Author: AIN Author

ಸೂರ್ಯೋದಯ – 5:46 ಬೆ. ಸೂರ್ಯಾಸ್ತ – 6:39 ಸಂಜೆ. ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವೈಶಾಖ ಮಾಸ, ವಸಂತ ಋತು, ತಿಥಿ – ನವಮಿ ನಕ್ಷತ್ರ – ಶತಭಿಷೆ ಯೋಗ – ವೈಧೃತಿ ಕರಣ – ತೈತಲೆ ರಾಹು ಕಾಲ – 12:00 ದಿಂದ 01:30 ವರೆಗೆ ಯಮಗಂಡ – 07:30 ದಿಂದ 09:00 ವರೆಗೆ ಗುಳಿಕ ಕಾಲ – 10:30 ದಿಂದ 12:00 ವರೆಗೆ ಬ್ರಹ್ಮ ಮುಹೂರ್ತ – 4:10 ಬೆ. ದಿಂದ 4:58 ಬೆ. ವರೆಗೆ ಅಮೃತ ಕಾಲ – 11:55 ಬೆ.ದಿಂದ 1:29 ಮ. ವರೆಗೆ ಅಭಿಜಿತ್ ಮುಹುರ್ತ – ಇಲ್ಲ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ…

Read More

ಉತ್ತರ ಕನ್ನಡ:- ಉತ್ತರ ಕನ್ನಡ ಜಿಲ್ಲೆಯ ಅರಬ್ಬಿ ಸಮುದ್ರದಲ್ಲಿ ಗಾಳಿಯ ವೇಗ ಹೆಚ್ಚಾಗಿ ಅಲೆಗಳ ಅಬ್ಬರ ಹೆಚ್ಚಾಗಿದೆ. https://ainkannada.com/construction-of-underground-parking-lots-is-not-allowed-in-low-lying-areas-dcm-d-k-shivakumar/ ಹೀಗಾಗಿ, ಮೀನುಗಾರಿಕೆ ನಿರ್ಬಂಧಿಸಿರುವ ಉತ್ತರ ಕನ್ನಡ ಜಿಲ್ಲಾಡಳಿತ, ಮೀನುಗಾರಿಕೆಗಾಗಿ ಸಮುದ್ರದಾಳಕ್ಕೆ ಹೊದವರನ್ನು ಹಿಂತಿರುಗುವಂತೆ ಸೂಚಿಸಿದೆ. ಅಲ್ಲದೆ, ಮೇ 22 ರ ವರೆಗೆ ದಿನ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಸಮುದ್ರಕ್ಕೆ ಯಾವುದೇ ಬೋಟ್​ಗಳು ಇಳಿಯದಂತೆ ಖಡಕ್ ಸೂಚನೆ ನೀಡಲಾಗಿದೆ. ಹಾಗೇ, ಜಿಲ್ಲಾಡಳಿತ ಅಂಗನವಾಡಿ ಕೇಂದ್ರಗಳಿಗೆ ಬುಧವಾರ ರಜೆ ಘೋಷಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಮಾತನಾಡಿ, ಮೇ. 22ರವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸಾರ್ವಜನಿಕರು ಹೊರಗಡೆ ಹೊದಾಗ ಮುನ್ನೆಚ್ಚರಿಕೆ ವಹಿಸಬೇಕು. ತಾಲೂಕು ಮತ್ತು ಜಿಲ್ಲಾ ಕೇಂದ್ರದಲ್ಲಿ ಕಂಟ್ರೋಲ್ ರೂಂ ಪ್ರಾರಂಭ ಮಾಡಲಾಗಿದೆ. 24X7 ಕಂಟ್ರೋಲ್ ರೂಂ ಕಾರ್ಯನಿರ್ವಹಿಸುತ್ತಿದ್ದು ಅವಘಡ ಸಂಭವಿಸಿದಾಗ ಸಂಪರ್ಕಿಸಬಹುದು. ಜಿಲ್ಲೆಯಲ್ಲಿನ 439 ಭೂ ಕುಸಿತ ಸ್ಥಳಕ್ಕೆ ಸ್ಪಾಟರ್ಸ್ ನೇಮಕ ಮಾಡಲಾಗಿದೆ ಎಂದು ಹೇಳಿದರು. ಜೂನ್ ತಿಂಗಳಿನಿಂದ ಸ್ಪಾಟರ್ಸ್ ನಿಗದಿತ ಸ್ಥಳದಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಕಳೆದ ಬಾರಿ ಮರ ಬಿದ್ದು…

Read More

ಬೆಂಗಳೂರು, ಮೇ 20: “ಕೆರೆಗಳ ಹತ್ತಿರ ಹಾಗೂ ತಗ್ಗು ಪ್ರದೇಶಗಳಲ್ಲಿ ಅಂಡರ್ ಗ್ರೌಂಡ್ ನಿರ್ಮಾಣ ಮಾಡಿ ವಾಹನ ನಿಲ್ದಾಣಕ್ಕೆ ಅವಕಾಶ ನೀಡದಂತೆ ಭವಿಷ್ಯದಲ್ಲಿ ಕಾನೂನು ತರಲಾಗುವುದು. ಮಳೆ ಕಡಿಮೆಯಾದ ನಂತರ ಇದರ ಬಗ್ಗೆ ಕಾರ್ಯಸೂಚಿ ಬಿಡುಗಡೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. https://ainkannada.com/vijayapura-elderly-man-dies-after-being-struck-by-lightning/ ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಸುರಿದ ಮಳೆಯಿಂದ ಉಂಟಾದ ವಿದ್ಯುತ್ ಅವಘಡದಲ್ಲಿ ಬಿ.ಟಿ.ಎಂ 2ನೇ ಹಂತದ ಡಾಲರ್ಸ್ ಕಾಲೋನಿ ಬಳಿಯ ಎಂ.ಎಸ್. ಪಾಳ್ಯದಲ್ಲಿ ಮನಮೋಹನ್ ಕಾಮತ್ ಹಾಗೂ ದಿನೇಶ್ ಎಂಬುವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಘಟನಾ ಸ್ಥಳಕ್ಕೆ ಮಂಗಳವಾರ ಸಂಜೆ ಅಧಿಕಾರಿಗಳ ಜತೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸ್ವಾಂತನ ಹೇಳಿದರು. ನಂತರ ಮಧ್ಯಮಗಳ ಜತೆ ಮಾತನಾಡಿದರು. “ಅಂಡರ್ ಗ್ರೌಂಡ್ ಹೊರತು ಪಡಿಸಿ ನೆಲ ಮಹಡಿಯಲ್ಲಿ ವಾಹನಗಳನ್ನು ನಿಲ್ಲಿಸುವ ರೀತಿ ಯೋಜನೆ ರೂಪಿಸುವ ಆಲೋಚನೆಯಿದೆ. ಅದರ ಮೇಲೆ ಜನರು ವಾಸಕ್ಕೆ ಮನೆ ನಿರ್ಮಾಣ‌ ಮಾಡಿಕೊಳ್ಳಲಿ” ಎಂದರು. “ಅಂಡರ್…

Read More

ವಿಜಯಪುರ:- ಸಿಡಿಲು ಬಡಿದು ವೃದ್ದ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೊಳೂರ ಗ್ರಾಮದಲ್ಲಿ ಜರುಗಿದೆ. https://ainkannada.com/ipl-2025-where-will-the-ipl-final-be-held-here-is-the-playoff-schedule/ ಸಿಡಿಲಿಗೆ ಎಮ್ಮೆ ಹಾಗೂ ವೃದ್ದ ಸ್ಥಳದಲ್ಲೇ ಸಾವನ್ನಪ್ಪಿದೆ. ಬಸನಗೌಡ ಬಿರಾದಾರ್ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೋಟದ ಮನೆಯ ಗಿಡಗ ಕೆಳಗೆ ನಿಂತಿದ್ದ ವೇಳೆ ಘಟನೆ ಜರುಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ಜರುಗಿದೆ.

