Author: AIN Author

ಸಿನಿಮಾ ರಂಗಕ್ಕೆ ಒಂದಾದ ಮೇಲೆ ಒಂದು ಶಾಕ್ ಎದುರಾಗುತ್ತಲೇ ಇದೆ. ಮಲಯಾಳಂ ನಟ ವಿನೋದ್ ಥಾಮಸ್ ನಿಧನದ ಬಳಿಕ ಇದೀಗ ಹೃದಯಾಘಾತದಿಂದ ‘ಧೂಮ್’ 2 (Dhoom 2) ಚಿತ್ರ ನಿರ್ದೇಶಕ ಸಂಜಯ್ ಘಡ್ವಿ (Sanjay Gadhvi) ನಿಧನರಾಗಿದ್ದಾರೆ. 57ನೇ ವಯಸ್ಸಿಗೆ ಸಂಜಯ್‌ ಇಹಲೋಕ ತ್ಯಜಿಸಿದ್ದಾರೆ. ಇಂದು (ನವೆಂಬರ್ 19) ಸಂಜಯ್ ಮನೆಯಲ್ಲೇ ಇದ್ದರು. ಬೆಳಿಗ್ಗೆ 8.45ಕ್ಕೆ ಅವರಿಗೆ ಹೃದಯಾಘಾತವಾಗಿದೆ. ಆಗ ಅವರು ಕುಸಿದು ಕೆಳಗೆ ಬಿದ್ದಿದ್ದಾರೆ. ಆ ಕೂಡಲೇ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ, ಏನೂ ಪ್ರಯೋಜನವಾಗಿಲ್ಲ. ಇದೀಗ ಸಂಜಯ್ ನಿಧನ ಬಗ್ಗೆ ನಿರ್ಮಾಪಕ ಬೋನಿ ಕಪೂರ್ ಖಚಿತಪಡಿಸಿದ್ದಾರೆ. ಸಂಜಯ್ ನಿಧನಕ್ಕೆ ಬಾಲಿವುಡ್ ನಟ-ನಟಿಯರು, ಗಣ್ಯರು, ಆಪ್ತರು ಸಂತಾಪ ಸೂಚಿಸಿದ್ದಾರೆ. ಸಂಜಯ್ ಅವರು ಬಾಲಿವುಡ್‌ಗೆ (Bollywood) ಕಾಲಿಟ್ಟಿದ್ದು 2001ರಲ್ಲಿ. ‘ತೇರೆ ಲಿಯೇ’ ಅವರ ನಿರ್ದೇಶನದ ಮೊದಲ ಸಿನಿಮಾ. ಅವರು ಕೆಲವು ವರ್ಷ ಸೈಕಲ್ ಹೊಡೆದರು. 2004ರಲ್ಲಿ ಅವರು ನಿರ್ದೇಶನ ಮಾಡಿದ ‘ಧೂಮ್’ ಸಿನಿಮಾ ಸೂಪರ್ ಹಿಟ್ ಆಯಿತು. 2006ರಲ್ಲಿ ಧೂಮ್ ಪಾರ್ಟ್…

Read More

ಹೈದ್ರಾಬಾದ್: ಇಂದು ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಈ ಅಂತಿಮ ರಣರೋಚಕ ಕದನಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿ ಉಳಿದಿವೆ. ಸ್ಟೇಡಿಯಂಗೆ ಈಗಾಗಲೇ ಸಾವಿರಾರು ಜನರು ಬಂದು ಕಾಯುತ್ತಿದ್ದಾರೆ. ಕೇವಲ ಅಭಿಮಾನಿಗಳು ಮಾತ್ರವಲ್ಲದೆ ಈ ಪಂದ್ಯ ವೀಕ್ಷಣೆಗೆ ದಿಗ್ಗಜ ಆಟಗಾರರು, ಪ್ರಸಿದ್ಧ ನಟ-ನಟಿಯರು ಕೂಡ ಆಗಮಿಸುತ್ತಿದ್ದಾರೆ. ವಿರಾಟ್ ಕೊಹ್ಲಿ ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ಖಾಸಗಿ ಜೆಟ್‌ನಲ್ಲಿ ಅಹ್ಮದಾಬಾದ್​ಗೆ ತಲುಪಿದ್ದಾರೆ. ಇದರ ಬೆನ್ನಲ್ಲೇ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಕೂಡ ಪಂದ್ಯ ವೀಕ್ಷಣೆಗೆ ಬಂದಿದ್ದಾರೆ. ಇವರು ಆಗಮಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಸಾರಾ ತೆಂಡೂಲ್ಕರ್ 2023 ರ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಹಲವಾರು ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಅಂತೆಯೆ ಭಾರತೀಯ ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಅವರ ಪತ್ನಿ ಅಥಿಯಾ ಶೆಟ್ಟಿ ಕೂಡ ಬಂದಿದ್ದಾರೆ.

