ಚೆನ್ನೈ: 100 ಪರ್ಸೆಂಟ್ ಈ ಸಲ ಕಪ್ ನಮ್ದೆ ಎಂದು ಕ್ರಿಕೆಟ್ ಏಕದಿನ ವಿಶ್ವಕಪ್ನಲ್ಲಿ ಫೈನಲ್ ಪ್ರವೇಶಿಸಿರುವ ಭಾರತ ತಂಡದ ಬಗ್ಗೆ ನಟ ರಜನಿಕಾಂತ್ ಭರವಸೆಯ ಮಾತುಗಳನ್ನಾಡಿದ್ದಾರೆ. ಬುಧವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ವೀರೋಚಿತ ಜಯ ಸಾಧಿಸಿತು. ಈ ಪಂದ್ಯಕ್ಕೆ ಖ್ಯಾತ ನಟ ರಜನಿಕಾಂತ್ ಕೂಡ ಸಾಕ್ಷಿಯಾಗಿದ್ದರು. ಪಂದ್ಯ ವೀಕ್ಷಿಸಿ ಭಾರತ ತಂಡದ ಆಟಗಾರರನ್ನು ಬೆಂಬಲಿಸಿದರು. ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಆಟಗಾರರ ಉತ್ತಮ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ತಲೈವಾ, ಮೊದಲು ನಾನು ಸ್ವಲ್ಪ ಟೆನ್ಶನ್ ಆದೆ. ಎರಡು ಮತ್ತು ಮೂರು ವಿಕೆಟ್ಗಳ (ನ್ಯೂಜಿಲೆಂಡ್) ನಂತರ ಒಂದೂವರೆ ಗಂಟೆ ಪಂದ್ಯ ಸ್ವಲ್ಪ ರೋಚಕವಾಗಿತ್ತು. ಆದರೆ 100 ಪರ್ಸೆಂಟ್ ಕಪ್ ನಮ್ಮದು. 100 ಪರ್ಸೆಂಟ್ ಸೆಮಿಫೈನಲ್ ಗೆಲುವಿಗೆ ಅವರೇ (ಮೊಹಮ್ಮದ್ ಶಮಿ) ಕಾರಣ ಎಂದು ಬಣ್ಣಿಸಿದ್ದಾರೆ. ಮೊಹಮ್ಮದ್ ಶಮಿ ಬೆಂಕಿ ಬೌಲಿಂಗ್ ದಾಳಿ ಹಾಗೂ ಸಂಘಟಿತ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್…
Author: AIN Author
ಟೆಲ್ ಅವೀವ್: ಇಸ್ರೇಲ್ (Isreal) ಮೇಲೆ ದಾಳಿ ನಡೆಸಿದ ಬಳಿಕ ಹಮಾಸ್ ಉಗ್ರರು (Hamas Terrorist) ಇಸ್ರೇಲಿ ಪ್ರಜೆಗಳನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿದ್ದ ದೊಡ್ಡ ಸುರಂಗವೊಂದು ಗಾಜಾದ ಆಸ್ಪತ್ರೆಯಡಿ (Gaza Hospital) ಪತ್ತೆಯಾಗಿದೆ. ಈ ಸುರಂಗದ ವಿಡಿಯೋವನ್ನು ಇಸ್ರೇಲಿ ಸೇನೆ ಇಂದು ಬಿಡುಗಡೆ ಮಾಡುವ ಮೂಲಕ ಮೂಲಕ ಹಮಾಸ್ ಉಗ್ರರ ಕೃತ್ಯವನ್ನು ಬಹಿರಂಗ ಮಾಡಿದೆ. https://twitter.com/IDF/status/1724169252054188276?ref_src=twsrc%5Etfw%7Ctwcamp%5Etweetembed%7Ctwterm%5E1724169252054188276%7Ctwgr%5Ee798f9acf1c061c6caa7e898ae22595ac75d557f%7Ctwcon%5Es1_&ref_url=https%3A%2F%2Fpublictv.in%2Fidf-shows-how-rantisi-hospital-was-also-used-by-hamas-terrorists-to-hold-hostages%2F ಇಸ್ರೇಲ್ ಸೇನೆ ಆಸ್ಪತ್ರೆಯ ಮೇಲೆ ಏರ್ ಸ್ಟ್ರೈಕ್ ಮಾಡುವ ಮೂಲಕ ಮಗ್ದ ಮಕ್ಕಳನ್ನು ಹತ್ಯೆ ಮಾಡುತ್ತಿದೆ ಎಂದು ಹಮಾಸ್ ಹೇಳಿತ್ತು. ಆದರೆ ಇಸ್ರೇಲ್ ಈ ಆರೋಪವನ್ನು ತಳ್ಳಿ ಹಾಕಿ, ಹಮಾಸ್ ಉಗ್ರರು ಆಸ್ಪತ್ರೆಯನ್ನು ರಕ್ಷಣಾ ಕವಚವನ್ನಾಗಿ ಮಾಡುತ್ತಿದ್ದಾರೆ ಎಂದು ಹೇಳಿತ್ತು. ಈಗ ಸುರಂಗದ ವಿಡಿಯೋವನ್ನು ಇಸ್ರೇಲ್ ಬಿಡುಗಡೆ ಮಾಡುವ ಮೂಲಕ ಹಮಾಸ್ ಉಗ್ರರ ಬಣ್ಣವನ್ನು ಬಯಲು ಮಾಡಿದೆ. ಗಾಜಾದಲ್ಲಿನ ರಾಂಟಿಸ್ಸಿ ಮಕ್ಕಳ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಹಮಾಸ್ ಸಂಗ್ರಹಿಸಿಟ್ಟಿರುವ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿರುವುದಾಗಿ ಇಸ್ರೇಲ್ ಸೈನ್ಯದ ವಕ್ತಾರ ಹೇಳಿಕೊಳ್ಳುವ ವೀಡಿಯೊ ಮತ್ತು ಫೋಟೋಗಳನ್ನು ಇಸ್ರೇಲಿ ಮಿಲಿಟರಿ ರಿಲೀಸ್ ಮಾಡಿದೆ.
ಕೋಲ್ಕತ್ತಾ: ವಿಶ್ವಕಪ್ ಕ್ರಿಕೆಟ್ (World Cup Cricket) ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ ದಕ್ಷಿಣ ಆಫ್ರಿಕಾ (South Africa) ಸೋಲಲು ನಾಯಕ ಟೆಂಬ ಬವುಮಾ (Temba Bavuma) ಅವರ ನಿರ್ಧಾರವೇ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಹೌದು. ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾದ ಮಧ್ಯಮ ಕ್ರಮಾಂಕದವರನ್ನು ಔಟ್ ಮಾಡಿದ್ದು ಅರೆಕಾಲಿಕ ಸ್ಪಿನ್ನರ್ ಟ್ರಾವಿಸ್ ಹೆಡ್. ಲೀಗ್ನಲ್ಲಿ ವೇಗದ ಶತಕ ಸಿಡಿಸಿದ್ದ ಹೆನ್ರಿಕ್ ಕ್ಲಾಸನ್ 47 ರನ್(48 ಎಸೆತ, 4 ಬೌಂಡರಿ, 2 ಸಿಕ್ಸರ್) ಗಳಿಸಿದ್ದಾಗ ಹೆಡ್ (Travis Head) ಬೌಲ್ಡ್ ಮಾಡಿದರು. ಮರು ಎಸೆತದಲ್ಲೇ ಮಾರ್ಕೊ ಜಾನ್ಸೆನ್ ಅವರನ್ನು ಎಲ್ಬಿಗೆ ಕೆಡವಿದ್ದರು. ಸಮಯ ಕಳೆಯುತ್ತಿದ್ದಂತೆ ಪಿಚ್ ಸ್ಪಿನ್ಗೆ ಸಹಕಾರಿ ಆಗುತ್ತಿತ್ತು. ಈ ವಿಷಯ ತಿಳಿದಿದ್ದರೂ ಬವುಮಾ ಆರಂಭದಲ್ಲೇ ಸ್ಪಿನ್ನರ್ಗಳಿಗೆ ಬೌಲ್ ನೀಡಲೇ ಇಲ್ಲ. ದಕ್ಷಿಣ ಆಫ್ರಿಕಾದ ಪರ ಸ್ಪಿನ್ನರ್ಗಳು ದಾಳಿಗೆ ಇಳಿದಿದ್ದು 14ನೇ ಓವರ್ನಲ್ಲಿ. 14ನೇ ಓವರಲ್ಲಿ ತಬ್ರೇಜ್ ಶಮ್ಮಿ ಬೌಲಿಂಗ್ಗಿಳಿದರೆ, 15ನೇ ಓವರ್ ಎಸೆದ ವಿಶ್ವನಂ.1 ಸ್ಪಿನ್ನರ್ ಕೇಶವ್ ಮಹಾರಾಜ್ ತಮ್ಮ…
