Author: AIN Author

ಧಾರವಾಡ : ಪ್ರಾಯೋಗಿಕವಾಗಿ ಉರ್ದು ಭಾಷೆಯನ್ನು ಅಧ್ಯಯನ ಮಾಡುವ ಮೂಲಕ, ಪ್ರತಿಯೊಬ್ಬರೂ ಉರ್ದು ಭಾಷೆಯ ಅಭಿವೃದ್ಧಿಗೆ ಪ್ರಯತ್ನಿಸಬೇಕು ಎಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಿರಿಯ ಪತ್ರಕರ್ತ ರಫೀಕ್ ಅಹ್ಮದ್ ಎಂ ಭಂಡಾರಿ ತಿಳಿಸಿದರು. ಧಾರವಾಡ ನಗರದ ಅಂಜುಮನ್ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕವಿ ಅಲ್ಲಾಮ ಇಕ್ಬಾಲ್ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಚಾರಕ್ಕಾಗಿ ಪೊಳ್ಳು ಹಕ್ಕುಗಳ ಬದಲಿಗೆ, ಪ್ರಾಯೋಗಿಕ ಕ್ರಮಗಳ ಅಗತ್ಯವನ್ನು ಒತ್ತಿ ಹೇಳಿ. ಉರ್ದುವಿನಿಂದ ಸಾಕಷ್ಟು ಜನ ಸಂಪಾದಿಸುತ್ತಿದ್ದಾರೆ. ಅವರು ಉರ್ದು ಭಾಷೆಯ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು. ಉರ್ದು ಭಾಷೆಯ ವಿದ್ಯಾರ್ಥಿಗಳು ಪತ್ರಿಕೋದ್ಯಮ ವಿಷಯವನ್ನು ಅತಿಹೆಚ್ಚು ತೆಗೆದುಕೊಂಡು ಅಧ್ಯಯನ ಮಾಡಬೇಕು ಎಂದರು. ಅಲ್ಲಮ ಇಕ್ಬಾಲ್ ಒಬ್ಬ ಶ್ರೇಷ್ಠ ಉರ್ದು ಕವಿ ಮತ್ತು ಚಿಂತಕ. ಅವರು ತಮ್ಮ ಸ್ವಯಂ ಪರಿಕಲ್ಪನೆಯ ಮೂಲಕ ಯುವಜನತೆಗೆ ಹೊಸ ಜೀವನವನ್ನು ನೀಡಿದರು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಮಾತನಾಡಿದ, ನಿವೃತ್ತ ಉರ್ದು ವಿಭಾಗದ ಮುಖ್ಯಸ್ಥ ಡಾ.ಖಾದೀರ್ ಸರಗಿರೋ ಮಾತನಾಡಿ, ಈ ಭಾಷೆ…

Read More

ದೊಡ್ಡಬಳ್ಳಾಪುರ: ಹ್ಯಾಂಡ್ ಬಾಲ್ ಗೇಮ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಸ್ಕೂಲ್ ಗೇಮ್ಸ್ ಪೆಢರೇಷನ್ ಆಪ್ ಇಂಡಿಯಾಗೆ ಪ್ರೇರಣಾ ಯಾದವ್.C ಆಯ್ಕೆ ಆಗುವ ಮೂಲಕ ಸಾಧನೆ ಮಾಡಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ BS. ಚಂದ್ರಶೇಖರ್ ಪುತ್ರಿಯಾದ ಇವರು ಯಲಹಂಕ CRPF ಕೇಂದ್ರಿಯ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಅಕ್ಟೋಬರ್ 2023-24 ಸಾಲಿನಲ್ಲಿ 17 ವರ್ಷದ ಒಳಗಿನ ಬಾಲಕಿಯರ ವಿಭಾಗದಿಂಸ 52 ನೇ KV ನ್ಯಾಷನಲ್ ಮತ್ತು ರೀಜನಲ್ ಸ್ಪೋರ್ಟ್ಸ್ ಮೀಟ್ ನಲ್ಲಿ ಪ್ರೇರಣಾ ಯಾದವ್ ಭಾಗವಹಿಸಿ ಹ್ಯಾಂಡ್ ಬಾಲ್ ಗೇಮ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರಿಂದ SGFI ಗೆ ಆಯ್ಕೆ ಯಾಗಿದ್ದಾರೆ.. ದೆಶದ ಎಲ್ಲಾ ರಾಜ್ಯಗಳಿಂದ 17 ವರ್ಷದ ಒಳಗಿನ ಬಾಲಕಿಯರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕರ್ನಾಟಕದಿಂದ ಕೂಡ ಹಲವು ವಿಧ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಪ್ರೇರಣಾ ಯಾದವ್ ಉತ್ತಮ ಪ್ರದರ್ಶನ ನೀಡಿ ಕೀರ್ತಿ ತಂದಿದ್ದಾರೆ..

