Author: AIN Author

ಆಮ್ಲಾ ಜ್ಯೂಸ್‌ನಲ್ಲಿ (Amla Juice) ಅನೇಕ ಔಷಧೀಯ ಗುಣಗಳು ಅಡಗಿವೆ. ಆಮ್ಲಾವನ್ನು ವಿಟಮಿನ್ ಸಿ ಸೇರಿದಂತೆ ಅನೇಕ ಪೋಷಕಾಂಶಗಳ ಉತ್ತಮ ಮೂಲವೆಂದು ಪರಿಗಣಿಸಲಾಗಿದೆ. ಇದನ್ನು ಬಳಕೆ ಮಾಡುವುದರಿಂದ ಕೂದಲು ಬಲಗೊಳ್ಳುತ್ತದೆ. ಜೊತೆಗೆ ತ್ವಚೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ನಿವಾರಿಸಬಹುದು. ಇದರ ಹೊರತಾಗಿ ಫೈಬರ್, ಕಬ್ಬಿಣ, ಸತು, ವಿಟಮಿನ್ ಬಿ ಕಾಂಪ್ಲೆಕ್ಸ್, ಕ್ಯಾಲ್ಸಿಯಂ ಮತ್ತು ಆಂಟಿಆಕ್ಸಿಡೆಂಟ್‌ಗಳಂತಹ ಅನೇಕ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಇವು ನಮ್ಮನ್ನು ಅನೇಕ ರೋಗಗಳಿಂದ ದೂರವಿಡುತ್ತವೆ. ಇದಲ್ಲದೆ ಆಮ್ಲಾ ಜ್ಯೂಸ್ ಅನೇಕ ಸಮಸ್ಯೆಗಳನ್ನು ನಿವಾರಿಸುತ್ತದೆ.  ಆಮ್ಲಾ ಜ್ಯೂಸ್‌ ಕುಡಿಯುವುದರಿಂದಾಗುವ ಪ್ರಯೋಜನಗಳು ಮೊಡವೆಗಳನ್ನು ತಡೆಯುತ್ತದೆ ಹಾನಿಗೊಳಗಾದ ಅಂಗಾಂಶ ಸುಧಾರಣೆ ವಯಸ್ಸಾದ ಚಿಹ್ನೆಗಳ ವಿರುದ್ಧ ಹೋರಾಡುತ್ತದೆ ಮೈಬಣ್ಣವನ್ನು ಹೆಚ್ಚಿಸುತ್ತದೆ ತಲೆಹೊಟ್ಟು ಮತ್ತು ತುರಿಕೆಯನ್ನು ಕಡಿಮೆ ಮಾಡುತ್ತದೆ ಆಮ್ಲ ಜ್ಯೂಸ್‌ನ್ನು ಸೇವಿಸುವುದರಿಂದ ಉತ್ತಮ ಆರೋಗ್ಯದ ಜೊತೆ ಸೌದರ್ಯಕ್ಕೂ ಕೂಡ ಇದು ಪ್ರಯೋಜಕಾರಿ. ನಾವು ಇದನ್ನು ಜ್ಯೂಸ್, ಪೌಡರ್ ಅಥವಾ ಹಸಿಯಾಗಿ ಸೇವಿಸಿದರೂ, ಆಮ್ಲಾ ಉತ್ತಮ ಪ್ರಯೋಜನಗಳನ್ನು ನೀಡುತ್ತದೆ.  

Read More

ದೆವುತ್ಥನ ಏಕಾದಶಿ ಸೂರ್ಯೋದಯ: 06.22 AM, ಸೂರ್ಯಾಸ್ತ : 05.50 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಕಾರ್ತೀಕ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಏಕಾದಶಿ 09:01 PM ತನಕ ನಂತರ ದ್ವಾದಶಿ ನಕ್ಷತ್ರ: ಇವತ್ತು ಉತ್ತರಾ ಭಾದ್ರ 05:16 PM ತನಕ ನಂತರ ರೇವತಿ  ಯೋಗ: ಇವತ್ತು ವಜ್ರ 11:54 AM ತನಕ ನಂತರ ಸಿದ್ಧಿ ಕರಣ: ಇವತ್ತು ವಣಿಜ 10:02 AM ತನಕ ನಂತರ ವಿಷ್ಟಿ 09:01 PM ತನಕ ನಂತರ ಬವ ರಾಹು ಕಾಲ: 01:30 ನಿಂದ 03:00 ವರೆಗೂ ಯಮಗಂಡ: 06:00 ನಿಂದ 07:30 ವರೆಗೂ ಗುಳಿಕ ಕಾಲ: 09:00 ನಿಂದ 10:30 ವರೆಗೂ ಅಮೃತಕಾಲ: 12.44 PM to 02.15 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:40 ನಿಂದ ಮ.12:24 ವರೆಗೂ ಮೇಷ: ಮದುವೆ ಸಾಲಾವಳಿ ಕೇಳುವ ಸಮಯ ಬಂದಿದೆ, ವಿವಾಹ ಸಮಸ್ಯೆಗಳಿಗೆ ಬಂಧುಗಳ ನೆರವಿನಿಂದ ಪರಿಹಾರ,…

