ಬೆಂಗಳೂರು: ನಮಗೆ ಬೆಂಗಳೂರಿನ ಹೆಸರನ್ನು ಕಳೆದುಕೊಳ್ಳಲು ಇಷ್ಟವಿಲ್ಲ ಎಂದು ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂಬ ಹೆಸರು ಬದಲಾವಣೆ ವಿಚಾರದ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ https://ainlivenews.com/it-would-be-good-if-sumalta-contested-from-bangalore-north-constituency/ ಬೆಂಗಳೂರು ದಕ್ಷಿಣ ಎಂಬ ಹೆಸರು ಬಂದರೆ ಇಲ್ಲಿಗೆ ಕೈಗಾರಿಕೆಗಳು ಹೆಚ್ಚು ಬರುತ್ತವೆ. ನಾವೆಲ್ಲರೂ ಬೆಂಗಳೂರಿನವರು. ನಮ್ಮ ಜಿಲ್ಲಾ ಕೇಂದ್ರ ರಾಮನಗರದಲ್ಲೇ ಇರಲಿ, ಅದಕ್ಕೆ ನಮ್ಮ ಅಭ್ಯಂತರವಿಲ್ಲ. ನಮಗೆ ಬೆಂಗಳೂರಿನ ಹೆಸರನ್ನು ಕಳೆದುಕೊಳ್ಳಲು ಇಷ್ಟವಿಲ್ಲ. ಹೀಗಾಗಿ ಎಲ್ಲರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಅಭಿಪ್ರಾಯ ಸಂಗ್ರಹಿಸಿದ ಬಳಿಕ ಸರ್ಕಾರದ ಮಟ್ಟದಲ್ಲಿ ಹೆಸರು ಬದಲಾವಣೆಗೆ ಕ್ರಮವಹಿಸುತ್ತೇವೆ ಎಂದು ಡಿಕೆಶಿ ಹೇಳಿದ್ದಾರೆ. ಮೆಟ್ರೋ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು, ಈ ವಿಚಾರವಾಗಿ ಮೆಟ್ರೋ ಸಂಸ್ಥೆಗೆ ಡಿಪಿಆರ್ ಮಾಡಲು ಹೇಳಿದ್ದೇನೆ. ಭೂಸ್ವಾಧೀನ ತಪ್ಪಿಸುವುದು, ಬೆಂಗಳೂರಿನಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು, ಹೊರಗಿನಿಂದ ಬರುವವವರು ಇಲ್ಲೇ ತಮ್ಮ ವಾಹನ ನಿಲ್ಲಿಸಿ ಮೆಟ್ರೋ ಮೂಲಕ ಬೆಂಗಳೂರಿಗೆ ತೆರಳುವಂತೆ ಮಾಡಲು ಹಾಗೂ ವಾಹನ ನಿಲುಗಡೆ ಸ್ಥಳ ನಿರ್ಮಿಸುವುದು ಸೇರಿದಂತೆ ಅನೇಕ ಆಲೋಚನೆಗಳಿವೆ. ಎಲ್ಲವೂ ಪ್ಲ್ಯಾನ್…
Author: AIN Author