Read More

ಹುಬ್ಬಳ್ಳಿ; ಖ್ಯಾತ ನಟ ದಿ.ಶಂಕರನಾಗ್ ಅವರ ಹುಟ್ಟು ಹಬ್ಬದ ಅಂಗವಾಗಿ ನವೆಂಬರ್ ನವೆಂಬರ್ 9 ರಂದು ಅಟೋ ಚಾಲಕರ ದಿನಾಚರಣೆ ಆಚರಿಸಲು ಸರಕಾರ ಘೋಷಣೆ ಮಾಡಬೇಕು ಎಂದು ಉತ್ತರ ಕರ್ನಾಟಕ ಅಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯಾ ಮಠಪತಿ ಒತ್ತಾಯ ಮಾಡಿದರು. ನಗರದ ಚೆನ್ನಮ್ಮ ಸರ್ಕಲ್ ಬಳಿ ಉತ್ತರ ಕರ್ನಾಟಕ ಅಟೋ ಚಾಲಕರ ಸಂಘ ಹಾಗೂ ಹುಬ್ಬಳ್ಳಿ ಅಟೋ ಚಾಲಕರ ಮಾಲೀಕರ ಸಂಘದ ವತಿಯಿಂದ ಖ್ಯಾತ ನಟರಾಗಿದ್ದ ದಿವಂಗತ ಅಟೋ ರಾಜ್ ಶಂಕರ್ ನಾಗ್ ಅವರ ಹುಟ್ಟು ಹಬ್ಬ ಅದ್ದೂರಿಯಾಗಿ ಆಯೋಜನೆ ಮಾಡಿದ ಸಂದರ್ಭದಲ್ಲಿ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ನಟ ಶಂಕರ್ ನಾಗ್ ಕೇವಲ ನಟರು ಆಗಿದ್ದಿಲ್ಲ. ಅವರ ನಟನೆ ಮೂಲಕ ಸಮಾಜದಲ್ಲಿನ ವಿವಿಧ ವರ್ಗಗಳ ನೋವು ನಲಿವುಗಳಿಗೆ ಸ್ಪಂದಿನೆ ಮಾಡುತಿದ್ದರು. ಇಂದು ಪೊಲೀಸ್ ಇಲಾಖೆ ಹಾಗೂ ಅಟೋ ಚಾಲಕರು ಇಷ್ಟೊಂದು ಉತ್ಸಾಹ ಹಾಗೂ ಧೈರ್ಯದಿಂದ ಕೆಲಸ ಮಾಡಬೇಕು ಎಂದರೆ ಅವರ ಕೊಟ್ಟ ಸಂದೇಶದಿಂದ ಎಂದರು. ಆದ್ದರಿಂದ ಸರ್ಕಾರ ಕೂಡಲೇ…

