಿದ್ದು ಬೇರೇ ಯಾರಿಗೋ ಅಲ್ಲ. ಗೆಳೆಯ ರಾಜ್ ಬಿ ಶೆಟ್ಟಿಗೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಟ್ರೈಲರ್ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ರಾಜ್, ಸಿರಿ ನಟನೆ ಬಲು ಇಷ್ಟಪಟ್ಟಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟ್ರೈಲರ್ ಶೇರ್ ಮಾಡಿ ಸೋ ಮೂಡಿ, ಸೋ ಬ್ಯೂಟಿಫುಲ್ ರಾಜ್ ಬಿ ಶೆಟ್ಟಿ (Raj B Shetty) ಯೂ ಆರ್ ದಿ ಮ್ಯಾನ್ ಎಂದು ರಕ್ಷಿತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಮ್ಯಾ (Ramya) ನಿರ್ಮಾಣದ ಚೊಚ್ಚಲ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’ (Swathi Muttina Male Haniye) ಇದೇ ನವೆಂಬರ್…

Read More

ಸುದೀಪ್ (Sudeep) ನಟನೆಯ ಮ್ಯಾಕ್ಸ್  ಸಿನಿಮಾದಲ್ಲಿ ಬರೋಬ್ಬರಿ ಮೂವರು ನಾಯಕಿಯರು ನಟಿಸುತ್ತಿದ್ದಾರೆ. ಮೂವರದ್ದೂ ವಿಭಿನ್ನ ಪಾತ್ರಗಳಾಗಿದ್ದು, ಯಾವ ರೀತಿಯ ಪಾತ್ರಗಳನ್ನು ಅವರು ಮಾಡಿದ್ದಾರೆ ಎನ್ನುವ ಕುತೂಹಲ ಹೆಚ್ಚಾಗಿದೆ. ಕನ್ನಡತಿಯರಾದ ಸಂಯುಕ್ತ ಹೊರನಾಡು (Samyukta Horanadu), ಸುಕೃತಾ ವಾಗ್ಲೆ ಮತ್ತು ತಮಿಳಿನ ನಟಿ ವರಲಕ್ಷ್ಮಿ ಶರತ್ ಕುಮಾರ್ (Varalakshmi) ಈ ಸಿನಿಮಾದಲ್ಲಿ ಪಾತ್ರ ಮಾಡುತ್ತಿದ್ದಾರೆ. ಮ್ಯಾಕ್ಸ್ ಸಿನಿಮಾದ ಶೂಟಿಂಗ್ ನಿರಂತರವಾಗಿ ನಡೆಯುತ್ತಿದೆ. ಬಿಗ್ ಬಾಸ್ ನಡುವೆಯೂ ತಪ್ಪದೇ ಸುದೀಪ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಂದುಕೊಂಡಂತೆ ನಡೆದರೆ, ಡಿಸೆಂಬರ್ ಹೊತ್ತಿಗೆ ಮ್ಯಾಕ್ಸ್ (Max) ಸಿನಿಮಾದ ಬಹುತೇಕ ಶೂಟಿಂಗ್ ಮುಗಿಯಲಿದೆ. ಹಾಗಾಗಿ ಫೆಬ್ರವರಿಯಲ್ಲಿ (February) ಸಿನಿಮಾ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಿನಿಮಾ ತಂಡವು ಅಧಿಕೃತವಾಗಿ ಮಾಹಿತಿ ನೀಡದೇ ಇದ್ದರೂ, ಚಿತ್ರೋದ್ಯಮದಲ್ಲಿ ಕೇಳಿ ಬರುತ್ತಿರುವ ಮಾತಿನಂತೆ ಫೆಬ್ರವರಿಗೆ ಮ್ಯಾಕ್ಸ್ ತೆರೆ ಕಾಣಲಿದೆ. ಬ್ಯಾಕ್ ಟು ಬ್ಯಾಕ್ ಚಿತ್ರಗಳನ್ನು ಸುದೀಪ್ ಒಪ್ಪಿಕೊಂಡಿದ್ದರಿಂದ ಮತ್ತು ಅವರೇ ಚಿತ್ರವೊಂದನ್ನು ನಿರ್ದೇಶನ ಮಾಡಬೇಕಾಗಿರುವುದರಿಂದ ಪಕ್ಕಾ ಪ್ಲ್ಯಾನ್ ಮಾಡಿಕೊಂಡೇ ಸಿನಿಮಾದ ಶೂಟಿಂಗ್…

Read More