ಕಲಬುಲಗಿ: ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇದೇ ಮೊದಲ ಬಾರಿಗೆ ಆನ್ ಲೈನ್ ಕ್ಲಾಸ್ ಶುರು ಮಾಡಲಿದೆ ಅಂತ ಕಲಬುರಗಿ VTU ಮುಖ್ಯಸ್ಥ ಬಸವರಾಜ ಗಾದಗಿ ಹೇಳಿದ್ದಾರೆ.. ಕಲಬುಲಗಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗಾದಗಿ PG & UG ಸೇರಿದಂತೆ ಒಟ್ಟು 15 ವಿವಿಧ ಕೋರ್ಸ್ ಗಳಿಗಾಗಿ ಅಪ್ಲಿಕೇಷನ್ ಕರೆಯಲಾಗಿದೆ ಅಂತ ಹೇಳಿದ್ರು. https://ainlivenews.com/oblivion-is-too-much-follow-these-tips-to-increase-memory-power/ UG ಯಲ್ಲಿ ಮೂರು ವರ್ಷ BBA in Digital ಮಾರ್ಕೆಟಿಂಗ್ ಸೇರಿ ಮೂರು ಕೋರ್ಸ್ PG ಯಲ್ಲಿ ಎರಡು ವರ್ಷ MBA in business analytics ಸೇರಿ 4 ಕೋರ್ಸ್ ಇರಲಿವೆ.ಅದೇ ರೀತಿಯಾಗಿ ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ ದಲ್ಲಿ PGD in ಸೈಬರ್ ಸೆಕ್ಯೂರೆಟಿ ಎರಡು ವರ್ಷ ಸೇರಿ ಐದು ಕೋರ್ಸ್ ಗಳು ಆರಂಭವಾಗಲಿದ್ದು ನಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಅಂತ ಬಸವರಾಜ ಗಾದಗಿ ತಿಳಿಸಿದ್ದಾರೆ..
Author: AIN Author
ಬೆಂಗಳೂರು: ಎಲ್ಲೆಂದರಲ್ಲಿ ಆಧಾರ್, ಪಾನ್ ಕಾರ್ಡ್ ಕೊಡುವ ಜನರೇ ಎಚ್ಚರ ಈ ಸ್ಟೋರಿ ನೋಡಿದ್ರೆ ಗೊತ್ತಾಗುತ್ತೆ ನಿಮಗೆ ನೀವು ಪ್ಯಾನ್ ಆಧಾರ್ ಕಾರ್ಡ್ ಕೊಟ್ರೆ ಏನಾಗುತ್ತೆ ಅಂತಾ ನಾವು ಹೇಳುತ್ತೇವೆ ಕೇಳಿ ಎಲ್ಲೆಂದರಲ್ಲಿ ಆಧಾರ್, ಪಾನ್ ಕಾರ್ಡ್ ಕೊಡುವ ಜನರೇ ಎಚ್ಚರನಿಮ್ಮ ದಾಖಲೆಗಳಲ್ಲಿ ರೆಡಿಯಾಗುತ್ತೆ ಬೇನಾಮಿ ಬ್ಯಾಂಕ್ ಖಾತೆಗಳು. ನಿಮ್ಮ ಹೆಸರಲ್ಲಿ ಬ್ಯಾಂಕ್ ಖಾತೆ, ಬೇರೆಯವರ ವಹಿವಾಟು. ಬೆಂಗಳೂರಿನಲ್ಲಿ ಬೃಹತ್ ಬೇನಾಮಿ ಬ್ಯಾಂಕ್ ಖಾತೆ ಸೃಷ್ಟಿಸುವ ಜಾಲ ಪತ್ತೆ ಸಮೀರ್, ಮಹಮ್ಮದ್ ಹಸನ್, ಮಹಮ್ಮದ್ ಇರ್ಫಾನ್, ಅಮೂಲ್ ಬಾಬು.