ನವದೆಹಲಿ: ಸಹಾರಾ ಗ್ರೂಪ್ (Sahara Group) ಸಂಸ್ಥಾಪಕ ಸುಬ್ರತಾ ರಾಯ್ (Subrata Roy) ಅವರ ನಿಧನದ ಬಳಿಕ ಸೆಬಿ (SEBI) ಖಾತೆಯಲ್ಲಿರುವ 25,000 ಕೋಟಿ ರೂ. ಹಣ ಯಾರಿಗೆ ಸೇರುತ್ತೆ ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ತನಿಖೆ ಆರಂಭವಾದ ಕಳೆದ 10 ವರ್ಷದಿಂದ ಈ ಹಣ ಸೆಬಿ ಖಾತೆಯಲ್ಲಿದೆ. ಕ್ಲೈಮ್ ಮಾಡದ ಹಣ ಏನಾಗುತ್ತದೆ? ಆ ಹಣವನ್ನು ಸರ್ಕಾರದ ಹಣ ಎಂದು ಪರಿಗಣಿಸಬಹುದೇ? ಸರ್ಕಾರ ಈಗ ಸುಬ್ರತಾ ರಾಯ್ ಅವರ ನಿಧನದ ಬಳಿಕ ಹಲವು ಆಯ್ಕೆಯನ್ನು ಪರಿಶೀಲಿಸುತ್ತಿದೆ. ಸಹಾರಾ ಮರುಪಾವತಿ ಪೋರ್ಟಲ್ ಮೂಲಕ ಹಣ ವರ್ಗಾಯಿಸುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ಸುಮಾರು 2.5 ಲಕ್ಷ ಹೂಡಿಕೆದಾರರಿಗೆ ಸುಮಾರು 230 ಕೋಟಿ ರೂ. ಪಾವತಿಸಲು ಯಶಸ್ವಿಯಾಗಿದ್ದೇವೆ. ಹೊಸ ನೋಂದಣಿಗಳು ಇನ್ನೂ ನಡೆಯುತ್ತಿವೆ ಎಂದು ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ. ಕಳೆದ ಜುಲೈನಲ್ಲಿ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಬಿಡುಗಡೆ ಮಾಡಿದ ಮರುಪಾವತಿ ಪೋರ್ಟಲ್ನಲ್ಲಿ ಪರಿಶೀಲಿಸಿದ ನಂತರ ನೋಂದಣಿಯಾದ 45 ದಿನಗಳಲ್ಲಿ…
Author: AIN Author
ಶಾರುಖ್ ಖಾನ್ (Shah Rukh Khan) ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ಡಂಕಿ ಸಿನಿಮಾದ ಮೊದಲ ಹಾಡು (Song) ಬಿಡುಗಡೆಗೊಳ್ಳಲಿದೆ. ಡಂಕಿ (Dunki) ಸಿನಿಮಾದ ರೋಮ್ಯಾಂಟಿಕ್ ನಂಬರ್ ಸಾಂಗ್ ಇಂದು ರಿಲೀಸ್ ಆಗಲಿದೆ. ಲಪ್ ಪಟ್ ಗಯಾ ಎಂಬ ಸಾಹಿತ್ಯವುಳ್ಳ ಸುಮಧುರ ಹಾಡಿಗೆ ಪ್ರೀತಂ ಚಕ್ರವರ್ತಿ ಟ್ಯೂನ್ ಹಾಕಿದ್ದಾರೆ. ಹೇಗಿರಲಿ ಡಂಕಿ ಮೊದಲ ಗಾನಬಜಾನ ಎಂಬ ನಿರೀಕ್ಷೆ ಹೆಚ್ಚಿಸಿದೆ. ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್, ಮನು ಪಾತ್ರದಲ್ಲಿ ತಾಪ್ಸಿ, ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದ…
