ಹುಬ್ಬಳ್ಳಿ: ತಾಲ್ಲೂಕಿನ ನೋಲ್ವಿ ಗ್ರಾಮದ ಶ್ರೇಯಸ್ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ವಿಜ್ಞಾನಿಗಳ ವೇಷ ಭೂಷಣದ ಮೂಲಕ ಹಾಗೂ ಗಣಿತಜ್ಞರ ಸಂಶೋಧನೆಗಳ ಜೊತೆಗೆ ಗಣಿತ ಮತ್ತು ವಿಜ್ಞಾನ ವಸ್ತು ಪ್ರದರ್ಶನವನ್ನು ಯಶಸ್ವಿಯಾಗಿ ನೆರವೇರಿಸಿದರು. ಕಾರ್ಯಕ್ರಮವನ್ನು ಸಸಿ ನೆಡುವುದರ ಮೂಲಕ ಮುಖ್ಯ ಅತಿಥಿಗಳಾಗಿ ಆಗಮಿಸಿದಂತ ಸಿ ಎನ್ ಬಡ್ಡಿ ಹಾಗೂ ಡಿ. ಟಿ.ಅರಿಶಾನು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೇಯಸ್ ಎಜುಕೇಶನ್ ಸಂಸ್ಥೆಯ ಅಧ್ಯಕ್ಷ ಎಂ ಬಿ ಖಾನಗೌಡ್ರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಬಿ ಜಿ ಹಿರೇಮಠ್, ಎಸ್ ಎನ್ ಹನ್ನಿ, ಜಿ. ಬಿ ಪಾಟೀಲ್, ಐ ಎಸ್ ಪೂಜಾರ್ , ಮುಖ್ಯೋಪಾಧ್ಯಾಯರು ಶ್ರೀಮತಿ ರೀಟಾ ರೋಣದ ವಿಜ್ಞಾನದ ಕುರಿತು ಮಕ್ಕಳಿಗೆ ಅರಿವು ಮೂಡಿಸಿದರು ಕಾರ್ಯಕ್ರಮಕ್ಕೆ ಶಾಲೆಯ ಶಿಕ್ಷಕರುಂದದವರೆಲ್ಲರೂ ಉಪಸ್ಥಿತರಿದ್ದರು.
Author: AIN Author
ಪೀಣ್ಯ ದಾಸರಹಳ್ಳಿ: ಸಮೀಪದ ಚಿಕ್ಕಬಾಣಾವರದ ಸಂತೆ ಸರ್ಕಲ್ ಬಳಿ ಲೋಕೋಪಯೋಗಿ ವಿಶೇಷ ಅನುದಾನದಲ್ಲಿ ರಸ್ತೆ ಡಾಂಬರೀಕರಣಕ್ಕೆ ಶಾಸಕ ಎಸ್. ಮುನಿರಾಜು ಚಾಲನೆ ನೀಡಿದರು. ಬಳಿಕ ಎಸ್. ಮುನಿರಾಜು ಮಾತನಾಡಿ’ ಈ ಭಾಗದಲ್ಲಿ ಇನ್ನು ಅನೇಕ ರಸ್ತೆಗಳಿಗೆ ಡಾಂಬರೀಕರಣ ಆಗಿಲ್ಲ, ಈಗ ಅನುದಾನದ ಕೊರತೆ ಇದೆ. ಹಂತ ಹಂತವಾಗಿ ಡಾಂಬರೀಕರಣ ಮಾಡಲಾಗುತ್ತದೆ. ಈ ಭಾಗದಲ್ಲಿ ಅನೇಕ ಸಮಸ್ಯೆಗಳಿವೆ ಎಲ್ಲವನ್ನು ಗಮನಿಸಿದ್ದೇವೆ ಆದಷ್ಟು ಮಟ್ಟಿಗೆ ಬಗೆಹರಿಸುವ ಪ್ರಯತ್ನ ಮಾಡುತ್ತೇವೆ’ ಎಂದರು. ಈ ಸಂದರ್ಭದಲ್ಲಿ ಸರ್ಕಾರಿ ಉರ್ದು ಶಾಲೆಗೆ ಭೇಟಿ ನೀಡಿ ಅಲ್ಲಿನ ಶಾಲೆಯ ದೋಸ್ತಿಯ ಬಗ್ಗೆ ಪರಿಶೀಲಿಸಿ ಬೃಹತ್ ಮರದ ಒಣಗಿದ ರಂಬೆ ಕೊಂಬೆಗಳನ್ನು ಮಕ್ಕಳಿಗೆ ತೊಂದರೆ ಆಗದ ರೀತಿಯಲ್ಲಿ ಅರಣ್ಯ ಅಧಿಕಾರಿಗಳಿಗೆ ಕತ್ತರಿಸಲು ಸೂಚಿಸಿದರು. ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ. ಮರಿಸ್ವಾಮಿ, ಚಿಕ್ಕಬಾಣಾವರ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಭಾಗ್ಯಮ್ಮ, ಬಿಜೆಪಿ ಮುಖಂಡ ಕಬೀರ್, ಪುರಸಭೆ ಮುಖ್ಯ ಅಧಿಕಾರಿ ಕುಮಾರ್, ನವೀನ್, ಗಿರೀಶ್ ಮತ್ತು ಸ್ಥಳೀಯರಿದ್ದರು.
ತಿಪಟೂರ್:- ನಗರದಲ್ಲಿ ಚಿರತೆ ಪ್ರತ್ಯಕ್ಷ ಸ್ಥಳೀಯರು ಆತಂಕಗೊಂಡಿದ್ದಾರೆ. ತಿಪಟೂರು ನಗರದ ಮಾರನ್ಗೆರೆ ಬಡಾವಣೆಯ ಸಂಗಮೇಶ್ವರ ತೋಟದ ಬಾವಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಈ ಸಂಬಂಧ ತೋಟದ ಮಾಲಿಕ ಸಂಗಮೇಶ್ ಹೇಳಿಕೆ ನೀಡಿದ್ದಾರೆ. ಮೂರು ಚಿರತೆಗಳಿದ್ದು, ಒಂದು ಚಿರತೆ ಬಾವಿಗೆ ಬಿದ್ದಿದೆ, ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಒಂದು ಚಿರತೆಯನ್ನು ಮೇಲತ್ತಲು ಹರಾಸಾಹಸ ಪಡುತ್ತಿದ್ದಾರೆ.
ಪೀಣ್ಯ ದಾಸರಹಳ್ಳಿ:’ ನೀರಿನ ಅಭಾವ ಸ್ವಲ್ಪ ಮಟ್ಟಿಗಾದರೂ ಕಡಿಮೆ ಮಾಡಲು ಕೊಳವೆಬಾವಿ ಕೊರೆಸಿ ನೀರು ನೀಡಲಾಗುತ್ತಿದೆ’ ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು. ಮಲ್ಲಸಂದ್ರದ ಬಿ.ಎಚ್.ಇ.ಎಲ್ ಮಿನಿ ಕಾಲೋನಿಯಲ್ಲಿ ಕೊಳವೆಬಾವಿ ನೀರಿನ ಪೂರೈಕೆಗೆ ಚಾಲನೆ ನೀಡಿ ಮಾತನಾಡಿದರು. ಮಲ್ಲಸಂದ್ರದ ಮುನೇಶ್ವರ ಬಡಾವಣೆ ಬಿಎಚ್ಇಎಲ್ ಮಿನಿ ಕಾಲೋನಿ ಪೈಪ್ಲೈನ್ ರಸ್ತೆ ಸುತ್ತಮುತ್ತಲ ಪ್ರದೇಶದ ಜನರಿಗೆ ನೀರಿನ ಸಮರ್ಪಕ ಪೂರೈಕೆ ಆಗದ ಕಾರಣ ನೀರಿನ ಹಾಹಾಕಾರವಾಗಿತ್ತು. ದಿನನಿತ್ಯ ನೂರಾರು ದೂರುಗಳು ಬರುತ್ತಿದ್ದವು. ಹೀಗಿರುವ ಕೊಳವೆ ಬಾವಿಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಕಾವೇರಿ ನೀರು ಸರಿಯಾಗಿ ಪೂರೈಕೆ ಆಗುತ್ತಿಲ್ಲ. ಅದರಿಂದ ನೀರಿನ ಸಮಸ್ಯೆ ಜಾಸ್ತಿಯಾಗಿತ್ತು. ಈಗ ಕೊಳವೆ ಬಾವಿಯಲ್ಲಿ ನೀರು ಸಿಕ್ಕಿದೆ, ಈ ಭಾಗದ ಜನರಿಗೆ ಸ್ವಲ್ಪಮಟ್ಟಿಗೆ ಆದರೂ ಸಮಸ್ಯೆ ಬಗೆಹರಿಯಲಿದೆ’ ಎಂದರು. ಈ ವೇಳೆ ಬಿಜೆಪಿ ಮುಖಂಡರಾದ ಟಿ. ಶಿವಕುಮಾರ್, ಹುಚ್ಚ ರಂಗಯ್ಯ, ಎಂ. ಆನಂದ್, ಗಂಧದಗುಡಿ ನಾಗಣ್ಣ, ಗಂಗರಾಜು, ಪಾಂಡುರಂಗರಾವ್, ಕೆಂಪೇಗೌಡ ಸುರೇಶ್, ಗಂಗಾಧರ್, ಉದ್ಯಮಿ ತಿಮ್ಮೇಗೌಡ, ಮಹಿಳಾ ಮುಖಂಡರಾದ ಪಾರ್ವತಿ, ನಯನ…
ಮಂಡ್ಯ: ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರದಲ್ಲಿ ಯಾರ ತಕರಾರೂ ಇಲ್ಲ ಎಂದು ಮಂಡ್ಯದಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಹೇಳಿದರು. JDS ಎನ್ಡಿಎ ತೆಕ್ಕೆಗೆ ಬರಬೇಕು ಎಂಬುದು ವರಿಷ್ಠರ ತೀರ್ಮಾನ. ಈ ತೀರ್ಮಾನದ ಬಗ್ಗೆ ರಾಜ್ಯದಲ್ಲಿ ಉತ್ಸಾಹ ಇದೆ. ಮೈತ್ರಿಯಿಂದ ತಳಮಟ್ಟದ ಕಾರ್ಯಕರ್ತರಿಗೂ ಉತ್ಸಾಹ ಬಂದಿದೆ. https://ainlivenews.com/satish-jarakiholi-becoming-cm-is-as-true-as-surya-being-born-congress-mla/ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, JDS ಹೆಚ್ಚು ಸ್ಥಾನ ಗೆಲ್ಲುತ್ತದೆ. ನಮ್ಮ ಗುರಿ ಮತ್ತೊಮ್ಮೆ ಮೋದಿಯನ್ನು ಪ್ರಧಾನಿ ಮಾಡುವುದು. ಬಿಜೆಪಿ ಮತ್ತು ಜೆಡಿಎಸ್ ಒಟ್ಟಿಗೆ ಕೆಲಸ ಮಾಡುತ್ತೇವೆ. ಮಂಡ್ಯ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷ ಕೈಬಿಡುವ ಪ್ರಶ್ನೆ ಇಲ್ಲ. ಮಂಡ್ಯದಲ್ಲಿ ಪಕ್ಷ ಸಂಘಟನೆಗೆ ನಾಯಕರಿಗೆ ಹೆಚ್ಚು ಶಕ್ತಿ ಕೊಡುತ್ತೇವೆ ಎಂದರು.
