ಬೆಳಗಾವಿ: ಬೆಳಗಾವಿಯ ಗಣಪತಗಲ್ಲಿ ಸೇರಿದಂತೆ ಮಾರುಕಟ್ಟೆಯ ವಿವಿಧ ವಿಭಾಗಗಳಲ್ಲಿ ಪಾಲಿಕೆ ಸಿಬ್ಬಂದಿ ಹಾಗೂ ಸಂಚಾರಿ ಪೊಲೀಸರು ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಿದರು. https://ainkannada.com/do-you-know-how-many-health-benefits-there-are-from-eating-coconuts-you-should-know/ ಜನಸಂಖ್ಯೆ ಹೆಚ್ಚಳದಿಂದಾಗಿ ವಾಹನ ದಟ್ಟನೆಯೂ ಅತಿಯಾಗಿದ್ದು, ಸುಗಮ ಸಂಚಾರ ವಾಹನ ಸವಾರರಿಗೆ ಪಾದಚಾರಿಗಳಿಗೆ ದುಃಸ್ತರವಾಗಿದೆ. ಈ ನಿಟ್ಟಿನಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಹಾಗೂ ಸಂಚಾರಿ ಪೊಲೀಸರು ಹಲವಾರು ದಿನಗಳಿಂದ ಬೀದಿಬದಿ ಹಾಗೂ ಇನ್ನಿತರ ವ್ಯಾಪಾರಿಗಳಿಂದಾಗುವ ರಸ್ತೆ ಅತಿಕ್ರಮಣಗಳನ್ನು ಗಣಪತ ಗಲ್ಲಿ ಸೇರಿದಂತೆ ಮಾರುಕಟ್ಟೆಯ ಬೇರೆಬೇರೆ ಭಾಗಗಳಲ್ಲಿ ತೆರವು ಕಾರ್ಯಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪಾಲಿಕೆ ಸಿಬ್ಬಂದಿ ಅತಿಕ್ರಮಿತ ವಸ್ತುಗಳನ್ನು ವಶಕ್ಕೆ ಪಡೆದರು. ಅಂಗಡಿ ಮಾಲೀಕರಿಗೆ ಅತಿಕ್ರಮಣ ಮಾಡದಂತೆ ತಿಳಿ ಹೇಳಲಾಯಿತು. ಹಲವು ದಿನಗಳಿಂದ ನಡೆದ ಈ ಜಂಟಿ ಕಾರ್ಯಚರಣೆಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಬಾಳಪ್ಪ ತೇರದಾಳ AIN NEWS ಬೆಳಗಾವಿ
Author: AIN Author
ತೆಂಗಿನಕಾಯಿ ದಕ್ಷಿಣ ಭಾರತದ ಬಹುತೇಕ ಆಹಾರದಲ್ಲಿ ನಿತ್ಯ ಬಳಕೆಯಾಗುತ್ತದೆ. ತೆಂಗು ಮತ್ತೆ ಇಂಗು ಇದ್ದರೆ ಮಂಗ ಸಹ ಚೆನ್ನಾಗಿ ಅಡುಗೆ ಮಾಡಬಲ್ಲದು ಎಂಬ ಗಾದೆ ಮಾತೇ ಇದೆ. ಹಾಗಾದರೆ ತೆಂಗಿನಕಾಯಿ ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎನ್ನುವುದನ್ನು ಇಲ್ಲಿ ತಿಳಿದುಕೊಳ್ಳಿ. https://ainkannada.com/what-were-your-achievement-bjp-mlc-sv-sankanura-questions-congress/ ತೆಂಗಿನ ತಿರುಳಲ್ಲಿ ಗರಿಷ್ಠ ಪೌಷ್ಠಿಕತೆ, ನಾರಿನಲ್ಲಿ ಶ್ರೀಮಂತಿಕೆ ಇವೆ. ಜೀವಸತ್ವಗಳಾದ ಸಿ, ಇ, ಬಿ, ಬಿ3, ಬಿ5, ಹಾಗೂ ಬಿ6, ಖನಿಜಗಳಾದ ಕಬ್ಬಿಣ, ಸೆಲೇನಿಯಂ, ಸೋಡಿಯಂ, ಕ್ಯಾಲ್ಸಿಯಂ, ಮ್ಯಾಗ್ನೇಶಿಯಂ ಹಾಗೂ ರಂಜಕಗಳು ತೆಂಗಿನಲ್ಲಿ ತುಂಬಿವೆ. ಹಸಿ ತೆಂಗಿನಕಾಯಿಯನ್ನು ನೀವು ಪ್ರತಿದಿನ ಸೇವಿಸಿದರೆ ಸಾಕಷ್ಟು ಆರೋಗ್ಯಕರ ಪ್ರಯೋಜನಗಳು ಸಿಗುತ್ತವೆ. ತೆಂಗಿನ ಎಣ್ಣೆಯ ಪ್ರಬಲ ಗುಣಗಳ ಬಗ್ಗೆ ನಿಮಗೆ ಈಗಾಗಲೇ ತಿಳಿದಿದೆ. ಆದರೆ ಇಂದಿನ ಲೇಖನದಲ್ಲಿ, ಹಸಿ ತೆಂಗಿನಕಾಯಿಯ ತಿರುಳಿನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಒದಗಿಸಲಾಗಿದೆ. ಹಸಿ ತೆಂಗಿನ ತಿರುಳಿಗೆ ನಾವು ಏಕೆ ಒತ್ತು ನೀಡುತ್ತಿದ್ದೇವೆ ಎಂದು ನಿಮ್ಮಲ್ಲಿ ಬಹಳಷ್ಟು ಜನರು ಆಶ್ಚರ್ಯ ಪಡಬಹುದು. ಇದು ಪೌಷ್ಠಿಕಾಂಶಗಳಿಂದ ಸಮೃದ್ದವಾಗಿರುದರಿಂದ ಇದು ಸಾಕಷ್ಟು…
ಆರೋಗ್ಯಕಾರಿ ಜೀವನಶೈಲಿ ಹಾಗೂ ಸರಿಯಾದ ಹಾಗೂ ನೈಸರ್ಗಿಕ ಆಹಾರ ಪದ್ಧತಿಯನ್ನು ಸರಿಯಾಗಿ ಅನುಸರಿಸುತ್ತಾ ಹೋದರೆ, ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿಂದ ಹಿಡಿದು, ದೀರ್ಘ ಕಾಲದವರೆಗೆ ಕಾಡುವ ಕಾಯಿಲೆಗಳು ಕೂಡ ನಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ, ಎನ್ನುವ ಕಟು ಸತ್ಯವನ್ನು ಮೊದಲು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ಯಾಕೆಂದ್ರೆ ಇಂದಿನ ದಿನಗಳಲ್ಲಿ ಸಾಕಷ್ಟು ಜನರು ಅದರಲ್ಲೂ ವಿಶೇಷವಾಗಿ ಸಕ್ಕರೆಕಾಯಿಲೆ ಇರುವವರು, ರಕ್ತದೊತ್ತಡದಂತಹ ಸಮಸ್ಯೆ ಇರುವವರು, ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಹೊಂದಿರುವ ಜನರು ನಮ್ಮ ಸಮಾಜದಲ್ಲಿ ಸಾಕಷ್ಟು ಜನರು ಇದ್ದಾರೆ. https://ainkannada.com/yoga-to-get-rid-of-diseases-dr-c-n-manjunath/ ಜೀವನಶೈಲಿ ಸರಿಯಿಲ್ಲದಿದ್ದರೆ, ದೇಹದಲ್ಲಿ ಅನೇಕ ರೋಗಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಆಯಾಸ ಮತ್ತು ಅನಾರೋಗ್ಯವು ವ್ಯಕ್ತಿಯ ಮೇಲೆ ಒತ್ತಡ ಹೇರುತ್ತದೆ. ಕೆಟ್ಟ ಆಹಾರ ಪದ್ಧತಿ ಮತ್ತು ಅಸ್ತವ್ಯಸ್ತ ಜೀವನಶೈಲಿಯಿಂದ ಅನೇಕ ರೋಗಗಳು ಜನರನ್ನು ಕಾಡುತ್ತಿವೆ. ಅಂತಹ ಸಮಸ್ಯೆಗಳನ್ನು ಕಡಿಮೆ ಮಾಡಲು ಅಥವಾ ನಿವಾರಿಸಲು ಮನೆಮದ್ದುಗಳು ಉತ್ತಮ ಫಲಿತಾಂಶಗಳನ್ನು ನೀಡಬಹುದು. ಆಯುರ್ವೇದದಲ್ಲಿ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾದ ಸಬ್ಜ ಬೀಜಗಳೊಂದಿಗೆ ಮಧುಮೇಹ ಮತ್ತು ಮಲಬದ್ಧತೆಯನ್ನು ತಡೆಯುವುದು ಹೇಗೆ…
ಪ್ರಪಂಚದಾದ್ಯಂತ ಉಷ್ಣವಲಯದ ಪ್ರದೇಶಗಳಲ್ಲಿ ಬೆಳೆಯುವ ಖರ್ಜೂರಗಳು ಪೋಷಕಾಂಶಗಳ ಆಗರ ಎಂದೇ ಹೇಳಬಹುದು. ಫೈಬರ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ವಿಟಮಿನ್ ಬಿ 6, ಕಬ್ಬಿಣ ಮತ್ತು ನೈಸರ್ಗಿಕ ಸಿಹಿಕಾರಕಗಳಲ್ಲಿ ಸಮೃದ್ಧವಾಗಿರುವ ಖರ್ಜೂರವು ನಮಗೆ ತ್ವರಿತ ಶಕ್ತಿಯನ್ನು ನೀಡುತ್ತದೆ. ಅಲ್ಲದೇ ನಮ್ಮ ಒಟ್ಟಾರೆ ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. https://ainkannada.com/central-government-warns-google-chrome-browser-users/ ಖಾಲಿ ಹೊಟ್ಟೆಯಲ್ಲಿ ಯಾರೂ ಖರ್ಜೂರ ಸೇವಿಸುತ್ತಾರೆ ಅವರಿಗೆ ಸುಸ್ತು, ಆಯಾಸ ಮತ್ತು ದುರ್ಬಲತೆ ಎನ್ನುವುದು ಇರುವುದಿಲ್ಲ. ಏಕೆಂದರೆ ಖರ್ಜೂರಗಳಲ್ಲಿ ನೈಸರ್ಗಿಕ ಸಕ್ಕರೆ ಅಂಶ ಹೇರಳ ವಾಗಿ ಸಿಗುತ್ತದೆ. ಗ್ಲುಕೋಸ್, ಫ್ರಕ್ಟೂಸ್, ಸುಕ್ರೋಸ್ ಹೀಗೆ ಬೇರೆ ಬೇರೆ ರೂಪಗಳಲ್ಲಿ ಇರುವುದರಿಂದ ಎಲ್ಲವೂ ಸಹ ದೇಹಕ್ಕೆ ಶಕ್ತಿ ಮತ್ತು ಚೈತನ್ಯವನ್ನು ಕೊಡುವಲ್ಲಿ ನೆರವಾಗುತ್ತವೆ. ತುಂಬಾ ವೇಗವಾಗಿ ಖರ್ಜೂರಗಳಿಂದ ಈ ಲಾಭಗಳನ್ನು ಪಡೆಯ ಬಹುದು. ಖರ್ಜೂರಗಳಲ್ಲಿ ನಾರಿನ ಅಂಶ ಹೆಚ್ಚಾಗಿದ್ದು ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುವ ಜೊತೆಗೆ ಕರುಳಿನ ಚಟುವಟಿಕೆ ಗಳನ್ನು ನಿರ್ವಹಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಖಾಲಿ ಹೊಟ್ಟೆಯಲ್ಲಿ ಖರ್ಜೂರ ಸೇವನೆ ಮಾಡುವುದ…