ಬೆಂಗಳೂರು:- ಕುಮಾರಸ್ವಾಮಿ ನೋಡಿ ಜನ ನಕ್ತಿದ್ದಾರೆ ಎಂದು DCM ಡಿಕೆಶಿ ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕುಮಾರಸ್ವಾಮಿ ಅವರು ಏನೇನೋ ಮಾತಾಡಿ ಅವರ ಗೌರವವನ್ನು ಅವರೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ. ಜನ ನಿಮ್ಮನ್ನು ನೋಡಿ ನಗುತ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಿಷಾದ ವ್ಯಕ್ತಪಡಿಸಿದರು. ಕುಮಾರಸ್ವಾಮಿಯವರ ನೀಲಿ ಚಿತ್ರದ ಆರೋಪದ ಬಗ್ಗೆ ಪ್ರತಿಕ್ರಿಯಿಸುತ್ತಾ, ಮಾಜಿ ಮುಖ್ಯಮಂತ್ರಿಯ ಮಾತಿಗೆ ತೂಕ, ಗೌರವ ಇರಬೇಕು. ನಾನು ಕ್ಷೇತ್ರಕ್ಕೆ ಹೋಗದಿದ್ದರು ನನ್ನನ್ನು 1,23,000 ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಕನಕಪುರ ಕ್ಷೇತ್ರದ ಜನತೆ ನನ್ನ ಮೇಲೆ ಅಷ್ಟೊಂದು ನಂಬಿಕೆ ಇಟ್ಟಿದ್ದಾರೆ ಎಂದು ತಿಳಿಸಿದರು. ಕುಮಾರಸ್ವಾಮಿಯವರು ಹತಾಶರಾಗಿದ್ದಾರೆ. ಅವರ ಹತಾಶೆ ಅವರನ್ನು ಈ ರೀತಿಯಾಗಿ ಮಾತನಾಡಿಸುತ್ತಿದೆ. ಅವರೇ ಹೋಗಿ ಕನಕಪುರದ ಜನರನ್ನು ಮಾತನಾಡಿಸಲಿ. ಡಿ ಕೆ ಶಿವಕುಮಾರ್ ಹೀಗೆ ಮಾಡಿದ್ದರೇ? ಎಂದು ನಿಮ್ಮ ಕಾರ್ಯಕರ್ತರನ್ನೇ ಕೇಳಿ. ನಾನು ಈ ರೀತಿಯ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದೆ ಎಂದು ನಮ್ಮ ಕ್ಷೇತ್ರದ ಜನರು ಹಾಗೂ ನಿಮ್ಮ ಕಾರ್ಯಕರ್ತರು…
ಬೆಂಗಳೂರು:- ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿಲ್ಲ, ನಡೆಯುವುದು ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ನವರದು ನುಡಿದಂತೆ ನಡೆದ ಸರ್ಕಾರ ಅಲ್ಲ. ಸರ್ಕಾರವು 6 ತಿಂಗಳ ಆಡಳಿತದ ಕೊಟ್ಟಿರುವ ಅಂಕಿ – ಅಂಶಗಳು ಪ್ರಶ್ನಾರ್ಥಕವಾಗಿವೆ ಎಂದರು. ರಾಜ್ಯದ ಕಾಂಗ್ರೆಸ್ ಸರ್ಕಾರವು ಚುನಾವಣೆ ಸಂದರ್ಭದಲ್ಲಿ ಜನರಿಗೆ 5 ಗ್ಯಾರಂಟಿಗಳನ್ನು ನೀಡಿತ್ತು. ಕೊಟ್ಟ ಮಾತಿನಂತೆ ಅಥವಾ ನುಡಿದಂತೆ ನಡೆದಿದ್ದೇವೆ ಎಂದು ನಿನ್ನೆ ದೊಡ್ಡ ದೊಡ್ಡ ಜಾಹೀರಾತು ನೀಡಿದ್ದಾರೆ. ಅಂಕಿ – ಅಂಶಗಳನ್ನೂ ಕೊಟ್ಟಿದ್ದಾರೆ. ಆದರೆ, ಎಷ್ಟೋ ಜನರಿಗೆ ಅಕ್ಕಿಗೆ ಕೊಡುವ ಹಣ ಸಿಕ್ಕಿಲ್ಲ. ಮಹಿಳೆಯರಿಗೆ 2 ಸಾವಿರ ರೂಪಾಯಿ ಒಂದು ಕಂತು ಮಾತ್ರ ಸಿಕ್ಕಿದೆ. ಇನ್ನೂ 3 ತಿಂಗಳು ಬಂದಿಲ್ಲ. ವಿದ್ಯುತ್ 200 ಯೂನಿಟ್ ಎಂದಿದ್ದರು. 