ದೊಡ್ಡಬಳ್ಳಾಪುರ: ಬಯಲಲ್ಲಿ ಆಟವಾಡುತ್ತಿದ್ದ 4 ವರ್ಷದ ಬಾಲಕಿಯ ಮೇಲೆ ಬೀದಿನಾಯಿ ದಾಳಿ ಮಾಡಿದ್ದು, ಬಾಲಕಿಯ ಕುತ್ತಿಗೆಗೆ ಬಾಯಾಕಿದೆ, ಬೆನ್ನಿನ ಮೇಲೆ ಎರಗಿ ಬಿದ್ದಿದೆ, ಅದೃಷ್ಟವಶಾತ್ ಸಂಬಂಧಿಕರು ಅದೇ ಸಮಯಕ್ಕೆ ಅಲ್ಲಿಗೆ ಬಂದಿದ್ದು ಬಾಲಕಿ ಪ್ರಾಣಾಪಾಯದಿಂದ ಪಾರಾಗಾಗಲು ಸಾಧ್ಯವಾಗಿದೆ. ದೊಡ್ಡಬಳ್ಳಾಪುರ ನಗರದ ಗಾಣಿಗರಪೇಟೆಯ ವಾಸವಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಸಂಜೆ ಘಟನೆ ನಡೆದಿದ್ದು, ರಾಜೀವ್ ರವರ ನಾಲ್ಕು ವರ್ಷದ ಮಗಳು ಸ್ವೀಕೃತಿ ಮೇಲೆ ಬೀದಿ ನಾಯಿ ದಾಳಿ ಮಾಡಿದೆ, ಬಯಲಲ್ಲಿ ಮಕ್ಕಳ ಜೊತೆ ಆಟವಾಡುತ್ತಿದ್ದ ಸ್ವೀಕೃತಿ ಮನೆಯತ್ತ ಬರುತ್ತಿದ್ದಳು, ಈ ವೇಳೆ ಬೀದಿನಾಯೊಂದು ಪುಟ್ಟ ಬಾಲಕಿಯ ಮೇಲೆ ಎರಗಿದೆ, ಆಕೆಯ ಕುತ್ತಿಗೆ ಭಾಗಕ್ಕೆ ಬಾಯಾಕಿದೆ, ಬೆನ್ನಿನ ಮೇಲೆ ಬಲವಾಗಿ ಪರಚಿದೆ, ಬಾಲಕಿಯ ಅದೃಷ್ಟಕ್ಕೆ ಅದೇ ಸಮಯಕ್ಕೆ ಸಂಬಂಧಿಕರೊಬ್ಬರು ಅಲ್ಲಿಗೆ ಬಂದಿದ್ದಾರೆ, ನಾಯಿಯಿಂದ ಬಾಲಕಿಯ ರಕ್ಷಣೆ ಮಾಡಿದ್ದಾರೆ, ಮಗಳ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಬಗ್ಗೆ ಮಾತನಾಡಿದ ರಾಜೀವ್, ಒಂದು ವೇಳೆ ನಾಯಿ ಕುತ್ತಿಗೆ ಭಾಗಕ್ಕೆ ಬಾಯಾಕಿದ್ರೆ ಮಗಳ ಸ್ಥಿತಿ ಉಹಿಸಲೇ ಅಸಾಧ್ಯವಾಗಿತ್ತು…
Author: AIN Author
ವಾಟ್ಸಾಪ್ ಇತ್ತೀಚೆಗೆ ಹೊಸ ಗೌಪ್ಯತೆ ವೈಶಿಷ್ಟ್ಯನ್ನು ಹೊರತಂದಿದೆ. ಅದೇ ಐಪಿ ಪ್ರೊಟೆಕ್ಷನ್ ಫೀಚರ್. ಈ ಫೀಚರ್ ವಾಟ್ಸಾಪ್ ಕರೆಯಲ್ಲಿ ಇರುವ ಇತರರಿಗೆ ನಿಮ್ಮ ಐಪಿ ವಿಳಾಸವನ್ನು ಮರೆ ಮಾಚುತ್ತದೆ. ಈ ವೈಶಿಷ್ಟ್ಯ ಸಕ್ರಿಯವಾಗಿದ್ದಾಗ, ನಿಮ್ಮ ಕರೆಗಳನ್ನು ನೇರವಾಗಿ ಡಿವೈಸ್ ಬದಲಾಗಿ ವಾಟ್ಸಾಪ್ ಸರ್ವರ್ಗಳ ಮೂಲಕ ಕಳುಹಿಸಲಾಗುತ್ತದೆ. ಇದರಿಂದ ನಿಮ್ಮ ಸ್ಥಳವನ್ನು ಟ್ರ್ಯಾಕ್ ಮಾಡಲು ಇತರರಿಗೆ ಹೆಚ್ಚು ಕಷ್ಟಕರವಾಗಿಸುತ್ತದೆ. ಪ್ರಸ್ತುತ ಈ ವೈಶಿಷ್ಟ್ಯ ಸೀಮಿತ ಬಳಕೆದಾರರಿಗೆ ಮಾತ್ರ ಲಭ್ಯವಿದ್ದು, ಶೀಘ್ರದಲ್ಲೇ ಎಲ್ಲರಿಗೂ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ವಾಟ್ಸಾಪ್ ಕರೆಯಲ್ಲಿ ಇತರರು ಭಾಗವಹಿಸುವವರಿಂದ ನಿಮ್ಮ ಐಪಿ ವಿಳಾಸವನ್ನು ಮರೆಮಾಡುವ ಮೂಲಕ ಇದು ನಿಮ್ಮ ಗೌಪ್ಯತೆಯನ್ನು ರಕ್ಷಿಸುತ್ತದೆ. ಇದು ನಿಮ್ಮ ಸ್ಥಳವನ್ನು ಟ್ರ್ಯಾಕ್ ಮಾಡಲು ಇತರರಿಗೆ ಹೆಚ್ಚು ಕಷ್ಟಕರವಾಗಿಸುತ್ತದೆ. ನಿಮ್ಮ ವಾಟ್ಸಾಪ್ ಕರೆಗಳ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ ನಿಮಗೆ ಚೆನ್ನಾಗಿ ತಿಳಿದಿಲ್ಲದ ಜನರಿಗೆ ನೀವು ಕರೆಗಳನ್ನು ಮಾಡುತ್ತಿದ್ದರೆ ಅಥವಾ ನಿಮ್ಮ ಗೌಪ್ಯತೆಯ ಬಗ್ಗೆ ನೀವು ಕಾಳಜಿ ವಹಿಸುತ್ತಿದ್ದರೆ ಇದು ವಿಶೇಷವಾಗಿ ಮುಖ್ಯವಾದ ವೈಶಿಷ್ಟ್ಯವಾಗಿದೆ. ವಾಟ್ಸಾಪ್ನ…
ದಕ್ಷಿಣದ ಖ್ಯಾತ ನಟಿ ತಮನ್ನಾ (Tamannaah) ಮತ್ತು ಬಾಲಿವುಡ್ ನಟ ವಿಜಯ್ ವರ್ಮಾ (Vijay Varma) ಲವ್ವಿಡವ್ವಿ ವಿಚಾರ ಗುಟ್ಟಿನ ಸಂಗತಿಯೇನೂ ಅಲ್ಲ. ಇಬ್ಬರೂ ಒಟ್ಟೊಟ್ಟಿಗೆ ಪ್ರವಾಸ ಮಾಡುತ್ತಿದ್ದಾರೆ, ಹಲವಾರು ಪ್ರಾಜೆಕ್ಟ್ ಗಳಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ. ಇದೀಗ ಈ ಜೋಡಿ ಹೊಸ ಜೀವನಕ್ಕೆ ಕಾಲಿಡಲು ನಿರ್ಧರಿಸಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ. 