ಮುಂಬೈ ವಾಂಖೆಡೆ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಭಾರತ-ನ್ಯೂಜಿಲೆಂಡ್ ಹೈವೋಲ್ಟೇಜ್ ಸೆಮಿಫೈನಲ್ ಪಂದ್ಯ ವೀಕ್ಷಣೆಗೆ ಮಾಜಿ ಕ್ಯಾಪ್ಟನ್ ಧೋನಿ (M.S.Dhoni) ಬರುತ್ತಾರೆಂದು ಅಭಿಮಾನಿಗಳು ಊಹಿಸಿದ್ದರು. ಆದರೆ ಮಾಹಿ ಅನುಪಸ್ಥಿತಿ ಅಭಿಮಾನಿಗಳ ಊಹೆಯನ್ನು ಸುಳ್ಳಾಗಿಸಿದೆ. ಇತ್ತ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದ್ದರೆ, ಅತ್ತ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಪತ್ನಿಯೊಂದಿಗೆ ತಮ್ಮ ಪೂರ್ವಜರ ಮನೆಯಲ್ಲಿ ಸಮಯ ಕಳೆದಿದ್ದಾರೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಪ್ರಪಂಚದಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಬುಧವಾರ, ಭಾರತವು ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಸೆಮಿಫೈನಲ್ ಪಂದ್ಯ ಆಡಿದ್ದ ವೇಳೆ, ಅನೇಕ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಎಂ.ಎಸ್.ಧೋನಿಯನ್ನು ನೋಡುವ ಉತ್ಸುಕದಲ್ಲಿದ್ದರು. ಆದರೆ, ನೆಚ್ಚಿನ ಪ್ರೀತಿಯ ಕೂಲ್ ಕ್ಯಾಪ್ಟನ್ ಎಂದೇ ಖ್ಯಾತಿ ಗಳಿಸಿದ್ದ ಧೋನಿ ತನ್ನ ಪತ್ನಿಯೊಂದಿಗೆ ಉತ್ತರಾಖಂಡದ ತನ್ನ ಪೂರ್ವಜರ ಹಳ್ಳಿಗೆ ಹೋಗಿದ್ದರು. ಧೋನಿ ಪತ್ನಿ ಸಾಕ್ಷಿ ಸಿಂಗ್ ಅವರು, ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿರುವ ಸುಂದರವಾದ ಲ್ವಾಲಿ ಗ್ರಾಮದಲ್ಲಿ ಇಬ್ಬರೂ…
Author: AIN Author
ಅಹ್ಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ಇಂದು ನಡೆಯಲಿರುವ ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಜರಾಗುವ ನಿರೀಕ್ಷೆಯಿದೆ. ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿದ್ದು, ರೋಚಕ ಪಂದ್ಯ ವೀಕ್ಷಿಸಲು 1.30 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ಈ ವೇಳೆ ಹಲವಾರು ಗಣ್ಯರು ಮೈದಾನಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗಣ್ಯರೊಂದಿಗೆ ಫೈನಲ್ ಪಂದ್ಯ ವೀಕ್ಷಿಸಲಿದ್ದಾರೆ ಎಂದು ಹೇಳಲಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಂದ್ಯಕ್ಕೂ ಮುನ್ನ ನಡೆದ ಬಾರ್ಡರ್ ಗವಾಸ್ಕರ್ ಸರಣಿಯ 4ನೇ ಟೆಸ್ಟ್ ಪಂದ್ಯವನ್ನು ಪ್ರಧಾನಿ ಮೋದಿ ವೀಕ್ಷಿಸಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ ಸಾಧಿಸಿದ ಆಸ್ಟ್ರೇಲಿಯಾ (Australia) 8ನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಭಾರತ ಮತ್ತು ಆಸ್ಟ್ರೇಲಿಯಾ ರೋಚಕ ಕದನ ವೀಕ್ಷಿಸಲು ಕೋಟ್ಯಂತರ…
