Author: AIN Author

ಬೆಂಗಳೂರು: ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ, ನಮ್ಮ ಪ್ರಧಾನಿಗಳು ನಡ್ಡಾ, ಅಮೀತ್ ಶಾ, ಸಂತೋಷ್ ಜೀ, ಬಿಎಸ್ವೈ, ಬೊಮ್ಮಾಯಿ ಗಣ್ಯರೆಲ್ಲ ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿ ನನ್ನನ್ನು ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ. https://ainlivenews.com/eskom-online-service-outage-for-3-days-from-tomorrow/ ವಿಪಕ್ಷ ನಾಯಕರ ಕಚೇರಿಗೆ ಇಂದು ಪೂಜೆ ಮಾಡಿ ವಿದ್ಯುಕ್ತವಾಗಿ ಅಧಿಕಾರ ಸ್ವೀಕಾರ ಮಾಡಿದ್ದೇನೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳುಗಳಲ್ಲಿ ಏನೂ ಆಗಿಲ್ಲ. ಅನೇಕ ಕಪ್ಪು ಚುಕ್ಕೆಗಳು ಕಾಣಿಸುತ್ತಿವೆ. ಸರ್ಕಾರದ ಕಿವಿ ಹಿಂಡುವ ಕೆಲಸಗಳನ್ನ ಸದನದಲ್ಲಿ ಮಾಡುತ್ತೇವೆ, ಅದಕ್ಕೂ ಬಗ್ಗದೇ ಹೋದರೆ ಉಗ್ರ ಹೋರಾಟ ಮಾಡುತ್ತೇವೆ. ವರ್ಗಾವಣೆಯಲ್ಲಿ ಸರ್ಕಾರ ಮುಳುಗಿದೆ ಎಂದರು

Read More

ಬೆಂಗಳೂರು:  ಪಕ್ಷದಲ್ಲಿ ಎಲ್ಲರನ್ನೂ ಜೊತೆಗೆ ಕರೆದೊಯ್ಯುವುದು ನನ್ನ ಜವಾಬ್ದಾರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ರಮೇಶ್ ಜಾರಕಿಹೊಳಿ ಭೇಟಿ ಬಳಿಕ ಮಾತನಾಡಿದ ಅವರು, ಜಾರಕಿಹೊಳಿ ನಡೆ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆಯುತ್ತಿತ್ತು. ಕೆಲವು ಬಾರಿ ಶಾಸಕ ರಮೇಶ್ ಅಸಮಾಧಾನ ತೋಡಿಕೊಂಡಿದ್ದರು. https://ainlivenews.com/eskom-online-service-outage-for-3-days-from-tomorrow/ ಹೀಗಾಗಿ ರಮೇಶ್ ಭೇಟಿ ಮಾಡಿ ಅರ್ಧಗಂಟೆ ಚರ್ಚೆ ಮಾಡಿದ್ದೇನೆ. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿ ಆಗಬೇಕು. ಪಕ್ಷದಲ್ಲಿ ಸಹಕಾರ ಕೊಡೋದಾಗಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಕೆಲವು ಸಣ್ಣಪುಟ್ಟ ಅಸಮಾಧಾನಗಳಿದ್ದವು, ಅದರ ಬಗ್ಗೆ ಚರ್ಚಿಸಿದ್ದೇವೆ ಎಂದರು. ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಸೋಮಣ್ಣ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಪಕ್ಷದ ಹಿರಿಯರು ಏನೇ ಮಾತಾಡಿದರೂ ಆಶೀರ್ವಾದ ಅಂದುಕೊಳ್ಳುತ್ತೇನೆ. ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗುತ್ತೇನೆ ಎಂದರು.