200 ಯೂನಿಟ್ ಬದಲು ವರ್ಷದ ಸರಾಸರಿ ಯೂನಿಟ್ ಕೊಡುತ್ತಿದ್ದಾರೆ. ಯುವನಿಧಿ ಇನ್ನೂ ಪ್ರಾರಂಭಿಸಿಲ್ಲ ಎಂದು ಹರಿಹಾಯ್ದರು. ಕಾಂಗ್ರೆಸ್ ಪಕ್ಷದ ಆಶ್ವಾಸನೆಗಳು ಜನರಿಗೆ ತಲುಪುತ್ತಿಲ್ಲ. ಕಾಂಗ್ರೆಸ್ ವೈಫಲ್ಯಗಳನ್ನು ನಾವು…
ಬೆಂಗಳೂರು:- ಕೋರ್ಟ್ನಿಂದ ಜಾಮೀನು ಪಡೆದಿದ್ದರೂ, ಬಂಧನಕ್ಕೆ ಆದೇಶ ಹೊರಡಿಸಿದ್ದ ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ಹೊರ ಹಾಕಿದೆ. ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಎರಡನೇ ಎಫ್ಐಆರ್ ರದ್ದು ಕೋರಿ ಶಿವಮೂರ್ತಿ ಶರಣರ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಈ ಅರ್ಜಿ ವಿಚಾರಣೆ ನಡೆಸಿದರು. ನ್ಯಾಯಪೀಠದ ಎದುರು ಅರ್ಜಿದಾರರ ಪರ ವಕೀಲರು ತಮ್ಮ ವಾದ ಮಂಡಿಸಿ, ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಮುಂದಿರುವ ಸಾಕ್ಷ್ಯಗಳ ವಿಚಾರಣೆಯನ್ನು ಮತ್ತೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ”ಆರೋಪಿ ಯಾರೇ ಇರಲಿ ಅದು ನಮಗೆ ಮುಖ್ಯವಲ್ಲ. ಹೈಕೋರ್ಟ್ ಆದೇಶವನ್ನು ನಿಷ್ಪಲಗೊಳಿಸುವ ಯತ್ನವನ್ನು ನ್ಯಾಯಾಲಯ ಒಪ್ಪುವುದಿಲ್ಲ. ಹೈಕೋರ್ಟ್ ಆದೇಶ ಪಾಲಿಸದಿರುವ ಈ ಕ್ರಮ ಸರಿಯಾದುದಲ್ಲ. ಆದೇಶದ ಬಗ್ಗೆ ಜಿಲ್ಲಾ ನ್ಯಾಯಾಧೀಶರು ಗಮನ ಹರಿಸಬಹುದಿತ್ತು, ಸ್ವಾಮೀಜಿ ವಿರುದ್ಧದ ಎರಡು ಪ್ರಕರಣಗಳಿಗೆ ಸಂಬಂಧಸಿದಂತೆ ಎಲ್ಲ ದಾಖಲೆಗಳನ್ನು ತನ್ನ ಮುಂದೆ ಇಡಬೇಕು. ಜೊತೆಗೆ ಈ…