ನನಗೆ ಪಿರಿಯಡ್ಸ್ ಆಗಿಲ್ಲ, ಗರ್ಭಿಣಿಯೇ (Pregnant) ಎಂದು ತಿಳಿದುಕೊಳ್ಳುವುದಕ್ಕಾಗಿ ರಕ್ತ ಪರೀಕ್ಷೆ ಮಾಡಿಸಿದ್ದೇನೆ. ನಾನು ಪ್ರಗ್ನೆಂಟ್ ಆಗಿದ್ದೇನೆ ದಯವಿಟ್ಟು ಮನೆಯಿಂದ ನನ್ನ ಆಚೆ ಕಳುಹಿಸಿ ಎಂದು ಹಿಂದಿ ಬಿಗ್ ಬಾಸ್ (Bigg Boss) ಸ್ಪರ್ಧಿ, ನಟಿ ಅಂಕಿತಾ ಲೋಖಂಡೆ (Ankita Lokhande) ಹೇಳಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಆಗುತ್ತಿದೆ. ಸದ್ಯ ಪ್ರಸಾರವಾಗುತ್ತಿರುವ ಸೀಸನ್ ನಲ್ಲಿ ನಟಿ ಅಂಕಿತಾ ಲೋಖಂಡೆ ಮತ್ತು ಪತಿ ವಿಕ್ಕಿ ಜೈನ್ (Vicky Jain)ಇಬ್ಬರೂ ಬಿಗ್ ಬಾಸ್ ಮನೆಯೊಳಗೆ ಇದ್ದಾರೆ. ಇದೇ ಮೊದಲ ಬಾರಿಗೆ ಇಂಥದ್ದೊಂದು ಸುದ್ದಿ ಬಿಗ್ ಬಾಸ್ ಮನೆಯಿಂದ ಬಂದಿದೆ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಬಿಗ್ ಬಾಸ್ ಆಯೋಜಕರು ಅಧಿಕೃತವಾಗಿ ಹೇಳಿಕೆ ನೀಡದೇ ಇದ್ದರೂ, ಸದ್ಯದಲ್ಲೇ ಸತ್ಯ ಆಚೆ ಬರಲಿದೆ ಎಂದು ಚರ್ಚಿಸಲಾಗುತ್ತಿದೆ. ಹಿಂದಿ ಬಿಗ್ ಬಾಸ್ ಶೋನಲ್ಲಿ ನಾನಾ ರೀತಿಯ ಪ್ರಯೋಗಗಳನ್ನು ಮಾಡಲಾಗುತ್ತಿದೆ. ಈ ಬಾರಿ ಮದುವೆಯಾದ ಎರಡು ಜೋಡಿಗಳನ್ನು ಬಿಗ್ ಬಾಸ್ ಮನೆಗೆ ಕಳುಹಿಸಲಾಗಿತ್ತು. ಅದರಲ್ಲಿ ಒಂದು ಜೋಡಿಯಿಂದ…
ವಿಶ್ವಕಪ್ ಟೂರ್ನಿಯ ಲೀಗ್ ಹಂತದಲ್ಲಿ ಅಮೋಘ ಪ್ರದರ್ಶನ ತೋರಿದ್ದ ದಕ್ಷಿಣ ಆಫ್ರಿಕಾ ತಂಡ ಸೆಮಿಫೈನಲ್ ಪಂದ್ಯದಲ್ಲಿ ಮುಗ್ಗರಿಸಿತು. ಆ ಮೂಲಕ ತಮ್ಮ ಬೆನ್ನೇರಿರುವ ‘ಚೋಕರ್ಸ್’ ಪಟ್ಟ ಕಳಚಿಕೊಳ್ಳುವಲ್ಲಿ ವಿಫಲವಾಯಿತು. ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ, ಎಂದಿನ ಲಯದಲ್ಲಿ ರನ್ ಗಳಿಸಲು ವಿಫಲವಾಯಿತು. ಸಾಹಸಮಯ ಶತಕ (101 ರನ್) ಸಿಡಿಸಿದ ಡೇವಿಡ್ ಮಿಲ್ಲರ್, ಹೆನ್ರಿಚ್ ಕ್ಲಾಸೆನ್ (47) ಬಿಟ್ಟರೆ ಉಳಿದವರು ಸಾಮರ್ಥ್ಯಕ್ಕೆ ತಕ್ಕ ಆಟವಾಡಲಿಲ್ಲ. ಹೀಗಾಗಿ 