Read More

ಬೆಂಗಳೂರು: ಜಾತಿಗಣತಿ ಮೂಲ ಪ್ರತಿ ಕಾಣೆ ಆಗಿದೆ ಅನ್ನೋದೆಲ್ಲ ಸುಳ್ಳು ವಿರೋಧ ಪಕ್ಷವರು ಏನೇನೋ ಹೇಳಿಕೆಗಳನ್ನ ಕೊಡುತ್ತಿದ್ದಾರೆ ಅದು ಸರಿಯಲ್ಲ ಎಂದು ಹೇಳಿದ್ದರು. https://ainlivenews.com/luxury-cars-at-bangalore-it-office-auction/ ಜಾತಿಗಣತಿ ವರದಿ ಗೊಂದಲವಾಗಿರೋ ವಿಚಾರವಾಗಿ ಮಾತನಾಡಿದ ಅವರು, ಆ ವರದಿಯನ್ನ ನಾವಿನ್ನು ಹೊರಗೆ ತಂದೆ ಇಲ್ಲ.ಆಯೋಗದವರು ವರದಿಯನ್ನ ಸರ್ಕಾರಕ್ಕೆ ಕೊಟ್ಟ ನಂತರ ಸರ್ಕಾರ ಅದನ್ನ ತೀರ್ಮಾನ ಮಾಡುತ್ತದೆ ಎಂದರು.  ಮೂಲ ಪ್ರತಿ ಕಾಣೆ ಆಗಿದೆ ಅನ್ನೋದೆಲ್ಲ ಸುಳ್ಳು. ಆಯೋಗದ ಅಧ್ಯಕ್ಷರಿಗೆ ಒಂದು ತಿಂಗಳು ಹೆಚ್ಚಿಗೆ ಕಾಲಾವಕಾಶ ನೀಡಲಾಗಿದೆ. ವರದಿನೇ ಆಚೆ ಬಂದಿಲ್ಲ, ವರದಿ ಆಚೆ ಬಂದ ನಂತರ ಪರ ವಿರೋಧ ಅಭಿಪ್ರಾಯಗಳು ಕೇಳಿಬರಬಹದು. ಏನೂ ಇಲ್ಲದೇನೆ ಹೀಗೆ ಚರ್ಚೆ ನಡೆಸೋದು ಎಷ್ಟರ ಮಟ್ಟಿಗೆ ಸರಿ. ವಿರೋಧ ಪಕ್ಷವರು ಕೂಡ ಏನೇನೋ ಹೇಳಿಕೆಗಳನ್ನ ಕೊಡುತ್ತಿದ್ದಾರೆ. ವರದಿ ಬಂದ ಮೇಲೆ ತಾನೇ ಅದೆಲ್ಲ ಮಾತನಾಡೋದು ಎಂದರು.

Read More

ತಿರುವನಂತಪುರಂ: ಸುಪ್ರೀಂ ಕೋರ್ಟ್‌ ಮಾಜಿ ಜಡ್ಜ್‌  ಫಾತೀಮಾ ಬೀವಿ ಗುರುವಾರ ನಿಧನರಾದರು. ಅವರಿಗೆ 96 ವರ್ಷ ವಯಸ್ಸಾಗಿತ್ತು ಎಂದು ಏಷ್ಯಾನೆಟ್‌ ನ್ಯೂಸ್‌ ಮಲಯಾಳಂ ವರದಿ ಮಾಡಿದೆ. ಫಾತಿಮಾ ಬೀವಿ ಅವರು ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶರಾಗಿದ್ದರು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾಜಿ ಸದಸ್ಯೆಯೂ ಆಗಿದ್ದ ಫಾತಿಮಾ ಬೀವಿ, ಅವರು 1997-2001ರವರೆಗೆ ತಮಿಳುನಾಡಿನ ರಾಜ್ಯಪಾಲರಾಗಿದ್ದರು. ದೇಶದ ಉನ್ನತ ನ್ಯಾಯಾಂಗಕ್ಕೆ ನೇಮಕಗೊಂಡ ಮೊದಲ ಮುಸ್ಲಿಂ ಮಹಿಳೆಯೂ ಆಗಿದ್ದರು. 1927 ರಲ್ಲಿ ಕೇರಳದಲ್ಲಿ ಜನಿಸಿದ್ದ ಫಾತೀಮಾ ಬೀವಿಗೆ ಅವರ ತಂದೆ ಕಾನೂನು ವಿದ್ಯಾಭ್ಯಾಸ ಮಾಡಲು ಪ್ರೋತ್ಸಾಹ ನೀಡಿದ್ದರು. 1950 ರಲ್ಲಿ, ಬಾರ್ ಕೌನ್ಸಿಲ್ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದ ಇವರು,  ಬಾರ್ ಕೌನ್ಸಿಲ್ ಚಿನ್ನದ ಪದಕವನ್ನು ಪಡೆದ ಮೊದಲ ಮಹಿಳೆ ಎನಿಸಿಕೊಂಡಿದ್ದರು. https://ainlivenews.com/housewifes-body-found-hanging-in-bangalore/ ಕೇರಳದಲ್ಲಿ ವಕೀಲರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದ ಫಾತೀಮಾ ಬೀವಿ, 1974 ರಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದರು. 1980 ರಲ್ಲಿ ಅವರು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯಲ್ಲಿ ಸೇವೆ ಸಲ್ಲಿಸಿ 1983…

Read More

ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ ಇದೇ ಮೊದಲ ಬಾರಿಗೆ ರಾಯಭಾರಿಯನ್ನ ಆಯ್ಕೆ ಮಾಡಿದೆ…ನಟ‌ರಾಕ್ಷಸ ಡಾಲಿ ಧನಂಜಯ್ ಲಿಡ್ಕರ್ ಗೆ ರಾಯಭಾರಿಯಾಗಿದ್ದಾರೆ. ಸ್ಯಾಂಡಲ್‌ವುಡ್ ನಟ, ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡುತ್ತಿದ್ದಾರೆ. ಲಿಡ್ಕರ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದೆ. ಚರ್ಮ ಕೈಗಾರಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸರ್ಕಾರ ಸ್ಯಾಂಡಲ್‌ವುಡ್ ಸ್ಟಾರ್ ಧನಂಜಯ್ ಅವರನ್ನು ರಾಯಾಭಾರಿಯಾಗಿ ನೇಮಕಮಾಡಿದೆ. ಈಗಾಗಲೇ ಡಾಲಿ ಜೊತೆ ಮಾತುಕತೆಯಾಗಿದ್ದು ಧನಂಜಯ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅಧಿಕೃತ ಪ್ರಕಟಣೆಯೊಂದೆ ಬಾಕಿ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ಎಸ್ ವಸುಂಧರಾ, ಧನಂಜಯ್ ಅವರು ರಾಯಭಾರಿಯಾಗಿದ್ದು ತುಂಬಾ ಖುಷಿ ಇದೆ. ಅವರು ಸ್ಯಾಂಡಲ್‌ವುಡ್‌ನ ಲೀಡಿಂಗ್ ನಟ ಎಲ್ಲಾ ವರ್ಗದ…

Read More

ಶೀರ್ಷಿಕೆಯೇ ಸಿನಿಮಾ ಪ್ರೇಕ್ಷಕರಿಗೆ ಮೊದಲ ಆಮಂತ್ರಣ. ಸಿನಿಮಾ ಮೇಕರ್‌ಗಳು ಅದನ್ನೇ ಗಮನದಲ್ಲಿಟ್ಟುಕೊಂಡು ಏನಾದರೊಂದು ಹೊಸದನ್ನು ನೀಡಬೇಕೆನ್ನುವ ಆಶಯ ನಿರ್ಮಾಪಕರದ್ದು. ಈ ನಡುವೆ ಬಗೆಬಗೆಯ ಶೀರ್ಷಿಕೆಗಳ ಮೂಲಕವೇ ಸಿನಿಮಾಗಳು ಸೆಟ್ಟೇರುತ್ತಿವೆ. ಇದೀಗ ಅಂಥದ್ದೇ ವಿಭಿನ್ನ ಸಿನಿಮಾ ಮೂಲಕ ಗಮನ ಸೆಳೆಯುತ್ತಿದೆ ‘ಚಟ್ಟ’ ಸಿನಿಮಾ. ‘ಚಟ್ಟ’ ಹೀಗೊಂದು ವಿಭಿನ್ನ ಶೀರ್ಷಿಕೆ ಮೂಲಕ ಹೊಸತನದ ಕಥಾಹಂದರವನ್ನು ಚಿತ್ರರಸಿಕರಿಗೆ ಉಣಬಡಿಸಲು ಸಜ್ಜಾಗ್ತಿರುವುದು ನಿರ್ದೇಶಕ ಭಾನು ಪ್ರಕಾಶ್. ಕೋ ಡೈರೆಕ್ಟರ್ ಆಗಿ ಗುರುತಿಸಿಕೊಂಡಿರುವ ಅವರೀಗ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶನದ ಅಖಾಡಕ್ಕೆ ಧುಮುಕಿದ್ದಾರೆ. ‘ಕೇರ್ ಆಫ್ ಫುಟ್ಬಾತ್’ ಸೇರಿದಂತೆ ಒಂದಷ್ಟು ಕನ್ನಡ ಹಾಗೂ ತೆಲುಗು ಇಂಡಸ್ಟ್ರೀಯಲ್ಲಿಯೂ ನಿರ್ದೇಶನದ ಪಟ್ಟುಗಳನ್ನು ಕಲಿತುಕೊಂಡಿರುವ ಭಾನು ಪ್ರಕಾಶ್, ಈ ಭರವಸೆಯೊಂದಿಗೆ ಚಟ್ಟ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಅದ್ಧೂರಿಯಾಗಿ ಸೆಟ್ ಹಾಕಿ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಮಾಡಲಾಗಿದೆ. ಕವಿರತ್ನ ವಿ.ನಾಗೇಂದ್ರ ಪ್ರಸಾದ್, ನಿರ್ದೇಶಕ ಜೋಸೈಮನ್ ಮುಖ್ಯ ಅತಿಥಿಗಳಾಗಿ ಭಾಗಿಯಾಗಿ ಭಾನು ಪ್ರಕಾಶ್ ಹೊಸ ಕನಸಿಗೆ ಜೊತೆಯಾದರು. ಈ…