ಹೈದರಾಬಾದ್ ವಿರುದ್ಧ ಸೋತು ಪ್ಲೇ ಆಫ್ ರೇಸ್ ನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಟೂರ್ನಿಯಿಂದ ಹೊರ ಬಿದ್ದಿದೆ. https://ainkannada.com/a-parent-like-this-resorted-to-theft-to-pay-for-the-school-fees-of-his-friends-children/ ಅಭಿಷೇಕ್ ಶರ್ಮಾ ಅವರ 20 ಎಸೆತಗಳಲ್ಲಿ 59 ರನ್ಗಳ ಸುಂಟರಗಾಳಿ, ಹೆನ್ರಿಚ್ ಕ್ಲಾಸೆನ್ (28 ಎಸೆತಗಳಲ್ಲಿ 47), ಕಮಿಂಡು ಮೆಂಡಿಸ್ (21 ಎಸೆತಗಳಲ್ಲಿ 32 ರನ್ಗಳಿಗೆ ನಿವೃತ್ತಿ) ಮತ್ತು ಇಶಾನ್ ಕಿಶನ್ (28 ಎಸೆತಗಳಲ್ಲಿ 35) ಅವರ ಉಪಯುಕ್ತ ಕೊಡುಗೆಗಳ ನೆರವಿನಿಂದ ಸನ್ರೈಸರ್ಸ್ ಹೈದರಾಬಾದ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲಿ ಲಕ್ನೋ ಸೂಪರ್ಜೈಂಟ್ಸ್ ತಂಡವನ್ನು 6 ವಿಕೆಟ್ಗಳಿಂದ ಸೋಲಿಸಿತು. ಟೂರ್ನಮೆಂಟ್ ನಿಂದ ಹೊರಗುಳಿದ ನಂತರ ರಿಷಭ್ ಪಂತ್ ವಿಚಿತ್ರ ಹೇಳಿಕೆ ನೀಡಿದ್ದಾರೆ. ‘‘ಗಾಯಗಳಿಂದಾಗಿ ನಾವು ಕೆಲವು ನ್ಯೂನತೆಗಳನ್ನು ತುಂಬಬೇಕು ಎಂದು ನಮಗೆ ತಿಳಿದಿತ್ತು. ಒಂದು ತಂಡವಾಗಿ ನಾವು ಅದರ ಬಗ್ಗೆ ಮಾತನಾಡದಿರಲು ನಿರ್ಧರಿಸಿದ್ದೆವು. ಆದರೆ ಅದರ ಉದ್ದೇಶ ನ್ಯೂನತೆಗಳನ್ನು ನಿವಾರಿಸುವುದಾಗಿತ್ತು. ನಾವು ಹರಾಜಿನಲ್ಲಿ ಯೋಜಿಸಿದ ರೀತಿಯಲ್ಲಿಯೇ ಬೌಲಿಂಗ್ ದಾಳಿಯನ್ನು ಹೊಂದಿದ್ದರೆ, ಕಥೆ ಬೇರೆಯೇ ಆಗಿರುತ್ತಿತ್ತು. ಕೆಲವೊಮ್ಮೆ ವಿಷಯಗಳು ನಾವು…
ಬೆಂಗಳೂರು: ಸ್ವಾರ್ಥಿಗಳೇ ತುಂಬಿರುವ ಈ ಪ್ರಪಂಚದಲ್ಲಿ ನಾವು ನಮ್ಮದಷ್ಟೇ ಎಂದು ಯೋಚಿಸುವ ಕಾಲಘಟ್ಟವಿದು. ನಾವು, ನಮ್ಮವರು ಚೆನ್ನಾಗಿದ್ರೆ ಸಾಕು ಎಂದು ಬದುಕುವ ಇಂದಿನ ಕಾಲದಲ್ಲಿ ಬೇರೆಯವರಿಗಾಗಿ ಜೈಲಿಗೆ ಹೋದ ಈ ಕಳ್ಳನ ಸ್ಟೋರಿ ಕೊಂಚ ಡಿಪರೆಂಟು. ಎಸ್ ಈತ ಮಾಡಿರೋದು ಕಳ್ಳತನ ಆದ್ರೆ ಈತನ ಉದ್ದೇಶ ಕೇಳಿದ್ರೆ ನೀವೇ ಭೇಷ್ ಅಂತೀರಾ.. https://ainkannada.com/good-news-for-students-who-dream-of-studying-abroad-education-loan-up-to-1-crore/ ಎಸ್, ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜು ಫೀಸ್ ಕಟ್ಟಿದ್ದ ಖತರ್ನಾಕ್ ಮನೆಗಳ್ಳರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬೇಗೂರು ನಿವಾಸಿ ಶಿವು @ ಶಿವರಪ್ಪನ್ ಈ ಕಳ್ಳತನದ ಮಾಸ್ಟರ್ ಮೈಂಡ್. ಹೆಂಡತಿ, ಮಕ್ಕಳಿಲ್ಲದ ಶಿವು ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸುತ್ತಿದ್ದಾಗ ಏರಿಯಾದಲ್ಲಿ ಸ್ನೇಹಿತರು ಮಕ್ಕಳ ಸ್ಕೂಲ್ ಫೀಸ್ ಕಟ್ಟಲು ಪರದಾಡುತ್ತಿರುವುದನ್ನು ನೋಡಿದ್ದ. ಬಳಿಕ ಶಿವು ಬ್ಯಾಡರಹಳ್ಳಿ ಸೇರಿದಂತೆ ಹಲವೆಡೆ ಮನೆಗಳಿಗೆ ಕನ್ನ ಹಾಕಿದ್ದು, ಕದ್ದ ಚಿನ್ನಾಭರಣವನ್ನು ಸ್ನೇಹಿತರಾದ ಅನಿಲ್ @ ಜಗ್ಗ ಮತ್ತು ವಿವೇಕ್ನ ಸಹಾಯದಿಂದ ಮಾರಾಟ ಮಾಡಿದ್ದಾನೆ ತಮಿಳುನಾಡಿನಲ್ಲಿ 22 ಲಕ್ಷಕ್ಕೆ ಚಿನ್ನ ಮಾರಾಟ ಮಾಡಿಸಿದ್ದ…
ಫಾರಿನ್ ನಲ್ಲಿ ಓದಬೇಕು ಎಂಬ ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 1 ಕೋಟಿವರೆಗೂ ಎಜುಕೇಷನ್ ಲೋನ್ ಸಿಗಲಿದೆ. ಫಾರೀನ್ಗೆ ಹೋಗಿ ಓದೋದು ದೊಡ್ಡ ಕೆಲಸವಲ್ಲ. ಆದರೆ, ನೀವು ಅದಕ್ಕಾಗಿ ಹಣ ಹೊಂದಿಸೋದು ಭಾರೀ ದೊಡ್ಡ ಕೆಲಸ. ನೀವು ಫಾರೀನ್ ಎಜುಕೇಷನ್ ಲೋನ್ ಪಡೆಯೋದ ಮುನ್ನ ಒಂದಷ್ಟು ಅಂಶಗಳನ್ನು ಅರ್ಥ ಮಾಡಿಕೊಳ್ಳಬೇಕು. ನಿಮ್ಮ ಓದಿಗೆ ಬೇಕಿರೋ ಹಣ ಎಷ್ಟು? ಅದಕ್ಕಾಗಿ ನೀವು ಎಷ್ಟು ಬಡ್ಡಿ ಕಟ್ಟಬೇಕು? ಅನ್ನೋ ಲೆಕ್ಕ ಇರಬೇಕು. ಇಂಟ್ರೆಸ್ಟ್ ರೇಟ್, ರೀಪೇಮೆಂಟ್ ಟೈಮ್, ಗ್ರೇಸ್ ಪಿರಿಯಡ್ ಎಲ್ಲದರ ಬಗ್ಗೆ ತಿಳಿದುಕೊಳ್ಳುವುದು ಬಹಳ ಅಗತ್ಯ. https://ainkannada.com/manmul-president-vice-president-elections-today-congress-prepares-to-seize-power/ ಹೆಚ್ಚಿನ ವ್ಯಾಸಂಗಕ್ಕೆ ಎಂದು ವಿದೇಶಕ್ಕೆ ಹೋಗಲು ಬಯಸುವ ವಿದ್ಯಾರ್ಥಿಗಳಿಗೆ ಸಾಲದ ರೂಪದಲ್ಲಿ ನೀಡುವ ಹಣ ಸಹಾಯವನ್ನು Education loan ಎನ್ನಲಾಗುತ್ತದೆ. ಸಾಮಾನ್ಯವಾಗಿ ಇದು ಭಾರತದ ಎಲ್ಲಾ ಪ್ರಮುಖ ಬ್ಯಾಂಕುಗಳಲ್ಲಿ ಈ ರೀತಿಯ ಸೇವೆ ಲಭ್ಯವಿದೆ. ಈ ರೀತಿಯ ಸಾಲದ ಮೇಲಿನ ಬಡ್ಡಿ 8.1 ಪ್ರತಿಶತದಿಂದ ಶುರುವಾಗಿ 16 ಪ್ರತಿಶತದ ವೆರೆಗೂ ಹೋಗುತ್ತದೆ.…
ಮಂಡ್ಯ:- ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ-2025 ರ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಇಂದು ಚುನಾವಣೆ ನಡೆಯಲಿದ್ದು, ಅಧಿಕಾರದ ಗದ್ದುಗೆ ‘ಕೈ’ ವಶವಾಗುವುದು ಗ್ಯಾರಂಟಿ ಎನ್ನಲಾಗುತ್ತಿದೆ. https://ainkannada.com/crpf-jawan-fatally-attacked-with-machete/ 11 ನಿರ್ದೇಶಕ ಸ್ಥಾನದಲ್ಲಿ ಈಗಾಗಲೇ 6 ಕೈ ಬೆಂಬಲಿತರು, 2 ಪಕ್ಷೇತರು ಸೇರಿದಂತೆ 5 ಅಧಿಕಾರಿಗಳು ಸೇರಿ ಕೈಗೆ ನಿಚ್ಚಳ ಬಹುಮತ ಸಿಗಲಿದೆ. ಕಾಂಗ್ರೇಸ್ ನಲ್ಲಿ ಇಬ್ಬರ ನಡುವೆ ಅಧ್ಯಕ್ಷಗಾಗಿ ಪೈಪೋಟಿ ನಡೆದಿದ್ದು, ವರಿಷ್ಟರ ಬಳಿ ಲಾಬಿ ಕೂಡ ನಡೆದಿದೆ. ಕೈ ಬೆಂಬಲಿತ ನಿರ್ದೇಶಕರಾದ ಅಪ್ಪಾಜಿ ಗೌಡ ಮತ್ತು ಉಮ್ಮಡಹಳ್ಳಿ ಶಿವಪ್ಪ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಜೆಡಿಎಸ್ ನಲ್ಲಿದ್ದ ಅಪ್ಪಾಜಿಗೌಡ ರನ್ನು ಕಾಂಗ್ರೆಸ್ ಗೆ ಕರೆ ತಂದು ಪಕ್ಷದಲ್ಲಿ ಅಧಿಕಾರ ಕೊಡಿಸುವ ಬಗ್ಗೆ ಸಚಿವ ಚಲುವರಾಯಸ್ವಾಮಿ ಅಭಯ ವ್ಯಕ್ತಪಡಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಚಲುವರಾಯಸ್ವಾಮಿ ಪರವಾಗಿ ಕೆಲಸ ಮಾಡಿ ಅವರ ಗೆಲುವಿಗೆ ಅಪ್ಪಾಜಿಗೌಡ ಶ್ರಮ ಪಟ್ಟಿದ್ದಾರೆ. ಈ ಕಾರಣಕ್ಕೆ ಅಪ್ಪಾಜಿಗೌಡಗೆ ಮನ್ಮುಲ್ ಅಧ್ಯಕ್ಷ ಸ್ಥಾನದ ಪಟ್ಟ ಕಟ್ಟಲು…