2024 ಫೆಬ್ರವರಿಯಲ್ಲಿ ಅವರು ಮದುವೆ (Marriage) ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಮದುವೆ ವಿಚಾರವನ್ನು ಈ ಜೋಡಿ ಅಧಿಕೃತವಾಗಿ ಹೇಳದೇ ಇದ್ದರೂ, ಮಾಧ್ಯಮಗಳ ಜೊತೆ ಮಾತನಾಡಿರುವ ವಿಜಯ್ ವರ್ಮಾ, ‘ನನಗೆ ತಮನ್ನಾ ಮೇಲೆ ಮತ್ತಷ್ಟು ಪ್ರೀತಿಯಾಗಿದೆ (Love). ಹೆಚ್ಚೆಚ್ಚು ಪ್ರೀತಿ ಮೂಡುತ್ತಿದೆ’ ಎಂದು ಹೇಳುವ ಮೂಲಕ ತಮ್ಮಿಬ್ಬರ ನಡುವಿನ ಡೇಟಿಂಗ್ ಅನ್ನು ಖಚಿತ ಪಡಿಸಿದ್ದಾರೆ. ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ವರ್ಮಾ ಜೊತೆ ತಮನ್ನಾ ಲಿಪ್ ಲಾಕ್ ಮಾಡಿಕೊಂಡ ವೀಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ವಿಜಯ್ ವರ್ಮಾ ಜೊತೆಗಿನ ಡೇಟಿಂಗ್ (Dating) ವಿಚಾರವನ್ನು ತಳ್ಳಿ…
ಬೆಂಗಳೂರು:- ರಾಜ್ಯ ಬಿಜೆಪಿಯ ನೊಗ ಹೊತ್ತ ಬಿ.ವೈ.ವಿಜಯೇಂದ್ರ ಮೊದಲ ದಿನದಿಂದಲೇ ತಮ್ಮ ಕಾರ್ಯಶೈಲಿಯನ್ನು ನಾಡಿಗೆ ಪರಿಚಯಿಸಿದರು. ರಾಜ್ಯಾಧ್ಯಕ್ಷ ಸ್ಥಾನ ವಹಿಸಿಕೊಂಡ ಬಳಿಕ ಮಾತನಾಡಿದ ವಿಜಯೇಂದ್ರ, ರಾಷ್ಟ್ರೀಯ ನಾಯಕರು, ಸಂಘ ಪರಿವಾರದ ಪ್ರಮುಖರು, ಕಾರ್ಯಕರ್ತರು ಇಟ್ಟ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ. ಎಲ್ಲ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸೋಲಿನ ಕಹಿ ಒಪ್ಪಿಕೊಂಡು ಮುಂದಿನ ಜಯಕ್ಕೆ ಹೋರಾಡುತ್ತೇನೆ. ಆ ಜಾತಿ ಈ ಜಾತಿ ಎನ್ನದೇ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ, ಎಲ್ಲರನ್ನೂ ಒಗ್ಗೂಡಿಸಿಕೊಂಡು ಸಾಗುತ್ತೇನೆ ಎಂದು ತಿಳಿಸಿ, ಎಲ್ಲರನ್ನೂ ಒಳಗೊಳ್ಳುವ ನಾಯಕನಾಗಲು ಸಹಕಾರ ಯಾಚಿಸಿದರು. ರಾಜ್ಯದಲ್ಲಿ ಭೀಕರ ಬರಗಾಲ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಹರಿಹಾಯ್ದರು. ನಾವೇನು ಆಪರೇಷನ್ ಕಮಲ ಮಾಡಲ್ಲ. ಆಡಳಿತ ಪಕ್ಷದ ಶಾಸಕರೇ ರಸ್ತೆಯಲ್ಲಿ ಓಡಾಡದ ಸ್ಥಿತಿ ನಿರ್ವಣವಾಗಿದೆ. ಶಾಸಕರಿಗೆ ಯಾವುದೇ ಅನುದಾನ ಸಿಗುತ್ತಿಲ್ಲ. ದುಷ್ಟ ಸರ್ಕಾರಕ್ಕೆ ಜನರೇ ಪಾಠ ಕಲಿಸುತ್ತಾರೆ ಎಂದರು. ಉಪ ಚುನಾವಣೆಗಳಲ್ಲಿ ತಮ್ಮ ಸಾಮರ್ಥ್ಯ ತೋರಿಸಿ ರಾಷ್ಟ್ರೀಯ ನಾಯಕರ ಗಮನ ಸೆಳೆದಿದ್ದ ಬಿ.