Read More

IPL 2025ರ ಟೂರ್ನಿ ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯ ಆಗಲಿದೆ. ಈಗಾಗಲೇ ಮೂರು ತಂಡಗಳು ಪ್ಲೇ ಆಫ್ ಗೆ ಕಾಲಿಟ್ಟಿದ್ದು, ನಾಲ್ಕನೇ ಸ್ಥಾನಕ್ಕಾಗಿ ಎರಡು ತಂಡಗಳ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. https://ainkannada.com/kharge-has-insulted-the-courage-of-our-armed-forces-vijayendra-lashes-out/ ಐಪಿಎಲ್ 2025 ಫೈನಲ್ ಪಂದ್ಯ ನಡೆಯುವ ಸ್ಥಳವನ್ನು ಘೋಷಿಸಲಾಗಿದೆ. ಅಂತಿಮ ಪ್ರಶಸ್ತಿ ಕಾದಾಟ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಲ್ಲಿಯೇ ಕ್ವಾಲಿಫೈಯರ್ 2 ಪಂದ್ಯವನ್ನು ಆಯೋಜಿಸಲಿದೆ. ಮತ್ತೊಂದೆಡೆ ಕೆಟ್ಟ ಹವಾಮಾನದಿಂದಾಗಿ, ಆರ್‌ಸಿಬಿ ಮತ್ತು ಸನ್‌ರೈಸರ್ಸ್ ನಡುವಿನ ಪಂದ್ಯವನ್ನು ಲಕ್ನೋಗೆ ಸ್ಥಳಾಂತರಿಸಲಾಗಿದೆ. ಇಂದಿನಿಂದ ಉಳಿದ ಎಲ್ಲ ಪಂದ್ಯಗಳಿಗೆ ಒಂದು ಗಂಟೆ ಹೆಚ್ಚುವರಿ ಸಮಯ ನೀಡಲಾಗುವುದು ಎಂದುಕೂಡ ಬಿಸಿಸಿಐ ಹೇಳಿದೆ. ಲೀಗ್ ಹಂತದ 70 ಪಂದ್ಯಗಳ ನಂತರ ಪ್ಲೇಆಫ್‌ ನಡೆಯಲಿದೆ. ಮೊದಲ ಅರ್ಹತಾ ಪಂದ್ಯವು ಮೇ 29 ರಂದು ನ್ಯೂ ಚಂಡೀಗಢದ ಪಿಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯವು ಅಗ್ರ ಎರಡು ತಂಡಗಳ ನಡುವೆ ನಡೆಯಲಿದೆ. ಇದರ ನಂತರ, ಮೇ 30 ರಂದು ಎಲಿಮಿನೇಟರ್ ಪಂದ್ಯ ನಡೆಯಲಿದೆ.…

Read More

ಬೆಂಗಳೂರು:- ನಮ್ಮ ಸಶಸ್ತ್ರ ಪಡೆಗಳ ಅಪ್ರತಿಮ ಧೈರ್ಯಕ್ಕೆ ಖರ್ಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ. https://ainkannada.com/bengaluru-famous-garlic-kebab-hotel-submerged-in-heavy-rain/ ಈ ಸಂಬಂಧ ಮಾತನಾಡಿದ ಅವರು, ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯನ್ನು ಚುಚ್ಚುಪುಟ್ಟ ಯುದ್ಧ ಅಂತ ಕರೆಯುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರು ನಮ್ಮ ಸಶಸ್ತ್ರ ಪಡೆಗಳ ಅಪ್ರತಿಮ ಧೈರ್ಯಕ್ಕೆ ಅಪಮಾನ ಮಾಡಿದ್ದಾರೆ ಎಂದರು. ಹೊಸಪೇಟೆಯಲ್ಲಿ ನಡೆದ ಕಾಂಗ್ರೆಸ್​ ಸರ್ಕಾರದ ಎರಡನೇ ವರ್ಷದ ಸಾಧನಾ ಸಮಾವೇಶದಲ್ಲಿ “ಹೆಚ್ಚು ಕಡಿಮೆ ಚುಟ್​ಪುಟ್ಟ ಯುದ್ಧಗಳು ನಡೆದಿವೆ. ಅಥವಾ ಪಾಕಿಸ್ತಾನದ ವಿರುದ್ಧ ನಾವು ಘರ್ಷಣೆ ಮಾಡುತ್ತಿದ್ದೇವೆ. ಪಾಕಿಸ್ತಾನದ ಕೆಲಸ ಯಾವಾಗಲೂ ಭಾರತದ ಮೇಲೆ ಗೂಬೆ ಕೂಡಿಸುವುದು” ಎಂದು ಮಲ್ಲಿಕಾರ್ಜುನ್​ ಖರ್ಗೆಯವರು ಹೇಳಿರುವ ವಿಡಿಯೋವನ್ನು ಬಿವೈ ವಿಜಯೇಂದ್ರ ಅವರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್​ ಮಾಡಿ, ವಾಗ್ದಾಳಿ ಮಾಡಿದ್ದಾರೆ. ಕಾರ್ಗಿಲ್​ ಕಾರ್ಗಿಲ್ ಯುದ್ಧದ ನಂತರ ಪಾಕಿಸ್ತಾನದ ವಿರುದ್ಧ ನಡೆದ ಈ ಕಾರ್ಯಾಚರಣೆಯು ಅತ್ಯಂತ ಪ್ರಬಲ ಮತ್ತು ಅತ್ಯಂತ ಲೆಕ್ಕಾಚಾರದ ಮಿಲಿಟರಿ ಕಾರ್ಯಾಚರಣೆಯಾಗಿದೆ” ಎಂದಿದ್ದಾರೆ.

