ಕೋಲಾರ: ಅಪ್ರಾಪ್ತ ಬಾಲಕ ಕಾರ್ತಿಕ್ ಸಿಂಗ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿರುವಂತಹ ಘಟನೆ ಮುಳಬಾಗಿಲು ತಾಲೂಕಿನ ದೇವರಾಯಸಮುದ್ರ ಗ್ರಾಮದ ಬಳಿ ನಡೆದಿದೆ. ಆರೋಪಿಗಳನ್ನು ಬಂಧಿಸುವ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದಾಗ ಮುಳಬಾಗಿಲು ಸಬ್ಇನ್ಪೆಕ್ಟರ್ ವಿಠಲ್ ತಳವಾರ್ ಅವರಿಂದ ಆರೋಪಿಗಳ ಎರಡೂ ಕಾಲುಗಳಿಗೆ ಫೈರಿಂಗ್ ಮಾಡಿದ್ದಾರೆ. ಹಲ್ಲೆ ನಡೆಸಿದ್ದರಿಂದ ಪಿಎಸ್ಐ, ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು, ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
Author: AIN Author
ಹುಬ್ಬಳ್ಳಿ : ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಣ್ಣಪ್ಪಿಸಿ ತಿರುಗುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಬಕಾರಿ ಪ್ರಕರಣದಲ್ಲಿ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಹಾಗೂ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯ ಜನತಾ ಬಜಾರ ಬಳಿಯ ಚಾಂಗದೇವ ಮಹಾರಾಜ ಗುಡಿ ಹತ್ತಿರ ಮುಕುಂದಪ್ಪ ನಾರಾಯಣ ಓತಾಲಿ (ಹೊರಾಲಿ) ಎಂಬಾತನನ್ನು ಬಂಧಿಸಲಾಗಿದೆ. ಮತ್ತೋರ್ವ ಮಹಿಳೆ ಬಂಧನ 2010 ರಲ್ಲಿ ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ತನ್ನ ನಾಲ್ಕು ವರ್ಷದ ಮೊಮ್ಮಗಳನ್ನು ಬಸ್ ಹತ್ತಿಸಿ ಬಿಟ್ಟು ಹೋಗಿದ್ದ ಗದಗ- ಬೆಟಗೇರಿ ನಿವಾಸಿ ಖಾಸಿಬಾಯಿ ಮುತಗಾರ ಎಂಬಾಕೆಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗದಗ- ಬೆಟಗೇರಿ ನಿವಾಸಿ ಖಾಸಿಬಾಯಿ ಚನ್ನಾಪೂರ ಗ್ರಾಮದ ಬಸ್ ನಿಲ್ದಾಣದಲ್ಲಿ ತನ್ನ 4 ವರ್ಷದ ಮೊಮ್ಮಗಳನ್ನು ದುರುದ್ದೇಶದಿಂದ ಬಸ್ಸಿನಲ್ಲಿ ಹತ್ತಿಸಿ ಬಿಟ್ಟು ಹೋಗಿದ್ದಳು. ನಂತರ ಈ ಪ್ರಕರಣದ ವಿಚಾರಣಾ ಅವಧಿಯಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಪರಾರಿಯಾಗಿದ್ದಳು. ಪೊಲೀಸರ ಕಣ್ಣಪ್ಪಿಸಿ ಅಡ್ಡಾಡುತ್ತಿದ್ದ ಮಹಿಳೆಯ ಪತ್ತೆಗೆ ಒಂದು ವಿಶೇಷ ತಂಡ…
ಬೆಂಗಳೂರು: ನವೆಂಬರ್ 9 ರಂದು ಅರಮನೆ ಮೈದಾನದಲ್ಲಿ ಸೇವಾದಳದ ಶತಮಾನೋತ್ಸವ (Seva Dal Centenary) ಹಾಗೂ ರಾಜ್ಯ ಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ (Saleem Ahmed) ಹೇಳಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸೇವಾದಳದ ಅಧ್ಯಕ್ಷರಾದ ಲಾಲ್ ಜಿ ಧ್ವಜಾರೋಹಣ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಸಚಿವರು, ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಇದೇ ತಿಂಗಳ 28 ರಂದು ಸೇವಾದಳ 100 ವರ್ಷಗಳನ್ನು ಪೂರೈಸಲಿದ್ದು, ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲೂ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆ ಮೂಲಕ ಸೇವಾದಳದ ಇತಿಹಾಸದ ಬಗ್ಗೆ ದೇಶಕ್ಕೆ ಸಂದೇಶ ರವಾನಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಸೇವಾದಳದ 3 ಸಾವಿರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಸೇವಾದಳ ಯಾವ ರೀತಿ ಕೆಲಸ ಮಾಡಬೇಕು, ಲೋಕಸಭೆ ಚುನಾವಣೆ ಹಾಗೂ ಪಕ್ಷ ಸಂಘಟನೆ…
ತುಮಕೂರು: ಕೋಟ್ಯಾಂತರ ರೂ ಮೌಲ್ಯದ ಜಾಗ್ವಾರ್ ಕಾರಿಗೆ ಬೆಂಕಿ ಬಿದ್ದರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ. ಮದುವೆಗೆಂದು ಕುಣಿಗಲ್ ನ ನಕ್ಷತ್ರ ಪ್ಯಾಲೇಸ್ ಕಲ್ಯಾಣ ಮಂಟಪಕ್ಕೆ ಬಂದಿದ್ದ ಕಾರು ಆಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಾಮಕದಳದಿಂದ ಬೆಂಕಿನಂದಿಸುವ ಕಾರ್ಯ ನಡೆದಿದ್ದು, ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು : ಧಾರವಾಡಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಗ ರಕ್ಷಕರು ಶೂ ಹಾಕಿದ್ದಾರೆಂಬ ಸಂಗತಿಯು ವಿವಾದದ ಸ್ವರೂಪ ಪಡೆದಿರುವುದು ದುರದೃಷ್ಟಕರ ಬೆಳವಣಿಗೆ ಎಂದು ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಶಾಸಕ ಯತ್ನಾಳ್ ಅವರೇ, ಮಾನವೀಯ ಸಹಾಯದ ವಿಷಯದಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ. ನಿಮ್ಮ ಈ ರೋಷಾವೇಷವನ್ನು, ನಿಮ್ಮ ಹೈಕಮಾಂಡ್ ಮುಂದೆ ರಾಜ್ಯಕ್ಕೊಬ್ಬ ವಿಪಕ್ಷೀಯ ನಾಯಕನ ಸ್ಥಾನವನ್ನು ಆರಿಸುವುದಕ್ಕಾಗಿ ಬಳಸಿಕೊಳ್ಳಿ. ಇಲ್ಲವೇ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲನ್ನು ಕೇಳುವುದಕ್ಕಾದರೂ ಬಳಸಿ. ಸುಮ್ಮನೇ ಕಾಲಹರಣ ಮಾಡಬೇಡಿ ಎಂದು ಕುಟುಕಿದ್ದಾರೆ. ವೈಯಕ್ತಿಕವಾಗಿ ವ್ಯಕ್ತಿ ಗೌರವ ಮತ್ತು ಘನತೆಯಲ್ಲಿ ನಂಬಿಕೆ ಇಟ್ಟಿರುವ ನನಗೆ ಒಬ್ಬರಿಂದ ಶೂ ಹಾಕಿಸಿಕೊಳ್ಳಬೇಕೆಂಬ ದರ್ಪದ ಇರಾದೆ ಇಲ್ಲ. ಆದರೆ, ಹಿಂದೆ Hip joint knee ತೊಂದರೆ ಸಿಲುಕಿ ಶಸ್ತ್ರಚಿಕಿತ್ಸೆಗೆ ಒಳಗಾದ ಸಂದರ್ಭದಿಂದ ಬಾಗುವುದು ಕಷ್ಟವಾಗಿದ್ದ ಕಾರಣ ನಮ್ಮ ಆತ್ಮೀಯ ವಲಯದಿಂದ ಸಹಾಯ…