ರಾಯಚೂರು:- ಲಿಂಗಸುಗೂರಿನ ಕಸಬಾದಲ್ಲಿ ಸಿಆರ್ಪಿಎಫ್ ಯೋಧನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜರುಗಿದೆ. https://ainkannada.com/heavy-rains-in-bengaluru-till-may-26-red-alert-for-rains-in-these-districts-of-karnataka/ ಸಿಆರ್ಪಿಎಫ್ ಎಎಸ್ಐ ಚನ್ನಬಸಪ್ಪ ಹಲ್ಲೆಗೊಳಗಾದವ. ದೆಹಲಿಯಿಂದ ಆಸ್ಸಾಂಗೆ ವರ್ಗಾವಣೆಯಾದ ಹಿನ್ನೆಲೆ ರಜೆ ಮೇಲೆ ಊರಿಗೆ ಬಂದಿದ್ದ ಯೋಧನ ಮೇಲೆ ಹಲ್ಲೆ ನಡೆದಿದೆ. ಅಕ್ಕನ ಜಮೀನಿನ ಬದುವಿನ ವಿಚಾರದಲ್ಲಿ ಅಕ್ಕನ ಪರ ನ್ಯಾಯ ಕೇಳಿದ್ದರಿಂದ ಜಗಳವಾಗಿದ್ದು, ಪಕ್ಕದ ಜಮೀನಿನ ಅಮರೇಶ್, ಮಂಜುನಾಥ ಎಂಬುವವರು ಹಲ್ಲೆ ನಡೆಸಿದ್ದಾರೆ. ವಾಕಿಂಗ್ ಮಾಡುತ್ತಿದ್ದಾಗ ಏಕಾಏಕಿ ಬಂದ ಅಮರೇಶ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಚನ್ನಬಸಪ್ಪ ತಪ್ಪಿಸಿಕೊಂಡು ಓಡಿದ್ದು, ಆದರೂ ಬಿಡದೇ ಬೆನ್ನಟ್ಟಿ ಹಲ್ಲೆಗೆ ಮುಂದಾಗಿದ್ದಾರೆ. ಆಗ ಸ್ಥಳೀಯರು ಸಹಾಯಕ್ಕೆ ಮುಂದಾಗಿದ್ದಾರೆ. ಸದ್ಯ ಗಾಯಾಳು ಯೋಧನನ್ನ ಲಿಂಗಸುಗೂರಿನ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಈ ಘಟನೆ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು:- ಬೆಂಗಳೂರಲ್ಲೂ ಮೇ 26ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರ್ನಾಟಕದಾದ್ಯಂತ ಮಳೆಯಾಗುತ್ತಿದೆ. https://ainkannada.com/cm-visits-inspection-to-areas-damaged-by-rain/ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಬಾಗಲಕೋಟೆ, ಧಾರವಾಡ, ಹಾವೇರಿ, ಹಾಸನ, ಕೊಡಗಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗದಗ,ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಟ್ಟಿನಲ್ಲಿ ಮೇ 26ರವರೆಗೆ ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಧಾರವಾಡದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.7 ಡಿಗ್ರಿ…