ಬೆಂಗಳೂರು: ನಗರದ ನೈಸ್ ರಸ್ತೆಯಲ್ಲಿ ಇವತ್ತು ಲಾರಿ ಅಸೋಸಿಯೇಷನ್ ನವರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಕೆಲಹೊತ್ತು ವಾಹನ ಸಾವರಾರು ಟ್ರಾಫೀಕ್ ಜಾಮ್ ನಿಂದ ಪರದಾಡಬೇಕಾಯಿತು. ನೈಸ್ ರಸ್ತೆಯಲ್ಲಿ ರಾತ್ತಿ ಓಡಾಡಲು ಸರಿಯಾದ ಸೆಕ್ಯುರಿಟಿಯಿಲ್ಲ, ರಸ್ತೆ ನವೀಕರಣ ಮಾಡಲು ಹೋಗಿ ಒನೆ್ ವೇ ಮಾಡಿದ್ದಾರೆ. ರಸ್ತೆ ನವೀಕರಣ ಸಂದರ್ಭದಲ್ಲಿ ಟೋಲ್ ಕಲೆಕ್ಟ್ ಮಾಡುವ ಹಾಗಿಲ್ಲ,ಒಂದು ದಿನಕ್ಕೆ 40 ಸಾವಿರ ವಾಹನ ಸಂಚಾರಿಸುತ್ತಿದ್ದು 1.70ಕೋಟಿ ಹಣ ಸಂದಾಯವಾಗುತ್ತಿದೆ, ತುಮಕೂರು ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿಗೆ ಲಾರಿಯೊಂದಕ್ಕೆ 2000 ರೂ ಟೋಲ್ ಕಲೆಕ್ಟ್ ಮಾಡುತ್ತಿದ್ದಾರೆ ಅದರೆ ನೈಸ್ ಕಂಪನಿಯವರು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಅಂತ ನೈಸ್ ಕಂಪನಿ ವಿರುದ್ದ ಲಾರಿ ಆಸೋಷಿಯೇಷನ್ ನವರು ಆಕ್ರೋಶ ವ್ಯಕ್ತ ಪಡಿಸಿದರು. ನೈಸ್ ರಸ್ತೆಯಲ್ಲಿ ಇದುವರೆಗೆ 400ಕ್ಕೊ ಹೆಚ್ಚು ಆಕ್ಸಿಡೆಂಟ್ ಗಳು ಆಗಿದೆ, 120 ಜನ ಸಾವನ್ನಪ್ಪಿದ್ದಾರೆ ಯಾರಿಗೂ ನೈಸ್ ಕಂಪನಿಯವರು ಪರಿಹಾರ ಕೊಡುತ್ತಿಲ್ಲ , ರಾಜ್ಯ ಮತ್ತು ಕೇಂದ್ರ ಸರ್ಕಾರಕ ಇದರ ಬಗ್ಗೆ ಗಮನ ಹರಿಸಬೇಕು ಅಂದರು.
ಕಲಬುರಗಿ: ಕೆಇಎ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಕಿಂಗ್ಪಿನ್ ಆರ್ಡಿ ಪಾಟೀಲ್ನನ್ನು (RD Patil Arrest) ಬಂಧಿಸಲಾಗಿದೆ. ಪ್ರಕರಣ ಬೆಳಕಿಗೆ ಬಂದ ಬಳಿಕ ಅಂದರೆ ಕಳೆದ 12 ದಿನಗಳಿಂದ ಆರ್ಡಿ ಪಾಟೀಲ್ ತಲೆ ಮರೆಸಿಕೊಂಡಿದ್ದನು. ತೀವ್ರ ಹುಡುಕಾಟದ ನಂತರ ಇಂದು ಪಾಟೀಲ್ನನ್ನು ಅರೆಸ್ಟ್ ಮಾಡಲಾಗಿದೆ. https://ainlivenews.com/congress-government-will-fall-before-lok-sabha-elections-nalin-kumar-kateel-2/ ತಲಮರೆಸಿಕೊಂಡಿದ್ದ ಆರ್ ಡಿ ಪಾಟೀಲ್ ಸಂಬಮಧಿಕರ ಮನೆಯಲ್ಲಿಯೇ ಅವಿತುಕೊಂಡಿದ್ದ. ಇಂದು ಈ ಬಗ್ಗೆ ಮಾಹಿತಿ ಅರಿತ ಪೊಲೀಸರು ಅಫಜಲಪುರದಲ್ಲಿರುವ ಸಂಬಂಧಿಕರ ಮನೆಯಿಂದಲೇ ಆರ್ಡಿ ಪಾಟೀಲ್ನನ್ನು ಪೊಲೀಸರು ಬಂಧನ ಮಾಡಿದ್ದಾರೆ.
ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದ ನಂತರ ರಾಜ್ಯ ಸರ್ಕಾರ ಪಟಾಕಿ ನಿಷೇಧ ಮಾಡಿತ್ತು, ಇದ್ರ ಬೆನ್ನಲ್ಲೆ ವಾಯು ಮಾಲಿನ್ಯ ಹದಗೆಡುತ್ತಿರೋ ಹಿನ್ನೆಲೆ ಸುಪ್ರೀಂ ಕೋರ್ಟ್ ಕೂಡ ಪಟಾಕಿ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಈ ಬೆನ್ನಲ್ಲೆ ದೀಪಾವಾಳಿ ಹಬ್ಬ ಬಂದಿದ್ದು, ಕಾಳಸಂತೆಯಲ್ಲಿ ಪಟಾಕಿ ಗೋದಾಮಗಳು ಪಟಾಕಿ ಮಳಿಗೆಗಳು ತಲೆ ಎತ್ತುತ್ತಿವೆ. https://ainlivenews.com/bengaluru-university-protecting-land-grabbers/ ಈ ಹಿನ್ನೆಲೆ ಬಿಬಿಎಂಪಿ ಹಾಗೂ ನಗರ ಪೊಲೀಸ್ ಇಲಾಖೆ ಪಟಾಕಿ ಮಾರಾಟಕ್ಕೆ ನಿರ್ದಿಷ್ಟ ಜಾಗ ಗುರುತು ಮಾಡಿದೆ. ಅಷ್ಟೇ ಅಲ್ಲದೆ ಈ ಬಾರಿ ಮಾಮೂಲಿ ಪಟಾಕಿ ನಿಷೇಧ ಮಾಡಿದ್ದು ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಿದ್ದಾರೆ.ಹಾಗಾದ್ರೆ ಸರ್ಕಾರ ಆದೇಶ ನೋಡೋದಾದ್ರೆ… ಪಟಾಕಿ ಮಾರಾಟ ನಿಬಂಧನೆಗಳು ಹಸಿರು ಪಟಾಕಿ ಮಾರುವುದು ಕಡ್ಡಾಯ ಹಸಿರು ಪ್ಯಾಕೆಟ್ಗಳ ಮೇಲೆ ಹಸಿರು ಪಟಾಕಿ ಚಿಕ್ಕ QR ಕೋಡ್ ಕಡ್ಡಾಯ ಮಳಿಗೆಗಳ ವಿಸ್ತೀರ್ಣ 10×10 ಅಡಿ ಸೀಮಿತ ನಿಗದಿಗಿಂತ ಹೆಚ್ಚು ಪ್ರಮಾಣದ ಪಟಾಕಿ ದಾಸ್ತಾನು ಮಾಡುವಂತಿಲ್ಲ ಸಾಧ್ಯವಾದಷ್ಟೂ ಬೆಂಕಿ ತಡೆಯುವ ಉಪಕರಣಗಳನ್ನೇ ಬಳಸಿ ಮಳಿಗೆ ನಿರ್ಮಿಸಬೇಕು…
ಬೆಂಗಳೂರಿನಲ್ಲಿ ಒಂದೊಂದು ಇಂಚು ಭೂಮಿಗೆ ಬಂಗಾರದ ಬೆಲೆ ಇದೆ.ಇದರಿಂದ ಭೂಗಳ್ಳರ ಹಾವಳಿ ಜಾಸ್ತಿಯಾಗಿದೆ.ನಗರದೆಲ್ಲಡೆ ಸರ್ಕಾರದ ಸ್ವತ್ತಿಗೆ ಭೂಗಳ್ಳರು ಕಂಡ ಕಂಡಲ್ಲಿ ಬೇಲಿ ಹಾಕ್ತಿದ್ದಾರೆ..ಅಂತಹವರಿಗೆ ಚಳಿ ಬಿಡಿಸಬೇಕಾದ ಅಧಿಕಾರಿಗಳು ನಿದ್ರೆಯಲ್ಲಿದ್ದಾರೆ..