Read More

ಬೆಂಗಳೂರು:- ನಗರದ ಶಿವಾನಂದ ಸರ್ಕಲ್‌ ಬಳಿಯಿರುವ ʻಬೆಳ್ಳುಳ್ಳಿ ಕಬಾಬ್ʼ ಖ್ಯಾತಿಯ ಚಂದ್ರು ಹೋಟೆಲ್‌ ಮಳೆ ನೀರಿನಿಂದ ಜಲಾವೃತವಾಗಿದ್ದು, ಭಾರೀ ನಷ್ಟ ತಂದೊಡ್ಡಿದೆ. https://ainkannada.com/maddur-taluk-office-is-a-home-of-corruption-serious-allegations-by-farmer-leaders/ ಬೆಳ್ಳುಳ್ಳಿ ಕಬಾಬ್..! ಒನ್ ಮೋರ್ ಒನ್ ಮೋರ್ ಅಂತಿರಬೇಕು.. ಚಟಪಟ… ಚಟಪಟ.. ಅನ್ನೋ ಡೈಲಾಗ್ ಹೊಡೆದು ಸಿಕ್ಕಾಪಟ್ಟೆ ಫೇಮಸ್ ಆಗಿರುವ ಮಳೆಯಿಂದ ನಷ್ಟ ಅನುಭವಿಸಿದ್ದಾರೆ. ಬೆಂಗಳೂರು ಕೆಫೆ ಕಟ್ಟದಲ್ಲಿರುವ ಚಂದ್ರು ಮಾಲೀಕತ್ವದ ಹೋಟೆಲ್ ಬೇಸ್ಮೆಂಟ್‌ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ ಕಳೆದ 2 ದಿನಗಳಿಂದ ಹೋಟೆಲ್‌ ಬಂದ್‌ ಆಗಿದೆ ಈ ಬಗ್ಗೆ ಹೋಟೆಲ್‌ ಮಾಲೀಕ ಚಂದ್ರು ಮಾತನಾಡಿ,, ಹೋಟೆಲ್‌ ಓಪನ್‌ ಮಾಡಿ ನಾಲ್ಕು ವರ್ಷ ಆಯ್ತು. ಇದುವರೆಗೆ ಇಂತಹ ಸಮಸ್ಯೆ ಇರಲಿಲ್ಲ. ಆದ್ರೆ ಮೊನ್ನೆ, ನಿನ್ನೆ ರಾತ್ರಿ ಸುರಿದ ಮಳೆಗೆ ರಸ್ತೆಯಲ್ಲಿದ್ದ ನೀರೆಲ್ಲ ಬೇಸ್ಮೆಂಟ್‌ಗೆ ತುಂಬಿಕೊಂಡಿದೆ. ಬೆಳಗ್ಗೆ 7 ಗಂಟೆಯಿಂದ ಹೊರತೆಗೆಯುತ್ತಿದ್ದರೂ ನೀರು ಖಾಲಿ ಆಗ್ತಿಲ್ಲ ಅಂತ ಹೇಳಿದ್ದಾರೆ. ರಸ್ತೆಯಲ್ಲಿದ್ದ ಮಳೆ ನೀರಿನೊಂದಿಗೆ ಮರಳೂ ಸೇರಿಕೊಂಡಿದೆ, ಜನರೇಟರ್‌ ಆಯಿಲ್‌, ಡೀಸೆಲ್‌ ಎಲ್ಲ ಹೊರಗೆ ಬಂದುಬಿಟ್ಟಿದೆ. 10 ಎಲೆಕ್ಟ್ರಿಕ್‌ ಬೈಕ್‌ಗಳು…