ವಿಜಯಪುರ:- ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೀಡಿರುವ ಹೇಳಿಕೆಗೆ ಜಿ ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಕೆಲವರು ಹಗಲುಗನಸು ಕಾಣುತ್ತಿದ್ದಾರೆ. ನನಸಾಗದ ಹಗಲು ಕಾಣುವವರಿಗೆ ಬೇಡವೆನ್ನಲಾದೀತೆ. ಕೆಲವರು ಹಗಲು ಕನಸು ಕಾಣುತ್ತಿರುತ್ತಾರೆ. ಡೇ ಡ್ರೀಮ್ ಕಾಣುವವರಿಗೆ ಬೇಡ ಎನ್ನಲಾಗದು. ಕನಸಾಗಿಯೇ ಉಳಿಯುವ ಹಗಲುಗನಸು ಕಾಣುವವರನ್ನು ಅಂಥ ಕನಸು ಕಾಣಲಿ ಎಂದು ಬಿಟ್ಟುಬಿಡಬೇಕು ಎಂದ ಅವರು, ನಾವು ಜೋಡೆತ್ತುಗಳು ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷದ ನಾಯಕ ಆರ್. ಆಶೋಕ ಹೇಳಿಕೆಗೆ ಬಹಳ ಸಂತೋಷ ಎಂದಷ್ಟೇ ಪರಮೇಶ್ವರ ನಗೆ ಬೀರಿದರು.
ಪಾಟ್ನಾ: ಬಿಹಾರದಲ್ಲಿ (Bihar) ಛಾತ್ ಹಬ್ಬದ (Chhath Festivities) ಆಚರಣೆ ವೇಳೆ ವಿವಿಧ ಜಲ ಮೂಲಗಳಲ್ಲಿ ಮುಳುಗಿ ಒಟ್ಟು 13 ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಟ್ನಾ (Patna), ಖಗಾರಿಯಾ, ಸಮಸ್ತಿಪುರ್, ಸಹರ್ಸಾ, ದಬರ್ಂಗಾ, ಮುಂಗೇರ್ ಮತ್ತು ಬೆಸುಸರೈಗಳಲ್ಲಿ ಈ ಸಾವುಗಳು ವರದಿಯಾಗಿವೆ. ಪಾಟ್ನಾ ಜಿಲ್ಲೆಯಲ್ಲಿ ಬ್ರಹ್ಮಪುರ ಪ್ರದೇಶದಲ್ಲಿ ಮೂವರು ವ್ಯಕ್ತಿಗಳು ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. https://ainlivenews.com/satish-jarakiholi-becoming-cm-is-as-true-as-surya-being-born-congress-mla/ ಖಗಾರಿಯಾದಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಚೌತಮ್ ಮತ್ತು ಪರ್ಬಟಾ ಪ್ರದೇಶಗಳಲ್ಲಿ ಮೂವರು ಮುಳುಗಿದ್ದಾರೆ. ಅಲ್ಲದೆ, ದಬರ್ಂಗಾ ಮತ್ತು ಸಮಸ್ತಿಪುರ್ ಜಿಲ್ಲೆಗಳಲ್ಲಿ ತಲಾ ಇಬ್ಬರು ಮತ್ತು ಬೇಗುಸರೈ, ಮುಂಗರ್ ಮತ್ತು ಸಹರ್ಸಾ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಅವರ ಗುರುತು ಪತ್ತೆಗೆ ಅಧಿಕಾರಿಗಳು ಹಾಗೂ ಪೊಲೀಸರು (Police) ಕ್ರಮ ಕೈಗೊಂಡಿದ್ದಾರೆ. ಕಳೆದ ಬಾರಿ ಛಾತ್ ಹಬ್ಬದ ವೇಳೆ ಬಿಹಾರದಾದ್ಯಂತ ಸುಮಾರು 53 ಜನ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದರು.