Read More

ಬಾಗಲಕೋಟೆ, ನವೆಂಬರ್ 23: ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆಯ ನವನಗರದ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ವರದಿ ಸಲ್ಲಿಕೆಯಾದ ನಂತರ ನೋಡೋಣ. ಸುಮ್ಮನೆ ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು. ಕರೆದು ಮಾತನಾಡುವೆ ಮೂಲ ವರದಿ ಕಳೆದಿದೆ ಎಂದು ಹಾಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಯಪ್ರಕಾಶ್ ಹೇಳಿಕೆ ಬಗ್ಗೆ ಮಾತನಾಡಿ, ಅವರನ್ನು ಕರೆದು ಮಾತನಾಡುತ್ತೇನೆ ಎಂದರು. https://ainlivenews.com/housewifes-body-found-hanging-in-bangalore/ ಹೇಳಿಕೆ ನೀಡುವಾಗ ಸತ್ಯಾಂಶವನ್ನು ಆಧಾರಿಸಿರಬೇಕು ಜಾತಿ ಜನಗಣತಿ ಸಮಾಜವನ್ನು ಒಡೆಯುತ್ತದೆ ಎಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರಿಗೆ ವರದಿಯಲ್ಲಿ ಏನಿದೆ ಎಂದು ಗೊತ್ತಿದೆಯೇ ಎಂದರು. ಯಾರೇ ಆಗಲಿ ಗೊತ್ತಿಲ್ಲದೆ ಮಾತನಾಡ ಬಾರದು. ಸಮಾಜ ಏಕೆ ಒಡೆಯುತ್ತೇವೆ? ಎಂದು ಪ್ರಶ್ನಿಸಿದರು. ನಿತೀಶ್ ಕುಮಾರ್ ಬಿಹಾರದಲ್ಲಿ ಜಾತಿಗಣತಿ ಸ್ವೀಕರಿಸಿದ್ದಾರೆ. ಸಮಾಜ ಒಡೆದುಬಿಟ್ಟರೆ ಎಂದರು. ಯಾವುದೇ…

Read More

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯನ್ನು ಸಿದ್ದರಾಮಯ್ಯ ಸರ್ಕಾರ ಅನುಷ್ಠಾನ ಮಾಡಿ ಇದುರಿಗೂ ಆಗಿರುವ ಪ್ರಗತಿ ಹೇಗಿದೆ ಎಂಬ ಮಾಹಿತಿಯನ್ನು ಹಂಚಿಕೊಂಡಿದೆ. https://ainlivenews.com/eskom-online-service-outage-for-3-days-from-tomorrow/ ಗೃಹಲಕ್ಷ್ಮೀ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ, ನವೆಂಬರ್​ ತಿಂಗಳವರೆಗೆ 1.17 ಕೋಟಿ ಫಲಾನುಭವಿಗಳ ನೋಂದಣಿ ಮಾಡಲಾಗಿದೆ. ಈವರೆಗೆ 1.10 ಕೋಟಿ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದರು. 2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ. ಬ್ಯಾಂಕ್ ಖಾತೆ ಮಾಹಿತಿಯಲ್ಲಿ ಗೊಂದಲ, ಆಧಾರ್‌ ಲಿಂಕ್‌ ಆಗದಿರುವುದು ಹಲವು ಕಾರಣಗಳಿಂದ ಫಲಾನುಭವಿಗಳಿಗೆ ಹಣ ವರ್ಗಾವಣೆಗೆ ತೊಡಕಾಗಿದೆ. ಫಲಾನುಭವಿಗಳನ್ನು ಬ್ಯಾಂಕ್​ಗೆ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ ಎಂದಿದ್ದಾರೆ.