Read More

ಮಂಡ್ಯ :- ಮದ್ದೂರು ತಾಲೂಕು ಕಚೇರಿ ಭ್ರಷ್ಟಾಚಾರದ ತವರೂರಾಗಿದೆ. ಇದರಿಂದ ರೈತರ ಹಾಗೂ ಸಾರ್ವಜನಿಕರ ಸರ್ಕಾರಿ ಕೆಲಸ ಮಾಡಿಸಿಕೊಳ್ಳಲು ಲಂಚ ನೀಡಬೇಕಾದ ದುಸ್ಥಿತಿ ಬಂದಿದೆ ಎಂದು ರೈತ ಸಂಘಟನೆಯ ವಿಭಾಗೀಯ ರಾಜ್ಯ ಉಪಾಧ್ಯಕ್ಷ ಬೋರಾಪುರ ಶಂಕರೇಗೌಡ ಗಂಭೀರವಾಗಿ ಆರೋಪಿಸಿದರು. ಮದ್ದೂರು ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ತಹಸೀಲ್ದಾರ್ ಡಾ.ಸ್ಮಿತಾರಾಮು ಅವರ ಅಧ್ಯಕ್ಷತೆಯಲ್ಲಿ ನಡೆದ ರೈತರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ರೈತರ ಹಾಗೂ ಸಾರ್ವಜನಿಕರಿಗೆ ಜನಸ್ನೇಹಿಯಾಗಿ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸುವುದನ್ನು ಬಿಟ್ಟು, ಕೆಲ ಅಧಿಕಾರಿಗಳು ಲಂಚಾವತಾರದಲ್ಲಿ ಮುಳುಗಿರುವುದು ಬೇಸರದ ಸಂಗತಿಯಾಗಿದೆ ಎಂದರು. ತಾಲೂಕು ಕಚೇರಿ, ತೋಟಗಾರಿಕೆ, ಕೃಷಿ ಇಲಾಖೆ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ರೈತರು ಸವಲತ್ತುಗಳನ್ನು ಪಡೆದುಕೊಳ್ಳಬೇಕಾದರೆ ಕಚೇರಿಗಳಿಗೆ ಪ್ರತಿನಿತ್ಯ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ಕಚೇರಿಯ ಕಂದಾಯ ಇಲಾಖೆಯಲ್ಲಿ ಸರ್ವೇ ಮಾಡಿಸಲು, ಆರ್.ಟಿ.ಸಿ.ತಿದ್ದುಪಡಿಗೆ ವರ್ಷಾನುಗಟ್ಟಲೆಯಿಂದ ರೈತರಿಗೆ ಆಗುತ್ತಿಲ್ಲ. ಇದರಿಂದ ರೈತರು ದೂರದ…

Read More

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ​2025ರ ಐಪಿಎಲ್ ಸೀಸನ್- 18 ಪುನರಾರಂಭವಾಗುತ್ತಿದ್ದು ಅಭಿಮಾನಿಗಳಲ್ಲಿ ಖುಷಿ ತಂದಿದೆ. ವಿದೇಶಕ್ಕೆ ತೆರಳಿದಂತ ಕೆಲ ಆಟಗಾರರು ಮತ್ತೆ ತಮ್ಮ ತಮ್ಮ ತಂಡಗಳನ್ನು ಸೇರಿಕೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ ಆರ್​ಸಿಬಿಗೂ ಗುಡ್​ನ್ಯೂಸ್​ ಸಿಕ್ಕಿದ್ದು ತಂಡಕ್ಕೆ ವಿದೇಶದ ಸ್ಟಾರ್ ಪೇಸ್​ ಬೌಲರ್​ ಹಿಂದಿರುಗುತ್ತಿದ್ದಾರೆ. ಆರ್​ಸಿಬಿಯ ಭರವಸೆ ಬೌಲರ್ ಎಂದರೆ ಅದು ಜೋಶ್ ಹ್ಯಾಜಲ್ವುಡ್. ಈ ಸಲದ ಆರ್​ಸಿಬಿ ತಂಡದಲ್ಲಿ ​ಜೋಶ್ ಹ್ಯಾಜಲ್ವುಡ್ ಅವರ ಬೌಲಿಂಗ್ ನಿರ್ಣಾಯಕ ಪಾತ್ರ ವಹಿಸಿತ್ತು. ಹೇಗೆಂದರೆ ಜೋಶ್ ಹ್ಯಾಜಲ್ವುಡ್ ಆಡಿದ 10 ಪಂದ್ಯಗಳಿಂದ 18 ವಿಕೆಟ್​ಗಳನ್ನು ಉರುಳಿಸಿ ಪರ್ಪಲ್ ಕ್ಯಾಪ್​ ಅನ್ನು ಈಗಾಗಲೇ ಧರಿಸಿದ್ದರು. ಇದೀಗ ಪರ್ಪಲ್ ಕ್ಯಾಪ್ ಕನ್ನಡಿಗ ಗುಜರಾತ್ ತಂಡದ ಬೌಲರ್ ಪ್ರಸಿದ್ಧ್ ಕೃಷ್ಣ ಬಳಿ ಇದೆ. ಸದ್ಯ ಹ್ಯಾಜಲ್ವುಡ್ 3ನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್ ವಿಭಾಗದ ದೈತ್ಯ ಶಕ್ತಿ ಆಗಿರುವ ಜೋಶ್ ಹೇಜಲ್​ವುಡ್​ ಫುಲ್ ಫಿಟ್ ಆಗಿದ್ದು, ನೆಟ್ಸ್​ನಲ್ಲಿ ಬೆವರಿಳಿಸಿದ್ದಾರೆ. https://ainkannada.com/bad-news-for-lucknow-digvesh-rathi-suspended-from-ipl-match/ ಮೇ 23 ರಂದು ಲಕ್ನೋದಲ್ಲಿ…