ಬೆಂಗಳೂರು: ರಾಜ್ಯ ಬಿಜೆಪಿ ಮೇಲೆ ಬಿಎಸ್ವೈ ಸ್ಪಷ್ಟ ಹಿಡಿತ ಸಾಧಿಸಿದೆ. ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ವಿಜಯೇಂದ್ರರನ್ನು (BY Vijayendra) ಪಟ್ಟು ಹಿಡಿದು ಕೂರಿಸಿದ್ದ ಮಾಜಿ ಸಿಎಂ ಯಡಿಯೂರಪ್ಪ (bS Yediyurappa) ಇದೀಗ ವಿಪಕ್ಷ ನಾಯಕ್ ಆಯ್ಕೆಯಲ್ಲೂ ಮೇಲುಗೈ ಸಾಧಿಸಿದ್ದಾರೆ. ಮಾಜಿ ಡಿಸಿಎಂ ಆರ್ ಅಶೋಕ್ರನ್ನು ವಿಪಕ್ಷ ನಾಯಕರನ್ನಾಗಿಸುವಲ್ಲಿ ಯಡಿಯೂರಪ್ಪ ಸಫಲರಾಗಿದ್ದಾರೆ. ಚುನಾವಣೆ ನಡೆದ ಆರು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೀತು. ಈ ಸಭೆಯಲ್ಲಿ ವಿಪಕ್ಷ ನಾಯಕನ ಹುದ್ದೆಗೆ ಅಶೋಕ್ ಹೆಸರನ್ನು ಮಾಜಿ ಸಿಎಂ ಬೊಮ್ಮಾಯಿ ಸೂಚಿಸಿದ್ರೆ, ಸುನೀಲ್ ಕುಮಾರ್ (Sunil Kumar) ಅನುಮೋದಿಸಿದ್ರು. ಈ ಕ್ಷಣಕ್ಕೆ ಹೈಕಮಾಂಡ್ ಪ್ರತಿನಿಧಿಗಳಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitaraman) ಮತ್ತು ಇತರರು ಸಾಕ್ಷಿಯಾದ್ರು. ಈ ಸಭೆಗೆ ಅಸಮಾಧಾನಿತ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal), ರಮೇಶ್ ಜಾರಕಿಹೊಳಿ (Ramesh Jarakiholi), ಎಸ್ಟಿ ಸೋಮಶೇಖರ್ (ST Somashekhar), ಶಿವರಾಮ್ ಹೆಬ್ಬಾರ್ (Shivaram Hebbar)…
ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ ಶೇ. 35ರಷ್ಟು ಮಳೆ ಕೊರತೆ ಆಗಿದ್ದು, ಮಳೆ ಕೊರತೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಕೊಡಗು, ಹಾಸನ ಹೊರತುಪಡಿಸಿ ರಾಜ್ಯದ ಉಳಿದ ಎಲ್ಲ ಜಿಲ್ಲೆಗಳಲ್ಲೂ ಮಳೆ ಕೊರತೆ, ಮುಂದುವರಿದಿದೆ. ದಕ್ಷಿಣ ಕನ್ನಡದಲ್ಲಿ ಶೇ. 9, ಮೈಸೂರಿನಲ್ಲಿ ಶೇ. 49, ಕೊಡಗು ಶೇ. 18, ಹಾಸನ ಶೇ. 13ರಷ್ಟು ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಬೆಂಗಳೂರಿನಲ್ಲಿ ಶೇ. 17, ಉಡುಪಿಯಲ್ಲಿ ಶೇ. 25, ಉತ್ತರ ಕನ್ನಡ ಶೇ. 19, ಬೆಂ. ಗ್ರಾಮಾಂತರ ಶೇ. 16, ಬಳ್ಳಾರಿಯಲ್ಲಿ ಶೇ. 86, ರಾಯಚೂರು, ಯಾದಗಿರಿ ಶೇ. 82, ಬಾಗಲಕೋಟೆ ಶೇ. 85, ವಿಜಯಪುರ ಶೇ. 77, ಬೀದರ್ ಶೇ. 79, ಕಲಬುರಗಿ, ಹಾವೇರಿ ತಲಾ ಶೇ. 64, ಧಾರವಾಡ ಶೇ. 60, ಬೆಳಗಾವಿ ಶೇ. 79, ಕೋಲಾರ ಜಿಲ್ಲೆಯಲ್ಲಿ ಶೇ. 57ರಷ್ಟು ಮಳೆ ಕೊರತೆ ಇರುವುದನ್ನು ಹವಾಮಾನ ಇಲಾಖೆ ದೃಢಪಡಿಸಿದೆ.