Read More

ಹೈದರಾಬಾದ್: ಇಂದು ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದ್ದು, ಬ್ಯಾಟಿಂಗ್ ಹಾಗೂ ಬೌಲಿಂಗ್‍ನಲ್ಲಿ ನಮ್ಮ ತಂಡ ದಾಖಲೆ ಸೃಷ್ಟಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತೆಲಂಗಾಣದಲ್ಲಿ ವಿಶ್ವಕಪ್ ಫೈನಲ್ ಮ್ಯಾಚ್ ಕುರಿತು ಮಾತನಾಡಿದ ಅವರು, ಇಂದು ವಲ್ರ್ಡ್ ಕಪ್ ಫೈನಲ್ ಮ್ಯಾಚ್ ಇದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ತಮ್ಮ ಟೀಂ ದಾಖಲೆ ಬರೆಯುತ್ತದೆ. ಇದು ಒಗ್ಗಟ್ಟಿನ ಸಂಕೇತವಾಗಿದೆ. ಟೀಂ ಇಂಡಿಯಾಗೆ ಶುಭಾಶಯ ಎಂದು ಹೇಳಿದ್ದಾರೆ. ಇತ್ತ ಕೈ ನಾಯಕ ರಾಹುಲ್ ಗಾಂಧಿ ಕೂಡ ಟೀಂ ಇಂಡಿಯಾಗೆ ಶುಭಾಶಯ ತಿಳಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು ಬ್ಲೂ ಬಾಯ್ಸ್‍ಗೆ ಶುಭಾಶಯಗಳು. ಬಲಿಯನ್‍ಗಿಂತಲೂ ಹೆಚ್ಚು ಹೃದಯಗಳು ನಿಮಗಾಗಿ ಮಿಡಿಯುತ್ತಿವೆ. ಹೀಗಾಗಿ ನಿರ್ಭೀತಿಯಿಂದ ಆಟವಾಡಿ ಗೆದ್ದು ಬನ್ನಿ. ವಿಶ್ವಕಪ್ ಮನೆಗೆ ತರೋಣ ಎಂದು ತಿಳಿಸಿದ್ದಾರೆ ಭಾರತ ಹಾಗೂ ಆಸ್ಟ್ರೇಲಿಯಾ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಅಹ್ಮದಾಬಾದ್‍ನ ನರೇಂದ್ರ…