Read More

ಗದಗ: ಲಕ್ಕುಂಡಿ ಗ್ರಾಮದಿಂದ ನಿರಂತರ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಕಲ್ಯಾಣ ಕರ್ನಾಟಕ ಭಾಗದಿಂದ ಬರುವ ಬಸ್ ಗಳು ಗ್ರಾಮಕ್ಕೆ ಬಾರದಕ್ಕೆ ಆಕ್ರೋಶ ವ್ಯಕ್ತಪಡಿಸಿ ಗ್ರಾಮಸ್ಥರು, ವಿದ್ಯಾರ್ಥಿಗಳಿಂದ ಬಸ್ ತಡೆದು ಪ್ರತಿಭಟನೆ ನಡೆಸಿದರು. ಲಕ್ಕುಂಡಿ ಗ್ರಾಮಕ್ಕೆ ಬಾರದೆ ಬೈಪಾಸ್ ಮೂಲಕ ಗದಗ, ಹುಬ್ಬಳ್ಳಿಗೆ ತೆರಳುವ ಬಸ್ ಗಳು. ಹುಬ್ಬಳ್ಳಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ಮೂಲಕ ತೆರಳುವ ಬಸ್ ಗಳು..ಇದ್ದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸರಿಯದ ಸಮಯಕ್ಕೆ ಬಸ್ ಗಳು ಸಿಗುತ್ತಿಲ್ಲ, ಬೈಪಾಸ್ ನಿಂದ ತೆರಳುವ ಬಸ್ ಗಳಿಗೆ ಲಕ್ಕುಂಡಿ ಬಸ್ ನಿಲ್ದಾಣದವರೆಗೆ ಬರಲು ಸೂಚಿಸಬೇಕು. ಇಲ್ವಾದ್ರೆ ಸಂಪೂರ್ಣ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುತ್ತೇವೆ ಅಂತಾ ಆಕ್ರೋಶ ವ್ಯಕ್ತಪಡಿಸಿದರು.  

Read More

ಕಲಬುರಗಿ: ರಾಜ್ಯದಲ್ಲಿ ಪ್ರಜಾಪ್ರಭುತ್ವ ಆಡಳಿತ ನಡೀತಿದೆಯಾ ಇಲ್ಲಾ ನಿಜಾಮನ ಆಡಳಿತ ನಡೆದಿದೆಯಾ ಅಂತ ಬಿಜೆಪಿ ಮಾಜಿ ಶಾಸಕ ಪಿ.ರಾಜೀವ್ ಪ್ರಶ್ನೆ ಮಾಡಿದ್ದಾರೆ.. ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜೀವ್ ಕಾಂಗ್ರೆಸ್ ಸರ್ಕಾರವನ್ನ ನಿಜಾಮನ ಆಡಳಿತಕ್ಕೆ ಹೋಲಿಸಿದ್ದಾರೆ. ಈ ಹಿಂದೆ ಯಾರಾದ್ರೂ ನಿಜಾಮನ ಆಡಳಿತದ ತಪ್ಪುಗಳನ್ನ ಎತ್ತಿ ತೋರಿಸಿ ಮಾತನಾಡಿದ್ರೆ ಏನಾಗುತಿತ್ತೋ ಅದೇ ಪರಸ್ತಿತಿ ಈಗ ಕಾಂಗ್ರೆಸ್ ಸರ್ಕಾರದಲ್ಲಿ ಹಾಗೇ ಆಗ್ತಿದೆ.ಅಮಾಯಕರ ಮೇಲೆ ಹಲ್ಲೆ ನಡೆದ್ರೂ ಸರ್ಕಾರ ಕ್ರಮ ತಗೋತಿಲ್ಲ…ಉಸ್ತುವಾರಿ ಸಚಿವರಂತೂ ಯಾವುದೇ ತಲೆಬುಡ ಇಲ್ಲದೇ ಮಾತಾಡ್ತಿದ್ದಾರೆ ಅಂತ ರಾಜೀವ್ ಹೇಳಿದ್ರು..

Read More