Read More

ನೆಲಮಂಗಲ; ನಗರದ ಸೋಲದೇವನಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷವಾದ ಘಟನೆ ಜರುಗಿದೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ವಿನೋದ್ ರಾಜ್ ತೋಟದ ಬಳಿ ಪ್ರತ್ಯಕ್ಷವಾಗಿದೆ. ತೋಟದ ಮುಂದಿನ ಗೇಟ್ ಬಳಿ ಓಡಾಡಿರುವ ಚಿರತೆ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಈ ಭಾಗದಲ್ಲಿ ಸಾಕಷ್ಟು ದಿನಗಳಿಂದ ಚಿರತೆ ದಾಳಿ ಮಾಡುತ್ತಿವೆ. ದಾಳಿಯಾದ್ರು ಚಿರತೆ ಸೆರೆಗೆ ಅರಣ್ಯ ಅಧಿಕಾರಿಗಳು ಮುಂದಾಗಿಲ್ಲ ಎನ್ನಲಾಗಿದೆ.

Read More

ಬೆಂಗಳೂರು:-545 ಮಂದಿ ಪೋಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳನ್ನು ಡಿಸೆಂಬರ್ ಒಳಗಾಗಿ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನ್ಯಾಯಾಲಯದಿಂದ ಒಪ್ಪಿಗೆ ದೊರೆತ ಹಿನ್ನೆಲೆಯಲ್ಲಿ 545 ಮಂದಿ ಪೋಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳನ್ನು ಡಿಸೆಂಬರ್ ಒಳಗಾಗಿ ಭರ್ತಿ ಮಾಡಲಾಗುವುದು ಬಳಿಕ 402 ಪೋಲೀಸ್ ಸಬ್ ಇನ್‌ಸ್ಪೆಕ್ಟರ್‌ಗಳ ಹುದ್ದೆ ಭರ್ತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದರು. ಬಳಿಕ 600 ಪಿಎಸ್‌ಐ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗುತ್ತದೆ ಎಂದು ವಿವರಿಸಿದರು. ಒಟ್ಟಾರೆ 1547 ಪಿಎಸ್‌ಐ ಹುದ್ದೆಗಳನ್ನು ಮುಂದಿನ ಆರು ತಿಂಗಳಲ್ಲಿ ಭರ್ತಿ ಮಾಡಲಾಗುವುದು ಎಂದ ಅವರು ಇಲಾಖೆಗೆ ಹದಿನೈದು ಸಾವಿರ ಕಾನ್‌ಸ್ಟೆಬಲ್ ಅಗತ್ಯವಿದ್ದು, ಮೊದಲು ಮೂರು ಸಾವಿರ ಕಾನ್‌ಸ್ಟೆಬಲ್ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೂ ಆದಷ್ಟು ಶೀಘ್ರವಾಗಿ ಚಾಲನೆ ಕೊಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Read More

ಬೆಂಗಳೂರು:- ಸಚಿವ ಜಮೀರ್ ರನ್ನು ಸಂಪುಟದಿಂದ ಕಿತ್ತು ಹಾಕಿ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸ್ಪೀಕರ್‌ ಸ್ಥಾನದಲ್ಲಿ ಕುಳಿತ ವ್ಯಕ್ತಿಗೆ ಒಂದು ಜಾತಿ, ಧರ್ಮದ ಬಣ್ಣ ಕೊಡುವ ಕೆಲಸ ಮಾಡಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್‌ ಅವರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕಬೇಕು. ಇಲ್ಲವಾದರೆ ಅವರು ಮುಂದಿನ ಅಧಿವೇಶನದಲ್ಲಿ ಹೇಗೆ ಪಾಲ್ಗೊಳ್ಳುತ್ತಾರೋ ನೋಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸವಾಲು ಹಾಕಿದ್ದಾರೆ