ತಂಝೀಲ್ , ಮಂಜುನಾಥ ಬಂಧಿತ ಅರೋಪಿಗಳು ಬೃಹತ್ ಜಾಲವನ್ನ ಭೇದಿಸಿದ ಸಿಸಿಬಿ ಸೈಬರ್ ಕ್ರೈಮ್ ಪೊಲೀಸರು. ಸಾರ್ವಜನಿಕರ ಕೆವೈಸಿ ಪಡೆದು ಬ್ಯಾಂಕ್ ಖಾತೆ ತೆರದು ವಹಿವಾಟು.ಐದರಿಂದ ಹತ್ತು ಸಾವಿರ ಕೊಟ್ಟು ಕೆವೈಸಿ ಪಡೆಯೋ ಅಸಾಮಿಗಳು.ಆಧಾರ್, ಪಾನ್ ಕಾರ್ಡ್ ಮತ್ತು ಒಂದು ಸಹಿಗೆ ಹತ್ತು ಸಾವಿರ ರೇಟ್ ಪಿಕ್ಸ್.ಪ್ರತಿ ಡಾಕ್ಯುಮೆಂಟ್ ಗೆ ಹೊಸ ಸಿಮ್ ಬಳಸಿ ಖಾತೆ ಓಪನ್. ನಂತರ ನಿಮ್ಮ ಹೆಸರಿನಲ್ಲೆ ಓಪನ್…
ಬೆಂಗಳೂರು: ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ನೇಮಕಾತಿ ವಿಚಾರವಾಗಿ ಬೆಂಗಳೂರಿನಲ್ಲಿ ಇಂದು (ನ.17) ಸಂಜೆ 6 ಗಂಟೆಗೆ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. https://ainlivenews.com/union-minister-nirmala-sitharaman-arrived-at-the-state-bjp-office/ ಸಭೆಯಲ್ಲಿ ಹೈಕಮಾಂಡ್ ವೀಕ್ಷಕರು ವಿಪಕ್ಷ ನಾಯಕರ ಹೆಸರು ಘೋಷಣೆ ಮಾಡಲಿದ್ದಾರೆ. ವಿಧಾನಸಭೆಗೆ ಒಕ್ಕಲಿಗ ಮತ್ತು ವಿಧಾನ ಪರಿಷತ್ಗೆ ಹಿಂದುಳಿದ ವರ್ಗಕ್ಕೆ ಅವಕಾಶ ಸಿಗುವ ಸಾಧ್ಯತೆ ಇದೆ. ವಿಧಾನಸಭೆಗೆ ರೇಸ್ನಲ್ಲಿ ಶಾಸಕರಾದ ಆರ್. ಅಶೋಕ್, ಡಾ. ಅಶ್ವಥ್ ನಾರಾಯಣ ಮತ್ತು ಅರಗ ಜ್ಞಾನೇಂದ್ರ ಹೆಸರು ಇದೆ. ವಿಧಾನ ಪರಿಷರ್ಗೆ ಕೋಟ ಶ್ರೀನಿವಾಸ ಪೂಜಾರಿ, ತೇಜಸ್ವಿನಿ ಗೌಡ, ಛಲವಾದಿ ನಾರಾಯಣಸ್ವಾಮಿ ಮತ್ತು ಭಾರತಿ ಶೆಟ್ಟಿ ಹೆಸರು ಒಬಿಸಿ ಕೋಟದಲ್ಲಿ ಸುನಿಲ್ ಕುಮಾರ್ ರೇಸ್ನಲ್ಲಿದ್ದಾರೆ. ಬಹುತೇಕ ಆರ್. ಅಶೋಕ್ ಮತ್ತು ಕೋಟ ಶ್ರೀನಿವಾಸ ಪೂಜಾರಿ ವಿಪಕ್ಷ ನಾಯಕರಾಗಿ ಆಯ್ಕೆ ಸಾಧ್ಯತೆ ಇದೆ. ಬಿಜೆಪಿ ಶಾಸಕಾಂಗ ಸಭೆಗೆ ಹೈಕಮಾಂಡ್ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸುತ್ತಿದ್ದಾರೆ.