Read More

ಅಹಮದಾಬಾದ್: ವಿಶ್ವಕಪ್ 2023ರ (World Cup 2023) ಫೈನಲ್ ಪಂದ್ಯಕ್ಕೆ ಈಗಾಗಲೇ ಕ್ಷಣಗಣನೆ ಪ್ರಾರಂಭವಾಗಿದೆ. ನಗರದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮೂರನೇ ಏಕದಿನದ ವಿಶ್ವಕಪ್‌ಗಾಗಿ ಹೋರಾಟ ನಡೆಸಲಿದೆ. ಈ ನಡುವೆ ಭಾರತದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ (Sachin Tendulkar) ಅವರು ಪಂದ್ಯ ಪ್ರಾರಂಭಕ್ಕೂ ಗಂಟೆಗಳ ಮೊದಲು ಅಹಮದಾಬಾದ್‌ಗೆ ಆಗಮಿಸಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಮಾಜಿ ಕ್ರಿಕೆಟಿಗ, ಎಲ್ಲರೂ ಈ ದಿನಕ್ಕಾಗಿ ಕಾಯುತ್ತಿದ್ದಾರೆ. ನಾನು ಟೀಂ ಇಂಡಿಯಾಗೆ ಶುಭಾಶಯ ಹೇಳಲು ಬಂದಿದ್ದೇನೆ. ವಿಶ್ವಕಪ್‌ಗಾಗಿ ಹಣಾಹಣಿಯಲ್ಲಿರುವ ಭಾರತ ಟ್ರೋಫಿ ಎತ್ತಿಹಿಡಿಯುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ. ವಿಶ್ವಕಪ್‌ಗಾಗಿ ಹೋರಾಟ ನಡೆಸಲಿರುವ ಕ್ರಿಕೆಟಿಗರು ಈಗಾಗಲೇ ಸ್ಟೇಡಿಯಂಗೆ ಲಗ್ಗೆಯಿಟ್ಟಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ಪ್ರಾರಂಭವಾಗಲಿದೆ. ಮೋದಿ ಸ್ಟೇಡಿಯಂನೆಡೆಗೆ ಸಾವಿರಾರು ಕ್ರಿಕೆಟ್ ಅಭಿಮಾನಿಗಳ ದಂಡು ಹೊರಟಿದೆ. ಭಾರತಕ್ಕೆ ಕಪ್ ಒಲಿದು ಬರಲಿ ಎಂದು ದೇಶಾದ್ಯಂತ ಎಲ್ಲೆಡೆ ಪೂಜೆ ಪುನಸ್ಕಾರಗಳು ನೆರವೇರಿಸಲಾಗುತ್ತಿದೆ

Read More

ಚಿಕ್ಕಮಗಳೂರು: ಗ್ಯಾರಂಟಿಗಳಿಂದ ಜನ ನೆಮ್ಮದಿಯಿಂದ ಇದ್ದಾರೆಂದು ಜಾಹೀರಾತು ಪ್ರಕಟಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಸಾಕಷ್ಟು ಜಾಹೀರಾತು ಪ್ರಕಟಿಸಿದ್ದೀರಿ. ಜನ ನೆಮ್ಮದಿಯಿಂದ ಇದ್ದಾರಾ ಇಲ್ಲ ಅಂತ ಜಾಹೀರಾತನಿಂದ ತಿಳಿಯಲ್ಲ. ರಾಜ್ಯದಲ್ಲಿ ಅಕ್ರಮಗಳು, ಅಪರಾಧ ಚಟುವಟಿಗಳು ಹೆಚ್ಚುತ್ತಿವೆ. ರಾಜ್ಯದಲ್ಲಿ ಜನ ನೆಮ್ಮದಿಯಿಂದ ಬದುಕುವುದು ಕಷ್ಟಕರವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಹೇಳಿದರು. ನಿಮ್ಮ ಮಗನನ್ನು ಆಶ್ರಯ ಕಮಿಟಿ ಅಧ್ಯಕ್ಷರಾಗಿ ಮಾಡಿದ್ದೀರಿ. ಅದಕ್ಕೆ ನಮ್ಮ ತಕರಾರು ಇಲ್ಲ. ಆಶ್ರಯ ಕಮಿಟಿ ಅಧ್ಯಕ್ಷರು ಅಧಿಕಾರಿಗಳನ್ನು ಕರೆದು ಸಭೆ ಮಾಡಬಹುದಾ? ‘ಹಲೋ ಅಪ್ಪಾ’ ಹೇಳಿಕೆಗೆ ಸ್ಪಷ್ಟನೆ ನೀಡಲು ಪರದಾಡುತ್ತಿದ್ದಾರೆ. ಎರಡು ದಿನದಿಂದ ಅವರ ಗೋಳಾಟ ನೋಡಿದ್ದೇನೆ. ನಿಮ್ಮ ಮಗ ರಾಜಕೀಯ ಮಾಡುವುದಕ್ಕೆ ನನ್ನ ತಕರಾರು ಇಲ್ಲ. ಅವರಿಂದ ರಾಜಕೀಯ ಮಾಡಿಸಿ ನಾವು ಬೇಡ ಅನ್ನುವುದಿಲ್ಲ. ಆಶ್ರಯ ಸಮಿತಿ ಸದಸ್ಯರು ಕೆಡಿಪಿ ಸಭೆ ನಡೆಸುವ ಅಧಿಕಾರ ಇರುತ್ತಾ? ಕ್ಷೇತ್ರ ನೋಡಿಕೊಳ್ಳಲು ಆಶ್ರಯ ಸಮಿತಿ ಸದಸ್ಯ ಮಾಡಿದ್ದೇವೆ ಅನ್ನುತ್ತೀರಿ. ನಿವೇಶನ ಕೊಡುವ ಕುರಿತು ಆಶ್ರಯ ಕಮಿಟಿ…