Read More

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಧಾರಕಾರ ಮಳೆ ಹಳ್ಳದಂತದ ರಸ್ತೆಗಳು ಮಹಾನಗರ ಪಾಲಿಕೆ ವಿರುದ್ದ ಜನರ ಆಕ್ರೋಶ… ಸಿಲಿಕಾನ್ ಸಿಟಿ ಬೆಂಗಳೂರಿನ ಸಹಕಾರ ನಗರ ಯಲಹಂಕ ಕೋಗಿಲು ಕ್ರಾಸ್ ಬಳಿ ಧಾರಕಾರ ಮಳೆ ಸುರಿದಿದ್ದು ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಆವಾಂತರ ಸೃಷ್ಟಿಸಿದೆ. ಇಲ್ಲಿನ ಪ್ರಮುಖ ರಸ್ತೆಗಳೆಲ್ಲವು ಹಳ್ಳಗಳಂತಗಿದ್ದು ಜನರು ರಸ್ತೆಯಲ್ಲಿ ಓಡಾಡಲು ಪರದಾಡುವ ಪರಿಸ್ಥಿತಿ ಉಂಟಾಗಿತ್ತು,.. ಇನ್ನೂ ಸರಿಯಾದ ಸಮಯದಲ್ಲಿ ಬಿಬಿಎಂಪಿ ಆಧಿಕಾರಿಗಳು ಬಂದು ಕಾರ್ಯನಿರ್ವಯಿಸದಿದ್ದರಿಂದ ಜನರು ನಡುರಸ್ತೆಯಲ್ಲಿ‌ ಸಿಲುಕಿಕೊಂಢು ಪರದಾಡುವ ಪರಿಸ್ಥಿತಿ ಉಂಟಾಯಿತು ರಸ್ತೆ ಕಾಣದೆ ಕಪೌಂಡ್ ಜಿಗಿದು ರಸ್ತೆ ದಾಟುವ ಪರಿಸ್ಥಿತಿ ಉಂಟಾಗಿತ್ತು ಅಂತ ಪಾಲಿಕೆ ಆಧಿಕಾರಿಗಳ ವಿರುದ್ದು ಜನರು ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ರಾಜಕಾಲುವೆ ಒತ್ತುವರಿ ತೆರವು ಮಾಡಿದ್ದಾರೆ ಈ ಪರಿಸ್ಥಿತಿ ನಮಗೆ ಬರುತ್ತಿರಲಿಲ್ಲ, ಪ್ರತಿ ಭಾರಿ ಚುನಾವಣೆ ಸಂದರ್ಭದಲ್ಲಿ ಇಲ್ಲಿನ ಸ್ಥಳಿಯ ಶಾಸಕರು ಸಮಸ್ಯೆ ಬಗೆಹರಿಸುವುದಾಗಿ ಆಶ್ವಾಸನೆ ನೀಡುತ್ತಾರೆ ಅದರೆ ಚುನಾವಣೆ ಮುಗಿದ ಮೇಲೆ ಈ ಕಡೆ ತಲೆನೂ ಹಾಕುವುದಿಲ್ಲ ಈ ಕೊಡುಲೇ…

Read More

ಬೆಂಗಳೂರು: ಕರ್ನಾಟಕ ಸೇರಿ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯ ಇಳಿಕೆ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ: 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,100 ರೂ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,200 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,100 ರೂ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,200 ರೂ ಬೆಳ್ಳಿ ಬೆಲೆ 10…