ದಾವಣಗೆರೆ: ದಾವಣಗೆರೆಯ ಕಾಂಗ್ರೆಸ್ ಮುಖಂಡ ಹಾಗೂ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಆಪ್ತ ಅಯುಬ್ ಪೈಲ್ವಾನ್ ಸೇರಿದಂತೆ ಆತನ ಕುಟುಂಬಸ್ಥರು ಪೊಲೀಸರ ಮೇಲೆಯೇ ದರ್ಪ ತೋರಿದ್ದಾರೆ. ನವೆಂಬರ್ 16 ರಾತ್ರಿ ನಗರದ ಅರಳಿಮರ ವೃತ್ತದಲ್ಲಿ ಈ ಘಟನೆ ನಡೆದಿದೆ. ರಾತ್ರಿ 11 ಗಂಟೆ ಬಳಿಕ ನಗರದಲ್ಲಿನ ಅಂಗಡಿ ಮುಂಗಟ್ಟುಗಳನ್ನ ಮುಚ್ಚುವಂತೆ ನಿಯಮವಿದೆ. ಆದರೆ, ರಾತ್ರಿ 11.30ರ ಸುಮಾರಿನಲ್ಲಿ ಅರಳಿ ವೃತ್ತದಲ್ಲಿ ಅಂಗಡಿಯ ಮುಂದೆ ಬೈಕ್ ನಿಲ್ಲಿಸಿಕೊಂಡು ಕೆಲವರು ಯುವಕರು ಕುಳಿತುಕೊಂಡಿದ್ದರು. ಈ ವೇಳೆ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಬೀಟ್ ಸಿಬ್ಬಂದಿ ಸ್ಥಳಕ್ಕೆ ಬಂದು ಅಂಗಡಿ ಬಂದ್ ಮಾಡಿ ಮನೆಗೆ ತೆರಳುವಂತೆ ಸೂಚನೆಯನ್ನ ನೀಡಿದ್ದಾರೆ. ಅಲ್ಲದೇ, ಬೈಕ್ ನ ಪೋಟೋ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಆಗ ಯುವಕನೊಬ್ಬ ಮನೆಗೆ ತೆರಳದೆ ಬಗ್ಗಿ ತನ್ನ ಹಿಂಭಾಗ ತೋರಿಸಿ ಈ ಪೋಟೋ ತೆಗೆದುಕೊಳ್ಳಿ ಎಂದು ಆವಾಜ್ ಹಾಕಿದ್ದಾನೆ. ಅಲ್ಲದೇ, ಸುಮ್ಮನೆ ಹೋಗದಿದ್ದರೆ ತನ್ನ ಸಂಬಂಧಿ ಕರೆಸಿ ಏನು ಮಾಡುತ್ತೇನೆ ಎಂದು ಹೆದರಿಸಿದ್ದಾನೆ. ಇದೇ ಅವಾಂತರಕ್ಕೆ ಕಾರಣವಾಗಿದೆ. ಬಳಿಕ,…
ಬೆಂಗಳೂರಿನಲ್ಲಿ (Bengaluru) ವಿದ್ಯುತ್ ತಗುಲಿ ತಾಯಿ, ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (National Human Rights Commission) ನೋಟಿಸ್ (Notice) ಜಾರಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ವರದಿಯನ್ನು ಆರು ವಾರಗಳಲ್ಲಿ ಸಲ್ಲಿಸುವಂತೆ ನೋಟಿಸ್ನಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ನಡೆದ ಘಟನೆ ಮಾನವ ಹಕ್ಕುಗಳ ಉಲ್ಲಂಘನೆಯ ಗಂಭೀರ ಸಮಸ್ಯೆಯನ್ನು ತೋರಿಸುತ್ತದೆ ಎಂದು ಆಯೋಗವು ಗಮನಿಸಿದೆ. ಇದು ಕಳವಳಕಾರಿ ವಿಷಯವಾಗಿದೆ. ವರದಿಯಾಗಿರುವ ಘಟನೆಯು ಬೆಂಗಳೂರಿನ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯವನ್ನು ಸೂಚಿಸುತ್ತದೆ. ಈ ವಿಷಯದ ಬಗ್ಗೆ ವಿವರವಾದ ವರದಿಯನ್ನು ನೀಡಬೇಕು ಎಂದು ಕರ್ನಾಟಕದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ನಲ್ಲಿ ತಿಳಿಸಿದೆ. ವರದಿಯು ಎಫ್ಐಆರ್ನ ಸ್ಥಿತಿ, ಲೋಪಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ತೆಗೆದುಕೊಂಡ ಕ್ರಮ ಮತ್ತು ಮೃತರ ಮುಂದಿನ ಸಂಬಂಧಿಕರಿಗೆ ನೀಡಲಾದ ಪರಿಹಾರವನ್ನು ಒಳಗೊಂಡ ಮಾಹಿತಿಯೂ ಸೇರಿ ವಿಸ್ತೃತ ವರದಿಯನ್ನು ನೀಡಬೇಕು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹೇಳಿದೆ.
