ಬೆಂಗಳೂರು : ರಾಜಕೀಯ ಸಮಾರಂಭದಲ್ಲಿ ಶಿಳ್ಳೆ(ಸಿಳ್ಳೆ) ಹೊಡೆಯುವುದು ದಯಮಾಡಿ ಮಾಡಬೇಡಿ ಎಂದು ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ್ದಾರೆ. ರಾಷ್ಟ್ರಾದ್ಯಂತ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆ ಮಾಡ್ತಾ ಇದ್ದೇವೆ. ಅವರು ಹುಟ್ಟಿದ ಸ್ಥಳ ರಾಜಕೀಯ ಕೇಂದ್ರವಾಗಿತ್ತು. ಅವರ ತಂದೆ, ತಾಯಿ, ತಾತ ಸಕ್ರಿಯ ರಾಜಕೀಯ ಮಾಡಿದವರು. ಅವರು ಸಣ್ಣವರು ಇದ್ದಾಗ ಗಾಂಧೀಜಿ ಸೇರಿದಂತೆ ಎಲ್ಲರು ಬರುತ್ತಿದ್ದರು. ಹಾಗಾಗಿ, ಇಂದಿರಾಗಾಂಧಿ ಬಾಲ್ಯದಿಂದಲೇ ಜನಪರ ಧೋರಣೆ ಹೊಂದಿದ್ದರು ಎಂದು ಸ್ಮರಿಸಿದ್ದಾರೆ.
Author: AIN Author
ಬಿಗ್ಬಾಸ್ ಮನೆಯಿಂದ ನಿನ್ನೆ ಎಲಿಮಿನೇಷನ್ ಆಗಿ ರ್ಯಾಪರ್ ಇಶಾನಿಹೊರಬಂದಿದ್ದಾರೆ.ರ್ಯಾಪ್ ಸಾಂಗ್ಗಳ ಮೂಲಕವೇ ಮನಗೆದ್ದಿದ್ದ ಇಶಾನಿ ಅವರು ಆರನೇ ವಾರಕ್ಕೇ ಬಿಗ್ ಬಾಸ್ ಮನೆಯಲ್ಲಿ ಆಟ ನಿಲ್ಲಿಸಿದ್ದಾರೆ. ಕಳೆದ ವಾರ ವರ್ತೂರ್ ಸಂತೋಷ್ ಅವರ ಕಾರಣದಿಂದ ಎಲಿಮಿನೇಷನ್ ನಡೆದಿರಲಿಲ್ಲ. ಈ ವಾರ ಡಬಲ್ ಎಲಿಮಿನೇಷನ್ ವೀಕ್ ಇತ್ತು. ಇಬ್ಬರು ಈ ಮನೆಯಿಂದ ಹೊರಗೆ ಹೋಗಲಿದ್ದಾರೆ ಎಂದು ಕಿಚ್ಚ ಹೇಳಿದ್ದರು. ಶನಿವಾರದ ಎಪಿಸೋಡ್ ಕೊನೆಯಲ್ಲಿ, ಕಿಚ್ಚ, ‘ಈ ವಾರ ಒಬ್ಬರು ಮನೆಯಿಂದ ಹೊರಗೆ ಹೋಗುತ್ತಿದ್ದಾರೆ. ಅವರು ಯಾರು ಎಂದು ನಿಮಗೇ ಗೊತ್ತಿರಬೇಕು. ಅವರೇ ಎದ್ದು ನಿಂತುಕೊಳ್ಳಿ’ ಎಂದು ಕೇಳಿದರು. ಇಶಾನಿ ಎದ್ದು ನಿಂತುಕೊಂಡರು. ಕಿಚ್ಚ, ನಿಜ. ನಿಮ್ಮ ಪಯಣ ಬಿಗ್ಬಾಸ್ ಮನೆಯಲ್ಲಿ ಮುಗಿಯುತ್ತಿದೆ. ಆಲ್ದಿ ಬೆಸ್ಟ್ ಎಂದು ಹೇಳಿದರು. ಕೊನೆಯದಾಗಿ ಇಶಾನಿ, ‘ನಾನು ಇನ್ನಷ್ಟು ಎಫರ್ಟ್ ಹಾಕಬೇಕಾಗಿತ್ತು. ಆಗಲಿಲ್ಲ. ಮನೆಯಿಂದ ಸಾಕಷ್ಟು ಕಲಿತುಕೊಂಡಿದ್ದೀನಿ. ಉಳಿದ ಎಲ್ಲ ಸ್ಪರ್ಧಿಗಳಿಗೆ ಆಲ್ ದಿ ಬೆಸ್ಟ್’ ಎಂದು ಹೇಳಿದರು. ಅಲ್ಲಿಗೆ ಶನಿವಾರದ ‘ಕಿಚ್ಚನ ಪಂಚಾಯಿತಿ’ ಮುಗಿದಿದೆ.
72ನೇ ವಿಶ್ವ ಸುಂದರಿ 2023 ಸ್ಪರ್ಧೆಯು ಸ್ಯಾನ್ ಸಾಲ್ವಡಾರ್ನಲ್ಲಿ ನಡೆದಿದ್ದು, ಈ ವರ್ಷದ ‘ಮಿಸ್ ಯೂನಿವರ್ಸ್’ ಕಿರೀಟವನ್ನು ನಿಕರಾಗುವಾ ಮೂಲದ ಶೆನ್ನಿಸ್ ಪಲಾಸಿಯೋಸ್ ತಮ್ಮದಾಗಿಸಿಕೊಂಡರು. ಈ ವರ್ಷವೂ ಸುಮಾರು 84 ದೇಶಗಳ ಸೌಂದರ್ಯ ರಾಣಿಯರು ಪ್ರಪಂಚದಾದ್ಯಂತ ಸ್ಪರ್ಧಿಸಿದ್ದರು. ನಿಕರಾಗುವಾ ಮೂಲದ ಶೆನ್ನಿಸ್ ಪಲಾಸಿಯೋಸ್ ತಮ್ಮ ಸೌಂದರ್ಯ ಮತ್ತು ಬುದ್ಧಿವಂತಿಕೆಯಿಂದ ಇತರ ಸುಂದರಿಯರೊಂದಿಗೆ ಸ್ಪರ್ಧಿಸುವ ಮೂಲಕ ವಿಶ್ವ ಸುಂದರಿ 2023ರ ಕಿರೀಟವನ್ನು ಗೆದ್ದರು. ಇಂದು ಎಲ್ ಸಾಲ್ವಡಾರ್ನ ಸ್ಯಾನ್ ಸಾಲ್ವಡಾರ್ನಲ್ಲಿರುವ ಜೋಸ್ ಅಡಾಲ್ಫೊ ಪಿನೆಡಾ ಅರೆನಾದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ನಿಕರಾಗುವಾದ ಶೆಯ್ನಿಸ್ ಪಲಾಸಿಯೊಸ್ 2023 ರ ವಿಶ್ವ ಸುಂದರಿ ಪ್ರಶಸ್ತಿಯನ್ನು ವಿಜೇತ ಎಂದು ಘೋಷಿಸಲಾಯಿತು. ಇನ್ನು ಚಂಡೀಗಢದ 23 ವರ್ಷದ ಶ್ವೇತಾ ಶಾರದಾ ನಮ್ಮ ದೇಶದ ಪರವಾಗಿ ಈ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಈ ಬಾರಿ ಭಾರತವನ್ನು ಪ್ರತಿನಿಧಿಸಿದ ಶ್ವೇತಾ ಶಾರದಾ ಅಗ್ರ 20 ಫೈನಲಿಸ್ಟ್ಗಳಲ್ಲಿ ಸ್ಥಾನ ಪಡೆದರು.
ಅಹಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ(India vs Australia, Final) ನಡುವಣ ವಿಶ್ವಕಪ್ ಫೈನಲ್ ಪಂದ್ಯ ಕೆಲವೇ ಕ್ಷಣದಲ್ಲಿ ಆರಂಭಗೊಳ್ಳಲಿದೆ. ಪಂದ್ಯ ಆರಂಭಕ್ಕೂ ಮುನ್ನ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ತಂಡಕ್ಕೆ ಶುಭ ಹಾರೈಸಿದ್ದಾರೆ. “ಆಲ್ ದಿ ಬೆಸ್ಟ್ ಟೀಂ ಇಂಡಿಯಾ! 140 ಕೋಟಿ ಭಾರತೀಯರು ನಿಮಗಾಗಿ ಹುರಿದುಂಬಿಸುತ್ತಿದ್ದಾರೆ. ನೀಮ್ಮ ಪ್ರದರ್ಶನ ಪ್ರಕಾಶಮಾನವಾಗಿ ಹೊಳೆಯಲಿ, ಚೆನ್ನಾಗಿ ಆಡಿ ಮತ್ತು ಕ್ರೀಡಾ ಮನೋಭಾವವನ್ನು ಎತ್ತಿ ಹಿಡಿಯಿರಿ” ಎಂದು ಟ್ವೀಟ್ ಮಾಡುವ ಮೂಲಕ ಮೋದಿ ಶುಭ ಹಾರೈಸಿದ್ದಾರೆ.
ಬೆಂಗಳೂರು : ವಿಶ್ವಕಪ್-2023 ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ಮತ್ತೊಂದು ವಿಕೆಟ್ ಪತನವಾಗಿದೆ. 31 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 4 ಬೌಂಡರಿಗಳೊಂದಿಗೆ 47 ರನ್ ಗಳಿಸಿದ್ದ ನಾಯಕ ರೋಹಿತ್ ಶರ್ಮಾ ಔಟಾದರು. ಗ್ಲೆನ್ ಮ್ಯಾಕ್ಸ್ವೆಲ್ ಎಸೆದ 10ನೇ ಓವರ್ನ 4ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾದ ರೋಹಿತ್ ಶರ್ಮಾ ಅವರು ಟ್ರಾವಿಸ್ ಹೆಡ್ ಹಿಡಿದ ಅದ್ಭುತ ಕ್ಯಾಚ್ಗೆ ಬಲಿಯಾದರು. ಬಳಿಕ ಬಂದ ಶ್ರೇಯಸ್ ಅಯ್ಯರ್ ಒಂದು ಬೌಂಡರಿ ಬಾರಿಸಿ ಬಂದ ಹಾದಿಯಲ್ಲೇ ಪೆವಿಲಿಯನ್ನತ್ತ ಹೆಜ್ಜೆ ಹಾಕಿದರು. ಆಸಿಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಬೌಲಿಂಗ್ನಲ್ಲಿ ಅಯ್ಯರ್ ಕೀಪರ್ ಇಂಗ್ಲಿಸ್ಗೆ ಕ್ಯಾಚ್ ನೀಡಿದರು. ಪ್ರಸ್ತುತ ಭಾರತ 11.4 ಓವರ್ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 86 ರನ್ ಗಳಿಸಿದೆ. ವಿರಾಟ್ ಕೊಹ್ಲಿ 25 ರನ್ ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ 3 ರನ್ ಗಳಿಸಿ ಕ್ರೀಸ್ನಲ್ಲಿದ್ದಾರೆ.
ಅಹಮದಾಬಾದ್: ವಿಶ್ವಕಪ್ನಲ್ಲಿ ಗೆದ್ದ ತಂಡಕ್ಕೆ ಬಹುಮಾನ ರೂಪದಲ್ಲಿ ಎಷ್ಟು ಮೊತ್ತ ಪಡೆಯಲಿದೆ ಎಂಬ ಕುತೂಹಲವಿರವುದು ಎಲ್ಲಾ ಸಹಜ ಹಾಗಿದ್ರೆ ಗೆದ್ದ ಟೀಮ್ಗೆ ಹಾಗೂ ರನ್ನರ್ ಅಪ್ ಮತ್ತು ಸೆಮಿಫೈನಲ್ ಹಂತದವರೆಗೆ ಬರುವವರಿಗೂ ಸಿಗಬಹುದಾದ ತಂಡಕ್ಕೆ ಸಿಗುವ ಮೊತ್ತವೆಷ್ಟು..? ಎಂಬುವುದರ ಕಂಪ್ಲಿಟ್ ಡಿಟೇಲ್ಸ್ ಇಲ್ಲಿದೆ. ಈ ಬಾರಿಯ ಟೂರ್ನಿಯಲ್ಲಿ ಒಟ್ಟು 383 ಕೋಟಿ ಮೊತ್ತವನ್ನು ಬಹುಮಾನ ಮತ್ತು ಪ್ರೋತ್ಸಾಹಧನ ರೂಪದಲ್ಲಿ ತಂಡಗಳಿಗೆ ನೀಡಲು ಐಸಿಸಿಯು ನಿರ್ಧರಿಸಿದೆ. ಇಂದಿನ ಪಂದ್ಯದಲ್ಲಿ ಅಡಿ ಚಾಂಪಿಯನ್ ಆಗಿ ಹೊರಹೊಮ್ಮಲಿರುವ ತಂಡ 733.3 ಕೋಟಿ ನಗದು ಬಹುಮಾನ ತಮ್ಮದಾಗಿಸಿಕೊಳ್ಳಲಿದೆ. ರನ್ನರ್ ಅಪ್ ತಂಡಕ್ಕೆ 716 ಕೋಟಿ ಸಿಗಲಿದೆ. ಸೆಮಿಫೈನಲ್ ಹಂತದವರೆಗೆ ಬಂದು ಸೋತು ನಿರ್ಗಮಿಸಿದ ದಕ್ಷಿಣಾ ಆಫ್ರಿಕಾ ಮತ್ತು ನ್ಯೂಜಿಲ್ಯಾಂಡ್ ತಂಡಗಳಿಗೆ ತಲಾ 6 ಕೋಟಿ ಸಿಗಲಿದೆ.
ಮಂಡ್ಯ:ನೀರಿನಲ್ಲಿ ಆಟವಾಡುವ ವೇಳೆ KRS ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ KRS ಡ್ಯಾಂ ನಲ್ಲಿ ನಡೆದಿದೆ. ಹರೀಶ್, ನಂಜುಂಡ ಹಾಗೂ ಜ್ಯೋತಿ ಮೃತ ದುರ್ದೈವಿಗಳಾಗಿದ್ದು ಮೂವರು ಮೃತರು ಮೈಸೂರಿನ ಕಾರುಣ್ಯ ಟ್ರಸ್ಟ್ ಸಿಬ್ಬಂದಿಗಳಾಗಿರುತ್ತಾರೆ.ರಜೆ ಹಿನ್ನೆಲೆಯಲ್ಲಿ ಪ್ರವಾಸಕ್ಕೆಂದು ಬಂದಿದ್ದ 25 ಮಂದಿ ಸಿಬ್ಬಂದಿ ಹಿನ್ನೀರಿನಲ್ಲಿ ಆಟವಾಡುವಾಗ ಮುಳುಗಿದ್ದ ಮೂವರು. ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿಯಿಂದ ಮೃತದೇಹ ಮೇಲೆತ್ತುವ ಕಾರ್ಯ. ಮೂವರ ಪೈಕಿ ಇಬ್ಬರು ಮೃತದೇಹ ಪತ್ತೆ, ಮತ್ತೊಬ್ಬನ ಮೃತದೇಹಕ್ಕಾಗಿ ಮುಂದುವರಿದ ಶೋಧ ಕಾರ್ಯ
ಬಳ್ಳಾರಿ : ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ವಿಶ್ವಕಪ್ ಮಹಾ ಸಮರ ಹಿನ್ನಲೆ ಕ್ರಿಕೆಟ್ ನೇರ ಪ್ರಸಾರ ವೀಕ್ಷಿಸಲು ಆಗಮಿಸಿತ್ತಿರುವ ಕ್ರಿಕೆಟ್ ಅಭಿಮಾನಿಗಳು ಬಳ್ಳಾರಿಯ ಪುಟ್ಬಾಲ್ ಕ್ರೀಡಾಂಗಣದಲ್ಲಿ ಬೃಹತ್ ಎಲ್ಇಡಿ ಪರದೆ ಮೂಲಕ ವೀಕ್ಷಣೆಗೆ ಅವಕಾಶ, ಸಾವಿರಾರು ಸಂಖ್ಯೆಯಲ್ಲಿ ಲೈವ್ ಕ್ರಿಕೆಟ್ ವೀಕ್ಷಿಸಲು ಆಗಮಿಸುತ್ತಿರುವ ಅಭಿಮಾನಿಗಳು, ಭಾರತದ ಪರ ಘೋಷಣೆ ಕೂಗುತ್ತಿರುವ ಅಭಿಮಾನಿಗಳು, ಭಾರತ ತಂಡವು ವಿಶ್ವಕಪ್ ಗೆದ್ದು ಬೀಗಲಿ ಎಂದು ಘೋಷಣೆ ಕೂಗುತ್ತಿರುವ ಅಭಿಮಾನಿಗಳು, ಬಳ್ಳಾರಿಯ ಬಿಡಿಎಎ ಪುಟ್ಬಾಲ್ ಮೈದಾನದಲ್ಲಿ ಎಲ್ಇಡಿ ಪರದೆ ಮೂಲಕ ಮುಕ್ತ ಅವಕಾಶ ಕಲ್ಪಿಸಿರುವ ಬಳ್ಳಾರಿ ಜಿಲ್ಲಾಡಳಿತ.