Read More

ಬೆಂಗಳೂರು: ತೆಲಂಗಾಣ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಮತಬೇಟೆ ನಡೆಸಲಿದ್ದಾರೆ. ಪಂಚ ರಾಜ್ಯ ವಿಧಾನಸಭೆ ಚುನಾವಣಾ (Assembly election 2023) ಪ್ರಚಾರ ಕಣಕ್ಕೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಎಂಟ್ರಿ ಕೊಟ್ಟಿದ್ದಾರೆ. ಇಂದು ತೆಲಂಗಾಣದಲ್ಲಿ ʼಗ್ಯಾರಂಟಿ ಸಿಎಂ ಸಿದ್ದರಾಮಯ್ಯʼ ಅವರ ಚುನಾವಣಾ ಪ್ರಚಾರ (Telangana assembly election) ಆರಂಭವಾಗಲಿದೆ. ಈ ತಿಂಗಳಲ್ಲಿ ಸಾಧ್ಯವಾದಷ್ಟು ರಾಜ್ಯಗಳ ಚುನಾವಣಾ ಪ್ರಚಾರದಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಅದರಲ್ಲೂ ಛತ್ತೀಸ್‌ಗಢ ಮತ್ತು ರಾಜಸ್ಥಾನಗಳಲ್ಲಿ ಒಬಿಸಿ ಮತಗಳು ಹೆಚ್ಚು ಇರುವುದರಿಂದ ಸಿಎಂಗೆ ಪ್ರಚಾರಕ್ಕೆ ಆಹ್ವಾನ ನೀಡಲಾಗಿದೆ. ಈಗಾಗಲೇ ಮಿಜೋರಾಂನಲ್ಲಿ ಮತದಾನ ಮುಗಿದಿದ್ದು, ಇನ್ನುಳಿದ ನಾಲ್ಕು ರಾಜ್ಯಗಳಲ್ಲಿ ಪ್ರಚಾರ ನಡೆಯುತ್ತಿದೆ. ಬೆಳಿಗ್ಗೆ 11.30ಗಂಟೆಗೆ ಸಿದ್ದರಾಮಯ್ಯ ಬೆಂಗಳೂರಿನಿಂದ ಹೈದರಾಬಾದ್‌ಗೆ ಹೊರಡಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಕಾಮರೆಡ್ಡಿ ಜಿಲ್ಲೆಗೆ ತೆರಳುವರು. ಕಾಮರೆಡ್ಡಿ ನಗರದಲ್ಲಿ 2 ಗಂಟೆಗೆ ಬೃಹತ್ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮತಯಾಚಿಸುವರು. ಸಂಜೆ 6.30ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ.

Read More

ಕೊಪ್ಪಳ: ‘ಲೋಕಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ, ಜೆಡಿಎಸ್ನ 12 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ‘ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು. ನಗರದಲ್ಲಿ ಲೋಕಸಭೆ ಚುನಾವಣೆ ನಿಮಿತ್ತ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಭೆ ವೇಳೆ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಹಾಗೂ ಜೆಡಿಎಸ್ ನೀತಿಗಳಿಂದ ಕೆಲವು ಶಾಸಕರು ಬೇಸತ್ತಿದ್ದಾರೆ.ಚುನಾವಣೆ ಸಮಯದಲ್ಲಿ ಅವರೆಲ್ಲರೂ ಕಾಂಗ್ರೆಸ್ಗೆ ಬರುವುದಾಗಿ ತಿಳಿಸಿದ್ದಾರೆ’ ಎಂದರು. https://ainlivenews.com/knee-pain-treatment-joint-pain-treatment/ ‘ಬರ ಎದುರಿಸಲು ರಾಜ್ಯ ಸರಕಾರದಿಂದ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಎಸ್ಡಿಆರ್ಎಫ್ನಿಂದ ಕೊಡಬೇಕಾದದ್ದನ್ನು ಕೊಡುತ್ತಿದ್ದೇವೆ. ಆದರೆ, ಕೇಂದ್ರದಿಂದ ಪರಿಹಾರ ಬರುತ್ತಿಲ್ಲ. ಅವರು ರಾಜಕಾರಣ ಮಾಡುತ್ತಿದ್ದಾರೆ. ಈ ಕುರಿತು ನಳಿನ್ ಕುಮಾರ್ ಕಟೀಲ್ ಮಾತನಾಡುವುದು ಬಿಟ್ಟು ಪರಿಹಾರ ಕೊಡಿಸಲಿ’ ಎಂದು ಹೇಳಿದರು.