ವೀಕೆಂಡ್ ಬಂತು ಅಂದ್ರೆ ಕ್ಯಾಪ್ಟನ್ಸಿ ಟಾಸ್ಕ್ನ ಬಿಸಿ ಬಿಗ್ಬಾಸ್ ಮನೆಯಲ್ಲಿ ಏರಲು ಶುರುವಾಗುತ್ತದೆ. ಕ್ಯಾಪ್ಟನ್ಸಿ ಟಾಸ್ಕ್ನಲ್ಲಿ ಯಾರು ಭಾಗವಹಿಸಬೇಕು? ಯಾರು ಯಾರನ್ನು ಸಪೋರ್ಟ್ ಮಾಡಬೇಕು? ಲೆಕ್ಕಾಚಾರ ಹೇಗಿರಬೇಕು ಇವೆಲ್ಲ ಚರ್ಚೆಗಳಲ್ಲಿಯೇ ಸ್ಫರ್ಧಿಗಳು ತಲ್ಲೀನರಾಗುತ್ತಿದ್ದರು. ಆದರೆ ಈ ಸಲ ಕ್ಯಾಪ್ಟನ್ಸಿ ಟಾಸ್ಕ್ಗೆ ಬಿಗ್ಬಾಸ್ ಒಂದು ಸಣ್ಣ ಟ್ವಿಸ್ಟ್ ಕೊಟ್ಟಿದ್ದಾರೆ. ಕ್ಯಾಪ್ಟನ್ಸಿ ಟಾಸ್ಕ್ ಅನ್ನು ಯಾವ ಐದು ಸ್ಪರ್ಧಿಗಳು ಆಡಬೇಕು ಎಂದು ನೀವೇ ನಿರ್ಧರಿಸಿಕೊಳ್ಳಿ ಎಂದು ಹೇಳಿದ್ದಾರೆ! ನಮ್ರತಾ, ಸಿರಿ, ಕಾರ್ತಿಕ್, ಪ್ರತಾಪ್, ವರ್ತೂರು ಈ ಐವರು ಕ್ಯಾಪ್ಟನ್ಸಿ ಆಡಬೇಕು ಎಂದು ಮನೆಯ ಸದಸ್ಯರು ವೋಟಿಂಗ್ ಮೂಲಕ ಆರಿಸಿದ್ದಾರೆ. ಆದರೆ ತುಕಾಲಿ ಸಂತೋಷ್ ಅವರಿಗೆ ಈ ವೋಟಿಂಗ್ ಬಗ್ಗೆ ಆಕ್ಷೇಪವಿದೆ. ‘ಕರೆಕ್ಟಾಗಿ ವೋಟಿಂಗ್ ಆಗಿಲ್ಲ. ನಾವೂ ಭಾಗವಹಿಸಬೇಕು ಎಂದು ನಮಗೆ ಇರುತ್ತದೆ’ ಎಂದು ಅವರು ತಗಾದೆ ತೆಗೆದಿದ್ದಾರೆ. ವಿನಯ್ ಅವರ ಮಾತಿಗೆ ವಿರೋಧ ವ್ಯಕ್ತಪಡಿಸಿ, ‘ನೀವು ಆಡಿರುವುದು ಒಂದೇ ಟಾಸ್ಕ್’ ಎಂದು ಚುಚ್ಚಿದ್ದಾರೆ. ತುಕಾಲಿ ಅವರು ಇದರಿಂದ ಸಿಟ್ಟಿಗೆದ್ದು, ‘ಒಂದೇ ಟಾಸ್ಕ್ನಲ್ಲಿ ನನ್ನ ನಾನು…
ವಿಜಯನಗರ: ಜಿಲ್ಲೆಯ ಹೊಸಪೇಟೆತಾಲೂಕಿನ ವ್ಯಾಸನಕೇರಿ ರೈಲು ನಿಲ್ದಾಣದ ಸಮೀಪ ನಿನ್ನೆ ಸಾಯಂಕಾಲ ಗೂಡ್ಸ್ ರೈಲಿನ ಕೆಲ ಬೋಗಿಗಳು ಹಳಿತಪ್ಪಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಹಿನ್ನಲೆ ಹಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದ್ದು, ಯಶವಂತಪುರ- ವಿಜಯಪುರ ಎಕ್ಸಪ್ರೆಸ್ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಯಾವ್ಯಾವ ಮಾರ್ಗದ ರೈಲುಗಳ ಸಂಚಾರ ಬಂದ್ ಹಳಿಗಳಿಂದ ರೈಲು ತೆರವು ಕಾರ್ಯದ ನಿಮಿತ್ತ ಈ ಮಾರ್ಗದಲ್ಲಿ ಸಂಚರಿಸಬೇಕಿದ್ದ ಹೊಸಪೇಟೆ- ಹರಿಹರ ಪ್ಯಾಸೆಂಜರ್, ಹರಿಹರ- ಬಳ್ಳಾರಿ ಡೆಮೊ ಸ್ಪೆಷಿಯಲ್, ಬಳ್ಳಾರಿ – ಹೊಸಪೇಟೆ ಡೆಮೋ ಸ್ಪೆಷಿಯಲ್ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಇನ್ನುಳಿದಂತೆ ವಿಜಯಪುರ- ಯಶವಂತಪುರ ಮತ್ತು ಯಶವಂತಪುರ- ವಿಜಯಪುರ ಎಕ್ಸಪ್ರೆಸ್ ರೈಲುಗಳ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ಹೊಸಪೇಟೆ- ಕೊಟ್ಟೂರು ಮಾರ್ಗದ ಬದಲಾಗಿ ಹೊಸಪೇಟೆ, ಬಳ್ಳಾರಿ, ರಾಯದುರ್ಗ, ಚಿಕ್ಕಜಾಜೂರು ಮಾರ್ಗದಲ್ಲಿ ಸಂಚಾರಿಸಲಿವೆ.
ಬೆಂಗಳೂರು: ರಾಜ್ಯ ಬಿಜೆಪಿ ಕಚೇರಿಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಿಸಿದರು. ವಿಧಾನಸಭೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ. ವಿಧಾನಸಭೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಆಗಮಿಸಿದ್ದಾರೆ. ವೀಕ್ಷಕರು ಸಂಜೆ ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿಗೆ ತೆರಳುವ ಹಿನ್ನೆಲೆಯಲ್ಲಿ ರೈತರಿಂದ ಸಿಎಂ ಘೇರಾವ್ ಹಾಕುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮನೆಯಲ್ಲಿದ್ದ ಟಿ.ನರಸೀಪುರದ ಅನೇಕ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತರು ಪೊಲೀಸರ ನಡೆಯನ್ನ ಖಂಡಿಸಿದ್ದಾರೆ. ಇದು ಹಿಟ್ಲರ್ ಸರ್ಕಾರವೋ ಇಲ್ಲ ಜನ ಸಾಮಾನ್ಯರ ಸರ್ಕಾರವೋ ? ವಿವಿಧ ಬೇಡಿಕೆ ಈಡೇರಿಸುವಂತೆ ನಾವು ಹಲವು ತಿಂಗಳಿಂದ ಸರ್ಕಾರವನ್ನು ಒತ್ತಾಯ ಮಾಡುತ್ತಿದ್ದೇವೆ. https://ainlivenews.com/joint_pain_suprem_ray_treatment_reiki/ ಕಳೆದ ವಾರ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಲಿಕ್ಕೆ ಮುಂದಾಗಿದ್ದಾಗಲೂ ಏಕಾಏಕಿ ವಶಕ್ಕೆ ಪಡೆದಿದ್ದರು. ಈಗ ಸಿಎಂ ಬರುತ್ತಾರೆ ನಮ್ಮನ್ನು ವಶಕ್ಕೆ ಪಡೆದಿದ್ದಾರೆ. ಸಿದ್ದರಾಮಯ್ಯನವರು ರೈತರನ್ನ ಕರೆಸಿ ಮಾತನಾಡಬಹುದಿತ್ತು. ಅದನ್ನ ಬಿಟ್ಟು ರೈತರನ್ನು ಬಂಧಿಸಿರುವುದು ನಾಚಿಕೆಗೇಡು. ಮುಂದಿನ ದಿನಗಳಲ್ಲಿ ಜನ ನಿಮಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇಂದಿನಿಂದ ನಾಲ್ಕು ದಿನ ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಕೃಷಿ ಮೇಳ ಬೆಳಗ್ಗೆ 1 1 ಗಂಟೆಗೆ ಸಿಎಂ ಸಿದ್ದರಾಮಯ್ಯರಿಂದ ಕೃಷಿ ಮೇಳಕ್ಕೆ ಚಾಲನೆ ನೀಡಲಿದ್ದಾರೆ.ಆಹಾರ, ಆರೋಗ್ಯ, ಆದಾಯಕ್ಕಾಗಿ ಸಿರಿಧಾನ್ಯ ಎಂಬ ಘೋಷವಾಕ್ಯದಡಿ ಕೃಷಿ ಮೇಳ ಆಯೋಜನೆ ಮಾಡಲಾಗಿದ್ದುಐವರು ಸಾಧಕ ರೈತರಿಗೆ ರಾಜ್ಯ ಮಟ್ಟದ ಕೃಷಿ ಪ್ರಶಸ್ತಿ ಪ್ರದಾನ ಕೂಡ ಮಾಡಲಾಗುತ್ತೆ. ಸಿಎಂ ಸಿದ್ದರಾಮಯ್ಯರಿಂದ ಜಿಕೆವಿಕೆಯ ಸಂಶೋಧಕರು ಅಭಿವೃದ್ಧಿಪಡಿಸಿರುವ, 5 ಹೊಸ ತಳಿಗಳ ಬಿಡುಗಡೆ ಕೃಷಿ ಮೇಳದ ಇತಿಹಾಸದಲ್ಲಿ ಮೊದಲ ಬಾರಿಗೆ ‘ಬೀಜ ಸಂತೆ’ ಆಯೋಜನೆಉದ್ಘಾಟನೆ ವೇಳೆ ಕೃಷಿ ಸಚಿವ ಚಲುವರಾಯ ಸ್ವಾಮಿ, ಡಿಸಿಎಂ ಡಿ.ಕೆ.ಶಿ, ಸಂಸದ ಡಿವಿ ಸದಾನಂದ ಗೌಡ ಉಪಸ್ಥಿತಿ ಉದ್ಘಾಟನ ಸಮಾರಂಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಜಿಕೆವಿಕೆ ಕುಲಪತಿ ಎಸ್.ವಿ. ಸುರೇಶ ಭಾಗಿ ಕೃಷಿ ಮೇಳದಲ್ಲಿ 625 ಮಳಿಗೆಗೆ ವ್ಯವಸ್ಥೆ, ಸಾರ್ವಜನಿಕರಿಗೆ ಉಚಿತ ಪ್ರವೇಶ ಹೆಬ್ಬಾಳದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ ಅಂದ್ರೆ ಜಿಕೆವಿಕೆಯಲ್ಲಿ ಕೃಷಿ ಮೇಳ ಆಯೋಜನೆ ಕೃಷಿ ಮೇಳ…