ವೈ ವಿಜಯೇಂದ್ರ ಮುಂದೆ ಬೆಟ್ಟದಷ್ಟು…
ಕ್ಯಾನ್ಬೆರಾ: ಆಸ್ಟ್ರೇಲಿಯಾದಲ್ಲಿ (Australia) ನಡೆದ ಗೋಲ್ಡ್ ಕೋಸ್ಟ್ನ ಪ್ರೀಮಿಯರ್ ಲೀಗ್ನಲ್ಲಿ (Gold Coast’s Premier League) 3ನೇ ಡಿವಿಷನ್ ಕ್ಲಬ್ ಕ್ರಿಕೆಟಿಗನೊಬ್ಬ ಒಂದೇ ಓವರ್ನಲ್ಲಿ 6 ವಿಕೆಟ್ ಕಿತ್ತು ಹಲವು ದಾಖಲೆಗಳನ್ನ ಉಡೀಸ್ ಮಾಡಿದ್ದಾರೆ. 3ನೇ ಡಿವಿಷನ್ ಕ್ಲಬ್ ಕ್ರಿಕೆಟಿಗ ಡಿಸ್ಟ್ರಿಕ್ಟ್ ಕ್ರಿಕೆಟ್ ಕ್ಲಬ್ನ ನಾಯಕ ಗರೆಥ್ ಮಾರ್ಗನ್ 6 ವಿಕೆಟ್ ಪಡೆದು ಸಾಧನೆ ಮಾಡಿದ್ದಾರೆ. ಗೋಲ್ಡ್ ಕೋಸ್ಟ್ ಲೀಗ್ನಲ್ಲಿ ಸರ್ಫರ್ಸ್ ಪ್ಯಾರಡೈಸ್ ಸಿಸಿ (Surfers Paradise CC) ವಿರುದ್ಧ ನಡೆದ ಪಂದ್ಯದಲ್ಲಿ ಡಿಸ್ಟ್ರಿಕ್ ಕ್ರಿಕೆಟ್ ಕ್ಲಬ್ ರೋಚಕ 4 ರನ್ಗಳ ಜಯ ಸಾಧಿಸುವಲ್ಲಿ ಯಶಸ್ವಿಯಾಗಿದೆ. 40 ಓವರ್ಗಳ ಪಂದ್ಯ ಇದಾಗಿತ್ತು. ಎದುರಾಳಿ ತಂಡ ನೀಡಿದ 178 ರನ್ಗಳ ಗುರಿ ಬೆನ್ನತ್ತಿದ್ದ ಪ್ಯಾರಡೈಸ್ ಸಿಸಿ 39 ಓವರ್ಗಳಲ್ಲಿ 174 ರನ್ ಕಲೆಹಾಕಿ, 4 ವಿಕೆಟ್ ಕಳೆದುಕೊಂಡಿತ್ತು. ಕೊನೆಯ ಓವರ್ನಲ್ಲಿ ಗೆಲುವಿಗೆ 4 ರನ್ಗಳ ಅಗತ್ಯವಿತ್ತು. ಈ ವೇಳೆ ಬೌಲಿಂಗ್ನಲ್ಲಿ ಚಾಣಾಕ್ಷತೆ ಪ್ರದರ್ಶಿಸಿದ ಮಾರ್ಗನ್ ಒಂದೇ ಓವರ್ನಲ್ಲಿ 6 ವಿಕೆಟ್ಗಳನ್ನ ಕಬಳಿಸಿದರು. ಈ ಮೂಲಕ…