Read More

ಈಗಾಗಲೇ ಹಲವಾರು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ, ಉತ್ತರ ಕರ್ನಾಟಕದಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದ ‘ರುದ್ರಿ’ ಸಿನಿಮಾ ಇಂದು ಬಿಡುಗಡೆ ಆಗುತ್ತಿದೆ. ನೇರವಾಗಿ ‘ನಮ್ಮ ಫ್ಲಿಕ್ಸ್ ಕನ್ನಡದ ಓಟಿಟಿ ಆಪ್’ (NAMMAFLIX) ನಲ್ಲಿ ಬಿಡುಗಡೆ ಮಾಡುತ್ತಿರುವುದಾಗಿ ಚಿತ್ರತಂಡ ತಿಳಿಸಿದೆ. ಗೊಂಬೆಗಳ ಲವ್ ಖ್ಯಾತಿಯ ಪಾವನಾ ಈ ಸಿನಿಮಾದಲ್ಲಿ ಪ್ರಧಾನ ಪಾತ್ರ ಮಾಡಿದ್ದು, ಬಡಿಗೇರ ದೇವೇಂದ್ರ ನಿರ್ದೇಶನದಲ್ಲಿ ಚಿತ್ರ ಮೂಡಿ ಬಂದಿದೆ. ಈಗಾಗಲೇ ಠಾಗೋರ್ ಅಂತಾರಾಷ್ಟ್ರೀಯ ಚಿತ್ರೋತ್ಸವ ಸೇರಿದಂತೆ ದೇಶ ವಿದೇಶಗಳ ಚಿತ್ರೋತ್ಸವದಲ್ಲಿ ರುದ್ರಿ ಭಾಗಿಯಾಗಿದೆ. ಅಲ್ಲಿ ಪ್ರದರ್ಶನ ಕಂಡಿದೆ. ಹಲವಾರು ಪ್ರಶಸ್ತಿಗಳನ್ನೂ ಬಾಚಿಕೊಂಡಿದೆ. ರುದ್ರಿ ಸಿನಿಮಾ 90ರ ದಶಕದ ಕಥೆ. ಆ ಕಾಲದಲ್ಲಿ ಇನ್ನೂ ಮಹಿಳೆಯರಿಗೆ ತಮ್ಮ ಮೇಲಿನ ದೌರ್ಜನ್ಯವನ್ನು ಹೇಳಿಕೊಳ್ಳುವಂತಹ ಧೈರ್ಯವಿರಲಿಲ್ಲ. ಅಂತಹ ಮಹಿಳೆಯೊಬ್ಬರ ಶೋಷಣೆಯ ಕಥೆಯನ್ನು ರುದ್ರಿ ಮೂಲಕ ಹೇಳಲು ಹೊರಟಿದ್ದಾರೆ ನಿರ್ದೇಶಕರು. ಸಿ.ಆರ್. ಮಂಜುನಾಥ್ ಅವರ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಸಾಧೂ ಕೋಕಿಲಾ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಅನನ್ಯ ಭಟ್ ಅವರು ಹಾಡಿಗೆ…

Read More

ಮಲಯಾಳಂ (Malayalam) ಖ್ಯಾತ ನಟ ಹಾಗೂ ಮಿಮಿಕ್ರಿ ಕಲಾವಿದ ಕಲಾಭವನ್ ಹನೀಫ್ (Kalabhavan Hanif) ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಇಹಲೋಕ ತ್ಯಜಿಸಿದ್ದಾರೆ. ವಾರದಿಂದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಪತ್ನಿ ವಹಿದಾ ತಿಳಿಸಿದ್ದಾರೆ. ಮಲಯಾಳಂ ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಮಿಮಿಕ್ರಿ ಕಲೆಯ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅವರು ಹೊಂದಿದ್ದರು. ಇವರಿಗೆ ಸಿತಾರಾ ಮತ್ತು ಶಾರುಖ್ ಇಬ್ಬರು ಮಕ್ಕಳಿದ್ದಾರೆ. ಈವರೆಗೂ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಕಲಾಭವನ್ ‘ಚೆಪ್ಪುಕಿಲುಕ್ಕಣ್ಣ ಚನಗತಿ’ ಸಿನಿಮಾದ ಮೂಲಕ 1991ರಲ್ಲಿ ಸಿನಿಮಾ ರಂಗ ಪ್ರವೇಶ ಮಾಡಿದ್ದರು. ಮೊದ ಮೊದಲು ರಂಗಭೂಮಿಯಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ನಂತರ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದರು.