ಅಮೆರಿಕ: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್ ಪಕ್ಷದ ಸಂಭಾವ್ಯ ಅಭ್ಯರ್ಥಿ ವಿವೇಕ್ ರಾಮಸ್ವಾಮಿ ತಮ್ಮ ಹಿಂದೂ ಧಾರ್ಮಿಕ ನಂಬಿಕೆಗಳ ಕುರಿತಾಗಿ ಮಾತನಾಡಿದ್ದಾರೆ. ವೈಯಕ್ತಿಕವಾಗಿ ತಮಗೆ ತಮ್ಮ ಧಾರ್ಮಿಕ ನಂಬಿಕೆಗಳಿಂದ ಆಗಿರುವ ಪ್ರಯೋಜನಗಳು, ತಮಗೆ ಸಿಕ್ಕಿರುವ ವೈಯಕ್ತಿಕ ಸ್ವಾತಂತ್ರ್ಯ ಹಾಗೂ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವ ಮಟ್ಟಿಗೆ ನೈತಿಕ ಬಲವನ್ನು ಹಿಂದೂ ಧರ್ಮ ತಮಗೆ ನೀಡಿದೆ ಎಂದು ವಿವೇಕ್ ರಾಮಸ್ವಾಮಿ ಹೇಳಿದ್ದಾರೆ. ಭಾರತ – ಅಮೆರಿಕ ದೇಶಗಳ ನಡುವಣ ಸೌಹಾರ್ದ ವೇದಿಕೆಯಾದ ದಿ ಡೈಲಿ ಸಿಗ್ನಲ್ ಆಯೋಜಿಸಿದ್ದ ‘ದಿ ಫ್ಯಾಮಿಲಿ ಲೀಡರ್’ ವೇದಿಕೆಯಲ್ಲಿ ಮಾತನಾಡಿದ ವಿವೇಕ್ ರಾಮಸ್ವಾಮಿ, ಹಿಂದೂ ಧರ್ಮ ಹಾಗೂ ಕ್ರೈಸ್ತ ಧರ್ಮದ ನಡುವೆ ಇರುವ ಸಮಾನತೆಗಳನ್ನು ಬಿಚ್ಚಿಟ್ಟರು. ಎರಡೂ ಧರ್ಮಗಳ ಮೌಲ್ಯಗಳು ಮುಂದಿನ ಪೀಳಿಗೆಗೆ ಎಷ್ಟರ ಮಟ್ಟಿಗೆ ಪ್ರಯೋಜನಕಾರಿ ಎಂದು ವಿವರಿಸಿದರು. https://ainlivenews.com/satish-jarakiholi-becoming-cm-is-as-true-as-surya-being-born-congress-mla/ ನನ್ನ ಧಾರ್ಮಿಕ ನಂಬಿಕೆಗಳು ನನಗೆ ಸ್ವಾತಂತ್ರ್ಯ ಕೊಟ್ಟಿದೆ. ನನ್ನ ನಂಬಿಕೆಗಳೇ ನನ್ನನ್ನು ಅಧ್ಯಕ್ಷೀಯ ಚುನಾವಣಾ ಪ್ರಚಾರ ವೇದಿಕೆವರೆಗೆ ಕರೆದು ತಂದಿದೆ. ನಾನು ಓರ್ವ ಹಿಂದೂ. ನಾನು ಓರ್ವ ನಿಜ…
ಬೆಂಗಳೂರು:- ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಪೋಸ್ಟರ್ ಪಾಲಿಟಿಕ್ಸ್ ಮಾಡುತ್ತಿದೆ ಎಂದು ಮಾಜಿ ಶಾಸಕ ಎ.ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷ ಇತ್ತೀಚಿನ ದಿನಗಳಲ್ಲಿ ಪೋಸ್ಟರ್ ಪಾಲಿಟಿಕ್ಸ್ ಮೂಲಕ ಅಪಪ್ರಚಾರ ಮಾಡಿ ತೇಜೋವಧೆ ಮಾಡುವ ಕೆಲಸ ಮಾಡುತ್ತಿದೆ. ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿರುವುದಕ್ಕೆ ಜೆಡಿಎಸ್ ಪಕ್ಷದ ವತಿಯಿಂದ ಎಚ್ಚರಿಕೆ ಕೊಡುತ್ತಿದ್ದೇವೆ ಎಂದು ಎ.