ರಾಜ್ ಬಿ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಟ್ರೇಲರ್ ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಟ್ರೇಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಚಿತ್ರ ನವೆಂಬರ್ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ‘ಸ್ಯಾಂಡಲ್ವುಡ್ ಕ್ವೀನ್’ ರಮ್ಯಾ ಅವರು ತಮ್ಮ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಲೈಟರ್ ಬುದ್ಧ ಫಿಲಂಸ್ ಸಹಯೋಗದೊಂದಿಗೆ ನಿರ್ಮಾಣವಾಗಿರುವ “ಸ್ವಾತಿ ಮುತ್ತಿನ ಮಳೆ ಹನಿಯೇ” ಚಿತ್ರ ನವೆಂಬರ್ 24ರಂದು ಕೆ.ಆರ್.ಜಿ. ಸ್ಟುಡಿಯೋಸ್ ಮೂಲಕ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದೆ. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಟ ಹಾಗೂ ನಿರ್ದೇಶಕ ರಾಜ್ ಬಿ ಶೆಟ್ಟಿ, ನಾನೊಬ್ಬ ಬ್ಯಾಚುಲರ್ ಆಫ್ ಸೋಶಿಯಲ್ ವರ್ಕ್ ವಿದ್ಯಾರ್ಥಿ. ನಾನು ಜನರ ಕಷ್ಟಗಳನ್ನು ಹತ್ತಿರದಿಂದ ನೋಡಿದ್ದೇನೆ. ಸಾವಿನಂಚಿನಲ್ಲಿರುವ ರೋಗಿಗಳನ್ನು ಶುಶ್ರೂಷೆ ಮಾಡುವ ಕೇಂದ್ರಕ್ಕೆ ಭೇಟಿ ನೀಡಿದಾಗ ಈ ಕಥೆ ಮಾಡಬೇಕೆನಿಸಿತು. ಇನ್ನು ಸ್ವಾತಿ ಮಳೆಯ ನೀರು ಆರೋಗ್ಯಕರ ಎಂದು…
2023ರ ವಿಶ್ವಕಪ್ನ ಫೈನಲ್ ಪಂದ್ಯ ಇಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಎರಡು ಬಾರಿಯ ಚಾಂಪಿಯನ್ ಭಾರತ, ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸುತ್ತಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಎಲ್ಲಾ 10 ಪಂದ್ಯಗಳನ್ನು ಗೆಲ್ಲುವ ಮೂಲಕ ಫೈನಲ್ಗೆ ಲಗ್ಗೆ ಇಟ್ಟಿದ್ದರೆ, ಭಾರತ ಸೇರಿದಂತೆ ಮೊದಲ 2 ಪಂದ್ಯಗಳನ್ನು ಸೋತ ಆಸ್ಟ್ರೇಲಿಯಾ, ಸತತ 8 ಪಂದ್ಯಗಳನ್ನು ಗೆದ್ದು ಫೈನಲ್ ಪ್ರವೇಶಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