ತುಮಕೂರು: ಕ್ರೂಸರ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ತುಮಕೂರು ತಾಲೂಕಿನ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಗಂಗಾವತಿ ಮೂಲದ ಶಂಕರ್(35), ಸತೀಶ್(40) ಮೃತರು. ಅಪಘಾತದಲ್ಲಿ ಮತ್ತೋರ್ವನಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕರಿಗೆ ಕಮಿಷನ್ ಹಣ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಕೋರ ಸಮೀಪ ಕ್ರೂಸರ್ ಕಾರಿನ ಹಿಂಬದಿಯ ಟೈಯರ್ ಪಂಚ್ಚರ್ ಆಗಿತ್ತು. ಹೀಗಾಗಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಟೈಯರ್ ಬದಲಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಕಾರಣನಾದ ಲಾರಿ ಚಾಲಕ ಸ್ಥಳದಿಂದ ಪರಾರಿ ಆಗಿದ್ದಾನೆ. ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಗದಗ: ಸರಿಯಾದ ಸಮಯಕ್ಕೆ ಬಸ್ ಗಳಿಲ್ಲದೇ ತರಗತಿಗಳಿಂದ ವಿದ್ಯಾರ್ಥಿಗಳು ವಂಚಿತರಾಗ್ತಿದ್ದಾರೆ. ಹೌದು ಗದಗ ತಾಲೂಕಿನ ಚಿಕ್ಕಹಂದಿಗೋಳ ಗ್ರಾಮದಲ್ಲಿ ಶಾಲಾ ಕಾಲೇಜು ಸಮಯಕ್ಕೆ ಸರಿಯಾದ ಬಸ್ ಗಳಿಲ್ಲದೇ ವಿದ್ಯಾರ್ಥಿಗಳು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಸಮಯಕ್ಕೆ ಸರಿಯಾಗಿ ಬಸ್ ಗಳು ಬಾರದ್ರಿಂದ ಖಾಸಗಿ ವಾಹನಗಳಿಗೆ ದುಡ್ಡು ಕೊಟ್ಟು ಪ್ರಯಾಣಿಸೋ ಪರಿಸ್ಥಿತಿ ನಿರ್ಮಾಣವಾಗಿದೆ. ತಂದೆ ತಾಯಿ ದುಡಿದ ದುಡ್ಡನ್ನ ಕೊಟ್ಟು ಖಾಸಗಿ ವಾಹನಗಳಲ್ಲಿ ಓಡಾಡೋ ಪರಿಸ್ಥಿತಿ ಅಂತಾ ವಿದ್ಯಾರ್ಥಿಗಳ ಅಳಲು ತೊಡಿಕೊಂಡಿದ್ದಾರೆ. ಸೀಟ್ ಗಳು ಸಿಗದಿರೋ ಕಾರಣ ಬಸ್ ಗಳ ಬಾಗಿಲಲ್ಲಿ ನಿಂತು ಸಂಚರಿಸೋ ಪರಿಸ್ಥಿತಿಯಾಗಿದ್ದು, ಏನಾದ್ರೂ ಹೆಚ್ಚು ಕಡಿಮೆ ಆದರೆ ಯಾರು ಹೊಣೆ ಎಂದು ಶಾಲಾ ಕಾಲೇಜು ಸಮಯಕ್ಕೆ ಬಸ್ ಬಿಡುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ತುಮಕೂರು: ಜಿಲ್ಲೆಯ ಹಲವು ಕಡೆ ಬುಧವಾರ ಮಧ್ಯಾಹ್ನ ಸಿಡಿಲು ಹಾಗೂ ಭಾರಿ ಗಾಳಿ ಸಹಿತ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಹಾಗೂ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ಥಗೊಂಡಿತು. ಶಿರಾ ತಾಲ್ಲೂಕಿನಲ್ಲಿ ನಿನ್ನೆ ರಾತ್ರಿ ಅಬ್ಬರಿಸಿದ ಮಳೆಯಿಂದ ದ್ವಾರನ ಕುಂಟೆ ಗ್ರಾಮದಲ್ಲಿ ವಿದ್ಯುತ್ ಕಂಬ, ಬೃಹತ್ ಗಾತ್ರದ ಮರ ನೆಲಕ್ಕುರಳಿವೆ. ದ್ವಾರನ ಕುಂಟೆ ಗ್ರಾಮ ದಿಂದ ವಾಜರಹಳ್ಳಿಗೆ ಹೋಗುವ ರಸ್ತೆಯಲ್ಲಿ ಮರ ಹಾಗೂ ಕಂಬ ಉರುಳಿ ಬಿದ್ದಿದ್ದು, ಮಳೆ ಪರಿಣಾಮ ಸಂಚಾರ ದುಸ್ತರವಾಗಿದೆ.