Read More

ಚಾಮರಾಜನಗರ: ಭಾರತ ಆಸ್ಟ್ರೇಲಿಯಾ ಫೈನಲ್ ಪಂದ್ಯಾವಳಿಯಲ್ಲಿ ಭಾರತ ಗೆಲ್ಲಲಿ ಎಂದು ಕೇರಳದ ಗುರುವಾಯೂರು ಕೃಷ್ಣ ಚೋಟಾನಿಕೆರೆ ಭಗವತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಚಾಮರಾಜನಗರ ಜಿಲ್ಲೆ ಹನೂರು ಪಟ್ಟಣದ ಅಯ್ಯಪ್ಪ ಭಕ್ತರು. 2023ನೇ ವಿಶ್ವಕಪ್ ಪಂದ್ಯಾವಳಿಗಳಲ್ಲಿ ಭಾರತ ಸತತವಾಗಿ 10 ಪಂದ್ಯಗಳಲ್ಲಿ ಅಜೇಯರಾಗಿ ಜಯಗಳಿಸಿ ಫೈನಲ್ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ. ಇಂದು ನಡೆಯುವ ಫೈನಲ್ ಪಂದ್ಯಾವಳಿಯಲ್ಲಿ ಭಾರತ ಗೆಲ್ಲಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ವೇಳೆ ಅಯ್ಯಪ್ಪ ಭಕ್ತರಾದ ಗುರುಸ್ವಾಮಿ ಹಾಗೂ ಸತೀಶ್ ಮಾತನಾಡಿ, ಭಾರತ ನಾಲ್ಕನೇ ಬಾರಿಗೆ ವಿಶ್ವ ಕಪ್ ಫೈನಲ್ ಗೆ ಆಯ್ಕೆಯಾಗಿದ್ದು ಎರಡು ಬಾರಿ ವಿಶ್ವಕಪ್ ಗೆದ್ದಿದೆ .ಈ ಬಾರಿಯೂ ಭಾರತ-ಆಸ್ಟ್ರೇಲಿಯಾ ತಂಡವನ್ನು ಮಣಿಸಿ ವಿಶ್ವ ಚಾಂಪಿಯನ್ ಆಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದೇವೆ. ಕೋಟ್ಯಾಂತರ ಭಾರತೀಯರ ಕನಸು ನನಸಾಗಲಿ ಎಂದು ಶುಭ ಕೋರಿದರು.