ಚಾಮರಾಜನಗರ:- ರಾಜ್ಯ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಹಾಲಿನ ನಾಗರಾಜು ಅವರನ್ನು ಬಂಧಿಸಿರುವುದನ್ನು ಖಂಡಿಸಿ ಉಡಿಗಾಲ ಗ್ರಾಮ ಘಟಕದ ಪದಾಧಿಕಾರಿಗಳು ರಸ್ತೆ ನಡೆಸಿ ಪ್ರತಿಭಟನೆ ನಡೆಸಿದರು. ತಾಲೂಕಿನ ಉಡಿಗಾಲ ಗ್ರಾಮದಲ್ಲಿ ಚಾಮರಾಜನಗರ- ಗುಂಡ್ಲುಪೇಟೆ ಮುಖ್ಯರಸ್ತೆಯನ್ನು ತಡೆದು ಕೆಲಕಾಲ ಧರಣಿ ನಡೆಸಿದ ರೈತ ಮುಖಂಡರು ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮ ಘಟಕದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ನಗರಕ್ಕೆ ಸಿಎಂ ಸಿದ್ದರಾಮಯ್ಯ ಆಗಮನದ ಹಿನ್ನೆಲೆಯಲ್ಲಿ, ಸಿಎಂ ವಿರುದ್ಧ ಯಾವುದೇ ಪ್ರತಿಭಟನೆಗಳನ್ನು ನಡೆಸಬಾರದು ಎಂದು ಮುನ್ನೆಚ್ಚರಿಕಾ ಕ್ರಮವಾಗಿ ನಮ್ಮ ಸಂಘದ ತಾಲೂಕು ಅಧ್ಯಕ್ಷರಾದ ಹಾಲಿನ ನಾಗರಾಜು ಅವರನ್ನು ಇಂದು ಮುಂಜಾನೆ ನಾಲ್ಕು ಗಂಟೆಯ ವೇಳೆಯಲ್ಲಿ ಪೊಲೀಸರು ಬಂಧಿಸಿರುವುದು ಖಂಡನೀಯ ಎಂದು ಅಸಮಾಧಾನ ಹೊರಹಾಕಿದರು. ಸಿಎಂ ಅವರು ಬರ ಪರಿಹಾರ ಕೊಟ್ಟಿಲ್ಲ. ೧೦ ಗಂಟೆ ವಿದ್ಯುತ್ ನೀಡುತ್ತೇವೆ ಎಂದು ಹೇಳಿ ಈಗ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ. ಕಬ್ಬಿನ ಬಾಕಿ ಹಣವನ್ನು ನೀಡಿಲ್ಲ. ಅದರ ಹಣ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಕನಕ ವಿದ್ಯಾರ್ಥಿ ನಿಲಯ, ಕಡಲೆ ಮಾರಮ್ಮ ದೇವಸ್ಥಾನ ಉದ್ಘಾಟನೆ ಸೇರಿದಂತೆ ಹಲವು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. https://ainlivenews.com/joint_pain_suprem_ray_treatment_reiki/ ಇನ್ನೂ ಕರ್ನಾಟಕ ಮುಖ್ಯಮಂತ್ರಿ ಪುತ್ರರ ವಿಡಿಯೋ, ಮಾಜಿ ಮುಖ್ಯಮಂತ್ರಿಗಳ ವಿದ್ಯುತ್ ಕಳ್ಳತ, ರಾಜ್ಯಾಧ್ಯಕ್ಷರ ನೇಮಕ ಮತ್ತು ವಿಪಕ್ಷ ನಾಯಕನ ಆಯ್ಕೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ಇದರೊಂದಿಗೆ ಮಳೆಯಿಲ್ಲದೆ ಬರಗಾಲ ಆವರಿಸಿದ್ದು, ಬರ ಪರಿಹಾರದ ವಿಚಾರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಗುದ್ದಾಟ ನಡೆಯುತ್ತಿದೆ.