49.4 ಓವರ್ಗಳಲ್ಲಿ 212 ರನ್ ಗಳಿಸಿ ಆಲೌಟ್ ಆಯಿತು. ಸಾಧಾರಣ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 47.2 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 215 ರನ್ ಗಳಿಸಿ 8ನೇ ಬಾರಿ ಫೈನಲ್ಗೆ ಲಗ್ಗೆ ಇಟ್ಟಿತು. ದಕ್ಷಿಣ ಆಫ್ರಿಕಾ ತಂಡಕ್ಕೆ ಸೆಮಿಫೈನಲ್ನಲ್ಲಿ ಎದುರಾದ 5ನೇ ಸೋಲು ಇದು. ಈ ಹಿಂದೆ 1992, 1999, 2007 ಹಾಗೂ 2015ರ ಸೆಮಿಫೈನಲ್ಗಳಲ್ಲಿ ಸೋಲು ಎದುರಾಗಿತ್ತು. ವಿಶ್ವಕಪ್ನ ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ತೋರುವ ಈ ತಂಡ…
ಕೊಪ್ಪಳ : ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ, ಅಸಮಾಧಾನವಿದೆ. ನೆಮ್ಮದಿಯಾಗಿ ಬಿ.ವೈ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಅವರ ಪಕ್ಷದವರೇ ಬಿಡುವುದಿಲ್ಲ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿನವರು ಅಪಹಾಸ್ಯ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ಸಿಗೆ ಕುಟುಂಬ ರಾಜಕಾರಣ ಅಂತ ಬಿಜೆಪಿಯವರು ಹೇಳುತ್ತಾರೆ. ಆದರೆ ಈಗ ಏನಾಗಿದೆ? ಬಿಜೆಪಿಯವರು ಯಡಿಯೂರಪ್ಪ ಹೆಸರನ್ನು ಹೇಳಿಕೊಂಡು ಹೊರಟಿದ್ದಾರೆ ಎಂದರು. https://ainlivenews.com/joint_pain_suprem_ray_treatment_reiki/ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ನೆಚ್ಚಿಕೊಂಡು ಬಿಜೆಪಿ, ಜೆಡಿಎಸ್ನಿಂದ ಕಾಂಗ್ರೆಸ್ಸಿಗೆ ಹಲವಾರು ಜನರು ಬರುತ್ತಿದ್ದಾರೆ. ಹಂತ ಹಂತವಾಗಿ ಎಲ್ಲ ಹೇಳುವೆ ಎಂದರು. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮನೆಗೆ ಅಕ್ರಮ ವಿದ್ಯುತ್ ಸಂಪರ್ಕ ಪಡೆದ ವಿಚಾರವಾಗಿ, ಅವರು ದಂಡ ಕಟ್ಟುವುದಾಗಿ ಒಪ್ಪಿಕೊಂಡಿದ್ದಾರೆ. ಕರೆಂಟ್ ಕದ್ದಿರುವುದನ್ನು ಮಾಧ್ಯಮದವರು ತೋರಿಸಿದ್ದಾರೆ. ಜೆಡಿಎಸ್, ಬಿಜೆಪಿಯವರು ಹತಾಶೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಲು ಸೂಚಿಸುತ್ತೇನೆ ಎಂದರು.