ICC ODI ವಿಶ್ವಕಪ್ 2023 ರಲ್ಲಿ ನಿರಾಶಾದಾಯಕ ಪ್ರದರ್ಶನದ ನಂತರ, ಪಾಕಿಸ್ತಾನ ತಂಡದಲ್ಲಿ ಕಂಪನ ಶುರುವಾಗಿದೆ. ನಾಯಕ ಬಾಬರ್ ಅಜಂ ಎಲ್ಲಾ ಸ್ವರೂಪಗಳ ನಾಯಕತ್ವದಿಂದ ರಾಜೀನಾಮೆ ನೀಡಿ ಕೆಳಗಿಳಿದ್ದಾರೆ. ಬಾಬರ್ ರಾಜೀನಾಮೆ ನಂತರ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇಬ್ಬರು ವಿಭಿನ್ನ ನಾಯಕರನ್ನು ನೇಮಿಸಿದೆ. ಸ್ಟಾರ್ ವೇಗದ ಬೌಲರ್ ಶಾಹೀನ್ ಅಫ್ರಿದಿಗೆ ಟಿ20 ಮಾದರಿಯ ಕಮಾಂಡ್ ನೀಡಲಾಗಿದ್ದರೆ ಬ್ಯಾಟ್ಸ್ಮನ್ ಶಾನ್ ಮಸೂದ್ ಪಾಕಿಸ್ತಾನ ಟೆಸ್ಟ್ ತಂಡದ ಸಾರಥ್ಯ ವಹಿಸಲಿದ್ದಾರೆ. ಪಿಸಿಬಿ ಇನ್ನೂ ಏಕದಿನ ತಂಡದ ನಾಯಕನನ್ನು ಪ್ರಕಟಿಸಿಲ್ಲ. T20 ನಾಯಕನಾಗಿ ನೇಮಕಗೊಂಡ ನಂತರ ಶಾಹೀನ್ ಅಫ್ರಿದಿ, ಬಾಬರ್ ಅವರನ್ನು ಹೊಗಳಿದ್ದಾರೆ. ಬಾಬರ್ ಆಜಂ, ನಿಮ್ಮ ಆದರ್ಶಪ್ರಾಯ ನಾಯಕತ್ವದಲ್ಲಿ ನಿಜವಾದ ಟೀಮ್ವರ್ಕ್ ಮತ್ತು ಸಹೋದರತ್ವವನ್ನು ನೋಡುವುದು ಒಂದು ಸೌಭಾಗ್ಯ ಎಂದು ಅವರು ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಬರೆದಿದ್ದಾರೆ.
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ನಡುವಿನ ಸೂಕ್ಷ್ಮ ಸಭೆಯು ವಿಷಮ ಪರಿಸ್ಥಿತಿಗೆ ಬದಲಾಗಿದೆ. ಇದಕ್ಕೆ ಕಾರಣ ಜಿನ್ಪಿಂಗ್ ಅವರನ್ನು ಬೈಡನ್ ‘ಸರ್ವಾಧಿಕಾರಿ’ ಎಂದು ಕರೆದಿರುವುದು. ಕ್ಸಿ ಜಿನ್ಪಿಂಗ್ ವಿರುದ್ಧ ಬೈಡನ್ ಅವರು ಸರ್ವಾಧಿಕಾರಿ ಪರ ಬಳಸಿರುವುದು ಇದು ಎರಡನೇ ಸಲವಾಗಿದೆ. ಇದು ಚೀನಾ ಅಸಮಾಧಾನಕ್ಕೆ ಕಾರಣವಾಗಿದೆ. ಬೈಡನ್ ಹೇಳಿಕೆಯು ‘ತೀವ್ರ ಅಸಂಬದ್ಧ ಮತ್ತು ಬೇಜವಾಬ್ದಾರಿಯಿಂದ ಕೂಡಿದೆ’ ಎಂದು ಕಿಡಿಕಾರಿದೆ. ಸ್ಯಾನ್ ಫ್ರಾನ್ಸಿಸ್ಕೋದ ದಕ್ಷಿಣದಲ್ಲಿನ ತಮ್ಮ ಫಿಲೋಲಿ ಎಸ್ಟೇಟ್ಗೆ ಆಗಮಿಸಿದ ಕ್ಸಿ ಜಿನ್ಪಿಂಗ್ ಅವರನ್ನು ಸ್ವಾಗತಿಸಿದ್ದ ಬೈಡನ್, ಅವರೊಂದಿಗೆ ಏಷ್ಯಾ- ಪೆಸಿಫಿಕ್ ಆರ್ಥಿಕ ಸಹಕಾರ (ಎಪಿಇಸಿ) ವೇದಿಕೆ ಕಡೆಗೆ ತೆರಳಿದ್ದರು. https://ainlivenews.com/what-happens-if-tea-coffee-is-given-to-children/ ಸಭೆಯ ಅಂತ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೈಡನ್, ‘ಕ್ಸಿ ಜಿನ್ಪಿಂಗ್ ಅವರನ್ನು ಸರ್ವಾಧಿಕಾರಿ ಎಂದು ಈಗಲೂ ಪರಿಗಣಿಸುತ್ತೀರಾ?’ ಎಂಬ ಪ್ರಶ್ನೆಗೆ, “ಹೌದು, ಅವರು ಸರ್ವಾಧಿಕಾರಿ” ಎಂದು ಬೈಡನ್ ಪ್ರತಿಕ್ರಿಯೆ ನೀಡಿದ್ದಾರೆ. “ಅವರು ಒಬ್ಬ ಸರ್ವಾಧಿಕಾರಿ. ಅವರು ಕಮ್ಯುನಿಸ್ಟ್ ದೇಶವನ್ನು ನಡೆಸುತ್ತಿರುವ ವ್ಯಕ್ತಿ. ಚೀನಾ…
ವಿಶ್ವಕಪ್ ಕ್ರಿಕೆಟ್ ಫೈನಲಿನಲ್ಲಿ (World Cup Cricket Final) ಭಾರತ (India) ಮತ್ತು ಆಸ್ಟ್ರೇಲಿಯಾ (Australia) ಎರಡನೇ ಬಾರಿ ಮುಖಾಮುಖಿಯಾಗುತ್ತಿದ್ದು, 20 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ನಡೆದ ಸೋಲಿಗೆ ಟೀಂ ಇಂಡಿಯಾ ಸೇಡು ತೀರಿಸಿಕೊಳ್ಳುತ್ತಾ ಎಂಬ ಪ್ರಶ್ನೆ ಎದ್ದಿದೆ. 2003ರ ಟೂರ್ನಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಎರಡು ಬಾರಿ ಮುಖಾಮುಖಿಯಾಗಿತ್ತು. ಲೀಗ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಮಾತ್ರ ಸೋತು ಫೈನಲಿಗೆ ಏರಿದ್ದರೆ ಆಸ್ಟ್ರೇಲಿಯಾ ಅಜೇಯ ತಂಡವಾಗಿ ಫೈನಲ್ ತಲುಪಿತ್ತು. ಎರಡು ತಂಡಗಳು ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಬಲಾಢ್ಯವಾಗಿದ್ದವು. ಸಚಿನ್ ತೆಂಡೂಲ್ಕರ್ (Sachin Tendulkar) ಟೂರ್ನಿಯಲ್ಲೇ 600+ ರನ್ ಸಿಡಿಸಿ ಬೌಲರ್ಗಳಿಗೆ ಭಯ ಹುಟ್ಟಿಸಿದ್ದರು. ಟೀಂ ಇಂಡಿಯಾ ಪರವಾಗಿ ವೀರೇಂದ್ರ ಸೆಹ್ವಾಗ್, ಸೌರವ್ ಗಂಗೂಲಿ, ಮೊಹಮ್ಮದ್ ಕೈಫ್, ರಾಹುಲ್ ದ್ರಾವಿಡ್, ಯುವರಾಜ್ ಸಿಂಗ್, ದಿನೇಶ್ ಮೊಗಿಯಾ ಬ್ಯಾಟಿಂಗ್ ಬಲ ತುಂಬಿದ್ದರೆ ಹರ್ಬಜನ್ ಸಿಂಗ್, ಜಹೀರ್ ಖಾನ್, ಜಾವಗಲ್ ಶ್ರೀನಾಥ್, ಅಶೀಶ್ ನೆಹ್ರಾ ಬೌಲಿಂಗ್ ಶಕ್ತಿಯಾಗಿದ್ದರು. ಆಸ್ಟ್ರೇಲಿಯಾದಲ್ಲಿ ಗಿಲ್ಕ್ರಿಸ್ಟ್, ಹೇಡನ್, ಪಾಟಿಂಗ್,…