ಬೆಂಗಳೂರು: ನವೆಂಬರ್ ಒಳಗೆ ಜಾತಿ ಜನಗಣತಿ ಬಿಡುಗಡೆ ಮಾಡದಿದ್ದರೆ ಸಿಎಂ ಸಿದ್ದರಾಮಯ್ಯಗೆ (Siddaramaiah) ಸಾಧು ಸಂತರ ಶಾಪ ತಟ್ಟುತ್ತದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೆಎಸ್ ಈಶ್ವರಪ್ಪ, ಹಿಂದುಳಿದ ವರ್ಗಗಳ ವರದಿ ನವೆಂಬರ್ ಒಳಗೆ ಬಿಡುಗಡೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ 1001ನೇ ಸಲ ಹೇಳಿದ್ದಾರೆ. ಹಿಂದುಳಿದ, ದಲಿತ ಮಠಾಧಿಪತಿಗಳ ಒಕ್ಕೂಟಕ್ಕೆ ನವೆಂಬರ್ನಲ್ಲಿ ಬಿಡುಗಡೆ ಮಾಡ್ತೀನಿ ಅಂತಾ ಸಿಎಂ ಹೇಳಿದ್ದಾರೆ ನವೆಂಬರ್ ಒಳಗೆ ಬಿಡುಗಡೆ ಮಾಡದಿದ್ದರೆ ಸಿದ್ದರಾಮಯ್ಯಗೆ ಸಾಧು ಸಂತರ ಶಾಪ ತಟ್ಟುತ್ತದೆ. ಈ ಸರ್ಕಾರ ಬಹಳ ದಿನ ಇರಲ್ಲ, ಹಾಳಾಗಿ ಹೋಗುತ್ತದೆ ಎಂದು ಕಿಡಿ ಕಾರಿದ್ದಾರೆ. ಕಾಂಗ್ರೆಸ್ನಲ್ಲಿ ನಾನೇ ಸಿಎಂ ಎಂದು ಹೇಳಿಕೊಳ್ಳುವವರ ಸಂಖ್ಯೆ ವೋಟರ್ ಲಿಸ್ಟ್ನಂತೆ ಬೆಳೆಯುತ್ತಿದೆ. ಮಾತೆತ್ತಿದರೆ ಕೇಂದ್ರ ಪರಿಹಾರ ಕೊಟ್ಟಿಲ್ಲ ಎನ್ನುತ್ತಾರೆ. ಕದ್ದು ತಮಿಳುನಾಡಿಗೆ ನೀರು ಬಿಟ್ರಲ್ಲ, ಆಗ ಇವರು ಪ್ರಧಾನಿಯವರನ್ನು ಕೇಳಿದ್ರಾ? ಸಿದ್ದರಾಮಯ್ಯ ಈಗ ಸಿಎಂ, ಇನ್ನೆಷ್ಟು ದಿನ ಸಿಎಂ ಸ್ಥಾನದಲ್ಲಿ ಇರ್ತಾರೋ ಗೊತ್ತಿಲ್ಲ. ರೈತರಿಗೆ ಪರಿಹಾರ…
ದೊಡ್ಡಬಳ್ಳಾಪುರ: ಅಂಗನವಾಡಿ ಕಟ್ಟಡ ಶೀಥಲಾವಸ್ಥೆ ಹಂತಕ್ಕೆ ತಲುಪಿದ್ದು, ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಾಣಕ್ಕೆ ಹಣ ಹಣ ಮಂಜೂರಾಗಿದ್ದರು ಸಹ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಶಿಥಿಲಾವಸ್ಥೆ ಹಂತಕ್ಕೆ ತಲುಪಿದ್ದು, ಕಳೆದ 4 ನಾಲ್ಕು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.15 ರಿಂದ 20 ಮಕ್ಕಳು ಅಂಗನವಾಡಿ ಕೇಂದ್ರದಲ್ಲಿದ್ದು ಬಾಡಿಗೆ ಕಟ್ಟಡದಲ್ಲಿ ಮಕ್ಕಳಿಗೆ ಬೇಕಾದ ಸೌಲಭ್ಯಗಳ ವ್ಯವಸ್ಥೆ ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣ ವಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ 2022 ರಲ್ಲಿ ಖನಿಜ ಪ್ರತಿಷ್ಠಾನ ನಿಧಿ ಯೋಜನೆಯಡಿ 10 ಲಕ್ಷ ಮತ್ತು ನರೇಗಾ ಯೋಜನೆಯಡಿ 05 ಲಕ್ಷ ಹಣ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಮಂಜೂರಾಗಿದೆ. ಆದರೆ ಮಂಜುರಾತಿಯಾಗಿ ವರ್ಷಗಳೆ ಕಳೆದರು ಸಂಭಂದಿಸಿದ ಅಧಿಕಾರಿಗಳು ಗಮನ ಅರಿಸದೆ ನಿರ್ಲಕ್ಷ್ಯ ತೋರಿದ್ದಾರೆ. ‘ಕಟ್ಟಡ ನೆಲಸಮ ಮಾಡುವಂತೆ ಗ್ರಾಮ ಪಂಚಾಯ್ತಿಗೆ ಆದೇಶ’ ಶೀಥಿಲಾವಸ್ಥೆ ಹಂತಕ್ಕೆ ತಲುಪಿರುವ ಅಂಗನವಾಡಿ ಕಟ್ಟಡವನ್ನು ನೆಲಸಮ ಮಾಡುವಂತೆ…