ಕೋಟಿ ಕೋಟಿ ಮೌಲ್ಯದ ವಿವಿ ಪ್ರಾಪರ್ಟಿ ಒತ್ತುವರಿಯಾಗಿದ್ರೂ ಅಧಿಕಾರಿಗಳು ಕ್ರಮನೇ ಕೈಗೊಳ್ಳುತ್ತಿಲ್ಲ. ಹೀಗಾಗಿ ಬೆಂಗಳೂರು ವಿವಿ ಭೂಗಳ್ಳರ ಪರ ನಿಂತಿರೋದು ವಿವಿ ಆವರಣದಲ್ಲಿ ಆಕ್ರೋಶ ಭಗಿಲೆದ್ದಿದೆ. https://ainlivenews.com/it-would-be-good-if-sumalta-contested-from-bangalore-north-constituency/ ಬೆಂಗಳೂರು ಬೆಳೆದಂತೆ ಒಂದೊಂದು ಅಡಿ ಜಾಗಕ್ಕೂ ಚಿನ್ನದಂತಹ ಬೆಲೆ ಇದೆ. ಒಂದು ಅಡಿ ಜಾಗ ಖಾಲಿ ಇದ್ರೂ ಜನ ನಮ್ದು ಅಂತ ಬೇಲಿ ಹಾಕ್ತಾರೆ.ಸರ್ಕಾರಿ ಜಾಗ ಇರಲಿ, ಖಾಸಗಿ ಜಾಗವಾಗಲಿದೆ ನಮ್ದೆ ಅಂತ ಬೋಡರ್ ಹಾಕಿಕೊಳ್ತಾರೆ. ಇಷ್ಟು ಆದ್ರೂ ನಗರದಲ್ಲಿ ಭೂಗಳ್ಳರ ಆಟಕ್ಕೆ ಕಡಿವಾಣ ಹಾಕುವರೇ ಇಲ್ಲದಂತಾಗಿದೆ. ಭೂಗಳ್ಳರ ಭೂ ಧಾಹಕ್ಕೆ ಸರ್ಕಾರಿ ಸ್ವತ್ತು ಕೂಡ ಕಂಡಕಂಡವರು ಪಾಲಾಗ್ತಿದೆ..ಬೆಂಗಳೂರು ವಿವಿಯ ಜ್ಝಾನಭಾರತಿ ಕ್ಯಾಂಪಸ್ ಕೂಡ ಭೂಗಳ್ಳರ ಕಪಿಮುಷ್ಟಿಯಲ್ಲಿ ಸಿಲುಕಿದೆ.ಆಸ್ತಿ ರಕ್ಷಣೆ ಮಾಡಬೇಕಾದ ವಿವಿ ಅಧಿಕಾರಿಗಳು ಭೂಗಳ್ಳರ ಜೊತೆ ಶಾಮೀಲಾಗಿ ಭಕ್ಷಕರು ಆಗಿದ್ದಾರೆ ಅನ್ನೋ ಆರೋಪ…
ಬೆಂಗಳೂರು : ಶೀಘ್ರದಲ್ಲಿಯೇ 484 ಕೋಟಿ ವೆಚ್ಚದಲ್ಲಿ ರಾಜ್ಯದ 167 ಯೋಜನೆಗಳಿಗೆ ಅನುಮೋದನೆ ಸಿಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಲ್ಲಿ ಅಂದಾಜು 484 ಕೋಟಿ ವೆಚ್ಚದ 167 ನೀರಾವರಿ ಯೋಜನೆಗಳನ್ನು ಜಾರಿಗೆ ತರಲು ವಿನಂತಿಸಿದ್ದೇನೆ ಎಂದು ತಿಳಿಸಿದ್ದಾರೆ. https://ainlivenews.com/it-would-be-good-if-sumalta-contested-from-bangalore-north-constituency/ ಈ ಎಲ್ಲಾ ಯೋಜನೆಗಳು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬರಲಿದೆ. ಈ ಯೋಜನೆಯ ಉದ್ದೇಶ ಕೃಷಿ ಭೂಮಿಯ ಮಟ್ಟದಲ್ಲಿ ನೀರಾವರಿಗಾಗಿ ತಗಲುವ ವೆಚ್ಚವನ್ನು ಸರಳೀಕರಿಸುವುದು, ಕನಿಷ್ಠಗೊಳಿಸುವುದು. ಹೆಚ್ಚಿನ ಕೃಷಿ ಭೂಮಿಯನ್ನು ನೀರಾವರಿ ವಿಧಾನಗಳಿಗೆ ಒಳಪಡುವಂತೆ ಮಾಡುವುದು ಹಾಗೂ ನೀರಾವರಿ ಜಮೀನಿನಲ್ಲಿ ಬಳಸುವ ನೀರು ಸಮರ್ಥವಾಗಿ ಜಮೀನಿಗೆ ಮಾತ್ರ ಬಳೆಕೆಯಾಗುವಂತೆ ನೀರಾವರಿ ಮಾದರಿಯಲ್ಲಿ ದಕ್ಷತೆಯ ಬಗ್ಗೆ ಕಾಳಜಿ ವಹಿಸುವುದು ಎಂದು ಹೇಳಿದ್ದಾರೆ.
ಉಡುಪಿ: ಮಾಜಿ ರಾಜ್ಯಪಾಲ ಪಿ.ಬಿ ಆಚಾರ್ಯ (92) (Padmanabha Acharya) ವಿಧಿವಶರಾಗಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯವರಗಿರುವ ಪಿ.ಬಿ ಆಚಾರ್ಯಯವರು ಮಹಾರಾಷ್ಟ್ರದ ಮುಂಬೈಯಲ್ಲಿ ನಿಧನರಾಗಿದ್ದಾರೆ. ಇವರು ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶದಲ್ಲಿ ರಾಜ್ಯಪಾಲರಾಗಿದ್ದರು. https://ainlivenews.com/knee-pain-treatment-joint-pain-treatment/ ಉಡುಪಿಯ ತೆಂಕಪೇಟೆಯ ಆಚಾರ್ಯ ಮಠದಲ್ಲಿ ಜನಿಸಿರುವ ಪಿ.ಬಿ ಆಚಾರ್ಯ ಅವರು ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಅವಿರತಶ್ರಮ ಪಟ್ಟಿದ್ದಾರೆ. ಆರ್ ಎಸ್ ಎಸ್ ಕಾರ್ಯಕರ್ತರಾಗಿಯೂ ಈಶಾನ್ಯ ಭಾರತದ ಮೂಲೆ ಮೂಲೆಯಲ್ಲಿ ಕೆಲಸ ಮಾಡಿದ್ದಾರೆ. ಸಾಮಾನ್ಯ ಜನರಿಗೆ ರಾಜಭವನ ಮುಕ್ತವಾಗಿ ತೆರೆದಿಟ್ಟವರಾಗಿದ್ದಾರೆ. ಅಲ್ಲದೆ ಬಡ ಮಕ್ಕಳನ್ನು ಶೈಕ್ಷಣಿಕವಾಗಿ ದತ್ತು ಪಡೆದು ಶಿಕ್ಷಣ ಕೊಡಿಸುತ್ತಿದ್ದರು.
ಬೆಂಗಳೂರು: ಪಶು ಆಹಾರ ತಯಾರಿಸುವ ಕುರಿತು ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ KMFನ ಆಹಾರ ಘಟಕಗಳು ಆರು ಕಡೆ ಇದೆ. ಪಶು ಆಹಾರ ತಯಾರಿಸಲು ಮೆಕ್ಕೆಜೋಳ ಬೇಕು. ಮೆಕ್ಕೆಜೋಳದ SSP 2,090 ರೂಪಾಯಿ ಇದೆ. ಇದಕ್ಕೆ ನಾವು 160 ರೂ. ಹೆಚ್ಚುವರಿಯಾಗಿ ನೀಡುತ್ತಿದ್ದೇವೆ. ನವೆಂಬರ್ 13ನೇ ತಾರೀಖಿನಿಂದ ಮೆಕ್ಕೆಜೋಳ ಖರೀದಿ ಆರಂಭ ಮಾಡಲಿದ್ದು ರೈತರಿಂದ 2250 ರೂ.ಗೆ ಮೆಕ್ಕೆಜೋಳ ಖರೀದಿ ಮಾಡುತ್ತಿದ್ದೆವೆ. ಒಟ್ಟು ಒಂದು ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿ ಮಾಡುತ್ತೇವೆ. https://ainlivenews.com/good-news-extension-of-purple-line-metro-rail-to-bidadi-announcement-by-d-k-sivakumar/ ರಾಜ್ಯದಲ್ಲಿ ಇಷ್ಟು ದಿನ ಬರ ಇತ್ತು. ಆದರೇ, ಕಳೆದ ವಾರದಿಂದ ಕೆಲವು ಕಡೆ ಮಳೆ ಆಗುತ್ತಿದೆ. ಇದರಿಂದ ಮೇವು ಕೂಡ ಹೆಚ್ಚಾಗುವ ನಿರೀಕ್ಷೆ ಇದೆ. ಈಗ ಸದ್ಯ 6-7 ತಿಂಗಳಿಗೆ ಆಗುವಷ್ಟು ಮೇವು ಸಂಗ್ರಹವಿದೆ. ಹಾಲಿನ ದರ ಏರಿಕೆ ಮಾಡುವಂತೆ ಒತ್ತಾಯ ಇದೆ ಎಂದು ಅವರು ಹೇಳಿದರು.
ಬೆಂಗಳೂರು: ಬೆಂಗಳೂರಿನಿಂದ-ಧರ್ಮಸ್ಥಳಕ್ಕೆ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಸೈಕಲ್ ಯಾತ್ರೆ ಕೈಗೊಂಡಿದ್ದರು. ಬುಧವಾರ ಬೆಳಗ್ಗೆ ಬೆಂಗಳೂರಿನಿಂದ ಹೊರಟು ಇಂದು ಧರ್ಮಸ್ಥಳಕ್ಕೆ ತಲುಪಿದ್ದಾರೆ. ದಿ ರಾಜಾಜಿನಗರ ಪೆಡಲ್ ಪವರ್ ತಂಡದ ಮೂಲಕ ಮೂರು ದಿನಗಳ ಸೈಕಲ್ ಯಾತ್ರೆ ಹಮ್ಮಿಕೊಂಡಿದ್ದರು. ಎಂಟು ಜನ ಸಹ ಸವಾರರ ಜೊತೆ ತೆರಳಲಾಗಿತ್ತು. https://ainlivenews.com/2-thousand-additional-special-transport-system-by-ksrtc/ ಈ ಬಗ್ಗೆ ಸ್ವತಃ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಂತಸ ಹಂಚಿಕೊಂಡಿದ್ದಾರೆ. 2014ರಲ್ಲಿ ನಾನು ಗೆಳೆಯರ ಜೊತೆ ಪಾದಯಾತ್ರೆ ಮಾಡಿಕೊಂಡಿದ್ದನ್ನು ಮೆಲುಕು ಹಾಕಿದ್ದಾರೆ. ಆಗ ಎಂಟು ದಿನಗಳ ಯಾತ್ರೆ ಮಾಡಿದ್ದೆವು ಎಂದು ಇದರ ಬಗ್ಗೆ ಬರೆದುಕೊಂಡಿದ್ದಾರೆ. ಹಾಗೆ ಪ್ರಯಾಣದ ವೇಳೆ ಸಹಾಯ ಮಾಡಿ ಆತಿಥ್ಯ ನೀಡಿದ ಎಲ್ಲರಿಗೂ ಸಹ ನನ್ನ ಧನ್ಯವಾದಗಳು ಎಂದು ಹೇಳಿಕೊಂಡಿದ್ದಾರೆ.
