ಹುಬ್ಬಳ್ಳಿ; ತಾಲೂಕಿನ ಛಬ್ಬಿ ಜಿನ ಮಂದಿರದಲ್ಲಿ ಪೂಜಾ ಪಾಠ ಸಂಗ್ರಹ ಶಾಸ್ತ್ರ ಬಿಡುಗಡೆ ಕಾರ್ಯಕ್ರಮ ಸೋಮದೇವ ಬಯ್ಯಾಜಿಯವರು ಧರ್ಮ ಬಂಧುಗಳು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಬೈಯಾಜಿ ಯವರು ಮಾತನಾಡಿ ದೇವ ಗುರು ಶಾಸ್ತ್ರ ಇವುಗಳಲ್ಲಿ ಶಾಸ್ತ್ರದಾನ ಬಹಳ ಮಹತ್ವವಾಗಿರುತ್ತದೆ ಒಂದು ಶಾಸ್ತ್ರದಲ್ಲಿ ಒಂದೇ ತರ ಇರುತ್ತದೆ ಈಗ ಈ ಶಾಸ್ತ್ರದಲ್ಲಿ ಎಲ್ಲ ಶಾಸ್ತ್ರಗಳನ್ನು ಒಳಗೊಂಡಿರುತ್ತದೆ. ಎಲ್ಲಾ ಪೂಜ್ಯವಿಧಿ ವಿಧಾನಗಳು ಇದರಲ್ಲಿ ಇರುತ್ತವೆ ಕಾರಣ ತಾವುಗಳು ಈ ಶಾಸ್ತ್ರವನ್ನು ಪಡೆದು ಸ್ವದ್ಯಾಯ ಮಾಡಿ ವಿಧಿ ಪೂರ್ವಕ ಪೂಜಾ ಕಾರ್ಯಕ್ರಮ ಮಾಡಿರಿ ಎಂದು ತಿಳಿಸಿದರು. ಈ ಶಾಸ್ತ್ರವನ್ನು1000 ಪ್ರತಿಯನ್ನು ಶ್ರೀ ಮತಿ ಸರೋಜವ್ವ ಧರ್ಮಣ್ಣ ಕಾಗೆನವರ ಮುದ್ರಣ ಮಾಡಿ ಶಾಸ್ತ್ರದಾನ ಮಾಡಿರುತ್ತಾರೆ. ಮತ್ತು ಅವರು ಅತ್ತಿಮಬ್ಬೆ ಮಹಿಳಾ ಮಂಡಳಕ್ಕೆ ಮೂರು ಗುಂಟೆ ಭೂಮಿಯನ್ನು ದಾನವಾಗಿ ನೀಡಿರುತ್ತಾರೆ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೈನ ಸಮಾಜ ಅಧ್ಯಕ್ಷರಾದ ದೇವೇಂದ್ರಪ್ಪ ಕಾಗೆನವರ ವಹಿಸಿದ್ದರು ದಾನಿಗಳು ಮತ್ತು, ಅತ್ತಿಮಬ್ಬೆ ಮಹಿಳಾಮಂಡಳದ ಅಧ್ಯಕ್ಷರಾದ ಶ್ರೀಮತಿ ಸರೋಜವ್ವ ಕಾಗೆನವರ ಮಹಾವೀರ ಕಿತ್ತೂರ ಚಂದ್ರಪ್ಪ…
Author: AIN Author
ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಗೆ ದಿನಗಣನೆ ಆರಂಭವಾಗಿದೆ ದೀಪಗಳ ಹಬ್ಬಕ್ಕೆ ಮಾರ್ಕೆಟ್ ಗೆ ವೇರಾಯಿಟಿ ದೀಪಗಳು ಎಂಟ್ರಿ ಕಲರ್ ಕಲರ್ ವಿಭಿನ್ನ ದೀಪಗಳು ಮಹಿಳೆಯರ ಕಣ್ಮನ ಸೆಳೆತಿವೆ. ಸಿಲಿಕಾನ್ ಸಿಟಿ ಮಂದಿ ಭರ್ಜರಿ ತಯಾರಿಗೆ ಮುಂದಾಗಿದ್ದಾರೆ ದೀಪಾವಳಿಯ ಪ್ರಮುಖ ಆಕರ್ಷಣೆಗಳಾಗಿರುವ ಹಣತೆ ಫ್ಯಾನ್ಸಿ ಹಾಗೂ ಅಲಂಕಾರಿಕ ವಸ್ತುಗಳು ಮಲ್ಲೆಶ್ವರಂನಲ್ಲಿ ಕಾಣಸಿಗ್ತಿವೆ ಪಂಚಮುಖೀ ದೀಪ, ಲಕ್ಷ್ಮೀ ದೇವಿ, ಗಣೇಶ ದೀಪ, ನವಿಲು ದೀಪ, ಮೀನಿನ ದೀಪ https://ainlivenews.com/knee-pain-treatment-joint-pain-treatment/ ಹಲವು ವಿನ್ಯಾಸಗಳಿಂದ ಕೂಡಿರುವ ಮಣ್ಣಿನಿಂದ ಮಾಡಿದ ಹಣತೆ ಬಂದಿದೆ 4, 5 ಹಾಗೂ 7 ಮುಖದ ದೀಪಗಳೂ ಅಟ್ರ್ಯಾಕ್ಟ್ ಆಗಿವೆಇನ್ನು ಎರಡು ದಿನಗಳಿಂದ ವ್ಯಾಪಾರ ಆರಂಭವಾಗಿದ್ದು, ಮಾರುಕಟ್ಟೆಯಲ್ಲಿ ಈಗ ದೀಪಾವಳಿ ಹಬ್ಬದ ಕಳೆ ಹೆಚ್ಚುತ್ತಿದೆ.
ರಬಕವಿ ಬನಹಟ್ಟಿ ತಾಲೂಕು ಎಂದು ನಾಮಕರಣ ಮಾಡಿ ಸುಮಾರು ವರ್ಷಗಳ ಕಳೆದು ಹೋಗಿದೆ. ಆದರೆ ಇಲ್ಲಿಯವರೆಗೂ ರಬಕವಿ ನಗರ ಅಭಿವೃದ್ಧಿ ಕಾಣದೆ ಇರುವುದು ಬೇಸರ ಸಂಗತಿ. ರಬಕವಿ ಮಹೇಶವಾಡಗಿ ಬ್ರಿಜ್ ಪ್ರಾರಂಭವಾಗಿದ್ದು 2014ರಲ್ಲಿ 2023 ಕಳೆಯಲು ಬಂದರು ರಬಕವಿ ಮಹಿಷವಾಡಗಿ ಬ್ರಿಜ್ ಕಾಮಗಾರಿ ಮಾತ್ರ ನಡೆದಿಲ್ಲ. ಇದಕ್ಕೆ ರಾಜ್ಯಕಾರಣಿಗಳ ಇಚ್ಛಾ ಶಕ್ತಿ ಕೊರತೆ ಇದೆ. ಸಂತಿ ಮಾಡುವ ರಾಜಕಾರಣಿಗಳಿಂದಲೇ ನಮ್ಮ ರಬಕವಿ ನಗರವು ಅಭಿವೃದ್ಧಿಯಲ್ಲಿ ಸಂಪೂರ್ಣವಾಗಿ ಹಿಂದೆ ಬಿದ್ದಿದೆ. ರಬಕವಿ ನಗರವು ಅಭಿವೃದ್ಧಿ ಆಗಬೇಕಾದರೆ ಮುಂದೆ ಬರುವ ಲೋಕಸಭಾ ಚುನಾವಣೆಯಲ್ಲಿ ಸಾಮೂಹಿಕ ಚುನಾವಣಾ ಬಹಿಷ್ಕಾರ ಹಾಕಿ ರಾಜಕಾರಣಿಗಳಿಗೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಹೇಳಿದರು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಶ್ರೀ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ರಬಕವಿ ಮಹೇಶವಾಡಗಿ ಬ್ರಿಜ್ ಕಾಮಗಾರಿ ಕುರಿತು ಮಹತ್ವದ ಸಭೆ ನಡೆಯಿತು. ಇದೇ ಸಂದರ್ಭದಲ್ಲಿ ಡಾ. ರವಿ ಜಮಖಂಡಿ. ಸಂಗಪ್ಪ ಕುಂದಗೋಳ. ದರೆಪ್ಪ ಉಳ್ಳಾಗಡ್ಡಿ. ಎಮ್ ಬಿ ನಾಶಿ ಎಮ್ ಸಿ ಸಾಬೋಜಿ.…
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ನಗರದಲ್ಲಿರುವ ಶ್ರೀ ಸಮರ್ಥ ಸದ್ಗುರು ಮಾಧವಾನಂದ ಪ್ರಭೂಜಿಯವರ ಆಶ್ರಮ ( ಶ್ರೀ ಮೋರ್ತೇಪ್ಪ ಕಲ್ಲಪ್ಫ ಹೂಗಾರ ತೋಟದ ಆವರಣ ) ದಲ್ಲಿ ಶ್ರೀ ಸಮರ್ಥ ಸದ್ಗುರು ಮಾಧವಾನಂದ ಪ್ರಭೂಜಿಯವರ 108 ನೇ ಜನ್ಮೋತ್ಸವ ಹಾಗೂ ಶ್ರೀ ಸಮರ್ಥ ಸದ್ಗುರು ಶಿವಪ್ರಭು ಮಹಾರಾಜರ ಪರಮ ಶಿಷ್ಯರಾದ ಶ್ರೀ ಕಲ್ಲಪ್ಫ. ಮೋ. ಹೂಗಾರ ಮಹಾರಾಜರ ಇವರ ಪುಣ್ಯ ಸ್ಮರಣೋತ್ಸವ ಆಧ್ಯಾತ್ಮ ಸಪ್ತಾಹ ಬುಧವಾರ ದಿನಾಂಕ 08 ನವೆಂಬರ 2023 ರಂದು ಬೆಳಿಗ್ಗೆ 10=00 ಗಂಟೆಗೆ ಶ್ರೀ ಸಮರ್ಥ ಸದ್ಗುರು ರೇವಣಸಿದ್ದೇಶ್ವರ ಮಹಾರಾಜರ ದಿವ್ಯ ಸಾನ್ನಿಧ್ಯದಲ್ಲಿ ಜರಗುವದು. ಈ ಜನ್ಮೋತ್ಸವ ಕಾರ್ಯಕ್ರಮದಲ್ಲಿ ಭಜನೆ. ದಾಸಬೋದ ಪಠಣ .ಪುರಾಣ. ಪ್ರವಚನ. ಶ್ರೀ ಸಮರ್ಥ ಸದ್ಗುರು ಮಾಧವಾನಂದ ಪ್ರಭೂಜಿಯವರ ತೊಟ್ಟಿಲೋತ್ಸವ. ಶ್ರೀ ಸಮರ್ಥ ಸದ್ಗುರು ರೇವಣಸಿದ್ದೇಶ್ವರ ಮಹಾರಾಜರ ಆಶಿರ್ವಚನ ಹಾಗೂ ಪುಷ್ಪ ವೃಷ್ಠಿಯೊಂದಿಗೆ ಮಂಗಲಗೊಳ್ಳುವದು ಅತ್ಯಂತ ವಿಜೃಂಭಣೆಯಿಂದ ಜರಗುವ ಈ ಆಧ್ಯಾತ್ಮ ಕಾರ್ಯಕ್ರಮದಲ್ಲಿ ಸರ್ವ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ…
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್ ಫೇಕ್ ವಿಡಿಯೋ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ರಶ್ಮಿಕಾ ಪರ ಅನೇಕರು ಮಾತನಾಡಿದ್ದರು. ದುರುಳರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಕೇಂದ್ರ ಸರಕಾರ ಕೂಡ ಇದನ್ನು ಗಂಭೀರವಾಗಿ ತೆಗೆದುಕೊಂಡು, ಡೀಪ್ ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಹೇಳಿತ್ತು. ಆದರೂ, ಡೀಪ್ ಫೇಕ್ ಕಾಟ ಮುಂದುವರೆದಿದೆ. ಬಾಲಿವುಡ್ (Bollywood) ನಟಿ ಕತ್ರಿನಾ ಕೈಫ್ (Katrina Kaif) ಫೋಟೋ ಕೂಡ ಡೀಪ್ ಫೇಕ್ ಮಾಡಲಾಗಿದೆ. https://ainlivenews.com/knee-pain-treatment-joint-pain-treatment/ ಡೀಪ್ನೆಕ್ ಬ್ಲಾಕ್ ಡ್ರೆಸ್ನಲ್ಲಿದ್ದ ಯುವತಿಯೊಬ್ಬರ ವಿಡಿಯೋವನ್ನು ಥೇಟ್ ರಶ್ಮಿಕಾ ಮಂದಣ್ಣ ಅವರಂತೆ ಮಾರ್ಫ್ ವಿಡಿಯೋ ಸೃಷ್ಟಿಸಿದ್ದರು. ವಿಡಿಯೋದಲ್ಲಿರುವುದು ರಶ್ಮಿಕಾ ಅಲ್ಲ, ಜರಾ ಪಟೇಲ್ ಎನ್ನುವುದು ಗೊತ್ತಾಗಿತ್ತು. ಡೀಪ್ಫೇಕ್ ತಂತ್ರಜ್ಞಾನ (Deepfake