ಬೆಂಗಳೂರು: ಪಂಚರಾಜ್ಯ ಚುನಾವಣೆ ಮೇಲೂ ನನ್ನ ಪಕ್ಷಾಂತರ ಪ್ರಭಾವ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದರು. ಈ ಸಂಬಂಧ ಮಾತನಾಡಿದ ಅವರು,ನನ್ನ ಪಕ್ಷಾಂತರದ ಪ್ರಭಾವ ಈಗ ಪಂಚರಾಜ್ಯಗಳ ಚುನಾವಣೆಯ ಮೇಲೂ ಆಗಿದೆ. ಹಾಗಾಗಿಯೇ ಅಲ್ಲಿ 80 ವರ್ಷ ವಯಸ್ಸು ದಾಟಿದವರಿಗೂ ಬಿಜೆಪಿ ಟಿಕೆಟ್ ನೀಡಿದೆ ಎಂದರು ಕರ್ನಾಟಕದಲ್ಲಿ ಹಿರಿಯರ ನಿರ್ಲಕ್ಷಿಸಿ ಬಿಜೆಪಿ ಅಧಿಕಾರ ಕಳೆದುಕೊಂಡಿತು. ಹೀಗಾಗಿ ಪಂಚರಾಜ್ಯಗಳ ಚುನಾವಣೆಯಲ್ಲಿ ಈಗ ಹಿರಿಯರಿಗೆ ಮಣೆ ಹಾಕಲಾಗಿದೆ. ಎಲ್ಲ ರಾಜ್ಯಗಳಲ್ಲೂ ನಿಯಮ ಒಂದೇ ಅನ್ವಯ ಆಗಬೇಕಲ್ಲವೆ? ಎಂದವರು ಪ್ರಶ್ನಿಸಿದರು. ಈಚೆಗೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರನ್ನು ದೆಹಲಿಗೆ ಕರೆಸಿ 3 ದಿನ ಕಾಯಿಸಿದರು. ಐದು ನಿಮಿಷ ಮಾತನಾಡುವಷ್ಟು ಸೌಜನ್ಯ ವರಿಷ್ಠರು ತೋರಲಿಲ್ಲ ವೇಕೆ? ಇನ್ನು, ವಯಸ್ಸಿನ ನೆಪದಲ್ಲಿ ಲಾಲಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಅವರನ್ನು ಮನೆಗೆ ಕಳುಹಿಸಿದರು. ಆದರೆ, 3-4 ಮಾಜಿ ಮುಖ್ಯಮಂತ್ರಿಗಳೂ ಸೇರಿ, ಈಗ 80 ವರ್ಷ ಆದವರಿಗೂ ಟಿಕೆಟ್ ನೀಡಿದ್ದಾರೆ. ಇದಕ್ಕೆ ಮೂಲ ಕಾರಣ ಜಗದೀಶ್…
ತುಮಕೂರು: ನಾನು ಸಹ ಈ ಬಾರಿ ಲೋಕಸಭೆಗೆ ಸ್ಪರ್ಧಿಸಲು ಇಚ್ಛಿಸಿದ್ದೇನೆ. ಹೈಕಮಾಂಡ್ ಒಪ್ಪಿ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ಸಹಕಾರ ಸಚಿವ ರಾಜಣ್ಣ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಯನ್ನು ಒಮ್ಮೆ ನೋಡುವ ಆಸೆಯಿದೆ. ಇಲ್ಲಿವರೆಗೂ ರಾಜ್ಯ ರಾಜಕಾರಣದ ಅನೇಕ ಮಜುಲುಗಳ ಅನುಭವವಾಗಿದೆ, ಅನೇಕ ಸ್ಥಾನಮಾನಗಳು ದೊರೆತಿವೆ. ಇನ್ನು ಲೋಕಸಭೆಗೆ ಒಮ್ಮೆ ಕಾಲಿರಿಸುವ ಉಮೇದಿ ಇದೆ. ಇದಕ್ಕೆ ಪೂರಕವಾಗಿ ವರಿಷ್ಠರು ಒಪ್ಪಿ ಟಿಕೆಟ್ ನೀಡುವುದಾದರೆ ಸ್ಪರ್ಧಿಸುವುದಾಗಿ ಇಂಗಿತ ವ್ಯಕ್ತಪಡಿಸಿದರು. ಸರ್ಕಾರದ ಜೊತೆಗೆ ಸಂಘ ಸಂಸ್ಥೆಗಳು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾದರೆ ಆ ಮಕ್ಕಳು ಸಮಾಜದ ಆಸ್ತಿಯಾಗುತ್ತಾರೆ, ವಿದ್ಯೆ ವಂಚಿತ ಮಕ್ಕಳು ಸಮಾಜಕ್ಕೆ ಹೊರೆಯಾಗುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ವಿದ್ಯೆ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ, ಮಕ್ಕಳ ಬದುಕು ರೂಪಿಸುವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಮುಂದಿನ ಪೀಳಿಗೆಗೆ ಶಿಕ್ಷಣವನ್ನು ಆಸ್ತಿ ರೂಪದಲ್ಲಿ ನೀಡಬೇಕು ಎಂದರು. https://ainlivenews.com/joint_pain_suprem_ray_treatment_reiki/ ಎಲ್ಲಾ ಮಕ್ಕಳಿಗೂ ದೇವರು ಸಮಾನ ಬುದ್ಧಿಶಕ್ತಿ ಕೊಟ್ಟಿರುತ್ತಾನೆ. ಆ ಮಕ್ಕಳಲ್ಲಿರುವ ಬುದ್ಧಿಶಕ್ತಿ,…
ಬೆಂಗಳೂರು:- ಇಂದಿನಿಂದ ದೊಡ್ಡಬಳ್ಳಾಪುರ ಬೈಪಾಸ್ ನಿಂದ ಹೊಸಕೋಟೆ ವರೆಗೂ ನಾಲ್ಕಪಥದ ರಸ್ತೆಗೆ ಟೋಲ್ ಸುಂಕ ವಿಧಿಸಲಾಗುತ್ತಿದೆ. ಈ ಮೂಲಕ ಇಂದಿನಿಂದ ಬೆಂಗಳೂರು ಹೊರವಲಯ ಮತ್ತು ಗ್ರಾಮಾಂತರದ ವಾಹನ ಸವಾರರಿಗೆ ಟೋಲ್ ಬರೆ ಬೀಳಲಿದೆ. ದೊಡ್ಡಬಳ್ಳಾಪುರದಿಂದ ಹೊಸಕೋಟೆ ವರೆಗೂ ಈಗಾಗಲೇ ಹೆದ್ದಾರಿ ರಸ್ತೆ ಕಾಮಗಾರಿ ಪೂರ್ಣವಾಗಿದೆ. ಸುಮಾರು 43.ಕಿ.ಮೀ. ಹೆದ್ದಾರಿ ರಸ್ತೆ ವಾಹನ ಸವಾರರ ಬಳಕೆಗೆ ಮುಕ್ತವಾಗಲಿದೆ. ಈ ಹಿನ್ನಲೆ ಇಂದಿನಿಂದ ನಲ್ಲೂರು ಬಳಿ ಟೋಲ್ ಆರಂಭವಾಗಲಿದೆ. ಡಾಬಸ್ ಪೆಟೆಯಿಂದ ಹೊಸಕೋಟೆವರೆಗೂ ಚತುಷ್ಪಥ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಈಗಾಗಲೆ ದೊಡ್ಡಬಳ್ಳಾಪುರ ಬೈಪಾಸ್ ನಿಂದ ಹೊಸಕೋಟೆ ವರೆಗೂ ರಸ್ತೆ ಕಾಮಗಾರಿ ಮುಕ್ತಾಯ ಆಗಿದೆ. ಡಾಬಸ್ ಪೇಟೆಯಿಂದ ದೊಡ್ಡಬಳ್ಳಾಪುರ ಹೆದ್ದಾರಿ ಕಾಮಗಾರಿ ಇನ್ನೂ ಪೂರ್ಣವಾಗಿಲ್ಲ. ಇದೀಗ ನಲ್ಲೂರು ಟೋಲ್ ಆರಂಭಕ್ಕೆ ಹೆದ್ದಾರಿ ಪ್ರಾಧಿಕಾರದಿಂದ ನಾಳೆಗೆ ಮುಹೂರ್ತ ಫಿಕ್ಸ್ ಆಗಿದೆ. ಪ್ರಮುಖವಾಗಿ ಈ ಮಾರ್ಗವು ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಮಾರ್ಗವಾಗಿ ಹೊಸೂರನ್ನು ತಲುಪಲಿದೆ. ದೊಡ್ಡಬಳ್ಳಾಪುರ ಬೈಪಾಸ್ನಿಂದ ನಲ್ಲೂರು ಗ್ರಾಮದವರೆಗಿನ ರಸ್ತೆ ಪೂರ್ಣ ಆಗಿದ್ದು, 34.15 ಕಿ.ಮೀ.…
ಬೆಂಗಳೂರು:- ರಾಜಕೀಯವನ್ನು ಭ್ರಷ್ಟೋಧ್ಯಮವನ್ನಾಗಿ ಮಾಡಿಕೊಂಡ ಕೀರ್ತಿ ಕುಮಾರಸ್ವಾಮಿಗೆ ಸಲ್ಲುತ್ತದೆ ಎಂದು ಕಾಂಗ್ರೆಸ್ ಹೇಳಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಟ್ವೀಟ್ ಮಾಡಿರುವ ಕಾಂಗ್ರೆಸ್, ಜೆಡಿಎಸ್ ಪಕ್ಷದ ಶಾಸಕರು ಹಣ ಕೊಟ್ಟು ಮತ ಪಡೆದಿದ್ದಾರೆ, ಹಣ ಪಡೆದು ಮತ ನೀಡುತ್ತಾರೆ, ಕುಮಾರಸ್ವಾಮಿಯವರು ಹಣ ವಸೂಲಿ ಮಾಡಿ ಟಿಕೆಟ್ ನೀಡುತ್ತಾರೆ. ಇದನ್ನು ಅವರೇ ಒಪ್ಪಿಕೊಂಡಿದ್ದು. ಫ್ಯಾಮಿಲಿ ಟ್ರಸ್ಟ್ ನಂತಿರುವ ಜೆಡಿಎಸ್ ಪಕ್ಷಕ್ಕಾಗಿ ಪಡೆದ ಹಣ ಕುಮಾರಸ್ವಾಮಿಯವರ ಜೇಬಿಗೆ ಹೋಗುತ್ತದೆಯಲ್ಲವೇ ಎಂದು ಹೇಳಿದೆ. ರಾಜಕೀಯವನ್ನು ಭ್ರಷ್ಟೋಧ್ಯಮವನ್ನಾಗಿ ಮಾಡಿಕೊಂಡ ಕೀರ್ತಿ ಹೆಚ್ಡಿ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ. ಟಿಕೆಟ್ ಅಕ್ಷಾಂಕ್ಷಿಗಳಲ್ಲೇ ಸೂಟ್ ಕೇಸ್ ಪಡೆದ ತಾವು ಅಧಿಕಾರದಲ್ಲಿ ಕಂಟೈನರ್ ನಲ್ಲಿ ವಸೂಲಿ ಮಾಡಿಲ್ಲವೇ? ಎಂದು ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ. ಇನ್ನೂ ಹೆಚ್ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಡುವೆ ಮಾತಿನ ಯುದ್ದ ನಡೆಯುತ್ತಲೇ ಇದೆ. ಟೀಕೆಗೆ ಪ್ರತಿ ಟೀಕೆ ನಡೆಯುತ್ತಲೇ ಇದೆ. ಇದೀಗ ಕಾಂಗ್ರೆಸ್ ವಿರುದ್ಧ ಮುಗಿಬೀಳುತ್ತಿರುವ ಕುಮಾರಸ್ವಾಮಿಗೆ ಟಕ್ಕರ್ ಕೊಟ್ಟ ಕರ್ನಾಟಕ ಕಾಂಗ್ರೆಸ್ ಘಟಕ, ರಾಜಕೀಯವನ್ನು ಭ್ರಷ್ಟೋಧ್ಯಮವನ್ನಾಗಿ…