ರಾಮನಗರ: ಬಿಡದಿ ಭಾಗದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಉದ್ಯೋಗ ಮಾಡುತ್ತಿದ್ದಾರೆ. ಅವರ ಓಡಾಟಕ್ಕೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಬಿಡದಿಗೆ ಮೆಟ್ರೋ ಘೋಷಣೆ ಮಾಡಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೆ ಬಿಡದಿ ಸ್ಮಾರ್ಟ್ ಸಿಟಿಗಾಗಿ ಹತ್ತು ಸಾವಿರ ಎಕರೆ ಜಾಗ ವಶ ಪಡಿಸಿಕೊಳ್ಳಲಾಗಿತ್ತು. ಅದು ಹಾಗೇಯೆ ಉಳಿದುಕೊಂಡಿದೆ. ಹೀಗಾಗಿ ಗ್ರೇಟರ್ ಬೆಂಗಳೂರು ಡೆವಲಪ್ಮೆಂಟ್ ಪ್ಲ್ಯಾನಿಂಗ್ ಅಥಾರಿಟಿಯನ್ನಾಗಿ ಬಿಡದಿಯನ್ನು ಘೋಷಿಸಲಾಗಿದೆ ಎಂದರು. ಎಲ್ಲರಿಗು ಶಕ್ತಿ ತುಂಬುವ ದೃಷ್ಟಿಯಿಂದ ಈ ಘೋಷಣೆಗಳನ್ನು ಮಾಡಲಾಗುತ್ತಿದೆ. ಸ್ಥಳೀಯರಿಗೆ ಉದ್ಯೋಗಕ್ಕಾಗಿ ಪ್ರತ್ಯೇಕ ಸಭೆ ನಡೆಸಿ, ಎಲ್ಲ ಕಾರ್ಖಾನೆಗಳ ಬಳಿ ಮನವಿ ಮಾಡಲಾಗುವುದು. ನಾವೆಲ್ಲ ಬೆಂಗಳೂರಿನವರು. ನಮ್ಮ ಮೂಲ ಹೆಸರನ್ನು ನಾವು ಕೆಳದುಕೊಳ್ಳುವುದಿಲ್ಲ. ಹೀಗಾಗಿ ಬೆಂಗಳೂರು ದಕ್ಷಿಣವನ್ನಾಗಿ ಜಿಲ್ಲೆಯ ಹೆಸರು ಬದಲಿಸಲು ಜನರಿಂದ ಅಭಿಪ್ರಾಯ ಕೇಳಲಾಗುತ್ತಿದೆ. ಬಳಿಕ ಸರಕಾರದ ಮುಂದಿಟ್ಟು ಬದಲಾವಣೆ ಕ್ರಮ ಕೈಗೊಳ್ಳಲಾಗುವುದು. ಸಿಬಿಐ ಅರ್ಜಿ ವಜಾ ಆಗಿದ್ಯಾ? ನನಗೆ ಗೊತ್ತಿಲ್ಲ. ಏಕೆ? ಈಗ ಇಲ್ಲಿದ್ದೆನೆ. ವಿಚಾರಿಸಿ ಮಾತನಾಡುತ್ತೆನೆ ಎಂದು ಹೈಕೋರ್ಟ್ ನಲ್ಲಿ ಅರ್ಜಿ…