ಮಂಜುನಾಥ್ ತಿಳಿಸಿದರು ಕಾಂಗ್ರೆಸ್ ಪಕ್ಷದವರು ಬಿಜೆಪಿ ಸರಕಾರದ ಸಮಯದಲ್ಲಿ ಪೇ ಸಿಎಂ ಪೋಸ್ಟರ್ಗಳನ್ನು ರಾತ್ರೋ ರಾತ್ರಿ ಅಂಟಿಸಿದರು. ಈಗ ಜನಪರ ವಿಷಯಗಳ ಬಗ್ಗೆ ಪ್ರಸ್ತಾಪ ಮಾಡುತ್ತಿರುವ ಕುಮಾರಸ್ವಾಮಿ ಅವರ ಬಗ್ಗೆ ಅಶ್ಲೀಲ, ಕೀಳು ಅಭಿರುಚಿಯ ಪೋಸ್ಟರ್ ಅಂಟಿಸಿದರೆ ಮೇಲುಗೈ ಸಾಧಿಸುತ್ತೇವೆ ಎನ್ನುವ ಭ್ರಮೆಯಲ್ಲಿದ್ದಾರೆ. ನಾವು ಕಾಂಗ್ರೆಸ್ನವರ ಪೋಸ್ಟರ್ಗಳನ್ನು ಅಂಟಿಸುವುದು ದೊಡ್ಡ ವಿಚಾರವಲ್ಲ. ಅವರು ಒಂದು ಮಾಡಿದರೆ ಹತ್ತು ಮಾಡುವ ಶಕ್ತಿ ನಮಗೂ ಕೂಡ ಇದೆ. ಇದು ಯಾವುದು ಕೂಡ ರಾಜಕಾರಣದಲ್ಲಿ ಶಾಶ್ವತ ಅಲ್ಲ ಎಂದು ಹೇಳಿದರು. ನಾವು ಗೃಹ ಇಲಾಖೆಗೆ ಎಚ್ಚರಿಕೆ ನೀಡುತ್ತಿದ್ದೇವೆ. ಪೊಲೀಸ್…
ಹುಬ್ಬಳ್ಳಿ: ನಗರದ ಉಣಕಲ್ನ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಸ್ಕೂಲ್ನ ಶಿಕ್ಷಕಿ ಸವಿತಾ ಸೊಬಾಗಿನ್ ಅವರು ಕರ್ನಾಟಕ ಓಪನ್ ನ್ಯಾಷನಲ್ ಮಾಸ್ಟರ್ಸ್ ಗೇಮ್ಸ್ನಲ್ಲಿ ಸಾಧನೆಗೈದು ಅಮೆರಿಕದಲ್ಲಿ ನಡೆಯಲಿರುವ ಪ್ಯಾನ್ ಅಮೆರಿಕನ್ ಮಾಸ್ಟರ್ಸ್ ಗೇಮ್ಸ್ಗೆ ಆಯ್ಕೆಯಾಗಿದ್ದಾರೆ. 60 ಮೀ. ಓಟದಲ್ಲಿ ದ್ವಿತೀಯ, ಡಿಸ್ಕಸ್ ಎಸೆತದಲ್ಲಿ ದ್ವಿತೀಯ, 4*100 ಮೀ. ಮಿಶ್ರ ರಿಲೆಯಲ್ಲಿ ದ್ವಿತೀಯ, ಜಾವೆಲಿನ್ ಎಸೆತದಲ್ಲಿ ತೃತೀಯ, 400 ಮೀ. ಓಟದಲ್ಲಿ ತೃತೀಯ ಸ್ಥಾನ ಪಡೆದು ಆಯ್ಕೆಯಾಗಿದ್ದಾರೆ. ಇವರ ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್, ಪ್ರಾಚಾರ್ಯೆ ರಜನಿ ಪಾಟೀಲ, ಮಹಾವೀರ ಉಪಾಧ್ಯೆ ಅಭಿನಂದಿಸಿದರು.
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 9 ಜನ ಪೌರ ಕಾರ್ವಿುಕರು ಸಿಂಗಾಪುರ ಪ್ರವಾಸಕ್ಕೆ ತೆರಳಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯು ರಾಜ್ಯದ ಪೌರ ಕಾರ್ವಿುಕರಿಗೆ ಸಿಂಗಾಪುರ ದೇಶದ ಪ್ರವಾಸವನ್ನು ಆಯೋಜಿಸಿದ್ದು, ಎರಡನೇ ತಂಡದಲ್ಲಿ ಹು-ಧಾ ಮಹಾನಗರ ಪಾಲಿಕೆಯ ಪೌರ ಕಾರ್ವಿುಕರು ಅವಕಾಶ ಪಡೆದಿದ್ದಾರೆ. ವಿಕ್ರಂ ಸಣ್ಣಮನಿ, ಕಾಶಪ್ಪ ಮೇಲಿ, ವೆಂಕಟೇಶ ಮಾರತಾಡ, ರಾಮಾಂಜನೇಯ ಸಿಂಗಲ್ಮಾಲ, ಮಲ್ಲಪ್ಪ ಬಳಗನೂರು, ಸುಭಾಷ ನವಲಗುಂದ, ಶೇಖಪ್ಪ ಬೆಣಸಮಟ್ಟಿ, ಮಂಜುನಾಥ ಲಿಂಗದಾಳ ಹಾಗೂ ಬಸವರಾಜ್ ಅವಣ್ಣವರ ನ. 20ರಂದು ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದು ನ. 25ರಂದು ಮರಳಲಿದ್ದಾರೆ. ಈ ಪ್ರವಾಸದಲ್ಲಿ ಪೌರ ಕಾರ್ವಿುಕರು ಸಿಂಗಾಪುರ ದೇಶದಲ್ಲಿನ ಸ್ವಚ್ಛತೆ, ಅಲ್ಲಿನ ಕಾರ್ವಿುಕರ ಸವಲತ್ತುಗಳು, ಕಾರ್ಯವೈಖರಿ, ಇತ್ಯಾದಿ ವಿಷಯಗಳ ಕುರಿತು ಮಾಹಿತಿ ಪಡೆಯಲಿದ್ದು, ವಿವಿಧ ಘನ ತ್ಯಾಜ್ಯ ವಸ್ತು ಸಂಸ್ಕರಣ ಘಟಕಗಳಿಗೆ ಸಹ ಭೇಟಿ ನೀಡಲಿದ್ದಾರೆ. ಇತ್ತೀಚೆಗೆ ಪಾಲಿಕೆ ಆಯುಕ್ತರ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರವಾಸಕ್ಕೆ ತೆರಳುತ್ತಿರುವ ಪೌರಕಾರ್ವಿುಕರಿಗೆ ಪಾಲಿಕೆ ವತಿಯಿಂದ ಬ್ಲೇಜರ್ ಕೋಟ್, ಬ್ಯಾಗ್ಗಳನ್ನು ಉಡುಗೊರೆಯಾಗಿ ನೀಡಲಾಯಿತು. ಹುಬ್ಬಳ್ಳಿ…
ಭಾರತದಲ್ಲಿ ಯುಪಿಐ ಪಾವತಿ ವ್ಯವಸ್ಥೆ ಕ್ರಾಂತಿಯನ್ನೇ ಸೃಷ್ಟಿಸಿದೆ. ಸ್ಮಾರ್ಟ್ಫೋನ್ ಮೂಲಕ ಆನ್ಲೈನ್ನಲ್ಲಿ ಹಣವನ್ನು ಕಳುಹಿಸುವವರ ಪ್ರಮಾಣ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಇಂದಿನ ಆನ್ಲೈನ್ ಯುಗದಲ್ಲಿ ದೇಶದ ಬಹುಪಾಲು ಜನರು ಜೇಬಿನಲ್ಲಿ ಹಣವನ್ನ ಇಡುವುದನ್ನೇ ಮರೆಯುತ್ತಿದ್ದಾರೆ ಎಂದು ಹೇಳಬಹುದು. ಆದರೆ, ಇದು ಕೆಲವೊಮ್ಮೆ ಸಮಸ್ಯೆಯನ್ನು ತರಬಹುದು.! UPI ಪಾವತಿ ಸೇವೆಯ ಬಳಕೆಯು ವ್ಯಾಪಕವಾಗಿ ಬಳಕೆಯಾಗುತ್ತಿರುವ ಇಂದಿನ ದಿನಗಳಲ್ಲಿ ಒಮ್ಮೊಮ್ಮೆ ಇಂಟರ್ನೆಟ್ ಸಂಪರ್ಕವು ಕೈಕೊಡಬಹುದು.! ಆದರೆ, ಚಿಂತಿಸಬೇಡಿ. ಇದೀಗ ನೀವು ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದಾದ ಆಯ್ಕೆಯನ್ನು ಸುಲಭವಾಗಿ ಬಳಸಬಹುದು.! ಇಂಟರ್ನೆಟ್ ಇಲ್ಲದೆಯೂ UPI ಮೂಲಕ ಪಾವತಿ ಮಾಡುವುದು ಹೇಗೆ ಮತ್ತು ಆಫ್ಲೈನ್ UPI ಪಾವತಿಗಳನ್ನು ಮಾಡಲು ತೆಗೆದುಕೊಳ್ಳಬೇಕಿರುವ ಕ್ರಮಗಳು ಯಾವುವು ಎಂಬುದನ್ನು ಇಂದಿನ ಲೇಖನದಲ್ಲಿ ತಿಳಿಯೋಣ ಬನ್ನಿ. ಈ ಕುರಿತ ಮಾರ್ಗದರ್ಶಿ ಪಟ್ಟಿಯನ್ನು ಈ ಕೆಳಗೆ ನೀಡಲಾಗಿದೆ. ಆಫ್ಲೈನ್ UPI ಪೇಮೆಂಟ್ಸ್ ಅನ್ನು ಸೆಟಪ್ ಮಾಡಿ ನಿಮ್ಮ ಬ್ಯಾಂಕ್ ಖಾತೆಗೆ ಲಿಂಕಟ ಆಗಿರುವ ಫೋನ್ ನಂಬರ್ನಿಂದ ನಿಮ್ಮ ಮೊಬೈಲ್ನಲ್ಲಿ *99# ಡಯಲ್…