Technology) ಬಳಸಿ ರಶ್ಮಿಕಾ ಹೆಸರಿಗೆ ಮಸಿ ಬಳಿಯಲು ಕಿಡಿಗೇಡಿಗಳು ಯತ್ನಿಸಿದ್ದಕ್ಕೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು ಸೂಪರ್ ಸ್ಟಾರ್, ನಟ ಅಮಿತಾಬ್ ಕೂಡ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಬೆನ್ನಲ್ಲೇ ಈ ಪ್ರಕರಣವನ್ನು ಕೇಂದ್ರ…
ಧಾರವಾಡ: ಬಾಲಕರ ವಸತಿ ನಿಲಯಕ್ಕೆ ಸಚಿವ ಹೆಚ್ ಸಿ ಮಹದೇವಪ್ಪ ಧಿಡೀರ್ ಭೇಟಿ ನೀಡಿದ್ದಾರೆ. ಧಾರವಾಡದ ಸರಕಾರಿ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯವಾಗಿದ್ದು, ವಸತಿ ನಿಲಯದ ಅಡುಗೆ ಕೋಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ವಸತಿ ನಿಲಯದ ವಿದ್ಯಾರ್ಥಿಗಳಿಂದ ಹಾಸ್ಟೆಲ್ ಫೀಡ್ ಬ್ಯಾಕ್ ಕೇಳಿದ್ದಾರೆ. ಹಾಸ್ಟೆಲ್ ವಾರ್ಡನ್ಗಳಿಂದ ವಸತಿ ನಿಲಯ ಕುರಿತು ಮಾಹಿತಿ ಪಡೆದುಕೊಂಡ ಸಚಿವರು, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯನಿರ್ವಹಿಸಲು ಅಧಿಕಾರಿಗಳಿ ಸೂಚನೆ ನೀಡಿದ್ದಾರೆ.
ಬೆಂಗಳೂರು: ಚಲಿಸ್ತಿದ್ದ ಫ್ಲೈಟ್ನಲ್ಲಿ ಸಹಪ್ರಯಾಣಿಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ. ಫ್ರಾಂಕ್ಫರ್ಟ್ನಿಂದ ಬೆಂಗಳೂರಿಗೆ ಬರುತ್ತಿದ್ದ ಲುಫ್ತಾನ್ಸ್ ಏರ್ಲೈನ್ಸ್ನ LH 0754 ವಿಮಾನದಲ್ಲಿ ಪಕ್ಕದ ಸೀಟ್ನಲ್ಲಿದ್ದ ವ್ಯಕ್ತಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಅಸಭ್ಯ ವರ್ತನೆ ತೋರಿದ್ದಾನೆ. https://ainlivenews.com/knee-pain-treatment-joint-pain-treatment/ ಸೀಟ್ನಲ್ಲಿ ನಿದ್ದೆಗೆ ಜಾರಿದ್ದ ತಿರುಪತಿ ಮೂಲದ ಮಹಿಳೆಗೆ ಸಹ ಪ್ರಯಾಣಿಕ ರಂಗನಾಥ್ ಲೈಂಗಿಕ ಕಿರುಕುಳ ನೀಡಿದ್ದಾನೆ. ಘಟನೆ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬಾಲಿವುಡ್ ಖ್ಯಾತ ಗಾಯಕ (Singer) ಹನಿ ಸಿಂಗ್ ತಮ್ಮ ಹದಿಮೂರು ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದಾರೆ. ಪತ್ನಿ ಶಾಲಿನಿ ತಲ್ವಾರ್ ಮತ್ತು ಹನಿ ಸಿಂಗ್ (Honey Singh) ಅಧಿಕೃತವಾಗಿ ಬೇರೆಯಾಗಿದ್ದಾರೆ. ನಿನ್ನೆ ದೆಹಲಿ ಫ್ಯಾಮಿಲಿ ಕೋರ್ಟ್ ಈ ಜೋಡಿಗೆ ವಿಚ್ಛೇದನ ನೀಡಿದೆ. ಹನಿ ಸಿಂಗ್ ಮತ್ತು ಶಾಲಿನಿ 2011ರ ಜನವರಿಯಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಪಂಜಾಬಿ (Punjabi)ಖ್ಯಾತ ಗಾಯಕ, ಬಾಲಿವುಡ್ ನಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಹನಿ ಸಿಂಗ್ (Honey Singh) ಕೊನೆಗೂ ತಮ್ಮ ಪತ್ನಿ ಶಾಲಿನಿ ತಲ್ವಾರ್ ಅವರಿಗೆ ವಿಚ್ಛೇದನ ನೀಡಿದ್ದಾರೆ. ಕಳೆದ ವರ್ಷವಷ್ಟೇ ಹನಿ ಸಿಂಗ್ ಮೇಲೆ ಅವರ ಪತ್ನಿ ದೈಹಿಕ ಹಿಂಸಾಚಾರದ ಆರೋಪ ಮಾಡಿದ್ದರು. ಪತಿಯಿಂದ ತಮಗೆ ತುಂಬಾ ಹಿಂಸೆ ಆಗುತ್ತಿದೆ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಇದರ ಬೆನ್ನಲ್ಲೆ ಹನಿ ಸಿಂಗ್ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ದೆಹಲಿ (Delhi) ಕೋರ್ಟ್ ನಲ್ಲಿ ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ್ದ ಹನಿ ಸಿಂಗ್ ಮತ್ತು ಅವರ ಪತ್ನಿ…
ರೂಪಾ ರಾವ್ ಈ ಹೆಸರು ನಿಮ್ಮೆಲ್ಲರಿಗೂ ಚಿರಪರಿಚಿತವೇ. ಮೂಲತಃ ಬೆಂಗಳೂರಿನವರಾದ ರೂಪಾ ರಾವ್ ಮಹಿಳಾ ನಿರ್ದೇಶಕಿಯಾಗಿ ಗುರ್ತಿಸಿಕೊಂಡಿದ್ದಾರೆ. ಇಂಗ್ಲೀಷ್, ಹಿಂದಿ, ಜರ್ಮನ್ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಶಾರ್ಟ್ಫಿಲ್ಮ್, ಡಾಕ್ಯೂಮೆಂಟರಿ, ವೆಬ್ ಸೀರೀಸ್ ಡೈರೆಕ್ಟ್ ಮಾಡಿ ಹೆಸರು ಮಾಡಿದ್ದಾರೆ. ಈ ಹಿಂದೆ ಕನ್ನಡದಲ್ಲಿ ‘ಗಂಟುಮೂಟೆ’ ಹೆಸರಲ್ಲೊಂದು ಸಿನಿಮಾ ಮಾಡಿದ್ದರು. ವಿಭಿನ್ನ ಕಥಾಹಂದರವುಳ್ಳ ಈ ಸಿನಿಮಾ ಕನ್ನಡಿಗರ ಮನಸೂರೆಗೊಂಡು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಚಿತ್ರೋತ್ಸವಗಳಲ್ಲಿ ಸ್ಪರ್ಧೆ ಮಾಡಿತ್ತು. ಒಂದಿಷ್ಟು ಅವಾರ್ಡ್ಗಳನ್ನು ಕೊಳ್ಳೆಹೊಡೆಯೋ ಮೂಲಕ ನಿರ್ದೇಶಕಿ ರೂಪಾ ರಾವ್ಗೆ ಜನಪ್ರಿಯತೆಯ ಕಿರೀಟ ತೊಡಿಸಿತ್ತು. ಇದೀಗ ರೂಪಾ ರಾವ್ (Roopa Rao) ಮತ್ತೆ ಕನ್ನಡ ಕಲಾಭಿಮಾನಿಗಳನ್ನು ಎದುರುಗೊಳ್ಳಲು ರೆಡಿಯಾಗಿದ್ದಾರೆ. ಆದರೆ, ನಿರ್ದೇಶಕಿಯಾಗಿ ಅಲ್ಲ ಬದಲಾಗಿ ನಿರ್ಮಾಪಕಿಯಾಗಿ ಎಂಬುದು ವಿಶೇಷ. ಸಿನಿಮಾ ನಿರ್ಮಾಣ ಸುಲಭದ ಕೆಲಸವಲ್ಲ. ಚಿತ್ರಕ್ಕಾಗಿ ತಮ್ಮ ಮನೆಯ ಖಜಾನೆಯನ್ನೆಲ್ಲಾ ಖಾಲಿ ಮಾಡಿಕೊಳ್ಳುವುದು ಇದೆಯಲ್ಲ ಅದಕ್ಕೆ ಬಂಢ ಧೈರ್ಯ ಬೇಕು. ಆ ಎದೆಗಾರಿಕೆ ಒನ್ ಟು ಡಬ್ಬಲ್ ಇರುವುದರಿಂದಲೇ ನಿರ್ದೇಶಕಿ ರೂಪಾ ರಾವ್ ಗ್ಯಾಂಗ್ಸ್ಟರ್…
ಬೆಂಗಳೂರಿನಲ್ಲಿ 20ಕ್ಕೂ ಹೆಚ್ಚು ರೌಡಿಶೀಟರ್ಗಳ ಮನೆ ಮೇಲೆ ಸಿಸಿಬಿ ದಾಳಿ ನಡೆಸಿದೆ. ರೌಡಿಶೀಟರ್ಗಳ ಮನೆಯಲ್ಲಿದ್ದ ಲಾಂಗ್, ಮಚ್ಚು, ದಾಖಲೆ ವಶಕ್ಕೆ ಪಡೆಯಲಾಗಿದೆ. ವಾರಂಟ್ ಜಾರಿಯಾದರೂ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ಬೆಂಗಳೂರಿನಲ್ಲಿ 20ಕ್ಕೂ ಹೆಚ್ಚು ರೌಡಿಶೀಟರ್ಗಳ ಮನೆ ಮೇಲೆ ರೇಡ್ ಮಾಡಲಾಗಿದೆ. https://ainlivenews.com/knee-pain-treatment-joint-pain-treatment/ ರೌಡಿಶೀಟರ್ ರಮೇಶ್ ಅಲಿಯಾಸ್ ,ಜಗದೀಶ್ ಅಲಿಯಾಸ್ ಟಾಮಿ ಸೇರಿದಂತೆ ನಗರದಾದ್ಯಂತ ಇರುವ 20ಕ್ಕೂ ಹೆಚ್ಚು ನಟೋರಿಯಸ್ ರೌಡಿಗಳ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ನಗರದ ಪೂರ್ವ ,ಪಶ್ಚಿಮ , ಉತ್ತರ ,ದಕ್ಷಿಣ ,ವೈಟ್ ಫೀಲ್ಡ್ ,ಆಗ್ನೇಯ ,ಈಶಾನ್ಯ ವಿಭಾಗದಲ್ಲಿ ಸಿಸಿಬಿ ದಾಳಿ ನಡೆಸಿದೆ. ಅಲ್ಲದೇ ರೌಡಿಗಳು ಬಡ್ಡಿ ವ್ಯವಹಾರ ಮತ್ತು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವುದು ಸಹ ತಿಳಿದುಬಂದಿದ್ದು, ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಚೆಕ್ ಹಾಗೈ ಸ್ಟ್ಯಾಂಪ್ ಪೇಪರ್ ಯಾರಿಗೆ ಸೇರಿದ್ದು? ರೌಡಿ ಬಳಿ ಹೇಗೆ ಬಂದವು? ಬಲವಂತವಾಗಿ ಯಾವುದಾದರೂ ಲ್ಯಾಂಡ್ ಮತ್ತು ಸೈಟ್ ಕಬ್ಜಾ ಮಾಡಿದ್ದಾರೆ? ಬೆದರಿಕೆ…