ಬೆಂಗಳೂರು: ಅವರಿಬ್ಬರೂ ಬೆಂಗಳೂರಿನ ನಟೋರಿಯಸ್ ರೌಡಿಶೀಟರ್ ಗಳು ಹಣಕಾಸು ವಿಚಾರಕ್ಕೆ ಒಬ್ಬನ ಮೇಲೆ ಮತ್ತೊಬ್ಬನ ಗ್ಯಾಂಗ್ ಅಟ್ಯಾಕ್ ಮಾಡಿತ್ತು ಈ ಹಳೆ ದ್ವೇಷಕ್ಕೆ ಆತನನ್ನ ಮುಗಿಸಲೇಬೇಕಂತ ಡಿಸೈಡ್ ಮಾಡಿದ ಗ್ಯಾಂಗ್ ಆತನಿದ್ದ ಊರಿಗೆ ಹುಡುಕಿಕೊಂಡು ಹೋಗಿ ಹತ್ಯೆ ಮಾಡಲು ಸ್ಕೆಚ್ ಹಾಕಿದ್ರು. ಆದರೆ ಆತ ಇವರ ಕೈಗೆ ಸಿಗದೇ ಎಸ್ಕೇಪ್ ಆಗಿದ್ದ. ಸಿಲಿಕಾನ್ ಸಿಟಿಯಲ್ಲಿ ನಡೆಯಬೇಕಿದ್ದ ಗ್ಯಾಂಗ್ ವಾರ್ ನನ್ನ ಸಿಸಿಬಿ ಪೊಲೀಸರು ತಪ್ಪಿಸಿ ಆರೋಪಿಗಳ ಎಡೆಮರಿ ಕಟ್ಟಿದ್ದಾರೆ ಹಾಗಾದ್ರೆ ಯಾರು ಆ ನಟೋರಿಯಸ್ ರೌಡಿಶೀಟರ್ ಈ ಸ್ಟೋರಿ ನೋಡಿ. ಟಾಲಿವುಡ್, ಕಾಲಿವುಡ್ ಸಿನಿಮಾಗಳನ್ನು ಮೀರಿಸೋ ರೇಂಜಿಗೆ ಹತ್ತಾರು ಕಾರುಗಳಲ್ಲಿ ಬಿಲ್ಡಪ್ ಕೊಟ್ಟುಕೊಂಡು ಈ ಗ್ಯಾಂಗ್ ಹೊರಟಿದ್ದು, ರೌಡಿಯೊಬ್ಬನ ಹತ್ಯೆಗೆ ಸ್ಕೇಚ್ ಹಾಕಿ ಹತ್ತಾರು ಕಾರುಗಳಲ್ಲಿ ಊರಿಂದ ಊರಿಗೆ ಬಿಲ್ಡಪ್ ಯಾತ್ರೆ ಮಾಡಿ ರೌಡಿಗಳ ಈ ಹಬ್ಬರದ ಯಾತ್ರೆ ಮೊಬೈಲ್ ನಲ್ಲಿ ಸೆರೆಯಾಗಿದೆ. ಅಂದಹಾಗೇ, ರೌಡಿಶೀಟರ್ ಒಬ್ಬನ ಹತ್ಯೆಗೆ ಸ್ಕೇಚ್ ಹಾಕಿದ ಮತ್ತೊಂದು ರೌಡಿ ಪಟಾಲಂ ತನ್ನದೇ ಗ್ಯಾಂಗ್ ಕಟ್ಟಿಕೊಂಡು ಊರಿಂದ…