Read More

ಮಾಲ್ಡೀವ್ಸ್: ಮಾಲ್ಡೀವ್ಸ್ ದೇಶವು ತನ್ನ ದೇಶದಲ್ಲಿ ಭಾರತದ ಮಿಲಿಟರಿ ಉಪಸ್ಥಿತಿಯನ್ನು ತೆಗೆದುಹಾಕುವ ನಿಟ್ಟಿನಲ್ಲಿ ಮಾತುಕತೆಗಳನ್ನು ಪ್ರಾರಂಭಿಸಿದೆ ಎಂದು ಅಧ್ಯಕ್ಷ-ಚುನಾಯಿತ ಮೊಹಮ್ಮದ್ ಮುಯಿಝು ಬ್ಲೂಮ್‌ಬರ್ಗ್ ನ್ಯೂಸ್ ಪ್ರಕಟಿಸಿದ ಸಂದರ್ಶನದಲ್ಲಿ ಹೇಳಿದ್ದಾರೆ. ಭಾರತ ಹಾಗೂ ಚೀನಾ ಎರಡೂ ದೇಶಗಳು ಈ ದೇಶದಲ್ಲಿ ತನ್ನ ಪ್ರಭಾವವನ್ನು ಸಾಧಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದೆ. ಕಳೆದ ತಿಂಗಳು ಅಧ್ಯಕ್ಷ ಇಬ್ರಾಹಿಂ ಸೋಲಿಹ್ ಅವರನ್ನು ಅಧ್ಯಕ್ಷ ಸ್ಥಾನದ ಚುನಾವಣೆಲ್ಲಿ ಸೋಲಿಸಿದ ಬಳಿಕ ತಮ್ಮ ಚುನಾವಣೆ ಭರವಸೆಗಳಲ್ಲಿ ಪ್ರಮುಖವಾಗಿ ಘೋಷಣೆ ಮಾಡಲಾದ ವಿಚಾರದಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ಹಾಗೇನಾದರೂ ತಾವು ಅಧ್ಯಕ್ಷರಾದಲ್ಲಿ ಭಾರತದ ಸೇನಾಪಡೆಗಳನ್ನು ಮಾಲ್ಡೀವ್ಸ್‌ನಿಂದ ಹೊರಹಾಕುವುದಾಗಿ ಅವರು ಭರವಸೆ ನೀಡಿದ್ದರು. ಸುಮಾರು 70 ಭಾರತೀಯ ಸೇನಾ ಸಿಬ್ಬಂದಿಗಳು ಭಾರತ ಸರ್ಕಾರದ  ಪ್ರಾಯೋಜಿತ ರಾಡಾರ್ ಕೇಂದ್ರಗಳು ಮತ್ತು ಕಣ್ಗಾವಲು ವಿಮಾನಗಳನ್ನು ನಿರ್ವಹಿಸುತ್ತಿದ್ದಾರೆ. ಭಾರತೀಯ ಯುದ್ಧನೌಕೆಗಳು ಮಾಲ್ಡೀವ್ಸ್‌ನ ವಿಶೇಷ ಆರ್ಥಿಕ ವಲಯದಲ್ಲಿ ಗಸ್ತು ತಿರುಗಲು ಸಹಾಯ ಮಾಡುತ್ತವೆ. https://ainlivenews.com/knee-pain-treatment-joint-pain-treatment/  ಮುಯಿಝು ಸಂದರ್ಶನದಲ್ಲಿ ತನ್ನ ಮಿಲಿಟರಿ ಉಪಸ್ಥಿತಿಯನ್ನು ತೆಗೆದುಹಾಕುವ ಬಗ್ಗೆ ಭಾರತ ಸರ್ಕಾರದೊಂದಿಗೆ ಮಾತುಕತೆ ಗಳನ್ನುಈಗಾಗಲೇ ಪ್ರಾರಂಭ…

Read More