ಕೊಪ್ಪಳ :- BYV ರಾಜ್ಯಾಧ್ಯಕ್ಷರಾಗಿದಕ್ಕೆ ಖುಷಿಯೂ ಇಲ್ಲ, ಬೇಸರವೂ ಇಲ್ಲ ಸಮಚಿತ್ತದಲ್ಲಿರುವೆ ಎಂದು ಸಿ.ಟಿ.ರವಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಖುಷಿ ಅಂತನೂ ಅಲ್ಲ. ಬೇಸರ ಅಂತನೂ ಅಲ್ಲ. ಸಮಚಿತ್ತದಲ್ಲಿ ಇದ್ದೇನೆ ಎಂದು ಹೇಳಬಹುದು. ಬಂದಿದ್ದನ್ನು ಸ್ವೀಕರಿಸುವ ಅಭ್ಯಾಸ ನನಗಿದೆ. ಈ ಹುದ್ದೆ ನನಗೇ ಸಿಗಬೇಕಿತ್ತು ಎನ್ನುವ ನಿರೀಕ್ಷೆಯಲ್ಲಿ ನಾನೇನೂ ಇರಲಿಲ್ಲ. ಹಾಗಾಗಿಯೇ ನಾನು ಅದಕ್ಕಾಗಿ ಯಾವುದೇ ರೀತಿಯ ಪ್ರಯತ್ನ ಮಾಡಿಲ್ಲ. ರಾಜಕೀಯದಲ್ಲಿದ್ದವರು ಪ್ರಯತ್ನ ಮಾಡುವುದಿಲ್ಲ ಎಂದರೆ ಯಾರೂ ನಂಬುವುದಿಲ್ಲ. ಆದರೆ, ಇದು ಸತ್ಯ. ರಾಜ್ಯಾಧ್ಯಕ್ಷ ಹುದ್ದೆ ಎನ್ನುವುದು ಅಧಿಕಾರವಲ್ಲ, ಒಂದು ಜವಾಬ್ದಾರಿ ಎಂಬ ಮಾತನ್ನು ಮೊದಲೇ ಹೇಳಿದ್ದೆ. ಅದನ್ನು ಪಕ್ಷದ ದೊಡ್ಡವರು ಕುಳಿತು ತಿರ್ಮಾನಿಸುವಂಥದ್ದು. ಹಿಂದೆಯೂ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ, ಮುಖ್ಯಮಂತ್ರಿ ಹುದ್ದೆ ಬದಲಾವಣೆ ವೇಳೆಯೂ ನನ್ನ ಹೆಸರು ಕೇಳಿಬಂದಿತ್ತು. ರಾಜ್ಯಾಧ್ಯಕ್ಷ ಹುದ್ದೆಗೆ ನನ್ನ ಹೆಸರು ಕೇಳಿಬಂದಿದ್ದು ಇದೇ ಮೊದಲೇನಲ್ಲ. ಮೂರು ಬಾರಿ ಪ್ರಸ್ತಾಪವಾಗಿತ್ತು. ಆ ಸ್ಥಾನವನ್ನು ವಹಿಸಿಕೊಳ್ಳುವ ಯೋಗ್ಯತೆ ಇದೆ ಎಂಬ ರೀತಿಯಲ್ಲಿ ನನ್ನ ಹೆಸರು ಪ್ರಸ್ತಾಪವಾಗಿದ್ದಕ್ಕೆ ಸಂತೋಷಪಡುತ್ತೇನೆ.…
ಯಾದಗಿರಿ: ಅಕಾಲಿಕ ಮಳೆಗೆ ವಡಗೇರಾ ತಾಲೂಕಿನ ಗುರುಸಣಗಿ ಗ್ರಾಮದಲ್ಲಿ ನೂರಾರು ಎಕರೆ ಭತ್ತದ ಬೆಳೆ ಸಂಪೂರ್ಣ ನಾಶವಾಗಿದೆ. ಕಳೆದ 4 ದಿನಗಳಿಂದ ಸುರಿದ ಮಳೆಗೆ ನೂರಾರು ಎಕರೆ ಭತ್ತ ನೆಲಸಮವಾಗಿದೆ. ಬರಗಾಲದ ಮಧ್ಯೆಯೂ ರೈತರು ನದಿ ನೀರು ಬಳಸಿ ಭತ್ತ ಬೆಳೆದಿದ್ದರು. ನಾಲ್ಕೈದು ದಿನಗಳ ಬಳಿಕ ಭತ್ತ ಕಟಾವು ಮಾಡುತ್ತಿದ್ದರು. ಇದೀಗ ಬೆಳೆ ನಾಶವಾಗಿದ್ದು, ಇದೀಗ ರೈತರ ಸ್ಥಿತಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ.
ರಷ್ಯಾ: ತಾಯಿ-ಮಗನ ಸಂಬಂಧಕ್ಕೆ ಭಾರತದಲ್ಲಿ ಎಷ್ಟು ಪೂಜ್ಯ ಸ್ಥಾನವಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಆದರೆ, ರಷ್ಯಾದಲ್ಲಿ ತಾಯಿಯೊಬ್ಬಳು ತಾನು ಬೆಳೆಸಿದ ಮಗನನ್ನೇ ವಿವಾಹವಾಗಿದ್ದಾಳೆ. ಈ ಮದುವೆ ಈಗ ರಷ್ಯಾದಲ್ಲಿ ಸಾಕಷ್ಟು ಸುದ್ದಿಯಾಗಿದೆ. ತನಗಿಂತ 31 ವರ್ಷ ಕಿರಿಯವನಾದ ಮಲ ಮಗನನ್ನು ಮದುವೆಯಾಗಿದ್ದಾಳೆ. 53 ವರ್ಷದ ಸಂಗೀತಗಾರ್ತಿಯಾಗಿರುವವ ಅಸಿಲು ಚಿಜೆವ್ಸ್ಕಯಾ ಮಿಂಗಾಲಿಮ್ ತನ್ನ 22 ವರ್ಷದ ಮಲಮಗ ಡೇನಿಯಲ್ ಚಿಜೆವ್ಸ್ಕಿಯನ್ನು ವಿವಾಹವಾಗುವ ಮೂಲಕ ಅಚ್ಚರಿ ಮೂಡಿಸಿದ್ದಾಳೆ. ರಷ್ಯಾದ ಮಕ್ಕಳ ಕಲ್ಯಾಣ ಇಲಾಖೆ ಕೂಡ ಈ ಮದುವೆಗೆ ಅಚ್ಚರಿ ವ್ಯಕ್ತಪಡಿಸಿದೆ. ರಷ್ಯಾದ ರಿಪಬ್ಲಿಕ್ ಆಫ್ ಟಾಟರ್ಸ್ತಾನ್ನ ಕಜಾನ್ನಲ್ಲಿರುವ ರೆಸ್ಟೋರೆಂಟ್ನಲ್ಲಿ ದಂಪತಿಗಳು ಪರಸ್ಪರ ಒಟ್ಟಾಗಿ ಬಾಳುವುದಾಗಿ ಹಾಗೂ ಸಾಯುವವರೆಗೂ ಜೊತೆಯಾಗಿಯೇ ಇರುವುದಾಗಿ ಪ್ರಮಾಣ ಮಾಡಿ ಮದುವೆಯಾಗಿದ್ದಾರೆ. ಸ್ಥಳೀಯ ಮಾಧ್ಯಮಗಳಿಂದ ಪಡೆದ ಮಾಹಿತಿಯನ್ನು ನಂಬುವುದಾದರೆ, https://ainlivenews.com/joint_pain_suprem_ray_treatment_reiki/ ಮಿಂಗಲಿಮ್ ಅವರು ಡೇನಿಯಲ್ಗೆ 13 ವರ್ಷವಾಗಿದ್ದಾಗಿನಿಂದಲೂ ಆತನನ್ನು ಸಾಕಿ ಬೆಳೆಸಿದ್ದಾಳೆ. ಅನಾಥಾಶ್ರಮದಲ್ಲಿ ಸಿಕ್ಕಿದ್ದ ಡೇನಿಯಲ್ನನ್ನು ಮಗನ ರೀತಿಯಲ್ಲಿ ದತ್ತು ಪಡೆದು ಸಾಕಿದ್ದಳು. ತನ್ನ ಮನೆಯಲ್ಲಿಯೇ ಮಿಂಗಲಿಮ್ ಡೇನಿಯಲ್ಗೆ ಸಂಗೀತ ಕಲಿಸುತ್ತಿದ್ದರು…
ಕೊಪ್ಪಳ:- ವಿಜಯೇಂದ್ರ ನೆಮ್ಮದಿಯಾಗಿ ಕೆಲಸ ಮಾಡಲು ಅವರ ಪಕ್ಷದವರೇ ಬಿಡಲ್ಲ ಎಂದು ಸಚಿವ ತಂಗಡಗಿ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು, ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ; ಅಸಮಾಧಾನವಿದೆ. ನೆಮ್ಮದಿಯಾಗಿ ಬಿ.ವೈ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಅವರ ಪಕ್ಷದವರೇ ಬಿಡುವುದಿಲ್ಲ. ಕಾಂಗ್ರೆಸ್ಸಿನವರು ಅಪಹಾಸ್ಯ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ಸಿಗೆ ಕುಟುಂಬ ರಾಜಕಾರಣ ಅಂತ ಬಿಜೆಪಿಯವರು ಹೇಳುತ್ತಾರೆ. ಆದರೆ ಈಗ ಏನಾಗಿದೆ? ಬಿಜೆಪಿಯವರು ಯಡಿಯೂರಪ್ಪ ಹೆಸರನ್ನು ಹೇಳಿಕೊಂಡು ಹೊರಟಿದ್ದಾರೆ ಎಂದರು. ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ನೆಚ್ಚಿಕೊಂಡು ಬಿಜೆಪಿ, ಜೆಡಿಎಸ್ನಿಂದ ಕಾಂಗ್ರೆಸ್ಸಿಗೆ ಹಲವಾರು ಜನರು ಬರುತ್ತಿದ್ದಾರೆ. ಹಂತ ಹಂತವಾಗಿ ಎಲ್ಲ ಹೇಳುವೆ ಎಂದರು. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮನೆಗೆ ಅಕ್ರಮ ವಿದ್ಯುತ್ ಸಂಪರ್ಕ ಪಡೆದ ವಿಚಾರವಾಗಿ, ಅವರು ದಂಡ ಕಟ್ಟುವುದಾಗಿ ಒಪ್ಪಿಕೊಂಡಿದ್ದಾರೆ. ಕರೆಂಟ್ ಕದ್ದಿರುವುದನ್ನು ಮಾಧ್ಯಮದವರು ತೋರಿಸಿದ್ದಾರೆ. ಜೆಡಿಎಸ್, ಬಿಜೆಪಿಯವರು ಹತಾಶೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಲು ಸೂಚಿಸುತ್ತೇನೆ ಎಂದರು.