Read More

ಬಳ್ಳಾರಿ : ಭಾರತ-ಆಸ್ಟ್ರೇಲಿಯಾ ನಡುವೆ ವಿಶ್ವ ಕಪ್ ಫೈನಲ್ ಹಿನ್ನಲೆಯಲ್ಲಿ  ನಗರದ ಅಧಿದೇವತೆ ಕನಕದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಾರತ-ಆಸ್ಟ್ರೇಲಿಯಾ ನಡುವೆ ವಿಶ್ವ ಕಪ್ ಫೈನಲ್ ಹಿನ್ನಲೆಯಲ್ಲಿ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಅಭಿಮಾನಿಗಳಿಂದ ಬ್ಯಾಟ್, ಬಾಲ್ ಇಟ್ಟು ಕಾಯಿ ಒಡೆದು ಪೂಜೆ ಸಲ್ಲಿಸಿದ ಅಭಿಮಾನಿಗಳು, ಹಾಗೆ ಭಾರತಂಬೆಯ ಪೋಟೋಗೆ ವಿಶೇಷ ಪೂಜೆ ಮಾಡಿ ಅಭಿಮಾನಿಗಳು, ಭಾರತ ಗೆಲ್ಲಲಿದೆ, ಬೊಲೋ ಭಾರತ್ ಮಾತಾ ಕೀ  ಘೋಷಣೆ, ಈ ಬಾರಿ ಇಂಡಿಯಾ ಟೀಂ ವಿಶ್ವ ಕಪ್ ಗೆಲ್ಲುವುದು ಗ್ಯಾರಂಟಿ  ಎಂದು ವಿಶ್ವಾಸ ವ್ಯಕ್ತಪಡಿಸಿದ ಆಭಿಮಾನಿಗಳು.

Read More

ಅಹಮದಾಬಾದ್: ಏಷ್ಯಾ ಕಪ್‌ ಗೆದ್ದ ಬಳಿಕ ಶ್ರೇಷ್ಠ ಲಯ ಕಂಡುಕೊಂಡ ಟೀಮ್ ಇಂಡಿಯಾ 2023ರ ಸಾಲಿನ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಸತತ 10 ಪಂದ್ಯಗಳನ್ನು ಗೆದ್ದು ಫೈನಲ್‌ ತಲುಪಿದೆ. ಈ ಬಗ್ಗೆ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್‌ ಶರ್ಮಾ, ಭಾರತ ತಂಡದ ಯಶಸ್ಸಿನ ಶ್ರೇಯಸನ್ನು ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ಗೆ ಸಲ್ಲಬೇಕು ಎಂದು ಹೇಳಿದ್ದಾರೆ. ಫೈನಲ್‌ ಪಂದ್ಯಕ್ಕೂ ಹಿಂದಿನ ದಿನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೋಹಿತ್‌, ತಂಡದ ಯಶಸ್ಸಿನ ಹಿಂದೆ ರಾಹುಲ್ ದ್ರಾವಿಡ್‌ ಮಾರ್ಗದರ್ಶನದ ಪ್ರಭಾವ ವಿವರಿಸಿದ್ದಾರೆ. “ತಂಡದ ಯಶಸ್ಸಿನ ಹಿಂದ ಕೋಚ್‌ ರಾಹುಲ್‌ ದ್ರಾವಿಡ್‌ ಅವರ ಪಾತ್ರ ಅಪಾರ. ತಂಡದ ಎಲ್ಲ ಆಟಗಾರರಿಗೂ ಸ್ವಾತಂತ್ರ ನೀಡಿದ್ದಾರೆ. ಆಟಗಾರರಿಗೆ ಬೇಕ್ಕಾದ್ದನ್ನು ಮಾಡುವ ಅವಕಾಶ ಮಾಡಿಕೊಟ್ಟಿದ್ದಾರೆ. ತಂಡದ ಪ್ರತಿಯೊಬ್ಬ ಆಟಗಾರನಿಗೆ ಅವರದ್ದೇ ಜವಾಬ್ದಾರಿಯನ್ನು ಅವರು ನೀಡಿದ್ದಾರೆ. ಇದರಿಂದ ಆಟಗಾರರಲ್ಲಿ ಸ್ಪಷ್ಟತೆ ಕಾಣಬಹುದು. ಸದಾ ಆಟಗಾರರ ಬೆಂಬಲಕ್ಕೆ ನಿಲ್ಲುತ್ತಾರೆ. 2022ರ ಟಿ20 ವಿಶ್ವಕಪ್‌ ಬಳಿಕ ಪ್ರತಿಯೊಬ್ಬ ಆಟಗಾರನಿಗೆ ಬೆಂಬಲ ನೀಡಿದ್ದಾರೆ.…