Read More

ತುಮಕೂರು:- ನಗರದ ದೇವರಾಯಪಟ್ಟಣದಲ್ಲಿ ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 36 ವರ್ಷದ ಕಮಲೇಶ್‌ ಮೃತ ದುರ್ದೈವಿ. ನವೆಂಬರ್‌ 17ರಂದು ವಿಷ ಸೇವಿಸಿದ್ದರು, ಮಂಗಳವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನ.21 ಮತ್ತು 22ರಂದು ವಿವಾಹ ನಡೆಯಬೇಕಿತ್ತು. ಮದುವೆಗೆ ಒಂದು ದಿನ ಬಾಕಿ ಇರುವಾಗಲೇ ಮೃತಪಟ್ಟಿದ್ದಾರೆ. ಮೂರು ತಿಂಗಳ ಹಿಂದೆ ವಿವಾಹ ನಿಶ್ಚಯವಾಗಿತ್ತು. ನಿಶ್ಚಿತಾರ್ಥದ ಸಮಯದಲ್ಲಿ ನೀಡಿದ್ದ ಉಂಗುರ ಕಳೆದುಕೊಂಡಿದ್ದರು. ಇದನ್ನು ಮನೆಯವರಿಗೆ ತಿಳಿಸಲು ಹೆದರಿ ವಿಷ ಸೇವಿಸಿದ್ದರು

Read More

ಬೆಂಗಳೂರು:- ಪ್ರಧಾನಿ ತವರು ರಾಜ್ಯ ಗುಜರಾತ್ ಮತ್ತು ದೇಶದಲ್ಲಿ ಏಕೆ ಅಪೌಷ್ಟಿಕತೆ ಹೆಚ್ಚುತ್ತಿದೆ ಎಂಬುದಕ್ಕೆ ಅವರೇ ಉತ್ತರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗುಜರಾತ್ ಮಾದರಿ ಎಂದು ಹೊಗಳುವವರು ಪ್ರಧಾನಿ ತವರು ರಾಜ್ಯದಲ್ಲಿ ಅಪೌಷ್ಟಿಕತೆ ಸೂಚ್ಯಂಕ ಏಕೆ ಹೆಚ್ಚುತ್ತಿದೆ ಎಂಬುದನ್ನು ತಿಳಿಸಬೇಕು ಮತ್ತು “ಇದು ಇಡೀ ದೇಶಕ್ಕೆ ಮಾದರಿಯಾಗಬಹುದೇ?” ಎಂದು ಸಿಎಂ ಪ್ರಶ್ನಿಸಿದರು. ಬಡತನ ಮತ್ತು ಅನಕ್ಷರತೆ ನಿರ್ಮೂಲನೆಯಾಗದೆ ಎಲ್ಲರಿಗೂ ಉತ್ತಮ ಆರೋಗ್ಯ ಸಿಗುವುದಿಲ್ಲ ಎಂದರು. ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯ ಸವಲತ್ತು ತಲುಪಿಸುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ ಮತ್ತು ಅದಕ್ಕೆ ಬೇಕಾದ ಹಣ ನೀಡಲು ಸರ್ಕಾರ ಸಿದ್ಧವಿದೆ ಎಂದರು

Read More

ಬೆಂಗಳೂರು:- ಹೋಗು ಅಂದರೆ ಹೋಗೋಕೆ ತಾಳಿ ಕಟ್ಟಿದ ಹೆಂಡತಿ ನಾನಲ್ಲ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಟಿ.ಎ.ಶರವಣ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಲು ಹಣ ತೆಗೆದುಕೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಮಾಣ ಮಾಡಿ ಹೇಳಲಿ ಎಂದು ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸವಾಲು ಹಾಕಿದ್ದಾರೆ. ಅಲ್ಲದೆ, ಧೈರ್ಯ ಇದ್ದರೆ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಮ್ಮೆ ಗೆದ್ದು ಬರಲಿ ಎಂದರು. ಶರವಣ ಅವರನ್ನು ಪರಿಷತ್ ಸದಸ್ಯರನ್ನಾಗಿ ಮಾಡಲು ಹಣ ತೆಗೆದುಕೊಂಡಿಲ್ಲ‌ ಅಂತ ಮಗನ ತಲೆ ಮೇಲೆ ಕೈ ಇಟ್ಟು ಆಣೆ ಮಾಡ್ತೀರಾ ಕುಮಾರಸ್ವಾಮಿ ಅವರೇ. ಧೈರ್ಯ ಇದೆಯಾ ನಿಮಗೆ ಆಣೆ ಮಾಡೋಕೆ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ. ಅಶೋಕ್ ಪ್ರತಿಪಕ್ಷದ ನಾಯಕ. ಅವರ ಮುಂದೆ ಹೋಗಿ ನಿಲ್ಲುತ್ತೀರಾ? ಎರಡು ಸೀಟಿಗೋಸ್ಕರ ಅಮಿತ್ ಶಾ ಮುಂದೆ ದೇವೇಗೌಡ ಹೋಗಿ ನಿಂತುಕೊಳ್ಳಬೇಕಿತ್ತಾ? ತೆನೆ ಹೊತ್ತ ಮಹಿಳೆಯನ್ನು ಯಾರ ಯಾರ ಹತ್ತಿರ ಕರೆದುಕೊಂಡು…