ಬೆಂಗಳೂರು:- ಕರ್ನಾಟಕದ ಪ್ರವಾಸೋದ್ಯಮ ಉತ್ತೇಜಿಸಲು ಶೀಘ್ರ ಪರಿಷ್ಕೃತ ನೀತಿ ಪ್ರಕಟಿಸಲಾಗುವುದು ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಮ್ಮ ರಾಜ್ಯದಲ್ಲಿರುವ ಸ್ಮಾರಕಗಳನ್ನು ಸಂರಕ್ಷಿಸಲು ವಿಶೇಷ ಗಮನ ನೀಡಿರುವುದಾಗಿ ಹೇಳಿದ ಅವರು, ಲಲಿತ ಮಹಲ್ ಪ್ಯಾಲೇಸ್ ನವೀಕರಣ, ಮೈಸೂರಿನ ಲಲಿತ ಮಹಲ್ ಪ್ಯಾಲೇಸ್ ಹೋಟೆಲ್ ನವೀಕರಿಸಿ ಸಂರಕ್ಷಿಸಲು ನಿರ್ಧರಿಸಲಾಗಿದೆ. ಲಲಿತ ಮಹಲ್ ಹೋಟೆಲ್ ಕಟ್ಟಡ ದುರ್ಬಲವಾಗಿದ್ದು, ಈ ಹಿನ್ನೆಲೆಯಲ್ಲಿ ಅದನ್ನು ಸಂರಕ್ಷಿಸಲು ತುರ್ತಾಗಿ ನವೀಕರಣ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕಿದೆ ಎಂದ ಅವರು, ಈ ಹಿನ್ನೆಲೆಯಲ್ಲಿ ಟೆಂಡರ್ ಕರೆಯಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಈ ಕಟ್ಟಡದ ನವೀಕರಣದ ಕಾರ್ಯವನ್ನು ಸರ್ಕಾರ ಕೈಗೆತ್ತಿಕೊಳ್ಳುವುದಿಲ್ಲ. ಹೀಗಾಗಿ ಈ ಕಾರ್ಯವನ್ನು ಖಾಸಗಿಯವರಿಗೆ ವಹಿಸಿ ಕೊಡಲು ತೀರ್ಮಾನಿಸಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು. ಕನ್ನಡಿಗರ ಹೆಮ್ಮೆಯ ರಾಷ್ಟ್ರಕೂಟ ದೊರೆ ಅಮೋಘವರ್ಷ ನೃಪತುಂಗನ ಕೋಟೆಯನ್ನು ಸಂರಕ್ಷಣೆ ಹಾಗೂ ಅಭಿವೃದ್ಧಿಪಡಿಸಲು ನಿರ್ಧರಿಸಿದ್ದು, ಮಳಖೇಡದಲ್ಲಿರುವ ಈ ಕೋಟೆಯನ್ನು ಒಂದು ಹಂತದಲ್ಲಿ ಸಂರಕ್ಷಿಸುವ ಕೆಲಸವಾಗಿದ್ದರೂ ಅದನ್ನು ಇನ್ನಷ್ಟು…