Read More

ದೇಶಕ್ಕೆ ದೇಶವೇ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್‌ ಫೈನಲ್‌ ಕಾಳಕ್ಕೆ ಕಾತುರದಿಂದ ಕಾಯುತ್ತಿದೆ. 12 ವರ್ಷಗಳ ಬಳಿಕ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಫೈನಲ್‌ ಪ್ರವೇಶಿಸಿರುವ ಭಾರತ ತಂಡವು ಮೂರನೇ ಬಾರಿ ಏಕದಿನ ವಿಶ್ವಕಪ್‌ ಎತ್ತಿಹಿಡಿಯಲ್ಲಿ ಎಂದು ಎಲ್ಲೆಡೆ ಪೂಜೆ ಪ್ರಾರ್ಥನೆಗಳು ನಡೆಯುತ್ತಿದೆ.ಭಾರತ ಗೆದ್ದು ಬೀಗಲಿ, ವಿಶ್ವಕಪ್‌ ರೋಹಿತ್‌ ಪಡೆಯ ಪಾಲಾಗಲಿ ದೇಶಾದ್ಯಂತ ಶತಕೋಟಿ ಭಾರತೀಯರು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ವಿಶ್ವಕಪ್‌ ಫೈನಲ್‌ ಪಂದ್ಯವು ಕುತೂಹಲ ಕೆರಳಿಸಿದೆ. ಮ್ಯಾಚ್ ನೋಡಲು ಗಣ್ಯರು ದಂಡು  ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ಮಧ್ಯಾಹ್ನ ಪಂದ್ಯ ಆರಂಭವಾಗಲಿದ್ದು, ಗಣ್ಯರ ದಂಡೇ ಅಹಮದಾಬಾದ್‌ನಲ್ಲಿ ಬೀಡುಬಿಟ್ಟಿದೆ. ಅದರಲ್ಲೂ, ಪ್ರಧಾನಿ ನರೇಂದ್ರ ಮೋದಿ, ಅಮಿತ್​ ಶಾ, ರಿಚರ್ಡ್ ಮಾರ್ಲ್ಸ್ ಮತ್ತು ಅನೇಕ ರಾಜಕೀಯ ಗಣ್ಯರು ಈ ಪಂದ್ಯವನ್ನು ವೀಕ್ಷಿಸಲಿದ್ದಾರೆ ಎಂದು ಅಹಮದಾಬಾದ್‌ನ ಪೊಲೀಸ್ ಕಮಿಷನರ್ ಜ್ಞಾನೇಂದ್ರ ಸಿಂಗ್ ಮಲಿಕ್ ತಿಳಿಸಿದ್ದಾರೆ.

Read More

ಬೆಂಗಳೂರು: ಭಾರತ ವಿಶ್​ಕಪ್ ಗೆಲ್ಲಲಿ ಎಂದು ಕ್ರಿಕೆಟ್ ಅಭಿಮಾನಿಗಳು ನಗರದ ಬನಶಂಕರಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಅಮ್ಮನವರ ಜೊತೆ ತ್ರಿವರ್ಣ ಧ್ವಜ ಇಟ್ಟು ಪ್ರಾರ್ಥನೆ ಭಕ್ತರು ಕೂಡ ವಿಶೇಷ ಪೂಜೆ ಸಲ್ಲಿಸಿದರು. ಹಾಗೆ ದೇವರಿಗೆ ಪೂಜೆ ಸಲ್ಲಿಸಿ ತೆಂಗಿನಕಾಯಿ ಒಡೆದು ಪ್ರಾರ್ಥಿಸಿದರು. ಎರಡು ಬಾರಿ ಈಗಾಗಲೇ ಭಾರತ ವಿಶ್ವಕಪ್ ಗೆದ್ದಿದೆ, ಭಾರತ ತಂಡದಲ್ಲಿ ಅದ್ಭುತವಾದ ಆಟಗಾರರು ಇದ್ದಾರೆ. ಈ ನಿಟ್ಟಿನಲ್ಲಿ ಭಾರತ ತಂಡಕ್ಕೆ ನಾವೆಲ್ಲರೂ ಶುಭಹಾರೈಸುತ್ತೇವೆ ಎಂದು ಘೋಷಣೆ ಕೂಗಿದರು.

Read More