Read More

ಬೆಂಗಳೂರು:- ಎಚ್‌ಡಿಕೆ ವಿರುದ್ಧ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಜೆಡಿಎಸ್ ದೂರು ನೀಡಿದೆ. ಪೊಲೀಸ್ ಆಯುಕ್ತ ದಯಾನಂದ್‌ ಅವರಿಗೆ ಜೆಡಿಎಸ್ ಪಕ್ಷದಿಂದ ಬುಧವಾರ ದೂರು ನೀಡಲಾಯಿತು. ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ ಹಾಗೂ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ದಯಾನಂದ ಅವರಿಗೆ ದೂರು ನೀಡಿದರು. ಪೋಸ್ಟರ್ ಅಂಟಿಸುವಲ್ಲಿ ಪ್ರಮುಖ ಪಾತ್ರಧಾರಿಯಾದ ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ವಿರುದ್ಧ ಪೊಲೀಸ್ ಕಮಿಷನರ್‌ಗೆ ದೂರು ನೀಡಲಾಗಿದ್ದು, ಜತೆಗೆ ಡಿ.ಎಸ್.ಕಾರ್ತಿಕ್ ಗೌಡ, ಎಚ್.ಡಿ.ದರ್ಶನ್ ಗೌಡ, ಅರ್ಜುನ್ ಡಿ.ಗೌಡ, ಸಂತೋಷ್ ಎಂಬುವವರ ವಿರುದ್ಧ ಆಯುಕ್ತರಿಗೆ ದೂರು, ನೀಡಿ ಕೂಡಲೇ ಕಿಡಿಗೇಡಿಗಳನ್ನು ಬಂಧಿಸಿ ಜೈಲಿಗೆ ಅಟ್ಟಬೇಕು ಎಂದು ಜೆಡಿಎಸ್ ಮುಖಂಡರು ಒತ್ತಾಯಿಸಿದರು. ಎಸ್.ಮನೋಹರ್ ಹಿಂದಿನಿಂದಲೂ ಇದೇ ರೀತಿಯಲ್ಲಿ ಕೀಳು ಅಭಿರುಚಿಯ ಪೋಸ್ಟರ್‌ಗಳನ್ನು ಅಂಟಿಸಿ ತೇಜೋವಧೆ ಮಾಡುವ ಚಾಳಿಯುಳ್ಳ ವ್ಯಕ್ತಿಯಾಗಿದ್ದು, ಆತನ ವಿರುದ್ಧ ಇಂತಹ ಅನೇಕ…

Read More

ಬೆಳಗಾವಿ:- ಹೊಂಡದಲ್ಲಿ ಬಿದ್ದು 12 ವರ್ಷದ ಬುದ್ಧಿಮಾಂದ್ಯ ಬಾಲಕ ಸಾವನ್ನಪ್ಪಿದ ಘಟನೆ ಜರುಗಿದೆ. ಅಥಣಿ ತಾಲೂಕಿನ ಮದಭಾವಿ ಗ್ರಾಮದ ಅಂಧ ಮಕ್ಕಳ ಶಾಲೆಯಾದ ಶಾರದಾದೇವಿ ಬುದ್ದಿ ಮಾಂದ್ಯ ಮಕ್ಕಳ ಶಾಲೆ ಹಾಗು ವಸತಿಯುತ ವಿಶೇಷ ಶಾಲೆಯ ಸುದೀಪ್ ತಮ್ಮಣ್ಣಿ ಮಾನೆ ಎಂಬ ಬಾಲಕ ಸಾವನಪ್ಪಿದಾನೆ ಎಂದು ತಿಳಿದು ಬಂದಿದೆ. ದಿನಾಂಕ 21/11/2023 ರಂದುದು ಮುಂಜಾನೆ ಹೊರಗೆ ಹೋದ ಬಾಲಕ ಮರಳಿ ಶಾಲೆಗೆ ಬಂದಿಲ್ಲ ಶಿಕ್ಷಕರು ಹಾಗೂ ಶಾಲೆಯ ಸಿಬ್ಬಂದಿಗಳು ಬಾಲಕನನ್ನು ಹುಡುಕಾಡಿದರು ಸಿಕ್ಕಿರುದಿಲ್ಲ. ಮರುದಿನ ಅಂದರೇ ದಿನಾಂಕ್ 22/11/2023 ರಾಂಡು ಶಾಲೆಯ ಸಮೀಪದಲ್ಲಿ ಇರುವ ಒಂದು ಬಾಳೆ ತೋಟದ ಹೊಂಡಲ್ಲಿ ಬಾಲಕ ಮೃತ್ಯುವಾಗಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.

Read More