ಬಾಳೆಹಣ್ಣು ಯಾರಿಗೆ ಇಷ್ಟವಿಲ್ಲ ಹೇಳಿ. ಸಾಮಾನ್ಯವಾಗಿ ಎಲ್ಲರೂ ಇಷ್ಟಪಟ್ಟು ಸೇವಿಸುವ ಹಣ್ಣೆಂದರೆ ಅದು ಬಾಳೆಹಣ್ಣು. ಆರೋಗ್ಯವನ್ನು ಕಾಪಾಡುವ ಬಾಳೆಹಣ್ಣು ಹೆಚ್ಚು ಪ್ರಯೋಜನಗಳನ್ನು ಹೊಂದಿದೆ. ಊಟದ ಕೊನೆಯಲ್ಲಿ ಒಂದು ಬಾಳೆಹಣ್ಣು ತಿಂದರೆ ತೃಪ್ತಿಯಾಗುತ್ತೆ. ದೇಹ ಹಗರುವಾಗುವ ಜೊತೆಗೆ ಜೀರ್ಣ ಕ್ರಿಯೆ ಚೆನ್ನಾಗಿ ಆಗುತ್ತದೆ. ಬಾಳೆಹಣ್ಣು ಖನಿಜಾಂಶ, ವಿಟಮಿನ್, ಫೈಬರ್ ಅಂಶಗಳನ್ನು ಹೊಂದಿದೆ. ವಿಶ್ವದಾದ್ಯಂತ 15 ರಿಂದ 16 ತರಹದ ಬಾಳೆಹಣ್ಣುಗಳು ಇವೆ. ಈ ಪೈಕಿ ಕೆಂಪು ಬಾಳೆಹಣ್ಣು ಕೂಡಾ ಒಂದು. ಕೆಂಪು ಬಾಳೆಹಣ್ಣು ಹೆಚ್ಚು ಪ್ರಸಿದ್ಧಿ ಹೊಂದಿಲ್ಲ. ಆದರೆ ಇತರೆ ಬಾಳೆಹಣ್ಣಿಗಿಂತ ಕೆಂಪು ಬಾಳೆಹಣ್ಣು ಹೆಚ್ಚು ಸಿಹಿಯಾಗಿರುತ್ತದೆ. ಜೊತೆಗೆ ಇದನ್ನು ಸೇವಿಸುವುದರಿಂದ ಕೆಲ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು. ದೇಹದ ತೂಕ ಇಳಿಸಬಹುದು ಕೆಂಪು ಬಾಳೆಹಣ್ಣು ಸೇವಿಸುವುದರಿಂದ ದೇಹದ ತೂಕ ಕಡಿಮೆಯಾಗುತ್ತದೆ. ಇದರಲ್ಲಿ ಇರುವ ನಾರಿನಂಶ ಪದೇ ಪದೇ ಹಸಿವಾಗದಂತೆ ನೋಡಿಕೊಳ್ಳುತ್ತದೆ. ತೂಕ ಇಳಿಸುವವರು ಅನ್ನದ ಬದಲು ಒಂದು ಕೆಂಪು ಬಾಳೆಹಣ್ಣನ್ನು ತಿನ್ನಬಹುದು. ರೋಗ ನಿರೋಧಕ ಶಕ್ತಿ ವೃದ್ಧಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕೆಂಪು ಬಾಳೆಹಣ್ಣು ಸೇವಿಸುವುದು…
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಬ್ಯಾಂಕ್ಗಳು ಮತ್ತು ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳ (ಎನ್ಬಿಎಫ್ಸಿ) ಅಸುರಕ್ಷಿತ ಸಾಲದ ಪೋರ್ಟ್ಫೋಲಿಯೊಗಳಿಗೆ ಸಂಬಂಧಿಸಿದ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿದೆ. ಈ ಸಾಲದ ವರ್ಗಗಳಲ್ಲಿ ಅಸಹಜವಾಗಿ ಹೆಚ್ಚಿನ ಬೆಳವಣಿಗೆಯ ಆತಂಕಗಳ ನಡುವೆ ಈ ನಿರ್ಧಾರವನ್ನು ಮಾಡಿದೆ. ಭಾರತೀಯ ಬ್ಯಾಂಕುಗಳು ಅಸುರಕ್ಷಿತ ಸಾಲಗಳಲ್ಲಿ ತೀವ್ರ ಏರಿಕೆ ಕಂಡಿವೆ. ಅದರಲ್ಲಿ ಹೆಚ್ಚಾಗಿ ವೈಯಕ್ತಿಕ ಸಾಲಗಳು ಮತ್ತು ಕ್ರೆಡಿಟ್ ಕಾರ್ಡ್ಗಳ ಸಾಲದ್ದಾಗಿವೆ. ಇದು ಕಳೆದ ವರ್ಷದಲ್ಲಿ ಸುಮಾರು 15% ರ ಒಟ್ಟಾರೆ ಬ್ಯಾಂಕ್ ಕ್ರೆಡಿಟ್ ಬೆಳವಣಿಗೆಯನ್ನು ಇದು ಮೀರಿಸಿದ್ದು, ಇದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಗಮನವನ್ನು ಸೆಳೆದಿದೆ. ಆರ್ಬಿಐ ಬ್ಯಾಂಕ್ಗಳು ಮತ್ತು ಎನ್ಬಿಎಫ್ಸಿಗಳಿಗೆ ರಿಸ್ಕ್ ವೇಯ್ಟ್ಅನ್ನು ಅಥವಾ ಪ್ರತಿ ಸಾಲಕ್ಕೆ ಬ್ಯಾಂಕುಗಳು ಮೀಸಲಿಡಬೇಕಾದ ಬಂಡವಾಳವನ್ನು 25 ಶೇಕಡಾ ಪಾಯಿಂಟ್ಗಳಿಗೆ ಏರಿಸಿದೆ. ಇದರರ್ಥ ಚಿಲ್ಲರೆ ಸಾಲಗಳ ಮೇಲೆ ರಿಸ್ಕ್ ವೇಯ್ಟ್ ಪ್ರಮಾಣ 125% ಕ್ಕೆ ಹೆಚ್ಚಿಸಿದೆ ಎಂದು ಅದು ಪ್ರಕಟಣೆಯಲ್ಲಿ ತಿಳಿಸಿದೆ. https://ainlivenews.com/what-happens-if-tea-coffee-is-given-to-children/ ಬ್ಯಾಂಕ್ಗಳಿಗೆ, ಹೊಸ ರಿಸ್ಕ್ ವೇಯ್ಟ್ ವೈಯಕ್ತಿಕ…
ಸೂರ್ಯೋದಯ: 06.19 AM, ಸೂರ್ಯಾಸ್ತ : 05.50 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಕಾರ್ತೀಕ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಪಂಚಮಿ 09:18 AM ತನಕ ನಂತರ ಷಷ್ಠಿ ನಕ್ಷತ್ರ: ಇವತ್ತು ಆಷಾಢ 01:17 AM ತನಕ ನಂತರ ಉತ್ತರ ಆಷಾಢ ಯೋಗ: ಇವತ್ತು ಶೂಲ05:01 AM ತನಕ ನಂತರ ಗಂಡ ಕರಣ: ಇವತ್ತು ಬಾಲವ 09:18 AM ತನಕ ನಂತರ ಕೌಲವ 08:21 PM ತನಕ ನಂತರ ತೈತಲೆ ರಾಹು ಕಾಲ: 9:00 ನಿಂದ 10:30 ವರೆಗೂ ಯಮಗಂಡ: 01:30 ನಿಂದ 03:00 ವರೆಗೂ ಗುಳಿಕ ಕಾಲ: 06:00 ನಿಂದ 07:30 ವರೆಗೂ ಅಮೃತಕಾಲ: 06.01 PM to 07.33 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:38 ನಿಂದ ಮ.12:23 ವರೆಗೂ ಮೇಷ ರಾಶಿ: ದುಃಖದ ಸಂದೇಶ ಪಡೆಯುವಿರಿ, ಮಕ್ಕಳು ನೀಚ ಕಾರ್ಯದಲ್ಲಿ ಆಸಕ್ತಿ, ಶತ್ರು ಭಾಧೆ ಸಮಸ್ಯೆ, ಅನಾವಶ್ಯಕ ಧನವ್ಯಯ,…