Read More

ಮದ್ಯಪ್ರಿಯರು ಬೇರೆ ಬೇರೆ ಎಣ್ಣೆಗಳನ್ನ ಕುಡಿಯುತ್ತಿರುತ್ತಾರೆ. ಕೆಲ ಮದ್ಯ ಪ್ರಿಯರು ಬಿಯರ್ ಇಷ್ಟ ಎಂದರೆ, ಇನ್ನೂ ಕೆಲವರು ವಿಸ್ಕಿ ಬೆಸ್ಟ್ ಅಂತ ಹೇಳುತ್ತಾರೆ. ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು ಅಂತ ಮದ್ಯ ಪ್ರಿಯರು ಆಗಾಗ್ಗೆ ಚರ್ಚೆಗೂ ಇಳಿಯುತ್ತಾರೆ. ಆದರೆ ಯಾವುದೇ ಮದ್ಯವನ್ನ ಕುಡಿದರೂ ಹಿತ ಮಿತವಾಗಿ ಸೇವಿಸುವುದು ಮಾನವ ದೇಹಕ್ಕೆ ಒಳ್ಳೆಯದು ಎನ್ನಲಾಗಿದೆ. ಸದ್ಯ ಈಗ ಬಿಯರ್​​ ಮತ್ತು ವಿಸ್ಕಿ ಬಗ್ಗೆ ಹೇಳೋದಾದರೆ, ಇದರಲ್ಲಿ ಯಾವುದು ಬೆಸ್ಟ್​​ ಅಂತ ತಜ್ಞರು ಮಾಹಿತಿ ಹಂಚಿಕೊಂಡಿದ್ದಾರೆ. https://ainkannada.com/belgaum-encroachment-cleared-in-major-market/ ಕೆಲವರು ವಿಸ್ಕಿಯೇ ಉತ್ತಮ ಎನ್ನುತ್ತಾರೆ. ಮದ್ಯ ಪ್ರಿಯರು ಇವೆರಡರಲ್ಲಿ ಯಾವುದು ಆರೋಗ್ಯಕರ ಎಂದು ಆಗಾಗ್ಗೆ ವಾದಿಸುತ್ತಾರೆ. ಆದರೆ ಯಾವುದೇ ಮದ್ಯವನ್ನು ಮಿತವಾಗಿ ಸೇವಿಸುವುದು ಮಾನವ ದೇಹಕ್ಕೆ ಒಳ್ಳೆಯದು ಎಂದು ಹೇಳಲಾಗುತ್ತದೆ. ಬಿಯರ್ ಮತ್ತು ವಿಸ್ಕಿಯ ವಿಷಯಕ್ಕೆ ಬಂದಾಗ ಯಾವುದು ಉತ್ತಮ ಎಂಬುದರ ಕುರಿತು ತಜ್ಞರು ಏನು ಸಲಹೆ ನೀಡುತ್ತಾರೆ ಎಂಬುದನ್ನು ಕಂಡುಹಿಡಿಯೋಣ. ಮದ್ಯಪಾನ ಮಾಡುವ ಹೆಚ್ಚಿನ ಜನರು ಬಿಯರ್ ಮತ್ತು ವಿಸ್ಕಿಯನ್ನು ಬಯಸುತ್ತಾರೆ. ಇತರ ಮದ್ಯಗಳಿಗಿಂತ…

Read More